Vande Bharat Express: ಕರ್ನಾಟಕದ 2ನೇ ವಂದೇ ಭಾರತ್‌ ರೈಲಿಗೆ ಇಂದು ಮೋದಿ ಹಸಿರು ನಿಶಾನೆ, ಒಟ್ಟು 5 ರೈಲು ಶುರು - Vistara News

ಕರ್ನಾಟಕ

Vande Bharat Express: ಕರ್ನಾಟಕದ 2ನೇ ವಂದೇ ಭಾರತ್‌ ರೈಲಿಗೆ ಇಂದು ಮೋದಿ ಹಸಿರು ನಿಶಾನೆ, ಒಟ್ಟು 5 ರೈಲು ಶುರು

ಕಳೆದ ವರ್ಷ ನವೆಂಬರ್‌ನಲ್ಲಿ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲಿಗೆ ಮೋದಿ (Narendra Modi) ಚಾಲನೆ ನೀಡಿದ್ದರು. ಇದು ಅವರು ಕರ್ನಾಟಕದಲ್ಲಿ ಹಸಿರು ನಿಶಾನೆ ತೋರಲಿರುವ ಎರಡನೇ ವಂದೇ ಭಾರತ್ (Vande Bharat Express) ರೈಲು.

VISTARANEWS.COM


on

modi vande bharat train
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಎರಡನೇ ವಂದೇ ಭಾರತ್‌ ರೈಲಿಗೆ (Vande Bharat Express) ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಹಸಿರು ನಿಶಾನೆ ತೋರಲಿದ್ದಾರೆ.

ನೈಋತ್ಯ ರೈಲ್ವೆ (SWR) ವಲಯದಲ್ಲಿ ಬೆಂಗಳೂರು ಮತ್ತು ಧಾರವಾಡವನ್ನು ಸಂಪರ್ಕಿಸುವ ಕರ್ನಾಟಕದ ವಿಶೇಷ ರೈಲು ಇದಾಗಿದೆ. ಜೂನ್ 19ರಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ನಿಲ್ದಾಣದಿಂದ ಧಾರವಾಡಕ್ಕೆ ಮತ್ತು ಅಲ್ಲಿಂದ ಹಿಂದಕ್ಕೆ ಈ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಓಡಾಟವನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

ಕಳೆದ ವರ್ಷ ನವೆಂಬರ್‌ನಲ್ಲಿ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ ನೀಡಿದ್ದರು. ಇದು ಅವರು ಕರ್ನಾಟಕದಲ್ಲಿ ಹಸಿರು ನಿಶಾನೆ ತೋರಲಿರುವ ಎರಡನೇ ವಂದೇ ಭಾರತ್ ರೈಲು. ಅದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಕೂಡ ಆಗಿತ್ತು. ಈ ಎಕ್ಸ್‌ಪ್ರೆಸ್ ರೈಲು ರಾಜ್ಯದ ಪ್ರಮುಖ ನಗರಗಳಾದ ಧಾರವಾಡ, ಹುಬ್ಬಳ್ಳಿ ಮತ್ತು ದಾವಣಗೆರೆಯನ್ನು ರಾಜಧಾನಿ ಬೆಂಗಳೂರಿನೊಂದಿಗೆ ಸಂಪರ್ಕಿಸುತ್ತದೆ. ಈ ಭಾಗದ ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಗೆ ಅಪಾರ ಪ್ರಯೋಜನ ನೀಡಲಿದೆ.

ಧಾರವಾಡ-ಕೆಎಸ್‌ಆರ್ ಬೆಂಗಳೂರು ಉದ್ಘಾಟನಾ ವಿಶೇಷ (ರೈಲು ಸಂಖ್ಯೆ 07305) ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ಧಾರವಾಡದಲ್ಲಿ ಉದ್ಘಾಟನೆ ಆಗಲಿದೆ. ಐದು ನಿಮಿಷಗಳ ನಂತರ ಬೆಂಗಳೂರಿಗೆ ಹೊರಡಲಿದೆ. ಪ್ರಾಯೋಗಿಕ ಚಾಲನೆಯಲ್ಲಿ, ಎಕ್ಸ್‌ಪ್ರೆಸ್ ರೈಲು ಒಟ್ಟು 489 ಕಿಮೀ ದೂರದ ಮಾರ್ಗದಲ್ಲಿ 350 ಕಿಮೀ ಮಾರ್ಗದಲ್ಲಿ ಗಂಟೆಗೆ 110 ಕಿಮೀ ವೇಗದಲ್ಲಿ ಯಶಸ್ವಿಯಾಗಿ ಓಡಿತು.

ರೈಲಿನ ಪ್ರಯಾಣ ಅವಧಿ 6 ಗಂಟೆ 25 ನಿಮಿಷ. ಮೊದಲಿನದಕ್ಕಿಂತ 30 ನಿಮಿಷ ಕಡಿಮೆ. ಹವಾನಿಯಂತ್ರಿತ ಚೇರ್ ಕಾರ್ ಮತ್ತು ಎಕ್ಸಿಕ್ಯುಟಿವ್ ಕಾರ್ ಹೊಂದಿರುವ ಈ ರೈಲು ನಿಯಮಿತ ಕಾರ್ಯಾಚರಣೆ ಆರಂಭಿಸಿದ ನಂತರ ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ಮಾತ್ರ ನಿಲ್ಲುತ್ತದೆ. ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿ ವಾಣಿಜ್ಯ ನಿಲುಗಡೆ. ಪ್ರಾಥಮಿಕ ನಿರ್ವಹಣೆ ಬೆಂಗಳೂರಿನಲ್ಲಿರುತ್ತದೆ. ಮಂಗಳವಾರ ಹೊರತುಪಡಿಸಿ ವಾರದಲ್ಲಿ ಆರು ದಿನಗಳ ಇದು ಚಲಿಸಲಿದೆ.

ಒಟ್ಟು 5 ವಂದೇ ಭಾರತ್‌ ರೈಲು ಲೋಕಾರ್ಪಣೆ

ಕರ್ನಾಟಕದ ಈ ರೈಲು ಸೇರಿ ಒಟ್ಟು 5 ವಂದೇ ಭಾರತ್‌ ಟ್ರೇನುಗಳಿಗೆ ಇಂದು ಪ್ರಧಾನ ಮೋದಿ ಚಾಲನೆ ನೀಡಲಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಆಯೋಜಿಸಲಾಗಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ದೇಶಾದ್ಯಂತದ ಐದು ವಂದೇ ಭಾರತ್ ಎಕ್ಸ್‌ಪ್ರೆಸ್‌ಗಳಿಗೆ ಚಾಲನೆ ನೀಡಲಿದ್ದಾರೆ.

ಈ ರೈಲುಗಳು ಧಾರವಾಡ-ಬೆಂಗಳೂರು, ಭೋಪಾಲ್- ಜಬಲ್ಪುರ, ಭೋಪಾಲ್-ಇಂದೋರ್, ಮಡಗಾಂವ್-ಮುಂಬೈ ಮತ್ತು ಹಟಿಯಾ-ಪಾಟ್ನಾಗಳನ್ನು ಸಂಪರ್ಕಿಸುತ್ತವೆ. ಗೋವಾ ಮತ್ತು ಜಾರ್ಖಂಡ್ ತಮ್ಮ ಮೊದಲ ಜೋಡಿ ವಂದೇ ಭಾರತ್ ರೈಲುಗಳನ್ನು ಪಡೆಯುತ್ತಿವೆ. ಬಿಹಾರದಲ್ಲಿ ಹೈಸ್ಪೀಡ್‌ ರೈಲು ಇದ್ದರೂ, ತನ್ನ ಮೊದಲ ವಂದೇ ಭಾರತ್ ರೈಲನ್ನು ಪಡೆಯುತ್ತಿದೆ. ಭಾರತದಾದ್ಯಂತ ರೈಲು ಮಾರ್ಗ ವಿದ್ಯುದ್ದೀಕರಣಗೊಂಡ ಬಳಿಕ ಎಲ್ಲಾ ರಾಜ್ಯಗಳು ಈಗ ಈ ಸೆಮಿ-ಹೈ ಸ್ಪೀಡ್ ರೈಲುಗಳೊಂದಿಗೆ ಸಂಪರ್ಕ ಹೊಂದುತ್ತಿವೆ. ಒಂದೇ ದಿನದಲ್ಲಿ ಐದು (ವಂದೇ ಭಾರತ್) ರೈಲುಗಳನ್ನು ಉದ್ಘಾಟನೆ ಮಾಡುತ್ತಿರುವುದು ಇದೇ ಮೊದಲು.

ಇದನ್ನೂ ಓದಿ: Vande Bharat Express : ಬೆಂಗಳೂರು-ಧಾರವಾಡ ನಡುವೆ ಜುಲೈನಿಂದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸಂಚಾರ, ಇಲ್ಲಿದೆ ಡಿಟೇಲ್ಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

CM Siddaramaiah: ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ವಿವರಿಸಿದ್ದಾರೆ.

VISTARANEWS.COM


on

Cm Siddaramaiah hits out at BJP for Gaurantee Scheme
Koo

ಮಂಗಳೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ನಮ್ಮ ಸರ್ಕಾರ ಬಜೆಟ್‌ನಲ್ಲಿ ಮೀಸಲಿರಿಸಿದೆ. ಈ ಬಿಜೆಪಿಯವರಿಗೆ (BJP Karnataka) ಬಜೆಟ್‌, ಆರ್ಥಿಕತೆ ಬಗ್ಗೆ ಏನು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದರು.

ಮಂಗಳವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದರು. ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1 ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ ಎಂದು ವಿವರಿಸಿದರು.

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ತಿಳಿದೂ ಇಲ್ಲ

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಿನ್ನೆ (ಮೇ 20) ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೇ 20ಕ್ಕೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಕೈ ನಾಯಕರು ಸ್ಮರಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಇದರ ಒಟ್ಟು ಮೊತ್ತ 44816 ಕೋಟಿ ರೂಪಾಯಿ ಆಗಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿ 5 ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ತಲಾ 170 ರೂ. ನೀಡುವ ʼಅನ್ನಭಾಗ್ಯ ಯೋಜನೆʼ, ಮನೆ ಯಜಮಾನಿಗೆ ಮಾಸಿಕ 2000 ರೂ. ಮಾಸಾಶನ ನೀಡುವ ʼಗೃಹ ಲಕ್ಷ್ಮಿ ಯೋಜನೆʼ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್‌ ಒದಗಿಸುವ ʼಗೃಹ ಜ್ಯೋತಿ ಯೋಜನೆʼ, ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ʼಶಕ್ತಿ ಯೋಜನೆʼಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಇನ್ನು ಐದನೇ ಗ್ಯಾರಂಟಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡುವ ಯುವ ನಿಧಿ ಯೋಜನೆ ಅನುಷ್ಠಾನದ ಹಂತದಲ್ಲಿದೆ.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

ಗ್ಯಾರಂಟಿಗಳಿಗೆ ಆಗಿರುವ ವೆಚ್ಚ

ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಮೇ 19ರವರೆಗೆ ಬಳಕೆಯಾಗಿರುವ ಅನುದಾನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 23,098 ಕೋಟಿ ರೂ., ಗೃಹಜ್ಯೋತಿ ಯೋಜನೆಗೆ 10,207 ಕೋಟಿ ರೂ., ಶಕ್ತಿ ಯೋಜನೆಗೆ 4,054 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 7,364 ಕೋಟಿ ರೂ. ಹಾಗೂ ಯುವ ನಿಧಿ ಯೋಜನೆಗೆ 93 ಕೋಟಿ ರೂ. ವೆಚ್ಚವಾಗಿದೆ. ಶಕ್ತಿ ಯೋಜನೆಯಲ್ಲಿ 211.5 ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಸರ್ಕಾರಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.

Continue Reading

ವಾಣಿಜ್ಯ

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Ujjivan Small Finance Bank: ಮಾ.31ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಕೈಗೆಟಕುವ ದರದಲ್ಲಿ ಒಟ್ಟು 730 ಕೋಟಿ ರೂ.ಗಳ ಗೃಹ ಸಾಲ ನೀಡಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಶೇ.66ರಷ್ಟು ಹೆಚ್ಚು ಸಾಲ ವಿತರಣೆಯಾಗಿದೆ. 2023-2024ನೇ ಹಣಕಾಸು ವರ್ಷದಲ್ಲಿ 2,284 ಕೋಟಿ ರೂ. ಗೃಹ ಸಾಲ ವಿತರಿಸಲಾಗಿದ್ದು, ಕಳೆದ ವಿತ್ತ ವರ್ಷಕ್ಕೆ ಹೋಲಿಸಿದರೆ ಶೇ.64ರಷ್ಟು ಹೆಚ್ಚಳ ಕಂಡಿದೆ ಎಂದು ಬ್ಯಾಂಕ್ ಹೇಳಿದೆ.

VISTARANEWS.COM


on

Ujjivan Small Finance Bank
Koo

ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿ. (Ujjivan Small Finance Bank) ತನ್ನ ಕಳೆದ ಹಣಕಾಸು ವರ್ಷದ ಮತ್ತು ಮಾರ್ಚ್ 31, 2024ಕ್ಕೆ ಅಂತ್ಯಗೊಂಡ 4ನೇ ತ್ರೈಮಾಸಿಕ ಅವಧಿಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಬ್ಯಾಂಕ್ ಮಾರ್ಚ್ 31ಕ್ಕೆ ಕೊನೆಯಾದ ತ್ರೈಮಾಸಿಕ ಅವಧಿಯಲ್ಲಿ 6,681 ಕೋಟಿ ರೂ. ಸಾಲವನ್ನು ವಿತರಿಸಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಾಲ ವಿತರಣೆಯಲ್ಲಿ ಶೇ.11ರಷ್ಟು ಬೆಳವಣಿಗೆ ಸಾಧಿಸಲಾಗಿದೆ. ಅದೇ ರೀತಿ, 2023-2024ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಒಟ್ಟಾರೆ 23,389 ಕೋಟಿ ರೂ. ಸಾಲ ವಿತರಿಸಿದ್ದು, ಕಳೆದ ವಿತ್ತೀಯ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚಳವಾಗಿದೆ ಎಂದು ಬ್ಯಾಂಕ್​ ಮೂಲಗಳು ತಿಳಿಸಿವೆ.

ಮಾ.31ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಕೈಗೆಟಕುವ ದರದಲ್ಲಿ ಒಟ್ಟು 730 ಕೋಟಿ ರೂ.ಗಳ ಗೃಹ ಸಾಲ ನೀಡಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಶೇ.66ರಷ್ಟು ಹೆಚ್ಚು ಸಾಲ ವಿತರಣೆಯಾಗಿದೆ. 2023-2024ನೇ ಹಣಕಾಸು ವರ್ಷದಲ್ಲಿ 2,284 ಕೋಟಿ ರೂ. ಗೃಹ ಸಾಲ ವಿತರಿಸಲಾಗಿದ್ದು, ಕಳೆದ ವಿತ್ತ ವರ್ಷಕ್ಕೆ ಹೋಲಿಸಿದರೆ ಶೇ.64ರಷ್ಟು ಹೆಚ್ಚಳ ಕಂಡಿದೆ ಎಂದು ಬ್ಯಾಂಕ್ ಹೇಳಿದೆ.

23-24ರ ಒಟ್ಟಾರೆ ಸಾಲದ ಮೊತ್ತವು ಶೇ.24ರಷ್ಟು ಏರಿಕೆಯಾಗಿ, 29,780 ಕೋಟಿ ರೂ.ಗಳಾಗಿವೆ. ಹಿಂದಿನ ತ್ರೈಮಾಸಿಕ ಅವಧಿಗೆ ಹೋಲಿಸಿದರೆ ಮಾರ್ಚ್ ಗೆ ಕೊನೆಯಾದ ತ್ರೈಮಾಸಿಕದಲ್ಲಿ ಒಟ್ಟಾರೆ ಸಾಲದ ಪ್ರಮಾಣವು ಶೇ.7ರಷ್ಟು ಏರಿಕೆಯಾಗಿದೆ. ಇನ್ನು, 2024ರ ಮಾರ್ಚ್ ನಲ್ಲಿ ಸೆಕ್ಯೂರ್ಡ್ ಬುಕ್ ಶೇ.30.2ರಷ್ಟಿದ್ದರೆ, 2023ರ ಡಿಸೆಂಬರ್ ನಲ್ಲಿ ಇದು ಶೇ.28.4ರಷ್ಟಿತ್ತು ಎಂದು ಅಂಕಿ ಅಂಶಗಳು ತಿಳಿಸಿವೆ.

ಸಾಲ ವಸೂಲಿ ಮುಂದುವರಿಕೆ

ಮಾರ್ಚ್ ಗೆ ಅಂತ್ಯವಾದ ತ್ರೈಮಾಸಿಕದಲ್ಲಿ ಸಾಲ ವಸೂಲಾತಿ ಪ್ರಕ್ರಿಯೆಯೂ ಉತ್ತಮವಾಗಿ ಮುಂದುವರಿದಿದ್ದು, ಶೇ.99ರಷ್ಟು ದಕ್ಷತೆಯನ್ನು ಕಾಯ್ದುಕೊಳ್ಳಲಾಗಿದೆ. ಎನ್ ಡಿಎ ಸಂಗ್ರಹ ಶೇ.100ರಷ್ಟಾಗಿದೆ. ಮರುಪಾವತಿಗೆ ಬಾಕಿಯಿರುವ ಸಾಲವು(ಪೋರ್ಟ್ ಫೋಲಿಯೋ ಅಟ್ ರಿಸ್ಕ್) ಶೇ.3.5ರಷ್ಟಿದ್ದು, ಒಟ್ಟು ಅನುತ್ಪಾದಕ ಆಸ್ತಿ (ಜಿಎನ್ ಪಿಎ) ಸ್ಥಿರವಾಗಿದ್ದು, ಶೇ.2.1 ರಷ್ಟಿದೆ. 2023ರ ಡಿಸೆಂಬರ್ ಗೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಇದು ಶೇ.2.1 ರಷ್ಟಿತ್ತು. ಮಾರ್ಚ್ ಗೆ ಕೊನೆಯಾದ ತ್ರೈಮಾಸಿಕದಲ್ಲಿ ಎನ್ಎನ್ ಪಿಎ(ನಿವ್ವಳ ಅನುತ್ಪಾದಕ ಆಸ್ತಿ) ಕೇವಲ ಶೇ.0.3ರಲ್ಲಿ ಮುಂದುವರಿದಿದೆ. ಈ ಅವಧಿಯಲ್ಲಿ ಒಟ್ಟು 65 ಕೋಟಿ ರೂ.ಗಳ ಸಾಲವನ್ನು ರೈಟ್ ಆಫ್ ಮಾಡಲಾಗಿದೆ ಎಂದು ಬ್ಯಾಂಕ್​ ಮೂಲಗಳು ತಿಳಿಸಿವೆ.

ಮಾರ್ಚ್ ಗೆ ಅಂತ್ಯವಾದ ತ್ರೈಮಾಸಿಕದಲ್ಲಿ 31,462 ಕೋಟಿ ರೂ. ಠೇವಣಿ ಸಂಗ್ರಹವಾಗಿದ್ದು, ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ.6 ಹಾಗೂ ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ.23ರಷ್ಟು ಹೆಚ್ಚಳವಾಗಿದೆ. ಸಿಎಎಸ್ಎ(ಚಾಲ್ತಿ ಖಾತೆ ಉಳಿತಾಯ ಖಾತೆ) ಮೊತ್ತವು ಕಳೆದ ವಿತ್ತೀಯ ವರ್ಷಕ್ಕೆ ಹೋಲಿಸಿದರೆ ಶೇ.24ರಷ್ಟು ಮತ್ತು ಕಳೆದ ತ್ರೈಮಾಸಿಕಕ್ಕೆ ಹೋಲಿಸದರೆ ಶೇ.10ರಷ್ಟು ಏರಿಕೆಯಾಗಿದ್ದು, ಮಾರ್ಚ್ ತ್ರೈಮಾಸಿಕದಲ್ಲಿ ಒಟ್ಟು 8,335 ಕೋಟಿ ರೂ. ಸಂಗ್ರಹವಾಗಿದೆ. ಸಿಎಎಸ್ಎ ಅನುಪಾತವು ಈ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಶೇ.26.5ರಷ್ಟಿದ್ದರೆ, ಅದರ ಹಿಂದಿನ ತ್ರೈಮಾಸಿಕ ಅವಧಿಯಲ್ಲಿ ಶೇ.25.5ರಷ್ಟಿತ್ತು. ಚಿಲ್ಲರೆ ಅವಧಿ ಠೇವಣಿ (ರಿಟೇಲ್ ಟಿಡಿ) ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023-24ರ ಹಣಕಾಸು ವರ್ಷದಲ್ಲಿ ಶೇ.36ರಷ್ಟು ಮತ್ತು ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ಮಾರ್ಚ್ ಗೆ ಅಂತ್ಯವಾದ ತ್ರೈಮಾಸಿಕದಲ್ಲಿ ಶೇ.7ರಷ್ಟು ಬೆಳವಣಿಗೆ ದಾಖಲಿಸಿದೆ.

ಇದನ್ನೂ ಓದಿ: Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

ನಿವ್ವಳ ಬಡ್ಡಿ ಆದಾಯ(ಎನ್ಐಐ)ವು 4ನೇ ತ್ರೈಮಾಸಿಕದಲ್ಲಿ 934 ಕೋಟಿ ರೂ. ಆಗಿದ್ದು, ಕಳೆದ ತ್ರೈಮಾಸಿಕಕ್ಕಿಂತ ಶೇ.27ರಷ್ಟು ಹೆಚ್ಚಳವಾಗಿದೆ. 2023-24ರ ವಿತ್ತ ವರ್ಷದಲ್ಲಿ ಇದು 3,409 ಕೋಟಿ ರೂ.ಗಳಾಗಿದ್ದು ಕಳೆದ ವಿತ್ತ ವರ್ಷಕ್ಕಿಂತ ಶೇ.26ರಷ್ಟು ಬೆಳವಣಿಗೆ ಸಾಧಿಸಿದೆ. ಇದೇ ವೇಳೆ, ಬ್ಯಾಂಕಿನ ನಿವ್ವಳ ಬಡ್ಡಿ ಅಂತರ(ಎನ್ಐಎಂ)ವು 4ನೇ ತ್ರೈಮಾಸಿಕದಲ್ಲಿ ಶೇ.9.4ರಷ್ಟು, ಇಡೀ ವಿತ್ತ ವರ್ಷದಲ್ಲಿ ಶೇ.9.1ರಷ್ಟು ಇತ್ತು. ವೆಚ್ಚದಿಂದ ಆದಾಯ ಅನುಪಾತವು 4ನೇ ತ್ರೈಮಾಸಿಕದಲ್ಲಿ ಶೇ.55.7 ಆಗಿದ್ದು, 2024ನೇ ಹಣಕಾಸು ವರ್ಷದಲ್ಲಿ ಶೇ.54.3ರಷ್ಟಾಗಿದೆ.

ಮಾರ್ಚ್ ಗೆ ಅಂತ್ಯಗೊಂಡ 4ನೇ ತ್ರೈಮಾಸಿಕದಲ್ಲಿ ಬ್ಯಾಂಕಿನ ಕಾರ್ಯಾಚರಣೆಯಿಂದ ಬಂದ ಆದಾಯ(ಪಿಪಿಒಪಿ) 519 ಕೋಟಿ ರೂ.ಗಳಾಗಿದ್ದು, ಕಳೆದ ತ್ರೈಮಾಸಿಕಕ್ಕಿಂತ ಶೇ.26ರಷ್ಟು ಪ್ರಗತಿ ಸಾಧಿಸಲಾಗಿದೆ. ಅದೇ ರೀತಿ, 24ನೇ ಹಣಕಾಸು ವರ್ಷದಲ್ಲಿ ಕಾರ್ಯಾಚರಣೆಯಲ್ಲಿ ಬಂದ ಆದಾಯವು 1,917 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.29ರ ಏರಿಕೆ ಕಂಡಿದೆ. ತೆರಿಗೆ ನಂತರದ ಲಾಭ (ಪಿಎಟಿ)ವು 4ನೇ ತ್ರೈಮಾಸಿಕದಲ್ಲಿ 330 ಕೋಟಿ ರೂ.ಗಳಾಗಿದ್ದು (3ನೇ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ.7ರಷ್ಟು ಹೆಚ್ಚಳ), 24ನೇ ಹಣಕಾಸು ವರ್ಷದಲ್ಲಿ 1,281 ಕೋಟಿ ರೂ.ಗಳಷ್ಟಾಗಿದೆ (ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17 ಹೆಚ್ಚಳ).

ಷೇರುದಾರರ ಅನುಮತಿಗೆ ಒಳಪಟ್ಟು, ಬ್ಯಾಂಕಿನ ಆಡಳಿತ ಮಂಡಳಿಯು ಪ್ರತಿ ಷೇರಿಗೆ 1.5 ರೂ.ಗಳಂತೆ ಅಂತಿಮ ಲಾಭಾಂಶ ನೀಡಲು ಶಿಫಾರಸು ಮಾಡಿದೆ.

ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯನಿರ್ವಹಣಾಧಿಕಾರಿ ಶ್ರೀ. ಇಟ್ಟಿರಾ ಡೇವಿಸ್ ರವರು ಮಾತನಾಡಿ, 2024ರ ಹಣಕಾಸು ವರ್ಷದ 4ನೇ ತ್ರೈಮಾಸಿಕವು ಮತ್ತೊಂದು ಯಶಸ್ವಿ ವಿತ್ತ ವರ್ಷಕ್ಕೆ ಉತ್ತಮ ಮುನ್ನುಡಿ ಬರೆದಿದೆ. ಈ  ಅವಧಿಯಲ್ಲಿ ನಮಗೆ ಗುಣಮಟ್ಟದ ಬೆಳವಣಿಗೆಯನ್ನು ಸಾಧಿಸಲು ಸಾಧ್ಯವಾಗಿದೆ. ನಾವು ಬ್ಯಾಂಕ್ ಮತ್ತು ಅದರ ಹೋಲ್ಡಿಂಗ್ ಕಂಪನಿ ನಡುವಿನ ವಿಲೀನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. ನಮ್ಮ ಸೆಕ್ಯೂರ್ಡ್ ಬುಕ್ (ಸುರಕ್ಷಿತ ಪುಸ್ತಕ) ಈ ತ್ರೈಮಾಸಿಕದಲ್ಲಿ 177 ಮೂಲಾಂಕ (ಬಿಪಿಎಸ್) ನಷ್ಟು ಸುಧಾರಣೆ ಕಂಡು, 30.2%ಕ್ಕೆ ತಲುಪಿದೆ. 4ನೇ ತ್ರೈಮಾಸಿಕದಲ್ಲಿ ₹ 6,681 ಕೋಟಿ ರೂ. ಮತ್ತು ವಾರ್ಷಿಕವಾಗಿ ₹ 23,389 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ.  ಕೈಗೆಟುಕುವ ಗೃಹ (ಸೂಕ್ಷ್ಮ ಅಡಮಾನಗಳು ಸೇರಿದಂತೆ) ಸಾಲ ವಿತರಣೆಯಲ್ಲೂ ಪ್ರಗತಿ ಸಾಧಿಸಲಾಗಿದ್ದು, 4ನೇ ತ್ರೈಮಾಸಿಕದಲ್ಲಿ  ₹730 ಕೋಟಿ ಮತ್ತು ವಾರ್ಷಿಕ ₹ 2,284 ಕೋಟಿ ಸಾಲ ವಿತರಿಸಲಾಗಿದೆ. ಈ ಮೂಲಕ 2023-24ರ ಹಣಕಾಸು ವರ್ಷದಲ್ಲಿ ಗೃಹ ಸಾಲ ವಿತರಣೆಯಲ್ಲಿ ಶೇ.45ರ ಬೆಳವಣಿಗೆ ಸಾಧಿಸಲಾಗಿದೆ. ಈ ವೇಗವು ಮುಂದಿನ ವರ್ಷವೂ ಮುಂದುವರಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು. ಹೆಚ್ಚುವರಿಯಾಗಿ, ನಾವು ಪರಿಷ್ಕೃತ ಎಲ್ಒಎಸ್ ಅನ್ನು ಪರಿಚಯಿಸುವ ಅಂತಿಮ ಹಂತದಲ್ಲಿರುತ್ತೇವೆ, ಒಮ್ಮೆ ಸಂಪೂರ್ಣವಾಗಿ ಕಾರ್ಯನಿರ್ವಹಿಸಿದರೆ ಅದು ವ್ಯವಹಾರ ದಕ್ಷತೆಯನ್ನು ಮತ್ತಷ್ಟು ಸುಧಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಕಳೆದ ತ್ರೈಮಾಸಿಕದಲ್ಲಿ ಪೂರ್ವ-ಅರ್ಹ ಟಾಪ್-ಅಪ್ ಸಾಲಗಳನ್ನು ನಮ್ಮ ಉತ್ಪನ್ನ ಸೂಟ್ ಗೆ ಸೇರಿಸಲಾಗಿದೆ, ಇದು ನಮ್ಮ ಅಸ್ತಿತ್ವದಲ್ಲಿರುವ ಕೈಗೆಟುಕುವ ವಸತಿ ಗ್ರಾಹಕರಿಗೆ ಪ್ರಯೋಜನಕಾರಿಯಾಗಿದೆ ಎಂದು ನುಡಿದರು.

Continue Reading

ಬೆಂಗಳೂರು

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Kempegowda International Airport: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಪ್ರಯಾಣಿಕರ ಪಿಕ್ ಅಪ್‌ಗೂ ದರ ನಿಗದಿ ಮಾಡಿದ್ದರಿಂದ ಪ್ರಯಾಣಿಕರು ಹಾಗೂ ಬಾಡಿಗೆ ವಾಹನ ಚಾಲಕರು ಬೆಚ್ಚಿ ಬಿದ್ದಿದ್ದಾರೆ. ಆಗಮನದ ದ್ವಾರದ ಬಳಿ ವಾಹನಗಳಲ್ಲಿ ಪಿಕಪ್ ಮಾಡುವುದಕ್ಕೆ ದರ ನಿಗದಿ ಮಾಡಿದ ಪರಿಣಾಮ ಕೆಂಪೇಗೌಡ ಏರ್ಪೋರ್ಟ್‌ ಮತ್ತಷ್ಟು ದುಬಾರಿಯಾಗಿತ್ತು. ಇಷ್ಟು ದಿನ ವಾಹನ ಚಾಲಕರು ಪ್ರಯಾಣಿಕರನ್ನು ಉಚಿತವಾಗಿ ಪಿಕಪ್ ಮಾಡುತ್ತಿದ್ದರು.

VISTARANEWS.COM


on

Kempegowda International Airport parking
Koo

ದೇವನಹಳ್ಳಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ- Kempegowda International Airport- KIA) ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು (pickup vehicles) ಬರುವ ವಾಹನಗಳೂ ಇನ್ನು ಮುಂದೆ ನಿಲುಗಡೆ ಶುಲ್ಕ (Parking fees) ಕೊಡಬೇಕು ಎಂಬ ನಿಯಮ ಮಾಡಿ ಏರ್ಪೋರ್ಟ್‌ ಆಡಳಿತ ಮಂಡಳಿ ನಿನ್ನೆ ವಸೂಲಿ ಶುರು ಮಾಡಿತ್ತು. ಇದೀಗ ಎದುರಾದ ಪ್ರತಿರೋಧವನ್ನು ಕಂಡು ಬೆಚ್ಚಿಬಿದ್ದು ತಾತ್ಕಾಲಿಕವಾಗಿ ವಸೂಲಿ ಸ್ಥಗಿತಗೊಳಿಸಿದೆ.

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಪ್ರಯಾಣಿಕರ ಪಿಕ್ ಅಪ್‌ಗೂ ದರ ನಿಗದಿ ಮಾಡಿದ್ದರಿಂದ ಪ್ರಯಾಣಿಕರು ಹಾಗೂ ಬಾಡಿಗೆ ವಾಹನ ಚಾಲಕರು ಬೆಚ್ಚಿ ಬಿದ್ದಿದ್ದಾರೆ. ಆಗಮನದ ದ್ವಾರದ ಬಳಿ ವಾಹನಗಳಲ್ಲಿ ಪಿಕಪ್ ಮಾಡುವುದಕ್ಕೆ ದರ ನಿಗದಿ ಮಾಡಿದ ಪರಿಣಾಮ ಕೆಂಪೇಗೌಡ ಏರ್ಪೋರ್ಟ್‌ ಮತ್ತಷ್ಟು ದುಬಾರಿಯಾಗಿತ್ತು. ಇಷ್ಟು ದಿನ ವಾಹನ ಚಾಲಕರು ಪ್ರಯಾಣಿಕರನ್ನು ಉಚಿತವಾಗಿ ಪಿಕಪ್ ಮಾಡುತ್ತಿದ್ದರು.

ಪಿಕಪ್‌ಗೆ ಹೆಚ್ಚುವರಿ ಲೈನ್ ಮಾಡಿ ಹಣ ವಸೂಲಿ ಮಾಡಲು ಶುರು ಮಾಡಲಾಗಿತ್ತು. ಕಾರು, ಜೀಪ್ ಪಿಕಪ್ ಪ್ರವೇಶಕ್ಕೆ 7 ನಿಮಿಷದವರೆಗೂ 150 ರೂ. ದರ, 7ರಿಂದ 14 ನಿಮಿಷಕ್ಕೆ 300 ರೂ., ಬಸ್ಸಿಗೆ 600 ರೂಪಾಯಿ, ಟಿಟಿಗೆ 300 ರೂಪಾಯಿ ಪ್ರವೇಶ ದರ ನಿಗದಿ ಮಾಡಲಾಗಿತ್ತು. ನೂತನ ವಸೂಲಿ ಕಂಡು ಪ್ರಯಾಣಿಕರಿಗೆ ತಲೆ ತಿರುಗಿತ್ತು.

ಪಿಕಪ್‌ಗೂ ಹಣ ಕೊಡಬೇಕಾ ಎಂದು ರೊಚ್ಚಿಗೆದ್ದ ಚಾಲಕರು ಹಾಗೂ ಪ್ರಯಾಣಿಕರು ಏರ್ಪೋರ್ಟ್‌ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚಾಲಕರು ಆಕ್ರೋಶ ಹೊರ ಹಾಕುತ್ತಿದ್ದಂತೆ ಮಂಡಳಿ ತಾತ್ಕಾಲಿಕವಾಗಿ ವಸೂಲಿ ನಿಲ್ಲಿಸಿದೆ. ನಾಳೆ ದರ ನಿಗದಿ ವಿರುದ್ಧ ಏರ್ಪೋರ್ಟ್‌ನಲ್ಲಿ ಪ್ರತಿಭಟನೆಗೆ ಚಾಲಕರು ಸಜ್ಜಾಗಿದ್ದಾರೆ.

ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ

ಇತ್ತೀಚೆಗೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport – KIA) ನೂತನ ಟರ್ಮಿನಲ್ 2 (Terminal 2, T2) ಇದರಲ್ಲಿ ಭಾರಿ ಸೋರಿಕೆ (leakage) ಕಂಡುಬಂತು. ಭಾರಿ ಮಳೆಯ ಪರಿಣಾಮ ಇಲ್ಲಿಗೆ ಬರಬೇಕಿದ್ದ ಹಲವು ವಿಮಾನಗಳನ್ನು ಬೇರೆ ಕಡೆಗೆ ಕಳಿಸಲಾಯಿತು.

ಇತ್ತೀಚೆಗೆ ಸುರಿದ ಭಾರಿ ಮಳೆಯ ನಂತರ T2ನ ಬ್ಯಾಗೇಜ್ ಕ್ಲೈಮ್ ಪ್ರದೇಶದ ಬಳಿ ಛಾವಣಿಯಿಂದ ಮಳೆನೀರು ಜಿನುಗತೊಡಗಿತು. “ಮಳೆನೀರು ಛಾವಣಿಯಿಂದ ಸೋರಿಕೆಯಾಗಲು ಪ್ರಾರಂಭಿಸಿತು. ಕನ್ವೇಯರ್ ಬೆಲ್ಟ್ ಬಳಿ ಕೊಚ್ಚೆಗುಂಡಿಯಂತೆ ಆಯಿತು. ಪ್ರಯಾಣಿಕರಿಗೆ ಅನನುಕೂಲತೆಯನ್ನು ತಪ್ಪಿಸಲು ಗೃಹರಕ್ಷಕ ಸಿಬ್ಬಂದಿ ಯತ್ನಿಸಿದ್ದು, ನೀರನ್ನು ತೆರವುಗೊಳಿಸಿದರು” ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದಾರೆ.

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಈ ಬಗ್ಗೆ ಹೇಳಿಕೆ ನೀಡಿದ್ದು, ಹೀಗೆ ಹೇಳಿದೆ: “ಮೇ 9, 2024ರ ಸಂಜೆ ಅಲ್ಪಾವಧಿಯಲ್ಲಿಯೇ ಅತಿ ಹೆಚ್ಚು ಮಳೆ ಸುರಿದ ಪರಿಣಾಮ, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ. ನಮ್ಮ ಕಾರ್ಯಾಚರಣೆ ತಂಡಗಳು ಈ ಸೋರಿಕೆಯನ್ನು ತಗ್ಗಿಸಲು ಮತ್ತು ಚಟುವಟಿಕೆಯನ್ನು ಸಾಮಾನ್ಯ ಸ್ಥಿತಿಗೆ ತರಲು ತ್ವರಿತವಾಗಿ ಪ್ರತಿಕ್ರಿಯಿಸಿವೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ನಾವು ವಿಷಾದಿಸುತ್ತೇವೆ.”

KIAಯ T2 ಅನ್ನು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ನವೆಂಬರ್ 11, 2022ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇದನ್ನು ಉದ್ಘಾಟಿಸಿದರು. ʼಉದ್ಯಾನವನ ಟರ್ಮಿನಲ್ʼ ಎಂದು ಕರೆಯಲ್ಪಡುವ T2, ಯುನೆಸ್ಕೋದಿಂದ ʼವಿಶ್ವದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ. ಜನವರಿ 15, 2023ರಂದು ದೇಶೀಯ ಕಾರ್ಯಾಚರಣೆಯನ್ನು ಆರಂಭಿಸಿದ ಟರ್ಮಿನಲ್, ಉದ್ಘಾಟನೆಯ ಕೆಲವೇ ತಿಂಗಳುಗಳಲ್ಲಿ ಸೋರಿಕೆಯನ್ನು ಕಂಡಿದೆ. T2ನಲ್ಲಿ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಸೆಪ್ಟೆಂಬರ್ 12ರಂದು ಪ್ರಾರಂಭವಾದವು.

ಇದನ್ನೂ ಓದಿ: Bangalore Airport : ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಿಶ್ವದ ಅತಿ ಸುಂದರ ಏರ್‌ಪೋರ್ಟ್ ಗರಿ

Continue Reading

ಬೆಂಗಳೂರು

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. 52,505 ವಿದ್ಯಾರ್ಥಿಗಳು ಪಾಸಾಗಿದ್ದು, 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ.

VISTARANEWS.COM


on

By

2nd Puc Result
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮೇ 21ರ ಮಧ್ಯಾಹ್ನ 3ಗಂಟೆಗೆ ಪ್ರಕಟಗೊಂಡಿದೆ. ರಾಜ್ಯಾದ್ಯಂತ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 29 ರಿಂದ ಮೇ 16ರವರೆಗೆ 2ನೇ ಪರೀಕ್ಷೆ ನಡೆದಿತ್ತು. 7,875 ಮೌಲ್ಯಮಾಪಕರಿಂದ 28 ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿತ್ತು. ಪರೀಕ್ಷೆ 2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, 52,505 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ. 26,496 ಬಾಲಕರು, 26,009 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ karresults.nic.in ನಲ್ಲಿ ನೋಡಬಹುದಾಗಿದೆ.

ಇನ್ನೂ ಪರೀಕ್ಷೆ 1 ಮತ್ತು ಪರೀಕ್ಷೆ 2ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು..

ಹಂತಗಳು ಏನು?

-karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
-ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
-ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
-ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಇದನ್ನೂ ಓದಿ: CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

ಸಂಯೋಜನೆವಾರು ಫಲಿತಾಂಶ

ಸಂಯೋಜನೆಹಾಜರಾದವರುಉತ್ತೀರ್ಣರಾದವರುಶೇಕಡವಾರು
ಕಲಾ52,12011,58922.24
ವಾಣಿಜ್ಯ39,4748,70922.06
ವಿಜ್ಞಾನ57,34832,20756.16
ಒಟ್ಟು1,48,94252,50535.25

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರಲ್ಲಿ ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ ಇದ್ದವರಿಗಾಗಿ ಈ ಅವಕಾಶ ಕಲ್ಪಿಸಲಾಗಿತ್ತು. 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಫಲಿತಾಂಶ ಉತ್ತಮಪಡಿಸಿಕೊಳ್ಳಲು 32,940 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗಾಗಿ ಮೇ 21ರಿಂದ 23ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಡ್ಡಾಯವಾಗಿ ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಮೇ 22ರಿಂದ 25ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530ರೂ .ಶುಲ್ಕ ನಿಗದಿ ಮಾಡಲಾಗಿದೆ. ಮರುಮೌಲ್ಯಮಾಪನದ ಶುಲ್ಕದ ಪ್ರತಿ ವಿಷಯಕ್ಕೆ 1,670 ರೂ. ಇದೆ. ಇನ್ನೂ ಯಾವುದೇ ಅಭ್ಯರ್ಥಿಗಳು ಪರೀಕ್ಷೆ 3ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
India Skills National Competition 2024 Grand Finale 58 Winners to Represent India at World Skills
ದೇಶ1 min ago

India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

Cm Siddaramaiah hits out at BJP for Gaurantee Scheme
ರಾಜಕೀಯ3 mins ago

CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

Meghana Raj Mother Day Gift Shopping to mother
ಸ್ಯಾಂಡಲ್ ವುಡ್5 mins ago

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Prashant Kishor
ದೇಶ13 mins ago

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Ujjivan Small Finance Bank
ವಾಣಿಜ್ಯ14 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Kempegowda International Airport parking
ಬೆಂಗಳೂರು30 mins ago

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Abhijit Gangopadhyay
ದೇಶ35 mins ago

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

2nd Puc Result
ಬೆಂಗಳೂರು50 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

L2 Empuraan first look poster shared by Prithviraj Sukumaran
South Cinema1 hour ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್1 hour ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌