Site icon Vistara News

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನೇಮಕ

veerendra heggade letter to PM Modi

ನವ ದೆಹಲಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಹೆಗ್ಗಡೆ ಅವರ ಜತೆಗೆ ಖ್ಯಾತ ಅಥ್ಲೀಟ್ ಪಿ.ಟಿ ಉಷಾ, ಸಂಗೀತ ಮಾಂತ್ರಿಕ ಇಳಯರಾಜ, ಚಲನಚಿತ್ರ ನಿರ್ಮಾಪಕ ವಿ. ವಿಜಯೇಂದ್ರ ಪ್ರಸಾದ್ (ಖ್ಯಾತ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ಅವರ ತಂದೆ) ಅವರನ್ನೂ ನೇಮಕ ಮಾಡಲಾಗಿದೆ.

ʼʼವೀರೇಂದ್ರ ಹೆಗ್ಗಡೆ ಅವರು ಸಮಾಜಸೇವೆಯ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳ ಕ್ಷೇತ್ರದಲ್ಲಿ ಅವರನ್ನು ಭೇಟಿ ಮಾಡುವ ಹಾಗೂ ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿ ರಂಗಗಳಲ್ಲಿ ಅವರು ಮಾಡಿರುವ ಸೇವೆಯನ್ನು ಕಣ್ಣಾರೆ ಕಾಣುವ ಸುಯೋಗ ನನ್ನದಾಗಿತ್ತು. ಅವರು ರಾಜ್ಯಸಭೆಯ ಔನ್ನತ್ಯವನ್ನು ಇನ್ನಷ್ಟು ಹೆಚ್ಚಿಸಲಿದ್ದಾರೆʼʼ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

Exit mobile version