Vistara News Launch | ಯಲ್ಲಾಪುರದಲ್ಲಿ ಅದ್ಧೂರಿ ವಿಸ್ತಾರ ಕನ್ನಡ ಸಂಭ್ರಮ Vistara News

ಉತ್ತರ ಕನ್ನಡ

Vistara News Launch | ಯಲ್ಲಾಪುರದಲ್ಲಿ ಅದ್ಧೂರಿ ವಿಸ್ತಾರ ಕನ್ನಡ ಸಂಭ್ರಮ

ವಿಸ್ತಾರ ನ್ಯೂಸ್ ಚಾನೆಲ್ (Vistara News Launch) ಆರಂಭವಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಭಾನುವಾರ ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮ ವಿಶಿಷ್ಟವಾಗಿ ನಡೆಯಿತು.

VISTARANEWS.COM


on

Vistara News Launch
ಯಲ್ಲಾಪುರದಲ್ಲಿ ನಡೆದ ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮದಲ್ಲಿ ಸಚಿವ ಶಿವರಾಮ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ, ಪ್ರಮೋದ್ ಹೆಗಡೆ, ಎಚ್ ವಿ ಧರ್ಮೇಶ್, ಶ್ರೀನಿವಾಸ ಹೆಬ್ಬಾರ್ ಮತ್ತಿತರರು ಭಾಗವಹಿಸಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಖ್ಯಾತ ಪತ್ರಕರ್ತರಾದ ಹರಿಪ್ರಕಾಶ್ ಕೋಣೆಮನೆ (Vistara News Launch) ಅವರು ಪತ್ರಿಕೋದ್ಯಮದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಮಾಧ್ಯಮಗಳು ಎಷ್ಟೇ ಹುಟ್ಟಲಿ, ಅವುಗಳು ತಮ್ಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಸಮಾಜಮುಖಿ ಚಿಂತನೆಯ ಸುದ್ದಿಗಳನ್ನು ಬಿತ್ತರಿಸಬೇಕು‌. ಈ ನಿಟ್ಟಿನಲ್ಲಿ ವಿಸ್ತಾರ ನ್ಯೂಸ್‌ ಮಾದರಿ ಆಗಲಿ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

ತಾಲೂಕಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಶ್ರೀ ಶ್ರೀಮದ್ ಗಂಗಾಧರೇಶ್ವರ ಸ್ವಾಮೀಜಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಧಾನಪರಿಷತ್ ಸದಸ್ಯ ಶಾಂತರಾಮ್ ಸಿದ್ದಿ‌ ಅವರು ಮಾತನಾಡಿ, ಮಾಧ್ಯಮಗಳು ಪ್ರಾಮಾಣಿಕ, ಸ್ಪಷ್ಟ ನಿಷ್ಪಕ್ಷಪಾತ ಸುದ್ದಿ ಕೊಡಬೇಕು. ಕೋಣೆಮನೆ ಪರಿವಾರ ಇದ್ದಲ್ಲಿ ಆ ಪ್ರಶ್ನೆ ಉದ್ಭವಿಸುವುದಿಲ್ಲ. ಆ ಬಗ್ಗೆ ನನಗೆ ವಿಶ್ವಾಸವಿದೆ. ವಿಸ್ತಾರ ಮಾದ್ಯಮ ಸರ್ವವ್ಯಾಪಿ ಸರ್ವಸ್ಪರ್ಶಿ ಆಗಬೇಕು. ಎಲೆಮರೆ ಕಾಯಿಯಂತಿರುವ ಹಲವರನ್ನು ಗುರುತಿಸಿ ಆ ಬಗ್ಗೆ ಸುದ್ದಿ ಬಿತ್ತರಿಸಬೇಕು. ಅಂತಹ ಪ್ರಾಮಾಣಿಕತೆ ಮೆರೆಯುವ ಜನೋಪಯೋಗಿ ಚಾನೆಲ್ ವಿಸ್ತಾರ ಆಗಬೇಕು‌ ಎಂದು ಹಾರೈಸಿದರು.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ | ಮಕ್ಕಳ ಆತ್ಮಹತ್ಯೆ ಸರಣಿ ಕಳವಳಕಾರಿ

ಗ್ರಾಮೀಣ ಅಭಿವೃದ್ಧಿ ವಿಕೇಂದ್ರಿಕರಣ ಉಪಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಮಾತನಾಡಿ, ಜಗತ್ತಿನಲ್ಲಿ ಏನೇ ಸೃಷ್ಟಿ ಆಗಲು ಬ್ರಹ್ಮ, ವಿಷ್ಣು, ಮಹೇಶ್ವರರು ಬೇಕು. ವಿಸ್ತಾರಕ್ಕೆ ಇದೀಗ ಮೂರು ಸೃಷ್ಟಿಕರ್ತ ರತ್ನಗಳು ಸಿಕ್ಕಿವೆ. ಈಗ ಇರುವುದು ಮಾಹಿತಿ ತಂತ್ರಜ್ಞಾನ ಕಾಲ. ಈ ಕ್ಷಣದ ಸುದ್ದಿಯ ಮಾಹಿತಿ ಪಡೆಯಲು ಮಾಧ್ಯಮ ಬೇಕು. ಇದಕ್ಕೆ ಇದೀಗ ವಿಸ್ತಾರ ಕಾಲಿರಿಸಿದೆ. ವಿಸ್ತಾರ ಕಾರ್ಯಕ್ರಮಗಳು ವಿಭಿನ್ನವಾಗಿವೆ. ಪಾರದರ್ಶಕತೆ, ವಸ್ತುನಿಷ್ಠ ವರದಿಗೆ ವಿಸ್ತಾರ ಹೆಚ್ಚು ಒತ್ತು‌ ನೀಡುತ್ತದೆ ಎಂಬ‌ ನಂಬಿಕೆ ನನಗಿದೆ ಎಂದರು.
ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಅವರ ಬಾಲ್ಯ ಜೀವನ ನೆನಪಿಸಿಕೊಂಡ ಪ್ರಮೋದ್ ಹೆಗಡೆ, ಹರಿಪ್ರಕಾಶ್ ಅವರು ಒಂದು ಪುಟ್ಟ ಹಳ್ಳಿಯಿಂದ ಬಂದು ಇದೀಗ ಇಡೀ‌ ರಾಜ್ಯವೇ‌ ಗುರುತಿಸುವ ಕೆಲಸ ಮಾಡಿದ್ದಾರೆ. ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಅವರ ಬಾಲ್ಯಜೀವನ ಕಷ್ಟಕರವಾಗಿತ್ತು. ಕಿರಾಣಿ ಅಂಗಡಿಯಲ್ಲಿ ದಿನದ ಕೆಲ ಹೊತ್ತು ಕೆಲಸ ಮಾಡುತ್ತಿದ್ದರು. ಆ ಬಳಿಕ ಶಾಲೆಗೆ ಹೋಗುತ್ತಿದ್ದರು. ಬಟ್ಟೆಗೆ ಇಸ್ತ್ರಿ ಮಾಡಿಕೊಳ್ಳಲಾಗದೆ ಬಟ್ಟೆ ಮಡಚಿ ತಲೆ ಕೆಳಗಿಟ್ಟು ಐರನ್ ಮಾಡಿಕೊಳ್ಳೋ ಪರಿಸ್ಥಿತಿ ಅವರಿತ್ತು. ಇದೀಗ ಅವರ ಸಾಧನೆ ಕಂಡು ನನಗೆ ಖುಷಿಯಾಗಿದೆ ಎಂದರು.

ವಿಸ್ತಾರ ನ್ಯೂಸ್‌ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ಆನ್‌ಲೈನ್‌ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಂಸ್ಥೆಯ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಹುಟ್ಟೂರಿನಲ್ಲಿ ಅತ್ಯಂತ ಅದ್ಧೂರಿಯಾಗಿ ವಿಸ್ತಾರ ಕನ್ನಡ ಸಂಭ್ರಮ ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ‌ ವಿಸ್ತಾರ ಮೀಡಿಯಾದ ಚೇರ್ಮನ್ ಮತ್ತು ಎಂ.ಡಿ ಧರ್ಮೇಶ್, ನಿರ್ದೇಶಕರಾದ ಶ್ರೀನಿವಾಸ್ ಹೆಬ್ಬಾರ್ ಪಾಲ್ಗೊಂಡಿದ್ದರು. ತಾಲೂಕು‌ ದಂಡಾಧಿಕಾರಿ ಶ್ರೀಕೃಷ್ಣ ಕಾಮಕರ, ಟಿಎಂಎಸ್ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ರವಿ ಹೆಗಡೆ ಉಪಸ್ಥಿತರಿದ್ದರು.
ನರಸಿಂಹ ಕೋಣೆಮನೆ ಸ್ವಾಗತಿಸಿದರು. ವಿವೇಕ ಕುಮಾರ್ ನಿರೂಪಿಸಿದರು. ವಿಶ್ವದರ್ಶನ ಕಾಲೇಜಿನ ಪ್ರಾಶುಪಾಲರಾದ ಡಿ. ಕೆ. ಗಾಂವ್ಕರ್ ಜತೆಗಿದ್ದರು.

ಇದನ್ನೂ ಓದಿ | ವಿಸ್ತಾರ ಭಾಗ 2 | ಹರಿವ ನದಿಗೆ ಸಾವಿರ ಕಾಲು | ಹೊಣೆಯರಿತ ಪತ್ರಕರ್ತನ ಸತ್ಯದ ವಿಶ್ಲೇಷಣೆ | ಹರಿಪ್ರಕಾಶ್‌ ಕೋಣೆಮನೆ ಅಂಕಣ ಸಂಕಲನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉತ್ತರ ಕನ್ನಡ

Uttara Kannada News: ಬಸ್‌ಗಾಗಿ ಕೋಳಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ

Uttara Kannada News: ಯಲ್ಲಾಪುರ ತಾಲೂಕಿನ ಕೋಳಿಕೇರಿ ಗ್ರಾಮದಲ್ಲಿ ಮಂಗಳವಾರ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

VISTARANEWS.COM


on

Protest by villagers in Kolikeri demanding bus stop
ಯಲ್ಲಾಪುರ ತಾಲೂಕಿನ ಕೋಳಿಕೇರಿ ಗ್ರಾಮದಲ್ಲಿ ಮಂಗಳವಾರ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದರು.
Koo

ಯಲ್ಲಾಪುರ: ತಾಲೂಕಿನ ಕೋಳಿಕೇರಿ ಗ್ರಾಮದಲ್ಲಿ ಮಂಗಳವಾರ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ಪ್ರತಿಭಟನೆ (Protest) ನಡೆಸಿದರು.

ಕೋಳಿಕೇರಿ ಸುತ್ತಮುತ್ತ 7-8 ಗ್ರಾಮಗಳಿದ್ದು, ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, 250ಕ್ಕೂ ಹೆಚ್ಚು ಜನ ಕೆಲಸ ಕಾರ್ಯಗಳಿಗಾಗಿ ಯಲ್ಲಾಪುರ ಹಾಗೂ ಹುಬ್ಬಳ್ಳಿ ಮಾರ್ಗದಲ್ಲಿ ಪ್ರಯಾಣಿಸುತ್ತಾರೆ. ಕೋಳಿಕೇರಿ ಗ್ರಾಮದಲ್ಲಿ ಬಸ್ ನಿಲ್ಲಿಸುವ ಅವಕಾಶ ಇದ್ದಾಗಲೂ ಕೂಡ ಬಸ್ಸುಗಳು ನಿಲ್ಲುತ್ತಿರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳಷ್ಟು ಸಮಸ್ಯೆಯಾಗುತ್ತಿತ್ತು. ಬಸ್ಸುಗಳನ್ನು ನಿಲ್ಲಿಸುವಂತೆ ಗ್ರಾಮಸ್ಥರು ಹಲವಾರು ಬಾರಿ ಮನವಿಗಳನ್ನು ನೀಡಿದ ನಂತರವೂ ಕೂಡ ಯಾವುದೇ ಬಸ್ಸುಗಳು ನಿಲ್ಲಿಸದೆ ಇರುವ ಹಿನ್ನಲೆಯಲ್ಲಿ ಮಂಗಳವಾರ ಹೆದ್ದಾರಿಯಲ್ಲಿ ಸಂಚರಿಸುವ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಕೋಳಿಕೇರಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಘೋಷಣೆ ಕೂಗುತ್ತ ಸುಮಾರು ಎಂಟಕ್ಕೂ ಹೆಚ್ಚು ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿದ ಹಿನ್ನಲೆಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ವ್ಯತ್ಯಯವಾಯಿತು.

ಇದನ್ನೂ ಓದಿ: Operation Tiger : ಮಹಿಳೆ ಸಹಿತ ಇಬ್ಬರ ಬಲಿ ಪಡೆದ ನರಹಂತಕ ಹುಲಿ ಕೊನೆಗೂ ಸೆರೆ; ಹೇಗಿತ್ತು ಆಪರೇಷನ್?

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಿಪಿಐ ರಂಗನಾಥ ನೀಲಮ್ಮನವ‌ರ್, ಪ್ರತಿಭಟನಾಕಾರರು ಹಾಗೂ ಕೆಎಸ್‌ಆರ್ಟಿಸಿ ಅಧಿಕಾರಿಗಳ ಮಧ್ಯೆ ಮಾತುಕತೆ ನಡೆಸಿ, ಕೋಳಿಕೇರಿಯಲ್ಲಿ ನಿಲ್ಲಲು ಅವಕಾಶ ಇರುವ ಬಸ್ಸುಗಳನ್ನು ನಿಲ್ಲಿಸಬೇಕು. ಇಂದಿನಿಂದ ಕೆಲವು ದಿನದ ಮಟ್ಟಿಗೆ ಕೆಎಸ್‌ಆರ್ಟಿಸಿಗೆ ಸಂಬಂಧಪಟ್ಟ ಸಿಬ್ಬಂದಿ ಅಥವಾ ಅಧಿಕಾರಿಯನ್ನು ಕೋಳಿಕೇರಿಯಲ್ಲಿ ನಿಯೋಜಿಸಿ ಯಾವ ಬಸ್ಸುಗಳನ್ನು ನಿಲ್ಲಿಸುವುದಿಲ್ಲ ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೆ ಪ್ರತಿಭಟನಾಕಾರರ ಮನವೊಲಿಸಿ, ಬೇರೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್‌ಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಪೊಲೀಸ್ ನಿರೀಕ್ಷಕರ ವಿನಂತಿಯ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಪಂ ಉಪಾಧ್ಯಕ್ಷ ನಾಗೇಶ ಗಾವಡೆ ಮಾತನಾಡಿ, ಸ್ಥಳೀಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ಸುಗಳನ್ನು ಕೋಳಿಕೇರಿಯಲ್ಲಿ ನಿಲ್ಲಿಸಬೇಕು. ಮುಂದೆ ಮತ್ತೆ ಯಥಾ ಸ್ಥಿತಿ ಮುಂದುವರೆದರೆ ಬೃಹತ್‌ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದರು.

ಇದನ್ನೂ ಓದಿ:Congress Karnataka : ನಿಗಮ-ಮಂಡಳಿ ಲಿಸ್ಟ್‌ ಡೆಲ್ಲಿಗೆ ರವಾನೆ;‌ ಶಾಸಕರಿಗೆ ಮಾತ್ರ ಅವಕಾಶವೆಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಕಣ್ಣಿಗೇರಿ ಗ್ರಾ.ಪಂ ಸದಸ್ಯೆ ಲಕ್ಷ್ಮೀ ವಸಂತ ಪಾಟೀಲ, ಕರ್ನಾಟಕ ರಾಜ್ಯ ಸಿದ್ದಿ ಬುಡಕಟ್ಟು ಜನಪರ ಸಂಘದ ಗೌರವಾಧ್ಯಕ್ಷ ಜಾನ್‌ ಬಿಳಕೀಕರ, ಕೋಳಿಕೇರಿ ಸ.ಹಿ.ಪ್ರಾ.ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಘು ಅಣ್ಣಪ್ಪ ಮರಾಠಿ, ಬಿ.ಜೆ.ಪಿ. ಕೋಳಿಕೇರಿ ಬೂತ್‌ ಅಧ್ಯಕ್ಷ ನಾಗರಾಜ ಮಾರುತಿ ಪಾಟೀಲ್, ಉನ್ನತಿ ಗೌಳಿ ಕ್ರೆಡಿಟ್ ಕೋ.ಆಪ್ ಅಧ್ಯಕ್ಷ ಮಾಕೂ ಕೋಕರೆ, ತಾಪಂ ಮಾಜಿ ಅಧ್ಯಕ್ಷ ರವಿ ಕೈಟ್ಕರ್, ಗ್ರಾಪಂ ಸದಸ್ಯ ವಾಸುದೇವ್ ಮಪ್ಸೇಕರ್, ಕಾಂಗ್ರೆಸ್ ಮುಖಂಡ ಲಾರೆನ್ಸ್ ಸಿದ್ದಿ, ಸೇರಿದಂತೆ 100 ಕ್ಕೂ ಹೆಚ್ಚು ಗ್ರಾಮಸ್ಥರು ಇದ್ದರು.

Continue Reading

ಉಡುಪಿ

Karnataka Weather : ನಾಳೆ ಭಾರಿ ಮಳೆ ಎಚ್ಚರಿಕೆ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌!

Karnataka Weather Forecast : ತಿಂಗಳಾಂತ್ಯದವರೆಗೆ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather forecast Heavy rain alert
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮೈಸೂರು ಮತ್ತು ತುಮಕೂರಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Viral News: ಪತ್ನಿಯ ಬರ್ತ್‌ಡೇ, ಪತಿಗೆ ಡೆತ್‌ಡೇ: ದುಬೈಗೆ ಕರೆದೊಯ್ಯದ್ದಕ್ಕೆ ಮೂಗಿಗೆ ಗುದ್ದಿ ಗಂಡನ ಪ್ರಾಣ ತೆಗೆದ ಹೆಂಡತಿ

ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ಸೂರ್ಯ

ನ.29ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ಕರ್ನಾಟಕದಲ್ಲಿ ಇಂದಿನಿಂದ ಡಿಸೆಂಬರ್‌ 3ರವರೆಗೆ ಮಳೆ ಸಾಧ್ಯತೆ!

Karnataka Weather Forecast : ಇಂದಿನಿಂದ (ನ.28) ಡಿ.3ರ ವರೆಗೂ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

Girl plying in Rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ (Karnataka Weather Forecast) ಆಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 17.2 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

ಒಳನಾಡು ಹಾಗೂ ಕರಾವಳಿ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವೊಮ್ಮೆ ಸಾಧಾರಣದಿಂದ ಜೋರು ಮಳೆ ಸುರಿಯಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 19 ಡಿ.ಸೆ ಇರಲಿದೆ.

ನ.28 ರಿಂದ ಡಿ.3 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Child trade : ಮಕ್ಕಳ ಮಾರಾಟದ ಬೃಹತ್‌ ಜಾಲ ಪತ್ತೆ;‌ ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್!

ಒಣ ಹವೆ ಮುಂದುವರಿಕೆ

ಬೀದರ್‌, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಚಾಮರಾಜನಗರ, ಹಾಸನ, ಮೈಸೂರಿಗೆ ಯಾವುದೇ ಮಳೆಯ ಸೂಚನೆ ಇಲ್ಲ. ಬದಲಿಗೆ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 19ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Uttara Kannada News: ಸಂಸ್ಕಾರ ಕೊಡದೇ ಮಕ್ಕಳನ್ನು ವಂಚಿಸುತ್ತಿದ್ದೇವೆ: ಎಂ.ಜಿ. ಭಟ್

Uttara Kannada News: ಯಲ್ಲಾಪುರ ತಾಲೂಕಿನ ಉಮ್ಮಚಗಿ ಗ್ರಾಮದ ಸಹಕಾರಿ ಸಭಾಭವನದಲ್ಲಿ ʼನಾ ಕಂಡಂತೆ ಲಕ್ಷ್ಮಣʼ ರಾಜ್ಯಮಟ್ಟದ ಮಕ್ಕಳ ಗೋಷ್ಠಿ ಜರುಗಿತು.

VISTARANEWS.COM


on

Inauguration of State Level makkala gosti at Ummachagi
ಯಲ್ಲಾಪುರ ತಾಲೂಕಿನ ಉಮ್ಮಚಗಿ ಗ್ರಾಮದ ಸಹಕಾರಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ʼನಾ ಕಂಡಂತೆ ಲಕ್ಷ್ಮಣʼ ರಾಜ್ಯಮಟ್ಟದ ಮಕ್ಕಳ ಗೋಷ್ಠಿಗೆ ಚಾಲನೆ ನೀಡಲಾಯಿತು.
Koo

ಯಲ್ಲಾಪುರ: ನಾವು ಚಿಕ್ಕವರಿರುವಾಗ ನಮ್ಮ ಹಿರಿಯರು ರಾಮಾಯಣ, ಮಹಾಭಾರತದ ಕಥೆಗಳನ್ನು ಹೇಳುತ್ತಿದ್ದರು, ಇಂದು ಅಂತಹ ಉತ್ತಮ ಸಂಸ್ಕಾರಗಳಿಂದ ನಮ್ಮ ಮಕ್ಕಳನ್ನು ನಾವೆಲ್ಲ ವಂಚಿಸುತ್ತಿದ್ದೇವೆ, ಈ ಕುರಿತು ಪಾಲಕರಾದ ನಾವು ಚಿಂತನೆ ಮಾಡಲೇಬೇಕಾದ ಕಾಲಘಟ್ಟದಲ್ಲಿದ್ದೇವೆ ಎಂದು ಉಮ್ಮಚಗಿ ವ್ಯ..ಸೇ.ಸಾ. ಸಂಘದ ಅಧ್ಯಕ್ಷ ಎಂ.ಜಿ. ಭಟ್ ಸಂಕದಗುಂಡಿ ಹೇಳಿದರು.

ತಾಲೂಕಿನ ಉಮ್ಮಚಗಿಯ ಸಹಕಾರಿ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ, ಮಕ್ಕಳ ಪ್ರಕಾರ, ಶ್ರೀಮಾತ ವೈದಿಕ ಶಿಕ್ಷಣ ಸಂಸ್ಥೆ ಉಮ್ಮಚಗಿ ಮತ್ತು ಉಮ್ಮಚಗಿ ವ್ಯ.ಸೇ.ಸಾ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ʼನಾ ಕಂಡಂತೆ ಲಕ್ಷ್ಮಣʼ ರಾಜ್ಯಮಟ್ಟದ ಮಕ್ಕಳ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಭಾಸಾಪ ರಾಜ್ಯಮಟ್ಟದಲ್ಲಿ ಇಂತಹ ಗೋಷ್ಠಿ ಹಮ್ಮಿಕೊಂಡಿರುವುದರಿಂದ ಮಕ್ಕಳಿಗೆ ರಾಮಾಯಣದ ಕುರಿತು ಅಭ್ಯಾಸ ಮಾಡುವುದಕ್ಕೆ ಅವಕಾಶ ಲಭಿಸಿದೆ ಎಂದರು.

ಇದನ್ನೂ ಓದಿ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ಎಲ್​. ನಾರಾಯಣಸ್ವಾಮಿ ನೇಮಕ

ಅಧ್ಯಕ್ಷತೆ ವಹಿಸಿದ್ದ ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ಟ ಮಾತನಾಡಿ, ನಮಗೆ ಸ್ವಾತಂತ್ರ್ಯ ಬಂದಮೇಲೇಯೇ ನಮ್ಮ ಸಂಸ್ಕೃತಿಯ, ಪರಂಪರೆಯ ಮೇಲೆ ಆಕ್ರಮಣ ಪ್ರಾರಂಭವಾಯಿತು. ಆದರೆ ಈ ದೇಶದಲ್ಲಿ ಅಭಾಸಾಪ ಚಟುವಟಿಕೆ ಪ್ರಾರಂಭವಾದ ನಂತರ ಆಕ್ರಮಣ ಕಡಿಮೆಯಾಗುತ್ತಿದೆ. ಆದರೂ ನಮ್ಮ ಸಮಾಜ ಮೌಲ್ಯದಿಂದ ದೂರವಾಗುತ್ತಿದೆ. ನಮ್ಮ ಸಂಸ್ಥೆಯ ಉದ್ದೇಶ ಭವಿಷ್ಯತ್ತಿನಲ್ಲಿ ಯುವ ಜನಾಂಗ ಸನ್ಮಾರ್ಗದಲ್ಲಿ ಸಾಗಬೇಕೆಂಬುದಾಗಿದೆ. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.

ಸಂಘಟಕಿ ಸುಜಾತಾ ಹೆಗಡೆ ಕಾಗಾರಕೊಡ್ಲು ಆಶಯ ಭಾಶಣ ಮಾಡಿ, ಜಗತ್ತಿನ ಅನೇಕ ರಾಷ್ಟ್ರಗಳು ಭಾರತೀಯ ಸಂಸ್ಕ್ರತಿಯನ್ನು ಗೌರವಿಸುತ್ತಿದೆ. ನಮ್ಮ ಮಕ್ಕಳಿಗೆ ರಾಷ್ಟ್ರೀಯತೆಯ ಅರಿವನ್ನು ಮೂಡಿಸಬೇಕು. ಸಮಷ್ಟಿಗೆ ತೊಡಕಾಗದ ಸಾಹಿತ್ಯ ಬರಬೇಕು. ರಾಮಾಯಣದಲ್ಲಿ ಲಕ್ಷ್ಮಣನ ಪಾತ್ರ ಆದರ್ಶ ಮತ್ತು ಆಪ್ತವಾಗಿದೆ. ನಮ್ಮ ವೇದಗಳು, ಪುರಾಣಗಳು, ಸಂಸ್ಕೃತಿಯನ್ನು ಗಟ್ಟಿಯಾಗಿ ಉಳಿಸಿಕೊಂಡು ಬಂದಿದೆ. ಆ ದೃಷ್ಟಿಯಿಂದ ನಮ್ಮ ನಾಡಿನ ಅನೇಕ ಜಿಲ್ಲೆಗಳಿಂದ ಬಂದ ಮಕ್ಕಳಿಗೆ ರಾಮಾಯಣದ ಕುರಿತು ತಮ್ಮ ಯೋಚನೆಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಇದನ್ನೂ ಓದಿ: Ind vs Aus : 3ನೇ ಪಂದ್ಯದ ವೇಳೆ ಆಟಗಾರರು ಸೃಷ್ಟಿಸಬಲ್ಲ ಕೆಲವು ಮೈಲುಗಲ್ಲುಗಳ ವಿವರ ಇಲ್ಲಿದೆ

ಶ್ರೀಮಾತಾ ವೈದಿಕ ಸಂಸ್ಕೃತ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಮಹೇಶ ಭಟ್ ಸ್ವಾಗತಿಸಿ, ನಿರ್ವಹಿಸಿ, ವಂದಿಸಿದರು. ಪ್ರೇರಣಾ ಭಟ್ಟ, ಸಿಂಧೂರಾ ಹೆಗಡೆ ಪ್ರಾರ್ಥಿಸಿದರು.

Continue Reading
Advertisement
PM Narendra Modi phone call to workers, who rescued from collapsed tunnel
ದೇಶ1 hour ago

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

mantralaya mutt
ಕರ್ನಾಟಕ2 hours ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ2 hours ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್3 hours ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ3 hours ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ3 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ3 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER4 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ4 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್4 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ21 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌