Chaitra Kundapura : 1.5 ಕೋಟಿ ಡೀಲ್‌ ಆದ್ಮೇಲೆ ಹಾಲಶ್ರೀ ಸ್ವಾಮೀಜಿ ಲೈಫೇ ಫುಲ್‌ ಚೇಂಜ್‌!; ಕಾರು, ಪೆಟ್ರೋಲ್‌ ಪಂಪ್‌, ಜಾಗ ಖರೀದಿ! - Vistara News

ಉಡುಪಿ

Chaitra Kundapura : 1.5 ಕೋಟಿ ಡೀಲ್‌ ಆದ್ಮೇಲೆ ಹಾಲಶ್ರೀ ಸ್ವಾಮೀಜಿ ಲೈಫೇ ಫುಲ್‌ ಚೇಂಜ್‌!; ಕಾರು, ಪೆಟ್ರೋಲ್‌ ಪಂಪ್‌, ಜಾಗ ಖರೀದಿ!

Chaitra Kundapura : ಚೈತ್ರಾ ಕುಂದಾಪುರ ನೇತೃತ್ವದ ವಂಚಕ ಗ್ಯಾಂಗ್‌ನಲ್ಲಿರುವ ಹಾಲಶ್ರೀ ಸ್ವಾಮೀಜಿ ತಾವು ಸ್ವೀಕರಿಸಿದ 1.5 ಕೋಟಿ ರೂ.ಯನ್ನು ಏನು ಮಾಡಿದ್ದಾರೆ ಅಂತ ತಿಳಿದುಕೊಳ್ಳಬೇಕಾ? ಹೀಗೆ ಬನ್ನಿ

VISTARANEWS.COM


on

Halasree swameeji and hala matt hirehadagali
ವಿಜಯನಗರ ಜಿಲ್ಲೆಯ ಹಿರೇಹಡಗಲಿಯಲ್ಲಿರುವ ಹಾಲ ಮಠ ಮತ್ತು ಅಭಿನವ ಹಾಲಶ್ರೀ ಸ್ವಾಮೀಜಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉಗ್ರ ಭಾಷಣಕಾರ್ತಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‌ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP Ticket) ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ (Halasree Swameeji) ಲೈಫೇ ಇತ್ತೀಚೆಗೆ ಫುಲ್‌ ಚೇಂಜ್‌ ಆಗಿದೆ. ಇದಕ್ಕೆ ಕಾರಣ, ಡೀಲ್‌ನಲ್ಲಿ ಸಿಕ್ಕಿದ 1.5 ಕೋಟಿ ರೂ.! (1.5 crore deal)

ವಿಜಯ ನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯಲ್ಲಿರುವ ಹಾಲಸ್ವಾಮಿ ಮಠಕ್ಕೆ ಜಂಗಮ (Halaswami jangama matt) ಪರಂಪರೆಯಲ್ಲಿ ದೊಡ್ಡ ಹೆಸರಿದೆ. ಅದೆಷ್ಟೋ ಮಂದಿ ನಿಸ್ವಾರ್ಥ ಸ್ವಾಮೀಜಿಗಳು ಇದ್ದು ಹೋಗಿದ್ದಾರೆ. ಭಕ್ತರು ಇಲ್ಲಿನ ಹಾಲಸ್ವಾಮಿಯ ಜತೆಗೆ ಸ್ವಾಮಿಗಳನ್ನು ಕೂಡಾ ದೇವರೆಂದೇ ನಂಬುತ್ತಾರೆ. ಇಂಥ ಮಠದಲ್ಲಿ ಈಗ ಸ್ವಾಮೀಜಿಗಳಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಮೊನ್ನೆ ಮೊನ್ನೆಯವರೆಗೆ ಹಿಂದೂ ಸಂಘಟನೆಗಳ ಕಣ್ಣಲ್ಲಿ ಹೀರೋ ಆಗಿದ್ದರು. ಒಂದಿಷ್ಟು ಸಾಮಾಜಿಕ ಚಟುವಟಿಕೆಯ ಜತೆಗೆ ಉಗ್ರ ಹಿಂದುತ್ವ ಅವರ ಐಡೆಂಟಿಟಿಯಾಗಿತ್ತು. ಅದೆಷ್ಟೋ ಬಿಜೆಪಿ ನಾಯಕರು, ಸಾಮಾಜಿಕ ಹೋರಾಟಗಾರರು ಅವರ ಕಾಲಿಗೆ ಬೀಳುತ್ತಿದ್ದರು. ಆದರೆ, ಈಗ ಕಳೆದೆರಡು ದಿನಗಳಿಂದ ಈ ಸ್ವಾಮೀಜಿಯೇ ನಾಪತ್ತೆಯಾಗಿದ್ದಾರೆ, ಪ್ರಭಾವಿ ಭಕ್ತರು ತಮಗೂ ಅವರಿಗೂ ಅಂಥ ಸಂಬಂಧವೇನಿಲ್ಲ ಎನ್ನುತ್ತಿದ್ದಾರೆ. ಅವರನ್ನು ಹುಡುಕಿಕೊಂಡು ಸಿಸಿಬಿ ಮಠಕ್ಕೆ ಬಂದು ನೋಟಿಸ್‌ ಹಚ್ಚಿ ಹೋಗಿದೆ. ಸಿಕ್ಕರೆ ಅರೆಸ್ಟ್‌ ಆಗೋದು ಗ್ಯಾರಂಟಿ ಎಂಬ ಸ್ಥಿತಿಯಲ್ಲಿ ಸ್ವಾಮೀಜಿ ಇದ್ದಾರೆ. ಇದಕ್ಕೆಲ್ಲ ಕಾರಣವಾಗಿರುವುದು ಹಾಲಶ್ರೀ ಸ್ವಾಮೀಜಿಯವರು ಚೈತ್ರಾ ಕುಂದಾಪುರ ಜತೆಗೆ ಸೇರಿ ಮಾಡಿದ ಆ ಒಂದು ಡೀಲ್‌!

Halasree swameeji with BSY
ಬಿಎಸ್‌ ಯಡಿಯೂರಪ್ಪ ಅವರ ಜತೆ ಹಾಲಶ್ರೀ ಸ್ವಾಮೀಜಿ. ಬಿಜೆಪಿಯ ಹಿರಿಯ ನಾಯಕರೇ ತನಗೆ ಹತ್ತಿರ ಎಂದು ಪೋಸು ಕೊಡುವ ಪ್ರಯತ್ನ ಇದು ಎನ್ನಲಾಗಿದೆ.

ಸುಮಾರು 50ರ ಆಸುಪಾಸಿನಲ್ಲಿರುವ ಹಾಲಶ್ರೀ ಸ್ವಾಮೀಜಿಯವರು ಬಿಜೆಪಿ ಪಕ್ಷದಲ್ಲಿ ತಾನು ಪ್ರಭಾವಿ ಇದ್ದೇನೆ ಎಂದು ಹೇಳಿಕೊಳ್ಳುತ್ತಾರೆ. ಇದಕ್ಕೆ ಕಾರಣ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಅವರ ಭಕ್ತರಾಗಿರುವುದು. ಜತೆಗೆ ಚಕ್ರವರ್ತಿ ಸೂಲಿಬೆಲೆಯಂಥ ಪ್ರಖರ ಹಿಂದೂವಾದಿಗಳು, ಮೋದಿ ಪರ ಸಾಮಾಜಿಕ ಸಂಚಲನ ಸೃಷ್ಟಿ ಮಾಡುವವರು ಆಗಾಗ ಮಠಕ್ಕೆ ಬರುವುದು ಈ ಸ್ವಾಮೀಜಿಯವರ ಖದರನ್ನು ಹೆಚ್ಚಿಸುತ್ತಿತ್ತು.

Halasri swameeji with Chakravarti sulibele

ಅದರ ಜತೆಗೆ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್‌ ಕೊಡಿಸಲು ಶಿಫಾರಸು ಮಾಡುವುದು, ಯಾರಾದರೂ ನಾಮಿನೇಷನ್‌ ಹಾಕಿದ್ದರೆ ಅವರನ್ನು ಮಾತನಾಡಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡುವ ಕೆಲಸವನ್ನು ಮಾಡುತ್ತಿದ್ದರು. ಅವರ ಖಟ್ಟರ್‌ ನಿಲುವಿನಿಂದಾಗಿ ಬಿಜೆಪಿಯವರಿಗಿಂತಲೂ ಹೆಚ್ಚಾಗಿ ಹಿಂದೂ ಸಂಘಟನೆಗಳಿಗೆ ಸ್ವಾಮೀಜಿ ಇಷ್ಟವಾಗಿದ್ದರು.

Halasree swameeji with puneet kerehalli
ಪುನೀತ್‌ ಕೆರೆಹಳ್ಳಿ ಜತೆ ಸ್ವಾಮೀಜಿ ಮಾತುಕತೆ

ಚೈತ್ರಾ ಕುಂದಾಪುರ ಡೀಲ್‌ ನಡೆದಿದ್ದು ಮಠದಲ್ಲೇ!

ಕರಾವಳಿಯಲ್ಲಿ ಉಗ್ರ ಹಿಂದುತ್ವದ ಪ್ರಖರ ಭಾಷಣಕಾರ್ತಿಯಾಗಿ ಹೆಸರಾಗಿದ್ದ ಚೈತ್ರಾ ಕುಂದಾಪುರ ಸುಬ್ರಹ್ಮಣ್ಯ ದೇವಸ್ಥಾನದ ವಿಷಯದಲ್ಲಿ ಮೂಗು ತೋರಿಸಲು ಹೋಗಿ ಹೊಡೆತ ತಿಂದು ಬಂದರು. ನಿಜವೆಂದರೆ ಬಳಿಕ ಅವರು ಕರಾವಳಿಯಲ್ಲಿ ಬಣ್ಣ ಕಳೆದುಕೊಂಡಿದ್ದರು. ಅದರ ಬಳಿಕ ಅವರು ಉತ್ತರ ಕರ್ನಾಟಕದ ಮೇಲೆ ಹೆಚ್ಚು ಗಮನ ನೀಡಿದರು. ಒಬ್ಬ ಪೀಚು ಹುಡುಗಿ ಇಷ್ಟೊಂದು ಖಡಕ್ಕಾಗಿ ಮಾತನಾಡುತ್ತಾಳಲ್ಲಾ ಎಂದು ಅಲ್ಲಿನ ಜನ ಹುಚ್ಚೆದ್ದು ಕುಣಿದರು. ಹಿಂದೂ ಸಮಾವೇಶ, ರ‍್ಯಾಲಿಗಳಿಗೆಲ್ಲ ಆಕೆಯೇ ಪ್ರಧಾನ ಭಾಷಣಕಾರ್ತಿ. ಆಕೆಯ ಭಾಷಣದ ತೀಕ್ಷ್ಣತೆಗೆ ಹೆದರಿ ಕೋರ್ಟ್‌ಗಳು ಕೂಡಾ ಆಕೆ ಕೆಲವು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಿರ್ಬಂಧವನ್ನೂ ಹಾಕಿದ್ದು ಇದೆ.

ಇಂಥ ಚೈತ್ರಾ ಕುಂದಾಪುರ ಪ್ರಖರ ಹಿಂದುವಾದಿ ಹಾಲಶ್ರೀ ಸ್ವಾಮೀಜಿ ಪಾಲಿಗೆ ನೀಲಿ ಕಣ್ಣಿನ ಹುಡುಗಿಯಾಗಿದ್ದರಲ್ಲಿ ಹೆಚ್ಚು ಅಚ್ಚರಿಯೇನೂ ಇಲ್ಲ. ಹಾಗೆ ಮಠದೊಂದಿಗೆ ಸಂಪರ್ಕ ಹೊಂದಿದ್ದ ಚೈತ್ರಾ ಕುಂದಾಪುರ ಗೋವಿಂದ ಪೂಜಾರಿಯವರ ಡೀಲ್‌ ಬಂದಾಗ ಹಾಲಶ್ರೀ ಸ್ವಾಮೀಜಿಯನ್ನು ಸಂಪರ್ಕ ಮಾಡಿದ್ದಳು. ಸ್ವಾಮೀಜಿ ಕೂಡಾ ತಮ್ಮ ಎಂದಿನ ಶೈಲಿಯಲ್ಲಿ ʻನೀವು ಹೇಳಿದ್ಮೇಲೆ ಇಲ್ಲ ಅನ್ನೋದುಂಟೇ? ಮಾಡ್ಸೋಣ ಬಿಡಿʼ ಎಂದು ಹೇಳಿದ್ದಾರೆ. ಹಾಗೆ ಚೈತ್ರಾ ಕುಂದಾಪುರ ಗೋವಿಂದ ಪೂಜಾರಿಯವರನ್ನು ಮಠಕ್ಕೆ ಕರೆದುಕೊಂಡು ಹೋಗಿದ್ದಾಳೆ.

Halasree swameeji and Chaitra kundapura

ಅಲ್ಲಿ ಹಿಂದುತ್ವ ಮತ್ತು ಇತರ ಸಂಗತಿಗಳ ಚರ್ಚೆಯೆಲ್ಲ ಮುಗಿದು ಶುರುವಾಗಿದ್ದೇ ಡೀಲು. 2022ರ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಚೈತ್ರಾ ಮತ್ತು ಗೋವಿಂದ ಪೂಜಾರಿ ಮಠಕ್ಕೆ ಭೇಟಿ ನೀಡಿ ಅಲ್ಲಿ ಮಾತುಕತೆ ನಡೆದಿದೆ. ಟಿಕೆಟ್‌ ಕೊಡಿಸಲು ಕೆಲವು ರಾಜಕಾರಣಿಗಳಿಗೆ ಹಣ ಕೊಡಿಸಬೇಕಾಗುತ್ತದೆ. ಹೀಗಾಗಿ 1.5 ಕೋಟಿ ರೂ. ಕೊಡಬೇಕು ಎಂದು ನೇರವಾಗಿ ಸ್ವಾಮೀಜಿ ಕೇಳಿದ್ದಾರೆ. ಟಿಕೆಟ್‌ಗಾಗಿ ಅಷ್ಟು ಖರ್ಚು ಮಾಡಲು ಸಿದ್ಧವಿದ್ದ ಗೋವಿಂದ ಪೂಜಾರಿ ಓಕೆ ಅಂದಿದ್ದಾರೆ. ಈ ಹಣವನ್ನು ಹಾಲಶ್ರೀ ಸ್ವಾಮಿಗೆ ನೇರವಾಗಿ ತಲುಪಿಸಿದ್ದು ಖುದ್ದು ಗೋವಿಂದ ಪೂಜಾರಿ. ಬೆಂಗಳೂರಿನ ಜಯನಗರದಲ್ಲಿರುವ ಮಠಕ್ಕೆ ಹೋಗಿ ಹಣವನ್ನು ನೀಡಲಾಗಿದೆ. ಈ ಹಣ ವರ್ಗಾವಣೆ ನಡೆದಿದ್ದು 2023ರ ಜನವರಿ 16ರಂದು.

Govinda poojari and Chaitra at hala matt
ಹಾಲಸ್ವಾಮಿ ಮಠದಲ್ಲಿ ಸ್ವಾಮೀಜಿಗಳ ಜತೆ ಗೋವಿಂದ ಪೂಜಾರಿ ಮತ್ತು ಚೈತ್ರಾ ಕುಂದಾಪುರ

ಸ್ವಾಮೀಜಿಗಳ ಕೈಮೀರಿ ಹೋದ ಕೇಸು!

ನಿಜವೆಂದರೆ ಚೈತ್ರಾ ಕುಂದಾಪುರ ಗೋವಿಂದ ಪೂಜಾರಿ ಅವರಿಗೆ ಟಿಕೆಟ್‌ ಕೊಡಿಸುವ ಭರವಸೆ ನೀಡಿದ್ದು ಈ ಸ್ವಾಮಿಯನ್ನು ನಂಬಿಕೊಂಡೇ. ಯಾಕೆಂದರೆ ನನಗೆ ಮೋದಿ ಕನೆಕ್ಷನ್‌ ಇದೆ, ಅಮಿತ್‌ ಶಾ ಫೋನ್‌ ಮಾಡ್ತಾರೆ. ಅವರಿಗೆ ಟಿಕೆಟ್‌ ಕೊಡಿಸಿದೆ, ಹಾಗೆ ಮಾಡಿದೆ, ಹೀಗೆ ಮಾಡಿದೆ ಎಂದೆಲ್ಲ ಸ್ವಾಮೀಜಿ ಪುಂಖಾನುಪುಂಖವಾಗಿ ಕಥೆ ಹೇಳುತ್ತಿದ್ದರು. ಅವರು ನಿಜವಾಗಿ ಆ ಮಟ್ಟಿಗೆ ಪ್ರಭಾವಿ ಇದ್ದರೋ ಗೊತ್ತಿಲ್ಲ. ಆದರೆ, ಪ್ರಭಾವಿಗಳು ಅವರಲ್ಲಿಗೆ ಬರುತ್ತಿದ್ದುದು ನಿಜ.

ಚೈತ್ರಾ ಮತ್ತು ಗೋವಿಂದ ಪೂಜಾರಿ ಅವರಿಗೆ ಮಾತು ಕೊಟ್ಟು ಡೀಲ್‌ ಮಾಡಿಕೊಂಡಂತೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸಲು ಹಾಲಶ್ರೀ ಪ್ರಯತ್ನಪಟ್ಟಿರಬಹುದು. ಆದರೆ, ರಾಜಕಾರಣದಲ್ಲಿ ನೂರು ಜನ ಇರುತ್ತಾರೆ. ಹಾಲಶ್ರೀ ಒಬ್ಬರ ಮಾತು ಕೇಳಿ ಸೀಟು ಕೊಡ್ತಾರಾ? ಪ್ಲ್ಯಾನ್‌ ಫೇಲ್‌ ಆಗಿದೆ!

ಇದನ್ನೂ ಓದಿ: Chaitra Kundapura : ಚೈತ್ರಾ ಕುಂದಾಪುರ; ಯಾರಿವಳು ಫೈರ್‌ಬ್ರಾಂಡ್‌ ಹುಡುಗಿ?, ಆಕೆ ಟಿವಿ ನಿರೂಪಕಿ, ಉಪನ್ಯಾಸಕಿ ಆಗಿದ್ದಳು!

ಆದರೆ, ಹಣ ಕೊಟ್ಟ ಗೋವಿಂದ ಪೂಜಾರಿಯವರು ಬಿಡ್ತಾರಾ?

ಚೈತ್ರಾ ಕುಂದಾಪುರ ಮತ್ತು ಗಗನ್‌ ಕಡೂರು ಅವರು ಮಾಡಿದ್ದು ನಾಟಕ ಮತ್ತು ಕೆಲವು ಪಾತ್ರಗಳನ್ನು ಸೃಷ್ಟಿಸಿದ ಪ್ರಹಸನ ಎಂದು ತಿಳಿದಾಗ ಗೋವಿಂದ ಪೂಜಾರಿ ಸಿಟ್ಟಿಗೆದ್ದಿದ್ದರು. ಒಂದು ಕಡೆ ಟಿಕೆಟ್‌ ಸಿಗದ ಬೇಸರ, ಇನ್ನೊಂದು ಕಡೆ ಮೋಸ ಹೋದ ಆಕ್ರೋಶದಲ್ಲಿದ್ದ ಗೋವಿಂದ ಪೂಜಾರಿ ಅವರು ಎಲ್ಲರಿಗೂ ಪಾಠ ಕಲಿಸಲು ನಿರ್ಧರಿಸಿದ್ದರು.

ಹಾಗೆ ಎಲ್ಲರನ್ನೂ ವಿಚಾರಿಸಿಕೊಂಡಂತೆ ಹಾಲಶ್ರೀ ಸ್ವಾಮೀಜಿಯನ್ನೂ ಕೇಳಿದ್ದರು. ಆದರೆ, ಸ್ವಾಮೀಜಿ ಮಾತ್ರ ಮಹಾಸುಭಗನಂತೆ, ನನಗೆ ಐದು ಕೋಟಿ ವಂಚನೆ ವಿಷಯ ಗೊತ್ತಿಲ್ಲ. ನನ್ನದು 1.5 ಕೋಟಿ ರೂ. ಮಾತ್ರ. ಬೇಕಿದ್ದರೆ ಅದನ್ನು ಹಂತ ಹಂತವಾಗಿ ಕೊಡುತ್ತೇನೆ. ನನ್ನನ್ನು ಬಿಟ್ಟುಬಿಡಿ ಎಂದು ಕೇಳಿಕೊಂಡಿದ್ದಾರೆ.

ಆದರೆ, ಇಷ್ಟು ದೊಡ್ಡ ಮೋಸ ಮಾಡಿದ್ದರಿಂದ ಗೋವಿಂದ ಪೂಜಾರಿ ಬಿಡಲು ಸಿದ್ಧರಿಲಿಲ್ಲ. ಅವರನ್ನೂ ಸೇರಿಸಿ ಕೇಸು ಹಾಕಿದ್ದಾರೆ. ಈಗ ಈ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಬಂಧಿತರಾಗಿದ್ದಾರೆ.

ಇದನ್ನೂ ಓದಿ: Chaitra Kundapura : ವಂಚನೆ ಕಥೆ ಅತ್ಲಾಗಿರಲಿ, ಕಡುಬಡವ ಗೋವಿಂದ ಪೂಜಾರಿ ಮಹಾಸಾಧಕನಾದ Motivational ಕಥೆ ಕೇಳಿ

ತಲೆಮರೆಸಿಕೊಂಡಿರುವ ಹಾಲ ಶ್ರೀ

ಗೋವಿಂದ ಪೂಜಾರಿ ಜತೆಗೆ ನನ್ನನ್ನು ಸೇರಿಸಬೇಡಿ ಗೋವಿಂದಣ್ಣ ಎಂದು ಸಾಕಷ್ಟು ಗೋಗರೆದಿದ್ದ ಹಾಲ ಶ್ರೀ ಸ್ವಾಮೀಜಿಗೆ ಅಂತಿಮವಾಗಿ ತಮ್ಮ ಹೆಸರು ಎಫ್‌ಐಆರ್‌ನಲ್ಲಿ ಬಿದ್ದಿದೆ ಎಂದು ತಿಳಿಯಿತು. ಹಾಗೆ ಸಂದೇಶ ಬಂದಾಗ ಅವರು ಒಂದು ಕಾರ್ಯಕ್ರಮದಲ್ಲಿದ್ದರು. ಸಂದೇಶ ನೋಡಿದವರೇ ಕಾರ್ಯಕ್ರಮದ ಮಧ್ಯದಿಂದಲೇ ಎದ್ದು ಹೋಗಿದ್ದಾರೆ. ಅಲ್ಲಿಂದ ಬಳಿಕ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ಇದ್ದುಕೊಂಡೇ ಈ ಪ್ರಕರಣದಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂದು ಪ್ಲ್ಯಾನ್‌ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಉದಾಹರಣೆ ಎಂದರೆ ಅವರು ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು.

ಇದನ್ನೂ ಓದಿ : Chaitra Kundapura : ಬಂಧನ ತಪ್ಪಿಸಲು ಹಾಲಶ್ರೀ ಯತ್ನ; ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ

ಸದ್ಯಕ್ಕೆ ಕೋರ್ಟ್‌ ಅವರ ಮಾತಿಗೆ ಮನ್ನಣೆ ನೀಡಿಲ್ಲ. ಸೆಪ್ಟೆಂಬರ್‌ 16ರಂದು ಇನ್ನೊಂದು ಸುತ್ತಿನ ವಿಚಾರಣೆ ನಡೆದು ತೀರ್ಪು ಹೊರಬೀಳಲಿದೆ. ಒಂದೊಮ್ಮೆ ಜಾಮೀನು ಸಿಗದೆ ಹೋದರೆ ಅಭಿನವ ಹಾಲಶ್ರೀ ಸ್ವಾಮೀಜಿ ಜೈಲು ಸೇರುವುದು ಗ್ಯಾರಂಟಿ. ಹಾಗೆ ಸೆರೆ ಸಿಕ್ಕರೆ ದೊಡ್ಡ ದೊಡ್ಡವರ ಹೆಸರು ಹೊರಬೀಳಲಿದೆ ಎನ್ನುವುದು ಚೈತ್ರಾ ಕುಂದಾಪುರ ನಿರೀಕ್ಷೆ.

halasree swameeji

ಆದರೆ, ಈಗಾಗಲೇ ನಾನು ಇನ್ನೋಸೆಂಟ್. ನನಗೆ ಇದ್ಯಾವುದೂ ಗೊತ್ತಿಲ್ಲ ಎಂದಿರುವ ಹಾಲಶ್ರೀ ಏನು ಕಥೆ ಹೇಳುತ್ತಾರೋ ಗೊತ್ತಿಲ್ಲ. ಕಾದು ನೋಡಬೇಕು.

ಹಾಗಿದ್ದರೆ ಸ್ವಾಮೀಜಿ 1.5 ಕೋಟಿ ದುಡ್ಡು ಏನು ಮಾಡಿದರು, ಯಾರಿಗೆ ಕೊಟ್ರು?

ಇದೆಲ್ಲವೂ ವಂಚನೆಗೆ ಥಳುಕು ಹಾಕಿಕೊಂಡು ಭಾಗದ ಕಥೆ. ಉಳಿದಿರುವ ಕಥೆ ಇನ್ನೂ ಇಂಟ್ರೆಸ್ಟಿಂಗ್.‌ ಅದೇನೆಂದರೆ ಗೋವಿಂದ ಪೂಜಾರಿ ಕೊಟ್ಟ 1.5 ಕೋಟಿ ರೂ. ಹಣವನ್ನು ಸ್ವಾಮೀಜಿ ಏನು ಮಾಡಿದರು? ಟಿಕೆಟ್‌ ಕೊಡಿಸಲೆಂದು ಯಾವುದಾದರೂ ರಾಜಕಾರಣಿಗಳಿಗೆ ಕೊಟ್ರಾ? ತಾನೇ ಖರ್ಚು ಮಾಡಿದ್ರಾ?

ಇದನ್ನು ಬೆನ್ನಟ್ಟಿ ಹೋದರೆ ಇತ್ತೀಚೆಗೆ ತೆರೆದುಕೊಂಡ ಸ್ವಾಮೀಜಿಗಳ ಐಷಾರಾಮಿ ಬದುಕು ಕಣ್ಣಿಗೆ ರಾಚುತ್ತದೆ. ಅವರು ಮಾಡಿರುವ ವ್ಯವಹಾರಗಳು ತೆರೆದುಕೊಳ್ಳುತ್ತವೆ. ಹೌದು, ಗೋವಿಂದ ಪೂಜಾರಿಯಿಂದ ಬಂದ ಹಣವನ್ನು ಯಾರಿಗೋ ಕೊಡುವುದಕ್ಕಿಂತಲೂ ಹೆಚ್ಚಾಗಿ ಸ್ವಂತಕ್ಕೆ ಬಳಸಿಕೊಂಡಿದ್ದು ಕಂಡುಬರುತ್ತದೆ.

ಇತ್ತೀಚೆಗೆ ಸ್ವಾಮೀಜಿಯ ಲೈಫ್‌ ಸ್ಟೈಲೇ ಬದಲಾಗಿ ಹೋಗಿತ್ತು. ಅವರು ದೊಡ್ಡ ದೊಡ್ಡ ವ್ಯವಹಾರಗಳ ಬಗ್ಗೆ ಮಾತನಾಡುತ್ತಿದ್ದರು. ಇನ್ವೆಸ್ಟ್‌ ಮೆಂಟ್‌ಗಳ ವಿಚಾರ ಹೇಳುತ್ತಿದ್ದರು ಎನ್ನಲಾಗಿದೆ.

ಎಂಟು ಎಕರೆ ಭೂಮಿ ಖರೀದಿಸಿದ ಸ್ವಾಮೀಜಿ

ಕೆಲವೇ ತಿಂಗಳ ಹಿಂದೆ ಸ್ವಾಮೀಜಿ ಹಿರೇಹಡಗಲಿ ಮತ್ತು ಮಾಗಳ ಮಧ್ಯೆ ಸುಮಾರು 8 ಎಕರೆ ಜಮೀನು ಖರೀದಿ ಮಾಡಿದ್ದಾರೆ. ಖರೀದಿ ಮಾಡಿದ ಜಮೀನಿನಲ್ಲಿ ಕಬ್ಬು ಬೆಳೆದಿದ್ದು ಈಗ ಅದು ಬೆಳೆದುನಿಂತಿದೆ.

Halasree jameenu Khareedi

ತಮ್ಮ ಪತ್ನಿಯ ತಂದೆಯಾದ ಮಲ್ಲಯ್ಯ ತುಂಬಿನಕೇರ ಅವರ ಹೆಸರಲ್ಲಿ ಜಮೀನು ಖರೀದಿ ಮಾಡಲಾಗಿದೆ. ಅದನ್ನು ಸ್ವಾಮೀಜಿಯವರೇ ನೋಡಿಕೊಳ್ಳುತ್ತಿದ್ದಾರೆ. ಎಂಟು ಎಕರೆ ಜಾಗ ಖರೀದಿಗೆ ಸ್ವಾಮೀಜಿ ಹೂಡಿಕೆ ಮಾಡಿರುವ ಹಣ ಒಟ್ಟು 68 ಲಕ್ಷ ರೂ.

ಹಿರೇಹಡಗಲಿಯಲ್ಲಿ ಪೆಟ್ರೋಲ್‌ ಪಂಪ್‌ ನಿರ್ಮಾಣ

ಈ ನಡುವೆ ಸ್ವಾಮೀಜಿಯವರು ಒಂದು ತಿಂಗಳ ಹಿಂದೆ ಹಿರೇ ಹಡಗಲಿಯಲ್ಲಿ ಒಂದು ಪೆಟ್ರೋಲ್‌ ಪಂಪ್‌ ನಿರ್ಮಾಣ ಮಾಡಿದ್ದಾರೆ. ಈ ಪಂಪ್‌ನ ಲೈಸನ್ಸ್‌ ಹಿರೇಹಡಗಲಿ ಚಂದ್ರಪ್ಪ ಎಂಬವರ ಕೈಯಲ್ಲಿದೆ.

Hala Sree swameeji petrol pump

ಅದನ್ನು 40 ಲಕ್ಷ ರೂ.ಗಳಿಗೆ ಖರೀದಿ ಎಚ್‌ಪಿ ಕಂಪನಿ ಪೆಟ್ರೋಲ್‌ ಪಂಪ್‌ ಸ್ಥಾಪನೆ ಮಾಡಲಾಗಿದೆ. ಕೇವಲ ಒಂದೇ ತಿಂಗಳಲ್ಲಿ ಪಂಪ್‌ ನಿರ್ಮಾಣವಾಗಿದೆ. ಹಿರೇ ಹಡಗಲಿ ಹಾಗೂ ಹಡಗಲಿ ರಸ್ತೆಯಲ್ಲಿದೆ ಈ ಪೆಟ್ರೋಲ್‌ ಪಂಪ್‌. ಇದರ ಮೌಲ್ಯ 40 ಲಕ್ಷ ರೂ.

25 ಲಕ್ಷ ರೂ. ಮೌಲ್ಯದ ಇನ್ನೋವಾ ಕ್ರಿಸ್ಟಾ ಕಾರು ಖರೀದಿ

ಮೊನ್ನೆ ಮೊನ್ನೆಯವರೆಗೆ ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ಓಡಾಡುತ್ತಿದ್ದ ಸ್ವಾಮೀಜಿಗೆ ಈಗ 25 ಲಕ್ಷ ಮೌಲ್ಯದ ಇನ್ನೋವಾ ಕ್ರಿಸ್ತಾ ಕಾರು ಬಂದಿದೆ. ಅದನ್ನು ದೊಡ್ಡ ಸ್ವಾಮೀಜಿಯೊಬ್ಬರು ಪೂಜೆ ಬೇರೆ ಮಾಡಿದ್ದಾರೆ. ಇದರ ಮೌಲ್ಯ 25 ಲಕ್ಷ ರೂ.

Halasree with Cryta car

ಇಷ್ಟೆಲ್ಲ ಆದ ಮೇಲೆ ಗೋವಿಂದ ಪೂಜಾರಿ ಬಂದು ಕೇಳಿದ್ದಾರೆ!

ಹಣವನ್ನು ಹೀಗೆಲ್ಲ ಇನ್‌ವೆಸ್ಟ್‌ ಮಾಡಿ ಐಷಾರಾಮಿ ಜೀವನ ಶುರುಮಾಡಿದ ಮೇಲೆ ಗೋವಿಂದ ಪೂಜಾರಿ ಅವರು ಬಂದು ಸ್ವಾಮೀಜಿ ಏನು ಕಥೆ ಎಂದು ಕೇಳಿದ್ದಾರೆ. ಆಗ ಸ್ವಾಮೀಜಿಯವರು ತಮ್ಮ ಪಾಲಿನ ಕಥೆ ಹೇಳಿದ್ದಾರೆ. ನನ್ನನ್ನು ಬಿಟ್ಟುಬಿಡಿ, ಹಂತ ಹಂತವಾಗಿ ಹಣ ಕೊಡುತ್ತೇನೆ ಎಂದಿದ್ದಾರೆ. ನನ್ನ ಜತೆ ಪಾಲುದಾರರಾಗಿ ಎಂದಿದ್ದಾರೆ. ಸಾಲದ್ದಕ್ಕೆ ಗೋವಿಂದ ಪೂಜಾರಿಗೆ ಸ್ವಲ್ಪ ಹಣ ಕೊಟ್ಟು ಸಮಾಧಾನ ಮಾಡೋಣ ಎಂದು ಹೇಳಿ ನನಗೆ ಒಂದು 10 ಲಕ್ಷ ರೂ. ಸಾಲ ಕೊಡಬಹುದಾ ಎಂದು ಆಪ್ತರಲ್ಲಿ ಕೇಳಿದ್ದಾರೆ. ಅದ್ಯಾವುದೂ ಫಲಿಸಿಲ್ಲ. ಈಗ ಪೊಲೀಸರ ಮುಂದೆ ಕೇಸಿದೆ. ಇಷ್ಟಾದರೂ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಸ್ವಾಮೀಜಿ.

ಇದನ್ನೂ ಓದಿ: Chaitra Kundapura : Big Update; ಅದು ಆತ್ಮಹತ್ಯೆ ಯತ್ನ ಅಲ್ಲ, ಚೈತ್ರಾ ಕುಂದಾಪುರ ಫಿಟ್ಸ್‌ ಬಂದು ಕುಸಿದು ಬಿದ್ದದ್ದು!

ಇದರ ನಡುವೆ ಕೆಲವು ದಿನಗಳ ಹಿಂದೆ ಭಕ್ತಜನರಿಂದ ತುಂಬಿ ತುಳುಕುತ್ತಿದ್ದ ಹಾಲಸ್ವಾಮಿ ಮಠದಲ್ಲಿ ಈಗ ಜನಜಾತ್ರೆ ಕಡಿಮೆಯಾಗಿದೆ. ಗುರುವಾರ ಅಮಾವಾಸ್ಯೆ ಇದ್ದಿದ್ದರಿಂದ ಒಂದಷ್ಟು ಜನ ಬಂದು ದರ್ಶನ ಮಾಡಿ ಹೋಗಿದ್ದಾರೆ. ಆದರೆ ಹಾಲಶ್ರೀಗಳು ಇರುತ್ತಿದ್ದ ಕೋಣೆ ಬಂದ್‌ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Karnataka Weather forecast : ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಕಾರವಾರ: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಶುಕ್ರವಾರ ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ ಮುಂದುವರಿದಿದೆ. ಕರಾವಳಿ ತಾಲೂಕುಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಭಾರೀ ಗಾಳಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಒಂದು ತಾಸಿಗೂ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿತ್ತು.

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಭಾರಿ ಮಳೆಗೆ ಕೆರೆಯಂತಾದ ಕಾಲಕಾಲೇಶ್ವರ ಗ್ರಾಮ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಸುತ್ತಮುತ್ತ ಭಾರಿ‌ ಮಳೆಯಾಗುತ್ತಿದ್ದು, ಕಾಲಕಾಲೇಶ್ವರ ಗ್ರಾಮದ ರಸ್ತೆಗಳು ಕೆರೆಯಂತಾಗಿದೆ. ರಸ್ತೆ ತುಂಬ ನೀರು ನಿಂತು ಜನರು ಓಡಾಡಲು ಪರದಾಡುವಂತಾಗಿತ್ತು. ಇತ್ತ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತ ಸೃಷ್ಟಿಯಾಗಿದ್ದು, ಜನರು ವೀಕ್ಷಣೆಗಾಗಿ ಬರುತ್ತಿದ್ದ ದೃಶ್ಯ ಕಂಡು ಬಂತು.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಕಲಬುರಗಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಲಬುರಗಿಯ ಶಹಾಬಾದ್, ಆಳಂದ, ಚಿಂಚೊಳ್ಳಿ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಚಿತ್ತಾಪೂರ ತಾಲೂಕಿನ ತರ್ಕಸ್ ಪೇಟೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ, ಶೇಖರಿಸಿಟ್ಟಿದ್ದ ದವಸ ಧಾನ್ಯಗಳು ನೀರುಪಾಲಾಗಿದ್ದವು. ಜತೆಗೆ ಚಂದಾಪುರ ಪಟೇಲ್ ಕಾಲೋನಿಯಲ್ಲಿ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ‌ ಕಾರಣ‌ ಮಳೆ‌ ನೀರು ಮನೆಗೆ ನುಗ್ಗಿತ್ತು. ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕಿದರು.

ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಮರ ಬಿದ್ದ ಪರಿಣಾಮ ಕಿ.ಮೀ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಅಡ್ಡಲಾಗಿ ಬಿದ್ದ ಮರದ ಕೆಳಗಡೆಯಿಂದ ಸವಾರರು ರಸ್ತೆ ದಾಟುತ್ತಿದ್ದರು. ಮರ ಬಿದ್ದು ಗಂಟೆಗಟ್ಟಲೆ ಸಮಯ ಕಳೆದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಮರ ತೆರವುಗೊಳಿಸಲಾಯಿತು.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 15ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿವೇಗವು ಒಂದು ಎರಡು ಕಡೆಗಳಲ್ಲಿ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30-21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Train Accident : ಹಳಿ ದಾಟುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

Train Accident : ಹಳಿ ದಾಟುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟರೆ, ಅತಿ ವೇಗವಾಗಿ ಬಂದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಜ್ಜು-ಗುಜ್ಜಾಗಿತ್ತು. ಮತ್ತೊಂದು ಕಡೆ ಬಸ್‌ ಚಲಾಯಿಸುವಾಗಲೇ ಚಾಲಕನಿಗೆ ತಲೆಸುತ್ತು ಬಂದಿದ್ದು, ರಸ್ತೆ ಬದಿಯ ಜಮೀನಿಗೆ ನುಗ್ಗಿದೆ.

VISTARANEWS.COM


on

By

Train Accident
Koo

ಚಿಕ್ಕಬಳ್ಳಾಪುರ: ಹಳಿ ದಾಟುವಾಗ ಅಚಾನಕ್‌ ಆಗಿ ರೈಲಿಗೆ ಸಿಲುಕಿ (Train Accident) ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ. ಭವ್ಯ ಬಾಯಿ(17) ಮೃತ ದುರ್ದೈವಿ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಘಟನೆ ನಡೆದಿದೆ.

ಭವ್ಯಬಾಯಿ ಗೌರಿಬಿದನೂರು ನಗರದಲ್ಲಿರುವ ಎಸ್‌ಇಎ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಳು. ಕಾಲೇಜು ಮುಗಿಸಿ ವಾಪಸ್‌ ಹಾಸ್ಟೆಲ್‌ಗೆ ಹೋಗುತ್ತಿದ್ದಾಗ, ರೈಲಿಗೆ ಸಿಲುಕಿದ್ದಾಳೆ. ಗಂಭೀರ ಗಾಯಗೊಂಡು ತೀವ್ರಸ್ರಾವವಾಗಿ ಮೃತಪಟ್ಟಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

ಡಿವೈಡರ್‌ಗೆ ಡಿಕ್ಕಿ ಹೊಡೆದು ನಜ್ಜು-ಗುಜ್ಜಾದ ಕಾರು

ಉಡುಪಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ನಜ್ಜುಗುಜ್ಜಾಗಿದೆ. ಉಡುಪಿ ಅಂಬಾಗಿಲು ವಿನಲ್ಲಿ ಘಟನೆ ನಡೆದಿದೆ. ಕಾರೊಂದು ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಅತೀ ವೇಗವಾಗಿ ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕಾರಿನ ಇಂಜಿನ್ ಮಾರುದ್ದ ಹಾರಿ ಬಿದ್ದಿತ್ತು.

ಕಾರು ಡಿಕ್ಕಿಯಾಗಿ ಜಿಂಕೆ ಸಾವು

ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಆನೆಕಾಡಿನ ರಾಷ್ಟ್ರೀಯ ಹೆದ್ದಾರಿ‌ 275ರ ಬಳಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 12 ವರ್ಷದ ಗಂಡು ಜಿಂಕೆಯೊಂದು ಮೃತಪಟ್ಟಿದೆ. ಅರಣ್ಯದ ಒಂದು ಕಡೆಯಿಂದ ಮತ್ತೊಂದು ಕಡೆಗೆ ದಾಟುವಾಗ ಕಾರಿಗೆ ಜಿಂಕೆ ಅಡ್ಡ ಬಂದಿದೆ.

ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಮೃತಪಟ್ಟಿದೆ. ಸ್ಥಳಕ್ಕೆ ಆನೆಕಾಡು ಉಪ ವಲಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಲಕನಿಗೆ ತಲೆ ತಿರುಗಿ ಜಮೀನಿಗೆ ನುಗ್ಗಿದ ಬಸ್‌

ಬಸ್‌ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆ ಸುತ್ತು ಬಂದಿದ್ದು, ನಿಯಂತ್ರಣ ತಪ್ಪಿ ರಸ್ತೆಯಿಂದ ಜಮೀನಿಗೆ ಬಸ್‌ಗೆ ನುಗ್ಗಿದ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಟೋಲ್ ಗೇಟ್ ಬಳಿ ಘಟನೆ ನಡೆದಿದೆ.

ಸಾರಿಗೆ ಸಂಸ್ಥೆಯ ಬಸ್‌ವೊಂದು ಮುಂಡರಗಿ ಪಟ್ಟಣದಿಂದ ಹಮ್ಮಿಗಿ ಗ್ರಾಮಕ್ಕೆ ತೆರಳುತ್ತಿತ್ತು. ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನಿಗೆ ತಲೆ ಸುತ್ತು ಬಂದಿದೆ. ನೋಡನೋಡುತ್ತಿದ್ದಂತೆ ರಸ್ತೆ ಬದಿ ಜಮೀನಿಗೆ ಬಸ್‌ ನುಗ್ಗಿದೆ. ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Self Harming : ಒಂದೇ ದಿನ ನಾಲ್ವರು ಗೃಹಿಣಿಯರ ಆತ್ಮಹತ್ಯೆ; ಅವರಲ್ಲಿಬ್ಬರು ಯೋಧರ ಪತ್ನಿಯರು

Self Harming : ಒಂದೇ ದಿನ ನಾಲ್ವರು ಗೃಹಿಣಿಯರು ಆತ್ಮಹತ್ಯೆಗೆ ಶರಣಾಗಿದ್ದು, ಅವರಲ್ಲಿಬ್ಬರು ಯೋಧರ ಪತ್ನಿಯರಾಗಿದ್ದಾರೆ. ಒಬ್ಬರಿಗೆ ಅತ್ತೆ ಕಾಟವಾದರೆ ಮತ್ತೊಬ್ಬರಿಗೆ ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

By

Self Harming
Koo

ಕೊಪ್ಪಳ/ ಚಿಕ್ಕೋಡಿ: ಕೊಪ್ಪಳದ ಕುಕನೂರು ತಾಲೂಕಿನ ಇಟಗಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ವೀಣಾ ಬಸಯ್ಯ ಸಸಿ (25) ಆತ್ಮಹತ್ಯೆಗೆ ಶರಣಾದವರು.

ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ವೀಣಾ ಗುರುವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವೀಣಾ ಪತಿ ರಾಜಸ್ಥಾನದಲ್ಲಿದ್ದು, ಅಲ್ಲಿ ಸೈನಿಕನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ಜತೆಗೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ಅತ್ತೆ ಕಾಟಕ್ಕೆ ಬೇಸತ್ತು ನೇಣಿಗೆ ಶರಣಾದಳು

ಅತ್ತೆಯ ಕಾಟದಿಂದ ಬೇಸತ್ತ ಯೋಧನ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಘಟನೆ ನಡೆದಿದೆ. ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡವರು.

ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅತ್ತೆ ಸೇವಂತಾ ಸಿದರಾಯ ರೂಪಾಬಾಯಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆ. ರೂಪಾಬಾಯಿಗೆ ಎರಡು ಮಕ್ಕಳಿದ್ದು, ಅನಾಥರಾಗಿವೆ.

ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕಾಗವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ದರ್ಶನ್​ ಕೊಲೆ ಕೇಸ್​​

ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿದಳು

ಉಡುಪಿ: ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉಡುಪಿಯ (Udupi News) ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.

ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ. ಸ್ಥಳೀಯರು ಇದನ್ನೂ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Udupi News Self Harming

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.

6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ

ಮೈಸೂರು: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ (Self Harming) ಪತ್ತೆಯಾಗಿದ್ದಾಳೆ. ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಸೌಮ್ಯಾಶ್ರೀ (27) ಮೃತ ದುರ್ದೈವಿ.

ಆರು ತಿಂಗಳ ಹಿಂದೆ ಮೈಸೂರಿನ ಮಂಜುನಾಥ್ ಎಂಬುವರ ಜತೆ ಸೌಮ್ಯಾಶ್ರೀ ಮದುವೆಯಾಗಿದ್ದರು. ಸೌಮ್ಯಾಶ್ರೀ ತಂದೆ ಶ್ರೀಧರ್ ಬೆಂಗಳೂರಿನಿಂದ ಮೈಸೂರಿಗೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಮದುವೆ ಆದ ಕೆಲವೇ ದಿನಗಳಲ್ಲಿ ಸೌಮ್ಯಾಳ ನಡತೆ ಮೇಲೆ ಪತಿ ಮಂಜುನಾಥ್ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಈ ಕುರಿತು ಸೌಮ್ಯಾ ಹೆತ್ತವರಿಗೆ ಮಾಹಿತಿ ನೀಡಿದ್ದಳು. ಹೀಗಾಗಿ ಮಂಜುನಾಥ್ ಹಾಗೂ ಅವರ ಮನೆಯವರೆಲ್ಲ ಸೇರಿ ಸೌಮ್ಯಾಳನ್ನ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳ ಶವ ಕಂಡು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self Harming
ಸೌಮ್ಯಳ ಶವ ಕಂಡು ಪೋಷಕರ ಆಕ್ರಂದನ

ಸ್ಥಳಕ್ಕೆ ಮೈಸೂರಿನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇತ್ತ ಆಕೆಯ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

Udupi News Self harming
ಬಾವಿಗಿಳಿದು ಮೃತದೇಹವನ್ನು ತೆರವು ಮಾಡಿದ ಅಗ್ನಿಶಾಮಕ ದಳ ಸಿಬ್ಬಂದಿ
Koo

ಉಡುಪಿ: ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉಡುಪಿಯ (Udupi News) ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.

ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ. ಸ್ಥಳೀಯರು ಇದನ್ನೂ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Udupi News Self Harming

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

ಜಾರ್ಖಂಡ್: ಅತ್ಯಾಚಾರ ಪ್ರಕರಣ ದೇಶದಲ್ಲಿ ಹೆಚ್ಚಾಗುತ್ತಿದೆ. ನಿತ್ಯ ಒಂದಿಲ್ಲೊಂದು ಕಡೆ ಅತ್ಯಾಚಾರ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ಕೆಲವೊಂದು ಪ್ರಕರಣಗಳು ಬೆಳಕಿಗೆ ಬರುತ್ತವೆ. ಇನ್ನು ಕೆಲವು ಹಾಗೆಯೇ ಮುಚ್ಚಿ ಹೋಗುತ್ತದೆ. ಅದರಲ್ಲೂ ಅಪರಿಚಿತರಿಂದ ಹುಡುಗಿಯರು ಅತ್ಯಾಚಾರಕ್ಕೆ (Rape Case ) ಒಳಗಾಗುವುದಕ್ಕಿಂತ ಹೆಚ್ಚು ತಮ್ಮವರಿಂದಲೇ ಅತ್ಯಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಅಂತಹದೊಂದು ಘಟನೆ ಇದೀಗ ಜಾರ್ಖಂಡ್‌ನಲ್ಲಿ ನಡೆದಿದೆ.

14 ವರ್ಷದ ಬಾಲಕಿಯನ್ನು ಆಕೆಯ ಅಪ್ರಾಪ್ತ ಗೆಳೆಯ ಮತ್ತು ಆತನ ಆರು ಮಂದಿ ಗೆಳೆಯರು ಸೇರಿ 2 ದಿನಗಳ ಕಾಲ ಅತ್ಯಾಚಾರ ಎಸಗಿ, ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ ಘಟನೆ ಜಾರ್ಖಂಡ್‌ನ ಧನ್ಬಾದ್ ಜಿಲ್ಲಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಗೆಳೆಯ ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಭಾನುವಾರ ಸಂಜೆ ಅವಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಆತ ಮತ್ತು ಆತನ ಸ್ನೇಹಿತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿದ್ದಾರೆ. ಮರುದಿನ ಸಂಜೆ ಆತನ ಗೆಳೆಯನ ಐದು ಮಂದಿ ಸ್ನೇಹಿತರು ಬಂದು ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಬಾಲಕಿ ಸಹಾಯಕ್ಕಾಗಿ ಕಿರುಚಿದಾಗ ಆಕೆಯ ಕೂಗಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಧನ್ಸಾರ್ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲ ಅವರಲ್ಲಿ ಒಬ್ಬ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ಅಪರಾಧ ಸ್ಥಳದಲ್ಲಿದ್ದ ಆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಆರೋಪಿಯ ಮನೆ ಮೇಲೆ ದಾಳಿ ಮಾಡಿದಾಗ ಅಲ್ಲಿ ಯಾರೂ ಇರಲಿಲ್ಲ. ಹಾಗೇ ಸಂತ್ರಸ್ತೆಯ ಕುಟುಂಬದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಧನ್ಸಾರ್ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತು ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶನದ ಮೇರೆಗೆ ಆಶ್ರಯ ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sunny Leone
ಸಿನಿಮಾ10 mins ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ13 mins ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ21 mins ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ22 mins ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು27 mins ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Journalist Sunayana Suresh is now a director
ಕರ್ನಾಟಕ30 mins ago

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Road Accident
ಕರ್ನಾಟಕ1 hour ago

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Narendra Modi
ದೇಶ1 hour ago

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Bagalkot News
ಕರ್ನಾಟಕ2 hours ago

Bagalkot News: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

Petrodollar Deal
ವಿದೇಶ2 hours ago

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ3 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌