Vijayanagara News: ಅ.7ರಂದು ವಿಜಯನಗರ ಜಿಲ್ಲೆಗೆ ಬರ ಅಧ್ಯಯನ ತಂಡ - Vistara News

ವಿಜಯನಗರ

Vijayanagara News: ಅ.7ರಂದು ವಿಜಯನಗರ ಜಿಲ್ಲೆಗೆ ಬರ ಅಧ್ಯಯನ ತಂಡ

Vijayanagara News : ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕೆ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಕೇಂದ್ರದ ಎರಡನೇ ತಂಡ ಅ.7 ರಂದು ಶನಿವಾರ ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್. ತಿಳಿಸಿದ್ದಾರೆ.

VISTARANEWS.COM


on

130 crore crop compensation amount paid to Vijayanagara district says DC m S Diwakar
ವಿಜಯನಗರ ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ವಿಜಯನಗರ ಜಿಲ್ಲೆಯ ಬರ (Drought) ಪರಿಸ್ಥಿತಿ ಅಧ್ಯಯನಕ್ಕೆ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಕೇಂದ್ರದ ಎರಡನೇ ತಂಡ (Team) ಅ.7 ರಂದು ಶನಿವಾರ ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್. ತಿಳಿಸಿದ್ದಾರೆ.

ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಬರ ಅಧ್ಯಯನದ ಎರಡನೇ ತಂಡವಾದ ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ. ರಾಜಶೇಖರ್ ನೇತೃತ್ವದಲ್ಲಿ ಪಶುಸಂಗೋಪನೆ ಇಲಾಖೆ ‌ನಿರ್ದೇಶಕ ಆರ್.ಥಾಕರೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಮೋತಿರಾಂ, ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಕರೀಗೌಡ ಅವರ ನೇತೃತ್ವದ ತಂಡ ವಿವಿಧ ತಾಲೂಕಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: CDAC Recruitment 2023: 278 ಹುದ್ದೆಗಳಿವೆ; ಇಂದೇ ಅರ್ಜಿ ಸಲ್ಲಿಸಿ

ಅಧಿಕಾರಿಗಳ ನೇತೃತ್ವದ ಭೇಟಿ ನೀಡಿದ ಸಂದರ್ಭದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡುವ ಜತೆಗೆ ಹಲವು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದ್ದು, ಕೆಲವೆಡೆ ಬೆಳೆ ಇದ್ದರೂ ಉಂಟಾಗಲಿರುವ ತೀವ್ರ ಇಳುವರಿ ಕುಸಿತದ ಬಗ್ಗೆ ಪರಿಣಾಮಕಾರಿಯಾಗಿ ವಿವರಿಸಿ ಅರ್ಥ ಮಾಡಿಕೊಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅಧ್ಯಯನ ತಂಡ ಭೇಟಿ ನೀಡಲಿರುವ ಬರ ಪ್ರದೇಶಗಳು

ಜಿಲ್ಲೆಯಲ್ಲಿ ನಿಗದಿಯಾದ ಪ್ರದೇಶಗಳಲ್ಲಿ 10-15 ನಿಮಿಷಗಳ ಕಾಲ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.

ಅ.7 ರಂದು ಶನಿವಾರ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲಿನಲ್ಲಿ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಆಯಾ ಪ್ರದೇಶಗಳಿಗೆ ತಂಡ ಭೇಟಿ ನೀಡಲಿದೆ.

ಇದನ್ನೂ ಓದಿ: ENG vs NZ: ಸಬರಮತಿ ತೀರದಲ್ಲಿ ವಿಶ್ವಕಪ್ ಕ್ರಿಕೆಟ್​ ಮಹಾ ಸಮರಕ್ಕೆ ಚಾಲನೆ; ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡ ಕಿವೀಸ್​

ಹೊಸಪೇಟೆ ತಾಲೂಕಿನ ನಂದಿಬಂಡಿ ಗ್ರಾಮ ಸೇರಿದಂತೆ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ, ಹಂಪಾಪಟ್ಟಣ, ರಾಯರ ತಾಂಡಾ, ಆನೆಕಲ್, ಮಾದೂರು, ಕೊಟ್ಟೂರು ತಾಲೂಕಿನ ತಿಮ್ಮಲಾಪುರ ನಂತರ ಕೂಡ್ಲಿಗಿ ತಾಲೂಕಿನ ಈಚಲುಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ರೈತರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hit And Run Case: ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

Hit And Run Case: ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಬೈಕ್‌ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕನಿಗೆ ಗಂಭೀರ ಗಾಯಗಳಾಗಿವೆ.

VISTARANEWS.COM


on

Hit And Run Case
Koo

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

Drowned in water.. road Accident

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident ) ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ರಸ್ತೆಯ ಬೋರಾಪುರದಲ್ಲಿ ಅಪಘಾತ ನಡೆದಿದೆ.

ಮದ್ದೂರಿನಿಂದ ಮಳವಳ್ಳಿ ಕಡೆಗೆ ಸ್ವಿಫ್ಟ್ ಕಾರು ತೆರಳುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್‌ ಮಳವಳ್ಳಿಯಿಂದ ಮದ್ದೂರು ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ. ಬಸ್‌ನ ಮುಂಭಾಗ ಜಖಂಗೊಂಡಿದೆ.

ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿದ್ದು, ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಬೋರಾಪುರ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಛಿದ್ರಗೊಂಡಿದ್ದ ಕಾರನ್ನು ತೆರವು ಮಾಡಿದ್ದರು. ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿನಿಯರು, ಸಹೋದರಿಯರು ಶಾಲಾ ಕಾಲೇಜಿಗೆ ಸುರಕ್ಷಿತವಾಗಿ ಹೋಗಿ ಬರುವುದು ಕಷ್ಟವಾಗಿದೆ. ಹುಬ್ಬಳ್ಳಿಯಲ್ಲಿ ಬೆಳಗಿನಜಾವ 6 ಗಂಟೆಗೆ ಅಂಜಲಿ ಎಂಬ ಸಹೋದರಿಯ ಹತ್ಯೆಯಾಗಿದೆ. ಇದಕ್ಕು ಒಂದು ತಿಂಗಳ ಮುನ್ನ ನೇಹ ಹಿರೇಮಠ ಎನ್ನುವ ಸಹೋದರಿಯ ಹತ್ಯೆಯಾಗಿದೆ. ಕಲಬುರಗಿಯಲ್ಲಿ ಅರ್ಜುನ ಮಡಿವಾಳರ ಎನ್ನುವ ವ್ಯಾಪಾರಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನೆಲ್ಲ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಕಿಡಿಕಾರಿದ್ದಾರೆ.

VISTARANEWS.COM


on

MLC N Ravikumar Spoke in North East Graduate Constituency Election Preliminary meeting in hosapete
Koo

ಹೊಸಪೇಟೆ(ವಿಜಯನಗರ): ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಆದರೆ ಕಾಂಗ್ರೆಸ್‌ನ ಅನೇಕರಲ್ಲಿ ಈ ಬಗ್ಗೆ ಸಂತಸ ಕಾಣುತ್ತಿಲ್ಲ. ಬದಲಾಗಿ ಅನೇಕ ಹಿರಿಯ ಕಾಂಗ್ರೆಸಿಗರಲ್ಲಿ ಅಸಮಾಧಾನ ಇದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ (MLC Election) ಹೇಳಿದರು.

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ವಿಜಯನಗರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸೋಮವಾರ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಲೋಕಸಭಾ ಚುನಾವಣೆ ವೇಳೆ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಒಂದೇ ಸಲಕ್ಕೆ 6 ಸಾವಿರ ರೂಪಾಯಿ ಹಾಕಿದ್ದಾರೆ. ಆಗಲೂ ಕಾಂಗ್ರೆಸ್‌ಗೆ ಮತ ಬೀಳುವುದಿಲ್ಲ ಎನ್ನುವ ಕಾರಣಕ್ಕೆ ಪ್ರತಿ ಮತಕ್ಕೆ ಹಣ ನೀಡಿ ಆಮಿಷ ಒಡ್ಡಿದ್ದಾರೆ. ಕೆಲ ಕ್ಷೇತ್ರದಲ್ಲಿ 300 ಕೋಟಿ ಹಣ ಖರ್ಚು ಮಾಡಿರುವ ಮಾಹಿತಿ ನಮಗಿದೆ ಎಂದು ಆರೋಪಿಸಿದ ಅವರು, ಇಷ್ಟಾದರೂ ಸಹ ಕಾಂಗ್ರೆಸ್‌ಗಿಂತ ಬಿಜೆಪಿಯೇ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿನಿಯರು, ಸಹೋದರಿಯರು ಶಾಲಾ ಕಾಲೇಜಿಗೆ ಸುರಕ್ಷಿತವಾಗಿ ಹೋಗಿ ಬರುವುದು ಕಷ್ಟವಾಗಿದೆ. ಹುಬ್ಬಳ್ಳಿಯಲ್ಲಿ ಬೆಳಗಿನಜಾವ 6 ಗಂಟೆಗೆ ಅಂಜಲಿ ಎಂಬ ಸಹೋದರಿಯ ಹತ್ಯೆಯಾಗಿದೆ. ಇದಕ್ಕು ಒಂದು ತಿಂಗಳ ಮುನ್ನ ನೇಹ ಹಿರೇಮಠ ಎನ್ನುವ ಸಹೋದರಿಯ ಹತ್ಯೆಯಾಗಿದೆ. ಕಲಬುರಗಿಯಲ್ಲಿ ಅರ್ಜುನ ಮಡಿವಾಳರ ಎನ್ನುವ ವ್ಯಾಪಾರಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನೆಲ್ಲ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಕಿಡಿಕಾರಿದರು.

10ನೇ ತರಗತಿ ಫಲಿತಾಂಶ ಗಣನೀಯ ಕುಸಿತ

ಹತ್ತನೇ ತರಗತಿ ಫಲಿತಾಂಶದಲ್ಲಿ ಗಣನೀಯ ಕುಸಿತ ಕಂಡಿದೆ. ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ. ಈ ಸಚಿವನಿಗೆ ಯಾವುದೇ ಗಾಂಭೀರ್ಯ ಇಲ್ಲ. ಶರಣರು, ಸಂತರು ಜನಿಸಿ ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಾಡಿನಲ್ಲಿ ಇಂತಹ ಸಚಿವ ಶಿಕ್ಷಣ ಖಾತೆ ಮಂತ್ರಿಯಾಗಿರುವುದು ಶೋಚನೀಯ. ರಾಜ್ಯದ ಸಾವಿರಾರು ಶಾಲೆಗಳು ಶಿಥಿಲಾವಸ್ಥೆಯಲ್ಲಿವೆ, ಶಿಕ್ಷಕರ ನೇಮಕಾತಿ ಇಲ್ಲ, ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆಯಾಗಬೇಕಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಮತ ಹಾಕದಂತೆ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ರನ್ನು ಗೆಲ್ಲಿಸುವ ಕೆಲಸ ಮಾಡೋಣ ಎಂದು ಹೇಳಿದರು.

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಯುದ್ಧೋಪಾದಿಯಲ್ಲಿ ಮತದಾರರ ಮನೆಗೆ ತೆರಳಿ ಪಕ್ಷ ಹಾಗೂ ನನ್ನ ಪರ ಕೆಲಸ ಮಾಡಿದ್ದೀರಿ. ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡುವ ಸಂಕಲ್ಪ ನಮ್ಮದೆಲ್ಲರದ್ದೂ ಇದೆ. ಜನರ ಒಲವು ಬಿಜೆಪಿ ಪರ ಇದೆ. ಈ ಬಾರಿ ನಾನು ಗೆಲ್ಲುವ ವಿಶ್ವಾಸವಿದ್ದು, ಇಡೀ ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

ಅಮರನಾಥ ಪಾಟೀಲ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಹಾಕಿಸುವ ಮೂಲಕ ಗೆಲ್ಲಿಸೋಣ ಎಂದು ಅವರು ಮನವಿ ಮಾಡಿದರು.

ಪದವೀಧರ ಕ್ಷೇತ್ರದ ಅಭ್ಯರ್ಥಿ ಅಮರನಾಥ ಪಾಟೀಲ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಪ್ರಥಮ ಪ್ರಾಶಸ್ತ್ಯದ ಮತ ಹಾಕಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

ಈ ವೇಳೆ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಒಬಿಸಿ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಮುಖಂಡರಾದ ಎಚ್. ಪೂಜಪ್ಪ, ಚಂದ್ರಶೇಖರ ಪಾಟೀಲ ಹಲಗೇರಿ, ಓದೋಗಂಗಪ್ಪ, ಸಂಜೀವರೆಡ್ಡಿ, ಬಲ್ಲಾಹುಣ್ಸಿ ರಾಮಣ್ಣ, ಕಿಚಿಡಿ ಕೊಟ್ರೇಶ್ ಹಾಗೂ ಕೆ.ಎಲ್.‌ ಮಹೇಶ್ವರಸ್ವಾಮಿ, ಸಿದ್ಧಾರ್ಥ ಸಿಂಗ್, ಬಸವರಾಜ ಕರ್ಕಿಹಳ್ಳಿ, ಬಿ. ಶಂಕರ್, ಶಂಕರ್ ಮೇಟಿ, ಸಾಲಿ ಸಿದ್ದಯ್ಯಸ್ವಾಮಿ, ಶಿವಶಂಕರ್ ಸೇರಿದಂತೆ ವಿವಿಧ ಮೋರ್ಚಾಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ವಿಜಯನಗರ

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

Food Department : ತಾಯಿ-ಮಗ ಜೀವಂತವಾಗಿದ್ದರೂ, ಬದುಕಿಲ್ಲ ಎಂದು ಪಡಿತರ ಚೀಟಿಯಿಂದ (BPL Card) ಹೆಸರನ್ನೇ ಡಿಲೀಟ್‌ ಮಾಡಿದ್ದಾರೆ. ಸ್ಥಳ ಪರಿಶೀಲನೆ ಮಾಡದೆ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳದೇ ಆಹಾರ ಇಲಾಖೆಯ (ration card) ಅಧಿಕಾರಿಗಳ ಯಡವಟ್ಟಿಗೆ ಕಡು ಬಡತನದ ಕುಟುಂಬವೊಂದು ಪರದಾಡುತ್ತಿದೆ.

VISTARANEWS.COM


on

By

Food department deletes name from ration card list even though it is alive
Koo

ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸತ್ತಿದ್ದಾಗಿ ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ (BPL Card) ಹೆಸರಿನಿಂದ ಆಹಾರ ಇಲಾಖೆಯು (Food Department) ಡಿಲೀಟ್ ಮಾಡಿದೆ. ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ (ration card) ಯಡವಟ್ಟಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಬದುಕಿದ್ದರೂ 2019ರಲ್ಲೇ ಸತ್ತಿದ್ದಾರೆ ಎಂದು ಬಿಪಿಎಲ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌ ಮಾಡಲಾಗಿದೆ. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿದೆ. ಆಹಾರ ಇಲಾಖೆ ಯಡವಟ್ಟಿನಿಂದ ಪಡಬಾರದ ಕಷ್ಟ ಪಡುತ್ತಿರುವ ಕುಟಂಬ ತಿಂಗಳ ಪಡಿತರಕ್ಕೂ ಅಲೆಯುತ್ತಿದೆ.

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಆಹಾರ ಇಲಾಖೆ ಯಾರದ್ದೋ ಮಾತು ಕೇಳಿ ಪಡಿತರ ಚೀಟಿಯಿಂದ ಹೆಸರು ಡಿಲೀಟ್ ಮಾಡಿದೆ. ಕೂಡ್ಲಿಗಿ ತಾಲೂಕಿನ ಅಂಜಿನಮ್ಮ ತೀರಾ ಕಡು ಬಡವರಾಗಿದ್ದು, ಆಹಾರ ಇಲಾಖೆಯ ಕೆಲಸಕ್ಕೆ ಇತರೇ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ರೇಷನ್ ಕಾರ್ಡ್ ಇಲ್ಲದೇ ಇರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಅಂಜಿನಮ್ಮಗೆ ಸಿಕ್ಕಿಲ್ಲ.

ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆದು ಸುಸ್ತಾಗಿದ್ದಾರೆ. ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಡಿತರ ಚೀಟಿಯಿಂದ ಹೆಸರು ತೆಗೆಯಬೇಕಾದರೆ ಅಧಿಕಾರಿಗಳು ಸ್ಪಾಟ್‌ ವಿಸಿಟ್‌ ಮಾಡಬೇಕು. ಪಡಿತರ ಚೀಟಿಯಲ್ಲಿ ಇರುವವರು ಬದುಕಿದ್ದಾರಾ ಇಲ್ವಾ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಅಧಿಕಾರಿಗಳು ಪರಿಶೀಲಿಸದೇ ಹೀಗೆ ಅಂಜೀನಮ್ಮ ಹೆಸರು ತೆಗೆದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
MS Dhoni Bike Riding
ಕ್ರೀಡೆ22 mins ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ41 mins ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ46 mins ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ1 hour ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ1 hour ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ1 hour ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ1 hour ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ2 hours ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ2 hours ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ2 hours ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌