Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ - Vistara News

ಉತ್ತರ ಕನ್ನಡ

Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ

Uttara Kannada News: ಭಾರತ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆ.15ರವರೆಗೆ ನಡೆಯುವ ʼಹರ್ ಘರ್ ತಿರಂಗಾʼ ಅಭಿಯಾನದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

VISTARANEWS.COM


on

Uttara Kannada News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಭಾರತ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆ.15ರವರೆಗೆ ನಡೆಯುವ “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ (Uttara Kannada News) ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದರು. ಸೋಮವಾರ ವೀಡಿಯೋ ಸಂವಾದ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಇದನ್ನೂ ಓದಿ: Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

ಆಗಸ್ಟ್ 13ರಂದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬೈಕ್, ಸೈಕಲ್ ಜಾಥಾ ಮೂಲಕ ತಿರಂಗ ರ‍್ಯಾಲಿ ಆಯೋಜಿಸಬೇಕು. ಆಗಸ್ಟ್ 14 ರಂದು ವಾಕಥಾನ್ ಮೂಲಕ ತಿರಂಗ ರ‍್ಯಾಲಿ ಮತ್ತು ರಂಗೋಲಿ ಚಿತ್ರದ ಮೂಲಕ ಅಭಿಯಾನ ಕೈಗೊಳ್ಳಬೇಕು. ಆಗಸ್ಟ್ 15 ರಂದು ಪ್ರತಿ ಮನೆ ಮನೆಯಲ್ಲೂ ಧ್ವಜಾರೋಹಣ ಕೈಗೊಂಡು, ತಿರಂಗಾ ಜತೆಗಿನ ಸೆಲ್ಫಿಯನ್ನು harghartiranga.com ನಲ್ಲಿ ಅಪ್ಲೋಡ್ ಮಾಡಬೇಕು ಎಂದ ಅವರು, ಸ್ಥಳೀಯವಾಗಿ ಆಯೋಜಿಸಲಾಗುವ ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸ್ವಾತಂತ್ರ‍್ಯದ ಸಂಭ್ರಮವನ್ನು ಪ್ರತಿ ಮನೆ-ಮನೆಯಲ್ಲೂ ಹಾಗೂ ಸರ್ಕಾರಿ/ಅರೆ ಸರ್ಕಾರಿ/ನಿಗಮ-ಮಂಡಳಿಗಳು/ಸ್ವ-ಸಹಾಯ ಗುಂಪುಗಳು/ಸಾರ್ವಜನಿಕ ಉದ್ಯಮ ಸಂಸ್ಥೆಗಳು/ ಸಂಘ-ಸಂಸ್ಥೆಗಳು/ ನಾಗರಿಕ ಸೇವಾ ಸಂಸ್ಥೆಗಳು/ ಶಾಲಾ ಕಾಲೇಜು ವಿದ್ಯಾರ್ಥಿಗಳು/ ಸಾರ್ವಜನಿಕರು/ ಇತರೆ ಎಲ್ಲ ಸಿಬ್ಬಂದಿ ಹಾಗೂ ಕುಟುಂಬ ವರ್ಗದವರು ಸೇರಿ ಸ್ವತಃ ತಾವೇ ಸ್ವಯಂ ಕ್ರಿಯಾಶೀಲರಾಗಿ ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಿಗೊಳಿಸುವ ಮೂಲಕ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾಗಲೇ ಬಡಿದ ಸಿಡಿಲು; 15 ಮಂದಿ ಆಸ್ಪತ್ರೆ ಪಾಲು

Karnataka Weather Forecast : ಹಲವು ದಿನದಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ (Rain News) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಹಾಸನದಲ್ಲಿ ಸಿಡಿಲು ಬಡಿದು 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Karnataka weather forecast
Koo

ಚಿಕ್ಕಬಳ್ಳಾಪುರ/ಹಾಸನ: ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಮಳೆ (Karnataka Weather Forecast) ಜತೆಗೆ ಸಿಡಿಲು ಬಡಿದು ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸುಮಾರು ಹದಿನೈದು ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಕೋರ್ಲಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ.

ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿತ್ತು. ಭತ್ತದ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ವೇಳೆಯೇ ಸಿಡಿಲಾಘಾತಕ್ಕೆ ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಸಿಡಿಲು ಬಡಿದಿದೆ. ಎಲ್ಲರಿಗೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಿಂಗಳ ಬಳಿಕ ಚಿಕ್ಕಬಳ್ಳಾಪುರದಲ್ಲಿ ವರುಣ ಪ್ರತ್ಯಕ್ಷ

ಇಷ್ಟು ದಿನ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನ ಸುತ್ತಮುತ್ತ ಮಳೆಯು ಅಬ್ಬರಿಸಿತ್ತು. ದಕ್ಷಿಣ ಒಳನಾಡಿನಲ್ಲಿ ಕಣ್ಮರೆಯಾಗಿದ್ದ ಮಳೆಯು ಇದೀಗ ಕಳೆದೆರಡು ದಿನಗಳಿಂದ‌ ವ್ಯಾಪಿಸಿದೆ. ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮಳೆರಾಯ ಮುಖ ಮಾಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಬಿಡುವು ಕೊಟ್ಟಿದ್ದ ಮಳೆಯು ಭಾನುವಾರ ರಾತ್ರಿ ಇಡೀ ಗುಡುಗು, ಮಿಂಚು ಸಮೇತ ಸುರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರು ಸಂತಸಗೊಂಡಿದ್ದರು.

ಇದನ್ನೂ ಓದಿ: Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ನಾಳೆ ಚಾಮರಾಜನಗರ, ರಾಮನಗರದಲ್ಲಿ ಭಾರಿ ಮಳೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Karnataka Rain : ನಿನ್ನೆ ಮಧ್ಯರಾತ್ರಿ ಸುರಿದ ಮಳೆಗೆ (Bengaluru Rain) ನಾನಾ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರು-ಹೊಸೂರು ಹೆದ್ದಾರಿ ಹಾಗೂ ಡ್ಯಾಡಿಸ್ ಗಾರ್ಡನ್ ಲೇಔಟ್‌ ಜಲಾವೃತಗೊಂಡಿದೆ. ಜನರು ಹೊರಬರಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

VISTARANEWS.COM


on

By

karnataka rain weather forecast
Koo

ಬೆಂಗಳೂರು ಗ್ರಾಮಾಂತರ: ಕಳೆದ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ (Karnataka Rain) ಬೆಂಗಳೂರು ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ನಾಲ್ಕೈದು ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಗೆ (Bengaluru rain) ಬೆಂಗಳೂರು-ಹೊಸೂರು ಹೈವೆ ಕೆರೆಯಂತಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯ ಸಿಲ್ಕ್ ಬೊರ್ಡ್ ಜಂಕ್ಷನ್‌ನಲ್ಲಿ ಮೂರ್ನಾಲ್ಕು ಅಡಿಗಳಷ್ಟು ಮಳೆ ನೀರು ನಿಂತಿದೆ.

ಜಲಾವೃತಗೊಂಡ ರಸ್ತೆಯ ನೀರಿನಲ್ಲಿಯೇ ಜನರು ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೆದ್ದಾರಿ ಜಲಾವೃತದಿಂದಾಗಿ ಸೋಮವಾರ ಬೆಳಗ್ಗೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್‌ ಜತೆಗೆ ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು. ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಹೊರಹೋಗಲು ಯಾವುದೇ ಸೂಕ್ತ ವ್ಯವಸ್ಥೆ ಇಲ್ಲ. ಇದರಿಂದಾಗಿ ರಸ್ತೆಯೆಲ್ಲ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್‌ ಜಲಾವೃತಗೊಳ್ಳಲಿದೆ.

ಇದನ್ನೂ ಓದಿ: Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಕಮ್ಮಸಂದ್ರದ ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ ಹಾಕಲಾಗಿದೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಮನೆಗಳಿರುವ ಡ್ಯಾಡಿಸ್ ಗಾರ್ಡನ್ ಲೇಔಟ್‌ನಲ್ಲಿ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಅವಾಂತರವೇ ಸೃಷ್ಟಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು, ನಿವಾಸಿಗಳನ್ನು ಸುರಕ್ಷಿತವಾಗಿ ಮನೆಯಿಂದ ಹೊರಕರೆತರುತ್ತಿದ್ದಾರೆ.

ಕಾಲೇಜು ಆವರಣದಲ್ಲಿ ಜಲಾವೃತ

ಬೆಂಗಳೂರು ಗ್ರಾಮಾಂತರದ ಆನೇಕಲ್ ಪಟ್ಟಣದ ಗೋಪಾಲರಾಜು ಕಾಲೇಜು ಜಲಾವೃತಗೊಂಡಿದೆ. ಬೆಳಗಿನ ಜಾವ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪರದಾಡಿದರು. ಆನೇಕಲ್ ಪಟ್ಟಣದ ಏಕೈಕ ಸರ್ಕಾರಿ ಡಿಗ್ರಿ ಕಾಲೇಜು ಇದಾಗಿದ್ದು, ಮಳೆಗೆ ಕಾಲೇಜು ಒಳಗಡೆ ಹೋಗಲು ಆಗದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಿದ್ದರು. ಪುರಸಭೆ ಅಧಿಕಾರಿಗಳು ಸರಿಪಡಿಸಿ ಕೊಡುವಂತೆ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದ್ದು, ಭಾರಿ ಮಳೆಯಾಗುವ (Heavy Rain alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ್‌ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರ

ಬೆಂಗಳೂರು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Karnataka Weather Forecast : ಮಲೆನಾಡು ಭಾಗದಲ್ಲಿ ಮಳೆಯು ಬಿಡುವು ಕೊಟ್ಟಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಸೋಬಾನೆ ಹಾಡುತ್ತಾ ಭತ್ತದ ನಾಟಿ ಮಾಡಿದ್ದಾರೆ. ಇತ್ತ ಹಾವೇರಿಯಲ್ಲಿ ನಿರಂತರ ಮಳಗೆ ಸರ್ಕಾರಿ ಆಸ್ಪತ್ರೆಯ ಕಟ್ಟಡ ಸೋರುತ್ತಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರಿನಲ್ಲಿ ವರುಣ (Karnataka weather Forecast) ಬಿಡುವು ಕೊಟ್ಟಿದ್ದು, ಇತ್ತ ಕೃಷಿ ಕುಟುಂಬಗಳು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ರೈತರಿಂದ ಭತ್ತದ ನಾಟಿ ಸಂಭ್ರಮ ಮನೆ ಮಾಡಿತ್ತು. ಮಲೆನಾಡಿನ ಸೋಬಾನೆ ಗೀತೆ ಹಾಡುತ್ತಾ ಭತ್ತದ ನಾಟಿ ಮಾಡುವ ಚಿತ್ರಣ ಕಂಡು ಬಂತು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್ ಪುರ ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಶುರುವಾಗಿದೆ.

ನಿರಂತರ ಮಳೆಗೆ ಶಿಥಿಲಗೊಂಡ ಆಸ್ಪತ್ರೆ

ಹಾವೇರಿ: ನಿರಂತರ ಮಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸೋರುತ್ತಿದೆ. ಬಡ ಜನರ ಪಾಲಿನ ಸಂಜೀವಿನಿದ್ದ ಆಸ್ಪತ್ರೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕು ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದ ಹಲವು ಗ್ರಾಮಗಳ ಜನರು ಕಂಗಾಲಾಗಿದ್ದಾರೆ.

ಕಟ್ಟಡ ಶಿಥಿಲವಾಗಿದ್ದರಿಂದ ಸಾರ್ವಜನಿಕರಿಗೆ ನೋ ಎಂಟ್ರೀ ಬೋರ್ಡ್ ಹಾಕಿದ್ದಾರೆ. ಆಸ್ಪತ್ರೆಯ ಚಾವಣಿ ಕಿತ್ತು ಬರುತ್ತಿದ್ದರು, ಇಕ್ಕಟ್ಟಿನಲ್ಲೇ ಎರಡು ಕೊಠಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡೇ ಕೊಠಡಿಗಳಲ್ಲಿ ರೋಗಿಗಳು, ಔಷಧ, ಪೀಠೋಪಕಣ, ವೈದ್ಯಕೀಯ ಸಲಕರಣೆಗಳನ್ನು ಇಟ್ಟುಕೊಂಡಿದ್ದಾರೆ.

ಖಾಯಂ ವೈದ್ಯಾಧಿಕಾರಿಯೂ ಇಲ್ಲ, ವ್ಯವಸ್ಥೆಯೂ ಇಲ್ಲದಂತಾಗಿದೆ. ಆಸ್ಪತ್ರೆ ಕಟ್ಟಡ ಕೆಡವಿ ಹೊಸ ಆಸ್ಪತ್ರೆಗೆ ಮನವಿ ಮಾಡಿದ್ದರೂ ಆರೋಗ್ಯ ಇಲಾಖೆ ಡೋಂಟ್ ಕೇರ್ ಎನ್ನುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರ ಮೇಲೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿದ್ದಿತ್ತು. ನಂತರ ಎಚ್ಚೆತ್ತು ಪ್ರತ್ಯೇಕ ಕೊಠಡಿ ಮಾಡಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಆ.12ರಂದು ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನವು ಇರಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಪ್ರಮುಖ ಸುದ್ದಿ38 mins ago

Train Accident : ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ ಎರಡು ಬೋಗಿ

Pralhad Joshi
ದೇಶ53 mins ago

Pralhad Joshi: ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ; ಪ್ರಲ್ಹಾದ್‌ ಜೋಶಿ

CM Siddaramaiah
ಕರ್ನಾಟಕ56 mins ago

CM Siddaramaiah: 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ; ಸಿದ್ದರಾಮಯ್ಯ ಮಹತ್ವದ ಘೋಷಣೆ

Independence day speech in Kannada
ದೇಶ60 mins ago

Independence day speech in Kannada: ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧ ಭಾಷಣ!

S Jaishankar's Maldives visit
ಪ್ರಮುಖ ಸುದ್ದಿ1 hour ago

S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

Manu Bhaker
ಕ್ರೀಡೆ2 hours ago

Manu Bhaker : ಮದುವೆಯಾಗ್ತೀರಾ ಹೇಗೆ? ನೀರಜ್​ ಚೋಪ್ರಾ- ಮನು ಭಾಕರ್​ ಭೇಟಿಯ ವಿಡಿಯೊ ವೈರಲ್ ಮಾಡಿದ ನೆಟ್ಟಿಗರು

Namma Metro
ನೋಟಿಸ್ ಬೋರ್ಡ್2 hours ago

Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

NIRF 2024 Rank
ಶಿಕ್ಷಣ2 hours ago

NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌