Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ - Vistara News

ಉತ್ತರ ಕನ್ನಡ

Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ

Uttara Kannada News: ಕೆಪಿಎಂಇ ಕಾಯ್ದೆಯಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ಯಲ್ಲಾಪುರ ತಾಲೂಕಿನ ಕಿರವತ್ತಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಗ ಹಾಕಿದೆ.

VISTARANEWS.COM


on

3 private hospitals in Yallapur have been locked for not following the necessary rules under the KPME Act
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಯಲ್ಲಾಪುರ: ಕೆಪಿಎಂಇ ಕಾಯ್ದೆಯಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ತಾಲೂಕಿನ (Uttara Kannada News) ಕಿರವತ್ತಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಗ ಜಡಿದಿದ್ದಾರೆ.

ಈ ಆಸ್ಪತ್ರೆಗಳ ಮೇಲೆ ಹಠಾತ್‌ ದಾಳಿ ನಡೆಸಿದ ತಾಲೂಕು ವೈದ್ಯಾಧಿಕಾರಿಗಳ ತಂಡ ಅನೇಕ ನ್ಯೂನತೆಗಳನ್ನು ಪತ್ತೆಹಚ್ಚಿದೆ. ಬೀಗ ಹಾಕಲಾದ ಆಸ್ಪತ್ರೆಗಳಲ್ಲಿ ಬಯೋ ಮೆಡಿಕಲ್ ವೇಸ್ಟ್‌ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಲಾಗುತ್ತಿಲ್ಲ. ಸೂಜಿ, ಸಿರಿಂಜ್‌, ಕಾಟನ್‌, ಸಲಾಯಿನ್‌ ಬಾಟಲ್‌, ಖಾಲಿ ಆಂಪಲ್‌ಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೆ, ಕಸದ ವಾಹನದಲ್ಲಿ ಕಳಿಸಲಾಗುತ್ತಿದೆ.

ಇದನ್ನೂ ಓದಿ: The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

ತಾಂತ್ರಿಕ ಪರಿಣಿತಿ ಹಾಗೂ ನಿಗದಿತ ವಿದ್ಯಾರ್ಹತೆ ಇಲ್ಲದ ಸಿಬ್ಬಂದಿಗಳನ್ನು ಔಷಧ ವಿತರಣೆಗೆ, ರಕ್ತದೊತ್ತಡ, ಡಯಾಬಿಟಿಸ್‌ ಪರೀಕ್ಷೆಗೆ ನೇಮಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿತ್ತು. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿದೆ. ಒಂದು ಖಾಸಗಿ ಆಸ್ಪತ್ರೆಯು ಕೆಪಿಎಂಇ ಅಡಿಯಲ್ಲಿ ನೋಂದಣಿ ಆಗಿರುವುದಿಲ್ಲ. ಇದಲ್ಲದೇ ಸ್ವಂತ ಮನೆಯ ರೂಮ್‌ ಒಂದರಲ್ಲಿ ಒಬ್ಬರು ಯಾವುದೇ ವೈದ್ಯಕೀಯ ವಿದ್ಯಾರ್ಹತೆ ಹೊಂದದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು.

ಈ ಎಲ್ಲಾ ಕಾರಣಗಳಿಂದಾಗಿ ಗುರುಪ್ರಸಾದ ಪಾಲಿ ಕ್ಲಿನಿಕ್‌, ಕೀರ್ತಿ ಕ್ಲಿನಿಕ್‌ ಹಾಗೂ ನೇಮಿಣಿ ಗಲ್ಲಿಯ ಮನೆಯೊಂದರಲ್ಲಿ ನಡೆಸಲಾಗುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡೆಯಲಾಗಿದ್ದು, ಒಂದು ವಾರದೊಳಗೆ ಎಲ್ಲ ವ್ಯವಸ್ಥೆ ಸರಿಪಡಿಸಿಕೊಂಡು ಕೆಪಿಎಂಇ ಕಾಯ್ದೆಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ನರೇಂದ್ರ ಪವಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ, ಯು. ಜೋಸೆಫ್‌, ಪೊಲೀಸ್‌ ಹವಾಲ್ದಾರ ರಾಘವೇಂದ್ರ ನಾಯ್ಕ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

Karnataka Rain : ಭಾರಿ ಮಳೆಗೆ ನಾನಾ ಅವಾಂತರವೇ ಸೃಷ್ಟಿಯಾಗಿದೆ. ಕೊಡಗಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತುಳಿದು ಜಾನುವಾರು ಮೃತಪಟ್ಟರೆ, ಹಾಸನದಲ್ಲಿ ಗರ್ಭಗುಡಿಯ ಎದುರು ನಾಗರಹಾವು ಪ್ರತ್ಯಕ್ಷಗೊಂಡಿತ್ತು. ಮತ್ತೆ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ.

VISTARANEWS.COM


on

By

karnataka Rain

ಕೊಡಗು: ಕೊಡಗು‌ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ವಿದ್ಯುತ್ ತಂತಿ ತುಂಡಾಗಿ ಬಿದ್ದು 6 ಜಾನುವಾರು ಮೃತಪಟ್ಟಿವೆ. ಗ್ರಾಮದ ರೈತ ಬೊಜ್ಜoಗಡ ನಟರಾಜ್ ಅವರಿಗೆ ಸೇರಿದ ಜಾನುವಾರು ಮೃತಪಟ್ಟಿವೆ. ಭಾರಿ ಮಳೆಗೆ 11 ಕೆವಿ ವಿದ್ಯುತ್ ತಂತಿ ರಸ್ತೆಗೆ ತುಂಡಾಗಿ ಬಿದ್ದಿತ್ತು. ಗದ್ದೆಯಿಂದ ಕೊಟ್ಟಿಗೆಗೆ ಸಾಲಾಗಿ ಬರುತ್ತಿದ್ದಾಗ ಕರೆಂಟ್‌ ಶಾಕ್‌ ಹೊಡೆದು, ಒಂದರ ಹಿಂದೆ ಒಂದು ಜಾನುವಾರುಗಳು ದುರ್ಮರಣ ಹೊಂದಿವೆ.

Karnataka Rain
Karnataka Rain

ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟಕ್ಕೆ ಹೇಮಾವತಿ ಜಲಾಶಯದಲ್ಲಿ ಒಳಹರಿವು ಏರಿಕೆಯಾಗುತ್ತಲೇ ಇದೆ. ಹೇಮಾವತಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೇಮಾವತಿ ಜಲಾಶಯದಿಂದ ಹೊರಬಿಡುತ್ತಿರುವ ನೀರು ಧುಮ್ಮಿಕ್ಕುವುದನ್ನು ಕಣ್ತುಂಬಿಕೊಳ್ಳಲು ನೂರಾರು ಮಂದಿ ಬರುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಾಸನದ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಹಾಸನದಲ್ಲಿ ಗರ್ಭಗುಡಿಯ ಎದುರು ಹೆಡೆ ಎತ್ತಿ ಕುಳಿತ ನಾಗರಹಾವು

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿರುವ ಹೊಳೆಮಲ್ಲೇಶ್ವರ ದೇವಾಲಯದಲ್ಲಿ ಬೆಳ್ಳಂಬೆಳಿಗ್ಗೆ ನಾಗರಹಾವು ಪ್ರತ್ಯಕ್ಷಗೊಂಡಿದೆ. ಹೇಮಾವತಿ ನದಿ ದಡದಲ್ಲೆ ಇರುವ ಹೊಳೆಮಲ್ಲೇಶ್ವರ ದೇವಾಲಯವು ನದಿ ನೀರಿನಿಂದ ಜಲಾವೃತವಾಗಿದೆ. ಮಂಗಳವಾರ ದೇವಾಲಯದೊಳಗೆ ನಾಗರಹಾವು ಕಾಣಿಸಿಕೊಂಡಿದೆ. ಗರ್ಭಗುಡಿಯ ಎದುರು ಹೆಡೆ ಎತ್ತಿ ಕುಳಿತ ನಾಗರಹಾವು ಕಂಡು ಜನರು ಆತಂಕಗೊಂಡಿದ್ದರು. ಹೇಮಾವತಿ ನದಿ ನೀರು ನುಗ್ಗಿರುವುದರಿಂದ ಗರ್ಭಗುಡಿ ಬಾಗಿಲು ಮುಚ್ಚಿತ್ತು.

ಮತ್ತೆ ತ್ರಿವೇಣಿ ಸಂಗಮ ಮುಳುಗಡೆ

ಬಿಟ್ಟು ಬಿಟ್ಟು ಮಳೆ ಸುರಿಯುತ್ತಿರುವುದರಿಂದ ಆತಂಕ ಹೆಚ್ಚಾಗಿದೆ. ಅಲ್ಲಲ್ಲಿ ಗುಡ್ಡದ ಸಣ್ಣ ಪ್ರಮಾಣದ ಮಣ್ಣು ಕುಸಿಯುತ್ತಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಇದೆ. ಇತ್ತ ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಕ್ಷೇತ್ರ ಮತ್ತೆ ಭರ್ತಿಯಾಗಿದೆ. ಮತ್ತೊಮ್ಮೆ ಭಗಂಡೇಶ್ವರ ದೇಗುಲದ ಮೆಟ್ಟಿಲವರೆಗೂ ನೀರು ಬಂದಿದೆ. ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರಾಶಾಹಿಯಾಗುತ್ತಿದೆ. ವಿದ್ಯುತ್ ಸಂಪರ್ಕ‌ ಕಲ್ಪಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ

ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ. ಭದ್ರಾ ನದಿಯ ಪ್ರವಾಹಕ್ಕೆ ರಸ್ತೆ ಮುಳುಗಿದ್ದು, ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ಗ್ರಾಮಗಳು ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಮೇಲೆ 8-10 ಅಡಿ ನೀರು ನಿಂತಿದೆ. ಇತ್ತ ಕಳಸ-ಹೊರನಾಡು-ಕೊಟ್ಟಿಗೆಹಾರ ಮಾರ್ಗವು ಸಂಪೂರ್ಣ ಬಂದ್ ಆಗಿದೆ. ಭದ್ರೆಯ ಅಬ್ಬರಕ್ಕೆ 20 ಮನೆಯ ಕುಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ. ಹಳ್ಳಿಯಿಂದ ಹೊರಬರಲು ಯಾವುದೇ ಮಾರ್ಗ ಇಲ್ಲದೆ ಪರದಾಟ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

ಬೆಳಗಾವಿಯಲ್ಲಿ ದನ ಮೇಯಿಸುವಾಗ ಕರಡಿ ದಾಳಿ

ಮನೆಗೆ ಮರಳುತ್ತಿದ್ದ ವ್ಯಕ್ತಿಯ ಮೇಲೆ ಕರಡಿಯೊಂದು ದಾಳಿ ಮಾಡಿದೆ. ದನ ಮೇಯಿಸುವ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ‌ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದ ಬಳಿ ನಡೆದಿದೆ. ನಾರಾಯಣ ಚೌರಿ (65) ಕರಡಿ ದಾಳಿಗೆ ಒಳಗಾದವರು. ಕರಡಿ ದಾಳಿ ಮಾಡುತ್ತಿದ್ದಂತೆ ನಾರಾಯಣ ಚೌರಿ ಚಿರಾಡಿದ್ದಾರೆ. ಚಿರಾಟ ಕೇಳಿ ಓಡಿ ಬಂದಿದ್ದ ಅಕ್ಕ ಪಕ್ಕದ ಜನ ಓಡಿಸಿದ್ದಾರೆ. ನಾರಾಯಚ ಚೌರಿ ಬೆನ್ನು ಮೈಮೇಲೆ ಪರಚಿ ದಾಳಿ ಮಾಡಿದೆ. ಗಾಯಗೊಂಡ ನಾರಾಯಣ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯಪುರದಲ್ಲಿ ಜಾನುವಾರು ಕೊಂದ ಕಾಡು ಪ್ರಾಣಿ

ವಿಜಯಪುರದ ಕಂದಗನೂರ ಗ್ರಾಮದ ರೈತರು ಕಾಡು ಪ್ರಾಣಿಯ ಕಾಟಕ್ಕೆ ಆತಂಕಕ್ಕೆ ಒಳಗಾಗಿದ್ದಾರೆ. ಸಿದ್ರಾಮಪ್ಪ ಬೂಲಿ ಎಂಬ ರೈತನ ತೋಟದಲ್ಲಿದ್ದ ಆಕಳು ಕರು ಹಾಗೂ ಎಮ್ಮೆ ಕರುವನ್ನು ಕಾಡು ಪ್ರಾಣಿ ಕೊಂದು ಹಾಕಿದೆ. ಚಿರತೆ ಕೊಂದಿರಬಹುದೆಮದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಂದಗನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡು ಪ್ರಾಣಿ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು. ಬೋನ್ ಹಾಕಿದ್ದಾರೆ. ಇನ್ನೂ ಜಾನುವಾರಗಳ ಮೇಲೆ ಚಿರತೆ ಅಲ್ಲ ಕತ್ತೆಕಿರುಬ ಇರಬಹುದು ಎಂದು ಸಂಶಯ ವ್ಯಕ್ತ ಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Karnataka Rain : ಕೆಲವೆಡೆ ಬಿಡುವು ನೀಡಿದ್ದ ಮಳೆಯು ಮತ್ತೆ ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ಚಿಕ್ಕೋಡಿಯಲ್ಲಿ ಹೆಸ್ಕಾಂ ಸಿಬ್ಬಂದಿ ನೀರಿಗೆ ಜಿಗಿದು ವಿದ್ಯುತ್‌ ಸರಿಪಡಿಸಿದ್ದಾರೆ. ಹಾಸನದಲ್ಲಿ ಶಾಲೆ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲೂ ಮಳೆಯ ( Karnataka Rain) ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ. ಮನೆಯಿಂದ ಹೊರಬರಲು ಆಗದೆ ಸಣ್ಣ ಬೋಟ್ ಬಳಸಿ ನೆರೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಶಾಲೆ, ಮದರಸ, ಸಂತೆ ಮಾರುಕಟ್ಟೆ, ಮನೆಗಳು ಜಲಾವೃತಗೊಂಡಿದೆ. ಸದ್ಯ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಬೋಟ್ ಬಳಕೆ ಮಾಡುವಂತಾಗಿದೆ.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆಯು ಕೋಡಿ ಹೊಡೆದಿದೆ. ಪರಿಣಾಮ ಭತ್ತ ನಾಟಿ ಮಾಡಿದ್ದ ಜಮೀನು ಜಲಾವೃತಗೊಂಡಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭೂ ಕುಸಿದಿದೆ. ಮಲ್ಲೇಶ್ವರ ಗುಡ್ಡದಲ್ಲಿ ಭಾರಿ ಪ್ರಮಾಣದ ಧರೆ ಕುಸಿದು, ರಸ್ತೆಯ ಅರ್ಧ ಭಾಗಕ್ಕೆ ಗುಡ್ಡದ ಮಣ್ಣು ಬಂದಿದೆ. 2019ರಲ್ಲಿ ಕುಸಿತ ಕಂಡಿದ್ದ ಸ್ಥಳದ ಸಮೀಪವೇ ಧರೆ ಕುಸಿದಿದೆ. ಬಾಳೆಹೊಳೆ, ಚನ್ನಹಡ್ಲು, ಬಾಳೆಹೊನ್ನೂರು ರಸ್ತೆಯಲ್ಲಿ ಘಟನೆ ನಡೆದಿದೆ.

ತುಂಗಾ ನದಿಯ ಅಬ್ಬರ ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಜಲಾವೃತವಾಗಿದ್ದು, ಅಂಗಡಿ ಮಳಿಗಗಳು, ಭಾರತಿ ತೀರ್ಥ ರಸ್ತೆಯೂ ಮುಳುಗಡೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿಯತ್ತ ಜನರ ಓಡಾಟಕ್ಕೆ ನಿಷೇಧ ಹೇರಲಾಗಿದೆ. ತಾತ್ಕಾಲಿಕವಾಗಿ ಸುಮಾರು 20ಕ್ಕೂ ಹೆಚ್ಚು ಅಂಗಡಿ ಮಳಿಗೆಗಳು ಕ್ಲೋಸ್ ಆಗಿವೆ. ಇನ್ನೂ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಮುಳುಗಡೆಯಾಗಿದ್ದು, ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಾ.ಹೆ.173ರ ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದ್ದರಿಂದ ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಕಳೆದ ಮೂರು ದಿನದಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣ ಸೋಮವಾರ ರಾತ್ರಿಯಿಡೀ ಭಾರೀ ಮಳೆಗೆ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆ ಹರಿಯುತ್ತಿರೋ ನೀರಿನಿಂದಾಗಿ ರಾಷ್ಟ್ರೀಯ ಹೆದ್ದಾರಿ ಸೇತುವೆ ಜಲಾವೃತವಾಗಿದೆ. ಟಿಪ್ಪರ್ ಲಾರಿ ಚಾಲಕ ಸೇತುವೆ ಮೇಲೆ ಸಂಚರಿಸಲು ಹೋಗಿ ಭಯಗೊಂಡು ವಾಪಾಸ್‌ ಆಗಿದ್ದಾರೆ. ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

karnataka Rain
karnataka Rain

ಇದನ್ನೂ ಓದಿ: Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ನೀರಿಗೆ ಜಿಗಿದು ವಿದ್ಯುತ್‌ ಸರಿಪಡಿಸಿದ ಹೆಸ್ಕಾಂ ಸಿಬ್ಬಂದಿ

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಕ್ಕೆ ಚಿಕ್ಕೋಡಿ ಉಪವಿಭಾಗದ ನದಿಗಳು ಸಮುದ್ರದಂತಾಗಿದೆ. ಪ್ರವಾಹ ಸಮಯದಲ್ಲಿ ಹೆಸ್ಕಾಂ ಸಿಬ್ಬಂದಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜೂಗುಳ ಗ್ರಾಮದಲ್ಲಿ ನೀರಿನಲ್ಲಿ ಧುಮುಕಿ ವಿದ್ಯುತ್ ಸರಿಪಡಿಸಿದ್ದಾರೆ. ಆನಂದ ಹೆರವಾಡಿ ಹೆಸ್ಕಾಂ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಬಳಿ ಇರುವ ಸೇತುವೆ ಜಲಾವೃತಗೊಂಡಿದೆ. ಅಥಣಿ ಗೋಕಾಕ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಕೃಷ್ಣಾ ನದಿ ದಂಡೆಯ 20 ಗ್ರಾಮಗಳಿಗೆ ನದಿ ನೀರು ಕಂಟಕ ಎದುರಾಗಿದೆ.

ಹಾಸನದಲ್ಲಿ ಶಾಲೆ ಜಲಾವೃತ

ಹಾಸನದಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಅರಕಲಗೂಡು ತಾಲೂಕಿನ ಯಗಟಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯು ಸಂಪೂರ್ಣ ಜಲಾವೃತಗೊಂಡಿತ್ತು. ಭಾರಿ ಮಳೆಗೆ ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದಲ್ಲಿ ಘಟನೆ ನಡೆದಿದೆ. ಮಠಸಾಗದ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತ ಗೊಂಡಿರುವುದರಿಂದ ಜನರು ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಮಠಸಾಗರ-ಕೃಷ್ಣಾಪುರ-ಸಕಲೇಶಪುರ ರಸ್ತೆ ಮುಳುಗಡೆಯಿಂದಾಗಿ ರಸ್ತೆ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು, ಗ್ರಾಮಸ್ಥರ ಪರದಾಡಿದರು.

ಬೇಲೂರು ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆಯು ಕೊಚ್ಚಿ ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುಳ್ಳಕ್ಕಿ-ಮೈಲಹಳ್ಳಿ-ಆಲೂರು-ಬೇಲೂರು-ಕೋನೇರ್ಲು ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಟ್ ಆಗಿದೆ. ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿದೆ.

ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬೆಟ್ಟಿಗೇರಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರೆ ಜರಿದು ಕಾಂಕ್ರೀಟ್ ರಸ್ತೆ ಕುಸಿದು ಬೀಳುವ ಹಂತದಲ್ಲಿದೆ. ಶ್ರೀರಾಮ ಮತ್ತು ಶ್ರೀದೇವಿ ದೇವಸ್ಥಾನದ ರಸ್ತೆಯ ಸಮೀಪ ಬರೆ ಕುಸಿದು ಮಣ್ಣೆಲ್ಲ ಕೆಳಭಾಗದ ಗದ್ದೆಗೆ ಬಂದು ನಿಂತಿದೆ. ನಾಟಿಗೆ ತಯಾರಾಗಿದ್ದ ಭತ್ತದ ಗದ್ದೆಗೆ ಮಣ್ಣು, ನೀರು ನುಗ್ಗಿ ಅಪಾರ ಹಾನಿಯಾಗಿದೆ. 30 ಮನೆಗಳಿರುವ ಗ್ರಾಮಕ್ಕೆ ತೆರಳುವ ರಸ್ತೆ ಇದೀಗ ಅಪಾಯದಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Uttara Kannada Landslide: ನೀರಿನಡಿ ಇನ್ನೂ 9 ದೇಹಗಳಿವೆ ಎಂದ ಸ್ವಾಮೀಜಿ! ಬರಲಿದೆ ಕೇರಳದಿಂದ ಬಾರ್ಜ್‌ ಮೌಂಟೆಡ್‌ ಹಿಟಾಚಿ

Uttara Kannada Landslide: ಶಿರೂರು ಗುಡ್ಡ ಕುಸಿದಲ್ಲಿ ನಾಪತ್ತೆಯಾದವರಿಗಾಗಿ ಇಂದೂ ಶೋಧ ಮುಂದುವರಿದಿದ್ದು, ಕಾರ್ಯಾಚರಣೆ 15ನೇ ದಿನಕ್ಕೆ ಕಾಲಿಟ್ಟಿದೆ. ಬೋಟ್‌ಗಳ ಮೂಲಕ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಬ್ರಿಡ್ಜ್ ಮೌಂಟೆಡ್ ಡ್ರೆಜ್ಜಿಂಗ್ ಮೂಲಕ ಕಾರ್ಯಾಚರಣೆ ವಿಚಾರದಲ್ಲಿ ತ್ರಿಶೂರ್‌ನ ತಾಂತ್ರಿಕ ತಜ್ಞರಿಂದ ಜಿಲ್ಲಾಡಳಿತ ಲಿಖಿತ ವರದಿ ಕೋರಿದೆ.

VISTARANEWS.COM


on

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ (Uattara Kannada Landslide, Ankola Landslide) ಸ್ಥಳಕ್ಕೆ ಉಡುಪಿಯ ದ್ವಾರಕಾಮಯಿ ಮಠದ ಸಾಯಿ ಈಶ್ವರ ಗುರೂಜಿ ಭೇಟಿ ನೀಡಿದ್ದು, ಸ್ಥಳದ ಪರಿಶೀಲನೆ ನಡೆಸಿದ ಬಳಿಕ ʼನೀರಿನಡಿಯಲ್ಲಿ ಇನ್ನೂ 9 ದೇಹಗಳಿರಬಹುದುʼ ಎಂದಿದ್ದಾರೆ.

ಈ ನಡುವೆ, ಗುಡ್ಡ ಕುಸಿತ ಜಾಗದಲ್ಲಿ ಕಾರ್ಯಾಚರಣೆ 15ನೇ ದಿನವೂ ಮುಂದುವರಿದಿದೆ. ಲಾರಿ ಮುಳುಗಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಕೇರಳದಿಂದ ಬಾರ್ಜ್ ಮೌಂಟೆಡ್ ಹಿಟಾಚಿ (Barge Mounted Hitachi) ತರಿಸಲು ಚಿಂತಿಸಲಾಗಿದೆ.

ದ್ವಾರಕಾಮಯಿ ಮಠದ ಸಾಯಿ ಈಶ್ವರ ಗುರೂಜಿ ನಿನ್ನೆ ಸ್ಥಳಕ್ಕೆ ಆಗಮಿಸಿ, ತಮ್ಮ ಪೆಂಡುಲಮ್ ಮೂಲಕ ಮತ್ತು ಎಲೆಕ್ಟ್ರಾನಿಕ್ ಸ್ಕ್ಯಾನಿಂಗ್ ಮೂಲಕ ಪರಿಶೀಲಿಸಿದರು. ಈ ಗುಡ್ಡಕುಸಿತದಲ್ಲಿ 17 ದೇಹಗಳು ಕಾಣಬರುತ್ತಿವೆ. ಸದ್ಯ 8 ಮೃತದೇಹಗಳು ಪತ್ತೆಯಾಗಿದೆ, ಇನ್ನೂ 9 ದೇಹಗಳಿವೆ ಎಂದು ಸ್ವಾಮೀಜಿ ಹೇಳಿದ್ದಾರೆ. ಕೇರಳದ ಟ್ರಕ್ ಗಂಗಾವಳಿ ನದಿಯ 24 ಅಡಿ ಆಳದಲ್ಲಿದೆ. ಟ್ರಕ್ ಇರೋ ಜಾಗದ ಬಳಿ ಒಂದು ದೇಹ ಇದೆ. ಉಳಿದವರ ದೇಹಗಳು ಗಂಗಾವಳಿ ನದಿಯಲ್ಲಿ ಹೋಗಿದೆ ಎಂದಿದ್ದಾರೆ.

ಕೇರಳದಿಂದ ಬಾರ್ಜ್‌

ಶಿರೂರು ಗುಡ್ಡ ಕುಸಿದಲ್ಲಿ ನಾಪತ್ತೆಯಾದವರಿಗಾಗಿ ಇಂದೂ ಶೋಧ ಮುಂದುವರಿದಿದ್ದು, ಕಾರ್ಯಾಚರಣೆ 15ನೇ ದಿನಕ್ಕೆ ಕಾಲಿಟ್ಟಿದೆ. ಬೋಟ್‌ಗಳ ಮೂಲಕ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಬ್ರಿಡ್ಜ್ ಮೌಂಟೆಡ್ ಡ್ರೆಜ್ಜಿಂಗ್ ಮೂಲಕ ಕಾರ್ಯಾಚರಣೆ ವಿಚಾರದಲ್ಲಿ ತ್ರಿಶೂರ್‌ನ ತಾಂತ್ರಿಕ ತಜ್ಞರಿಂದ ಜಿಲ್ಲಾಡಳಿತ ಲಿಖಿತ ವರದಿ ಕೋರಿದೆ. ವರದಿ ಆಧರಿಸಿ ನೌಕಾಪಡೆ, ಕೋಸ್ಟ್‌ಗಾರ್ಡ್, NDRF, SDRF, ಅಗ್ನಿಶಾಮಕ ದಳ ವತಿಯಿಂದ ಕಾರ್ಯಾಚರಣೆ ನಡೆಸಲು ಚಿಂತಿಸಲಾಗಿದೆ.

ಬಾರ್ಜ್ ಮೌಂಟೆಡ್ ಹಿಟಾಚಿ ತರಿಸಲು ಶಾಸಕ ಸತೀಶ್ ಸೈಲ್ ಚಿಂತಿಸಿದ್ದಾರೆ. ಇದು ನದಿಯಲ್ಲೇ ನಿಂತು ಆಳದಲ್ಲಿನ ಮಣ್ಣು, ಕಲ್ಲು ತೆಗೆಯುತ್ತದೆ. ಕೇರಳದ ಕೃಷಿ ಇಲಾಖೆಯ ಬಳಿ ಬಾರ್ಜ್ ಮೌಂಟೆಡ್ ಬೂಮ್ ಕ್ರಾಲಿಂಗ್ ಎಕ್ಸಕ್ಯಾವೇಟರ್ ಇದ್ದು, ಈ ಬಗ್ಗೆ ಕೇರಳ ಸರ್ಕಾರದೊಂದಿಗೆ ಸೈಲ್‌ ಮಾತುಕತೆ ನಡೆಸಿದ್ದಾರೆ. ಬಾರ್ಜ್ ಮೌಂಟೆಡ್ ಹಿಟಾಚಿಯ ಆಪರೇಟರ್, ಎಂಜಿನಿಯರ್‌ರಿಂದ ಇಂದು ಸ್ಥಳ ಪರಿಶೀಲನೆ‌ ಸಾಧ್ಯತೆ ಇದೆ.

ನೀರಿನ ಪ್ರವಾಹ ಅಡ್ಡಿ

ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಹಲವರು ಮಣ್ಣಿನಡಿ ಸಿಲುಕಿದ್ದರು, ಇನ್ನೂ ಕೆಲವರು ಗಂಗಾವಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ನದಿಯಲ್ಲೂ ಹುಡುಕಾಟ ನಡೆಸಲಾಗುತ್ತಿದೆ. ನೀರಿನ ವೇಗ ಹೆಚ್ಚಿರುವುದು ಹಾಗೂ ನದಿಯಲ್ಲಿರುವ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿಗಳಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಲ್ಲದೇ ಕಾರ್ಯಾಚರಣೆಯಲ್ಲಿ ಲಾರಿಯನ್ನು ಮೇಲಕ್ಕೆ ಎತ್ತಲೂ ಸಾಧ್ಯವಾಗಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಒಂದು ಕಡೆ ಮಣ್ಣಿನಡಿ ಲಾರಿ ಇದೆ ಎಂದಿದ್ದರು, ಒಂದು ವಾರದಲ್ಲಿ ಕಾರ್ಯಾಚರಣೆ ನಡೆಸಿ ಮಣ್ಣು ತೆಗೆದೆವು. ಈಗ ನೀರಿನಲ್ಲಿ ಇದೆ ಎಂದಾಗ ನದಿಯಲ್ಲಿ ಕಾರ್ಯಾಚರಣೆ ಮಾಡಿದ್ದೇವೆ. ಎಲ್ಲಾ ಪ್ರಯತ್ನ ಮಾಡಿದರೂ ಮೂವರ ಮೃತ ದೇಹ ಸಿಗದಿರುವುದು ಬೇಸರ ತಂದಿದೆ. ದೇಹ ಸಿಗದೇ ಇದ್ದವರಿಗೂ ಅವರ ಅವಲಂಬಿತರ ಬಳಿ ಅಗ್ರಿಮೆಂಟ್ ಮಾಡಿಕೊಂಡು ಪರಿಹಾರ ನೀಡುತ್ತೇವೆ. ಮೃತರ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾದರೆ ಅವರ ಜೊತೆ ನಾವು ಇರುತ್ತೇವೆ. ಕಾರ್ಯಾಚರಣೆ ಸ್ಥಗಿತ ಆಗಿಲ್ಲ, ಆದರೆ ಮಾಡಲು ಸಾಧ್ಯವಾಗುತ್ತಿಲ್ಲ. ನೀರಿನ ಪ್ರಮಾಣ ಕಡಿಮೆಯಾದ ನಂತರ ಕಾರ್ಯಾಚರಣೆ ಮಾಡುತ್ತೇವೆ. ಮುಳುಗಿರುವ ಟ್ರಕ್ ಮೇಲಕ್ಕೆ ಎತ್ತುವ ಪ್ರಯತ್ನ ಮಾಡುತ್ತೇವೆ. ಗುಡ್ಡ ಕುಸಿತದ ಬಗ್ಗೆ ಮಾಹಿತಿ ಪಡೆದು ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

Continue Reading

ಪ್ರಮುಖ ಸುದ್ದಿ

Hassan Landslide: ಗುಡ್ಡ ಕುಸಿದು ಕತ್ತರಿಸಿಹೋದ ರಸ್ತೆ; 10 ಗ್ರಾಮಗಳ ಸಂಪರ್ಕ ಕಟ್;‌ ಎತ್ತಿನಹೊಳೆ ಕಾಮಗಾರಿಯೇ ಕಾರಣ

Hassan Landslide: 200 ಮೀಟರ್‌ಗೂ ಹೆಚ್ಚು ದೂರ ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕ ಕಟ್ ಆಗಿದೆ. ಈ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಆರೋಪಿಸಲಾಗಿದೆ.

VISTARANEWS.COM


on

hassan landslide

ಹಾಸನ: ಹಾಸನ (Hassan news) ಜಿಲ್ಲೆಯಲ್ಲಿ ಮಳೆ ಹಾವಳಿ (karanataka Rain News) ಮುಂದುವರಿದಿದೆ. ಸಕಲೇಶಪುರ (Sakaleshpur) ಬಳಿ ಗುಡ್ಡ ಕುಸಿತದಿಂದ (Landslide) ಸುಮಾರು 200 ಅಡಿಗಳಷ್ಟು ದೂರದ ರಸ್ತೆಯೇ ಕತ್ತರಿಸಿಹೋಗಿ, ಮಂಗಮಾಯವಾಗಿದೆ. ಭಾರಿ ಭೂಕುಸಿತ ಉಂಟಾಗಿರುವ ಕಾರಣ ರಸ್ತೆ ಸರ್ವನಾಶವಾಗಿದ್ದು, ಇದರಿಂದ ಸಂಪರ್ಕಿತರಾಗಿದ್ದ ಸುಮಾರು 10 ಗ್ರಾಮಗಳ ಜನತೆ ಸಂಪರ್ಕ (communication cut) ಕಳೆದುಕೊಂಡಿದ್ದಾರೆ. ಈ ರಸ್ತೆಯ ಸಮೀಪದಲ್ಲಿ ಎತ್ತಿನಹೊಳೆ (Ettinahole project) ಪೈಪ್‌ಲೈನ್‌ ಹಾದುಹೋಗಿದ್ದು, ಅವೈಜ್ಞಾನಿಕವಾಗಿರುವ ಇದರ ಕಾಮಗಾರಿಯೇ ಈ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

hassan landslide
hassan landslide

ಹಾಸನದಲ್ಲಿ ಮುಂದುವರೆದ ಮಳೆಯ ಅಬ್ಬರದ ಪರಿಣಾಮ ಉಂಟಾಗುತ್ತಿರುವ ಭೂಕುಸಿತಗಳ ಸಾಲಿಗೆ ಸಕಲೇಶಪುರದ ಬಳಿಯ ಈ ಬೃಹತ್ ಪ್ರಮಾಣದ ಭೂ ಕುಸಿತ ಸೇರಿದೆ. ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ ನಡೆದಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತವಾಗಿದೆ. 200 ಮೀಟರ್‌ಗೂ ಹೆಚ್ಚು ದೂರ ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕ ಕಟ್ ಆಗಿದೆ. ಈ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಆರೋಪಿಸಲಾಗಿದೆ.

hassan landslide
hassan landslide

ಮುಂದುವರಿದ ಹಳಿ ತೆರವು

ಶಿರಾಡಿ ಘಾಡಿಯಲ್ಲಿ ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡವನ್ನು ತೆರವು ಮಾಡುವ ಕಾರ್ಯಾಚರಣೆ ನಾಲ್ಕನೇ ದಿನವೂ ಮುಂದುವರಿದಿದೆ. ಭಾರಿ ಮಳೆಯ ನಡುವೆಯೂ ಕಾರ್ಯಾಚರಣೆ ನಡೆಯುತ್ತಿದ್ದು, 420ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಹದಿನೈದು ದಿನಗಳ ಕಾಲ ಸಕಲೇಶಪುರ-ಸುಬ್ರಹ್ಮಣ್ಯ ನಡುವೆ ರೈಲು ಮಾರ್ಗ ಬಂದ್ ಆಗಿದೆ. ಕಾರ್ಯಾಚರಣೆಗೆ ಸತತ ಮಳೆ ಅಡ್ಡಿಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿತ್ತು. ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಕಾರ್ಯಾಚರಣೆ ಮೇಲ್ವಿಚಾರಣೆ ನಡೆಸಿದ್ದಾರೆ.

ಕೊಡಗಿನಲ್ಲಿ ಬಿರುಸುಗೊಂಡ ಮಳೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಬಿರುಸು ಪಡೆದುಕೊಂಡಿದ್ದು, ಬ್ರಹ್ಮಗಿರಿ ತಪ್ಪಲಿನಲ್ಲಿ ನಿನ್ನೆಯಿಂದ ಧಾರಾಕಾರ‌ ಮಳೆಯಾಗುತ್ತಿದೆ. ಕಾವೇರಿ, ಕನ್ನಿಕೆ, ಸುಜೋತಿ ನದಿಗಳು ಉಕ್ಕಿ ಹರಿಯುತ್ತಿವೆ. ಭಾಗಮಂಡಲದ ತ್ರಿವೇಣಿ ಸಂಗಮ‌ ಮತ್ತೆ ಸಂಪೂರ್ಣ ಭರ್ತಿಯಾಗಿದ್ದು, 2ನೇ ಬಾರಿಗೆ ಭಗಂಡೇಶ್ವರ ದೇಗುಲದ ಮೆಟ್ಟಿಲವರೆಗೆ ನೀರು ಬಂದಿದೆ. ಮಡಿಕೇರಿ – ತಲಕಾವೇರಿ ಭಾಗಮಂಡಲ ನಾಪೋಕ್ಲು ರಸ್ತೆ ಮೇಲೆ ನೀರು ನಿಂತಿದೆ. ಭಾಗಮಂಡಲದ ಮೇಲ್ಸೇತುವೆ ಮೇಲೆ‌ ವಾಹನಗಳ ಓಡಾಟ ನಡೆದಿದೆ.

ಹಾರಿಹೋದ ಮನೆಗಳ ಸೂರುಗಳು

ಕಾರವಾರ: ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿಗೆ 20ಕ್ಕೂ ಅಧಿಕ ಮನೆಗಳ ಮೇಲ್ಛಾವಣಿ ಹಾರಿಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡ ಸೀಬರ್ಡ್ ಕಾಲೋನಿಯಲ್ಲಿ ನಡೆದಿದೆ. ಸುಧಾ ಹರಿಕಾಂತ, ನಿರ್ಮಲಾ ದುರ್ಗೇಕರ್, ಶೋಭಾ ದುರ್ಗೇಕರ್ ಸೇರಿ 20ಕ್ಕೂ ಅಧಿಕ ನಿವಾಸಿಗಳ ಮೇಲ್ಛಾವಣಿಗೆ ಹಾನಿಯಾಗಿದೆ. ತಡರಾತ್ರಿ ಬೀಸಿದ ಭಾರೀ ಗಾಳಿಗೆ ತಗಡಿನ ಶೀಟ್‌ಗಳಿದ್ದ ಮೇಲ್ಛಾವಣಿ ಹಾರಹೋಗಿವೆ. ಕೆಲವರ ಹೆಂಚಿನ ಮನೆಗಳಿಗೂ ಹಾನಿಯಾಗಿದ್ದು, ಹೆಂಚಿನ ತುಂಡು ತಲೆಗೆ ಬಿದ್ದು ಮನೆಯವರು ಗಾಯಗೊಂಡರು.

ಇದನ್ನೂ ಓದಿ: Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

Continue Reading
Advertisement
Dinesh Mongia
ಪ್ರಮುಖ ಸುದ್ದಿ14 mins ago

Dinesh Mongia : ಭಾರತ ತಂಡದ ಮಾಜಿ ಆಟಗಾರ ದಿನೇಶ್ ಮೋಂಗಿಯಾ ಗೋವಾ ಕ್ರಿಕೆಟ್​ ತಂಡದಲ್ಲಿ ಹೊಸ ಜವಾಬ್ದಾರಿ

yakshagana artist
ಉಡುಪಿ23 mins ago

Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

Vande Bharat Express
ದೇಶ27 mins ago

Vande Bharat Express: ಮತ್ತೆ ಸುದ್ದಿಯಾದ ವಂದೇ ಭಾರತ್‌ ರೈಲು; ಮಾಂಸಾಹಾರ ಸರ್ವ್‌ ಮಾಡಿದ ಸಿಬ್ಬಂದಿಗೆ ಕಪಾಳಮೋಕ್ಷ

Likhith Shetty starrer Full Meals movie Motion poster release
ಕರ್ನಾಟಕ27 mins ago

Kannada New Movie: ನಟ ಲಿಖಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ʼಫುಲ್ ಮೀಲ್ಸ್ʼ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್‌

Wayanad Landslide
ದೇಶ28 mins ago

Wayanad Landslide: ಸಾವಿನ ಸಂಖ್ಯೆ 89; ವಯನಾಡು ಭೂಕುಸಿತದ ಭೀಕರತೆಯ ವಿಡಿಯೊ, ಫೋಟೊಗಳು ಇಲ್ಲಿವೆ

Viral Video
Latest31 mins ago

Viral Video: ಮಲಗಿದ್ದ ಮಹಿಳೆಯ ತಲೆಕೂದಲಿನಲ್ಲಿ ಹರಿದಾಡಿದ ಹಾವು!

bouddha sahitya halavu nelegalu rashtriya vichara sankirana in Bengaluru on 3rd August
ಕರ್ನಾಟಕ38 mins ago

Bengaluru News: ಬೆಂಗಳೂರಿನಲ್ಲಿ ಆ.3ರಂದು ‘ಬೌದ್ಧ ಸಾಹಿತ್ಯ-ಹಲವು ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣ

Hardik Pandya
ಕ್ರೀಡೆ45 mins ago

Hardik Pandya : ನನ್ನ ಅಪರಾಧದಲ್ಲಿ ನೀನು ಪಾಲುದಾರ; ಪುತ್ರನಿಗೆ ಈ ರೀತಿ ಬರ್ತ್​​ಡೇ ವಿಶ್ ಮಾಡಿದ ಪಾಂಡ್ಯ

karnataka Rain
ಮಳೆ46 mins ago

Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

Wayanad Landslide
ಕರ್ನಾಟಕ46 mins ago

Wayanad Landslide: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ: ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ23 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ24 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌