Site icon Vistara News

Road Accident: ನಿಂತಿದ್ದ ಮಿನಿ ಲಾರಿಗೆ ಯಮನಂತೆ ಬಂದೆರಗಿದ ಲಾರಿ, ಮೂವರು ಸಾವು

vijayanagara accident

ವಿಜಯನಗರ: ಲಾರಿ ಹಾಗೂ ಮಿನಿಲಾರಿ ಡಿಕ್ಕಿಯಾಗಿ (Road accident) ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯನಗರ (Vijayanagara news) ಜಿಲ್ಲೆಯ ಕೂಡ್ಲಿಗಿ- ಕೊಟ್ಟೂರು ಮಾರ್ಗಮಧ್ಯೆಯ ಸಾಸಲವಾಡ ಕ್ರಾಸ್ ಬಳಿ ಅಪಘಾತ ನಡೆದಿದೆ.

ನಿಂತಿದ್ದ ಮಿನಿ ಲಾರಿಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಗಜಾಪುರದ ಮಿನಿಲಾರಿ ಚಾಲಕ ಗುರುವಣ್ಣ(40), ಬತ್ತನಹಳ್ಳಿಯ ತಿಪ್ಪಣ್ಣ(55), ಬಸವರಾಜ್ (25) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಕೊಟ್ಟೂರು ತಾಲೂಕಿನ ಬತ್ತನಹಳ್ಳಿಯ ತಿಪ್ಪಣ್ಣ ಹಾಗೂ ಅವರ ಸಂಬಂಧಿಕರು ಹುಲಿಗಿ ದೇವಾಲಯಕ್ಕೆ ಹೊರಟಿದ್ದರು. ಮಿನಿಲಾರಿ ಹತ್ತಿದ 10 ಜನರು, ಸಾಸಲವಾಡ ಕ್ರಾಸ್ ಬಳಿ, ತಮ್ಮ ಸಂಬಂಧಿಕರಿಗಾಗಿ ಕಾಯ್ತಾ ಇದ್ದರು.
ನಿಂತಿದ್ದ ಮಿನಿ ಲಾರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟರು. ಉಳಿದವರಿಗೆ ಸಣ್ಣ, ಪುಟ್ಟ ಗಾಯಗಳಾಗಿದ್ದು, ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಎಸ್ಪಿ ಶ್ರೀಹರಿಬಾಬು ಬಿಎಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸುಳ್ಯದಲ್ಲಿ ಕಾರು ಡಿಕ್ಕಿ, ಮೂವರ ಸಾವು

ಮಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ (Road Accident) ಸುಳ್ಯ ಸಮೀಪದ ಅಡ್ಕಾರು ಎಂಬಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು.

ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾಗಿದೆ. ಈ ವೇಳೆ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿಯಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ನಿಂತ ಲಾರಿಗೆ ವೇಗವಾಗಿ ಬಂದು ಡಿಕ್ಕಿಯಾದ ಗೂಡ್ಸ್‌, ಚಾಲಕ ಸಾವು

Exit mobile version