Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ Vistara News

ವಿಜಯನಗರ

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Vijayanagara News: ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಿತು.

VISTARANEWS.COM


on

MLA Dr N T Srinivas drives the foot and mouth disease vaccination campaign at Kudligi
ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೂಡ್ಲಿಗಿ: ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ , ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ (Foot and Mouth Disease Vaccination campaign) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೂಡ್ಲಿಗಿ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಶುಪಾಲನೆ ಭಾಗವಾದ ಆಕಳು ಎತ್ತು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಆರೋಗ್ಯದ ಸಮಸ್ಯೆ ಕಂಡುಬಂದ ವೇಳೆ ತಾಲೂಕಿನ ರೈತರು ಕರೆ ಮಾಡಿದಾಗ ವೈದ್ಯಕೀಯ ತಂಡ ತಕ್ಷಣ ಭೇಟಿ ನೀಡಿ, ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: SBI SO Recruitment 2023: ಎಸ್‌ಬಿಐಯಲ್ಲಿದೆ 439 ಹುದ್ದೆ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ

ಇದೇ ವೇಳೆ ಕೂಡ್ಲಿಗಿ ತಾಲೂಕಿನ ವೈದ್ಯರ ಸಿಬ್ಬಂದಿ, ಔಷಧಿ ಗುಣಮಟ್ಟ, ವೈದ್ಯಕೀಯ ಸೇವೆ, ಲಸಿಕೆ ವಿಧಾನ, ಆಸ್ಪತ್ರೆ ಕಟ್ಟಡಗಳ ಸ್ಥಿತಿ ಹಾಗೂ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಕಾರ್ಯ ನಿರ್ವಹಣೆ ಇತ್ಯಾದಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಹಿರಿಗುಂಬಳಗುಂಟೆ ಪಶುವೈದ್ಯಾಧಿಕಾರಿ ಡಾ. ಮಂಜುಶ್ರೀ, ಚಿರತಗುಂಡು ಪಶುವೈದ್ಯಾಧಿಕಾರಿ ಡಾ. ಇಸ್ಮಾಯಿಲ್ ಜಬೀಉಲ್ಲ, ಡಾ. ಲೋಹಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Snake Bite : ವಿಜಯನಗರದಲ್ಲಿ ಹಾವು ಕಡಿತದಿಂದ ಮಹಿಳೆ ಸಾವು!

Snake Bite : ಮೆಕ್ಕೆ ಜೋಳ ಕಟಾವು ಮಾಡುತ್ತಿದ್ದ ಮಹಿಳೆಗೆ ಹಾವು ಕಚ್ಚಿದ್ದು, ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

VISTARANEWS.COM


on

By

snake bite in vijayanagar
Koo

ವಿಜಯನಗರ: ವಾರಕ್ಕೊಂದು ಹಾವು ಕಡಿತದಿಂದ (Snake Bite) ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿಜಯನಗರದ ಹರಪನಹಳ್ಳಿ ತಾಲೂಕಿನ ಬಸವಾನಾಳು ಗ್ರಾಮದಲ್ಲಿ ಹಾವು ಕಡಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ರತ್ನಮ್ಮ (45) ಮೃತ ದುರ್ದೈವಿ.

ರತ್ನಮ್ಮ ಹೊಲದಲ್ಲಿ ಮೆಕ್ಕೆಜೋಳದ ಕಟಾವು ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಹಾವೊಂದು ರತ್ನಮ್ಮರ ಕಾಲಿಗೆ ಕಚ್ಚಿದೆ. ಕೂಡಲೇ ಅವರನ್ನು ಅಲ್ಲಿದ್ದವರು ಕೊಟ್ಟೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲು ಮುಂದಾಗಿದ್ದಾರೆ. ಆದರೆ ಆದಾಗಲೇ ಹಾವಿನ ವಿಷ ಮೈಗೆ ಆವರಿಸಿದ್ದರಿಂದ ಮಾರ್ಗಮಧ್ಯೆಯೇ ಉಸಿರು ಚೆಲ್ಲಿದ್ದಾರೆ.

ಕೊಟ್ಟೂರು ತಾಲೂಕು ಆರೋಗ್ಯಾಧಿಕಾರಿ ಡಾ. ಬಸವೇಶ್ವರ ಅವರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ. ಕೊಟ್ಟರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹಾವು ಕಡಿತಕ್ಕೆ ಬಲಿಯಾಗಿದ್ದ ಮಕ್ಕಳು

ರಾಜ್ಯದಲ್ಲಿ ಹಾವು ಕಡಿತಕ್ಕೆ (Snake Bite) ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಧಾರವಾಡದಲ್ಲಿ ನ.27ರಂದು ಹಾವು ಕಡಿತದಿಂದ ಬಾಲಕ ಮೃತಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಬಾಲಕಿಯೊಬ್ಬಳು ಸಹ ಹಾವಿನ ಕಡಿತದಿಂದ ಮೃತಪಟ್ಟಿದ್ದಳು.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ಸೋನಿಕಾ ಪಾಟೀಲ್ (10) ಎಂಬಾಕೆ ಹಾವು ಕಡಿದು ಮೃತಪಟ್ಟಿದ್ದಳು. ಸೋನಿಕಾ ಬಿಲ್ವಾಡ್ (ಬಿ) ಗ್ರಾಮದ ಸರ್ಕಾರಿ‌ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿ ಓದುತ್ತಿದ್ದಳು. ಶಾಲೆ ಮುಗಿಸಿ ಮನೆಗೆ ಬರುತ್ತಿದ್ದಾಗ ಹಾವು ಕಡಿದಿತ್ತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸೋನಿಕಾ ಮೃತಪಟ್ಟಿದ್ದಾಳೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಧಾರವಾಡ: ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ ಹಾವು ಕಡಿತದಿಂದ ಅರುಣ್ ಬಡಿಗೇರ್ (9) ಎಂಬ ಬಾಲಕ ಮೃತಪಟ್ಟಿದ್ದ. ಅರುಣ್‌ ಮನೆಯ ಪಕ್ಕದಲ್ಲೇ ಆಟವಾಡಲು ಹೋಗಿದ್ದಾಗ ಹಾವು ಕಚ್ಚಿತ್ತು. ಕೂಡಲೇ ಚಿಕಿತ್ಸೆಗೆ ಆಸ್ಪತ್ರೆಗೆ ಕರೆತಂದರೂ ಫಲಕಾರಿಯಾಗಲಿಲ್ಲ.

ಇತ್ತ ಹಾವು ಕಡಿತದಿಂದ ಮಹಿಳೆ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯಲ್ಲಿ ನಡೆದಿತ್ತು. ನ. 13 ಸೋಮವಾರ ಸಂಜೆ ತೋಟದಲ್ಲಿ ಬೆಳೆದಿದ್ದ ಹೂಗಳನ್ನ ಕೊಯ್ಯಲು ಹೋಗಿದ್ದಾಗ ಮಹಿಳೆಗೆ ಹಾವು ಕಚ್ಚಿತ್ತು. ಶಾರದಮ್ಮ (42) ಮೃತ ದುರ್ದೈವಿ. ಹಾವು ಕಚ್ಚಿದ ಕೂಡಲೇ ಅವರನ್ನು ಕೊರಟಗೆರೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯತ್ತಿದ್ದಾಗ ಮಾರ್ಗ ಮಧ್ಯೆ ಮಹಿಳೆ ಮೃತಪಟ್ಟಿದ್ದರು.

ಘಟಿಕೋತ್ಸವದಲ್ಲಿ ಪದವಿ ಪಡೆದ ಕೇರಳ ಮೂಲದ ವಿದ್ಯಾರ್ಥಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿತ್ತು. ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಘಟಿಕೋತ್ಸವ ನಡೆದಿತ್ತು. ಇದರಲ್ಲಿ ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಎಂಬಿಬಿಎಸ್ ಪದವಿ ಪಡೆದಿದ್ದ. ಪದವಿ ಪಡೆದು ಪಾರ್ಕ್‌ನಲ್ಲಿ ನಿಂತಿದ್ದವನಿಗೆ ಹಾವು ಕಡಿದಿರುವ ಶಂಕೆ ವ್ಯಕ್ತವಾಗಿದೆ. ಹಾವು ಕಡಿತ ಗಮನಿಸದೇ ಮನೆಗೆ ಬಂದಾಗ ಕುಸಿದು ಬಿದ್ದು ಮೃತಪಟ್ಟಿದ್ದ. ಮೃತದೇಹವನ್ನು ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಲಾಗಿತ್ತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Vijayanagara News: ಹೊಸಪೇಟೆಯಲ್ಲಿ ವಿಸ್ತಾರ ನ್ಯೂಸ್‌ ಬೆಸ್ಟ್ ಟೀಚರ್‌ ಅವಾರ್ಡ್ ಕಾರ್ಯಕ್ರಮಕ್ಕೆ ಚಾಲನೆ

Vijayanagara News: ವಿಸ್ತಾರ ನ್ಯೂಸ್‌ ವತಿಯಿಂದ ಬೆಸ್ಟ್‌ ಟೀಚರ್‌ ಅವಾರ್ಡ್‌ ನೀಡುತ್ತಿರುವುದು ಸಂತಸದ ಸಂಗತಿ. ಇದು ಸಾಮಾಜಿಕ ಕಳಕಳಿಯ ಪ್ರತೀಕ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಶ್ಲಾಘಿಸಿದರು.

VISTARANEWS.COM


on

Vistara News Best Teacher Award 2023 programme inaugurated by Vijayanagara DC M.S. Diwakar at hosapete
ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಆಯೋಜಿಸಲಾಗಿದ್ದ ವಿಸ್ತಾರ ನ್ಯೂಸ್‌ ಬೆಸ್ಟ್ ಟೀಚರ್‌ ಅವಾರ್ಡ್ 2023 ಕಾರ್ಯಕ್ರಮವನ್ನು ವಿಜಯನಗರ ಡಿಸಿ ಎಂ.ಎಸ್. ದಿವಾಕರ್‌, ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
Koo

ವಿಜಯನಗರ/ಕೊಪ್ಪಳ: ವಿಸ್ತಾರ ನ್ಯೂಸ್‌ ಬೆಸ್ಟ್ ಟೀಚರ್‌ ಅವಾರ್ಡ್ 2023 (Vistara News Best Teacher Award 2023) ರ ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಯ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆಯಿತು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ, ಕೊಪ್ಪಳ ತಾಲೂಕು ಭಾಗ್ಯನಗರದ ನ್ಯಾಷನಲ್ ಸ್ಕೂಲ್, ಹೂವಿನ ಹಡಗಲಿ ತಾಲೂಕು ಹೊಳಲು ಗ್ರಾಮದ ಸರ್ ಎಂ. ವಿಶ್ವೇಶ್ವರಯ್ಯ ಪ್ರೌಢಶಾಲೆ ಮತ್ತು ಕೊಟ್ಟೂರು ತಾಲೂಕಿನ ಹಾರಕನಾಳದ ದ ಪ್ರಿಸ್ಟೀನ್ ಸ್ಕೂಲ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವಿಸ್ತಾರ ನ್ಯೂಸ್‌ ವತಿಯಿಂದ ಬೆಸ್ಟ್‌ ಟೀಚರ್‌ ಅವಾರ್ಡ್‌ ಕಾರ್ಯಕ್ರಮ ಮಾಡುತ್ತಿರುವುದು ಸಂತಸದ ಸಂಗತಿ. ಇದು ಸಾಮಾಜಿಕ ಕಳಕಳಿಯ ಪ್ರತೀಕ ಎಂದು ತಿಳಿಸಿದರು. ಶಿಕ್ಷಕರ ಹುದ್ದೆಯು ಅತ್ಯಂತ ಪವಿತ್ರ ಹಾಗೂ ಗೌರವಯುತವಾದದ್ದು ಎಂದು ಹೇಳಿದರು.

ಇದನ್ನೂ ಓದಿ: Masala Tea: ಚಳಿಗಾಲವೆಂದು ಅತಿಯಾಗಿ ಮಸಾಲೆ ಚಹಾ ಕುಡಿಯುತ್ತೀರಾ? ಹಾಗಾದರೆ ಎಚ್ಚರ!

ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ತಮ್ಮ ತಂದೆಯವರು ಸಹ ಶಿಕ್ಷಕರಾಗಿದ್ದರು. ಈ ಕಾರ್ಯಕ್ರಮಕ್ಕೆ ಬರಲು ಅದೇ ಪ್ರೇರಣೆಯಾಗಿದೆ. ಶಿಕ್ಷಕರ ವೃತ್ತಿ ಗೌರವಯುತ ವೃತ್ತಿ. ಪ್ರತಿಯೊಬ್ಬ ವ್ಯಕ್ತಿಯ, ಸಾಧಕನ ಹಿಂದೆ ಶಿಕ್ಷಕರ ಪಾತ್ರವಿದೆ ಎಂದು ತಿಳಿಸಿದರು.

ಪ್ರಾಥಮಿಕ ಶಾಲಾ ಹಂತದಲ್ಲಿ ಗೌರಮ್ಮ ಎಂಬ ಶಿಕ್ಷಕರು ತಮಗೆ ಪ್ರೋತ್ಸಾಹ ಹಾಗೂ ಪ್ರೇರಣೆಯಾಗಿದ್ದರು ಎಂದು ತಮ್ಮ ಬಾಲ್ಯದಲ್ಲಿ ಶಿಕ್ಷಣ ನೀಡಿದ ಶಿಕ್ಷಕರನ್ನು ಇದೇ ವೇಳೆ ಸ್ಮರಿಸಿಕೊಂಡರು.

ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಹೊಸಪೇಟೆಯ ಕೊಟ್ಟೂರು ಮಹಾಸಂಸ್ಥಾನ ಮಠದ ಶ್ರೀ ಜಗದ್ಗುರು ಬಸವಲಿಂಗ ಮಹಾಸ್ವಾಮೀಜಿ ಮಾತನಾಡಿ, ಸಾಧನೆ ಮಾಡಲು ಗುರು ಅಥವಾ ಶಿಕ್ಷಕರ ಮಾರ್ಗದರ್ಶನವಿರುತ್ತದೆ. ಅವರ ಪ್ರೇರಣೆ ಇರುತ್ತದೆ. ಸಾಧಕರ ಸಾಧನೆ ಹಿಂದೆ ಒಬ್ಬ ಗುರುವಿರುತ್ತಾನೆ. ಗುರುವಿಲ್ಲದೆ ಏನೂ ಇಲ್ಲ. ಅಂತಹ ಗುರುಗಳನ್ನು ಅಥವಾ ಶಿಕ್ಷಕರನ್ನು ಗುರುತಿಸಿ, ಗೌರವಿಸುತ್ತಿರುವ ವಿಸ್ತಾರ ನ್ಯೂಸ್‌ನ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕಿನ ಭಾಗ್ಯನಗರದ ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕ ಪ್ರಹ್ಲಾದ ಅಗಳಿ ಮಾತನಾಡಿ, ಸಮಾಜದಲ್ಲಿ ಅನೇಕ ಕ್ಷೇತ್ರಗಳಲ್ಲಿ ಸಾಧಕರು ಇದ್ದಾರೆ. ನಿಜವಾದ ಸಾಧಕರನ್ನು ಗುರುತಿಸಿ ಅವರನ್ನು ಗೌರವಿಸುವ ಕೆಲಸವನ್ನು ವಿಸ್ತಾರ ನ್ಯೂಸ್ ಮಾಡುತ್ತಿದೆ. ಖಾಸಗಿ ಶಾಲೆಯ ಶಿಕ್ಷಕರನ್ನೂ ಗುರುತಿಸಿ ಅವರಿಗೂ ಗೌರವ ಸಲ್ಲಿಸುತ್ತಿರುವುದಕ್ಕೆ ವಿಸ್ತಾರ ನ್ಯೂಸ್ ಸಂಸ್ಥೆಯನ್ನು ಅಭಿನಂದಿಸುತ್ತೇನೆ.

ಪ್ರತಿವರ್ಷ 88 ಲಕ್ಷ ಜನ ಪದವೀಧರರಾಗುತ್ತಿದ್ದಾರೆ. ಖಾಸಗಿ ಶಾಲೆಗಳ ಶಿಕ್ಷಕರ ಸೇವೆಯೂ ಸ್ಮರಣೀಯ ಸೇವೆ. ಶೈಕ್ಷಣಿಕ ಸಾಧನೆಯಲ್ಲಿ ಖಾಸಗಿ ಶಾಲೆಗಳ ಶಿಕ್ಷಕರ ಸೇವೆಯೂ ಸಿಂಹಪಾಲು ಇದೆ. ಶಿಕ್ಷಣ ಪದ್ದತಿಯನ್ನು ಬದಲಾಯಿಸುವ ಹಕ್ಕನ್ನು ರಾಜಕಾರಣಿಗಳಿಗೆ ನೀಡದೆ ಅಧಿಕಾರಿಗಳಿಗೆ, ಆ ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ನೀಡಬೇಕು ಎಂದು ತಿಳಿಸಿದರು.

ಉದ್ಯಮಿ ಶ್ರೀನಿವಾಸ ರೆಡ್ಡಿ ಮಾತನಾಡಿದರು.

ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ ಬೆಸ್ಟ್‌ ಟೀಚರ್‌ ಅವಾರ್ಡ್‌-2023 ಗೆ ಆಯ್ಕೆಯಾದ ಕಾರಟಗಿ ತಾಲೂಕಿನ ಸೋಮನಾಳ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಕಂಠಿ, ಕುಷ್ಟಗಿ ತಾಲೂಕಿನ ಎಂ.ರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ‌ ಸಹ ಶಿಕ್ಷಕ ರಾಜು ಬಿ. ರಾಠೋಡ, ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ರೋಟರಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗುರುಸ್ವಾಮಿ ಆರ್., ಯಲಬುರ್ಗಾ ತಾಲೂಕಿನ ಬುಕನಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಂಕ್ರಪ್ಪ ಇಂಗಳದಾಳ, ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್‌ ಶಾಲೆಯ ಶಿಕ್ಷಕಿ ನಾದಿರಾ ಬೇಗಂ, ಕೊಪ್ಪಳದ ಭಾಗ್ಯನಗರದ ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್‌ನ ಮುಖ್ಯಗುರು ಕಲ್ಪನಾ ವಿಜಯಕುಮಾರ್, ಹೊಸಪೇಟೆ ತಾಲೂಕಿನ 76 ವೆಂಕಟಾಪುರ ಕ್ಯಾಂಪ್‌ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ನಿರಂಜನ್ ಪಿ.ಜೆ., ಕೂಡ್ಲಿಗಿ ತಾಲೂಕಿನ ಗಜಾಪುರದ ಸಿಆರ್‌‌ಪಿ ಸಂದೀಪ್ ಬಿ., ಹೂವಿನ ಹಡಗಲಿ ತಾಲೂಕು ಹೊಳಲು ಗ್ರಾಮದ ಸರ್‌‌‌.ಎಂ ವಿಶ್ವೇಶ್ವರಯ್ಯ ಪ್ರೌಢಶಾಲೆಯ ಮುಖ್ಯಗುರು ಜಾವಿದ್‌ ಜಿ. ಹಾಲಗಿ ಅವರಿಗೆ ವಿಸ್ತಾರ ನ್ಯೂಸ್‌ ಬೆಸ್ಟ್‌ ಟೀಚರ್‌ ಅವಾರ್ಡ್‌-2023 ಪ್ರಶಸ್ತಿ ನೀಡಿ, ಗೌರವಿಸಲಾಯಿತು.

ವಿಸ್ತಾರ ನ್ಯೂಸ್‌ ಬೆಸ್ಟ್‌ ಟೀಚರ್‌ ಅವಾರ್ಡ್‌ 2023 ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಕಾರ್ಯಕ್ರಮದಲ್ಲಿ ಕಲಾವಿದ ಶ್ರೀ ಮಾರುತಿರಾವ್ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ಜರುಗಿತು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ, ಜಿಲ್ಲಾ ಘಟಕ ಮತ್ತು ತಾಲೂಕು ಘಟಕಗಳು, ವಿಜಯನಗರ ಜಿಲ್ಲೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಮತ್ತು ತಾಲೂಕು ಘಟಕಗಳು, ವಿಜಯನಗರ ಜಿಲ್ಲೆ ಇವರ ಸಹಕಾರದಲ್ಲಿ ಕಾರ್ಯಕ್ರಮವು ಅದ್ಭುತವಾಗಿ ಮೂಡಿಬಂತು.

ಇದನ್ನೂ ಓದಿ: Actor Yash: ಸಿಹಿ ಸುದ್ದಿ ಕೊಟ್ಟೇ ಬಿಟ್ರು ರಾಕಿಂಗ್‌ ಸ್ಟಾರ್‌ ಯಶ್‌; ಟೈಟಲ್ ಅನೌನ್ಸ್‌ಗೆ ಮುಹೂರ್ತ ಫಿಕ್ಸ್!

ಈ ಸಂದರ್ಭದಲ್ಲಿ ಬಿಇಒ ಚನ್ನಬಸಪ್ಪ, ಹೊಳಲು ಗ್ರಾಮದ ಸರ್‌‌‌.ಎಂ ವಿಶ್ವೇಶ್ವರಯ್ಯ ಪ್ರೌಢಶಾಲೆಯ ನಿರ್ದೇಶಕ ಎಂ.ಎಂ. ಹಾಲಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಸ್ತಾರ ನ್ಯೂಸ್‌ನ ಬಳ್ಳಾರಿ ಬ್ಯೂರೊ ಮುಖ್ಯಸ್ಥ ಶಶಿಧರ ಮೇಟಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ರೀನಾ ನಂದನ್ ಹಾಗೂ ಕವಿತಾ ಪ್ರಾರ್ಥಿಸಿದರು. ಶಿಕ್ಷಕ ಬಸವರಾಜ ನಿರೂಪಿಸಿದರು.

Continue Reading

ಕರ್ನಾಟಕ

Road Accident: ಬುಲೆರೋ ಡಿಕ್ಕಿಯಾಗಿ ಕಾಲುವೆಗೆ ಎಗರಿದ ಎತ್ತುಗಳು; ಸತ್ತ ಕೋಳಿಗೆ ಮುಗಿಬಿದ್ದ ಜನ್ರು!

Bull attack : ಗದಗದಲ್ಲಿ ಕಂಡ ಕಂಡವರ ಮೇಲೆ ಗೂಳಿ ದಾಳಿ ಮಾಡಿದ್ದರೆ, ವಿಜಯನಗರದಲ್ಲಿ ಎತ್ತಿನ ಬಂಡಿಗೆ ಬುಲೆರೋ ವಾಹನವೊಂದು (road Accident) ಡಿಕ್ಕಿ ಹೊಡೆದಿದೆ. ಪರಿಣಾಮ ಕಾಲುವೆಗೆ ಎಗರಿ ಎತ್ತೊಂದು ಮೃತಪಟ್ಟಿದೆ.

VISTARANEWS.COM


on

By

Bolero vehicle collides with bullock cart
Koo

ವಿಜಯನಗರ/ಗದಗ: ಕೋಳಿ ತುಂಬಿದ ಬುಲೆರೋ ವಾಹನವು ಎತ್ತಿನ ಬಂಡಿಗೆ ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎತ್ತಿನ ಬಂಡಿ ಕಾಲುವೆಗೆ ಬಿದ್ದಿದೆ. ಅದರಲ್ಲಿ ಒಂದು ಎತ್ತು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲಪನ ಗುಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ರೈತ ಹನುಮಂತಪ್ಪ ಎಂಬುವವರಿಗೆ ಸೇರಿದ ಎತ್ತುಗಳು ಕಾಲುವೆಗೆ ಬಿದ್ದಿವೆ. ಅದರಲ್ಲಿ ಒಂದು ಎತ್ತು ಮೃತಪಟ್ಟಿದೆ. ಹೊಸಪೇಟೆಯಿಂದ ಗಂಗಾವತಿಗೆ ಕೋಳಿ ತುಂಬಿದ ಬುಲೆರೋ ವಾಹನ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎತ್ತಿನ ಬಂಡಿಗೆ ಡಿಕ್ಕಿಯಾಗಿದೆ. ಇತ್ತ ಅಪಘಾತ ನಡೆಯುತ್ತಿದ್ದಂತೆ ಸತ್ತ ಕೋಳಿಗಳನ್ನು ಒಯ್ಯಲು ಜನರು ಮುಗಿಬಿದ್ದರು. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಂಡ ಕಂಡವರ ಮೇಲೆ ಗೂಳಿ ದಾಳಿ

ಗದಗ: ಇಷ್ಟು ದಿನ ಬೀದಿನಾಯಿ ದಾಳಿಯಿಂದ ಜನರು ಕಂಗೆಟ್ಟು ಹೋಗಿದ್ದರು. ಇದೀಗ ಕಂಡ ಕಂಡವರ ಮೇಲೆ ಗೂಳಿಯೊಂದು ದಾಳಿ (Bull attack) ಮಾಡುತ್ತಿದೆ. ಹೀಗಾಗಿ ಜನರು ಓಡಾಡಲು, ವಾಹನದಲ್ಲಿ ತೆರಳುವಾಗ ಭಯದಲ್ಲೇ ಓಡಾಡುವಂತಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುವವರ ಮೇಲೆ ಏಕಾಏಕಿ ಗೂಳಿ ನುಗ್ಗಿ ದಾಳಿ ಮಾಡುತ್ತಿದೆ.

ಗೂಳಿಯ ಡೆಡ್ಲಿ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗದಗದ ಬೆಟಗೇರಿ ಅವಳಿ ನಗರದಲ್ಲಿ ಗೂಳಿಯ ಹಾವಳಿಗೆ ಜನರು ಬೆಚ್ಚಿ ಬಿದ್ದಿದ್ದಾರೆ. ಅತ್ತಿಂದಿತ್ತ ಓಡೋಡಿ ಬಂದ ಬೀದಿ ದನಗಳು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ದಾಳಿ ಮಾಡಿದೆ.

ಗೂಳಿ ದಾಳಿಗೆ ವ್ಯಕ್ತಿಯ ತಲೆ ಗಂಭೀರ ಪೆಟ್ಟಾಗಿದೆ. ಕಳೆದ 15 ದಿನಗಳಲ್ಲಿ 8 ಜನರ ಮೇಲೆ ದಾಳಿ ಮಾಡಿದೆ. ಗೂಳಿ ದಾಳಿ ನಿಯಂತ್ರಣ ಮಾಡದ ನಗರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Continue Reading

ಬಳ್ಳಾರಿ

Death News: ರಾಮದುರ್ಗ ಗಂಗಮ್ಮ ನಿಧನ

Death News: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ನಗರದಲ್ಲಿ ರಾಮದುರ್ಗ ಗಂಗಮ್ಮ(98) ಅವರು ವಯೋಸಹಜ ಅನಾರೋಗ್ಯದ ಕಾರಣ ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ‌.

VISTARANEWS.COM


on

Ramadurga Gangamma passed away
ರಾಮದುರ್ಗ ಗಂಗಮ್ಮ ಅವರ ಭಾವಚಿತ್ರ.
Koo

ಬಳ್ಳಾರಿ: ರಾಮದುರ್ಗ ಗಂಗಮ್ಮ(98) ಅವರು ವಯೋಸಹಜ ಅನಾರೋಗ್ಯದ ಕಾರಣ ಶನಿವಾರ ಬೆಳಗಿನ ಜಾವ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ನಗರದಲ್ಲಿ ನಿಧನರಾಗಿದ್ದಾರೆ‌.

ಮೃತರು, ಪುತ್ರರಾದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರಾಮನಗೌಡ ಮತ್ತು ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಟ್ರಸ್ಟ್ ನ ಕಾರ್ಯದರ್ಶಿ ಆರ್ .ಮರೇಗೌಡ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಹಗರಿಬೊಮ್ಮನಹಳ್ಳಿಯಲ್ಲಿ ಶನಿವಾರ ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Continue Reading
Advertisement
Elephant Arjuna
ಕರ್ನಾಟಕ5 hours ago

Elephant Arjuna: ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

Kabaddi news
ಕ್ರೀಡೆ5 hours ago

Pro Kabaddi : ಮುಂಬಾ ವಿರುದ್ಧ ಜಯಂಟ್ಸ್​​ಗೆ 39-37 ಅಂಕಗಳ ಜಯ

Belagavi Winter Session
ಕರ್ನಾಟಕ5 hours ago

Belagavi Winter Session: ವೇತನ ಆಯೋಗದ ವರದಿ ಬಗ್ಗೆ ಅತೃಪ್ತಿ; ಸಭಾತ್ಯಾಗ ಮಾಡಿದ ಕಮಲ, ದಳ ಸದಸ್ಯರು

our former mlas they did not get even 50 votes in Madhya Pradesh Says Congress
ದೇಶ5 hours ago

ಮಾಜಿ ಎಮ್ಮೆಲ್ಲೆಗಳಿಗೆ ಅವರ ಊರಲ್ಲೇ 50 ವೋಟು ಬಿದ್ದಿಲ್ಲ! ಕಾಂಗ್ರೆಸ್ ನಾಯಕ

Team India1
ಟಾಪ್ 10 ನ್ಯೂಸ್5 hours ago

VISTARA TOP 10 NEWS : ಸಿದ್ದು ಮುಸ್ಲಿಂ ಓಲೈಕೆ ಜಟಾಪಟಿ, ʼಅರ್ಜುನʼನಿಗೆ ಕಂಬನಿಯ ವಿದಾಯ ಇತ್ಯಾದಿ ಪ್ರಮುಖ ಸುದ್ದಿಗಳು

Vistara News Best Teacher Award -2023 programme inauguration by Yadgiri DC Sushila B. at Yadgiri
ಕರ್ನಾಟಕ6 hours ago

ಯಾದಗಿರಿಯಲ್ಲಿ ‘ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್’ ಕಾರ್ಯಕ್ರಮಕ್ಕೆ ಚಾಲನೆ

BJP knew the result two days earlier vote count Says Congress
ದೇಶ6 hours ago

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

HD Kumaraswamy
ಕರ್ನಾಟಕ6 hours ago

HD Kumaraswamy: ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರಲ್ಲ ಎಂದ ಎಚ್‌ಡಿಕೆ

Rahul Dravid
ಕ್ರಿಕೆಟ್7 hours ago

Rahul Dravid : ರಿಚ್ಮಂಡ್​ ಸರ್ಕಲ್ ಫ್ಲೈಓವರ್​ ಕೆಳಗಡೆ ಕ್ರಿಕೆಟ್​ ಅಡಿದ ದ್ರಾವಿಡ್​, ಕುಂಬ್ಳೆ, ಶ್ರೀನಾಥ್​…

Minister Ramalinga Reddy statement
ಕರ್ನಾಟಕ7 hours ago

5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

CM Siddaramaiah and Black magic
ಕರ್ನಾಟಕ7 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ8 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ8 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ23 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ5 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

ಟ್ರೆಂಡಿಂಗ್‌