Site icon Vistara News

Gopalakrishna Nairi | ಹಿರಿಯ ರಂಗಕರ್ಮಿ ಗೋಪಾಲಕೃಷ್ಣ ನಾಯಿರಿ ನಿಧನ

Gopalakrishna Nairi Death

ಉಡುಪಿ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಗೋಪಾಲಕೃಷ್ಣ ನಾಯಿರಿ (69) (Gopalakrishna Nairi) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆಯ ಸಾಲಿಗ್ರಾಮ ನಿವಾಸಿಯಾಗಿರುವ ಗೋಪಾಲಕೃಷ್ಣ ನಾಯಿರಿ ಅವರು, ರಾಷ್ಟ್ರೀಯ ಪ್ರಸಿದ್ಧಿಯ ಪ್ರಯೋಗಶೀಲ ರಂಗ ನಿರ್ದೇಶಕರಾಗಿ ಪ್ರಖ್ಯಾತಿಯನ್ನು ಪಡೆದಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕಾರವನ್ನೂ ಸಹ ಇವರು ಪಡೆದುಕೊಂಡಿದ್ದರು.

ಕೆಲವು ದಿನಗಳ ಹಿಂದೆ ಅನಾರೋಗ್ಯ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಮಂಗಳ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ | Murder Case : ಚಿಕ್ಕಮಗಳೂರಿನ ಚಾರ್ಮಾಡಿಯಲ್ಲಿ ಮೂರು ದಿನ ಹುಡುಕಿದರೂ ಸಿಗದ ಶರತ್‌ ಕಳೇಬರ; ಬರಿಗೈಲಿ ಪೊಲೀಸರು ವಾಪಸ್‌

Exit mobile version