Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ - Vistara News

ಉತ್ತರ ಕನ್ನಡ

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Uttara Kannada News: ಯಲ್ಲಾಪುರ ಪಟ್ಟಣದ ಅಡಿಕೆ ಭವನದಲ್ಲಿ ಸೋಮವಾರ ಗ್ರೀನ್ ಕೇರ್ ಸಂಸ್ಥೆ ಶಿರಸಿ ಹಾಗೂ ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್ ಅವರ ಸಹಯೋಗದಲ್ಲಿ ಆಯೋಜಿಸಿರುವ ಉಚಿತ ಬ್ಯೂಟೀಷಿಯನ್ ಹಾಗೂ ಬೇಸಿಕ್ ಫ್ಯಾಶನ್ ಡಿಸೈನಿಂಗ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

VISTARANEWS.COM


on

Beautician and Basic Fashion Designing Training Programme inauguration in Yallapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಇಂದಿನ ಶತಮಾನ ವಿದ್ಯಾರ್ಹತೆಯ ಶತಮಾನವಾಗಿದೆ. ವಿದ್ಯೆಯ ಮೂಲಕ ನಮ್ಮನ್ನು ಅಳೆಯಲಾಗುತ್ತದೆ. ನಮ್ಮಲ್ಲಿರುವ ಪ್ರತಿಭೆಗಳನ್ನು ಕೌಶಲ್ಯವಾಗಿ ಪರಿವರ್ತಿಸಿಕೊಂಡು ಉದ್ಯೋಗ ಸೃಷ್ಟಿಸಿಕೊಳ್ಳುವ ತರಬೇತಿಗಳ ಅವಶ್ಯಕತೆ ಇಂದಿನ ವಿದ್ಯಾರ್ಥಿಗಳಿಗೆ ಇದೆ ಎಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ. ಜನಾರ್ಧನ (Uttara Kannada News) ತಿಳಿಸಿದರು.

ಪಟ್ಟಣದ ಅಡಿಕೆ ಭವನದಲ್ಲಿ ಸೋಮವಾರ ಗ್ರೀನ್ ಕೇರ್ ಸಂಸ್ಥೆ ಶಿರಸಿ ಹಾಗೂ ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್ ಅವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಬ್ಯೂಟೀಷಿಯನ್ ಹಾಗೂ ಬೇಸಿಕ್ ಫ್ಯಾಶನ್ ಡಿಸೈನಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳುವ ಅಗತ್ಯವಿದೆ. ನಮ್ಮಲ್ಲಿರುವ ಕಲೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜ್ಞಾನ ನಮಗೆ ತರಬೇತಿಗಳಿಂದ ಮಾತ್ರ ದೊರೆಯುತ್ತದೆ. ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಜ್ಞಾನ, ಅದೇ ತಂತ್ರಜ್ನಾನದ ಬದಲಾವಣೆಗೆ ಪ್ರಯತ್ನಿಸುವುದು ಆವಿಷ್ಕಾರ. ಅಂತಹ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ ನಮ್ಮ ಯೋಚನೆಯಿರಬೇಕು ಎಂದರು.

ಇದನ್ನೂ ಓದಿ: Kannada New Movie: ಗಣೇಶ್ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ʼದ್ವಾಪರ ದಾಟುತʼ ಹಾಡು ರಿಲೀಸ್‌!

ತರಬೇತಿಗಳ ಮೂಲಕ ಯಾವುದೇ ವಸ್ತು, ಕಲೆ ಅಥವಾ ಕೌಶಲ್ಯವನ್ನು ಸಮರ್ಪಕವಾಗಿ ಉಪಯೋಗಕ್ಕೆ ಬರುವಂತೆ ವಿದ್ಯಾರ್ಥಿಗಳು ಕಲಿಯಬೇಕು. ಪ್ರತಿನಿತ್ಯ ಹೊಸತನಗಳು ನಮ್ಮ ಸುತ್ತಮುತ್ತಲಿನ ಜಗತ್ತಿನಲ್ಲಿ ಕಾಣಸಿಗುತ್ತದೆ. ಅದಕ್ಕೆ ಹೊಂದಿಕೊಳ್ಳುವ, ಅರಿತುಕೊಳ್ಳುವ ಜ್ಞಾನವನ್ನು ನಾವೆಲ್ಲ ಪಡೆಯಬೇಕಿದೆ. ಇದೇ ರೀತಿಯ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನಮ್ಮ ಕಾಲೇಜಿನಲ್ಲೂ ಹಮ್ಮಿಕೊಳ್ಳುವ ಆಸಕ್ತಿ ನಮಗೆ ಇದೆ. ಆ ಮೂಲಕ ವಿದ್ಯಾರ್ಥಿಗಳು ಸ್ವಾವಲಂಬಿ ಜೀವನವನ್ನು ಕಂಡುಕೊಳ್ಳಲು ನಮ್ಮಲ್ಲಾದ ಸಹಕಾರವನ್ನು ನೀಡಬಹುದಾಗಿದೆ. ಇಂದು ಉದ್ಯೋಗ ಅರಸಿ ದೊಡ್ಡ ದೊಡ್ಡ ಊರುಗಳಿಗೆ ತೆರಳುವ ಬದಲು, ನಮ್ಮಲ್ಲಿಯೇ ಉದ್ಯೋಗ ಸೃಷ್ಟಿಗೆ ನಾವೆಲ್ಲ ಪ್ರಯತ್ನಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಗ್ರೀನ್ ಕೇರ್ ಸಂಸ್ಥೆ ನಿರ್ದೇಶಕ ಪ್ರಶಾಂತ ಮುಳೆ ಮಾತನಾಡಿ, ನಮ್ಮ ಸಂಸ್ಥೆಯಿಂದ ಸ್ವಾವಲಂಬಿ ಜೀವನ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ. ಅದರಿಂದ ನೀವು ಜನರಿಗೆ ನಗುಮೊಗದಲ್ಲಿ ಸೇವೆ ಸಲ್ಲಿಸಿ, ಸಂತೃಪ್ತ ಜೀವನ ಕಂಡುಕೊಳ್ಳುವಂತಾಗಲಿ ಎಂದರು.

ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿದ್ಯಾರ್ಹತೆಯ ಜೊತೆಗೆ ಕೌಶಲ್ಯದ ಅವಶ್ಯಕತೆ ಅಧಿಕವಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಆಧಾರಿತ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್. ಭಟ್ ಆನಗೋಡ, ಪ.ಪಂ. ಸಮುದಾಯ ಸಂಘಟಣಾಧಿಕಾರಿ ಹೇಮಾವತಿ ಭಟ್ಟ, ಅಸ್ಮಿತೆ ಫೌಂಡೇಶನ್ ಸಿ. ಇ. ಓ ರಿಯಾಜ್ ಸಾಗರ್ ಮಾತನಾಡಿದರು. ಇದೇ ಸಂದರ್ಭದಲ್ಲಿ 20 ಬ್ಯೂಟಿಷಿಯನ್ ಹಾಗೂ 20 ಫ್ಯಾಶನ್ ಡಿಸೈನಿಂಗ್ ತರಬೇತಿಯ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಲಾಯಿತು.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ವೇದಿಕೆಯಲ್ಲಿ ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ವಿ. ಹೆಗಡೆ, ಉದ್ಯಮಿ ಸದಾಶಿವ ಶಿವಯ್ಯನಮಠ, ಗಜಾನನ ಭಟ್, ಸಂಕಲ್ಪ ಟ್ರಸ್ಟ್‌ ಅಧ್ಯಕ್ಷ ಕುಮಾರ ಪಟಗಾರ ಉಪಸ್ಥಿತರಿದ್ದರು. ಸ್ವಾತಿ ಪ್ರಾರ್ಥಿಸಿದರು. ಕ್ರಿಯೇಟಿವ್ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ಮಾಲಿಕ ಶ್ರೀನಿವಾಸ್ ಮುರ್ಡೇಶ್ವರ ಸ್ವಾಗತಿಸಿದರು. ಲೈಫ್ ಲೈನ್ ಲ್ಯಾಬ್ ಮಾಲಕಿ ಆಶಾ ಡಿಸೋಜ ನಿರೂಪಿಸಿದರು. ಗ್ರೀನ್ ಕೇರ್ ಸಂಸ್ಥೆ ಉಪಾಧ್ಯಕ್ಷೆ ರೋಹಿಣಿ ಸೈಲ್ ವಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಆಲದ ಮರ ಬಿದ್ದು ಆಟೋ ಜಖಂ, ಚಾಲಕ ಪಾರು; ನಾಳೆಗೂ ಗಾಳಿ-ಮಳೆ ಎಚ್ಚರ

Karnataka Rain : ಕಾರ್ಕಳದಲ್ಲಿ ಭಾರಿ ಮಳೆ ಗಾಳಿಗೆ ಆಲದ ಮರವೊಂದು ಉರುಳಿ ಬಿದ್ದಿದ್ದು, ಆಟೋ ಜಖಂಗೊಂಡಿದೆ. ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮುಂದಿನ 24 ಗಂಟೆಯಲ್ಲಿ ಗಾಳಿ ಜತೆಗೆ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

karnataka Rain
Koo

ಉಡುಪಿ/ಬೆಂಗಳೂರು: ಉಡುಪಿಯ ಕಾರ್ಕಳದಲ್ಲಿ ಸುರಿದ ಭಾರಿ ಗಾಳಿ- ಮಳೆಗೆ (Karnataka weather Forecast) ಮರವೊಂದು ಉರುಳಿದೆ. ತಾಲೂಕಿನಾದ್ಯಂತ ಹಲವಾರು ಕಡೆಗಳಲ್ಲಿ ಮರಗಳು (Rain News) ಧರೆಗುರುಳಿವೆ. ಕಾರ್ಕಳ ಬಸ್ ನಿಲ್ದಾಣದ ಬಳಿ ಆಲದ ಮರ ಬಿದ್ದು ರಿಕ್ಷಾ ಜಖಂಗೊಂಡಿದೆ. ಬೃಹತ್ ಗಾತ್ರದ ಮರ ಬೀಳುವಾಗಲೇ ರಿಕ್ಷಾ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ.

ಮರ ಬಿದ್ದ ಪರಿಣಾಮ ವಿದ್ಯುತ್ ಕಂಬವು ದ್ವಿಚಕ್ರ ವಾಹನದ ಮೇಲೆ ಬಿದ್ದು ಅಪ್ಪಚ್ಚಿಯಾಗಿದೆ. ಹಲವು ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಿದ್ಯುತ್ ತಂತಿಗಳು ರಸ್ತೆ ತುಂಬೆಲ್ಲ ಇದ್ದವು. ಮರ ಜತೆಗೆ ವಿದ್ಯುತ್ ಕಂಬಗಳು ಬಿದ್ದು ಸಂಚಾರಕ್ಕೆ ಸಮಸ್ಯೆಯುಂಟು ಮಾಡಿತು.

ಮಳೆ ಬಂದರೆ ಮೆಸ್ಕಾಂ ಸಿಬ್ಬಂದಿಗಳ ಪರದಾಟ

ಮಳೆ ಹೆಚ್ಚಾದರೆ ಸಾಕು ಮೆಸ್ಕಾಂ ಸಿಬ್ಬಂದಿಗೆ ಪರದಾಟ ತಪ್ಪಿದಲ್ಲ. ವಿದ್ಯುತ್ ಲೈನ್ ಮೇಲೆ ಬಿದ್ದ ಮರ ತೆರವು ಮಾಡಲು ಮೆಸ್ಕಾಂ ಎಂಜಿನಿಯರ್‌ ಕತ್ತಿಯಿಂದಲೇ ಮರ ಕಡಿದರು. ವೆಂಕಮ್ಮ ತಳವಾರ ಎಂಬುವವರು ಕಟ್ಟಿಂಗ್ ಮಿಷನ್ ಇಲ್ಲದ ಕಾರಣ ಕತ್ತಿಯಿಂದಲೇ ಮರ ತೆರವು ಮಾಡಬೇಕಾಯಿತು. ಚಿಕ್ಕಮಗಳೂರಿನ ಮಲ್ಲಂದೂರು ಸಮೀಪದ ಗಾಳಿ ಪೇಟೆ -ಹೊಸಳ್ಳಿ ಪೇಟೆ ರಸ್ತೆಯಲ್ಲಿ ಘಟನೆ ನಡೆದಿದೆ.

ಮುಂದಿನ 24 ಗಂಟೆಯಲ್ಲಿ ಮಳೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಇನ್ನೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲೂ ಮಳೆಯಾರ್ಭಟ ಮುಂದುವರಿಯಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು 30-40ಕಿ.ಮೀ ತಲುಪುವ ಸಾಧ್ಯತೆ ಇದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು (Karnataka Rain) ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆದ್ದಾರಿಗೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಬಿದ್ದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದ್ದು, ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Banavasi News: ಬನವಾಸಿಯ ಸರ್ಕಾರಿ ಮಾದರಿ ಶಾಲೆಯಲ್ಲಿ ಕಿಡಿಗೇಡಿಗಳಿಂದ ಕಲಿಕಾ ಸಾಮಗ್ರಿ ಹಾನಿ

Banavasi News: ಶಾಲಾ ಕೊಠಡಿಗಳ ಬೀಗ ಒಡೆದು ಪೀಠೋಪಕರಣ ಹಾಗೂ ಇತರೆ ಕಲಿಕಾ ಸಾಮಾಗ್ರಿಗಳನ್ನು ಯಾರೋ ಕಿಡಿಗೇಡಿಗಳು ಹಾನಿಯುಂಟು ಮಾಡಿರುವ ಘಟನೆ ಬನವಾಸಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ.

VISTARANEWS.COM


on

Damage to furniture learning material by miscreants in government model school
Koo

ಬನವಾಸಿ: ಶಾಲಾ ಕೊಠಡಿಗಳ ಬೀಗ ಒಡೆದು ಪೀಠೋಪಕರಣ ಹಾಗೂ ಇತರೆ ಕಲಿಕಾ ಸಾಮಾಗ್ರಿಗಳನ್ನು ಯಾರೋ ಕಿಡಿಗೇಡಿಗಳು ಹಾನಿಯುಂಟು ಮಾಡಿರುವ ಘಟನೆ ಬನವಾಸಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ (Banavasi News) ಜರುಗಿದೆ.

ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಬೀಗ ಹೊಡೆದು ಶಾಲಾ ಪೀಠೋಪಕರಣ ಹಾಗೂ ಇನ್ನಿತರ ವಸ್ತುಗಳನ್ನು ಧ್ವಂಸ ಮಾಡಿ ಶಾಲಾ ಅಭಿವೃದ್ಧಿಗಾಗಿ ಸಂಗ್ರಹಿಸಿದ್ದ ಅಲ್ಪ ಮೊತ್ತವನ್ನು ಕಳವು ಮಾಡಿದ್ದಾರೆ ಎಂದು ಪ್ರಭಾರಿ ಮುಖ್ಯೋಪಾಧ್ಯಾಯ ನರಸಿಂಹ ಹರಿಕಾಂತ್ರ, ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

ಜಿಲ್ಲೆಯಾದ್ಯಾಂತ ನಿರಂತರ ಮಳೆಯಾಗುತ್ತಿರುವ ಕಾರಣ ಶಾಲಾ ಕಾಲೇಜುಗಳಿಗೆ ಕಳೆದ ಐದು ದಿನಗಳಿಂದ ರಜೆ ನೀಡಲಾಗಿತ್ತು. ಈ ಸಮಯದಲ್ಲಿ ಯಾರೋ ಕಿಡಿಗೇಡಿಗಳು ಶಾಲಾ ಕೊಠಡಿ ಹಾಗೂ ಮುಖ್ಯೋಪಾಧ್ಯಾಯರ ಕೊಠಡಿಯ ಕೀಲಿ ಹೊಡೆದು ಅಲ್ಲಿನ ಪೀಠೋಪಕರಣ ಹಾಗೂ ಶಾಲಾ ಕಲಿಕಾ ಸಾಮಾಗ್ರಿಗಳನ್ನು ಹಾನಿಮಾಡಿದ್ದಾರೆ. ಅಲ್ಲದೇ ಶಾಲೆಯ ಕಪ್ಪು ಹಲಗೆಯ ಮೇಲೆ ಅಶ್ಲೀಲ ಚಿತ್ರಗಳನ್ನು ಬಿಡಿಸಿ, ಶಾಲಾ ಆವರಣದಲ್ಲಿ ಮಲಮೂತ್ರ ಮಾಡಿ ವಿಕೃತಿ ತೋರಿದ್ದಾರೆ. ಸೋಮವಾರ ಎಂದಿನಂತೆ ಶಾಲೆಗೆ ಆಗಮಿಸಿದ ಶಿಕ್ಷಕರು ಈ ಎಲ್ಲ ಕೃತ್ಯಗಳನ್ನು ಕಂಡು ಬೆಚ್ಚಿ ಬಿದ್ದು, ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

ಬನವಾಸಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Continue Reading

ಮಳೆ

Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

Karnataka Rain : ಸತತವಾಗಿ ಸುರಿದ ಮಳೆಗೆ ಹಲವೆಡೆ ಗೋಡೆ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮೈಸೂರಿನಲ್ಲಿ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ. ಹೆದ್ದಾರಿಗೆ ಬೃಹತ್‌ ಮರ ಬಿದ್ದಿದ್ದು, ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದೆ.

VISTARANEWS.COM


on

By

karnataka rain
Koo

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು (Karnataka Rain) ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆದ್ದಾರಿಗೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಬಿದ್ದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದ್ದು, ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆದಿದೆ.

ಭಾರಿ ಮಳೆಗೆ ಸೋರುತ್ತಿರುವ ಗ್ರಂಥಾಲಯ

ಭಾರಿ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಸಕಲೇಶಪುರ ಪಟ್ಟಣದ ಐಬಿ ರಸ್ತೆಯಲ್ಲಿರುವ ಸ್ಕೌಟ್ ಅಂಡ್ ಗೈಡ್ ಕಟ್ಟಡದಲ್ಲಿರುವ ಗ್ರಂಥಾಲಯ ಸೋರುತಿದ್ದು, ಪುಸ್ತಕಗಳು ನೀರುಪಾಲಾಗಿವೆ. ಗ್ರಂಥಾಲಯದ ಹೆಂಚುಗಳು ಹೊಡೆದು ಹೋಗಿದ್ದು, ಯಾವ ಕ್ಷಣದಲ್ಲಾದರೂ ಲೈಬ್ರರಿ ಬೀಳುವ ಸಾಧ್ಯತೆ ಇದೆ. ಸೋರುತ್ತಿರುವ ಮಳೆ ನೀರಿನಿಂದ ಲಕ್ಷಾಂತರ ರೂ ಮೌಲ್ಯದ ಅಮೂಲ್ಯ ಪುಸ್ತಕಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆ-ಗಾಳಿಗೆ ಯುವಕನ ತಲೆ ಮೇಲೆ ಮುರಿದು ಬಿದ್ದ ವಿದ್ಯುತ್‌ ಕಂಬ

ಊರ ಬಾಗಿಲಿಗೆ ಬಂದು‌ನಿಂತ ಘಟಪ್ರಭಾ ನದಿ ನೀರು

ಬೆಳಗಾವಿಯಲ್ಲಿ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದ್ದು, ಊರ ಬಾಗಿಲಿಗೆ ಬಂದು‌ನಿಂತಿದೆ. ಮುಸಗುಪ್ಪಿ ಗ್ರಾಮಕ್ಕೆ ಪ್ರವಾಹದ ಆತಂಕ ಶುರುವಾಗಿದೆ. ನದಿ ಪಕ್ಕದ ಕಬ್ಬು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದೆ. ಇನ್ನೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕೃಷ್ಣೆಯ ಜತೆಗೆ ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದ್ದು, ಈಗಾಗಲೇ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 7 ಸೇತುವೆಗಳು ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ‌ ಗ್ರಾಮದವರಿಗೂ ನದಿ ತೀರಕ್ಕೆ ಹೋಗದಂತೆ ಜಿಲ್ಲಾಡಳಿತದಿಂದ ಕಟ್ಟು ನಿಟ್ಟಿನ ಎಚ್ಚರಿಕೆವಹಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಧರ್ಮಾ ನದಿ ಉಕ್ಕಿ ಹರಿಯುತ್ತಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಹರಿದಿರುವ ಧರ್ಮಾ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹಾನಗಲ್ ತಾಲೂಕಿನ ಕಂಚಿನೆಗಳೂರು ಬಳಿ ಜಲಪಾತ ಸೃಷ್ಟಿಯಾಗಿದೆ. ವರದಾನದಿಯ ಅಬ್ಬರಕ್ಕೆ ಹಾವೇರಿಯ ಹೊಸರಿತ್ತಿಯಲ್ಲಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮೂಲ ಸಂಸ್ಥಾನ ಮಟ ಜಲಾವೃತಗೊಂಡಿದೆ. ಮಠದ ಒಳಗೆ ನೀರು ನುಗ್ಗುವ ಆತಂಕಇದ್ದು, ನೂರಾರು ಎಕರೆ ಬೆಳೆ ಮುಳುಗಡೆಯಾಗಿದೆ.

ಕೆಆರ್‌ಎಸ್‌ ಬೋಟಿಂಗ್‌ ಪಾಯಿಂಟ್‌ಗೆ ನಿಷೇಧ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ನ ಬೋಟಿಂಗ್ ಪಾಯಿಂಟ್‌ಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಜನರು ಓಡಾಡುವ ಸ್ಥಳದಲ್ಲೂ ನೀರು ತುಂಬಿದೆ. ನೀರಿನ ಪ್ರಮಾಣ ಕಡಿಮೆ ಆಗುವವರೆಗೂ ಬೋಟಿಂಗ್ ಸ್ಥಗಿತ ಮಾಡಲಾಗಿದೆ.

ತುಮಕೂರಿನಲ್ಲಿ ಕೆಸರು ಗದ್ದೆಯಂತಾದ ರಸ್ತೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಮಕೂರಿನ ಹಿರೇಹಳ್ಳಿಯಲ್ಲಿ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರೇಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಕೆಲಸಕ್ಕೆ ಹೋಗಲು ಪ್ರತಿನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತವೆ. ರಸ್ತೆಯಲ್ಲಿ ಎರಡು ಮೂರು ಅಡಿಗಳಷ್ಟು ಗುಂಡಿ ಬಿದ್ದರು ರಸ್ತೆ ಸರಿಪಡಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.

ಇದನ್ನೂ ಓದಿ: Forced Conversion : ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌

ನಿರಂತರ ಜಡಿ ಮಳೆ ಎಫೆಕ್ಟ್‌; ಅಡಿಕೆ ಕೊಯ್ಲಿಗೆ ತೊಂದರೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ರಾಜ್ಯದಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವ ತಾಲೂಕಾಗಿದೆ. 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಅಡಿಕೆ ಬೆಳೆ ಕೊಯ್ಲಿಗೆ ಬಂದಿದೆ. ಆದರೆ ನಿರಂತರ ಜಡಿ ಮಳೆಯಿಂದಾಗಿ ಕೊಯ್ಲಿಗೆ ತೊಂದರೆ ಆಗುತ್ತಿದೆ. ರೈತರು ಕಳೆದ ವರ್ಷ ಮಳೆಯಿಲ್ಲದೇ ಟ್ಯಾಂಕರ್ ಮೂಲಕ ನೀರು ಪೂರೈಸಿ ಅಡಿಕೆ ತೋಟ ಉಳಿಸಿಕೊಂಡಿದ್ದರು. ಈ ವರ್ಷ ಉತ್ತಮ‌ ಮಳೆಯಾಗುತ್ತಿದ್ದು, ನಿರಂತರ ಜಡಿ ಮಳೆಯಾಗುತ್ತಿರುವ ಹಿನ್ನೆಲೆ ಅಡಿಕೆ ತೋಟಗಳಲ್ಲಿ ಹೆಜ್ಜೆ ಇಡದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ ಕೊಯ್ಲಿ ಮಾಡದಿದ್ದರೇ ಅಡಿಕೆ ಗೋಟು ಆಗುವ ಭಯವಿದೆ. ಅಡಿಕೆ ಗೋಟು ಆದರೆ ಮಾರುಕಟ್ಟೆಯಲ್ಲಿ ದರ ಕಡಿಮೆಯಾಗಲಿದೆ.

ಬಿರುಗಾಳಿಗೆ ಮುರಿದು ಬಿದ್ದ ವಿದ್ಯುತ್‌ ಕಂಬ

ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ತಗ್ಗಿದ್ದರೂ ಗಾಳಿ ವೇಗ ತಗ್ಗುತ್ತಿಲ್ಲ. ಭಾರಿ ಗಾಳಿಗೆ ಬೃಹತ್ ವಿದ್ಯುತ್ ಕಂಬ ಮುರಿದು ಬಿದ್ದಿದೆ. 66 ಕೆ.ವಿ. ವಿದ್ಯುತ್ ಟವರ್ ಅರ್ಧಕ್ಕೆ ಮುರಿದು ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಸಮೀಪದ ಆಮೆಕಟ್ಟೆ ಬಳಿ ಘಟನೆ ನಡೆದಿದೆ. ಆಲ್ದೂರು ಹೋಬಳಿಯ ಹತ್ತಾರು ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಬಂದ್ ಆಗಿದೆ. ಇನ್ನು ಎರಡು ದಿನ ಕತ್ತಲಲ್ಲಿ ಕಳೆಯುವಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ-ಗಾಳಿಗೆ ಯುವಕನ ತಲೆ ಮೇಲೆ ಮುರಿದು ಬಿದ್ದ ವಿದ್ಯುತ್‌ ಕಂಬ

ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ನಾನಾ ಅವಾಂತರವೇ (Karnataka Rain) ಸೃಷ್ಟಿಯಾಗಿದೆ. ಬೆಳಗಾವಿಯಲ್ಲಿ ಹಲವೆಡೆ ಮನೆ ಕುಸಿದು ಹಾನಿಯಾಗಿದೆ. ರಸ್ತೆಯಲ್ಲಿ ನಡೆದುಹೋಗುತ್ತಿದ್ದ ವ್ಯಕ್ತಿ ಮೇಲೆ ವಿದ್ಯುತ್‌ ಕಂಬ ಧರೆಗುರುಳಿದೆ.

VISTARANEWS.COM


on

By

karnataka rain
Koo

ಚಿಕ್ಕೋಡಿ/ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ (Karnataka Rain) ಮುಂದುವರಿದಿದೆ. ಜೋರಾಗಿ ಬೀಸಿದ ಗಾಳಿ-ಮಳೆಗೆ ವಿದ್ಯುತ್ ಕಂಬ ಬಿದ್ದಿದೆ. ಅಲ್ಲೆ ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ತಲೆಗೆ ಕಂಬ ತಾಗಿದ್ದು, ಗಾಯಗೊಂಡಿದ್ದಾರೆ. ಸ್ವಲ್ಪದರಲ್ಲಿ ಸಾವಿನ‌ ದವಡೆಯಿಂದ ವ್ಯಕ್ತಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸಾರಗೋಡು ತುಂಬರಗಡಿಯಲ್ಲಿ ಘಟನೆ ನಡೆದಿದೆ. ದಿವೀತ್‌ ಎಂಬುವವರು ಬಸ್ ಇಳಿದು ಹೋಗುತ್ತಿರುವಾಗ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಿದ್ರೆ ಮಂಪರಿನಲ್ಲಿದ್ದಾಗ ಕುಸಿದು ಬಿದ್ದ ಮನೆ

ನಿರಂತರ ಮಳೆಗೆ ಸೋಮವಾರ ನಸುಕಿನ ಜಾವ ಮನೆಯೊಂದು ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದಂತೆ ನಿದ್ದೆಯಲ್ಲಿ ಇದ್ದವರು ಹೊರಗೆ ಓಡಿ ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರದಲ್ಲಿ ಘಟನೆ ನಡೆದಿದೆ. ರಾಜಕುಮಾರ ಬಾಳಪ್ಪಗೋಳ ಎಂಬುವವರ ಮನೆ ಕುಸಿದಿದೆ. ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆ ಗೋಡೆ ಕುಸಿದು ಮಹಿಳೆ ಗಂಭೀರ

ಸತತವಾಗಿ ಸುರಿದ ಮಳೆಯಿಂದ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದಲ್ಲಿ ಘಟನೆ ನಡೆದಿದೆ. ಲಕ್ಷ್ಮಿ ಬಾಯಿ ಚೌಗಲೆ ಎಂಬಾಕೆ ಗಾಯಗೊಂಡವರು. ಸೋಮವಾರ ಬೆಳಗ್ಗೆ ಮನೆ ಸ್ವಚ್ಛಗೊಳಿಸಿ ಸ್ನಾನಕ್ಕೆ ಹೋಗುವಾಗ ಏಕಾಏಕಿ ಗೋಡೆ ಕುಸಿದಿದೆ. ಸದ್ಯ ಗಾಯಾಳು ಲಕ್ಷ್ಮಿಯನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Forced Conversion : ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌

ವಿದ್ಯುತ್‌ ಮಗ್ಗದ ಮೇಲೆ ಗೋಡೆ ಕುಸಿತ

ನಿರಂತರವಾಗಿ ಸುರಿಯುತ್ತಿರುವ ‌ಮಳೆಗೆ ಮನೆಯ ಗೋಡೆ ಕುಸಿಯುತ್ತಿದೆ. ನೇಕಾರಿಕೆ ಮಾಡುವಾಗ ವಿದ್ಯುತ್ ಮಗ್ಗದ ಮೇಲೆಯೇ ಗೋಡೆ ಕುಸಿದಿದೆ. ಬೆಳಗಾವಿ ತಾಲೂಕಿನ ಸುಳೆಭಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಸುಳೇಭಾವಿಯ ಕಮ್ಮಾರ ಗಲ್ಲಿಯ ದ್ಯಾಮಪ್ಪ ನಾನಾವರ್ ಎಂಬುವವರ ಮನೆ ಕುಸಿದು ಬಿದ್ದಿದೆ. ಗೋಡೆ ಕುಸಿಯುತ್ತಿದ್ದಂತೆ ಮನೆಯಿಂದ ಹೊರ ಓಡಿ‌ ಬಂದು ಪಾರಾಗಿದ್ದಾರೆ. ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಲುಕಿರುವ ಬಡ ನೇಕಾರ ಕುಟುಂಬವು ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಮನೆ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಮಣಿಗಾರ ಪಂಚಾಯತ್ ವ್ಯಾಪ್ತಿಯ ಹೊಂಡಗದ್ದೆಯಲ್ಲಿ ಮನೆ ಮೇಲೆ ಮರ ಬಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಹರಿಶ್ಚಂದ್ರ ನಾಯ್ಕ ಎಂಬುವವರು ತಲೆಗೆ, ಪತ್ನಿ ಭಾಗೀರಥಿ ನಾಯ್ಕ ಹಣೆಗೆ ಗಾಯವಾಗಿದೆ. ಗಾಯಾಳುಗಳನ್ನು ಸಿದ್ದಾಪುರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾರೀ ಗಾತ್ರದ ಮರ ಬಿದ್ದ ಪರಿಣಾಮ ಮನೆಯ ಒಂದು ಬದಿ ಚಾವಣಿಗೆ ಹಾನಿಯಾಗಿದೆ.

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಪೊಲೀಸರು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹೈವೆ ಪಟ್ರೋಲ್ ವಾಹನವನ್ನು ನಿಲ್ಲಿಸಿದ್ದರು. ಈ ವೇಳೆ ವಾಹನ ನಿಂತ ಜಾಗದಲ್ಲೇ ಭೂಮಿ ಕುಸಿದಿದೆ.ಇದರಿಂದಾಗಿ ಪೊಲೀಸರ ವಾಹವು ಮಣ್ಣಿನಲ್ಲಿ ಸಿಲುಕುವಂತಾಯಿತು. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ಮಾಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Valmiki Corporation Scam
ಕರ್ನಾಟಕ4 mins ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Tata Curvv
ಆಟೋಮೊಬೈಲ್4 mins ago

Tata Curvv : ಎಸ್​ಯುವಿ ವಿಭಾಗದಲ್ಲಿ ವಿಭಿನ್ನ ವಿನ್ಯಾಸದ ಕಾರನ್ನು ಪರಿಚಯಿಸಿದ ಮಾಡಿದ ಟಾಟಾ

Kempambudi lake encroachment cleared soon says DCM DK Shivakumar
ಕರ್ನಾಟಕ12 mins ago

Assembly Session 2024: ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು; ಡಿ.ಕೆ.ಶಿವಕುಮಾರ್

Viral Video
ವೈರಲ್ ನ್ಯೂಸ್31 mins ago

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

TA Sharavana questioned about the continuous variation in the service of 108 Ambulance even after 7 years there is no new tender
ಬೆಂಗಳೂರು35 mins ago

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

INS Brahmaputra
ದೇಶ53 mins ago

INS Brahmaputra: ನೌಕಾಪಡೆಯ ಐಎನ್‌ಎಸ್‌ ಯುದ್ಧನೌಕೆಯಲ್ಲಿ ಭೀಕರ ಅಗ್ನಿ ದುರಂತ; ನಾವಿಕ ನಾಪತ್ತೆ

Chamari Athapaththu
ಕ್ರೀಡೆ57 mins ago

Chamari Athapaththu : ಏಷ್ಯಾ ಕಪ್​ನಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಬರೆದ ಲಂಕಾದ ಮಹಿಳಾ ಕ್ರಿಕೆಟರ್​​

Monsoon fashion
ಫ್ಯಾಷನ್1 hour ago

Monsoon fashion: ಶರ್ಟ್ ಸ್ಟೈಲ್‌ ಜಾಕೆಟ್ಸ್; ಇವು ಯುವಕರ ಮಳೆಗಾಲದ ಫ್ಯಾಷನ್‌ ಟ್ರೆಂಡ್‌

Raghu Dixit
ಕ್ರೀಡೆ1 hour ago

Raghu Dixit : ಪ್ಯಾರಿಸ್​ ಒಲಿಂಪಿಕ್ಸ್​ಗೆ ಕನ್ನಡ ಹಾಡುಗಳ ಮೆರುಗು ; ರಘು ದೀಕ್ಷಿತ್ ತಂಡದಿಂದ ವಿಶೇಷ ಕಾರ್ಯಕ್ರಮ

Union Budget 2024
ದೇಶ1 hour ago

Union Budget 2024: ನಾಳೆ ಕೇಂದ್ರ ಬಜೆಟ್;‌ ಎಷ್ಟು ಗಂಟೆಗೆ ಮಂಡನೆ? ಲೈವ್‌ ವೀಕ್ಷಣೆ ಎಲ್ಲಿ? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌