Site icon Vistara News

Vijay Sankalp Yatre: ಚಳ್ಳಕೆರೆ, ಮೊಳಕಾಲ್ಮೂರಿಗೆ ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ

j-p-nadda-critisizes-freebie-politics-of-congress

ಚಿತ್ರದುರ್ಗ: ಕೋಟೆನಾಡಿಗೆ ಇಂದು ಬಿಜೆಪಿ ಅದ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಚಳ್ಳಕೆರೆ ಹಾಗೂ ಮೊಳಕಾಲ್ಮೂರುಗಳಲ್ಲಿ ನಡೆಯಲಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2:15ಕ್ಕೆ ಚಿತ್ರದುರ್ಗ ನಗರಕ್ಕೆ ಜೆ.ಪಿ ನಡ್ಡಾ ಆಗಮಿಸಲಿದ್ದು, ಮುರುಘಾಮಠ ಬಳಿಯ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ. ರಸ್ತೆ ಮೂಲಕ ಚಳ್ಳಕೆರೆ ಪಟ್ಟಣಕ್ಕೆ ತೆರಳಿ, ಮಧ್ಯಾಹ್ನ 3:30ಕ್ಕೆ ಚಳ್ಳಕೆರೆ ಪಟ್ಟಣದಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಜನ ಸಂಕಲ್ಪ ಯಾತ್ರೆ ಅಂಗವಾಗಿ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಯಲಿದ್ದು, ರೋಡ್ ಶೋ ಬಳಿಕ ರಸ್ತೆ ಮೂಲಕ ಚಳ್ಳಕೆರೆಯಿಂದ ಮೊಳಕಾಲ್ಮೂರಿಗೆ ಆಗಮಿಸಿ ಮಧ್ಯಾಹ್ನ 4:30ಕ್ಕೆ ಮೊಳಕಾಲ್ಮೂರಲ್ಲಿ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಳಿಕ ಬಳ್ಳಾರಿಗೆ ತೆರಳಲಿದ್ದಾರೆ.

ಈ ಮೂಲಕ ಕಾಂಗ್ರೆಸ್ ಭದ್ರಕೋಟೆ ಚಳ್ಳಕೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಿದೆ. ಚಳ್ಳಕೆರೆ ಕ್ಷೇತ್ರದಲ್ಲಿ ಕಮಲ ಅರಳಿಸಲು ತಂತ್ರ ಹೂಡಿರುವ ಬಿಜೆಪಿ, ಬೃಹತ್ ರೋಡ್ ಶೋ, ಸಾವಿರ ಬೈಕ್‌ಗಳ ಬೃಹತ್ ರ್ಯಾಲಿ ಹಾಗೂ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ 35 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಯಿದೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಂಸದ ನಾರಾಯಣಸ್ವಾಮಿ, ಸಚಿವ ಆರ್.ಅಶೋಕ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಪಿ.ಸಿ.ಮೋಹನ್, ಸಚಿವ ಶ್ರೀರಾಮುಲು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Vijay Sankalp Yatre: ಮಾ.18ರಿಂದ 20 ರವರೆಗೆ ಉ.ಕ. ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

Exit mobile version