Uttara Kannada News: ಯಲ್ಲಾಪುರದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ - Vistara News

ಉತ್ತರ ಕನ್ನಡ

Uttara Kannada News: ಯಲ್ಲಾಪುರದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ

Uttara Kannada News: ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ತಹಸೀಲ್ದಾರ್‌ ಗುರುರಾಜ್‌ ಎಂ. ನೆರವೇರಿಸಿದರು.

VISTARANEWS.COM


on

75th Republic Day celebration in Yallapur
ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ (75th Republic Day) ಅಂಗವಾಗಿ ಧ್ವಜಾರೋಹಣವನ್ನು ತಹಸೀಲ್ದಾರ್‌ ಗುರುರಾಜ್‌ ಎಂ. ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್‌, ನಮ್ಮದು ಸಂಪೂರ್ಣ ವಿಶ್ವದಲ್ಲಿ ಅತ್ಯಂತ ಅಗ್ರಮಾನ್ಯದಲ್ಲಿರುವ ದೇಶವಾಗಿದೆ. ನಮ್ಮ ನೆಲ, ಜಲ, ಸಂಸ್ಕೃತಿಯನ್ನು ಗೌರವಿಸುವಂತ ಸಂಸ್ಕಾರ ನಮ್ಮ ದೇಶದ ಮಣ್ಣಿನ ಗುಣವಾಗಿದೆ. ಡಾ. ಬಿ.ಆರ್‌. ಅಂಬೇಡ್ಕರ್‌, ಮಹಾತ್ಮ ಗಾಂಧೀಜಿ ಅವರಂತಹ ಮಹನೀಯರ ಆದರ್ಶಗಳು ನಮಗೆ ಪ್ರೇರಣೆಯಾಗಲಿ ಎಂದು ತಿಳಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ್‌ ಗುರುರಾಜ್‌ ಎಂ., ಜಗತ್ತಿನ ಅತ್ಯುನ್ನತ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಶ್ರೇಷ್ಠ ಗುಣಗಳನ್ನು ಅಳವಡಿಸಿ ನಮ್ಮ ಸಂವಿಧಾನವನ್ನು ರೂಪಿಸಿದ ಡಾ. ಅಂಬೇಡ್ಕರ್‌ ಅವರನ್ನು ನಾವೆಲ್ಲ ಇಂದು ನೆನೆಯಲೇಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Padma Shri: ಭತ್ತದ ತಳಿಯ ಸಂರಕ್ಷನನ್ನು ಅರಸಿ ಬಂತು ಪದ್ಮಶ್ರೀ ಗೌರವ

ಇದೇ ಸಂದರ್ಭದಲ್ಲಿ ತಾನ್‌ಸೇನ್‌ ಪ್ರಶಸ್ತಿ ಪುರಸ್ಕೃತ ಪಂಡಿತ್‌ ಗಣಪತಿ ಭಟ್‌ ಹಾಸಣಗಿ, ಗ್ರಾಮೀಣ ಭಾಗದಲ್ಲಿ ಸೇವೆಗಾಗಿ ಡಾ. ನಾಗರಾಜ್ ಬಿ.ಎಚ್‌. ಹಾಗೂ ನಾಟಿ ವೈದ್ಯ ನಾರಾಯಣ ಹೆಗಡೆ ಗವೇಗುಳಿ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಂತೆಯೇ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟು ಶ್ರೀದೇವಿ ಗಂಗಾ ನಾಯಕ ಹಾಗೂ ವಿಶೇಷ ಚೇತನರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಜಯಶ್ರೀ ಮಂಜುನಾಥ ಮೈಲಾರ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.

ನಂತರ ನಡೆದ ಆಕರ್ಷಕ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ವೇದಿಕೆಯಲ್ಲಿ ಪಂಚಾಯತ್‌ ರಾಜ್‌ ವಿಕೇಂದ್ರೀಕರಣ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಸಿಪಿಐ ರಂಗನಾಥ ನೀಲಮ್ಮನವರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುನಂದಾ ದಾಸ್ ಹಾಗೂ ಜ್ಯೋತಿ ನಾಯ್ಕ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Sachin Tendulkar: ಸಫಾರಿ ವೇಳೆ ಮೂರನೇ ತಲೆ ಮಾರಿನ ಹುಲಿಯನ್ನು ತೋರಿಸಿದ ಸಚಿನ್​ ತೆಂಡೂಲ್ಕರ್​

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಸ್ವಾಗತಿಸಿದರು. ಸಂಜೀವ್ ಕುಮಾರ್ ಹೊಸ್ಕೇರಿ ನಿರ್ವಹಿಸಿದರು. ಶಿಕ್ಷಣ ಸಂಯೋಜಕ ಸಂತೋಷ ಜಿಗಳೂರು ವಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

PM Narendra Modi: ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

VISTARANEWS.COM


on

Congress instigates bombers We are crushing traitors through NIA PM Narendra Modi
Koo

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಬಾಂಬರ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ರಾಮೇಶ್ವರಂ ಕೆಫೆ ಸ್ಫೋಟವನ್ನು (Rameswaram cafe blast) ಮೊದಲು ಸಿಲಿಂಡರ್ ಸ್ಫೋಟವೆಂದು ಕಾಂಗ್ರೆಸ್ ಸರ್ಕಾರದವರು ಹೇಳಿದ್ದರು. ಆದರೆ, ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಘಟನೆ ಬಗ್ಗೆ ಗರಂ ಆಗಿ ಮಾತನಾಡಿದರು.

ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಈ ಹಿಂದೆ ಮಂಗಳೂರಲ್ಲಿ ಸ್ಫೋಟ, ಬೆಂಗಳೂರಲ್ಲಿ ಸ್ಫೋಟ, ದೆಹಲಿಯಲ್ಲಿ ಸ್ಫೋಟ, ಸೂರತ್‌ನಲ್ಲಿ ಸ್ಫೋಟ ಹೀಗೆ ದೇಶದ ಎಲ್ಲ ಕಡೆ ಸ್ಫೋಟ.. ಸ್ಫೋಟವೆಂದು ನ್ಯೂಸ್ ಬರುತ್ತಿತ್ತು. ಆದರೆ, ಈಗ ಅಂದ್ರೆ 2014ರ ನಂತರ ಬಾಂಬ್‌ ಸ್ಫೋಟದ ಪ್ರಕರಣಗಳು ಆಗುತ್ತಾ ಇದೆಯಾ? ಕಾಂಗ್ರೆಸ್‌ ಪಕ್ಷದಿಂದ ಆ್ಯಂಟಿ ಸೋಷಿಯಲ್ ಹಾಗೂ ಆ್ಯಂಟಿ ನ್ಯಾಷನಲ್ ಕಾರ್ಯ ನಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಎಕ್ಸ್‌ರೇ ಮಾಡುತ್ತಾರಂತೆ. ನಿಮ್ಮ ಆಸ್ತಿ, ನಿಮ್ಮ ಜಮೀನು, ನಿಮ್ಮ ಚಿನ್ನವನ್ನು ಸರ್ವೆ ಮಾಡ್ತಾರಂತೆ. ಮಹಿಳೆಯರ ಮಂಗಳ ಸೂತ್ರವನ್ನು ಸರ್ವೆ ಮಾಡುತ್ತಾರಂತೆ. ಕಾಂಗ್ರೆಸ್ ಪಕ್ಷದವರು ಹಾಗೆ ಸರ್ವೆ ಮಾಡ್ತೀನಿ ಅಂತಾ ಹೋದರೆ ಸುಮ್ಮನೆ ಬಿಡುತ್ತೇನಾ? ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ವೆ, ಎಕ್ಸ್‌ರೇ ಕಾರ್ಯವನ್ನು ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮ್ಮ ಸೇವೆ ಮಾಡುವುದಕ್ಕಾಗಿಯೇ ಪರಮಾತ್ಮ ನರೇಂದ್ರ ಮೋದಿಯನ್ನು ಕಳುಹಿಸಿದ್ದಾನೆ. ನಿಮ್ಮ ಕನಸೇ ಮೋದಿ ಸಂಕಲ್ಪ ಅಂತಾ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಕೆಲಸ ಮಾಡುತ್ತಾ 2047ರ ವಿಕಸಿತ ಭಾರತಕ್ಕಾಗಿ ನನ್ನ ಸೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಮುಸ್ಲಿಂ ದೊರೆಗಳ ದೌರ್ಜನ್ಯ ಹಾಗೂ ಅತ್ಯಾಚಾರಗಳ ಬಗ್ಗೆ ಕಾಂಗ್ರೆಸ್ ಸೊಲ್ಲಿಲ್ಲ. ವೋಟ್‌ ಬ್ಯಾಂಕ್ ಹಾಗೂ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ರಾಜಕಾರಣ ಮಾಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕದಂಬ ವಂಶಸ್ಥರು ಆಡಳಿತ ನಡೆಸಿ ಅಪಾರ ಕೊಡುಗೆ ನೀಡಿದ್ದಾರೆ. ಕದಂಬ ವಂಶಸ್ಥರು ಕನ್ನಡ ಅಭಿವೃದ್ಧಿಗೆ ನೀಡಿದ ಒತ್ತನ್ನು ಯಾರೂ ಮರೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಅಡಿಕೆ (Arecanut), ಸಿರಿಧಾನ್ಯ (Millet) ಹಾಗೂ ಮೀನುಗಾರಿಕೆ (Fishing) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೀನುಗಾರರಿಗೂ ಮೊದಲ ಬಾರಿಗೆ ಕಿಸಾನ್ ಕಾರ್ಡ್‌ ಕೊಡಿಸುದ್ದು ನಮ್ಮ ಸರ್ಕಾರವಾಗಿದೆ. 20 ಸಾವಿರ ಕೋಟಿ ರೂಪಾಯಿ ಕೊಟ್ಟು ಮತ್ಸ್ಯ ಸಂಪದ ಯೋಜನೆಯನ್ನು ರೂಪಿಸಿ ಎಲ್ಲ ರೀತಿ ಪ್ರೋತ್ಸಾಹವನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

PM Narendra Modi: ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

PM Narendra Modi proposing arecanut millets and fisheries
Koo

ಶಿರಸಿ (ಉತ್ತರ ಕನ್ನಡ): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನಕ್ಕೆ ಪ್ರಚಾರ ಕಾರ್ಯವನ್ನು ಆರಂಭ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕದ ಅಡಿಕೆ (Arecanut), ಸಿರಿಧಾನ್ಯ (Millet) ಹಾಗೂ ಮೀನುಗಾರಿಕೆ (Fishing) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೀನುಗಾರರಿಗೂ ಮೊದಲ ಬಾರಿಗೆ ಕಿಸಾನ್ ಕಾರ್ಡ್‌ ಕೊಡಿಸುದ್ದು ನಮ್ಮ ಸರ್ಕಾರವಾಗಿದೆ. 20 ಸಾವಿರ ಕೋಟಿ ರೂಪಾಯಿ ಕೊಟ್ಟು ಮತ್ಸ್ಯ ಸಂಪದ ಯೋಜನೆಯನ್ನು ರೂಪಿಸಿ ಎಲ್ಲ ರೀತಿ ಪ್ರೋತ್ಸಾಹವನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

PM Narendra Modi: ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

PM Narendra Modi in Sirsi
Koo

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಉತ್ತರ ಕನ್ನಡ ಅಡಿಕೆಗೆ ಜಿಐ ಟ್ಯಾಗ್‌ ನೀಡಿದ್ದು ನಾವೇ

ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ. ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

PM Narendra Modi Live : ಭಾನುವಾರ (ಏಪ್ರಿಲ್‌ 28) ಬೆಳಗಾವಿಯಲ್ಲಿ ಸಮಾವೇಶ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇದರ ಲೈವ್‌ ವಿಡಿಯೊ ಇಲ್ಲಿದೆ.

VISTARANEWS.COM


on

PM Narendra Modi Live in Sirsi campaign meeting here
Koo

ಶಿರಸಿ (ಉತ್ತರ ಕನ್ನಡ): ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Modi in Karnataka) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾವಿ ಸಮಾವೇಶದಲ್ಲಿ ಪಾಲ್ಗೊಂಡು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದಾರೆ. ಈ ಸಮಾವೇಶದ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಭಾನುವಾರ ಬೆಳಗ್ಗೆ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ನರೇಂದ್ರ ಮೋದಿ ಅವರು ಭಾಷಣ ಮಾಡಿ, ಈಗ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading
Advertisement
love jihad
ಕರ್ನಾಟಕ5 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ5 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು5 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ5 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ5 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20246 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ6 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ6 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ6 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ7 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202412 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202414 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202416 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202417 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ20 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ24 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌