Uttara Kannada News: ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಶಿವರಾಮ ಹೆಬ್ಬಾರ್‌ ಸೂಚನೆ Vistara News

ಉತ್ತರ ಕನ್ನಡ

Uttara Kannada News: ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಶಿವರಾಮ ಹೆಬ್ಬಾರ್‌ ಸೂಚನೆ

Uttara Kannada News: ಯಲ್ಲಾಪುರ ಪಟ್ಟಣದ ಆಡಳಿತ ಸೌಧದಲ್ಲಿ ಸೋಮವಾರ ಬರಗಾಲ ನಿರ್ವಹಣೆಯ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ಜರುಗಿತು.

VISTARANEWS.COM


on

MLA Shivaram Hebbar spoke at the Drought Management Taskforce Committee meeting in Yallapur
ಯಲ್ಲಾಪುರ ಪಟ್ಟಣದ ಆಡಳಿತ ಸೌಧದಲ್ಲಿ ಸೋಮವಾರ ನಡೆದ ಬರಗಾಲ ನಿರ್ವಹಣೆಯ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್‌ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ರೈತರಿಗೆ ಸೂಕ್ತ ಪರಿಹಾರ ಹಾಗೂ ಕುಡಿಯುವ ನೀರಿನ (Drinking Water) ವ್ಯವಸ್ಥೆ ಅತ್ಯಂತ ಆದ್ಯತೆಯಲ್ಲಿಡಬೇಕಾದ ಅಂಶವಾಗಿದೆ. ಈ ಕುರಿತು ಎಲ್ಲಾ ಅಧಿಕಾರಿಗಳು ಜನರಿಗೆ ತುರ್ತಾಗಿ ಸ್ಪಂದಿಸಬೇಕು, ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಿದಾಗ ಬರಗಾಲವನ್ನು (Drought) ಯಶಸ್ವಿಯಾಗಿ ಎದುರಿಸಬಹುದಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್‌ ತಿಳಿಸಿದರು.

ಪಟ್ಟಣದ ಆಡಳಿತ ಸೌಧದಲ್ಲಿ ಸೋಮವಾರ ನಡೆದ ಬರಗಾಲ ನಿರ್ವಹಣೆಯ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನೀರಿನ ಕೊರತೆ ಉಂಟಾಗುವ ಪ್ರದೇಶಗಳನ್ನು ಈಗಿನಿಂದಲೇ ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಿ. ತಾಲೂಕಿನ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಮುಂದಿನ 4 ರಿಂದ 5 ತಿಂಗಳುಗಳ ಕಾಲ ನೋಡಲ್ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿದ್ದು, ಜನರ ಅಗತ್ಯತೆಗಳಿಗೆ ಸ್ಪಂದಿಸಿ. ಜನರಿಗೆ ಮಾನವೀಯತೆ ದೃಷ್ಟಿಯಿಂದ ಸಹಾಯ ಮಾಡಿ ಎಂದು ಸೂಚಿಸಿದರು.

ಅನಿವಾರ್ಯವಿದ್ದಲ್ಲಿ ಮಾತ್ರ ಹೊಸ ಬೋರ್‌ವೆಲ್ ಗಳನ್ನು ಕೊರೆಯಿಸಿ. ಸಾಧ್ಯವಿದ್ದಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಬೋರವೆಲ್ ಗಳ ಮೂಲಕ ನೀರಿನ ಪೂರೈಕೆಗೆ ಕ್ರಮ ವಹಿಸಿ. ಮಂಚಿಕೇರಿ ಪಟ್ಟಣದಲ್ಲಿ ಅತಿ ಹೆಚ್ಚಿನ ನೀರಿನ ಕೊರತೆ ಉಂಟಾಗಲಿದೆ. ಹೀಗಾಗಿ ತೂಕದಬೈಲ್‌ನಿಂದ ನೀರಿನ ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಿ. ಪಟ್ಟಣದಲ್ಲಿ ಸಹ ಈವರೆಗೆ ಯಾವುದೇ ಸಮಸ್ಯೆ ಆಗಿಲ್ಲ. ಮುಂದೆಯೂ ಸಹ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ. ಹೆಚ್ಚಿನ ಪಂಪ್‌ಗಳನ್ನು ಇಟ್ಟುಕೊಂಡಿರಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: Co-Operative week : ಸರ್ಕಾರಿ ಹಣ ಸಹಕಾರ ಬ್ಯಾಂಕ್‌ನಲ್ಲೇ ಠೇವಣಿಗೆ ಚಿಂತನೆ; ಸಿದ್ದರಾಮಯ್ಯ

ಕೃಷಿ ಇಲಾಖೆಯಿಂದ 80% ರಷ್ಟು ಎಫ್‌ಐಡಿ ದಾಖಲಾತಿ ಆಗಿದೆ. ಆದಷ್ಟು ಬೇಗ ಇದು ಪೂರ್ಣಗೊಂಡಲ್ಲಿ ರೈತರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸವಲತ್ತು ದೊರೆಯುತ್ತದೆ. ರೈತರ ಕೃಷಿ ಜಮೀನಿನ ಸರ್ವೆ ನಡೆಸುವಾಗ, ಅಧಿಕಾರಿಗಳು ಸರಿಯಾಗಿ ಕೃಷಿ ವಿಮೆ ದೊರಕುವಂತೆ ನಿಗಾವಹಿಸಬೇಕು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾನದಂಡಗಳ ಮೂಲಕ ನಮ್ಮ ತಾಲೂಕು ಅತಿ ಹೆಚ್ಚು ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿದೆ. ಹೀಗಾಗಿ ಬೆಳೆ ಹಾನಿಯ ವರದಿಯೂ ಅದಕ್ಕೆ ಪೂರಕವಾಗಿರಬೇಕು. ರೈತರಿಗೆ ನ್ಯಾಯ ದೊರಕಬೇಕು. ಕೆಎಂಎಫ್ ಗಳ ಮೂಲಕ ರೈತರಿಗೆ ಹೆಚ್ಚಿನ ಮೇವನ್ನು ಒದಗಿಸುವ ಪ್ರಯತ್ನ ಮಾಡಿ. ಪಟ್ಟಣದಲ್ಲಿ ಬಿಡಾಡಿ ದನಗಳಲ್ಲಿಯೂ ರೋಗ ಹರಡುವ ಸಾಧ್ಯತೆಯಿದ್ದು, ಅದರ ಮಾಲೀಕರು ಎಚ್ಚರಿಕೆ ವಹಿಸಬೇಕು ಎಂದರು.

ಎಸಿ ದೇವರಾಜ್ ಆರ್. ಮಾತನಾಡಿ, ಅಧಿಕಾರಿಗಳು ನಿಮ್ಮ ನಿಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ನೀರಿನ ಲಭ್ಯತೆಯಿದೆ, ಅಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಅಂದಾಜು ಎಷ್ಟು ದಿನಗಳಿಗೆ ನೀರಿನ ಪೂರೈಕೆ ಸಾಧ್ಯವಿದೆ ಎಂಬುದರ ಅಂಕಿ ಅಂಶ ತಯಾರಿಡಬೇಕು. ಜಾನುವಾರುಗಳಿಗೆ ಒಣ ಮೇವಿನ ಲಭ್ಯತೆ ಹಾಗೂ ಒಣಗಿರುವ ಬೆಳೆಗಳನ್ನು ಮೇವಾಗಿ ಸಂರಕ್ಷಿಸಿಡಲು ಪ್ರಯತ್ನಿಸಬೇಕು ಎಂದರು.

ಇದನ್ನೂ ಓದಿ: Acid Reflux: ನಿಮಗೆ ಗೊತ್ತಿರಲಿ, ಚಳಿಗಾಲಕ್ಕೂ ಹುಳಿತೇಗಿಗೂ ಇದೆ ಸಂಬಂಧ!

ಈ ಸಂದರ್ಭದಲ್ಲಿ ತಹಸೀಲ್ದಾರ್ ಗುರುರಾಜ್ ಎಂ., ಗ್ರೇಡ್‌-2 ತಹಸೀಲ್ದಾರ್‌ ಸಿ.ಜಿ.‌ ನಾಯ್ಕ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಪ.ಪಂ. ಮುಖ್ಯಾಧಿಕಾರಿ ಸುನಿಲ್ ಗಾವಡೆ, ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಓಗಳು ಹಾಜರಿದ್ದು ಮಾಹಿತಿ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉತ್ತರ ಕನ್ನಡ

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

Drown in Sea: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ.

VISTARANEWS.COM


on

drown in sea
Koo

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತವಾಗಿ ವರ್ತಿಸಿ ಹೋಟೆಲ್‌ ಮಾಲೀಕ ಬಂಧನ

ಬೆಂಗಳೂರು: ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತ ವರ್ತನೆ ತೋರಿದ ಹೊಟೇಲ್ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ತಡರಾತ್ರಿವರೆಗೂ ಹೋಟೆಲ್ ತೆಗೆದಿದ್ದ ಹಿನ್ನೆಲೆಯಲ್ಲಿ ಪ್ರಶ್ನಿಸಿದ ಕಾರಣ ಹೊಟೇಲ್ ಮಾಲೀಕ ಸಂಜೀವ್ ಗೌಡ ಎಂಬಾತ ಪಿಎಸ್‌ವೈ ಪ್ರತಿಮಾ ಜತೆ ಅನುಚಿತವಾಗಿ ವರ್ತಿಸಿದ್ದರು.

ಸುಳ್ಳು ಪ್ರಕರಣ ದಾಖಲಿಸಿ 50 ಸಾವಿರ ಲಂಚ ಕೇಳಿದ್ದಾರೆಂದು ಸುಳ್ಳು ಕೇಸ್‌ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಹೊಟೇಲ್ ಅಶ್ವ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. 24 ಗಂಟೆ ಹೊಟೇಲ್ ನಡೆಸಲು ಅನುಮತಿ ಇದೆ ಎಂದು ಮಾಲೀಕ ಹೇಳಿದ್ದ. ಅನುಮತಿ ಪತ್ರ ತೋರಿಸುವಂತೆ ಕೇಳಿದಾಗ, ಆರ್‌ಟಿಐ ಹಾಕಿಕೊಂಡು ನೋಡು ಎಂದು ಮಾಲೀಕ ದರ್ಪ ತೋರಿದ್ದಾರೆ. ಈ ಸಂಬಂಧ ಪಿಎಸ್‌ಐ ಪ್ರತಿಮಾ ದೂರು ದಾಖಲಿಸಿದ್ದರು. ದೂರಿನ ಅನ್ವಯ ಮಾಲೀಕ ಸಂಜೀವ್ ಗೌಡ ಸೇರಿ ಐವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉತ್ತರ ಕನ್ನಡ

Sirsi News: ದಲಿತ ಸಿಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Sirsi News: ದಲಿತ ಸಿಎಂ ಮಾಡುವ ಬಗ್ಗೆ ಪಕ್ಷಕ್ಕೆ ನಮ್ಮ ನಿರ್ಧಾರ ಹೇಳಬಹುದು ಅಷ್ಟೇ, ಆದರೆ ನಿರ್ಧಾರ ಹೈಕಮಾಂಡ್ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

VISTARANEWS.COM


on

Minister Satish Jarakiholi latest Statement at sirsi
ಶಿರಸಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
Koo

ಶಿರಸಿ: ರಾಜ್ಯದಲ್ಲಿ ದಲಿತ ಸಿಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ. ಕಾಲ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವ ಬಗ್ಗೆ ಪಕ್ಷಕ್ಕೆ ನಮ್ಮ ನಿರ್ಧಾರ ಹೇಳಬಹುದು ಅಷ್ಟೇ, ನಿರ್ಧಾರ ಹೈಕಮಾಂಡ್ ಮಾಡಬೇಕು ಎಂದು ತಿಳಿಸಿದರು.

ಇನ್ನು ಬಿ.ಕೆ. ಹರಿಪ್ರಸಾದ್ ಅವರನ್ನು ಪಕ್ಷ ಕಡಗಣನೆ ಕುರಿತು ಮಾತನಾಡಿದ ಅವರು, ಪಕ್ಷ ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ,ಅವರನ್ನು ಯಾರೂ ಕೆಳಗಿಳಿಸುವ ಪ್ರಶ್ನೆ ಇಲ್ಲ, ನಾವು ಅವರ ಜತೆ ಚರ್ಚೆ ಮಾಡಿದ್ದೇವೆ. ಬಹಳಷ್ಟು ಹಿರಿಯ ನಾಯಕರಿಗೆ ಸ್ಥಾನ ನೀಡಿಲ್ಲ, ಅವಕಾಶ ಬಂದಾಗ ಅವರಿಗೆ ಸ್ಥಾನಮಾನ ನೀಡುತ್ತಾರೆ. ಇನ್ನು ನಿಗಮ ಮಂಡಳಿಗೆ 25 ಜನ ಶಾಸಕರಿಗೆ ಸ್ಥಾನ ನೀಡುತ್ತಿದ್ದಾರೆ. ಚುನಾವಣೆ ಮುಗಿದ ನಂತರ ಇನ್ನಷ್ಟು ಜನರಿಗೆ ನೀಡುತ್ತಾರೆ, ಎಲ್ಲರಿಗೂ ಸಮಾಧಾನ ಮಾಡಲು ಅವಕಾಶ ಇದೆ, ಅಸಮಾಧಾನ ಆಗುವ ಪ್ರಶ್ನೆ ಇಲ್ಲ ಎಂದರು.

ಇದನ್ನೂ ಓದಿ: Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ಇನ್ನು ಗುತ್ತಿಗೆದಾರರಿಗೆ ಪ್ರಾಮುಖ್ಯತೆ ಮೇಲೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡುತ್ತೇವೆ. ಹಿಂದಿನ ಸರ್ಕಾರ ಅನುದಾನಕ್ಕಿಂತ ಹೆಚ್ಚಿಗೆ ಕಾಮಗಾರಿ ಮಂಜೂರು ಮಾಡಿದ್ದರಿಂದ ಸಮಸ್ಯೆಯಾಗಿದೆ ಎಂದರು.

Continue Reading
Advertisement
Sangeetha is more cruel than Vinay drinking tonic task bigg boss
ಬಿಗ್ ಬಾಸ್28 mins ago

BBK SEASON 10: ವಿನಯ್‌ಗಿಂತ ಸಂಗೀತಾಗೆ ಕೊಬ್ಬು ಜಾಸ್ತಿ; ಟಾನಿಕ್ ಕುಡಿಸಿದ ಮೇಲೆ ಒದ್ದಾಟ-ಗುದ್ದಾಟ!

Kichcha Sudeep Save Snehith Gowda And Michel From Eliminations
ಬಿಗ್ ಬಾಸ್42 mins ago

BBK SEASON 10: ಬಿಗ್‌ ಬಾಸ್‌ ಇತಿಹಾಸದಲ್ಲೇ ಮೊದಲು; ಈ ವಾರ ನೋ ಎಲಿಮಿನೇಶನ್‌! ಸ್ನೇಹಿತ್- ಮೈಕಲ್‌ ಸೇಫ್‌!

Kodagu News
ಕರ್ನಾಟಕ1 hour ago

ಕೊಡಗು ಜಿಲ್ಲೆಯ ಹೊಳೆಯಲ್ಲಿ ತಾಯಿ, ಇಬ್ಬರು ಯುವತಿಯರ ಶವ ಪತ್ತೆ; ಸಾವಿಗೆ ಕಾರಣ?

Ishwar Sahu
ದೇಶ2 hours ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ2 hours ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ2 hours ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ3 hours ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ3 hours ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ3 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ4 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ5 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ22 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌