Site icon Vistara News

SSLC Result: ವಿಶ್ವದರ್ಶನ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ; ಸಾಧಕ ಮಕ್ಕಳಿಗೆ ಆಡಳಿತ ಮಂಡಳಿ ಅಭಿನಂದನೆ

#image_title

ಯಲ್ಲಾಪುರ: ಇಂದು 2022-2023ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ತಾಲೂಕಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಪಟ್ಟಣದ ವಿಶ್ವದರ್ಶನ ಇಂಗ್ಲಿಷ್‌ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸಹನಾ ಗೋಪಾಲಕೃಷ್ಣ ಭಾಗ್ವತ್ 625 ಅಂಕಕ್ಕೆ 622ಅಂಕ (99.5%) ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ತಾಲೂಕಿಗೆ ಮೊದಲ ಸ್ಥಾನ ಪಡೆದಿದ್ದಾಳೆ. ಈಕೆ ಇಂಗ್ಲಿಷ್‌ನಲ್ಲಿ 125/125, ಕನ್ನಡ, ಗಣಿತ ಹಾಗೂ ವಿಜ್ಞಾನದಲ್ಲಿ 100/100 ಅಂಕಗಳಿಸುವ ಮೂಲಕ ಸಾಧನೆ ಮಾಡಿದ್ದಾಳೆ. ಧಾತ್ರಿ ರವಿಪ್ರಸನ್ನ ಹೆಬ್ಬಾರ 617 ಅಂಕ (98.7%) ಪಡೆದು ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಭವಾನಿ ಎನ್. ಬಿ. ಗೌಡರ 615 ಅಂಕ (98.4%) ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.

ಪರೀಕ್ಷೆಗೆ ಹಾಜರಾದ ಒಟ್ಟೂ ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 1 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: Karnataka Election: ಬಿಟಿಎಂ ಲೇಔಟ್‌ ಗಲಾಟೆ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿ ಶ್ರೀಧರ್‌ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ

ಶಾಲೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳೂ ಉತ್ತಮ ಸಾಧನೆ ಮಾಡಿದ್ದು, ಪೃಥ್ವಿ ಎಂ.ಜೋಷಿ 605 ಅಂಕ (96.8%), ಅನುಷಾ ಎಸ್. ಭಟ್ಟ 601 ಅಂಕ (96.16%), ಚಿನ್ಮಯ ವಿ. ವೈದ್ಯ 587 ಅಂಕ (93.92%) ಗಳೊಂದಿಗೆ ಅನುಕ್ರಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ಐವರು ಹಾಗೂ ಹಿಂದಿಯಲ್ಲಿ ಮೂವರು ವಿದ್ಯಾರ್ಥಿಗಳು ಶೇ.100 ಅಂಕವನ್ನು ಪಡೆದಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು

ಇನ್ನು ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ಸುಬ್ರಹ್ಮಣ್ಯ ದತ್ತಾತ್ರೇಯ ಭಟ್ಟ 603 ಅಂಕ (96.48%), ವಿನಯ ಸಂತೋಷ ನಾಯ್ಕ 600 ಅಂಕ (96%), ವಿಜೇತಾ ವಿಶ್ವನಾಥ ಭಟ್ಟ 596 ಅಂಕ (95.36%) ಗಳಿಸಿ ಕ್ರಮವಾಗಿ ಶಾಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಅಂಕಗಳನ್ನು ಪಡೆದಿರುತ್ತಾರೆ. 10 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಇಡಗುಂದಿ ಶಾಲೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು

ಇದನ್ನೂ ಓದಿ: Karnataka Election 2023: ಬಹಿರಂಗ ಪ್ರಚಾರ ಅಂತ್ಯ; ಕಣ ರಂಗೇರಿಸಿದ ಅತಿರಥ, ಮಹಾರಥರ ಕ್ಯಾಂಪೇನ್!

ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪಾಲಕರಿಗೆ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಗೌರವ ಕಾರ್ಯದರ್ಶಿ ನರಸಿಂಹ ಕೋಣೆಮನೆ, ಆಡಳಿತ ಮಂಡಳಿಯವರು, ವಿಭಾಗ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.

Exit mobile version