Chaitra Kundapura : 1.5 ಕೋಟಿ ಡೀಲ್‌ ಆದ್ಮೇಲೆ ಹಾಲಶ್ರೀ ಸ್ವಾಮೀಜಿ ಲೈಫೇ ಫುಲ್‌ ಚೇಂಜ್‌!; ಕಾರು, ಪೆಟ್ರೋಲ್‌ ಪಂಪ್‌, ಜಾಗ ಖರೀದಿ! Vistara News
Connect with us

ಉಡುಪಿ

Chaitra Kundapura : 1.5 ಕೋಟಿ ಡೀಲ್‌ ಆದ್ಮೇಲೆ ಹಾಲಶ್ರೀ ಸ್ವಾಮೀಜಿ ಲೈಫೇ ಫುಲ್‌ ಚೇಂಜ್‌!; ಕಾರು, ಪೆಟ್ರೋಲ್‌ ಪಂಪ್‌, ಜಾಗ ಖರೀದಿ!

Chaitra Kundapura : ಚೈತ್ರಾ ಕುಂದಾಪುರ ನೇತೃತ್ವದ ವಂಚಕ ಗ್ಯಾಂಗ್‌ನಲ್ಲಿರುವ ಹಾಲಶ್ರೀ ಸ್ವಾಮೀಜಿ ತಾವು ಸ್ವೀಕರಿಸಿದ 1.5 ಕೋಟಿ ರೂ.ಯನ್ನು ಏನು ಮಾಡಿದ್ದಾರೆ ಅಂತ ತಿಳಿದುಕೊಳ್ಳಬೇಕಾ? ಹೀಗೆ ಬನ್ನಿ

VISTARANEWS.COM


on

Halasree swameeji and hala matt hirehadagali
ವಿಜಯನಗರ ಜಿಲ್ಲೆಯ ಹಿರೇಹಡಗಲಿಯಲ್ಲಿರುವ ಹಾಲ ಮಠ ಮತ್ತು ಅಭಿನವ ಹಾಲಶ್ರೀ ಸ್ವಾಮೀಜಿ
Koo

ಬೆಂಗಳೂರು: ಉಗ್ರ ಭಾಷಣಕಾರ್ತಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‌ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP Ticket) ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ (Halasree Swameeji) ಲೈಫೇ ಇತ್ತೀಚೆಗೆ ಫುಲ್‌ ಚೇಂಜ್‌ ಆಗಿದೆ. ಇದಕ್ಕೆ ಕಾರಣ, ಡೀಲ್‌ನಲ್ಲಿ ಸಿಕ್ಕಿದ 1.5 ಕೋಟಿ ರೂ.! (1.5 crore deal)

ವಿಜಯ ನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯಲ್ಲಿರುವ ಹಾಲಸ್ವಾಮಿ ಮಠಕ್ಕೆ ಜಂಗಮ (Halaswami jangama matt) ಪರಂಪರೆಯಲ್ಲಿ ದೊಡ್ಡ ಹೆಸರಿದೆ. ಅದೆಷ್ಟೋ ಮಂದಿ ನಿಸ್ವಾರ್ಥ ಸ್ವಾಮೀಜಿಗಳು ಇದ್ದು ಹೋಗಿದ್ದಾರೆ. ಭಕ್ತರು ಇಲ್ಲಿನ ಹಾಲಸ್ವಾಮಿಯ ಜತೆಗೆ ಸ್ವಾಮಿಗಳನ್ನು ಕೂಡಾ ದೇವರೆಂದೇ ನಂಬುತ್ತಾರೆ. ಇಂಥ ಮಠದಲ್ಲಿ ಈಗ ಸ್ವಾಮೀಜಿಗಳಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಮೊನ್ನೆ ಮೊನ್ನೆಯವರೆಗೆ ಹಿಂದೂ ಸಂಘಟನೆಗಳ ಕಣ್ಣಲ್ಲಿ ಹೀರೋ ಆಗಿದ್ದರು. ಒಂದಿಷ್ಟು ಸಾಮಾಜಿಕ ಚಟುವಟಿಕೆಯ ಜತೆಗೆ ಉಗ್ರ ಹಿಂದುತ್ವ ಅವರ ಐಡೆಂಟಿಟಿಯಾಗಿತ್ತು. ಅದೆಷ್ಟೋ ಬಿಜೆಪಿ ನಾಯಕರು, ಸಾಮಾಜಿಕ ಹೋರಾಟಗಾರರು ಅವರ ಕಾಲಿಗೆ ಬೀಳುತ್ತಿದ್ದರು. ಆದರೆ, ಈಗ ಕಳೆದೆರಡು ದಿನಗಳಿಂದ ಈ ಸ್ವಾಮೀಜಿಯೇ ನಾಪತ್ತೆಯಾಗಿದ್ದಾರೆ, ಪ್ರಭಾವಿ ಭಕ್ತರು ತಮಗೂ ಅವರಿಗೂ ಅಂಥ ಸಂಬಂಧವೇನಿಲ್ಲ ಎನ್ನುತ್ತಿದ್ದಾರೆ. ಅವರನ್ನು ಹುಡುಕಿಕೊಂಡು ಸಿಸಿಬಿ ಮಠಕ್ಕೆ ಬಂದು ನೋಟಿಸ್‌ ಹಚ್ಚಿ ಹೋಗಿದೆ. ಸಿಕ್ಕರೆ ಅರೆಸ್ಟ್‌ ಆಗೋದು ಗ್ಯಾರಂಟಿ ಎಂಬ ಸ್ಥಿತಿಯಲ್ಲಿ ಸ್ವಾಮೀಜಿ ಇದ್ದಾರೆ. ಇದಕ್ಕೆಲ್ಲ ಕಾರಣವಾಗಿರುವುದು ಹಾಲಶ್ರೀ ಸ್ವಾಮೀಜಿಯವರು ಚೈತ್ರಾ ಕುಂದಾಪುರ ಜತೆಗೆ ಸೇರಿ ಮಾಡಿದ ಆ ಒಂದು ಡೀಲ್‌!

Halasree swameeji with BSY
ಬಿಎಸ್‌ ಯಡಿಯೂರಪ್ಪ ಅವರ ಜತೆ ಹಾಲಶ್ರೀ ಸ್ವಾಮೀಜಿ ಬಿಜೆಪಿಯ ಹಿರಿಯ ನಾಯಕರೇ ತನಗೆ ಹತ್ತಿರ ಎಂದು ಪೋಸು ಕೊಡುವ ಪ್ರಯತ್ನ ಇದು ಎನ್ನಲಾಗಿದೆ

ಸುಮಾರು 50ರ ಆಸುಪಾಸಿನಲ್ಲಿರುವ ಹಾಲಶ್ರೀ ಸ್ವಾಮೀಜಿಯವರು ಬಿಜೆಪಿ ಪಕ್ಷದಲ್ಲಿ ತಾನು ಪ್ರಭಾವಿ ಇದ್ದೇನೆ ಎಂದು ಹೇಳಿಕೊಳ್ಳುತ್ತಾರೆ. ಇದಕ್ಕೆ ಕಾರಣ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಅವರ ಭಕ್ತರಾಗಿರುವುದು. ಜತೆಗೆ ಚಕ್ರವರ್ತಿ ಸೂಲಿಬೆಲೆಯಂಥ ಪ್ರಖರ ಹಿಂದೂವಾದಿಗಳು, ಮೋದಿ ಪರ ಸಾಮಾಜಿಕ ಸಂಚಲನ ಸೃಷ್ಟಿ ಮಾಡುವವರು ಆಗಾಗ ಮಠಕ್ಕೆ ಬರುವುದು ಈ ಸ್ವಾಮೀಜಿಯವರ ಖದರನ್ನು ಹೆಚ್ಚಿಸುತ್ತಿತ್ತು.

Halasri swameeji with Chakravarti sulibele

ಅದರ ಜತೆಗೆ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್‌ ಕೊಡಿಸಲು ಶಿಫಾರಸು ಮಾಡುವುದು, ಯಾರಾದರೂ ನಾಮಿನೇಷನ್‌ ಹಾಕಿದ್ದರೆ ಅವರನ್ನು ಮಾತನಾಡಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡುವ ಕೆಲಸವನ್ನು ಮಾಡುತ್ತಿದ್ದರು. ಅವರ ಖಟ್ಟರ್‌ ನಿಲುವಿನಿಂದಾಗಿ ಬಿಜೆಪಿಯವರಿಗಿಂತಲೂ ಹೆಚ್ಚಾಗಿ ಹಿಂದೂ ಸಂಘಟನೆಗಳಿಗೆ ಸ್ವಾಮೀಜಿ ಇಷ್ಟವಾಗಿದ್ದರು.

Halasree swameeji with puneet kerehalli
ಪುನೀತ್‌ ಕೆರೆಹಳ್ಳಿ ಜತೆ ಸ್ವಾಮೀಜಿ ಮಾತುಕತೆ

ಚೈತ್ರಾ ಕುಂದಾಪುರ ಡೀಲ್‌ ನಡೆದಿದ್ದು ಮಠದಲ್ಲೇ!

ಕರಾವಳಿಯಲ್ಲಿ ಉಗ್ರ ಹಿಂದುತ್ವದ ಪ್ರಖರ ಭಾಷಣಕಾರ್ತಿಯಾಗಿ ಹೆಸರಾಗಿದ್ದ ಚೈತ್ರಾ ಕುಂದಾಪುರ ಸುಬ್ರಹ್ಮಣ್ಯ ದೇವಸ್ಥಾನದ ವಿಷಯದಲ್ಲಿ ಮೂಗು ತೋರಿಸಲು ಹೋಗಿ ಹೊಡೆತ ತಿಂದು ಬಂದರು. ನಿಜವೆಂದರೆ ಬಳಿಕ ಅವರು ಕರಾವಳಿಯಲ್ಲಿ ಬಣ್ಣ ಕಳೆದುಕೊಂಡಿದ್ದರು. ಅದರ ಬಳಿಕ ಅವರು ಉತ್ತರ ಕರ್ನಾಟಕದ ಮೇಲೆ ಹೆಚ್ಚು ಗಮನ ನೀಡಿದರು. ಒಬ್ಬ ಪೀಚು ಹುಡುಗಿ ಇಷ್ಟೊಂದು ಖಡಕ್ಕಾಗಿ ಮಾತನಾಡುತ್ತಾಳಲ್ಲಾ ಎಂದು ಅಲ್ಲಿನ ಜನ ಹುಚ್ಚೆದ್ದು ಕುಣಿದರು. ಹಿಂದೂ ಸಮಾವೇಶ, ರ‍್ಯಾಲಿಗಳಿಗೆಲ್ಲ ಆಕೆಯೇ ಪ್ರಧಾನ ಭಾಷಣಕಾರ್ತಿ. ಆಕೆಯ ಭಾಷಣದ ತೀಕ್ಷ್ಣತೆಗೆ ಹೆದರಿ ಕೋರ್ಟ್‌ಗಳು ಕೂಡಾ ಆಕೆ ಕೆಲವು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಿರ್ಬಂಧವನ್ನೂ ಹಾಕಿದ್ದು ಇದೆ.

ಇಂಥ ಚೈತ್ರಾ ಕುಂದಾಪುರ ಪ್ರಖರ ಹಿಂದುವಾದಿ ಹಾಲಶ್ರೀ ಸ್ವಾಮೀಜಿ ಪಾಲಿಗೆ ನೀಲಿ ಕಣ್ಣಿನ ಹುಡುಗಿಯಾಗಿದ್ದರಲ್ಲಿ ಹೆಚ್ಚು ಅಚ್ಚರಿಯೇನೂ ಇಲ್ಲ. ಹಾಗೆ ಮಠದೊಂದಿಗೆ ಸಂಪರ್ಕ ಹೊಂದಿದ್ದ ಚೈತ್ರಾ ಕುಂದಾಪುರ ಗೋವಿಂದ ಪೂಜಾರಿಯವರ ಡೀಲ್‌ ಬಂದಾಗ ಹಾಲಶ್ರೀ ಸ್ವಾಮೀಜಿಯನ್ನು ಸಂಪರ್ಕ ಮಾಡಿದ್ದಳು. ಸ್ವಾಮೀಜಿ ಕೂಡಾ ತಮ್ಮ ಎಂದಿನ ಶೈಲಿಯಲ್ಲಿ ʻನೀವು ಹೇಳಿದ್ಮೇಲೆ ಇಲ್ಲ ಅನ್ನೋದುಂಟೇ? ಮಾಡ್ಸೋಣ ಬಿಡಿʼ ಎಂದು ಹೇಳಿದ್ದಾರೆ. ಹಾಗೆ ಚೈತ್ರಾ ಕುಂದಾಪುರ ಗೋವಿಂದ ಪೂಜಾರಿಯವರನ್ನು ಮಠಕ್ಕೆ ಕರೆದುಕೊಂಡು ಹೋಗಿದ್ದಾಳೆ.

Halasree swameeji and Chaitra kundapura

ಅಲ್ಲಿ ಹಿಂದುತ್ವ ಮತ್ತು ಇತರ ಸಂಗತಿಗಳ ಚರ್ಚೆಯೆಲ್ಲ ಮುಗಿದು ಶುರುವಾಗಿದ್ದೇ ಡೀಲು. 2022ರ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಚೈತ್ರಾ ಮತ್ತು ಗೋವಿಂದ ಪೂಜಾರಿ ಮಠಕ್ಕೆ ಭೇಟಿ ನೀಡಿ ಅಲ್ಲಿ ಮಾತುಕತೆ ನಡೆದಿದೆ. ಟಿಕೆಟ್‌ ಕೊಡಿಸಲು ಕೆಲವು ರಾಜಕಾರಣಿಗಳಿಗೆ ಹಣ ಕೊಡಿಸಬೇಕಾಗುತ್ತದೆ. ಹೀಗಾಗಿ 1.5 ಕೋಟಿ ರೂ. ಕೊಡಬೇಕು ಎಂದು ನೇರವಾಗಿ ಸ್ವಾಮೀಜಿ ಕೇಳಿದ್ದಾರೆ. ಟಿಕೆಟ್‌ಗಾಗಿ ಅಷ್ಟು ಖರ್ಚು ಮಾಡಲು ಸಿದ್ಧವಿದ್ದ ಗೋವಿಂದ ಪೂಜಾರಿ ಓಕೆ ಅಂದಿದ್ದಾರೆ. ಈ ಹಣವನ್ನು ಹಾಲಶ್ರೀ ಸ್ವಾಮಿಗೆ ನೇರವಾಗಿ ತಲುಪಿಸಿದ್ದು ಖುದ್ದು ಗೋವಿಂದ ಪೂಜಾರಿ. ಬೆಂಗಳೂರಿನ ಜಯನಗರದಲ್ಲಿರುವ ಮಠಕ್ಕೆ ಹೋಗಿ ಹಣವನ್ನು ನೀಡಲಾಗಿದೆ. ಈ ಹಣ ವರ್ಗಾವಣೆ ನಡೆದಿದ್ದು 2023ರ ಜನವರಿ 16ರಂದು.

Govinda poojari and Chaitra at hala matt
ಹಾಲಸ್ವಾಮಿ ಮಠದಲ್ಲಿ ಸ್ವಾಮೀಜಿಗಳ ಜತೆ ಗೋವಿಂದ ಪೂಜಾರಿ ಮತ್ತು ಚೈತ್ರಾ ಕುಂದಾಪುರ

ಸ್ವಾಮೀಜಿಗಳ ಕೈಮೀರಿ ಹೋದ ಕೇಸು!

ನಿಜವೆಂದರೆ ಚೈತ್ರಾ ಕುಂದಾಪುರ ಗೋವಿಂದ ಪೂಜಾರಿ ಅವರಿಗೆ ಟಿಕೆಟ್‌ ಕೊಡಿಸುವ ಭರವಸೆ ನೀಡಿದ್ದು ಈ ಸ್ವಾಮಿಯನ್ನು ನಂಬಿಕೊಂಡೇ. ಯಾಕೆಂದರೆ ನನಗೆ ಮೋದಿ ಕನೆಕ್ಷನ್‌ ಇದೆ, ಅಮಿತ್‌ ಶಾ ಫೋನ್‌ ಮಾಡ್ತಾರೆ. ಅವರಿಗೆ ಟಿಕೆಟ್‌ ಕೊಡಿಸಿದೆ, ಹಾಗೆ ಮಾಡಿದೆ, ಹೀಗೆ ಮಾಡಿದೆ ಎಂದೆಲ್ಲ ಸ್ವಾಮೀಜಿ ಪುಂಖಾನುಪುಂಖವಾಗಿ ಕಥೆ ಹೇಳುತ್ತಿದ್ದರು. ಅವರು ನಿಜವಾಗಿ ಆ ಮಟ್ಟಿಗೆ ಪ್ರಭಾವಿ ಇದ್ದರೋ ಗೊತ್ತಿಲ್ಲ. ಆದರೆ, ಪ್ರಭಾವಿಗಳು ಅವರಲ್ಲಿಗೆ ಬರುತ್ತಿದ್ದುದು ನಿಜ.

ಚೈತ್ರಾ ಮತ್ತು ಗೋವಿಂದ ಪೂಜಾರಿ ಅವರಿಗೆ ಮಾತು ಕೊಟ್ಟು ಡೀಲ್‌ ಮಾಡಿಕೊಂಡಂತೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸಲು ಹಾಲಶ್ರೀ ಪ್ರಯತ್ನಪಟ್ಟಿರಬಹುದು. ಆದರೆ, ರಾಜಕಾರಣದಲ್ಲಿ ನೂರು ಜನ ಇರುತ್ತಾರೆ. ಹಾಲಶ್ರೀ ಒಬ್ಬರ ಮಾತು ಕೇಳಿ ಸೀಟು ಕೊಡ್ತಾರಾ? ಪ್ಲ್ಯಾನ್‌ ಫೇಲ್‌ ಆಗಿದೆ!

ಇದನ್ನೂ ಓದಿ: Chaitra Kundapura : ಚೈತ್ರಾ ಕುಂದಾಪುರ; ಯಾರಿವಳು ಫೈರ್‌ಬ್ರಾಂಡ್‌ ಹುಡುಗಿ?, ಆಕೆ ಟಿವಿ ನಿರೂಪಕಿ, ಉಪನ್ಯಾಸಕಿ ಆಗಿದ್ದಳು!

ಆದರೆ, ಹಣ ಕೊಟ್ಟ ಗೋವಿಂದ ಪೂಜಾರಿಯವರು ಬಿಡ್ತಾರಾ?

ಚೈತ್ರಾ ಕುಂದಾಪುರ ಮತ್ತು ಗಗನ್‌ ಕಡೂರು ಅವರು ಮಾಡಿದ್ದು ನಾಟಕ ಮತ್ತು ಕೆಲವು ಪಾತ್ರಗಳನ್ನು ಸೃಷ್ಟಿಸಿದ ಪ್ರಹಸನ ಎಂದು ತಿಳಿದಾಗ ಗೋವಿಂದ ಪೂಜಾರಿ ಸಿಟ್ಟಿಗೆದ್ದಿದ್ದರು. ಒಂದು ಕಡೆ ಟಿಕೆಟ್‌ ಸಿಗದ ಬೇಸರ, ಇನ್ನೊಂದು ಕಡೆ ಮೋಸ ಹೋದ ಆಕ್ರೋಶದಲ್ಲಿದ್ದ ಗೋವಿಂದ ಪೂಜಾರಿ ಅವರು ಎಲ್ಲರಿಗೂ ಪಾಠ ಕಲಿಸಲು ನಿರ್ಧರಿಸಿದ್ದರು.

ಹಾಗೆ ಎಲ್ಲರನ್ನೂ ವಿಚಾರಿಸಿಕೊಂಡಂತೆ ಹಾಲಶ್ರೀ ಸ್ವಾಮೀಜಿಯನ್ನೂ ಕೇಳಿದ್ದರು. ಆದರೆ, ಸ್ವಾಮೀಜಿ ಮಾತ್ರ ಮಹಾಸುಭಗನಂತೆ, ನನಗೆ ಐದು ಕೋಟಿ ವಂಚನೆ ವಿಷಯ ಗೊತ್ತಿಲ್ಲ. ನನ್ನದು 1.5 ಕೋಟಿ ರೂ. ಮಾತ್ರ. ಬೇಕಿದ್ದರೆ ಅದನ್ನು ಹಂತ ಹಂತವಾಗಿ ಕೊಡುತ್ತೇನೆ. ನನ್ನನ್ನು ಬಿಟ್ಟುಬಿಡಿ ಎಂದು ಕೇಳಿಕೊಂಡಿದ್ದಾರೆ.

ಆದರೆ, ಇಷ್ಟು ದೊಡ್ಡ ಮೋಸ ಮಾಡಿದ್ದರಿಂದ ಗೋವಿಂದ ಪೂಜಾರಿ ಬಿಡಲು ಸಿದ್ಧರಿಲಿಲ್ಲ. ಅವರನ್ನೂ ಸೇರಿಸಿ ಕೇಸು ಹಾಕಿದ್ದಾರೆ. ಈಗ ಈ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಬಂಧಿತರಾಗಿದ್ದಾರೆ.

ಇದನ್ನೂ ಓದಿ: Chaitra Kundapura : ವಂಚನೆ ಕಥೆ ಅತ್ಲಾಗಿರಲಿ, ಕಡುಬಡವ ಗೋವಿಂದ ಪೂಜಾರಿ ಮಹಾಸಾಧಕನಾದ Motivational ಕಥೆ ಕೇಳಿ

ತಲೆಮರೆಸಿಕೊಂಡಿರುವ ಹಾಲ ಶ್ರೀ

ಗೋವಿಂದ ಪೂಜಾರಿ ಜತೆಗೆ ನನ್ನನ್ನು ಸೇರಿಸಬೇಡಿ ಗೋವಿಂದಣ್ಣ ಎಂದು ಸಾಕಷ್ಟು ಗೋಗರೆದಿದ್ದ ಹಾಲ ಶ್ರೀ ಸ್ವಾಮೀಜಿಗೆ ಅಂತಿಮವಾಗಿ ತಮ್ಮ ಹೆಸರು ಎಫ್‌ಐಆರ್‌ನಲ್ಲಿ ಬಿದ್ದಿದೆ ಎಂದು ತಿಳಿಯಿತು. ಹಾಗೆ ಸಂದೇಶ ಬಂದಾಗ ಅವರು ಒಂದು ಕಾರ್ಯಕ್ರಮದಲ್ಲಿದ್ದರು. ಸಂದೇಶ ನೋಡಿದವರೇ ಕಾರ್ಯಕ್ರಮದ ಮಧ್ಯದಿಂದಲೇ ಎದ್ದು ಹೋಗಿದ್ದಾರೆ. ಅಲ್ಲಿಂದ ಬಳಿಕ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ಇದ್ದುಕೊಂಡೇ ಈ ಪ್ರಕರಣದಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂದು ಪ್ಲ್ಯಾನ್‌ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಉದಾಹರಣೆ ಎಂದರೆ ಅವರು ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು.

ಇದನ್ನೂ ಓದಿ : Chaitra Kundapura : ಬಂಧನ ತಪ್ಪಿಸಲು ಹಾಲಶ್ರೀ ಯತ್ನ; ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ

ಸದ್ಯಕ್ಕೆ ಕೋರ್ಟ್‌ ಅವರ ಮಾತಿಗೆ ಮನ್ನಣೆ ನೀಡಿಲ್ಲ. ಸೆಪ್ಟೆಂಬರ್‌ 16ರಂದು ಇನ್ನೊಂದು ಸುತ್ತಿನ ವಿಚಾರಣೆ ನಡೆದು ತೀರ್ಪು ಹೊರಬೀಳಲಿದೆ. ಒಂದೊಮ್ಮೆ ಜಾಮೀನು ಸಿಗದೆ ಹೋದರೆ ಅಭಿನವ ಹಾಲಶ್ರೀ ಸ್ವಾಮೀಜಿ ಜೈಲು ಸೇರುವುದು ಗ್ಯಾರಂಟಿ. ಹಾಗೆ ಸೆರೆ ಸಿಕ್ಕರೆ ದೊಡ್ಡ ದೊಡ್ಡವರ ಹೆಸರು ಹೊರಬೀಳಲಿದೆ ಎನ್ನುವುದು ಚೈತ್ರಾ ಕುಂದಾಪುರ ನಿರೀಕ್ಷೆ.

halasree swameeji

ಆದರೆ, ಈಗಾಗಲೇ ನಾನು ಇನ್ನೋಸೆಂಟ್. ನನಗೆ ಇದ್ಯಾವುದೂ ಗೊತ್ತಿಲ್ಲ ಎಂದಿರುವ ಹಾಲಶ್ರೀ ಏನು ಕಥೆ ಹೇಳುತ್ತಾರೋ ಗೊತ್ತಿಲ್ಲ. ಕಾದು ನೋಡಬೇಕು.

ಹಾಗಿದ್ದರೆ ಸ್ವಾಮೀಜಿ 1.5 ಕೋಟಿ ದುಡ್ಡು ಏನು ಮಾಡಿದರು, ಯಾರಿಗೆ ಕೊಟ್ರು?

ಇದೆಲ್ಲವೂ ವಂಚನೆಗೆ ಥಳುಕು ಹಾಕಿಕೊಂಡು ಭಾಗದ ಕಥೆ. ಉಳಿದಿರುವ ಕಥೆ ಇನ್ನೂ ಇಂಟ್ರೆಸ್ಟಿಂಗ್.‌ ಅದೇನೆಂದರೆ ಗೋವಿಂದ ಪೂಜಾರಿ ಕೊಟ್ಟ 1.5 ಕೋಟಿ ರೂ. ಹಣವನ್ನು ಸ್ವಾಮೀಜಿ ಏನು ಮಾಡಿದರು? ಟಿಕೆಟ್‌ ಕೊಡಿಸಲೆಂದು ಯಾವುದಾದರೂ ರಾಜಕಾರಣಿಗಳಿಗೆ ಕೊಟ್ರಾ? ತಾನೇ ಖರ್ಚು ಮಾಡಿದ್ರಾ?

ಇದನ್ನು ಬೆನ್ನಟ್ಟಿ ಹೋದರೆ ಇತ್ತೀಚೆಗೆ ತೆರೆದುಕೊಂಡ ಸ್ವಾಮೀಜಿಗಳ ಐಷಾರಾಮಿ ಬದುಕು ಕಣ್ಣಿಗೆ ರಾಚುತ್ತದೆ. ಅವರು ಮಾಡಿರುವ ವ್ಯವಹಾರಗಳು ತೆರೆದುಕೊಳ್ಳುತ್ತವೆ. ಹೌದು, ಗೋವಿಂದ ಪೂಜಾರಿಯಿಂದ ಬಂದ ಹಣವನ್ನು ಯಾರಿಗೋ ಕೊಡುವುದಕ್ಕಿಂತಲೂ ಹೆಚ್ಚಾಗಿ ಸ್ವಂತಕ್ಕೆ ಬಳಸಿಕೊಂಡಿದ್ದು ಕಂಡುಬರುತ್ತದೆ.

ಇತ್ತೀಚೆಗೆ ಸ್ವಾಮೀಜಿಯ ಲೈಫ್‌ ಸ್ಟೈಲೇ ಬದಲಾಗಿ ಹೋಗಿತ್ತು. ಅವರು ದೊಡ್ಡ ದೊಡ್ಡ ವ್ಯವಹಾರಗಳ ಬಗ್ಗೆ ಮಾತನಾಡುತ್ತಿದ್ದರು. ಇನ್ವೆಸ್ಟ್‌ ಮೆಂಟ್‌ಗಳ ವಿಚಾರ ಹೇಳುತ್ತಿದ್ದರು ಎನ್ನಲಾಗಿದೆ.

ಎಂಟು ಎಕರೆ ಭೂಮಿ ಖರೀದಿಸಿದ ಸ್ವಾಮೀಜಿ

ಕೆಲವೇ ತಿಂಗಳ ಹಿಂದೆ ಸ್ವಾಮೀಜಿ ಹಿರೇಹಡಗಲಿ ಮತ್ತು ಮಾಗಳ ಮಧ್ಯೆ ಸುಮಾರು 8 ಎಕರೆ ಜಮೀನು ಖರೀದಿ ಮಾಡಿದ್ದಾರೆ. ಖರೀದಿ ಮಾಡಿದ ಜಮೀನಿನಲ್ಲಿ ಕಬ್ಬು ಬೆಳೆದಿದ್ದು ಈಗ ಅದು ಬೆಳೆದುನಿಂತಿದೆ.

Halasree jameenu Khareedi

ತಮ್ಮ ಪತ್ನಿಯ ತಂದೆಯಾದ ಮಲ್ಲಯ್ಯ ತುಂಬಿನಕೇರ ಅವರ ಹೆಸರಲ್ಲಿ ಜಮೀನು ಖರೀದಿ ಮಾಡಲಾಗಿದೆ. ಅದನ್ನು ಸ್ವಾಮೀಜಿಯವರೇ ನೋಡಿಕೊಳ್ಳುತ್ತಿದ್ದಾರೆ. ಎಂಟು ಎಕರೆ ಜಾಗ ಖರೀದಿಗೆ ಸ್ವಾಮೀಜಿ ಹೂಡಿಕೆ ಮಾಡಿರುವ ಹಣ ಒಟ್ಟು 68 ಲಕ್ಷ ರೂ.

ಹಿರೇಹಡಗಲಿಯಲ್ಲಿ ಪೆಟ್ರೋಲ್‌ ಪಂಪ್‌ ನಿರ್ಮಾಣ

ಈ ನಡುವೆ ಸ್ವಾಮೀಜಿಯವರು ಒಂದು ತಿಂಗಳ ಹಿಂದೆ ಹಿರೇ ಹಡಗಲಿಯಲ್ಲಿ ಒಂದು ಪೆಟ್ರೋಲ್‌ ಪಂಪ್‌ ನಿರ್ಮಾಣ ಮಾಡಿದ್ದಾರೆ. ಈ ಪಂಪ್‌ನ ಲೈಸನ್ಸ್‌ ಹಿರೇಹಡಗಲಿ ಚಂದ್ರಪ್ಪ ಎಂಬವರ ಕೈಯಲ್ಲಿದೆ.

Hala Sree swameeji petrol pump

ಅದನ್ನು 40 ಲಕ್ಷ ರೂ.ಗಳಿಗೆ ಖರೀದಿ ಎಚ್‌ಪಿ ಕಂಪನಿ ಪೆಟ್ರೋಲ್‌ ಪಂಪ್‌ ಸ್ಥಾಪನೆ ಮಾಡಲಾಗಿದೆ. ಕೇವಲ ಒಂದೇ ತಿಂಗಳಲ್ಲಿ ಪಂಪ್‌ ನಿರ್ಮಾಣವಾಗಿದೆ. ಹಿರೇ ಹಡಗಲಿ ಹಾಗೂ ಹಡಗಲಿ ರಸ್ತೆಯಲ್ಲಿದೆ ಈ ಪೆಟ್ರೋಲ್‌ ಪಂಪ್‌. ಇದರ ಮೌಲ್ಯ 40 ಲಕ್ಷ ರೂ.

25 ಲಕ್ಷ ರೂ. ಮೌಲ್ಯದ ಇನ್ನೋವಾ ಕ್ರಿಸ್ಟಾ ಕಾರು ಖರೀದಿ

ಮೊನ್ನೆ ಮೊನ್ನೆಯವರೆಗೆ ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ಓಡಾಡುತ್ತಿದ್ದ ಸ್ವಾಮೀಜಿಗೆ ಈಗ 25 ಲಕ್ಷ ಮೌಲ್ಯದ ಇನ್ನೋವಾ ಕ್ರಿಸ್ತಾ ಕಾರು ಬಂದಿದೆ. ಅದನ್ನು ದೊಡ್ಡ ಸ್ವಾಮೀಜಿಯೊಬ್ಬರು ಪೂಜೆ ಬೇರೆ ಮಾಡಿದ್ದಾರೆ. ಇದರ ಮೌಲ್ಯ 25 ಲಕ್ಷ ರೂ.

Halasree with Cryta car

ಇಷ್ಟೆಲ್ಲ ಆದ ಮೇಲೆ ಗೋವಿಂದ ಪೂಜಾರಿ ಬಂದು ಕೇಳಿದ್ದಾರೆ!

ಹಣವನ್ನು ಹೀಗೆಲ್ಲ ಇನ್‌ವೆಸ್ಟ್‌ ಮಾಡಿ ಐಷಾರಾಮಿ ಜೀವನ ಶುರುಮಾಡಿದ ಮೇಲೆ ಗೋವಿಂದ ಪೂಜಾರಿ ಅವರು ಬಂದು ಸ್ವಾಮೀಜಿ ಏನು ಕಥೆ ಎಂದು ಕೇಳಿದ್ದಾರೆ. ಆಗ ಸ್ವಾಮೀಜಿಯವರು ತಮ್ಮ ಪಾಲಿನ ಕಥೆ ಹೇಳಿದ್ದಾರೆ. ನನ್ನನ್ನು ಬಿಟ್ಟುಬಿಡಿ, ಹಂತ ಹಂತವಾಗಿ ಹಣ ಕೊಡುತ್ತೇನೆ ಎಂದಿದ್ದಾರೆ. ನನ್ನ ಜತೆ ಪಾಲುದಾರರಾಗಿ ಎಂದಿದ್ದಾರೆ. ಸಾಲದ್ದಕ್ಕೆ ಗೋವಿಂದ ಪೂಜಾರಿಗೆ ಸ್ವಲ್ಪ ಹಣ ಕೊಟ್ಟು ಸಮಾಧಾನ ಮಾಡೋಣ ಎಂದು ಹೇಳಿ ನನಗೆ ಒಂದು 10 ಲಕ್ಷ ರೂ. ಸಾಲ ಕೊಡಬಹುದಾ ಎಂದು ಆಪ್ತರಲ್ಲಿ ಕೇಳಿದ್ದಾರೆ. ಅದ್ಯಾವುದೂ ಫಲಿಸಿಲ್ಲ. ಈಗ ಪೊಲೀಸರ ಮುಂದೆ ಕೇಸಿದೆ. ಇಷ್ಟಾದರೂ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಸ್ವಾಮೀಜಿ.

ಇದನ್ನೂ ಓದಿ: Chaitra Kundapura : Big Update; ಅದು ಆತ್ಮಹತ್ಯೆ ಯತ್ನ ಅಲ್ಲ, ಚೈತ್ರಾ ಕುಂದಾಪುರ ಫಿಟ್ಸ್‌ ಬಂದು ಕುಸಿದು ಬಿದ್ದದ್ದು!

ಇದರ ನಡುವೆ ಕೆಲವು ದಿನಗಳ ಹಿಂದೆ ಭಕ್ತಜನರಿಂದ ತುಂಬಿ ತುಳುಕುತ್ತಿದ್ದ ಹಾಲಸ್ವಾಮಿ ಮಠದಲ್ಲಿ ಈಗ ಜನಜಾತ್ರೆ ಕಡಿಮೆಯಾಗಿದೆ. ಗುರುವಾರ ಅಮಾವಾಸ್ಯೆ ಇದ್ದಿದ್ದರಿಂದ ಒಂದಷ್ಟು ಜನ ಬಂದು ದರ್ಶನ ಮಾಡಿ ಹೋಗಿದ್ದಾರೆ. ಆದರೆ ಹಾಲಶ್ರೀಗಳು ಇರುತ್ತಿದ್ದ ಕೋಣೆ ಬಂದ್‌ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್‌.ಎಸ್‌ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ

Dr HS Shetty : ಸಾಧಕ ಉದ್ಯಮಿ ಡಾ.ಎಚ್‌.ಎಸ್‌. ಶೆಟ್ಟಿ ಅವರಿಗೆ ಶುಕ್ರವಾರ ಹಾಲಾಡಿಯ ನಾಗರಿಕರು ಹುಟ್ಟೂರ ಸನ್ಮಾನ ಆಯೋಜಿಸಿದ್ದರು. ತಮ್ಮೂರಿನ ಹುಡುಗ ಇಷ್ಟು ಎತ್ತರಕ್ಕೇರಿದ್ದು, ಸಾಧನೆಯೊಂದಿಗೆ ಸೇವೆ ಮಾಡುತ್ತಿರುವುದು, ಡಾಕ್ಟರ್‌ ಆಫ್‌ ಸೈನ್ಸ್‌ ಗೌರವ ಗಳಿಸಿದ್ದು ಅವರನ್ನು ಪುಳಕಿತಗೊಳಿಸಿದೆ.

VISTARANEWS.COM


on

Edited by

Dr HS Shetty Felicitation
ಕುಂದಾಪುರದ ಹಾಲಾಡಿಯಲ್ಲಿ ನಡೆದ ಡಾ.ಎಚ್‌.ಎಸ್‌. ಶೆಟ್ಟಿ ಅವರ ಹುಟ್ಟೂರ ಸಂಭ್ರಮದ ದೃಶ್ಯ
Koo

ಬೆಂಗಳೂರು: ರಾಜ್ಯದ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರಾಗಿ, ವಿಭಿನ್ನ ಔದ್ಯಮಿಕ ಮತ್ತು ಸೇವಾ ಪರಿಕಲ್ಪನೆಗಳೊಂದಿಗೆ ಮುನ್ನಡೆಯುತ್ತಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿ ಮೂಲದ ಡಾ.ಎಚ್‌.ಎಸ್‌. ಶೆಟ್ಟಿ (Dr HS Shetty) ಅವರಿಗೆ ಹುಟ್ಟೂರಿನ ಜನರೆಲ್ಲ ಸೇರಿ ಶುಕ್ರವಾರ (ಸೆ. 22) ಅತ್ಯಂತ ಗೌರವಾದರಗಳಿಂದ ಸನ್ಮಾನ ಮಾಡಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (Vishweshwarayya Technical University) ಡಾ. ಶೆಟ್ಟಿ ಅವರ ಸಾಧನೆಗಾಗಿ ಡಾಕ್ಟರ್‌ ಆಫ್‌ ಸೈನ್ಸ್‌ (Doctor of Science) ನೀಡಿ ಗೌರವಿಸಿದ್ದನ್ನು ಊರಿನ ಜನ ತಮ್ಮೂರಿನ ಕಿರೀಟಕ್ಕೆ ಮುಡಿದ ಗರಿ ಎಂಬಂತೆ ಸಂಭ್ರಮಿಸಿದರು.

ಶುಕ್ರವಾರ ಬೆಳಗ್ಗೆ ಹಾಲಾಡಿಯ ಶಾಲಿನಿ. ಜಿ. ಶಂಕರ್‌ ಕನ್ವೆನ್‌ಶನ್‌ ಸೆಂಟರ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ಗಣ್ಯರೂ ಅತ್ಯಂತ ಕಷ್ಟದ ಬಾಲ್ಯದಿಂದ, ಕಷ್ಟಪಟ್ಟು ವಿದ್ಯಾಭ್ಯಾಸ ಪಡೆದು, ಕಠಿಣ ಪರಿಶ್ರಮದೊಂದಿಗೆ ಅದ್ವಿತೀಯ ಸಾಧನೆ ಮಾಡುತ್ತಿರುವ ಡಾ. ಎಚ್‌.ಎಸ್‌ ಶೆಟ್ಟಿ ಅವರ ಆದರ್ಶ ಮತ್ತು ಆದರಣೀಯ ಬದುಕನ್ನು ಕೊಂಡಾಡಿದರು. ಅವರು ವೃತ್ತಿಪರ ಬದುಕಿನಲ್ಲಿ ಮಾಡಿದ ಸಾಧನೆಯ ಜತೆಗೆ ಅವರು ತಮ್ಮ ಊರು, ನಾಡಿಗಾಗಿ ಮಾಡುತ್ತಿರುವ ಸೇವೆ, ಬಡ ಮಕ್ಕಳ ಶಿಕ್ಷಣಕ್ಕೆ ಅವರು ಬೆಂಗಾವಲಾಗಿ ನಿಂತಿರುವ ಬಗೆಯನ್ನು ತೆರೆದಿಟ್ಟರು.

Dr. HS Shetty felicitation
ಹುಟ್ಟೂರ ಸನ್ಮಾನಕ್ಕಾಗಿ ಡಾಎಚ್‌ಎಸ್‌ಶೆಟ್ಟಿ ದಂಪತಿಯನ್ನು ಕರೆತರುತ್ತಿರುವ ಕ್ಷಣ

ಡಾ. ಎಚ್‌.ಎಸ್‌. ಶೆಟ್ಟಿ ಮತ್ತು ಡಾ. ಸುಮನಾ ಶೆಟ್ಟಿ ದಂಪತಿ ಹುಟ್ಟೂರಿನ ಜನರ ಪ್ರೀತಿ, ಗಣ್ಯರ ಅಭಿಮಾನದ ನುಡಿಗಳಿಂದ ಬದುಕಿನ ಸಾರ್ಥಕ್ಯದ ಅನುಭೂತಿಯನ್ನು ಅನುಭವಿಸಿದರು. ಸಾವಿರಾರು ಜನರು ಸೇರಿದ್ದ ಸಭಾಂಗಣದಲ್ಲಿ ಮಗನ ಸಾಧನೆಯ ಪುಟಗಳು ಒಂದೊಂದಾಗಿ ತೆರೆದುಕೊಂಡಾಗ ಕೇಳಿದ ಚಪ್ಪಾಳೆಗಳಿಗೆ ಕಿವಿಯಾದ ಡಾ. ಎಚ್‌.ಎಸ್‌ ಶೆಟ್ಟಿ ಅವರ ತಾಯಿ ನಿವೃತ್ತ ಶಿಕ್ಷಕಿ ಸರೋಜಿನಿ ಶೆಟ್ಟಿ ಅವರು ಧನ್ಯತೆಯ ಕ್ಷಣಗಳನ್ನು ಎದೆಯೊಳಗೆ ತುಂಬಿಕೊಂಡರು. ಶಿಕ್ಷಕರಾಗಿದ್ದ ತಂದೆ ಹೆಗ್ಗುಂಜೆ ರಾಜೀವ್‌ ಶೆಟ್ಟಿ ಅವರ ಹೆಸರಿನಲ್ಲಿ ಚಾರಿಟೇಬಲ್‌ ಟ್ರಸ್ಟ್‌ ಮೂಲಕ ಡಾ. ಶೆಟ್ಟಿ ಅವರು ನಡೆಸುತ್ತಿರುವ ಸಾಮಾಜಿಕ ಕೈಂಕರ್ಯಗಳು ಅನ್ಯಾದೃಶ ಎಂದು ಜನರು ಕೊಂಡಾಡಿದ ಕ್ಷಣಗಳು ಸಭಾಂಗಣವನ್ನೇ ಭಾವುಕಗೊಳಿಸಿದವು.

Dr. HS Shetty felicitation
ಡಾಎಚ್ಎಸ್‌ ಶೆಟ್ಟಿ ಅವರಿಗೆ ಅಮ್ಮನ ಆಶೀರ್ವಾದ

ಎತ್ತರಕ್ಕೇರಿದರೂ ಬಡವರ ಸೇವೆಗೆ ನಿಂತ ಸಾಧಕನಿಗೆ ಸನ್ಮಾನ

ಡಾ ಎಚ್‌.ಎಸ್‌.ಶೆಟ್ಟಿ ಅವರು ಹೋಟೆಲ್‌ ಉದ್ಯಮಿಯಾಗಿ ಹೊಸ ಎತ್ತರಕ್ಕೆ ಏರಿದ ಬಳಿಕ ಉದ್ಯಮವನ್ನು ಹಲವು ದಿಕ್ಕುಗಳಲ್ಲಿ ವಿಸ್ತರಿಸಿ ವೈವಿಧ್ಯಮಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಬಟ್ಟೆ ಮತ್ತು ಖಾದ್ಯ ತೈಲ ವಹಿವಾಟು, ಕೃಷಿ ಸಂಬಂಧಿ ಉತ್ಪನ್ನಗಳ ಮಾರಾಟ, ದೊಡ್ಡ ಪ್ರಮಾಣದ ವಿದ್ಯುತ್‌ ಉತ್ಪಾದನೆ, ವಿದೇಶಕ್ಕೆ ರಫ್ತು ಸೇವೆ ಹೀಗೆ ಹಲವು ಕ್ಷೇತ್ರಗಳಲ್ಲಿ ಯಶಸ್ವೀ ಉದ್ಯಮಿ ಎನಿಸಿಕೊಂಡಿದ್ದಾರೆ. ಮೈಸೂರು ಮರ್ಕೆಂಟೈಲ್‌ ಕಂಪನಿ ಲಿಮಿಟೆಡ್‌ ಸ್ಥಾಪಿಸಿ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡುತ್ತ ರೈತರಿಗೆ ನೆರವಾಗುತ್ತಿರುವ ಇವರಿಗೆ ಆರು ಬಾರಿ ಬೆಸ್ಟ್‌ ಎಕ್ಸ್‌ಪೋರ್ಟ್‌ ಅವಾರ್ಡ್‌ ಲಭಿಸಿದೆ. ಅದೆಲ್ಲವನ್ನೂ ಮೀರಿದ್ದು ಅವರ ಸಮಾಜ ಸೇವೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಮೂಲಕ ಅವರು ಸಾವಿರಾರು ಮಕ್ಕಳಿಗೆ ಉಚಿತ ಸಮವಸ್ತ್ರ, ಶಾಲೆಗಳಿಗೆ ಕೊಡುಗೆ ನೀಡುವ ಮೂಲಕ ಕೆರೆಯ ನೀರನು ಕೆರೆಗೆ ಚೆಲ್ಲುವ ಕಾಯಕ ಮಾಡುತ್ತಿದ್ದಾರೆ. ವಿಸ್ತಾರ ನ್ಯೂಸ್‌ನ (Vistara News) ಕಾರ್ಯ ನಿರ್ವಾಹಕ ಚೇರ್ಮನ್ (Executive Chairman) ಆಗಿಯೂ ಕಾರ್ಯ ನಿರ್ವಹಿಸುತ್ತಿರುವ ಅವರ ವೈವಿಧ್ಯಮಯ ಆಸಕ್ತಿಯನ್ನು ಕಂಡು ನಿಬ್ಬೆರಗಾದ ಜನ ʻನಮ್ಮೂರ ಸಾಧಕʼನನ್ನು ಖುಷಿಯಿಂದ ಸನ್ಮಾನಿಸಿ ಸಂಭ್ರಮಿಸಿದರು.

Dr. HS Shetty felicitation

ಇದನ್ನೂ ಓದಿ: VTU Convocation : ಎಚ್.ಎಸ್. ಶೆಟ್ಟಿ, ಎ.ವಿ.ಎಸ್ ಮೂರ್ತಿಗೆ ವಿಟಿಯು ಗೌರವ ಡಾಕ್ಟರೇಟ್‌ ಪ್ರದಾನ

ಸಾಧಕನ ಸನ್ಮಾನಕ್ಕೆ ನೆರೆದಿತ್ತು ಗಣ್ಯರ ದಂಡು

ಡಾ. ಎಚ್.ಎಸ್. ಶೆಟ್ಟಿ ಅವರ ಸನ್ಮಾನ ಸಮಾರಂಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌, ಮಾಜಿ ಸಚಿವರಾದ ಕೆ. ಜಯಪ್ರಕಾಶ್‌ ಹೆಗ್ಡೆ, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ, ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕ ಹಾಗೂ ಸಿಇಒ ಹರಿಪ್ರಕಾಶ್‌ ಕೋಣೆಮನೆ, ಉದ್ಯಮಿ ಎಂ. ದಿನೇಶ್‌ ಹೆಗ್ಡೆ, ಹಾಲಾಡಿಯ ಗ್ರಾ.ಪಂ ಅಧ್ಯಕ್ಷ ಅಶೋಕ ಶೆಟ್ಟಿ ಭಾಗವಹಿಸಿ ಸನ್ಮಾನಿಸಿ ಖುಷಿಪಟ್ಟರು.

Dr. HS Shetty felicitation

ದೇವರೇ ಇವರನ್ನು ಕಳುಹಿಸಿಕೊಟ್ಟಿದ್ದಾರೆ ಎಂದರು ಲಕ್ಷ್ಮೀ ಹೆಬ್ಬಾಳ್ಕರ್‌

ಸಮಾರಂಭದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಆ ದೇವರೇ ನಿಮಗೆ ಈ ರೀತಿಯಾಗಿ ಶಕ್ತಿ ತುಂಬಿ ಕಳುಹಿಸಿಕೊಟ್ಟಿದ್ದಾನೆ. ಯಾಕೆಂದರೆ, ಎಲ್ಲರಿಗೂ ಈ ರೀತಿಯ ಮನಸು, ಹೃದಯ ವೈಶಾಲ್ಯ ಬರುವುದಿಲ್ಲ ಎಂದು ಹೇಳಿದರು. ಎಚ್‌.ಎಸ್‌. ಶೆಟ್ಟಿ ಅವರು ಸಾಧನೆಯಲ್ಲೂ ಸಮಾಜ ಸೇವೆಯಲ್ಲೂ ನಮಗೆ ಆದರ್ಶಪ್ರಾಯರು ಎಂದು ಹೃದಯ ತುಂಬಿ ಮಾತನಾಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಕಾರ್ಯಕ್ರಮ ಉದ್ಘಾಟಿಸಿದರು

ತಮ್ಮ ಜೀವನದ ಶಿಲ್ಪಿ ತಾವೇ ಆದ ಎಚ್‌.ಎಸ್‌.ಶೆಟ್ಟಿ: ಹರಿಪ್ರಕಾಶ್‌ ಕೋಣೆಮನೆ

ವಿವೇಕಾನಂದರು ಹೇಳಿದ ಒಂದು ಮಾತು ಎಚ್‌.ಎಸ್‌. ಶೆಟ್ಟಿ ಅವರಿಗೆ ಹೆಚ್ಚು ಹೊಂದಿಕೆಯಾಗುತ್ತದೆ. ನಿನ್ನ ಜೀವನದ ಶಿಲ್ಪಿ ನೀನೇ ಎಂಬ ವಿವೇಕಾನಂದರ ಮಾತಿನಂತೆ ತಮ್ಮ ಜೀವನವನ್ನು ತಾವೇ ರೂಪಿಸಿಕೊಂಡ ಸಾಧಕ ಎಚ್.ಎಸ್‌. ಶೆಟ್ಟಿ ಅವರು ಎಂದವರು ವಿಸ್ತಾರ ನ್ಯೂಸ್‌ನ ಸಿಇಒ ಮತ್ತು ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ.

ಡಾ.ಎಚ್‌.ಎಸ್‌ ಶೆಟ್ಟಿ ಅವರು ಎಲ್ಲೂ ವಿರಮಿಸುವವರಲ್ಲ. ಒಂದು ನಿರ್ದಿಷ್ಟ ಉದ್ಯಮಕ್ಕೆ ಅಂಟಿಕೊಳ್ಳುವವರಲ್ಲ. ಹೊಸತನ್ನು ಹುಡುಕುತ್ತಾ ಹೋಗುವುದು ಅವರ ಜಾಯಮಾನ. ಅದಕ್ಕಾಗಿಯೇ ಅವರು ಬೆಹರಿನ್‌ನಲ್ಲಿ ಇದ್ದ ಒಳ್ಳೆಯ ಉದ್ಯಮವನ್ನು, ಅಮೆರಿಕದ ಕಂಪನಿಯ ಉದ್ಯೋಗ ಆಫರನ್ನು ತಿರಸ್ಕರಿಸಿ ಭಾರತಕ್ಕೆ ಬಂದವರು ಎಂಬುದನ್ನು ನೆನಪಿಸಿದರು. ತಾವು ತಮ್ಮ ಊರಿನಲ್ಲೇ ಉದ್ಯಮ ಸ್ಥಾಪನೆ ಮಾಡಿ, ಊರಿನವರಿಗೆ ಕೆಲಸ ಕೊಡಬೇಕು, ತಮ್ಮ ಉದ್ಯಮದ ಲಾಭ, ತೆರಿಗೆ ಎಲ್ಲವೂ ತಮ್ಮ ದೇಶಕ್ಕೇ ಸೇರಬೇಕು ಎಂಬ ಕಾರಣಕ್ಕಾಗಿ ಅವರು ಭಾರತಕ್ಕೆ, ತಮ್ಮ ಊರಿಗೆ ಮರಳಿದ್ದಾರೆ ಎಂದು ಹೇಳಿದರು.

ಎಚ್‌.ಎಸ್‌. ಶೆಟ್ಟಿ ಅವರು ಈಗ ಶ್ರೀಮಂತರಾಗಿರಬಹುದು. ಆದರೆ, ತಮ್ಮ ಬಾಲ್ಯದ ನೋವನ್ನು ಅವರು ಮರೆತಿಲ್ಲ. ಈಗ ಅದೆಷ್ಟೋ ಬಡ ಮಕ್ಕಳಿಗೆ ಶಿಕ್ಷಣದ ಸವಲತ್ತುಗಳನ್ನು ಒದಗಿಸುವ ಮೂಲಕ ನೆನಪಿಸಿಕೊಳ್ಳುತ್ತಿದ್ದಾರೆ. ಅವರು ಕಳೆದ ನಾಲ್ಕು ವರ್ಷಗಳಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಸೇರಿದಂತೆ ಸವಲತ್ತು ಒದಗಿಸಿದ್ದಾರೆ. ಅದಕ್ಕೆ ಅವರು ವರ್ಷಂಪ್ರತಿ ಖರ್ಚು ಮಾಡುವ ಮೊತ್ತ ಏಳೆಂಟು ಕೋಟಿ ರೂ. ಎಂದು ಹರಿಪ್ರಕಾಶ್‌ ಕೋಣೆಮನೆ ಹೇಳಿದರು.

ಹುಟ್ಟೂರು, ನಾಡಿಗಾಗಿ ಹಲವು ಕೊಡುಗೆ ಘೋಷಿಸಿದ ಡಾ.ಎಚ್‌.ಎಸ್‌ ಶೆಟ್ಟಿ

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಎಚ್‌.ಎಸ್‌. ಶೆಟ್ಟಿ ಅವರು ತಮ್ಮ ಬದುಕಿನ ಸಿಂಹಾವಲೋಕನ ಮಾಡಿಕೊಂಡರು. ಬಡ ಕುಟುಂಬದಲ್ಲಿ ಹುಟ್ಟಿ ಕಷ್ಟದ ಜೀವನ ಸವೆಸಿ ಪಂಚೆ ಸೀನನಾಗಿದ್ದು, ಹೊಟ್ಟೆಗೆ ಹಿಟ್ಟಿಲ್ಲದ ದಿನಗಳನ್ನು ನೆನಪಿಸಿಕೊಂಡರು. ತಮ್ಮ ಬದುಕಿಗೆ ದಾರಿದೀಪವಾಗಿದ್ದ ಹಾಲಾಡಿಯ ಹಿರಿಯ ವ್ಯಕ್ತಿ ವಿ.ಆರ್‌. ಪಟೇಲ್‌ ಹಿರಿಯಣ್ಣ ಶೆಟ್ಟರ ನಿಧನ, ನಂತರ ಒದಗಿದ ಅತಂತ್ರ ಸ್ಥಿತಿ, ಅಮ್ಮನ ಸೂಚನೆಯಂತೆ ಊರು ಬಿಡಬೇಕಾಗಿ ಬಂದದ್ದು, ಮುಂಬಯಿಯ ಧಾರಾವಿಯ ಉದ್ಯೋಗ, ಗಲ್ಫ್‌ನಲ್ಲಿ ಮಾಡಿದ ಉದ್ಯಮ, ಮರಳಿ ಭಾರತಕ್ಕೆ ಬಂದದ್ದು, ಬೇರೇನೋ ಮಾಡಬೇಕು ಎನ್ನುವ ತುಡಿತ ತಮ್ಮನ್ನು ಉದ್ಯಮಿಯಾಗಿ ರೂಪಿಸಿದ ಪ್ರೇರಣಾದಾಯಿ ಕಥೆ ಹೇಳಿದರು.

Dr HS Shetty

ತಪ್ಪು ಮಾಡದಿದ್ದರೆ ಯಾರಿಗೂ ಹೆದರಬೇಕಾಗಿಲ್ಲ ಎಂಬ ಹಿರಿಯಣ್ಣ ಶೆಟ್ಟರ ನುಡಿ, ಡಸ್ಟರ್‌ ಸಿಗದೆ ಇದ್ದಾಗ ರಾಷ್ಟ್ರ ಧ್ವಜದಲ್ಲೇ ಬೋರ್ಡ್‌ ಒರೆಸಲು ಹೊರಟ ಮೇಸ್ಟ್ರನ್ನು ತಡೆದು ನಿಲ್ಲಿಸಿದ ಸಾಯಿಬ್ರು ಮಾಸ್ಟ್ರ ದೇಶಪ್ರೇಮ, ಬೇರೆಯವರಿಗಾಗಿಯೇ ಬದುಕಿದ ಅಜ್ಜಿಯ ನಿಸ್ವಾರ್ಥ ಬದುಕಿನ ಒಂದೊಂದು ಕಥೆಗಳು ತಮ್ಮಲ್ಲಿ ಮೂಡಿಸಿದ ಭಾವಗಳೇ ಈವತ್ತಿನ ಈ ಸ್ಥಿತಿಗೆ ಕಾರಣ ಎಂದು ನೆನೆದರು.

ಸನ್ಮಾನ ಸ್ವೀಕರಿಸಿದ ಕ್ಷಣದಲ್ಲಿ ತಮ್ಮೂರು ಮತ್ತು ನಾಡಿಗೆ ಇನ್ನಷ್ಟು ಹೊಸ ಸೇವಾ ಯೋಜನೆಗಳನ್ನು ಡಾ. ಎಚ್‌ ಎಸ್‌ ಶೆಟ್ಟಿ ಅವರು ಪ್ರಕಟಿಸಿದರು. ಅವರು ಹೇಳಿದ್ದಿಷ್ಟು:

1. ಬ್ರಹ್ಮಾವರದಲ್ಲಿ ಅತಿ ವಿಶಿಷ್ಟವಾದ ಖಾಸಗಿ ಮತ್ತು ಸರ್ಕಾರಿ ಪಾಲುದಾರಿಕೆಯ ಸರ್ಕಾರಿ ಪಬ್ಲಿಕ್‌ ಸ್ಕೂಲ್‌ ನಿರ್ಮಾಣ ಮಾಡುತಿದ್ದೇವೆ. ಡಿಸೆಂಬರ್‌ನಲ್ಲಿ ಅದರ ಉದ್ಘಾಟನೆ ನಡೆಯಲಿದೆ.

2. ಹಾಲಾಡಿಯಲ್ಲಿರುವ ಸಣ್ಣ ಸಣ್ಣ ಶಾಲೆಗಳನ್ನು ಸೇರಿಸಿ ಒಂದು ದೊಡ್ಡ ಪಬ್ಲಿಕ್‌ ಸ್ಕೂಲ್‌ ಮಾಡುತ್ತೇನೆ. ನನ್ನೂರಿನ ಮಕ್ಕಳು ಚೆನ್ನಾಗಿ ಓದಬೇಕು ಎನ್ನುವುದು ನನ್ನಾಸೆ.

3. ಚೆನ್ನೈ ಐಐಟಿಯ ಪ್ರಾಧ್ಯಾಪಕರಿಂದ ಕರ್ನಾಟಕದ 150 ಶಾಲೆಗಳಿಗೆ ದೂರ ಶಿಕ್ಷಣ ಕೋಚಿಂಗ್‌ ಒದಗಿಸುವ ಮೆಗಾ ಪ್ರಾಜೆಕ್ಟ್‌ ಶುರುವಾಗಲಿದೆ. ಮೊದಲ ವರ್ಷ ಈ ಯೋಜನೆಗೆ ನಾಲ್ಕು ಕೋಟಿ ರೂ. ಬೇಕು. ಉಡುಪಿ ಜಿಲ್ಲೆಯ ಕೆಲವು ಶಾಲೆಗಳಲ್ಲಿ ಈ ಕೋಚಿಂಗ್‌ ಇರುತ್ತದೆ. ಹಾಲಾಡಿ ಶಾಲೆಯನ್ನೂ ಆಯ್ಕೆ ಮಾಡಿದ್ದೇನೆ. ತಮ್ಮ ಮಾತೃಭಾಷೆಯಲ್ಲಿ ಓದಿದ ಮಕ್ಕಳೂ ದೊಡ್ಡ ಸಾಧನೆ ಮಾಡಬಲ್ಲರು ಎನ್ನುವುದನ್ನು ಇಸ್ರೋ ಸಾಧನೆಯ ಹಿಂದಿರುವ ವಿಜ್ಞಾನಿಗಳನ್ನು ನೋಡಿ ಅರಿತಿದ್ದೇನೆ. ಅಂಥಹುದೇ ಸಾಧಕರಾಗಲು ಅವರಿಗೆ ಮಾರ್ಗದರ್ಶನ ಮಾಡುವ ಆಸೆ ನನ್ನದು ಎಂದರು ಡಾ.ಎಚ್‌.ಎಸ್‌ ಶೆಟ್ಟಿ.

ಡಾ.ಎಚ್‌.ಎಸ್‌ ಶೆಟ್ಟಿ ಅವರ ಹುಟ್ಟೂರ ಸನ್ಮಾನ ಕಾರ್ಯಕ್ರಮ ಇಲ್ಲಿ ನೋಡಿ…

ಇದನ್ನೂ ಓದಿ: VTU Convocation : ಎಚ್.ಎಸ್. ಶೆಟ್ಟಿ, ಎ.ವಿ.ಎಸ್ ಮೂರ್ತಿಗೆ ವಿಟಿಯು ಗೌರವ ಡಾಕ್ಟರೇಟ್‌ ಪ್ರದಾನ

Continue Reading

ಉಡುಪಿ

Weather report : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ತಗ್ಗದ ಅಬ್ಬರ

Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ ಸಾಮಾನ್ಯವಾಗಿದೆ. ಸೆ.23-24ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

VISTARANEWS.COM


on

Edited by

Child Enjoying Rain and Boy walking in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಇನ್ನರೆಡು ದಿನ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.

ಗುಡುಗು ಜತೆಗೆ ಬಿರುಗಾಳಿ ಮುನ್ನೆಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಬೆಂಗಳೂರಲ್ಲಿ ವ್ಯಾಪಕ ಮಳೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್‌; ಖಾನಾಪುರದಲ್ಲಿ ಬಿಗುವಿನ ವಾತಾವರಣ

ನೈರುತ್ಯ ಮುಂಗಾರು ಗುರುವಾರ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಸೇಡಂನಲ್ಲಿ 7 ಸೆಂ.ಮೀ ಮಳೆಯಾಗಿದೆ. ಚಿಂಚೋಳಿ, ಸುಲೇಪೇಟದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕದ್ರಾ, ಚಿತ್ತಾಪುರ, ಸೈದಾಪುರ, ಇಂಡಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಾರವಾರ, ಮುಧೋಳೆ ಜೇವರ್ಗಿ, ಶಹಾಪುರ, ಬೆಂಗಳೂರು ನಗರ, ಕುಣಿಗಲ್‌ನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಕ್ಯಾಸಲ್ ರಾಕ್, ಗೇರ್ಸೊಪ್ಪ, ಆಳಂದ, ನೆಲೋಗಿ, ಅಡಕಿ, ಯಡ್ರಾಮಿ, ಗುಂಡಗುರ್ತಿ ಕಟ್ಕೋಲ್ , ದೇವದುರ್ಗ , ಧಾರವಾಡ, ಕುಂದಗೋಳ , ಬೀದರ್ PTO, ಬೀದರ್, ಔರಾದ್ , ದೇವರಹಿಪ್ಪರಗಿ , ಶ್ರೀರಂಗಪಟ್ಟಣ ಹಾಗೂ ಪೊನ್ನಂಪೇಟೆ, ಬೆಂಗಳೂರು ಹಾಲ್ ವಿಮಾನ ನಿಲ್ದಾಣ ತಲಾ 1 ಸೆಂ. ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್‌ ಬುಕ್‌ ಪ್ರೊಫೈಲ್‌ ಏಕಕಾಲದಲ್ಲಿ ಡಿಲೀಟ್‌!

FB profile deleted : ಹಿಂದು ಜಾಗರಣ ವೇದಿಕೆಯ ರಾಜ್ಯ ನಾಯಕರ ಫೇಸ್‌ ಬುಲ್‌ ಪ್ರೊಫೈಲ್‌ ಏಕಕಾಲದಲ್ಲಿ ಡಿಲೀಟ್‌ ಆಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರಲ್ಲಿ ಸರ್ಕಾರದ ಕೈವಾಡವನ್ನು ನಾಯಕರು ಸಂಶಯಿಸಿದ್ದಾರೆ.

VISTARANEWS.COM


on

Edited by

Shrikanth Shetty FB profile delete
Koo

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸಂಘಟನೆಯಾಗಿರುವ ಹಿಂದು ಜಾಗರಣ ವೇದಿಕೆಯ (Hindu Jagarana Vedike) 20ಕ್ಕೂ ಅಧಿಕ ಮುಖಂಡರ (Hindu Leaders) ಫೇಸ್‌ ಬುಕ್‌ ಪ್ರೊಫೈಲ್‌ಗಳನ್ನು (FB profile Deleted) ಏಕಕಾಲದಲ್ಲಿ ಡಿಲೀಟ್‌ (Facebook profiles deleted) ಮಾಡಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಯ ರಾಜ್ಯದ ಪ್ರಮುಖರ ಪ್ರೊಫೈಲ್‌ಗಳು ಇದ್ದಕ್ಕಿದ್ದಂತೆಯೇ ಕಾಣೆಯಾಗಿವೆ.

ವಿಸ್ತಾರ ನ್ಯೂಸ್‌ಗೆ ಈ ವಿಚಾರವನ್ನು ತಿಳಿಸಿರುವ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ (Shrikant Shetty Karkala) ಅವರು ಇದರ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಹಿಂಜಾವೇಯ ರಾಜ್ಯದ 20ಕ್ಕೂ ಅಧಿಕ ಪ್ರಮುಖರ ಫೇಸ್ ಬುಕ್ ಪ್ರೊಫೈಲ್ ಗಳನ್ನು ಏಕಕಾಲದಲ್ಲಿ ತೆಗೆದು ಹಾಕಲಾಗಿದೆ. ಇದು ಸರಕಾರದ ಸೂಚನೆಯಂತೆ ತೆಗೆದುಹಾಕಿದ್ದೋ, ಹ್ಯಾಕರ್ಸ್‌ಗಳನ್ನು ಬಳಸಿ ಮಾಡಿದ್ದಾರೋ ? ಎಂಬುವುದರ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

ಹಿಂದೂ ವಿಚಾರಗಳನ್ನು, ಹೋರಾಟ ಮಾಡುತ್ತಿದ್ದವರನ್ನು ಹತ್ತಿಕ್ಕುವ ಕೆಲಸ ಮಾಡಲಾಗಿದೆ ಎನ್ನುವುದು ನಮ್ಮ ಸಂಶಯ. ಈ ರೀತಿಯಾಗಿ ನಡೆದಿರುವ ಈ ಸೈಬರ್ ದಾಳಿ ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಕುತಂತ್ರ ಎಂದು ಅವರು ಆರೋಪಿಸಿದರು.

ʻʻ2014ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಪರ ದೊಡ್ಡ ಮಟ್ಟದ ಅಭಿಯಾನ ನಡೆದಿತ್ತು. ಅ ರೀತಿಯ ಅಭಿಯಾನ ಈ ಬಾರಿ ಅಗಬಾರದು ಎನ್ನುವ ನಿಟ್ಟಿನಲ್ಲಿ ಹಿಂದೂ ಮುಖಂಡರ ಪೇಜ್ ಗಳನ್ನು ತೆಗೆದು ಹಾಕಿರುವ ಸಾಧ್ಯತೆಗಳಿವೆʼʼ ಎಂದು ಅವರು ಹೇಳಿದರು.

ಇದನ್ನೂ ಓದಿ : Udhayanidhi Stalin: ಸಂಸತ್‌ಗೆ ಮುರ್ಮುರನ್ನು ಆಹ್ವಾನಿಸದಿರುವುದೇ ಸನಾತನ ಧರ್ಮ ಎಂದ ಉದಯನಿಧಿ

ಆದರೆ, ಹಿಂದೂ ಜಾಗರಣ ವೇದಿಕೆ ಸಾಮಾಜಿಕ ಜಾಲತಾಣವನ್ನು ನಂಬಿಕೊಂಡಿರುವಂಥದ್ದಲ್ಲ. ನಾವು ಕೇವಲ ಫೇಸ್ ಬುಕ್ ಹುಲಿಗಳು ನಾವಲ್ಲ. ಹಿಂಜಾವೇ ಜನರ ಮಧ್ಯೆ ಕೆಲಸ ಮಾಡಿದೆ, ಮುಂದೆಯು ಮಾಡಲಿದೆʼʼ ಎಂದು ಶ್ರೀಕಾಂತ್‌ ಶೆಟ್ಟಿ ಹೇಳಿದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸನಾತನ ಧರ್ಮ ಕುರಿತ ಕೋರ್ಟ್ ಅಭಿಮತ ಹಿಂದೂ ದ್ವೇಷಿಗಳ ಕಣ್ಣು ತೆರೆಸಲಿ

ಹಿಂದು ಜಾಗರಣ ವೇದಿಕೆ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರೂ ಆಗಲೇ ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಮತ್ತು ಪ್ರಧಾನಿ ನರೇಂದ್ರ ಮೋದಿ ಪರ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಇದನ್ನು ಗಮನಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನುವುದು ಶ್ರೀಕಾಂತ್‌ ಶೆಟ್ಟಿ ಅವರ ಆರೋಪ.

ನಮ್ಮ ಹೋರಾಟ ಹಿಂದೂ ವಿರೋಧಿಗಳನ್ನು ಭಸ್ಮ ಮಾಡಲಿದೆ

ಜಾಗರಣ ವೇದಿಕೆ ಅಧಿಕೃತ ಫೇಸ್ಬುಕ್ ಪೇಜನ್ನು ಬ್ಯಾನ್ ಮಾಡಲಾಗಿದೆ. ಹಿಂದೂ ಚಳುವಳಿಯ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸಲಾಗಿದೆ. ಹಿಂದು ಜಾಗರಣ ವೇದಿಕೆಯ ಧ್ವನಿಯನ್ನು ಹತ್ತಿಕ್ಕುವ ಶಕ್ತಿಗಳಿಗೆ ಬೆದರುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕರಾದ ದೋ.ಕೇಶವ ಮೂರ್ತಿ ಹೇಳಿದ್ದಾರೆ.

ʻʻಕಳೆದ ವಾರದಿಂದ ಜಾಗರಣ ವೇದಿಕೆಯ ಪ್ರಮುಖರನ್ನೇ ಗುರಿಯಾಗಿಸಲಾಗಿದೆ. ಹಿಂದೂ ಚಳುವಳಿಯನ್ನು ಜನರಿಗೆ ತಲುಪಿಸುವ ಮಾರ್ಗ ತಡೆಯಲಾಗಿದೆ. ರಾಜ್ಯ ಸರಕಾರಿ ಕೃಪಾಪೋಷಿತ ವ್ಯವಸ್ಥೆಗಳು ದಾಳಿ ನಡೆಸುತ್ತಿದೆʼʼ ಎಂದು ಹೇಳಿರುವ ಅವರು, ʻʻನಾವು ಸೋಷಿಯಲ್ ಮೀಡಿಯಾ ನಂಬಿ ಹಿಂದೂ ಹೋರಾಟಗಳನ್ನು ಸಂಘಟಿಸಿಲ್ಲ. ಜನರ ನಡುವೆಯೇ ಹೊರಾಟಗಳು ಎದ್ದು ಹಿಂಜಾವೆ ರೂಪುಗೊಂಡಿದೆ. ನಮ್ಮ ಹೋರಾಟ ಹಿಂದೂ ವಿರೋಧಿಗಳನ್ನು ಭಸ್ಮ ಮಾಡಲಿದೆʼʼ ಎಂದು ಆಕ್ರೋಶದಿಂದ ಹೇಳಿದ್ದಾರೆ.

Continue Reading

ಉಡುಪಿ

Weather Report : ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ ಗಸ್ತು!

Rain News : ರಾಜ್ಯದ 20 ಜಿಲ್ಲೆಗಳಲ್ಲಿ ಮಳೆರಾಯನಿಗೆ ಬಿಡುವೇ ಇರುವುದಿಲ್ಲ. ವಾರಾಂತ್ಯದವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

VISTARANEWS.COM


on

Edited by

Women men walking in Rain in road
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆರಾಯನ (Rain News) ಗಸ್ತು ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದರೆ, ಇತ್ತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭರ್ಜರಿ ಮಳೆಯಾಗುವ (Weather report) ಸಾಧ್ಯತೆ ಇದೆ.

ಬೆಂಗಳೂರು ಟು ಮೈಸೂರು ಭಾರಿ ಮಳೆ

ದಕ್ಷಿಣ ಒಳನಾಡಿನ ಮೈಸೂರು, ರಾಮನಗರ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯದಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಿಜಯಪುರದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ.

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ರಾತ್ರಿಗೆ ಮಳೆ ಕಾಟ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕೆಲವೆಡೆ ಬಿರುಗಾಳಿ ಸಾಧ್ಯತೆ

ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನುಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಇದನ್ನೂ ಓದಿ: Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್‌ಟಾಕ್‌ ಸ್ಟಾರ್‌ಗೆ 2 ವರ್ಷ ಜೈಲು ಶಿಕ್ಷೆ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 22ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.6160165735
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.440194
ಘಟಪ್ರಭಾ ಜಲಾಶಯ
(Ghataprabha Dam)
662.9142.402311181
ತುಂಗಾಭದ್ರಾ ಜಲಾಶಯ (Tungabhadra Dam)497.7162.92437810316
ಭದ್ರಾ ಜಲಾಶಯ (Bhadra Dam)657.7343.23290290
ಕಬಿನಿ ಜಲಾಶಯ (Kabini Dam)696.1314.8031664390
ಹಾರಂಗಿ
(Harangi Dam)
871.388.0613352791
ಲಿಂಗನಮಕ್ಕಿ (Linganamakki Dam) 554.4468.3054935393
ಹೇಮಾವತಿ
(Hemavathi Dam)
890.5817.6649861300

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
MLA Gopalakrishna Belur surprise visit to Ripponpet Primary Health Centre
ಶಿವಮೊಗ್ಗ3 hours ago

Shivamogga News: ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ

Vehicle Scrapping
ಕರ್ನಾಟಕ3 hours ago

Cabinet Meeting: ವಾಹನಗಳ ಗುಜರಿ ನೀತಿ-2022 ಜಾರಿ ಮಾಡಲು ಸಚಿವ ಸಂಪುಟ ಒಪ್ಪಿಗೆ

Danish Ali and Rahul Gandhi
ದೇಶ3 hours ago

‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Vistara Top 10 News 22
ಕರ್ನಾಟಕ3 hours ago

VISTARA TOP 10 NEWS: ಬಿಜೆಪಿ-ಜೆಡಿಎಸ್ ಮೈತ್ರಿ ಸೆಟ್ಟಾಯ್ತು, ಸೆ. 26ರವರೆಗೆ ನೀರು ಬಿಡೋದೂ ಫಿಕ್ಸಾಯ್ತು!

Zameer Pinjara
ಕರ್ನಾಟಕ4 hours ago

Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!

3 Indian companies among America's happiest employees top 20 company list
ಪ್ರಮುಖ ಸುದ್ದಿ4 hours ago

Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್‍ 20 ಪಟ್ಟಿಯಲ್ಲಿ ಭಾರತದ 3 ಕಂಪನಿ!

Team india
ಕ್ರಿಕೆಟ್4 hours ago

Team India : ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ 3 ಮಾದರಿಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಮಾಡಿದ ಟೀಮ್ ಇಂಡಿಯಾ

Cauvery Dispute cabinet meeting
ಕರ್ನಾಟಕ4 hours ago

Cabinet Meeting: ಸೆ.26ರವರೆಗೆ ನೀರು ಬಿಡುಗಡೆ ಫಿಕ್ಸ್‌; ಬಳಿಕ ಬಿಡುವುದಿಲ್ಲ ಎಂದು ಅಧಿವೇಶನ ಕರೆದು ನಿರ್ಣಯ?

Ruturaj Gaikwad
ಕ್ರಿಕೆಟ್5 hours ago

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

Cat eyed snake
ಕರ್ನಾಟಕ5 hours ago

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ3 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ22 hours ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ6 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ6 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ7 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

Dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದರೆ ನಷ್ಟ ಗ್ಯಾರಂಟಿ!

ಟ್ರೆಂಡಿಂಗ್‌