varicose ulcer Will you stand for more than an hour Vericos Wayne will be close to you bewareVaricose Ulcer : 1 ಗಂಟೆಗೂ ಹೆಚ್ಚು ಕಾಲ ನಿಂತೇ ಇರ್ತಿರಾ? ವೇರಿಕೋಸ್ ವೇನ್ಸ್‌ ನಿಮಗೆ ಕ್ಲೋಸ್‌ ಆಗುತ್ತೆ ಹುಷಾರ್! - Vistara News

ಆರೋಗ್ಯ

Varicose Ulcer : 1 ಗಂಟೆಗೂ ಹೆಚ್ಚು ಕಾಲ ನಿಂತೇ ಇರ್ತಿರಾ? ವೇರಿಕೋಸ್ ವೇನ್ಸ್‌ ನಿಮಗೆ ಕ್ಲೋಸ್‌ ಆಗುತ್ತೆ ಹುಷಾರ್!

ದಿನಗಟ್ಟಲೆ ನಿಂತೇ ಇರುತ್ತೀರಾ? ಗಂಟೆಗಟ್ಟಲೆ ಕುಳಿತೇ ಇರುತ್ತೀರಾ? ಹಾಗಾದರೆ ನಿಮಗೂ ಈ ಕಾಯಿಲೆ (Varicose Ulcer) ಬರಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.

VISTARANEWS.COM


on

Venous Ulcer Prevention
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿಮ್ಮದು ಗಂಟೆಗಟ್ಟಲೆ ನಿಂತುಕೊಂಡೇ ಮಾಡುವ ಕೆಲಸವೇ? ಹಾಗಾದರೆ ನಿಮ್ಮ ಕಾಲುಗಳ ಬಗ್ಗೆ ಹುಷಾರಾಗಿ ಇರಿ. ನಿಮಗೆ ಗೊತ್ತಿಲ್ಲದೆ ನಿಮ್ಮನ್ನು ವೇನ್ಸ್‌ ಅಲ್ಸರ್ ಕಾಡಬಹುದು. ನಿಂತು ಕೆಲಸ ಮಾಡುವ ಪೊಲೀಸ್, ಬಸ್ ಕಂಡಕ್ಟರ್ಸ್, ಶೆಫ್, ಪ್ರಿಟಿಂಗ್‌ ಪ್ರೆಸ್‌ ಅಪರೇಟರ್ಸ್‌, ಶಿಕ್ಷಕರು ಸೇರಿದಂತೆ ತರಕಾರಿ ವ್ಯಾಪಾರಿಗಳಿಗೆ ವೇರಿಕೋಸ್ ವೇನ್ಸ್‌ ಅಲ್ಸರ್ (Varicose Ulcer) ಕಾಯಿಲೆ ಹೆಚ್ಚು ಕಾಡುತ್ತಿದೆ.

ವೇರಿಕೋಸ್‌ ವೇನ್ಸ್‌ ಅಲ್ಸರ್‌ ಅನುವಂಶಿಕವಾಗಿ ಬರುವ ಸಾಧ್ಯತೆ ಹೆಚ್ಚಿದೆ. ಇದರ ಹೊರತಾಗಿಯೂ ನಿಲ್ಲುವುದು ಮಾತ್ರ ಅಲ್ಲ ಕುಳಿತಲ್ಲೇ ಕೂತುಕೊಂಡರೂ ವೇರಿಕೋಸ್ ವೇನ್ಸ್‌ ಅಲ್ಸರ್ ಕಾಡುತ್ತದೆ. ಇದಕ್ಕೆ ಯಾವುದೇ ವಯೋಮಾನದ ಮಿತಿ ಇಲ್ಲ, 18 ವರ್ಷ ಮೇಲ್ಪಟ್ಟವರಿಗೆ ಯಾರಿಗೆ ಬೇಕಾದರೂ ಇದು ಕಾಣಿಸಿಕೊಳ್ಳಬಹುದು ಎನ್ನುವುದು ವೈದ್ಯರು ನೀಡುವ ಎಚ್ಚರಿಕೆಯಾಗಿದೆ.

ವೇರಿಕೋಸ್ ವೇನ್ಸ್‌ ಅಲ್ಸರ್ ಪ್ರಮುಖ ಲಕ್ಷಣಗಳೆಂದರೆ ಕಾಲಿನಲ್ಲಿ ಗಂಟು, ನವೆ ಬರುವುದು, ಸೆಳೆತ, ಕಾಲು ಊತ, ಕಪ್ಪಾಗುವುದು, ವಿಪರೀತ ನೋವು ಕಾಣಿಸಿಕೊಳ್ಳಲಿದೆ. ಕೋವಿಡ್ ಬಳಿಕ ಈ ಪ್ರಕರಣಗಳು ಹೆಚ್ಚಳ ಕಂಡಿದೆ. ವರ್ಕ್‌ ಫಾರ್ಮ್‌ ಹೋಮ್‌ ಹೆಚ್ಚಾದ ಕಾರಣ ಬಹಳಷ್ಟು ಐಟಿಬಿಟಿ ಉದ್ಯೋಗಿಗಳು 10 ಗಂಟೆಗೂ ಹೆಚ್ಚು ಸಮಯ ಕುಳಿತುಕೊಂಡೇ ಕೆಲಸ ಮಾಡುತ್ತಿದ್ದರು. ಹೀಗಾಗಿ ಇವರಲ್ಲೂ ವೇರಿಕೋಸ್‌ ವೇನ್ಸ್‌ ಅಲ್ಸರ್‌ ಹೆಚ್ಚಾಗಿ ಕಾಣಿಸಿಕೊಂಡಿದೆ ಎಂದು ತಜ್ಞ ವೈದ್ಯ ಡಾ.ವಿನಯ್ ನ್ಯಾಪಥಿ ತಿಳಿಸಿದ್ದಾರೆ.

ಗಂಟೆಗಟ್ಟಲೆ ನಿಲ್ಲುವವರು ಮಧ್ಯದಲ್ಲಿ ಬಿಡುವು ತೆಗೆದುಕೊಂಡು ಐದು ನಿಮಿಷ ಕೂತುಕೊಳ್ಳುವುದು. ಹಾಗೇ ಕುಳಿತುಕೊಂಡೆ ಕೆಲಸ ಮಾಡುವವರು ಆಗಾಗ ಎದ್ದು ಓಡಾಡಬೇಕು. ಇದರಿಂದಾಗಿ ಕಾಲಿನಲ್ಲಿ ರಕ್ತ ಸಂಚಾರ ಆಗುತ್ತದೆ. ಆದಷ್ಟು ದೈನಂದಿನ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದು, ವ್ಯಾಯಾಮ ಮಾಡುವುದು ಒಳಿತು ಎಂದು ಡಾ.ವಿನಯ್ ನ್ಯಾಪಥಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Smart Virtual Clinic: ಬೆಂಗಳೂರಲ್ಲಿ ಕ್ಲಿಕ್‌ ಆಯ್ತು ಸ್ಮಾರ್ಟ್ ವರ್ಚುವಲ್ ಕ್ಲಿನಿಕ್; ಏನೆಲ್ಲ ಚಿಕಿತ್ಸೆ ಲಭ್ಯವಿದೆ?

ವೇರಿಕೋಸ್‌ ವೇಯ್ನ್‌ ಅಲ್ಸರ್‌ ಕಾಣಿಸಿಕೊಂಡ ರೋಗಿಗಳು ಆರಂಭದಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಭಾಗಶಃ ರೋಗಿಗಳು ಕಾಯಿಲೆ ಕೊನೆಯ ಹಂತಕ್ಕೆ ತಲುಪಿದಾಗ ಬರುತ್ತಾರೆ. ಮೊದಲ ಹಂತದಲ್ಲಿ ಕಾಲು ಸೆಳೆತ, ನೋವು ಕಾಣಿಸಿಕೊಳ್ಳುತ್ತದೆ. ಎರಡನೇ ಹಂತದಲ್ಲಿ ಕಾಲು ಊತ, ಭಾರದಂತಾಗುತ್ತದೆ. ಮೂರನೇ ಹಂತದಲ್ಲಿ ಚರ್ಮದ ಬಣ್ಣ ಕಪ್ಪಾಗುವುದು, ನಾಲ್ಕನೇ ಹಂತದಲ್ಲಿ ಹುಣ್ಣಾಗುತ್ತದೆ. ಹೀಗಾಗಿ ಆರಂಭದಲ್ಲಿ ರೋಗದ ಲಕ್ಷಣ ತಿಳಿದುಕೊಂಡು ಚಿಕಿತ್ಸೆ ಪಡೆದುಕೊಳ್ಳುವುದು ಒಳಿತು ಎಂದು ಡಾ.ವಿನಯ್ ನ್ಯಾಪಥಿ ತಿಳಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

ಮೊಡವೆಗಳಿಗೆ ಪರಿಹಾರವೇ ಇಲ್ಲವೇ (Solution For Pimples) ಎಂದು ನೀವು ಕೇಳಬಹುದು. ಖಂಡಿತ ಇದ್ದೇ ಇದೆ. ಮುಖ್ಯವಾಗಿ, ಚರ್ಮದ ಹೊರಗಿನ ಆರೈಕೆಗಿಂತ ಒಳಗಿನ ಆರೈಕೆ ಮುಖ್ಯ. ಒಳಗೆ ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕಾಳಜಿ ಮಾಡಬೇಕು. ಬನ್ನಿ, ಯಾವೆಲ್ಲ ಆಹಾರಗಳ ಬಗ್ಗೆ ಎಚ್ಚರ ಅಗತ್ಯ ಎಂಬುದನ್ನು ನೋಡೋಣ.

VISTARANEWS.COM


on

Solution For Pimple
Koo

ಮೊಡವೆ ಮತ್ತು ಮೊಡವೆಗಳ ಕಲೆಗಳಿಂದ ಬೇಸತ್ತ ಮಂದಿ ಏನೆಲ್ಲ ಸರ್ಕಸ್‌ ಮಾಡಿದರೂ ಮೊಡವೆಯಿಂದ ಮುಕ್ತಿ ಸಿಗುವುದಿಲ್ಲ ಎಂದು ಬೇಸರ ಪಡಬಹುದು. ನೂರೆಂಟು ಮಂದಿ ನೂರಾರು ಸಲಹೆ ಕೊಡಬಹುದಾದರೂ, ಎಲ್ಲರಿಗೂ ಎಲ್ಲ ಸಲಹೆಗಳೂ ಹೊಂದಲಾರದು. ಕಾರಣ, ಒಬ್ಬೊಬ್ಬರ ದೇಹ ಪ್ರಕೃತಿ ಒಂದೊಂದು ಬಗೆ. ಮೊಡವೆಗಳ ಸಮಸ್ಯೆಗೆ (Solution For Pimples) ಎಲ್ಲರ ಕಾರಣಗಳೂ ಒಂದೇ ಆಗಿರಬೇಕಾಗಿಲ್ಲ. ಆದರೆ, ಬಹುತೇಕರ ಸಮಸ್ಯೆ ಎಂದರೆ ಎಣ್ಣೆ ಚರ್ಮ. ಚರ್ಮದಲ್ಲಿ ಅತಿಯಾದ ಎಣ್ಣೆ ಸ್ರವಿಸಲ್ಪಡುವುದು ಹಾಗೂ ಇದರಿಂದ ಉಂಟಾಗುವ ಮೊಡವೆಗಳು. ಇದಕ್ಕಾಗಿ ಅನೇಕರು ಬಳಸದ ಕ್ರೀಮ್‌ಗಳಿಲ್ಲ, ಮಾಡದ ಮನೆಮದ್ದುಗಳಿಲ್ಲ, ಹೋಗದ ಪಾರ್ಲರ್‌ಗಳಿಲ್ಲ. ಆದರೆ ಸಮಸ್ಯೆ ಮಾತ್ರ ಎಂದಿನದ್ದೇ. ಹಾಗಾದರೆ ಮೊಡವೆಗಳಿಗೆ ಪರಿಹಾರವೇ ಇಲ್ಲವೇ ಎಂದು ನೀವು ಕೇಳಬಹುದು. ಖಂಡಿತ ಇದ್ದೇ ಇದೆ. ಮುಖ್ಯವಾಗಿ, ಚರ್ಮದ ಹೊರಗಿನ ಆರೈಕೆಗಿಂತ ಒಳಗಿನ ಆರೈಕೆ ಮುಖ್ಯ. ಒಳಗೆ ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕಾಳಜಿ ಮಾಡಬೇಕು. ಬನ್ನಿ, ಯಾವೆಲ್ಲ ಆಹಾರಗಳ ಬಗ್ಗೆ ಎಚ್ಚರ ಅಗತ್ಯ ಎಂಬುದನ್ನು ನೋಡೋಣ.

Warm milk

ಹಾಲು

ಹಾಲಿನಿಂದ ಮೊಡವೆಗಳುಂಟಾಗಬಹುದು. ಆಶ್ಚರ್ಯವಾದರೂ ಸತ್ಯವೇ. ಹಸುವಿನ ಹಾಲಿನಲ್ಲಿ ಬೆಳವಣಿಗೆಯ ಹಾರ್ಮೋನ್‌ ಐಜಿಎಫ್‌-1 ಹಾಗೂ ಬೊವಿನ್‌ ಇರುವುದರಿಂದ ಇವು ನಮ್ಮ ದೇಹಕ್ಕೆ ಸೇರುವುದರಿಂದ ಇವು ಚರ್ಮದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದರಿಂದ ಮುಖದಲ್ಲಿ ಕೂದಲ ಬೆಳವಣಿಗೆ ಹಾಗೂ ಮೊಡವೆಗಳೂ ಉಂಟಾಗುತ್ತದೆ.

ಅಯೋಡಿನ್

ಮೊಡವೆಗಳಿಗೂ ಅಯೋಡಿನ್‌ಗೂ ಅವಿನಾಭಾವ ಸಂಬಂಧವಿದೆ. ಅಂದರೆ, ಉಪ್ಪು ಹೆಚ್ಚಿರುವ ತಿನಿಸುಗಳನ್ನು, ಆಗಾಗ ತಿನ್ನುವ ಆಹಾರಗಳಲ್ಲಿರುವ ಉಪ್ಪಿನ ಪ್ರಮಾಣ ಎಲ್ಲವೂ ನಮ್ಮ ಚರ್ಮದ ಮೇಲೆ ಪ್ರಭಾವ ಬೀರುತ್ತದೆ. ಆದರೆ, ಪೂರ್ತಿಯಾಗಿ ಉಪ್ಪನ್ನು ಬಿಡಬೇಡಿ. ಅಯೋಡಿನ್‌ ಕೊರತೆ ದೇಹಕ್ಕೆ ಆಗಬಾರದು ಎಂಬುದನ್ನೂ ನೆನಪಿನಲ್ಲಿಟ್ಟುಕೊಂಡು ಕೊಂಚ ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ತಿನ್ನುವ ಅಭ್ಯಾಸ ರೂಢಿಸಿಕೊಳ್ಳಿ. ಇದು ನಿಮ್ಮ ಚರ್ಮದ ಮೇಲೆ ಮ್ಯಾಜಿಕ್‌ ಮಾಡಬಹುದು.

Index foods

ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳು

ಕಡಿಮೆ ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳ ಸೇವನೆ ನಿಮ್ಮ ಮೊಡವೆಗಳ ಸಮಸ್ಯೆಯನ್ನೇ ಸಂಪೂರ್ಣವಾಗಿ ಇಲ್ಲವಾಗಿಸುತ್ತದೆ ಎನ್ನಲಾಗುತ್ತದೆ. ಕಾರ್ನ್‌ ಸಿರಪ್‌, ಮೈದಾ, ಸಕ್ಕರೆ, ರಿಫೈನ್ಡ್‌ ಧಾನ್ಯಗಳು, ಸಾಸ್‌ ಹಾಗೂ ಕೆಚಪ್‌ಗಳು, ಸ್ಪೋರ್ಟ್ಸ್‌ ಡ್ರಿಂಕ್‌ಗಳು ಸಂಸ್ಕರಿಸಿದ ಮಾಂಸ ಹಾಗೂ ಇತರ ಆಹಾರಗಳು, ಇತರ ಆಹಾರಗಳ ಮೂಲಕ ಗೊತ್ತೇ ಆಗದಂತೆ ದೇಹದೊಳಕ್ಕೆ ಸೇರುವ ಸಕ್ಕರೆ ಎಲ್ಲವೂ ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಹೊಂದಿವೆ. ಆದಷ್ಟೂ ನೈಸರ್ಗಿಕ ಆಹಾರಗಳು, ಒಣಬೀಜಗಳು, ಹಣ್ಣುಗಳು ಇತ್ಯಾದಿಗಳನ್ನೇ ತಿನ್ನಿ.
ಹಾಗಾದರೆ ಏನು ತಿಂದರೆ ಮೊಡವೆಗಳು ಬರದಂತೆ ತಡೆಯಬಹುದು, ಚರ್ಮವನ್ನು ನುಣುಪಾಗಿ ಇರಿಸಬಹುದು ಎನ್ನುತ್ತೀರಾ? ಝಿಂಕ್‌ ಹೆಚ್ಚಿರುವ ಆಹಾರಗಳು ಮೊಡವೆ ಸಮಸ್ಯೆಗೆ ಬಹಳ ಒಳ್ಳೆಯದು. ಇದರಲ್ಲಿರುವ ಆಂಟಿ ಇನ್‌ಫ್ಲಮೇಟರಿ ಗುಣಗಳು ಮೊಡವೆ ಉಂಟು ಮಾಡುವ ಬ್ಯಾಕ್ಟೀರಿಯಾಗಳನ್ನು ಓಡಿಸುತ್ತವೆ. ಕಿಡ್ನಿ ಬೀನ್ಸ್‌, ಓಯ್ಸ್ಟರ್‌, ಕೆಂಪು ಮಾಂಸ ಹಾಗೂ ಸಿಹಿಕುಂಬಳದ ಬೀಜ ಇವುಗಳಲ್ಲಿ ಹೆಚ್ಚು ಝಿಂಕ್‌ ಇವೆ.
ಅಷ್ಟೇ ಅಲ್ಲ, ಒಮೆಗಾ 3 ಇರುವ ಆಹಾರಗಳನ್ನು ಹೆಚ್ಚಿಸಿ ಒಮೆಗಾ ಇರುವ ಆಹಾರಗಳಾದ ಸಂಸ್ಕರಿಸಿದ ಎಣ್ಣೆಗಳು, ಬೇಕ್ಡ್‌ ಆಹಾರಗಳು ಇತ್ಯಾದಿಗಳನ್ನು ಕಡಿಮೆ ಮಾಡಿ. ನದಿಯ ಮೀನನ್ನು ವಾರಕ್ಕೆರಡು ಬಾರಿ ತಿನ್ನಿ. ಚಿಯಾ ಬೀಜಗಳು, ಅಗಸೆ ಬೀಜಗಳನ್ನು ನಿತ್ಯವೂ ಸೇವಿಸಿ. ಆಹಾರ ಸೇವನೆಯ ಪ್ರಮಾಣದ ಮೇಲೆ ಹಿಡಿತವಿರಲಿ. ನೈಸರ್ಗಿಕ ಆಹಾರಗಳನ್ನೇ ಹೆಚ್ಚು ಸೇವಿಸಿ. ಎಲ್ಲ ಪೋಷಕಾಂಶಗಳನ್ನೊಳಗೊಂಡ ಸಂಪೂರ್ಣ ಆಹಾರದೆಡೆಗೆ ಗಮನ ಇರಲಿ. ಇಷ್ಟು ಮಾಡಿದರೆ ಖಂಡಿತವಾಗಿಯೂ ನಿಮ್ಮ ಚರ್ಮವೂ ಆರೋಗ್ಯಕರವಾಗಿ ಫಲಫಳಿಸುತ್ತದೆ ಎನ್ನುತ್ತಾರೆ ವೈದ್ಯರು.

ಇದನ್ನೂ ಓದಿ: Balancing Hormones Naturally: ಹಾರ್ಮೋನು ಸಮತೋಲನಕ್ಕೆ ಬೇಕು ಇಂಥ ಆಹಾರಗಳು

Continue Reading

ಆರೋಗ್ಯ

Benefits Of Spinach Juice: ದಟ್ಟ ಕೂದಲು ಬೇಕೆ? ಪಾಲಕ್‌ ಜ್ಯೂಸ್‌ ಕುಡಿಯಿರಿ

ಬೆಳಗಿನ ಹೊತ್ತು ಹಸಿರು ಜ್ಯೂಸ್‌ಗಳನ್ನು ಕುಡಿಯುವುದು ಎಷ್ಟು ಜನಪ್ರಿಯವೋ ಆರೋಗ್ಯಕ್ಕೂ ಅಷ್ಟೇ ಹಿತ. ಪಾಲಕ್‌ ಸೊಪ್ಪಿನ ರಸವನ್ನು ಕುಡಿಯುವುದರಲ್ಲಿ ಏನೇನು ಲಾಭಗಳು ಅಡಗಿವೆ? ಹಲವು ರೀತಿಯ ಉತ್ಕರ್ಷಣ ನಿರೋಧಕಗಳು, ಕಬ್ಬಿಣ, ಕ್ಯಾಲ್ಶಿಯಂನಂಥ ಅಗತ್ಯ ಖನಿಜಗಳು, ಎ, ಸಿ, ಇ ನಂಥ ಮಹತ್ವದ ಜೀವಸತ್ವಗಳನ್ನು ಒಳಗೊಂಡ ಈ ಸೊಪ್ಪಿನಲ್ಲಿ (Benefits Of Spinach Juice) ನಾರು ಸಹ ಹೇರಳವಾಗಿದೆ.

VISTARANEWS.COM


on

Benefits of Spinach Juice
Koo

ಬೆಳಗಿನ ಹೊತ್ತಿಗೆ ಹಲವು ರೀತಿಯ ಹಸಿರು ಜ್ಯೂಸ್‌ಗಳನ್ನು ಕುಡಿಯುವವರ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿದೆ. ತಾಜಾ ಸೊಪ್ಪುಗಳು ದೊರೆತರೆ, ಅವುಗಳ ರಸ ಕುಡಿಯುವುದು ಆರೋಗ್ಯಕ್ಕೆ ಒಳಿತು ಮಾಡುವುದು ಸುಳ್ಳೇನಲ್ಲ. ಅಂಥದ್ದೇ ಹಸಿರು ಜ್ಯೂಸ್‌ಗಳ ಪೈಕಿ ಒಂದು ಪಾಲಕ್‌ ಸೊಪ್ಪಿನದ್ದು. ರುಚಿಗೆ ಬೇಕಿದ್ದರೆ ಶುಂಠಿ, ನಿಂಬೆ ರಸಗಳನ್ನೆಲ್ಲ ಬೆರೆಸಿಕೊಂಡರೆ ಹಸಿರು ಜ್ಯೂಸ್‌ಗಳು ಬಾಯಿಗೂ ರುಚಿ, ದೇಹಕ್ಕೂ ಹಿತ. ಹಲವು ರೀತಿಯ ಉತ್ಕರ್ಷಣ ನಿರೋಧಕಗಳು, ಕಬ್ಬಿಣ, ಕ್ಯಾಲ್ಶಿಯಂನಂಥ ಅಗತ್ಯ ಖನಿಜಗಳು, ಎ, ಸಿ, ಇ ನಂಥ ಮಹತ್ವದ ಜೀವಸತ್ವಗಳನ್ನು ಒಳಗೊಂಡ ಈ ಸೊಪ್ಪಿನಲ್ಲಿ ನಾರು ಸಹ ಹೇರಳವಾಗಿದೆ. ಇನ್ನೂ ಏನೇನು ಲಾಭಗಳಿವೆ ಪಾಲಕ್‌ ಸೊಪ್ಪಿನ ರಸ (Benefits Of Spinach Juice) ಕುಡಿಯುವುದರಲ್ಲಿ?
ಸ್ಥೂಲವಾಗಿ ಹೇಳುವುದಾದರೆ, ಇದರ ಸಮೃದ್ಧ ಕಬ್ಬಿಣದಂಶವು ರಕ್ತಹೀನತೆಯ ನಿವಾರಣೆಗೆ ನೆರವಾಗುತ್ತದೆ. ಹಲವಾರು ಜೀವಸತ್ವಗಳು ಕೂದಲನ್ನು ಸೊಂಪಾಗಿ, ಸಮೃದ್ಧವಾಗಿಸುತ್ತವೆ. ಜೊತೆಗೆ, ತ್ವಚೆ ಮತ್ತು ಉಗುರಿನ ಆರೋಗ್ಯವನ್ನು ಹೆಚ್ಚಿಸುತ್ತವೆ. ರಕ್ತದಲ್ಲಿನ ಸಕ್ಕರೆಯಂಶವನ್ನು ನಿಯಂತ್ರಿಸಲು, ಜೀರ್ಣಕ್ರಿಯೆಯನ್ನು ಸರಾಗಗೊಳಿಸಲು ಮತ್ತು ಪ್ರತಿರೋಧಕ ಶಕ್ತಿಯನ್ನು ಪ್ರಚೋದಿಸಲು ಸಾಧ್ಯವಾಗುತ್ತದೆ. ದೇಹದ ಒಟ್ಟಾರೆ ಸ್ವಾಸ್ಥ್ಯವನ್ನು ಹೆಚ್ಚಿಸಿ, ತೂಕ ಇಳಿಕೆಗೂ ನೆರವಾಗಬಹುದಾದ ಪೇಯವಿದು.

Antioxidants in it keep immunity strong Benefits Of Mandakki

ಉತ್ಕರ್ಷಣ ನಿರೋಧಕಗಳು

ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಉರಿಯೂತವನ್ನು ಶಮನ ಮಾಡುತ್ತವೆ. ಅದರಲ್ಲೂ ಪಾಲಕ್‌ನಲ್ಲಿರುವ ಫಾಲಿಕ್‌ ಆಮ್ಲವು ಗರ್ಭಿಣಿಯರಿಗೆ ಪೂರಕವಾದಂಥ ಪೌಷ್ಟಿಕಾಂಶ. ಭ್ರೂಣದ ಬೆನ್ನುಹುರಿ ಮತ್ತು ಮೆದುಳಿನ ಬೆಳವಣಿಗೆಗೆ ಅಗತ್ಯವಾದ ಪೋಷಣೆಯನ್ನು ಇದು ಒದಗಿಸುತ್ತದೆ. ಬಾಣಂತಿಯರಿಗೆ ಈ ಸೊಪ್ಪನ್ನು ನೀಡುವುದರಿಂದ ಮಗುವಿಗೆ ದೊರೆಯುವ ಹಾಲಿನ ಪ್ರಮಾಣ ವೃದ್ಧಿಯಾಗುತ್ತದೆ. ಇದರಿಂದ ಶಿಶುವಿನ ಬೆಳವಣಿಗೆಯೂ ಚೆನ್ನಾಗಿ ಆಗುವುದಲ್ಲದೆ, ತಾಯಿಯ ದೇಹದ ಅನಗತ್ಯ ಕೊಬ್ಬೂ ಕರಗಲು ಸಹಾಯವಾಗುತ್ತದೆ.

Asian Woman with a Beautiful Face and Fresh Smooth Skin Is Dres Sesame Benefits

ತ್ವಚೆಯ ಆರೋಗ್ಯ ವೃದ್ಧಿ

ವಿಟಮಿನ್‌ ಎ ಸಮೃದ್ಧವಾಗಿರುವ ಈ ಸೊಪ್ಪಿನ ಸೇವನೆಯಿಂದ ಚರ್ಮದ ಕಾಂತಿಯನ್ನು ವೃದ್ಧಿಸಿಕೊಳ್ಳಲು ಸಾಧ್ಯ. ದೇಹದಲ್ಲಿರುವ ಟಾಕ್ಸಿನ್‌ಗಳನ್ನು ಹೊರಗಟ್ಟಿ, ತ್ವಚೆಯ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ. ಮೊಡವೆ ಮೂಡುವುದನ್ನು ಒಳಗಿನಿಂದ ತಡೆದು, ಶುಭ್ರ ಕಾಂತಿಯನ್ನು ನೀಡಿ, ತಾರುಣ್ಯಭರಿತ ಚರ್ಮವನ್ನು ಹೊಂದಲು ನೆರವಾಗುತ್ತದೆ.

Improved Digestion Tea Benefits

ಜೀರ್ಣಾಂಗಗಳ ಕ್ಷಮತೆ ಹೆಚ್ಚಳ

ನಾರಿನಂಶ ವಿಫುಲವಾಗಿರುವ ಈ ಸೊಪ್ಪಿನ ರಸ ಕುಡಿಯುವುದರಿಂದ ಜೀರ್ಣಾಂಗಗಳ ತೊಂದರೆಗಳನ್ನು ದೂರ ಮಾಡಬಹುದು. ಅಜೀರ್ಣ, ಹೊಟ್ಟೆಯುಬ್ಬರಗಳನ್ನು ನಿವಾರಿಸಿ, ಮಲಬದ್ಧತೆಯನ್ನು ನಿಯಂತ್ರಣಕ್ಕೆ ತರುವುದಕ್ಕೆ ಇದರಿಂದ ಸಾಧ್ಯ. ಇದನ್ನು ಆಹಾರದಲ್ಲಿ ನಿಯಮಿತವಾಗಿ ಬಳಸುವುದರಿಂದಲೂ ಈ ಲಾಭಗಳನ್ನು ಪಡೆಯಬಹುದು.

Promotes Hair Health Curry Leaves Benefits

ದಟ್ಟ ಕೂದಲು

ಕಪ್ಪಾದ ದಟ್ಟ ಕೇಶರಾಶಿ ಎಲ್ಲರಿಗೂ ಪ್ರಿಯವೇ. ಆದರೆ ಹಾಗಿರುವವರು ಅಪರೂಪ. ಹಲವು ವಿಟಮಿನ್‌ ಬಿಗಳು ಸಮೃದ್ಧವಾಗಿರುವ ಪಾಲಕ್‌ ಸೊಪ್ಪು, ಕೂದಲಿನ ಆರೋಗ್ಯ ರಕ್ಷಣೆಗೆ ನೆರವಾಗಬಲ್ಲದು. ತಲೆಯ ಚರ್ಮದ ಆರೋಗ್ಯ ಕಾಪಾಡಿ, ಕೂದಲುಗಳ ಬುಡವನ್ನು ಸಶಕ್ತವಾಗಿಸಬಲ್ಲದು. ಕೂದಲು ನಿರ್ಜೀವವಾಗಿ ತುಂಡಾಗುವುದನ್ನು ತಡೆದು, ಕೇಶಗಳ ಬೆಳವಣಿಗೆಯನ್ನೂ ಪ್ರೋತ್ಸಾಹಿಸಬಲ್ಲದು.

There is a vaccine for seasonal diseases like flu get it Monsoon Allergies

ರೋಗಗಳು ದೂರ

ವಿಟಮಿನ್‌ ಸಿ, ಫ್ಲೆವನಾಯ್ಡ್‌ಗಳು, ಲೂಟೆನ್, ಕ್ಲೊರೊಫಿಲ್‌ನಂಥ ಉತ್ಕರ್ಷಣ ನಿರೋಧಕಗಳು ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದರಿಂದ ರೋಗಗಳೊಂದಿಗೆ ಹೋರಾಡುವ ಸಾಮರ್ಥ್ಯವೂ ವೃದ್ಧಿಸುತ್ತದೆ. ಜೊತೆಗೆ, ಮಧುಮೇಹ, ಕ್ಯಾನ್ಸರ್‌ನಂಥ ರೋಗಗಳನ್ನು ತಡೆಯಲು ನೆರವು ನೀಡುತ್ತದೆ.

ಇದನ್ನೂ ಓದಿ: Dental Braces: ಹಲ್ಲುಗಳ ಸೌಂದರ್ಯ ವೃದ್ಧಿಗೆ ಬ್ರೇಸಸ್‌ ಹಾಕುವ ಯೋಚನೆ ಇದೆಯೇ? ಈ ಮಾಹಿತಿ ತಿಳಿದಿರಲಿ

Continue Reading

ಆರೋಗ್ಯ

Sweet Potatoes: ಗೆಣಸಿಗೆ ಮಧುಮೇಹ ನಿಯಂತ್ರಿಸುವ, ಕ್ಯಾನ್ಸರ್ ತಡೆಯುವ ಸಾಮರ್ಥ್ಯವಿದೆ!

ಗೆಣಸನ್ನು ವೈವಿಧ್ಯಮಯ ಅಡುಗೆಗಳಲ್ಲಿ ಉಪಯೋಗಿಸಬಹುದು. ಸುಮ್ಮನೆ ಬೇಯಿಸಿ, ಸುಲಿದು ತಿನ್ನುವುದರಿಂದ ಹಿಡಿದು, ಹೋಳಿಗೆ, ಪಾಯಸ, ಸಾಂಬಾರ್‌, ಪಲ್ಯ, ಅವಿಯಲ್‌, ಬಾಜಿ, ಕೂಟು, ರಾಯ್ತ, ಚಿಪ್ಸ್‌, ಕಟ್ಲೆಟ್‌, ಹಪ್ಪಳ ಮುಂತಾದ ಯಾವುದೇ ಬಗೆಯ ಅಡುಗೆಗೆ ಇದು ಸೈ. ಆದರೆ ಆರೋಗ್ಯಕ್ಕೇನು ಲಾಭ (Nutritional benefits of Sweet Potatoes) ಇದನ್ನು ತಿನ್ನುವುದರಿಂದ? ಇಲ್ಲಿದೆ ಮಾಹಿತಿ.

VISTARANEWS.COM


on

Sweet potatoes have the ability to control diabetes and prevent cancer
Koo

ಬೆಂಗಳೂರು: ಬಾಯಿಗೆ ರುಚಿ ಹತ್ತಿಸುವ ಸಿಹಿಯಾದ ಗೆಣಸಿನ (Sweet Potatoes) ಕಾಲವಿದು. ಕಾಲಕ್ಕೆ ತಕ್ಕ ಆಹಾರವನ್ನು ಸೇವಿಸಬೇಕು ಎನ್ನುವುದು ಭಾರತೀಯರಲ್ಲಿ ಪ್ರಾಚೀನ ದಿನಗಳಿಂದಲೂ ಚಾಲ್ತಿಯಲ್ಲಿರುವ ತತ್ವ. ಇತ್ತೀಚಿನ ವರ್ಷಗಳಲ್ಲಿ ಹೊತ್ತುಗೊತ್ತಿಲ್ಲದೆ ಸಿಕ್ಕಿದ್ದೆಲ್ಲಾ ತಿನ್ನುವ ರೂಢಿ ಬೆಳೆದು ಬಂದಿದೆ. ಆದರೆ ಚಳಿಗಾಲದಲ್ಲಿ ಬೆಳೆಯುವ ಬೆಳೆಗಳೇ ಆ ಕಾಲಕ್ಕೆ ದೇಹವನ್ನು ಆರೋಗ್ಯಪೂರ್ಣವಾಗಿ ಇಡಬಲ್ಲವು ಎನ್ನುವುದು ನೂರು ಪ್ರತಿಶತ ಸತ್ಯ.
ಗೆಣಸನ್ನು (Sweet Potatoes) ವೈವಿಧ್ಯಮಯ ಅಡುಗೆಗಳಲ್ಲಿ ಉಪಯೋಗಿಸಬಹುದು. ಸುಮ್ಮನೆ ಬೇಯಿಸಿ, ಸುಲಿದು ತಿನ್ನುವುದರಿಂದ ಹಿಡಿದು, ಹೋಳಿಗೆ, ಪಾಯಸ, ಸಾಂಬಾರ್‌, ಪಲ್ಯ, ಅವಿಯಲ್‌, ಬಾಜಿ, ಕೂಟು, ರಾಯ್ತ, ಚಿಪ್ಸ್‌, ಕಟ್ಲೆಟ್‌, ಹಪ್ಪಳ ಮುಂತಾದ ಯಾವುದೇ ಬಗೆಯ ಅಡುಗೆಗೆ ಇದು ಸೈ. ಕೊಂಚ ಸಿಹಿ ರುಚಿ ಇದ್ದರೂ, ಖಾರ ರುಚಿಯ ಅಡುಗೆಗೆ ಸಹ ಇದು ಯೋಗ್ಯವೆನಿಸಿದೆ. ಇವೆಲ್ಲ ಬಾಯಿ ರುಚಿಯ ಮಾತಾಯಿತು. ಆರೋಗ್ಯಕ್ಕೇನು ಲಾಭ ಇದನ್ನು ತಿನ್ನುವುದರಿಂದ ಎನ್ನುವುದನ್ನು ನೋಡೋಣ.

ಮಧುಮೇಹ ನಿಯಂತ್ರಣ

ಇದರ ರುಚಿ ಸಿಹಿಯೇ ಆದರೂ ರಕ್ತದಲ್ಲಿ ಸಕ್ಕರೆಯಂಶವನ್ನು ಏರಿಳಿತ ಮಾಡಿಸುವುದಿಲ್ಲ. ಇದರ ಗ್ಲೈಸೆಮಿಕ್‌ ಸೂಚಿ ಕಡಿಮೆ ಇದ್ದು, ಮಧುಮೇಹಿಗಳಿಗೆ ಇದು ಸೇವಿಸಬಹುದಾದ ಆಹಾರವೆನಿಸಿದೆ. ಇದರಲ್ಲಿ ನಾರಿನಂಶ ಹೇರಳವಾಗಿದ್ದು, ನಿಧಾನವಾಗಿ ಜೀರ್ಣವಾಗಿ ರಕ್ತವನ್ನು ಸೇರುತ್ತದೆ. ಹಾಗಾಗಿ ಇದನ್ನು ತಿಂದಾಕ್ಷಣ ರಕ್ತದಲ್ಲಿ ಸಕ್ಕರೆಯಂಶ ಧಿಡೀರ್‌ ಏರಿಕೆ ಆಗುವುದಿಲ್ಲ.

ಕ್ಯಾನ್ಸರ್‌ ತಡೆಯುವ ಸಾಮರ್ಥ್ಯ

ಇದರಲ್ಲಿರುವ ಬೀಟಾ ಕ್ಯಾರೊಟಿನ್‌ ಮತ್ತು ಆಂಥೋಸಯನಿನ್‌ಗಳು ದೇಹಕ್ಕೆ ಮಹತ್ವದ ಸತ್ವಗಳನ್ನು ನೀಡುತ್ತವೆ. ದೇಹದಲ್ಲಿ ತೇಲಾಡುವ ಮುಕ್ತ ಕಣಗಳನ್ನು ನಿರ್ಬಂಧಿಸುವ ಸಾಮರ್ಥ್ಯ ಈ ಪೋಷಕಾಂಶಗಳಿಗಿದ್ದು, ಕ್ಯಾನ್ಸರ್‌ನಂಥ ಮಾರಕ ರೋಗಗಳ ಭೀತಿಯನ್ನು ದೂರ ಮಾಡುತ್ತವೆ. ಅದಲ್ಲದೆ, ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುವಾದ ಇಂಥ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ ಆಹಾರಗಳ ಸೇವನೆ ಅತಿ ಮುಖ್ಯ.

ಇದನ್ನೂ ಓದಿ: Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

ಪೋಷಕಾಂಶಗಳು ಹೇರಳ

ಇದರಲ್ಲಿ ದೇಹಕ್ಕೆ ಅಗತ್ಯವಾದ ನಾರಿನಂಶ ಭರಪೂರ ಇದೆ. ಇದರಿಂದ ಹೆಚ್ಚು ಕಾಲದವರೆಗೆ ಹೊಟ್ಟೆ ತುಂಬಿದ ಅನುಭವವಾಗಿ, ಕಳ್ಳ ಹಸಿವೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ವಿಟಮಿನ್‌ ಸಿ, ಎ ಮತ್ತು ಹಲವು ರೀತಿಯ ಬಿ ಜೀವಸತ್ವಗಳು ಇದರಲ್ಲಿವೆ. ಪೊಟಾಶಿಯಂ, ಕಬ್ಬಿಣ, ಮೆಗ್ನೀಶಿಯಂನಂಥ ಖನಿಜಗಳು ಸಾಕಷ್ಟಿದ್ದು, ದೇಹಕ್ಕೆ ಬೇಕಾದ ಸೂಕ್ಷ್ಮ ಪೋಷಕಾಂಶಗಳನ್ನು ಇದು ನೀಡುತ್ತದೆ. ಶರೀರದಲ್ಲಿ ಎಲೆಕ್ಟ್ರೊಲೈಟ್‌ ಸಮತೋಲನಕ್ಕೂ ಇದು ನೆರವಾಗುತ್ತದೆ

ತ್ವಚೆ, ಚರ್ಮಕ್ಕೆ ಲಾಭ

ಇದರಲ್ಲಿರುವ ವಿಟಮಿನ್‌ ಅಂಶಗಳಿಂದ ದೃಷ್ಟಿಯನ್ನು ಚುರುಕಾಗಿಸಬಹುದು ಮತ್ತು ತ್ವಚೆಯನ್ನು ಕಾಂತಿಯುಕ್ತಗೊಳಿಸಬಹುದು. ಇದರಲ್ಲಿರುವ ಕೊಲಿನ್‌ ಅಂಶವು ಕಣ್ಣಿಗೆ ಅಗತ್ಯವಾದ ಸತ್ವಗಳನ್ನು ನೀಡಿ, ದೃಷ್ಟಿಯನ್ನು ಕಾಪಾಡುತ್ತದೆ.

ಪಚನಕಾರಿ

ನಾರಿನಂಶ ಹೆಚ್ಚಿರುವುದರಿಂದ ಜೀರ್ಣಾಂಗಗಳ ದಕ್ಷತೆಯನ್ನು ಹೆಚ್ಚಿಸುತ್ತದೆ. ಮಲಬದ್ಧತೆಯನ್ನು ನಿವಾರಿಸಿ, ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜೀರ್ಣಾಂಗಗಳು ಚುರುಕಾದರೆ ಶರೀರದಲ್ಲಿ ಅನಗತ್ಯ ಕೊಬ್ಬು ಜಮೆಯಾಗದಂತೆ ತಡೆಯುವುದು ಸುಲಭ. ಈ ಎಲ್ಲಾ ಕಾರಣಗಳಿಂದ ಇದು ತೂಕ ಇಳಿಸುವವರಿಗೂ ಉಪಯುಕ್ತ ತಿನಿಸು.

ರುಚಿಕರ ಖಾದ್ಯ

ಇದು ಭಾರತದಲ್ಲಿ ಮಾತ್ರವಲ್ಲ, ಜಗತ್ತಿನೆಲ್ಲೆಡೆ ಬಳಕೆಯಲ್ಲಿರುವ ಗಡ್ಡೆ. ಐರೋಪ್ಯ ಸೂಪ ಶಾಸ್ತ್ರಗಳಲ್ಲಿ, ಪೂರ್ವ ದೇಶಗಳ ಅಡುಗೆಗಳಲ್ಲಿ ಸಹ ಇದರ ಬಳಕೆಯಿದೆ. ಕೊರೆಯುವ ಚಳಿಯಿರುವ ದೇಶಗಳಲ್ಲಿ ಹಾಗೂ ದ್ವೀಪ ರಾಷ್ಟ್ರಗಳಲ್ಲಿ ಗಡ್ಡೆ-ಗೆಣಸುಗಳ ಬಳಕೆ ವ್ಯಾಪಕವಾಗಿರುವುದರಿಂದ ರಷ್ಯಾದಿಂದ ಹಿಡಿದು ಹವಾಯ್‌ ದ್ವೀಪಗಳವರೆಗೆ ಇದು ಸರ್ವವ್ಯಾಪಿ. ಇನ್ನು ಭಾರತದ ಎಲ್ಲಾ ಭಾಗಗಳಲ್ಲೂ ಗೆಣಸಿನ ಖಾದ್ಯಗಳು ಜನಪ್ರಿಯ. ಬೇಯಿಸಿ, ಕರಿದು, ಸುಟ್ಟು, ಬೇಕ್‌ ಮಾಡಿ, ಹೆಚ್ಚಿ ಒಗ್ಗರಣೆ ಹಾಕಿ, ರುಬ್ಬಿ ಸ್ಮೂದಿ ಮಾಡಿ- ಹೀಗೆ ನಮ್ಮ ಕಲ್ಪನೆಯ ಯಾವುದೇ ರೀತಿಯಲ್ಲಿ ಇವುಗಳನ್ನು ಅಡುಗೆಯಲ್ಲಿ ಬಳಸಬಹುದು. ಚಳಿಗಾಲದಲ್ಲಿ ಇದರ ಬಳಕೆ ಹೆಚ್ಚು. ಋತುಮಾನಕ್ಕೆ ಸರಿಯಾದ ಆಹಾರವೂ ಹೌದಾಗಿರುವ ಈ ಸತ್ವಶಾಲಿ ಗಡ್ಡೆಯನ್ನು ನಿಯಮಿತವಾಗಿ ತಿನ್ನಿ, ಆರೋಗ್ಯ ವೃದ್ಧಿಸಿಕೊಳ್ಳಿ.

Continue Reading

ತುಮಕೂರು

Food poisoning: ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ

Food poisoning: ಬುಧವಾರ ರಾಮನವಮಿ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕಿನ ಮಂಗಳಾ ಗೇಟ್ ಬಳಿಯಿರುವ ಸುಬ್ರಮಣ್ಯ ದೇವಸ್ಥಾನದಲ್ಲಿ ಭಕ್ತರು ಮಜ್ಜಿಗೆ, ಪಾನಕವನ್ನು ಸೇವನೆ ಮಾಡಿದ್ದರು. ಇವರಿಗೆ ಮಧ್ಯರಾತ್ರಿಯಿಂದ ಹೊಟ್ಟೆನೋವು ಬಂದಿದೆ. ಬಳಿಕ ವಾಂತಿ- ಭೇದಿ ಶುರುವಾಗಿದೆ. ಯಡಿಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

Food poisoning 45 people fall ill after consuming drink buttermilk
Koo

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೊಡವತ್ತಿ ಕ್ರಾಸ್‌ನ ಗೊಲ್ಲರಹಟ್ಟಿಯಲ್ಲಿ ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥರಾಗಿರುವ‌ (Food poisoning) ಪ್ರಕರಣ ನಡೆದಿದೆ.

ಬುಧವಾರ ರಾಮನವಮಿ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕಿನ ಮಂಗಳಾ ಗೇಟ್ ಬಳಿಯಿರುವ ಸುಬ್ರಮಣ್ಯ ದೇವಸ್ಥಾನದಲ್ಲಿ ಭಕ್ತರು ಮಜ್ಜಿಗೆ, ಪಾನಕವನ್ನು ಸೇವನೆ ಮಾಡಿದ್ದರು. ಇವರಿಗೆ ಮಧ್ಯರಾತ್ರಿಯಿಂದ ಹೊಟ್ಟೆನೋವು ಬಂದಿದೆ. ಬಳಿಕ ವಾಂತಿ- ಭೇದಿ ಶುರುವಾಗಿದೆ.

ಹೀಗಾಗಿ ಬೆಳಗ್ಗೆ ಯಡಿಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading
Advertisement
Murder Case
ಬೆಂಗಳೂರು6 mins ago

Murder case : ಬೆಂಗಳೂರಲ್ಲಿ ರಕ್ತದೋಕುಳಿ; ಪ್ರತ್ಯೇಕ ಕಡೆಗಳಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ

IPL 2024
ಕ್ರೀಡೆ14 mins ago

IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ

Lok Sabha Election 2024 Rajinikanth Kamal Haasan Dhanush Vijay Sethupathi vote in Chennai
ಕಾಲಿವುಡ್15 mins ago

Lok Sabha Election 2024: ಚೆನ್ನೈನಲ್ಲಿ ಮತ ಚಲಾಯಿಸಿದ ರಜನಿಕಾಂತ್​, ಧನುಷ್, ಕಮಲ್ ಹಾಸನ್, ವಿಜಯ್‌!

summer trip
ಪ್ರವಾಸ51 mins ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್54 mins ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Harshika Poonacha Bhuvan! for speak Kannada
ಸ್ಯಾಂಡಲ್ ವುಡ್1 hour ago

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

murali sreeshankar
ಕ್ರೀಡೆ1 hour ago

Murali Sreeshankar: ಒಲಿಂಪಿಕ್ಸ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪದಕ ಭರವಸೆಯ ಕ್ರೀಡಾಪಟು

virat kohli
ಕ್ರೀಡೆ2 hours ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ2 hours ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ2 hours ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌