Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ - Vistara News

ಉತ್ತರ ಕನ್ನಡ

Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Landslide: ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ.

VISTARANEWS.COM


on

landslide Karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ (Highway landslide) ಭಾರಿ ಗುಡ್ಡ ಕುಸಿದು (Uttarakannada landslide) ಹತ್ತು ಮಂದಿ ನಾಪತ್ತೆಯಾದ ಘೋರ ದುರಂತದ ಸ್ಥಳದಲ್ಲಿ ಐದು ಶವಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ ಮತ್ತೆ ಶವ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಎರಡು ಹಿಟಾಚಿ, ಎರಡು ಜೆಸಿಬಿ ಯಂತ್ರಗಳ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ತಂಡ ಪಾಲ್ಗೊಂಡಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿವೆ. ಮತ್ತಷ್ಟು ಜನ ಮಣ್ಣಿನಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಹತ್ತು ಮಂದಿ ಮಣ್ಣಿನೊಳಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ನಿನ್ನೆ ಮಹಿಳೆಯೊಬ್ಬರ ಶವ ದೊರೆತಿತ್ತು. ನಿನ್ನೆ ಕತ್ತಲಾದ್ದರಿಂದ ಹಾಗೂ ಮಳೆಯ ಕಾರಣ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.

ಗುಡ್ಡದ ಮಣ್ಣು ಹೆದ್ದಾರಿಗೆ ಭಾರಿ ಪ್ರಮಾಣದಲ್ಲಿ ಕುಸಿದಿದೆ. ತೆರವು ಕಾರ್ಯಾಚರಣೆಗೆ ಹತ್ತಾರು ಲಾರಿ ಬಳಸಲಾಗುತ್ತಿದೆ. ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್, ಎನ್‌ಡಿಆರ್‌ಎಫ್ ಸಿಬ್ಬಂದಿ ಭಾಗಿಯಾಗಿದ್ದಾರೆ.

ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ. ರಕ್ಷಣಾ ಕಾರ್ಯಕ್ಕೆ ಅಡ್ಡಿಯೂ ಆಗುತ್ತಿದೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದಾಗಿ ಗುಡ್ಡಕ್ಕೆ ಸರಿಪಡಿಸಲಾಗದ ಧಕ್ಕೆಯಾಗಿದ್ದು, ಇನ್ನಷ್ಟು ಬಲಿ ಪಡೆಯುವ ಭೀತಿಯಿದೆ ಎನ್ನಲಾಗಿದೆ.

ಸಂಚಾರ ನಿಷೇಧ

ಭೂಕುಸಿತ ಕಾರ್ಯಾಚರಣೆ ಹಿನ್ನಲೆ ಶಿರೂರು ವ್ಯಾಪ್ತಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ನಿಷೇಧ ವಿಧಿಸಲಾಗಿದೆ. ಅಂಕೋಲಾ ತಾಲ್ಲೂಕಿನ ವಾಸರಕುದ್ರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದ ಸುತ್ತ ಸಾರ್ವಜನಿಕರು, ವಾಹನ ಸವಾರರು ಓಡಾಡದಂತೆ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಆದೇಶಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆಯಾಗಿ ನಿಷೇಧ ವಿಧಿಸಲಾಗಿದೆ.

ಉಸ್ತುವಾರಿ ಸಚಿವ ಭೇಟಿ

ಸ್ಥಳಕ್ಕೆ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ ಐದು ಮೃತ ದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಇದು ದೊಡ್ಡ ದುರಂತ, ಹೀಗೆ ಆಗಬಾರದಿತ್ತು. ಇದರ ಹೊಣೆಗಾರಿಕೆ ಐಆರ್ ಬಿಯವರದು. ಹತ್ತು ವರ್ಷದಿಂದ ಒಂದು ರಸ್ತೆ ಕ್ಲೀಯರ್ ಮಾಡೋಕೆ ಆಗಿಲ್ಲ. ಒಂದು ವರ್ಷದಿಂದ ಐಆರ್ ಬಿಯವರಿಗೆ ಹೇಳಿದ್ದೆ. ಅವರು ವ್ಯತ್ಯಾಸ ಮಾಡಿದ್ದರಿಂದ ಹೀಗೆ ಆಗಿದೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಕೋಡೋಕೆ ತಯಾರಿ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ಗೋಕರ್ಣದಲ್ಲೂ ಭೂಕುಸಿತ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಸ್ವಲ್ಪ ತಗ್ಗಿದೆಯಾದರೂ, ಗುಡ್ಡ ಕುಸಿತ ಪ್ರಕರಣಗಳು ನಿಂತಿಲ್ಲ. ಕುಮಟಾ ತಾಲೂಕಿನ ಗೋಕರ್ಣದಲ್ಲಿ (Gokarna landslide) ಇಂದು ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯ ಕಡಲತೀರದ ಹತ್ತಿರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಅದೃಷ್ಟವಶಾತ್ ದೇವಸ್ಥಾನದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.

ಉರುಳಿಕೊಂಡು ಬಂದ ಗುಡ್ಡದ ಬೃಹತ್‌ ಕಲ್ಲು ದೇವಸ್ಥಾನದ ಗೋಡೆಗೆ ತಾಗಿ ನಿಂತಿದೆ. ರಾಮಮಂದಿರ ದೇವಸ್ಥಾನಕ್ಕೆ ಯಾವುದೇ ಹಾನಿ ಆಗಿಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯ ಪರಿಣಾಮ ಗುಡ್ಡದ ಮಣ್ಣು ಸಡಿಲವಾಗಿದ್ದು, ಮಳೆಗೆ ಕುಸಿದಿದೆ ಎಂದು ಆರೋಪಿಸಲಾಗಿದೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಗಾಳಿ ಮಳೆ ಮುಂದುವರಿದಿದ್ದು, ಸುವರ್ಣಾ, ಸೀತಾ ನದಿಗಳು ತುಂಬಿ ಹರಿಯುತ್ತಿವೆ. ಆಗುಂಬೆ, ಚಿಕ್ಕಮಗಳೂರಿನಲ್ಲಿ ಮಳೆಯಾದ ಪರಿಣಾಮ ಕರಾವಳಿಯ ನದಿಗಳು ಭರ್ತಿಯಾಗಿವೆ. ನದಿ, ಹೊಳೆ ಪಾತ್ರದ ಗದ್ದೆಗಳಲ್ಲಿ ನೆರೆಯ ವಾತಾವರಣ ಕಂಡುಬಂದಿದೆ. ನದಿ, ಸಮುದ್ರ ತೀರದ ಜನಕ್ಕೆ ಉಡುಪಿ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದ್ದು, ಎರಡು ದಿನ ಸಮುದ್ರ ಮೀನುಗಾರಿಕೆ ನಿಷೇಧಿಸಿದೆ.

ಇದನ್ನೂ ಓದಿ: Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿರುಗಾಳಿ ಜತೆಗೆ ಅಬ್ಬರಿಸಲಿದ್ದಾನೆ ವರುಣ; ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ವರುಣನ ರೌದ್ರಾವತಾರಕ್ಕೆ ಜನರು ನಲುಗಿ ಹೋಗಿದ್ದಾರೆ. ಮುಂದಿನ ನಾಲ್ಕೈದು ದಿನಗಳು ಗಾಳಿ ಜತೆಗೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Heavy Rain Alert) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy rain) ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ

ಬೆಂಗಳೂರಿನಲ್ಲಿ ಮರೆಯಾಗುವ ಸೂರ್ಯ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 24 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಗಾಳಿ ವೇಗವು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆ ಅನಾಹುತದ ಚಿತ್ರಣ ಹೀಗಿದೆ ನೋಡಿ

Karnataka Rain
Rain Effect
karnataka Rain
Karnataka Rain
Karnataka Rain
karnataka Rain
karnataka rain
karnataka Rain
karnataka Rain

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

Uttara Kannada News: ಕಾರವಾರ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡುಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

VISTARANEWS.COM


on

A permanent solution to artificial flood on national highways says MP Vishweshwar Hegde Kageri
Koo

ಕಾರವಾರ: ಕಾರವಾರ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡುಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Uttara Kannada News) ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಮಳೆಗಾಲದಲ್ಲಿ ಸೀಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡದಿಂದ ಬರುವ ನೀರು ಸರಾಗವಾಗಿ ಹರಿದು ಸಮುದ್ರ ಸೇರಲು ಇರುವ ಅಡೆತಡೆಗಳನ್ನು ಶಾಶ್ವತವಾಗಿ ನಿವಾರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಸೀಬರ್ಡ್ ಮತ್ತು ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮಳೆ ಕಡಿಮೆಯಾದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಗತ್ಯ ಮಾರ್ಗೋಪಾಯಗಳನ್ನು ಕಂಡುಕೊಂಡು ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದ ಸಂಸದರು, ನೌಕಾನೆಲೆಯ ಅಧಿಕಾರಿಗಳು ಜಿಲ್ಲಾಡಳಿತದ ಈ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಜಿಲ್ಲೆಯಲ್ಲಿ ಕಾರವಾರದಿಂದ ಭಟ್ಕಳದವರೆಗಿನ ರೈಲು ಮಾರ್ಗದಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳು ಮತ್ತು ಪ್ರಯಾಣಿಕರ ಹಿತದೃಷ್ಠಿಯಿಂದ ಕೈಗೊಳ್ಳಬೇಕಾಗಿರುವ ಸುಧಾರಣಾ ಕ್ರಮಗಳು ಹಾಗೂ ರೂಪಿಸಬಹುದಾದ ಯೋಜನೆಗಳ ಕುರಿತ ವಿವರವಾದ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕೊಂಕಣ ರೈಲ್ವೆಯ ಅಧಿಕಾರಿಗಳಿಗೆ ಸೂಚಿಸಿದ ಸಂಸದರು, ಜಿಲ್ಲೆಯಲ್ಲಿ ರೈಲ್ವೆಗೆ ಸಂಬಂಧಪಟ್ಟ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಕುರಿತಂತೆ ರೈಲ್ವೆ ಖಾತೆಯ ಸಚಿವರೊಂದಿಗೆ ಚರ್ಚಿಸಿ ಅವುಗಳ ಸಂಪೂರ್ಣ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.

ಕೊಂಕಣ ರೈಲ್ವೆಗೆ ಸಂಬಂಧಪಟ್ಟಂತೆ ಬಾಕಿ ಇರುವ ಭೂಸ್ವಾಧೀನ ಪ್ರಕರಣಗಳ ಪರಿಹಾರದ ಮೊತ್ತವನ್ನು ಸಂತ್ರಸ್ತರಿಗೆ ಶೀಘ್ರದಲ್ಲಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವವರಿಗೆ ವೈದ್ಯಕೀಯ ನೆರವಿನೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸವಂತೆ ತಿಳಿಸಿದ ಅವರು, ವಿಕೋಪ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಸೇವಾ ಮನೋಭಾವ ಮತ್ತು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಂಬಂಧಪಟ್ಟ ಇಲಾಖೆಗಳು ವಿಪತ್ತು ಎದುರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳೊಂದಿಗೆ ಸದಾ ಜಾಗರೂಕರಾಗಿರಬೇಕು ಎಂದರು.

ಇದನ್ನೂ ಓದಿ: Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಎಸ್ಪಿ ನಾರಾಯಣ್, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀಬರ್ಡ್, ನೌಕಾನಲೆ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

Karnataka Weather Forecast : ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ (Heavy rain alert) ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ ಕಾರಣಕ್ಕೆ ಎರಡೂವರೆ ತಿಂಗಳು ಕೆಲವು ಪ್ರವಾಸಿತಾಣಗಳಿಗೆ ಟ್ರಕ್ಕಿಂಗ್‌ ನಿಷೇಧಿಸಲಾಗಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (karnataka Weather Forecast) ಸಕ್ರಿಯವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯು (Heavy Rain Alert) ಅಬ್ಬರಿಸುತ್ತಿದ್ದು, ಆಗುಂಬೆ 33, ಅಂಕೋಲಾ 26, ಕಾರವಾರ 23, ಹಾಗೂ ಗೇರ್ಸೊಪ್ಪ 21 ಸೆಂ.ಮೀ ಮಳೆಯಾಗಿದೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 30ರವರೆಗೆ ಚಾರಣಕ್ಕೆ ನಿಷೇಧಿಸಲಾಗಿದೆ.

ಚಿಕ್ಕಮಗಳೂರಿನ ಬಲ್ಲಾಳ ರಾಯನ ದುರ್ಗ, ರಾಣಿಝರಿ, ಬಂಡಾಜೆ ಫಾಲ್ಸ್ ಟ್ರಕ್ಕಿಂಗ್‌ಗೆ ನಿರ್ಬಂಧ ಹಾಕಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳಗೊಂಡಿದೆ. ಪ್ರವಾಸಿಗರು ಚಾರಣದ ವೇಳೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಮೂಡಿಗೆರೆ ತಾಲೂಕಿನ ಬಲ್ಲಾಳ ರಾಯನ ದುರ್ಗ ಪ್ರವಾಸಿ ತಾಣ, ಕಳಸ ತಾಲೂಕಿನ ಬಂಡಾಜೆ ಫಾಲ್ಸ್‌ಗೆ ಕೊಪ್ಪ ವಿಭಾಗದ ಅರಣ್ಯ ಇಲಾಖೆ ಈ ಕ್ರಮಕೈಗೊಂಡಿದೆ.

ಇದನ್ನೂ ಓದಿ: Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ಶಿವಮೊಗ್ಗದಲ್ಲಿ ಕುಸಿದು ಬಿದ್ದ ಮನೆ

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜಾನಾಯ್ಕ ಎಂಬುವವರಿಗೆ ಸೇರಿದ ಮನೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಗೃಹ ಬಳಕೆ ವಸ್ತುಗಳು ನೀರುಪಾಲಾಗಿವೆ.

ಉಡುಪಿಯಲ್ಲಿ ಮಳೆಗೆ ಉಕ್ಕಿ ಹರಿದ ಬ್ರಹ್ಮಾವರ ಮಡಿಸಾಲು ಹೊಳೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಗೆ ಬ್ರಹ್ಮಾವರ ಮಡಿಸಾಲು ಹೊಳೆ ಉಕ್ಕಿ ಹರಿದಿದೆ. ಇದರಿಂದಾಗಿ ಆರೂರು ಬೆಳ್ಮಾರು ನೆರೆ ಹಾವಳಿ ಸೃಷ್ಟಿಯಾಗಿದೆ. ನೂರಾರು ಎಕರೆ ಕೃಷಿ ಭೂಮಿ ನೆರೆ ನೀರಿನಲ್ಲಿ ಮುಳುಗಿ ನಷ್ಟವಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಆದರೂ ಘಟ್ಟ ಪ್ರದೇಶದಿಂದ ಹರಿದು ಬರುತ್ತಿರುವ ನೀರಿನಿಂದಾಗಿ ನೆರೆ ಸೃಷ್ಟಿಯಾಗುತ್ತಿದೆ.

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ಇರಲಿದೆ. ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Uttara Kannada Rain: ಉತ್ತರ ಕನ್ನಡ ಜಿಲ್ಲೆ ಕಳೆದ ಒಂದು ವಾರದ ಮಳೆಗೆ ತಲ್ಲಣಿಸಿದೆ. ಭೂಕುಸಿತದಿಂದ ಹತ್ತಾರು ಸಾವುಗಳು, ನದಿಗಳು ಉಕ್ಕೇರಿ ಸೇತುವೆ- ರಸ್ತೆ ಮುಳುಗಡೆ, ಆಸ್ತಿಪಾಸ್ತಿ ಹಾನಿ, ಶಾಲೆಗಳಿಗೆ ರಜೆ, ಮನೆಗಳಿಗೆ ಹಾನಿಯಾಗಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದ ಜನ- ಇದು ಜಿಲ್ಲೆಯ ಚಿತ್ರಣ.

VISTARANEWS.COM


on

Koo

ಕಾರವಾರ: ಸದ್ಯದ ವರ್ಷಗಳಲ್ಲಿ ಕಂಡು ಕೇಳರಿಯದ ಮಳೆ (Rain news) ಹಾಗೂ ಭೂಕುಸಿತಕ್ಕೆ ಉತ್ತರ ಕನ್ನಡ (Uttara Kannada Rain) ಜಿಲ್ಲೆ ತತ್ತರಿಸಿದೆ. ಹಲವು ಕಡೆ ಭೂಕುಸಿತ (Land slide) ಮುಖ್ಯವಾಗಿ ಹಾನಿಯೆಸಗಿದೆ. ಇಂದು ಒಂದೇ ಕಡೆ ಭೂಕುಸಿತ ಉಂಟಾಗಿ 10 ಮಂದಿ ಸತ್ತಿದ್ದಾರೆ. ಇದುವರೆಗೂ ನಾನಾ ಕಡೆ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 11 ದಾಟಿದೆ. ಜಿಲ್ಲೆಯ ನಾನಾ ಕಡೆ ನದಿಗಳು ಉಕ್ಕೇರಿ ಹರಿದು ಆಸ್ತಿಪಾಸ್ತಿ ಹಾನಿಯಾಗಿದೆ; ರಸ್ತೆಗಳು ಮುಳುಗಿವೆ. ಜನ ತತ್ತರಿಸಿಹೋಗಿದ್ದು, ಪರಿಹಾರ ಶಿಬಿರಗಳಲ್ಲೂ ನೂರಾರು ಮಂದಿ ಆಶ್ರಯ ಪಡೆದಿದ್ದಾರೆ.

ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ. ತುರ್ತು ಕಾರ್ಯಾಚರಣೆಗೆ ಪೊಲೀಸರು ಧಾವಿಸಿದ್ದಾರೆ. ಸ್ಥಳದ ಪರಿಸ್ಥಿತಿ ಭೀಕರವಾಗಿದ್ದು, ಹೆದ್ದಾರಿ ಸಂಪೂರ್ಣ ಕತ್ತರಿಸಿಹೋಗಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿಂತೇ ಹೋಗಿದೆ, ಇದನ್ನು ಸರಿಪಡಿಸಲು ವಾರವಾದರೂ ಬೇಕು ಎಂದು ಕಾರ್ಯಾಚರಣೆ ನಿರತರ ಅಭಿಪ್ರಾಯ. ಎಡೆಬಿಡದೆ ಸುರಿಯುತ್ತಿರುವ ಮಳೆ, ಕಾರ್ಯಾಚರಣೆಯನ್ನು ಇನ್ನಷ್ಟು ಕಷ್ಟಗೊಳಿಸಿದೆ.

ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಮೇಲೆ ಗುಡ್ಡ ಬಿದ್ದ ಪರಿಣಾಮ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಾರವಾರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ಜಲಾವೃತವಾದ ಪರಿಣಾಮ ಚಿಕಿತ್ಸೆಗೆ ಹೊರಟಿದ್ದ ಪಾಶ್ವವಾಯು ಪೀಡಿತರೊಬ್ಬರು ರಸ್ತೆಯಲ್ಲೇ ಲಾಕ್ ಆದರು. ಕಾರವಾರ-ಕೈಗಾ ರಸ್ತೆಯ ಮಂದ್ರಾಳಿ ಬಳಿ ರಸ್ತೆಗೆ ಗುಡ್ಡ ಕುಸಿದಿದ್ದು, ಮನೆಗಳಿಗೂ ಹಾನಿಯಾಗಿತ್ತು. ಸದ್ಯ 2 ದಿನ ಕಾರವಾರ-ಕೈಗಾ ರಸ್ತೆ ಸಂಚಾರ ಬಂದ್ ಆಗಿದೆ. ಅನೇಕ ಕಡೆ ಭೂಕುಸಿತದ ಪರಿಣಾಮ ರಸ್ತೆಗಳು ಅಂಚು ಕುಸಿದು ವಾಹನ ಓಡಾಟಕ್ಕೆ ದುಸ್ತರವಾಗಿವೆ. ಹಲವು ಕಡೆ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಇನ್ನೂ ಹಲವು ಕಡೆ ತೋಟಗಳು ಮುಳುಗಡೆಯಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

Karnataka Rain

ಶಾಲೆ ಕಾಲೇಜುಗಳಿಗೆ ರಜೆ

ಕಳೆದೆರಡು ದಿನಗಳಿಂದ ಜಿಲ್ಲೆಯ 10 ತಾಲೂಕುಗಳ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ರಜೆ ಘೋಷಿಸಿದ್ದಾರೆ. ಮಳೆಯ ಭೀಕರತೆ ಇನ್ನೂ ಮುಂದುವರಿಯುತ್ತಿದ್ದು, ಗುಡ್ಡಗಾಡು ಪ್ರದೇಶಗಳ ಜನತೆ ಮಕ್ಕಳನ್ನು ಶಾಲೆಗೆ ಕಳಿಸಲು ತಾವೇ ಅಂಜುತ್ತಿದ್ದಾರೆ. ಹೆಚ್ಚಿನ ಕಡೆ ಹೊಳೆ ಹಳ್ಳಗಳನ್ನು ದಾಟಿಕೊಂಡು ಮಕ್ಕಳು ಬರಬೇಕಿದ್ದು, ಸೇತುವೆಗಳು ಇಲ್ಲದ ಕಡೆಯಲ್ಲಿ ರಿಸ್ಕ್‌ ತೆಗೆದುಕೊಳ್ಳಲು ಮಕ್ಕಳ ಪೋಷಕರು ಮುಂದಾಗುತ್ತಿಲ್ಲ.

ರೆಡ್‌ ಅಲರ್ಟ್‌

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅಗತ್ಯ ಮಾಹಿತಿ

ವಿಪತ್ತು ನಿರ್ವಹಣೆ, ಪೊಲೀಸ್, ಅರಣ್ಯ, ಅಗ್ನಿಶಾಮಕ, ಹೆಸ್ಕಾಂ ಇಲಾಖೆಯಿಂದ ಒಬ್ಬೊಬ್ಬ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಎಲ್ಲಾ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಲು ಎಮರ್ಜೆನ್ಸಿ ಆಪರೇಷನ್ ಸೆಂಟರ್ ಮಾಡಲಾಗಿದೆ. ಎಲ್ಲೇ ಸಹಾಯ ಅಗತ್ಯವಿದ್ದರೂ ತುರ್ತು ಸ್ಪಂದನೆಗೆ ಕ್ರಮವಹಿಸಲಾಗುತ್ತದೆ. ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೂ ಕೇಂದ್ರಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಕಾರವಾರದ‌ ಕದ್ರಾ ಜಲಾಶಯದಿಂದ ವಿದ್ಯುತ್ ಉತ್ಪಾದನೆ ಹಾಗೂ ಕ್ರಸ್ಟ್ ಗೇಟ್ ಸೇರಿ 31,000 ಕ್ಯೂಸೆಕ್ಸ್‌ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯದ 4 ಗೇಟ್‌ಗಳಿಂದ 10,600 ಕ್ಯೂಸೆಕ್ಸ್ ನೀರು ಬಿಡುಗಡೆಯಾಗಿದ್ದು, 34.50 ಮೀ ಗರಿಷ್ಠ ಸಾಮರ್ಥ್ಯದ ಕದ್ರಾ ಜಲಾಶಯದಲ್ಲಿ 31 ಮೀ ತಲುಪಿದೆ ನೀರಿನ ಸಂಗ್ರಹ. ಧಾರಾಕಾರ ಮಳೆಯಿಂದ ಜಲಾಶಯದ ಒಳಹರಿವು ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಕೊಂಕಣ ರೈಲ್ವೇ ಸ್ಥಗಿತ

ಇತ್ತೀಚೆಗಷ್ಟೇ ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಜುಲೈ 10ರಂದು ಹಲವು ರೈಲುಗಳ ಸಂಚಾರ ವ್ಯತ್ಯಯವಾಗಿತ್ತು. ಇದೀಗ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆಗಳು ಎದುರಾಗಿದ್ದು 14 ಗಂಟೆಗಳ ಕಾಲ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕರ್ನಾಟಕ ರಾಜ್ಯದ ರೈಲು ಪ್ರಯಾಣಿಕರಿಗೂ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ: Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Continue Reading
Advertisement
KL Rahul
ಕ್ರೀಡೆ2 seconds ago

KL Rahul: ಮುಂದಿನ ವರ್ಷ ಆರ್​ಸಿಬಿ ಪರ ಆಡಲಿದ್ದಾರೆ ಕೆ.ಎಲ್​ ರಾಹುಲ್​; ಪೋಸ್ಟರ್ ವೈರಲ್

Samarjit Lankesh Monalisa Kannada Movie 20 Years Celebration Gowri Movie 2 Songs Released
ಸ್ಯಾಂಡಲ್ ವುಡ್33 mins ago

Samarjit Lankesh: ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ: ರಿಲೀಸ್ ಆಯ್ತು ‘ಗೌರಿ’ ಚಿತ್ರದ ಹಾಡುಗಳು

gt world mall
ಪ್ರಮುಖ ಸುದ್ದಿ33 mins ago

GT World Mall: ಪಂಚೆ ಧರಿಸಿ ಬಂಧ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

Kylian Mbappe
ಕ್ರೀಡೆ35 mins ago

Kylian Mbappe: ಬಾಲ್ಯದ ಕನಸಿನ ರಿಯಲ್‌ ಮ್ಯಾಡ್ರಿಡ್‌ ತಂಡ ಸೇರಿದ ಕೀಲಿಯನ್‌ ಎಂಬಾಪೆ

SIIMA 2024 nomination list announced kaatera
ಸ್ಯಾಂಡಲ್ ವುಡ್57 mins ago

SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ʻಕಾಟೇರʼ, ʻಸಪ್ತ ಸಾಗರದಾಚೆ ಎಲ್ಲೋ ಸೈಡ್-ಎʼ!

Chandipura Virus
ಆರೋಗ್ಯ1 hour ago

Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Double-Decker Flyover
ಪ್ರಮುಖ ಸುದ್ದಿ1 hour ago

Double-Decker Flyover: ಇಂದು ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್‌ಗೆ ಚಾಲನೆ; ದಕ್ಷಿಣ ಭಾರತದ ಪ್ರಥಮ ಮೆಟ್ರೋ ಕಂ ಮೇಲ್ಸೇತುವೆ

WOMEN'S T20 RANKINGS
ಕ್ರೀಡೆ1 hour ago

WOMEN’S T20 RANKINGS: ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಪ್ರಗತಿ ಸಾಧಿಸಿದ ಹರ್ಮನ್‌ಪ್ರೀತ್‌, ಶಫಾಲಿ

Kichcha Sudeep Really Invited By Mukesh Ambani Wedding
ಸಿನಿಮಾ1 hour ago

Kichcha Sudeep: ಅಂಬಾನಿ ಮದುವೆಗೆ ಸುದೀಪ್‌ಗೆ ಆಹ್ವಾನ ಬಂದಿತ್ತ? ಅಸಲಿ ಸತ್ಯ ಏನು?

Muharram 2024
ಪ್ರಮುಖ ಸುದ್ದಿ2 hours ago

Muharram 2024: ಏಕತೆಯ ಸಂದೇಶ ಸಾರುವ ಮುಹರ್ರಮ್ ಆಚರಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌