Site icon Vistara News

Uttara Kannada News: ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭೇಟಿ; ವಿಶೇಷ ಪೂಜೆ

BJP State Spokesperson Hariprakash konemane visit Shri Madhukeshwara Temple

ಬನವಾಸಿ: ಇಲ್ಲಿಯ ಐತಿಹಾಸಿಕ ಮಾತೋಬಾರ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ (Shri Madhukeshwara Temple) ಶುಕ್ರವಾರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭೇಟಿ ನೀಡಿ, ವಿಷೇಶ ಪೂಜೆ (Uttara Kannada News) ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಈಶ್ವರನ ಕೃಪೆಯಿಂದ ನಾಡಿನಲ್ಲಿ ಸಮೃದ್ಧಿ ನೆಲೆಸಲಿ. ಪರಶಿವನು ಎಲ್ಲರ ಬಾಳಿನಲ್ಲಿ ಮಂಗಳವನ್ನುಂಟುಮಾಡಲಿ, ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Ind vs Eng : ಗಿಲ್, ರೋಹಿತ್​ ಶತಕ, ಭಾರತಕ್ಕೆ 255 ರನ್​ ಮುನ್ನಡೆ

ಬನವಾಸಿಯ ನಮೋ ಅಭಿಮಾನಿ ಬಳಗದ ಕಾರ್ಯಕರ್ತರೊಂದಿಗೆ ಭಕ್ತರಿಗೆ ಮಜ್ಜಿಗೆ ವಿತರಣಾ ಕಾರ್ಯದಲ್ಲಿ ಭಾಗಿಯಾದರು.

ಇದನ್ನೂ ಓದಿ: Karnataka Weather : ಇಂದಿನಿಂದ ಮಾರ್ಚ್‌ 14ರವರೆಗೆ ರಾಜ್ಯಾದ್ಯಂತ ಒಣಹವೆ ಸಾಧ್ಯತೆ

ಈ ಸಂದರ್ಭದಲ್ಲಿ ಅ.ಭಾ.ಸಾ.ಪ. ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್, ಪ್ರಮುಖರಾದ ಶಿವಕುಮಾರ ದೇಸಾಯಿ ಗೌಡ, ರವೀಶ್ ಹೆಗಡೆ, ಅರವಿಂದ ಬಳೆಗಾರ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಮಾಧ್ಯಮ ಸಲಹೆಗಾರ ಸುಧೀರ್ ನಾಯರ್, ನಮೋ ಅಭಿಮಾನಿ ಬಳಗದ ಪ್ರಶಾಂತ್ ಶೇಟ್, ಸಿದ್ಧಲಿಂಗೇಶ ಕಬ್ಬೂರ, ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾದ ಜಯಶಂಕರ ಮೇಸ್ತ್ರಿ, ದಯಾನಂದ ಮರಾಠೆ, ಇಕೋ ಮಂಜು ಹಾಗೂ ಬಿಜೆಪಿ ಕಾರ್ಯಕರ್ತರು, ಬಿಜೆಪಿಯ ಪ್ರಮುಖರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Exit mobile version