Site icon Vistara News

Vajida Banu | ನವ ದೆಹಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾ ಬಾನು ಆಯ್ಕೆ

Vajida Banu

ಮಂಗಳೂರು: ನವ ದೆಹಲಿಯಲ್ಲಿ 2023ರ ಜನವರಿ 26ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಫರೇಡ್‌ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾ ಬಾನು (Vajida Banu) ಆಯ್ಕೆಯಾಗಿದ್ದಾರೆ. ಎನ್‌ಎಸ್‌ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್‌ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರೂ ಒಬ್ಬರಾಗಿದ್ದಾರೆ.

ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ. ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿ ಪುತ್ರಿಯಾದ ಇವರು, ಎ.ಜೆ. ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿದ್ದಾರೆ. ಪ್ರಸ್ತುತ ಸಾಲಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯದಿಂದ ಆರು ವಿಷಯಗಳಲ್ಲಿ ವಜೀದಾ ಬಾನು ರ‍್ಯಾಂಕ್‌ ಪಡೆದಿದ್ದಾರೆ.

ಇದನ್ನೂ ಓದಿ | New Year 2023 | ಹೊಸ ವರ್ಷಕ್ಕೆ ರಾಜಧಾನಿಯಲ್ಲಿ ಖಾಕಿ ಹೈ ಅಲರ್ಟ್‌; ಏನೆಲ್ಲ ಇದೆ ರೂಲ್ಸ್‌?

Exit mobile version