Site icon Vistara News

Uttara Kannada News: ಮುರ್ಡೇಶ್ವರದಲ್ಲಿ ಮಾ.8 ರಂದು ಮಹಾಶಿವರಾತ್ರಿ ಜಾಗರಣೆ ಉತ್ಸವ

Drinking water problem Provide water immediately by tanker says DC

ಕಾರವಾರ: ಮಾ. 8ರಂದು ಮಹಾಶಿವರಾತ್ರಿಯ (Mahashivaratri) ಅಂಗವಾಗಿ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಮೂಲಕ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮದಲ್ಲಿ ಭಕ್ತಿ ವೈಭವದಿಂದ ಕೂಡಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ (Uttara Kannada News) ತಿಳಿಸಿದ್ದಾರೆ.

ಮಾ.8 ರಂದು ಸಂಜೆ 6 ರಿಂದ ಮಾ. 9 ರ ಬೆಳಗ್ಗೆ 6 ರವರೆಗೆ ಅಹೋರಾತ್ರಿ ಶಿವನಾಮ ಸ್ಮರಣೆಯ ವೈವಿಧ್ಯಮಯ ಭಕ್ತಿಮಯದಿಂದ ಕೂಡಿರುವ ಕಾರ್ಯಕ್ರಮಗಳು ನಡೆಯಲಿದ್ದು, ಸುಮಾರು 1500ಕ್ಕೂ ಹೆಚ್ಚು ಭಕ್ತಾಧಿಗಳು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಲ್ಲಿದೆ. ಈಗಾಗಲೇ ಕಾರ್ಯಕ್ರಮದ ಸ್ಥಳದಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.

ಇದನ್ನೂ ಓದಿ: Money Guide: ಮಾಸಿಕ ಸಂಬಳದ ಜತೆಗೆ ಪೂರಕ ಆದಾಯ ಬೇಕೆ? ಈ ಯೋಜನೆಯಲ್ಲಿ ಹೂಡಿಕೆ ಮಾಡಿ

ಕಾರ್ಯಕ್ರಮದಲ್ಲಿ ಸೋಜುಗಾದ ಸೂಜು ಮಲ್ಲಿಗೆ ಹಾಡಿನ ಖ್ಯಾತಿಯ ಗಾಯಕಿ ಅನನ್ಯಾ ಭಟ್ ಅವರಿಂದ ಸಂಗೀತ ಕಾರ್ಯಕ್ರಮ, ಶಿವಭಕ್ತಿ ಸಾರುವ 3ಡಿ ಮ್ಯಾಪಿಂಗ್ ಮತ್ತು ಲೇಸರ್ ಶೋ, ಸರಿಗಮ ಖ್ಯಾತಿಯ ಆಶ್ವಿನ್ ಶರ್ಮಾ ಮತ್ತು ತಂಡದಿಂದ ಗಾಯನ ಕಾರ್ಯಕ್ರಮ, ವಿದೂಷಿ ವೀಣಾ ವಾರುಣಿ ಅವರಿಂದ ಪಂಚ ವೀಣಾ ವಾದನ, ಡ್ರಾಮಾ ಜೂನಿಯರ್ ತಂಡದಿಂದ ಕಾರ್ಯಕ್ರಮ, ಮಗಳು ಜಾನಕಿ ಖ್ಯಾತಿಯ ಗಾನವಿ ಲಕ್ಷ್ಮಣ್‌ ಅವರಿಂದ ನೃತ್ಯ ಪ್ರದರ್ಶನ ಹಾಗೂ ಬಿಗ್‌ಬಾಸ್ ಖ್ಯಾತಿಯ ಕಾರ್ತಿಕ್ ಪಾಲ್ಗೊಳ್ಳುವರು. ಸ್ಥಳೀಯ ಪ್ರತಿಭಾನ್ವಿತ ಕಲಾವಿದರಿಂದ ಆಕರ್ಷಕ ವೈವಿಧ್ಯಮಯ ಕಾರ್ಯಕ್ರಮಗಳು ಸೇರಿದಂತೆ ಮನೋರಂಜನೆ, ಧ್ಯಾನ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: Job Alert: ವಿಜ್ಞಾನಿಯಾಗಬೇಕೆ? ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿದೆ ಗೋಲ್ಡನ್‌ ಚಾನ್ಸ್‌; ಇಂದೇ ಅರ್ಜಿ ಸಲ್ಲಿಸಿ

ಜಾಗರಣೆ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಭಟ್ಕಳಕ್ಕೆ ಆಗಮಿಸಲು ಮತ್ತು ಬೆಳಗ್ಗೆ ಬೇಗ ತೆರಳಲು ಅನುಕೂಲವಾಗುವಂತೆ ಹೆಚ್ಚುವರಿ ಸಾರಿಗೆ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಜಿಲ್ಲೆಯ ಹಾಗೂ ರಾಜ್ಯದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಶಿವರಾತ್ರಿ ಜಾಗರಣೆಯನ್ನು ಶ್ರದ್ಧಾ, ಭಕ್ತಿಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version