V Somanna not to be incharge of Chamarajanagar elections says local BJP V Somanna: ಚಾಮರಾಜನಗರ ಚುನಾವಣೆ ಉಸ್ತುವಾರಿಗೆ ಸೋಮಣ್ಣ ಬೇಡ, ವಿಜಯೇಂದ್ರ ಓಕೆ: ಬಿಜೆಪಿಯಲ್ಲಿ ಆಕ್ರೋಶ - Vistara News

ಕರ್ನಾಟಕ

V Somanna: ಚಾಮರಾಜನಗರ ಚುನಾವಣೆ ಉಸ್ತುವಾರಿಗೆ ಸೋಮಣ್ಣ ಬೇಡ, ವಿಜಯೇಂದ್ರ ಓಕೆ: ಬಿಜೆಪಿಯಲ್ಲಿ ಆಕ್ರೋಶ

ಸಚಿವ ವಿ. ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆ ವದಂತಿ ಇರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಚುನಾವಣಾ ಉಸ್ತುವಾರಿಯನ್ನು ಅವರಿಗೆ ವಹಿಸುವುದು ಬೇಡ. ಕಳೆದ ಚುನಾವಣೆಯಲ್ಲಿಯೂ ಅವರು ಬಿಜೆಪಿ ಪರ ಯಾವುದೇ ಪ್ರಚಾರವನ್ನು ಮಾಡಿಲ್ಲ ಎಂದು ಸ್ಥಳೀಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಪರ ಒಲವು ವ್ಯಕ್ತವಾಗಿದೆ.

VISTARANEWS.COM


on

V Somanna not to be incharge of Chamarajanagar elections says local BJP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ವಿಧಾನಸಭಾ ಚುನಾವಣೆ ಸಮೀಪವಾಗುತ್ತಿರುವ ಹೊತ್ತಿನಲ್ಲಿ ರಾಜಕೀಯ ಪಕ್ಷಗಳಲ್ಲಿ ಪ್ರಚಾರ ಸೇರಿದಂತೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ಇತ್ತ ಚುನಾವಣೆ (Karnataka Election 2023) ಸಂದರ್ಭದಲ್ಲಿ ನೆಚ್ಚಿನ ನಾಯಕರು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡರೆ ಸೂಕ್ತ ಎಂಬುದು ಆಯಾ ಭಾಗದ ನಾಯಕರ ಇಂಗಿತವೂ ಆಗಿದ್ದು, ಈ ಬಗ್ಗೆ ನಾಯಕರಲ್ಲಿ ಒತ್ತಡವನ್ನೂ ಹೇರುತ್ತಿರುತ್ತಾರೆ. ಈಗ ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಅಸಮಾಧಾನ ಕಾಣಿಸಿಕೊಂಡಿದೆ. ಸಚಿವ ವಿ. ಸೋಮಣ್ಣ (V Somanna) ಅವರಿಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಕೊಟ್ಟರೆ ಗೋ ಬ್ಯಾಕ್ ಚಳವಳಿ ಮಾಡುವ ಎಚ್ಚರಿಕೆ ಕೇಳಿಬಂದಿದೆ. ಬದಲಾಗಿ ಹಳೇ ಮೈಸೂರು ಭಾಗದ ಉಸ್ತುವಾರಿಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಸೋಮಣ್ಣ ಅವರಿಗೆ ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಬಾರದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಕಾರಣ, ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಊಹಾಪೋಹ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬಾರದು. ಕಳೆದ ಬಾರಿ ಚುನಾವಣೆಯಲ್ಲಿ ಸೋಮಣ್ಣ ನಮ್ಮ ಪಕ್ಷದ ಪರ ಕೆಲಸ‌ ಮಾಡಿಲ್ಲ. ನಮ್ಮ ಅಭ್ಯರ್ಥಿ ವಿರುದ್ಧ ಗೆದ್ದ ಅಭ್ಯರ್ಥಿಗೆ ಮನೆಯನ್ನೇ ಗಿಫ್ಟ್ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆಯಲ್ಲೂ ಪಕ್ಷದ ಪರ ಕೆಲಸ ಮಾಡಿಲ್ಲ. ಹೀಗಾಗಿ ಅವರಿಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ನೀಡಬಾರದು. ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಬಾರದು. ಅವರು ದೆಹಲಿಯಲ್ಲಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ನನಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಮತ್ತು ಟಿಕೆಟ್ ನೀಡಬೇಕು. ಇಲ್ಲವಾದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ” Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

ಸೋಮಣ್ಣ ನನಗೆ ಫೋನ್ ಮಾಡಿ ಸುದ್ದಿಗೋಷ್ಠಿ ಮಾಡಬೇಡಿ ಎಂದು ಹೇಳಿದರು. ಅವರು ಚಾಮರಾಜನಗರ ಜಿಲ್ಲೆಯಲ್ಲೇ ಸ್ಪರ್ಧೆ ಮಾಡಬಾರದು. ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಲು ಬಿಡಲ್ಲ. ಸೋಮಣ್ಣ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿಲ್ಲ. ಜನ ಸಂಕಲ್ಪ ರಥಯಾತ್ರೆಯಲ್ಲೂ ಪಾಲ್ಗೊಳ್ಳಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ರೀತಿ ನಡೆದುಕೊಂಡಿದ್ದಾರೆ. ಜಿಲ್ಲೆಗೆ ಸೋಮಣ್ಣ ಬೇಕು ಎಂಬುವವರು ಅವರ ಕೆಲವು ಬೆಂಬಲಿಗರು ಮಾತ್ರ. ಪಕ್ಷದ ಅಧಿಕಾರದಲ್ಲಿರುವವರು ಸೋಮಣ್ಣ ಜಿಲ್ಲೆಗೆ ಬೇಡ ಎಂದೇ ಹೇಳುತ್ತಾರೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

Board Exams : 5,8 ಮತ್ತು 9ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು (Paper Evaluation) ಮೂರೇ ದಿನದಲ್ಲಿ ಮುಗಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿತ್ತು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಆದೇಶವನ್ನು ವಾಪಸ್‌ ಪಡೆದಿದೆ.

VISTARANEWS.COM


on

By

Board Exam
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಇಂದಿನಿಂದ (ಮಾ.29) 5, 8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ (Paper Evaluation) ಶುರುವಾಗಿದೆ. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಆದೇಶದ ವಿರುದ್ಧ ಶಿಕ್ಷಕರು ಕಿಡಿಕಾರಿದ್ದರು. 1 ಕೋಟಿಗೂ ಅಧಿಕ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮೂರೇ ದಿನದಲ್ಲಿ ಮುಗಿಸುವಂತೆ ಆದೇಶ ಹೊರಡಿಸಿತ್ತು.

ಮೂರು ದಿನದಲ್ಲಿ ಮೌಲ್ಯಮಾಪನ ಮುಗಿಸಿ SATS ನಲ್ಲಿ ಅಪ್ ಲೋಡ್ ಮಾಡುವಂತೆ ಆದೇಶಿಸಿತ್ತು. 1.66 ಕೋಟಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ 3 ದಿನಗಳಲ್ಲಿ ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವಿಸಿತ್ತು. ಅನೇಕ ಒತ್ತಡಗಳ ಮಧ್ಯೆ ಶಿಕ್ಷರಿಗೆ ಮೌಲ್ಯಮಾಪನದ ಟಾಸ್ಕ್‌ ಭಯ ಹುಟ್ಟಿಸಿತ್ತು.

ಒಂದೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತೊಂದೆಡೆ ಪಬ್ಲಿಕ್‌ ಪರೀಕ್ಷೆ ಉತ್ತರ ಪತ್ರಿಕೆ ವ್ಯಾಲ್ಯುವೇಶನ್‌ ತಲೆನೋವು ತರಿಸಿತ್ತು. ಶಿಕ್ಷಣ ಇಲಾಖೆಯ ಅವೈಜ್ಞಾನಿಕ ಆದೇಶಕ್ಕೆ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳಿಂದ ವಿರೋಧ ವ್ಯಕ್ತವಾಗಿತ್ತು. ಶಿಕ್ಷಕರ ಕೊರತೆ ಮಧ್ಯೆ ಇಲಾಖೆಯ ಈ ನಿರ್ಧಾರ ಸರಿಯಲ್ಲ ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಕಿಡಿಕಾರಿದ್ದರು.

ಇದನ್ನೂ ಓದಿ: Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಯಾವುದೇ ಸಂಭಾವನೆ ಪ್ರಕಟಿಸದೆ ಶಿಕ್ಷಕರ ಮೇಲೆ ಹೀಗೆ ಒತ್ತಡ ಹೇರುತ್ತಿರುವುದು ಸರಿಯಲ್ಲ. ಈ ರೀತಿಯ ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳದಂತೆ ಇಲಾಖೆಗೆ ಮನವಿ ಮಾಡಿದ್ದರು. ಈ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದರು.

ಶಿಕ್ಷಕರ ಮನವಿಗೆ ಸ್ಪಂದಿಸಿ ಆದೇಶ ಹಿಂಪಡೆದ ಇಲಾಖೆ

ಶಿಕ್ಷಕರ ಮನವಿಗೆ ಸ್ಪಂದಿಸಿದ ಕರ್ನಾಟಕ ಪರೀಕ್ಷಾ ಹಾಗೂ ಮೌಲ್ಯ ನಿರ್ಣಯಕ ಪರೀಕ್ಷಾ ಮಂಡಳಿ ಹಳೇ ಆದೇಶವನ್ನು ತಿದ್ದುಪಡೆದಿದೆ. ಪ್ರಸ್ತುತ 8ನೇ ತರಗತಿ 50 ಹಾಗೂ 9ನೇ ತರಗತಿ 30 ಪತ್ರಿಕೆ ಮೌಲ್ಯ ಮಾಪನ ಮಾಡಲು ಸೂಚನೆ ನೀಡಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಚುನಾವಣಾ ಕಾರ್ಯ ಇರುವ ಹಿನ್ನೆಲೆಯಲ್ಲಿ ತಡ ಮಾಡದೇ ಮೌಲ್ಯ ಮಾಪನ ಮಾಡುವಂತೆ ತಿಳಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Utthana Essay Competition 2023:
ಕಾಲೇಜು ವಿದ್ಯಾರ್ಥಿಗಳಿಗೆ “ಕ್ರೀಡೆಯೆಂದರೆ ಕ್ರಿಕೆಟ್ ಮಾತ್ರವೇ? ಉಳಿದ ಕ್ರೀಡೆಗಳ ಬಗೆಗೆ ಭಾರತೀಯರಿಗೇಕೆ ನಿರಾಸಕ್ತಿ?” ಎಂಬ ವಿಷಯದ ಕುರಿತು ಉತ್ಥಾನ ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗಿತ್ತು. ಬೆಂಗಳೂರಿನ ಎಸ್-ವ್ಯಾಸ್ ವಿಶ್ವವಿದ್ಯಾಲಯದ ಕಾವ್ಯಜೋಗಿ ಪ್ರಥಮ ಸ್ಥಾನ ಪಡೆದಿದ್ದಾರೆ.

VISTARANEWS.COM


on

Utthana Essay Competition 2023
Koo

ಬೆಂಗಳೂರು: ಉತ್ಥಾನ ಮಾಸಪತ್ರಿಕೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ವಾರ್ಷಿಕ ಉತ್ಥಾನ ಪ್ರಬಂಧ ಸ್ಪರ್ಧೆಯ (Utthana Essay Competition 2023) ಫಲಿತಾಂಶ ಪ್ರಕಟವಾಗಿದೆ. “ಕ್ರೀಡೆಯೆಂದರೆ ಕ್ರಿಕೆಟ್ ಮಾತ್ರವೇ? ಉಳಿದ ಕ್ರೀಡೆಗಳ ಬಗೆಗೆ ಭಾರತೀಯರಿಗೇಕೆ ನಿರಾಸಕ್ತಿ?” ಎಂಬ ವಿಷಯದ ಕುರಿತು ರಾಜ್ಯದೆಲ್ಲೆಡೆಯ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ ಬರೆದಿದ್ದರು. ಈ ಸ್ಪರ್ಧೆಯಲ್ಲಿ ಬೆಂಗಳೂರಿನ ಎಸ್-ವ್ಯಾಸ್ ವಿಶ್ವವಿದ್ಯಾಲಯದ ಕಾವ್ಯಜೋಗಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಪ್ರಬಂಧ ಸ್ಪರ್ಧೆಯ ವಿಜೇತರನ್ನು ತೀರ್ಪುಗಾರರಾದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಹಾಗೂ ನಿವೃತ್ತ ಗ್ರಂಥಪಾಲಕ ಡಾ. ಎ. ನರೇಂದ್ರ ಅವರು ಆಯ್ಕೆ ಮಾಡಿದ್ದಾರೆ.

ವಿಜೇತರ ಪಟ್ಟಿ ಇಂತಿದೆ

ಮೊದಲ ಬಹುಮಾನ: (10,000 ರೂ)
ಕಾವ್ಯಜೋಗಿ, ಎಸ್-ವ್ಯಾಸ್ ವಿಶ್ವವಿದ್ಯಾಲಯ, ಬೆಂಗಳೂರು.

ಎರಡನೆಯ ಬಹುಮಾನ: (7,000 ರೂ.)
ಸ್ವಾತಿ ಇ.ಎಂ., ಬಿ.ಎ.ಎಂ.ಎಸ್. ಕಾಲೇಜು, ಬೆಂಗಳೂರು.

ಮೂರನೆಯ ಬಹುಮಾನ: (5,000 ರೂ.)
ಯಂಕನಗೌಡ, ಕಮಲಾ ಬಾಳಿಗಾ ಕಾಲೇಜು, ಕುಮಟಾ

ಹತ್ತು ಮೆಚ್ಚುಗೆಯ ಬಹುಮಾನಗಳು: ತಲಾ 2,000 ರೂ.

ಪ್ರತೀಕ್ಷಾ ಅಶೋಕ ಜಂತಿ, ಕೆ.ಆರ್.ಸಿ.ಎಸ್. ಪದವಿ ಮಹಾವಿದ್ಯಾಲಯ ಬೈಲಹೊಂಗಲ
ಅಮೃತಾ ರಾಜೇಂದ್ರ ಹೆಗಡೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿರಸಿ
ನಂದಕುಮಾರ್ ಯು.ಎಂ., ಶೇಷಾದ್ರಿಪುರಂ ಪ್ರಥಮದರ್ಜೆ ಕಾಲೇಜು, ಬೆಂಗಳೂರು
ಮೇಘಾ ಡಿ., ಅಂಬಿಕಾ ಮಹಾವಿದ್ಯಾಲಯ, ಬಪ್ಪಳಿಕೆ, ಪುತ್ತೂರು
ಪನ್ನಗ ಪಿ. ರಾಯ್ಕರ್, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಹೊಸದುರ್ಗ
ದರ್ಶನ್ ಎಸ್.ಎನ್., ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ, ಮೈಸೂರು
ಸಹನಾ ಎಂ., ಸೆಂಟ್ ಆನ್ಸ್ ಮಹಿಳಾ ಪದವಿ ಕಾಲೇಜು, ಬೆಂಗಳೂರು
ದೀಪಾ ಕೆ.ಬಿ., ಕಮಲಾ ಬಾಳಿಗ ಶಿಕ್ಷಣ ಮಹಾವಿದ್ಯಾಲಯ, ಕುಮಟಾ
ಶಿವಾನಿ ಬಿ. ಎಸ್., ಅಮೃತ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಪಡೀಲ್, ಮಂಗಳೂರು
ಪೃಥ್ವಿನಾಯಕ್, ಪೂರ್ಣಪ್ರಜ್ಞಾ ಕಾಲೇಜು, ಉಡುಪಿ

 Utthana Essay Competition 2023

ಇದನ್ನೂ ಓದಿ | Utthana Katha Spardhe: ಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2023; ಶಿರಸಿಯ ಕರುಣಾಕರ ಹಬ್ಬುಮನೆ ಪ್ರಥಮ

Continue Reading

Lok Sabha Election 2024

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Lok Sabha Election 2024: ಯತೀಂದ್ರ ಸಿದ್ದರಾಮಯ್ಯ ಅವರದ್ದು ಬಾಲಿಶ, ಬುದ್ಧಿಭ್ರಮಣೆಯ ಹಾಗೂ ಅಪ್ರಬುದ್ಧ ಹೇಳಿಕೆಯಾಗಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದರು. ಯತೀಂದ್ರ ಅವರಿಗೂ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ. ಗೂಂಡಾ ಗುರು ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನದ್ದು ಗೂಂಡಾ ಸಂಸ್ಕೃತಿಯಾಗಿದೆ ಎಂದು ಆರ್.‌ ಅಶೋಕ್‌ ಗುಡುಗಿದ್ದಾರೆ.

VISTARANEWS.COM


on

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ (BJP Karnataka) ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ (Rahul Gandhi) ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದರು.

ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ. ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ. ಈಗಾಗಲೇ ರಾಹುಲ್‌ ಗಾಂಧಿ ಬಾಲಿಶ ಹೇಳಿಕೆ ನೀಡಿ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಯತೀಂದ್ರ ಅವರೂ ಹೀಗೆ ಮಾತನಾಡುತ್ತಿದ್ದರೆ ಕೊನೆಗೆ ಜೈಲೇ ಗತಿಯಾಗಲಿದೆ. ಅವರು ಎಚ್ಚರದಿಂದ ಮಾತನಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಗೂಂಡಾ ಗುರು

ಯತೀಂದ್ರ ಅವರಿಗೆ ತಮ್ಮ ತಂದೆಯ ಗೂಂಡಾಗಿರಿ ಮಾತ್ರ ಕಣ್ಣಿಗೆ ಕಾಣುವುದಿಲ್ಲ. ರಾಜ್ಯದಲ್ಲೀಗ ಅಪ್ಪ-ಮಕ್ಕಳ ಗೂಂಡಾಗಿರಿ ಜಾರಿಯಲ್ಲಿದೆ. ಸದನದಲ್ಲಿ ಪೊಲೀಸರನ್ನು ಬೆದರಿಸುವುದು, ಸ್ಪೀಕರ್‌ಗೆ ಧಮ್ಕಿ ಹಾಕುವುದು ಮಹಿಳೆಯರ ಬಟ್ಟೆ ಎಳೆದು ದೌರ್ಜನ್ಯ ಮಾಡುವುದು, ಕಾರ್ಯಕರ್ತರ ಕಪಾಳಕ್ಕೆ ಹೊಡೆಯುವುದು-ಹೀಗೆ ಸಿಎಂ ಸಿದ್ದರಾಮಯ್ಯ ಮಾಡಿದ ರೌಡಿಸಂಗೆ ಲೆಕ್ಕವೇ ಇಲ್ಲ. ಪ್ರಧಾನಿಗೆ, ರಾಷ್ಟ್ರಪತಿಗೆ ಅವನು, ಇವಳು ಎಂದು ಕರೆಯುವವರು, ಪ್ರಧಾನಿಗೆ ಹೊಡೆಯುತ್ತೇನೆ ಎನ್ನುವವರು ನಿಜವಾದ ಗೂಂಡಾಗಳು. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದರೆ ಇವರು ನಡೆಸುವುದು ರಾವಣ ರಾಜ್ಯ. ಯತಿ ಎಂದರೆ ಸನ್ಯಾಸಿ. ಆದರೆ ಇವರ ಬಾಯಲ್ಲಿ ಬರುವ ಮಾತು ರಾಕ್ಷಸನಂತಿದೆ. ಇವರ ಹೆಸರಿಗೂ ಮಾತಿಗೂ ಸಂಬಂಧವೇ ಇಲ್ಲ ಎಂದರು.

ರಾಜ್ಯದಲ್ಲಿ ಗೂಂಡಾ ಸರ್ಕಾರವಿದ್ದು, ಸಿಎಂ ಸಿದ್ದರಾಮಯ್ಯ ಗೂಂಡಾಗುರುವಾಗಿ ವರ್ತಿಸುತ್ತಿದ್ದಾರೆ. ಕರಸೇವಕರನ್ನು ಬಂಧಿಸಿ, ಹನುಮ ಧ್ವಜ ಇಳಿಸಿ, ಮುಸ್ಲಿಂ ದಂಗೆಕೋರರಿಗೆ ಆಶ್ರಯ ನೀಡಿದ್ದು ಇದೇ ಗೂಂಡಾ ಕಾಂಗ್ರೆಸ್‌. ಹನುಮಾನ್‌ ಚಾಲಿಸಾ ಹಾಕಿದ್ದಕ್ಕೆ ಹೊಡೆದವರು ಹಾಗೂ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದವರು ಗೂಂಡಾ ಕಾಂಗ್ರೆಸ್ಸಿಗರೇ ಆಗಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಯಾರು ಗೂಂಡಾ ಎಂದು ಪಾಠ ಕಲಿಸಲಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

ಸಮನ್ವಯ ಸಭೆ

ಬಿಜೆಪಿ-ಜೆಡಿಎಸ್‌ ಹಾಲು ಜೇನಿನಂತೆ ಕೆಲಸ ಮಾಡುತ್ತಿದೆ. ಇನ್ನಷ್ಟು ಚೆನ್ನಾಗಿ ಕಾರ್ಯನಿರ್ವಹಿಸಲು ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಸಭೆ ನಡೆಸಲಾಗುವುದು. ರೈತರಿಗೆ ಪರಿಹಾರ ಕೊಡದ, ಕುಡಿಯುವ ನೀರು ಕೊಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ. ಇಂತಹ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಬೇಕು ಎಂದು ಮನವಿ ಮಾಡಿದರು.

Continue Reading

ಕೊಡಗು

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Kodagu University : ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದರ ಜತೆಗೆ ಯುವಜನರಿಗೆ ಉದ್ಯೋಗ ಸೃಷ್ಟಿಯತ್ತ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಕೊಡಗು ವಿವಿಯ ಕುಲಪತಿ ಪ್ರೊ.ಅಶೋಕ್‌ ಸಂಗಪ್ಪ ಆಲೂರ್‌ (Prof Ashok Sangappa Alur) ತಿಳಿಸಿದ್ದಾರೆ.

VISTARANEWS.COM


on

By

Kodagu University
Koo

ಕೊಡಗು: ಕೊಡಗು ವಿಶ್ವವಿದ್ಯಾನಿಲಯದಲ್ಲಿ (Kodagu University) ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್ ಅವರು ತಿಳಿಸಿದ್ದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರ ನಡೆದ ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾನಿಲಯದಲ್ಲಿ ಹಲವು ಇತಿಮಿತಿಗಳ ನಡುವೆ ಧನಾತ್ಮಕ ಚಿಂತನೆ ಒಳಗೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಯುವಜನರಿಗೆ ಉದ್ಯೋಗ ಸೃಷ್ಟಿಯತ್ತ ವಿಶೇಷ ಆದ್ಯತೆ ನೀಡಲಾಗಿದೆ. ಕೊಡಗು ವಿಶ್ವವಿದ್ಯಾನಿಲಯದಲ್ಲಿ (Kodagu University ) ಬಿಸಿಎ, ಎಂಸಿಎ, ಎಂಬಿಎ, ಪದವಿ, ಸ್ನಾತಕೋತ್ತರ ಪದವಿ ಆರಂಭಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಅಶೋಕ್ ಸಂಗಪ್ಪ ಆಲೂರ್ ಅವರು ಹೇಳಿದರು.

ವಿನೂತನ ಪಠ್ಯ ಅಗತ್ಯ- ಪ್ರೊ. ಬಿ.ಕೆ ರವಿ

ಕೊಡಗು ವಿಶ್ವವಿದ್ಯಾನಿಲಯವು (Kodagu University ) ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಈ ನಿಟ್ಟಿನಲ್ಲಿ ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ (Kopala University) ಕುಲಪತಿ ಪ್ರೊ.ಬಿ.ಕೆ.ರವಿ (BK Ravi) ಅಭಿಪ್ರಾಯ ವ್ಯಕ್ತಪಡಿಸಿದರು. ಈಗಾಗಲೇ ಏಳು ವಿಶ್ವವಿದ್ಯಾನಿಲಯಗಳು ಸ್ಥಾಪನೆಯಾಗಿದ್ದು, ವಿಶ್ವವಿದ್ಯಾನಿಲಯಗಳು ವಿನೂತನ ಪಠ್ಯ ಚಟುವಟಿಕೆಗಳನ್ನು ಅಳವಡಿಸಿಕೊಂಡು ಅಭಿವೃದ್ಧಿಯತ್ತ ಹೆಜ್ಜೆ ಇಡಬೇಕು ಎಂದು ಬಿ.ಕೆ.ರವಿ ಅವರು ಪ್ರತಿಪಾದಿಸಿದರು.

ಆಧುನಿಕ ಬದುಕಿನಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಬದಲಾವಣೆಗಳತ್ತ ವಿಶ್ವವಿದ್ಯಾನಿಲಯಗಳು ಸಾಗಬೇಕು. ಮಾನವಿಕ ಪದವಿಗಳ ಜತೆ ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಸಿಕೊಂಡು ಅಭಿವೃದ್ಧಿಯತ್ತ ದಾಪುಗಾಲು ಹಾಕಬೇಕು ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ರವಿ ತಿಳಿಸಿದರು. ಹೊಸ ವಿಶ್ವವಿದ್ಯಾನಿಲಯಗಳು ಹಲವು ಸಮಸ್ಯೆ ಮತ್ತು ಸವಾಲುಗಳ ನಡುವೆಯೂ ಸಹ ಯುವಜನರಿಗೆ ಉನ್ನತ ಶಿಕ್ಷಣ ಕಲ್ಪಿಸುವತ್ತ ಗಮನಹರಿಸಬೇಕು. ಪ್ರಸ್ತುತ ಬೇಡಿಕೆಗೆ ತಕ್ಕಂತೆ ಯುವ ಜನರಿಗೆ ಉನ್ನತ ಶಿಕ್ಷಣ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

ಜ್ಞಾನ ಇದ್ದಲ್ಲಿ ಅಜ್ಞಾನಕ್ಕೆ ಅವಕಾಶವಿಲ್ಲ

ಹಾಸನ ವಿಶ್ವವಿದ್ಯಾನಿಲಯದ (Hasana University) ಕುಲಪತಿ ಪ್ರೊ.ತರಿಕೆರೆ ಚಂದ್ರಶೇಖರ ತಾರಾನಾಥ್ ಅವರು ಮಾತನಾಡಿ ವರ್ಷದಿಂದ ವರ್ಷಕ್ಕೆ ವಾತಾವರಣದಲ್ಲಿ ಬದಲಾವಣೆ ಕಂಡು ಬರುತ್ತಿದ್ದು, ಪ್ರಾಕೃತಿಕ ಪರಿಸರ ಹಾಗೂ ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳು ಜಲಸಂರಕ್ಷಣೆ, ವಾತಾವರಣದಲ್ಲಿನ ಬದಲಾವಣೆ ಮತ್ತಿತರ ವಿಷಯಗಳ ಕುರಿತು ವಿಶ್ವವಿದ್ಯಾನಿಲಯಗಳಲ್ಲಿ ಹೆಚ್ಚಿನ ಅಧ್ಯಯನ ಮಾಡುವಂತಾಗಬೇಕು ಎಂದರು. ಜ್ಞಾನ ಇದ್ದಲ್ಲಿ ಅಜ್ಞಾನಕ್ಕೆ ಅವಕಾಶ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜತೆಗೆ ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸುವಂತಾಗಬೇಕು ಎಂದು ತಾರಾನಾಥ್ ಅವರು ಪ್ರತಿಪಾದಿಸಿದರು.

ವಿಜ್ಞಾನ, ತಂತ್ರಜ್ಞಾನ, ಗಣಿತ, ಸಾಮಾಜಿಕ ವಿಜ್ಞಾನ, ಹೀಗೆ ಹಲವು ವಿಷಯಗಳ ಕುರಿತು ಉನ್ನತ ಶಿಕ್ಷಣ ನೀಡುವುದು ವಿಶ್ವವಿದ್ಯಾನಿಲಯದ್ದಾಗಿದೆ. ಆ ನಿಟ್ಟಿನಲ್ಲಿ ಜ್ಞಾನವೇ ಶಕ್ತಿ ಎಂಬುದನ್ನು ಯಾರೂ ಸಹ ಮರೆಯಬಾರದು. ವಿಶ್ವವಿದ್ಯಾನಿಲಯದಲ್ಲಿ ಯುವಜನರು ಉನ್ನತ ಶಿಕ್ಷಣ ಪಡೆಯುವ ಮೂಲಕ ಉತ್ತಮ ವ್ಯಕ್ತಿತ್ವ ಹೊಂದಬೇಕು. ಉನ್ನತ ಶಿಕ್ಷಣ ಪಡೆದು ಯಶಸ್ಸು ಸಾಧಿಸಬೇಕು ಎಂದರು.

ತಂತ್ರಜ್ಞಾನದೊಂದಿಗೆ ಪರಿವರ್ತನೆ

ಹಾವೇರಿ ವಿಶ್ವವಿದ್ಯಾನಿಲಯದ (Haveri University) ಕುಲಪತಿ ಪ್ರೊ.ಸುರೇಶ್ ಎಚ್.ಜಂಗಮಶೆಟ್ಟಿ ಅವರು ಮಾತನಾಡಿ ಪ್ರತಿಯೊಬ್ಬರಲ್ಲಿಯೂ ಸಹ ಸಾಮಾಜಿಕ ಕಳಕಳಿ ಇರಬೇಕು. ಸಾಮಾಜಿಕ ಕಳಕಳಿ ಇದ್ದಲ್ಲಿ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು. ಆಧುನಿಕ ಬದುಕಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಹ ಗಣಕಯಂತ್ರ ಇದ್ದು, ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರಿವರ್ತನೆಗೆ ಮುಂದಾಗಬೇಕು. ಸ್ಥಳೀಯ ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸಿ ಬೆಳೆಸಬೇಕು ಎಂದು ಪ್ರೊ.ಸುರೇಶ್ ಅವರು ಹೇಳಿದರು.

ಕೊಡಗು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಸೀನಪ್ಪ, ಬರೋಡ ಬ್ಯಾಂಕಿನ ಮಂಗಳೂರು ವಲಯ ಮುಖ್ಯಸ್ಥರಾದ ವ್ಯವಸ್ಥಾಪಕರಾದ ಗಾಯತ್ರಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರೊ.ರಾಘವ, ಸಿಂಡಿಕೇಟ್ ಸದಸ್ಯ ಕೆ.ಎನ್.ಜನಾರ್ಧನ್, ಪ್ರಾಧ್ಯಾಪಕರಾದ ಜಮೀರ್ ಅಹ್ಮದ್ , ಜಯಶಂಕರ್, ಶ್ರೀಧರ ಹೆಗಡೆ ಇತರರು ಭಾಗಿಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Board Exam
ಬೆಂಗಳೂರು50 seconds ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ12 mins ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Utthana Essay Competition 2023
ಕರ್ನಾಟಕ33 mins ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 202435 mins ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು35 mins ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ39 mins ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ52 mins ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 202457 mins ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

IPL 2024
ಕ್ರೀಡೆ1 hour ago

IPL 2024: ಹಾರ್ದಿಕ್​ ಪಾಂಡ್ಯ ಮೇಲೆ ಬೌಲಿಂಗ್​ ಕೋಚ್​ ಮುನಿಸು; ವಿಡಿಯೊ ವೈರಲ್​​

Sringeri Shankar Mutt
ಮೈಸೂರು1 hour ago

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌