Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು? - Vistara News

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ರಿಕವರಿ ಮಾಡಿರುವ ಹಣ ಕೋರ್ಟ್ ಅಕೌಂಟ್‌ಗೆ ಜಮೆ ಮಾಡುತ್ತಿದ್ದಾರೆ. ಶನಿವಾರವೂ ಕೂಡ 10 ಕೋಟಿ ರೂ.ಗಳನ್ನು ವಶಕ್ಕೆ ಪಡೆಯಾಗಿದೆ.

VISTARANEWS.COM


on

Valmiki Corporation Scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಲ್ಮೀಕಿ ನಿಗಮ ಬಹುಕೋಟಿ ಹಗರಣದಲ್ಲಿ (Valmiki Corporation Scam) ಇನ್ನು 10 ಕೋಟಿ‌ ರೂ.ಗಳನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಬಾರ್‌ಗಳು, ಚಿನ್ನದ‌ ಅಂಗಡಿಗಳಿಗೆ ವರ್ಗಾವಣೆ ಆಗಿದ್ದ ಹಣ ವಶಕ್ಕೆ ಪಡೆಯಲಾಗಿದೆ. ಕರ್ನಾಟಕ, ಆಂಧ್ರದಲ್ಲಿನ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಚುರುಕಗೊಳಿಸಿದೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ರಿಕವರಿ ಮಾಡಿರುವ ಹಣ ಕೋರ್ಟ್ ಅಕೌಂಟ್‌ಗೆ ಜಮೆ ಮಾಡಲಾಗುತ್ತಿದೆ. ದೊಡ್ಡ ಮೊತ್ತದ ಹಣವನ್ನು ಸಿಐಡಿ ಕಚೇರಿಯಲ್ಲಿಡುವುದು ಕಷ್ಟ. ಭದ್ರತಾ ದೃಷ್ಟಿಯಿಂದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಕೋರ್ಟ್ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ಜಮಾ ಮಾಡಿದ್ದಾರೆ. ನೆನ್ನೆಯಿಂದ ದಿನಕ್ಕೆ ನಾಲ್ಕು ಕೋಟಿಯಂತೆ ಹಣ ಜಮೆ ಮಾಡಲಾಗುತ್ತಿದೆ. ಇದುವರೆಗೂ ಸುಮಾರು 28 ಕೋಟಿ ಹಣ ರಿಕವರಿ ಆಗಿದೆ.

28 ಕೋಟಿ ಹಣವಮ್ನ ಒಟ್ಟಿಗೆ ಜಮೆ ಮಾಡೋದು ಕಷ್ಟ. ಹೀಗಾಗಿ ಅಷ್ಟು ಹಣ ಎಣಿಕೆ ಮಾಡಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ದಿನಕ್ಕೆ ನಾಲ್ಕು ಕೋಟಿ ಹಣವನ್ನು ಮಾತ್ರ ಬ್ಯಾಂಕ್‌ಗೆ ಜಮೆ ಮಾಡಲಾಗುತ್ತಿದೆ.

  • ಮಾರ್ಚ್ 30ರಂದು ನವೀನ್ ಜಿ ಮಾಲೀಕತ್ವದ ಜಿ.ಎನ್ ಇಂಡಸ್ಟ್ರೀಸ್ ಕಂಪನಿ ಹೆಸರಲ್ಲಿ 4.42 ಕೋಟಿ ವರ್ಗಾವಣೆ ಆಗಿತ್ತು.
  • ವಿಜಯ್ ಕೃಷ್ಣ ಆರ್ ಮಾಲೀಕತ್ವದ ರಾಮ್ ಎಂಟರ್ ಪ್ರೈಸಸ್ ಖಾತೆಗೆ 5.7 ಕೋಟಿ ಹಣ ವರ್ಗಾವಣೆ .
  • ರಾಘವೇಂದ್ರ ಅವರ ನೋವೆಲ್ ಸೆಕ್ಯೂರಿಟಿ ಸರ್ವಿಸಸ್ ಪ್ರೈ.ಲಿ.ಕಂಪನಿ ಹೆಸರಿನ ಖಾತೆಗೆ 4 ಕೋಟಿ ಹಣ ವರ್ಗಾವಣೆ.
  • ರೇಖಾ ಎಂಬುವವರ ಮಾಲೀಕತ್ವದ ಸುಜಲ್ ಎಂಟರ್ ಪ್ರೈಸಸ್ ಹೆಸರಿನ ಖಾತೆಗೆ 5.63 ಕೋಟಿ ಹಣ ವರ್ಗಾವಣೆ.

ಎಲ್ಲಾ ಕಂಪನಿ ಹೆಸರಲ್ಲಿ ನಕಲಿ ಖಾತೆ ತೆಗೆದು ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಖಾತೆ ಓಪನ್ ಮಾಡಿದ್ದ ಆಸಾಮಿಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಖಾತೆಗಳಿಗೆ ಹಣ ಜಮೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ | Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ರಾಜೀನಾಮೆ (Resignation) ನೀಡಿರುವ ಮಾಜಿ ಸಚಿವ ನಾಗೇಂದ್ರ (Ex Minister Nagendra) ಸಿಬಿಐ (CBI) ತನಿಖಾ ಸಂಸ್ಥೆಯಿಂದ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣವಾಗಿ ನಾಗೇಂದ್ರ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ.

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆಯ ಬಳಿಕ ನಿಗಮದ ಹಗರಣ ಬೆಳಕಿಗೆ ಬಂದಿತ್ತು. ನಿಗಮದ 186 ಕೋಟಿ ರೂ. ಹಣವನ್ನು ಅಕ್ರಮವಾಗಿ ಅನ್ಯ ರಾಜ್ಯದ ಖಾತೆಗಳಿಗೆ ವರ್ಗಾವಣೆ ಮಾಡಿಸಿದ್ದನ್ನು ಚಂದ್ರಶೇಖರ್‌ ಡೆತ್‌ನೋಟ್‌ ಬೆಳಕಿಗೆ ಬಂದಿತ್ತು. ನಂತರ ಈ ವಿಚಾರದಲ್ಲಿ ಬಿಜೆಪಿ ರಾಜ್ಯವ್ಯಾಪಿ ತೀವ್ರ ಪ್ರತಿಭಟನೆಗೆ ಇಳಿದಿತ್ತು. ಇದರಿಂದ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಅಧಿಕಾರಿಗಳ ಮೇಲೆ ಸರಕಾರ ಕ್ರಮ ಕೈಗೊಂಡು ತನಿಖೆಗೆ ಎಸ್‌ಐಟಿ ರಚಿಸಿತ್ತು. ಒತ್ತಡ ಹೆಚ್ಚಿದ ಪರಿಣಾಮ ಸಚಿವ ನಾಗೇಂದ್ರ ತಲೆದಂಡವೂ ಆಗಿತ್ತು.

ಈ ನಡುವೆ, ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ | Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

ಈ ಪ್ರಕರಣದಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ ಹಗರಣದಲ್ಲಿ ಸಿಬಿಐ ಸಹ ಎಂಟ್ರಿ ಆಗಿದೆ. ನೂರು ಕೋಟಿಗೂ ಮಿಕ್ಕಿದ ಹಣದ ಅವ್ಯವಹಾರ ಆಗಿರುವುದರಿಂದ ಸಿಬಿಐ ತನ್ನದೇ ರೀತಿಯಲ್ಲಿ ತನಿಖೆ ಆರಂಭಿಸಿದೆ. ಹೀಗಾಗಿ ನಾಗೇಂದ್ರಗೆ ಬಂಧನದ ಭೀತಿ ಶುರುವಾಗಿದೆ. ರಾಜೀನಾಮೆ ಕೊಟ್ಟ ಬಳಿಕ ನಾಗೇಂದ್ರ ಎಲ್ಲೂ ಕಾಣಿಸಿಕೊಂಡಿಲ್ಲ. ಅತ್ತ ಪಕ್ಷದ ಕೆಲಸದಲ್ಲೂ ಕಾಣಿಸಿಕೊಳ್ಳುತ್ತಿಲ್ಲ; ಇತ್ತ ಕ್ಷೇತ್ರದಲ್ಲೂ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ, ಬಂಧನದ ಭೀತಿಯಿಂದ ಹಿನ್ನೆಲೆಯಲ್ಲಿ ಉಳಿದಿರಬಹುದು ಎಂದು ಭಾವಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

MUDA site scandal: ಮುಡಾದಲ್ಲಿ 5000ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಬಗ್ಗೆ ಆರೋಪಗಳು ಕೇಳಿಬಂದಿರುವ ಬಗ್ಗೆ ಎಂದು ವಿಸ್ತಾರ ನ್ಯೂಸ್‌ ವಿಶೇಷ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ಹಗರಣದ ತನಿಖೆಗೆ ಆದೇಶ ನೀಡಿದೆ.

VISTARANEWS.COM


on

MUDA site scandal
Koo

ಮೈಸೂರು: ನಿಯಮಬಾಹಿರವಾಗಿ ಹಂಚಿಕೆಯಾದ ಮುಡಾ ನಿವೇಶನಗಳನ್ನು ರಾಜ್ಯ ಸರ್ಕಾರ ರದ್ದು ಮಾಡಿದ್ದು, ಮುಡಾ ನಿವೇಶನ ಹಂಚಿಕೆ ಹಗರಣದ (MUDA site scandal) ತನಿಖೆಗೆ ಆದೇಶ ಹೊರಡಿಸಿದೆ. ಈ ಸಂಬಂಧ ತನಿಖಾ ತಂಡ ರಚಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಆದೇಶ ಹೊರಡಿಸಿದ್ದಾರೆ. ಹಗರಣದ ಬಗ್ಗೆ 15 ದಿನಗಳ ಒಳಗೆ ಸಮಗ್ರ ವರದಿ ನೀಡಲು ತನಿಖಾ ತಂಡಕ್ಕೆ ಸೂಚನೆ ನೀಡಲಾಗಿದ್ದು, ತನಿಖಾ ವರದಿಯೊಂದಿಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಸ್ಪಷ್ಟ ಅಭಿಪ್ರಾಯ ನೀಡಲು ತನಿಖಾ ತಂಡಕ್ಕೆ ಸೂಚಿಸಲಾಗಿದೆ.

ಮುಡಾದಲ್ಲಿ 5000ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಬಗ್ಗೆ ಆರೋಪಗಳು ಕೇಳಿಬಂದಿರುವ ಬಗ್ಗೆ ಎಂದು ವಿಸ್ತಾರ ನ್ಯೂಸ್‌ ವಿಶೇಷ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ, ತನಿಖೆಗೆ ಆದೇಶ ನೀಡಿದೆ. ತನಿಖಾ ತಂಡಕ್ಕೆ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ ಅಧ್ಯಕ್ಷರಾಗಿದ್ದು, ಹೆಚ್ಚುವರಿ ನಿರ್ದೇಶಕ ಎಂ.ಸಿ. ದಿನೇಶ್, ಶಶಿಕುಮಾರ್, ಜಂಟಿ ನಿರ್ದೇಶಕಿ ಶಾಂತಲಾ, ಉಪ ನಿರ್ದೇಶಕ ಪ್ರಕಾಶ್ ಸದಸ್ಯರಾಗಿದ್ದಾರೆ. ಇನ್ನು ತನಿಖಾ ತಂಡಕ್ಕೆ ನೆರವು ನೀಡಲು ಮುಡಾ ಆಯುಕ್ತರಿಗೆ ಕಟ್ಟಪ್ಪಣೆ ನೀಡಲಾಗಿದೆ. ಮುಡಾಕ್ಕೆ ನಿಯಮ ಬಾಹಿರವಾಗಿ ನಷ್ಟ ಉಂಟು ಮಾಡಿದ ಬಗ್ಗೆ ದೂರು ಬಂದ ಹಿನ್ನೆಲೆ ತನಿಖೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ಅಧಿಕಾರಿಗಳ ತಲೆದಂಡ

50:50 ಅನುಪಾತದಡಿ ಹಂಚಿಕೆ ಆಗಿರುವ ನಿವೇಶನಗಳ ರದ್ದು ಮಾಡಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಮುಡಾ ಆಯುಕ್ತ, ಕಾರ್ಯದರ್ಶಿ, ಇಂಜಿನಿಯರ್ ತಲೆದಂಡ ಆಗಿದ್ದು, ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಕಾರ್ಯದರ್ಶಿ ಶೇಖರ್ ಸೇರಿದಂತೆ ಶಾಮೀಲಾದ ಅಧಿಕಾರಿಗಳ ಎತ್ತಂಗಡಿಗೆ ಸರ್ಕಾರ ಆದೇಶ ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಗರಣ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಸಚಿವ ಭೈರತಿ ಸುರೇಶ ಅವರು ಇಂದು ದಿಢೀರ್‌ ಮೈಸೂರಿಗೆ ಧಾವಿಸಿದ್ದರು. ಅವರು ಮುಡಾ ಸದಸ್ಯರು, ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದ ಬೆನ್ನಲ್ಲೇ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ.

ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಭೈರತಿ ಸುರೇಶ್ ಮಾತನಾಡಿ, ನಾನು ರೈತರ ಪರವಾಗಿದ್ದೇನೆ. ರೈತನಿಗೆ ಅನ್ಯಾಯವಾಗಿದ್ದರೆ ಶಿಸ್ತುಕ್ರಮ ಆಗುತ್ತೆ. ಜನಪ್ರತಿನಿಧಿ, ಅಧಿಕಾರಿಗಳು ಯಾರೇ ಆಗಿರಲಿ ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳವರೆಗೆ ಪ್ರಾಧಿಕಾರದ ಸಭೆ ನಡೆಸುವಂತಿಲ್ಲ.‌ ರಸ್ತೆ, ನೀರು, ವೇತನದಂತಹ ವಿಷಯದಲ್ಲಿ ತೀರ್ಮಾನ ಕೈಗೊಳ್ಳಬಹುದು. ಸೈಟ್ ಕೊಡುವಂತಹ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ ಎಂದು ಹೇಳಿದರು.

ಇದನ್ನೂ ಓದಿ | Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

ಹಗರಣದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಪಾತ್ರ ಕಿಂಚಿತ್ತೂ ಇಲ್ಲ. ಸಾಕ್ಷ್ಯ ಇದ್ದರೆ ವಿಶ್ವನಾಥ್ ಕೊಡಲಿ. ಗಾಳಿಯಲ್ಲಿ ಗುಂಡು ಹೊಡೆಯಬಾರದು. ವಿಶ್ವನಾಥ್‌ ನನ್ನ ಬಳಿಯೇ ಪೈಲ್ ತಗೊಂಡು ಬಂದಿದ್ದರು. ಅವರು ಎಲ್ಲರ ಮೇಲೂ ಆಪಾದನೆ ಮಾಡಿದ್ದಾರೆ. ವಯಸ್ಸಿನಲ್ಲಿ ವಿಶ್ವನಾಥ್ ದೊಡ್ಡವರು. ಅವರ ಮಟ್ಟಕ್ಕೆ ಇಳಿದು ನಾನು ಮಾತನಾಡಲ್ಲ ಎಂದು ಟಾಂಗ್ ನೀಡಿದರು.

Continue Reading

ಮಳೆ

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಸೋಮವಾರ ದಾವಣಗೆರೆ, ಕೊಡಗು ಸುತ್ತಮುತ್ತ ಮಳೆಯಾಗಿದ್ದು, ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇತ್ತು. ಜು.2ರಂದು ರಾಜ್ಯಾದ್ಯಂತ ಮಳೆಯಾಗುವ (Rain News) ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ದಾವಣಗೆರೆ: ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗದಲ್ಲಿ ಮಳೆಯು (Rain News) ಅಬ್ಬರಿಸುತ್ತಿದೆ. ಸೋಮವಾರ (ಜು.1) ದಾವಣಗೆರೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ (Karnataka weather Forecast) ಮಳೆಯಾಗಿದೆ. ನಗರದ ಕೆಬಿ ಬಡಾವಣೆ, ಪಿಜೆ ಬಡಾವಣೆಯ ರಸ್ತೆಗಳಲ್ಲಿ ನೀರು ತುಂಬಿ ಹರಿದಿದೆ. ಇತ್ತ ಕೊಡಗಿನಲ್ಲೂ ಆರಿದ್ರಾ ಮಳೆ ಅಬ್ಬರಕ್ಕೆ ನದಿ ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಪಂಚಗಂಗಾ ಒಳಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ. ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ. ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರ ಬಳಿ ಇರುವ ಸೇತುವೆ ಮುಳುಗಡೆಗೊಂಡಿದ್ದು, ವಾಹಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಇತ್ತ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೊಲ್ಹಾಪುರ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

ಒಳನಾಡಿನಲ್ಲಿ ಮುಂಗಾರು ಸಕ್ರಿಯ

ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಕ್ರಿಯವಾಗಿದ್ದರೆ, ಕರಾವಳಿಯಲ್ಲಿ ಸಾಧಾರಣವಾಗಿತ್ತು. ಕೊಡಗಿನ ವಿರಾಜಪೇಟೆಯಲ್ಲಿ 13 ಸೆಂ.ಮೀ ಮಳೆಯಾಗಿದೆ. ಜತೆಗೆ ಭಾಗಮಂಡಲ 11, ಆಗುಂಬೆ 9, ಸಿದ್ದಾಪುರ 8, ಕಮ್ಮರಡಿ 8 ಹಾಗೂ ಕುಂದಾಪುರ 7 ಸೆಂ.ಮೀ ಮಳೆಯಾಗಿದೆ. ಉಳಿದಂತೆ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ.

ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ

ಜು.2ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಅಬ್ಬರವು ತಗ್ಗಿದೆ. ಉತ್ತರ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ತಲುಪಲಿದೆ. ದಕ್ಷಿನ ಒಳನಾಡಿನ ಹಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದ್ದು, ಗರಿಷ್ಟ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 27 ಹಾಗೂ 21 ಡಿ.ಸೆ ಇರಲಿದೆ.

ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಜಾರುವ ಬಂಡೆಗಳ ಮೇಲೆ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಜಲಪಾತಗಳ ಮಧ್ಯೆ ಹೋಗಿ ಜಾರುವ ಬಂಡೆಗಳ ಮೇಲೆ ಸ್ವಲ್ಪ ಯಾಮಾರಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಬಂಡೆಗಳ ಮೇಲೆ ಹತ್ತಿ ಅಪಾಯದ ಸ್ಥಳದಲ್ಲಿ ಡ್ಯಾನ್ಸ್ ಮಾಡುತ್ತಾ ಮೋಜು ಮಸ್ತಿ ಮಾಡುತ್ತಿದ್ದಾರೆ. ನಿರಂತರವಾಗಿ ನೀರು ಹರಿದು ಬಂಡೆ ತೀವ್ರವಾಗಿ ಜಾರುತ್ತಿರುತ್ತೆ. ಈ ಹಿಂದೆಯೂ ಬಿದ್ದು ಕೈ-ಕಾಲು ಮುರಿದುಕೊಂಡಿದ್ದಾರೆ, ಜೀವ ಕಳೆದುಕೊಂಡಿದ್ದಾರೆ. ಬಂಡೆಗಳ ಮೇಲೆ ಹತ್ತದಂತೆ ನಾಮಫಲಕ ಇದ್ದರೂ ಪ್ರವಾಸಿಗರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಇತ್ತ ಪೊಲೀಸರು ಗಸ್ತು ತಿರುಗುತ್ತಿದ್ದರೂ ಕಣ್ತಪ್ಪಿಸಿ ಬಂಡೆ ಹತ್ತುತ್ತಿದ್ದಾರೆ. ಜಲಪಾತಗಳ ಬಳಿ ಕಾರು ನಿಲ್ಲಿಸಿಕೊಂಡು ರಸ್ತೆ ಬದಿಯೂ ಕುಣಿದು ಕುಪ್ಪಳಿಸುತ್ತಾ, ಇತರೆ ವಾಹನಗಳಿಗೂ ಅಡ್ಡಿಯಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನಿಯೋಗ ಮನವಿ ಮಾಡಿದೆ.

VISTARANEWS.COM


on

Karave Protest
Koo

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರ, ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ (Karave Protest) ನಡೆಸಲಾಗಿದ್ದು, ಈ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ನಿಯೋಗ ಭೇಟಿ ಮಾಡಿ, ಕನ್ನಡಿಗರಿಗೆ ಉದ್ಯೋಗ ನೀಡಲು ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ಕೋರಿದೆ. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ, ನಾಳೆಯೇ ಅಧಿಕಾರಿಗಳನ್ನು ಕರೆಸಿ ಚರ್ಚೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸಿದ್ದರಾಮಯ್ಯ ಮೇಲೆ ಭರವಸೆ ಇದೆ ಎಂದ ನಾರಾಯಣ ಗೌಡ್ರು

ಸಿಎಂ ಭೇಟಿ ಬಳಿಕ ಮಾತನಾಡಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರು, ನಾನು ಮೊದಲೇ ಒಂದು ಮಾತು ಹೇಳಿದ್ದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ನಡದ ಬಗ್ಗೆ ಕಾಳಜಿ ಇದೆ. ಈಗ ನಾವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಟ್ಟಿದ್ದು, ನಾಳೆಯೇ ಅಧಿಕಾರಿಗಳನ್ನು ಕರೆಸಿ ಚರ್ಚೆ ಮಾಡುತ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಸರ್ಕಾರ ಸದಾ ಕನ್ನಡದ ಪರವಾಗಿದೆ, ನಾನು ಕೂಡ ಕನ್ನಡ ಪರ ಇದ್ದೀನಿ. ನಿಮ್ಮ ಮನವಿಯನ್ನು ಪರಿಶೀಲಿಸಿ ಶೀಘ್ರದಲ್ಲಿಯೇ ಕಾನೂನು ತಜ್ಞರ ಜತೆ ಚರ್ಚೆ ಮಾಡುತ್ತೀನಿ ಎಂದು ಸಿಎಂ ಹೇಳಿರುವುದಾಗಿ ತಿಳಿಸಿದರು.

ಕನ್ನಡದ ವಿಚಾರದಲ್ಲಿ ನಾನು ರಾಜಿ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಾ. ಸರೋಜಿನಿ ಮಹಿಷಿ ವರದಿ ಜಾರಿಗಾಗಿ 40 ವರ್ಷದಿಂದ ಹೋರಾಟ ಮಾಡುತ್ತಿದ್ದೀವಿ. ಈ ವರದಿ ಪ್ರಕಾರ ಉದ್ಯೋಗದಲ್ಲಿ 100ಕ್ಕೆ 100ರಷ್ಟು ಕನ್ನಡಿಗರು ಇರಬೇಕು ಅಂತ ಇದೆ. ಕರ್ನಾಟಕದಲ್ಲಿರುವ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಎಲ್ಲ ವಿಚಾರಗಳನ್ನು ಸಿಎಂಗೆ ಮನವರಿಕೆ ಮಾಡಿದ್ದೇವೆ. ಜಾರಿಗೆ ತಂದರೆ ಬದುಕು ಕಟ್ಟಿಕೊಳ್ಳುವ ಕೆಲಸ ಮಾಡಲಾಗುತ್ತೆ. ಸಿದ್ದರಾಮಯ್ಯ ಮೇಲೆ ಭರವಸೆ ಇದೆ ಎಂದು ಹೇಳಿದರು.

ಇದನ್ನೂ ಓದಿ | Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

ಕನ್ನಡ ನಾಮಫಲಕ ಕಡ್ಡಾಯ ಮಾಡುವ ವಿಚಾರಕ್ಕೆ ಸರ್ಕಾರ ಸರಿಯಾಗಿ ಕಾಯ್ದೆ ಮಾಡಿದೆ. ಇದರಿಂದ ಶೇ. 60% ಕನ್ನಡ ಕರ್ನಾಟಕದಲ್ಲಿ ಕಾಣುತ್ತಿದೆ. ನಾನು ಮುಂದಿನ ವಾರ ದೆಹಲಿಗೆ ಹೋಗಬೇಕು, ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ಸೋಮಣ್ಣರನ್ನು ಭೇಟಿ ಮಾಡುತ್ತೀನಿ. ರಾಜ್ಯಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಅವರೊಂದೊಗೆ ಚರ್ಚೆ ಮಾಡುತ್ತೇನೆ. ತೆರಿಗೆ, ಜಿಎಸ್‌ಟಿ ಸೇರಿ 1 ಲಕ್ಷ 86 ಕೋಟಿ ರೂ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದೆ. ಈ ವಿಚಾರವಾಗಿ ನಮ್ಮ ಜೊತೆ ಕೈ ಜೋಡಿಸಿ ಅಂತ ಸಿಎಂ ಕೇಳಿದ್ದಾರೆ ಎಂದು ನಾರಾಯಣ ಗೌಡ ತಿಳಿಸಿದ್ದಾರೆ.

ಕಾಯ್ದೆ ಜಾರಿಯಾಗದಿದ್ದರೆ ನಿಮ್ಮ ಸರ್ಕಾರ ಉಳಿಯಲ್ಲ: ನಾರಾಯಣ ಗೌಡ ಎಚ್ಚರಿಕೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಾಯ್ದೆ ಜಾರಿ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಯಾವುದೇ ಸರ್ಕಾರ ಬರಲಿ ನಿರಂತರವಾಗಿ ಬೇಡಿಕೆ ಇಟ್ಟಿದ್ದೇವೆ. ಇಂದು ಸಾಂಕೇತಿಕವಾಗಿ ಒಂದು ದಿನದ ಧರಣಿ ಮೂಲಕ ಒತ್ತಡ ಹಾಕುತ್ತಿದ್ದೇವೆ. ಸರ್ಕಾರ ಮಾಡಲು ಕಾರಣ ಕನ್ನಡಿಗರು, ಈಗ ಅವರ ಹಿತ ಕಾಪಾಡಿ. ಇಲ್ಲದಿದ್ದರೆ ನಿಮ್ಮ ಸರ್ಕಾರ ಉಳಿಯುವುದಿಲ್ಲ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಎಚ್ಚರಿಕೆ ನೀಡಿದರು.

ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಕನ್ನಡಿಗರ ಬದುಕಿನ ಹಾಗೂ ಉದ್ಯೋಗ ವಿಚಾರದಲ್ಲಿ ಕಾಯ್ದೆ ಜಾರಿ ಆಗಬೇಕು. ಇಡೀ ರಾಜ್ಯದ 31 ಜಿಲ್ಲೆಗಳಲ್ಲಿ ಧರಣಿ ನಡೆಯುತ್ತಿದೆ. ಅಲ್ಲಿನ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಕೆ ಆಗಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಒಂದಷ್ಟು ಕಾಳಜಿ ಇದೆ. ಅಂದು ನಮ್ಮ ಹೋರಾಟಕ್ಕೆ ಮಣಿದು ಕನ್ನಡ ನಾಮಫಲಕ ಕಾಯ್ದೆ ಆಯಿತು. ನಾವು ಇಂದು ಒಂದು ದಿನದ ಭಜನೆ ಮಾಡಲು ಬಂದಿಲ್ಲ ಸ್ವಾಮಿ ಎಂದರು.

ಆಗ ನನ್ನನ್ನ ಜೈಲಿಗೆ ಹಾಕಿ ಚಿತ್ರ ಹಿಂಸೆ ಕೊಟ್ಟಿದ್ದಿರಿ. ಆದರೆ, ನಾನು ಹೋರಾಡಿ ಸಾಯುತ್ತೇನೆ ಹೊರತು ರಾಜಿ ಮಾಡಿಕೊಳ್ಳುವುದಿಲ್ಲ. ಒಂದು ಸಣ್ಣ ಕಿಡಿ ಇಲ್ಲಿ ಇಂದು ಹೊತ್ತಿಕೊಂಡಿದೆ, ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಖಚಿತ ಎಂದರು.

Continue Reading

ಕರ್ನಾಟಕ

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Press Day: ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

The whole society should be very careful about fake news says CM Siddaramaiah
Koo

ಬೆಂಗಳೂರು: ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Press Day) ತಿಳಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ಫೇಕ್ ನ್ಯೂಸ್‌ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫಾಸ್ಟ್‌ ಚೆಕ್‌ (Fact check) ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್, ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

ಇದನ್ನೂ ಓದಿ: Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಉಪಸ್ಥಿತರಿದ್ದರು.

Continue Reading
Advertisement
MUDA site scandal
ಕರ್ನಾಟಕ54 seconds ago

MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Fashion Show News
ಫ್ಯಾಷನ್22 mins ago

Fashion Show News: ಸಿಇಎಸ್‌ ಫ್ಯಾಷನ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ರ‍್ಯಾಂಪ್‌ ಶೋ

karnataka Weather Forecast
ಮಳೆ30 mins ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Medha Patkar
ದೇಶ58 mins ago

Medha Patkar: ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ ಜೈಲು; 10ಲಕ್ಷ ರೂ. ದಂಡ

Karave Protest
ಕರ್ನಾಟಕ60 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Arecanut Insurance Karnataka last date
ಕೃಷಿ1 hour ago

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Thalapathy Vijay
Latest2 hours ago

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

The whole society should be very careful about fake news says CM Siddaramaiah
ಕರ್ನಾಟಕ2 hours ago

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Money Guide
ಮನಿ-ಗೈಡ್2 hours ago

Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Suraj Revanna Case
ಪ್ರಮುಖ ಸುದ್ದಿ2 hours ago

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ30 mins ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌