ಬನವಾಸಿ: ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ (Uttara Kannada News) ತಿಳಿಸಿದರು.
ಬನವಾಸಿ ಕದಂಬೋತ್ಸವ-2024ರ ಅಂಗವಾಗಿ ಸೋಮವಾರ ಗ್ರಾಮದ ಕದಂಬೋತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಬಳಿಕ ಅವರು ಮಾತನಾಡಿದರು.
ಇದನ್ನೂ ಓದಿ: Ballari News: ಬಳ್ಳಾರಿಯ ವಿಎಸ್ಕೆ ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ನೇಮಕ
ಜೀವನದಲ್ಲಿ ಗೆದ್ದಾಗ ಬೀಗದೆ, ಸೋತಾಗ ಕುಗ್ಗದೇ ಜೀವನ ನಡೆಸಿದಾಗ ಮಾತ್ರ ಮನುಷ್ಯನ ಬದುಕು ಸಾರ್ಥಕತೆ ಹೊಂದುತ್ತದೆ ಎಂದು ಹೇಳಿದರು.
ಇದನ್ನೂ ಓದಿ: Karnataka Weather : ಬಿಸಿಲ ಬೇಗೆಗೆ ಬೆಂದು ಸುಸ್ತಾದ ಜನರು; ಶುಷ್ಕ ವಾತಾವರಣ ಮುಂದುವರಿಕೆ
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಅಪರ್ಣಾ ರಮೇಶ, ತಹಸೀಲ್ದಾರ್ ಶ್ರೀಧರ ಮುಂದಲಮನಿ, ತಾ ಪಂ ಇಒ ಸತೀಶ ಹೆಗಡೆ, ದೈಹಿಕ ಶಿಕ್ಷಣ ಪರಿವಿಕ್ಷಕ ಬಿ.ವಿ. ಗಣೇಶ, ಯುವಜನ ಕ್ರೀಡಾ ಇಲಾಖೆಯ ಅಧಿಕಾರಿ ಕಿರಣ್ ನಾಯ್ಕ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಕ್ರೀಡಾಕೂಟದಲ್ಲಿ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು.