Site icon Vistara News

Uttara Kannada News: ಕಾರವಾರದಲ್ಲಿ ಫೆ.4, 5ರಂದು ಮೀಡಿಯಾ ಕಪ್ ಕ್ರಿಕೆಟ್ ಪಂದ್ಯಾವಳಿ

Media Cup Cricket Tournament at Karwar on 4th and 5th February

ಕಾರವಾರ: ಕಾರವಾರ ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿಯಿಂದ ಜಿಲ್ಲೆಯ (Uttara Kannada News) ಪತ್ರಕರ್ತರಿಗಾಗಿ ಮೀಡಿಯಾ ಕಪ್ ಕ್ರಿಕೆಟ್ ಟೂರ್ನಮೆಂಟ್‌ (Media Cup Cricket Tournament) ಅನ್ನು ಫೆ. 4 ಮತ್ತು 5ರಂದು ಆಯೋಜಿಸಲಾಗಿದೆ.‌

ನಗರದ ಮಾಲಾದೇವಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಜಿಲ್ಲೆಯ ಎಲ್ಲ ತಾಲೂಕಿನ ಪತ್ರಕರ್ತರು ಸೇರಿ ಒಟ್ಟು 10 ತಂಡಗಳು ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಎರಡು ದಿನದ ಪಂದ್ಯಾವಳಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಶಾಸಕರಾದ ಸತೀಶ್ ಸೈಲ್, ಭೀಮಣ್ಣ ನಾಯ್ಕ, ಶಿವರಾಮ್ ಹೆಬ್ಬಾರ್, ದಿನಕರ ಶೆಟ್ಟಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Maldives Tourism: ಮಾಲ್ಡೀವ್ಸ್‌ಗೆ ತೆರಳುವ ಭಾರತೀಯರ ಸಂಖ್ಯೆ ಕುಸಿತ; ಬಾಯ್ಕಾಟ್‌ ಪೆಟ್ಟು

ಎರಡು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಪ್ರತಿ ತಂಡದಲ್ಲಿ ನಾಲ್ವರು ವಿಐಪಿ ಆಟಗಾರರು ಭಾಗವಹಿಸುವುದರಿಂದ ಪಂದ್ಯಗಳು ರೋಚಕವಾಗುವ ನಿರೀಕ್ಷೆ ಮೂಡಿದೆ. ಪಂದ್ಯದಲ್ಲಿ ಚಾಂಪಿಯನ್ ಆದ ತಂಡಕ್ಕೆ ರೂ.30 ಸಾವಿರ ಹಾಗೂ ರನ್ನರ್ ಅಪ್ ತಂಡಕ್ಕೆ ರೂ.20 ಸಾವಿರ ನಗದು ಸೇರಿ ಆಕರ್ಷಕ ಟ್ರೋಫಿ ನೀಡಲಾಗುವುದು. ಇದರೊಂದಿಗೆ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ವೈಯಕ್ತಿಕ ಬಹುಮಾನಗಳು ಕೂಡ ನೀಡಲಾಗುವುದು ಎಂದು ಜಿಲ್ಲಾ ಪತ್ರಿಕಾಭವನ ನಿರ್ವಹಣಾ ಸಮಿತಿ ತಿಳಿಸಿದೆ.

Exit mobile version