Site icon Vistara News

ದೇವಾಲಯದ ಅವಶೇಷಕ್ಕೆ ಕಲ್ಲೆಸೆದ ಅನ್ಯಕೋಮಿನ ಯುವಕರು; ಹಿಂದು ಸಂಘಟನೆಗಳು ಕಿಡಿ

police visit the place of shiva temple

ಕಾರವಾರ: ಇಲ್ಲಿನ ಜೋಯಿಡಾ ರಾಮನಗರದ ನಾಗೋಡಾ ಕ್ರಾಸ್ ಬಳಿ ಜಲಾಶಯ ವ್ಯಾಪ್ತಿಯಲ್ಲಿದ್ದ ಶಿವ ದೇವಾಲಯದ ಅವಶೇಷಕ್ಕೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.

ಅನ್ಯಕೋಮಿನ ಯುವಕರು ಈ ಕೃತ್ಯ ಎಸಗಿದ್ದು, ಹಿಂದು ಸಂಘಟನೆಗಳು ಕಿಡಿಕಾರಿದ್ದಾರೆ. ಸೂಪಾ ಜಲಾಶಯದಲ್ಲಿ ಶಿವನ ದೇವಾಲಯವು ಮುಳುಗಡೆಯಾಗಿತ್ತು. ಸದ್ಯ ಮಳೆ ಇಲ್ಲದೆ ನೀರು ಕಡಿಮೆಯಾಗುವ ವೇಳೆ ದೇವಾಲಯ ಕಾಣಿಸಿಕೊಳ್ಳುತ್ತದೆ. ಹೀಗೆ ಕಂಡ ದೇವಾಲಯದ ಕಲ್ಲುಗಳಿಗೆ ಹಾನಿ ಮಾಡಿದ್ದಾರೆ.

ಸೆ.18 ರಂದು ಅನ್ಯಕೋಮಿನ ಯುವಕರ ಗುಂಪು ಶಿವನ ದೇವಾಲಯದ ಅವಶೇಷಗಳನ್ನು ಕಲ್ಲಿನಿಂದ ಹೊಡೆದು ಹಾಕಿದ್ದಾರೆ. ದಾಂಡೇಲಿ ಮೂಲದ 6 ಮಂದಿ ಈ ದುಷ್ಕೃತ್ಯ ವೆಸಗಿದ್ದಾರೆ.

ಪೊಲೀಸರಿಗೆ ಮನವಿ ಮಾತ್ರ ನೀಡಿದ ಹಿಂದು ಸಂಘಟನೆಯ ಕಾರ್ಯಕರ್ತರು

ಅವಶೇಷಗಳಿಗೆ ಹಾನಿ ಮಾಡುವುದನ್ನು ಸೆಲ್ಫಿ ವಿಡಿಯೋ ಮಾಡಿ ಹಾಕಿಕೊಂಡು ಹುಸೈನ್ ಶೇಖ್ ಎಂಬಾತ ತನ್ನ ಫೇಸ್‌ಬುಕ್‌ನಲ್ಲಿ ಹಾಕಿಕೊಂಡಿದ್ದಾನೆ. ಹಿಂದೂ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುತ್ತಿರುವವರ ಬಂಧನಕ್ಕೆ ಒತ್ತಾಯಿಸಿದ್ದಾರೆ. ಹಿಂದು ಸಂಘಟನೆಯ ಕಾರ್ಯಕರ್ತರು ರಾಮನಗರ ಪೊಲೀಸರಿಗೆ ಮನವಿ ಪತ್ರವನ್ನು ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version