Vijayanagar News : ನಿಧಿ ಆಸೆಗೆ ದೇವರಿಗೇ ವಾಮಾಚಾರ; ಗರ್ಭ ಗುಡಿಗೆ ಕನ್ನ ಹಾಕಿದ ಖದೀಮರು - Vistara News

ವಿಜಯನಗರ

Vijayanagar News : ನಿಧಿ ಆಸೆಗೆ ದೇವರಿಗೇ ವಾಮಾಚಾರ; ಗರ್ಭ ಗುಡಿಗೆ ಕನ್ನ ಹಾಕಿದ ಖದೀಮರು

Vijayanagar News : ನಿಧಿ ಆಸೆಗೆ ದೇಗುಲ ಗರ್ಭ ಗುಡಿಯನ್ನೇ ಅಗೆದ ಕಳ್ಳರು ನಿಧಿ ಶೋಧನೆ ಮಾಡಿರುವ ಘಟನೆ ವಿಜಯನಗರದಲ್ಲಿ ಬೆಳಕಿಗೆ ಬಂದಿದ್ದು, ನಿಧಿ ಸಿಗದೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

VISTARANEWS.COM


on

Thieves dig mud in temple for treasure
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ನಿಧಿ ಇರಬಹುದು ಎಂಬ ಆಸೆಗೆ ಖದೀಮರು ದೇವಸ್ಥಾನದ ಗರ್ಭ ಗುಡಿಗೆ ಕನ್ನ ಹಾಕಿರುವ ವಿದ್ಯಮಾನ ವಿಜಯನಗರದ (Vijayanagar News) ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಜಮೀನನಲ್ಲಿ ಘಟನೆ ನಡೆದಿದೆ.

ನಿಧಿಗಾಗಿ ಪುರಾತನ ಕಾಲದ ದೇವಸ್ಥಾನಕ್ಕೆ ರಾತ್ರೋರಾತ್ರಿ ಬಂದ ಚೋರರು ಜೆಸಿಬಿ ಮೂಲಕ ದೇಗುಲ ಗರ್ಭ ಗುಡಿಯನ್ನು ಅಗೆದಿದ್ದಾರೆ. ನೂರಾರು ವರ್ಷಗಳ ಇತಿಹಾಸವಿರುವ ಭೀರಪ್ಪ ದೇವಸ್ಥಾನದಲ್ಲಿ ಸುಮಾರು ಹತ್ತು ಅಡಿಗಳಷ್ಟು ಮಣ್ಣು ಅಗೆದಿದ್ದಾರೆ. ಪುರಾತನ ದೇವಸ್ಥಾನ ಎಂಬ ಕಾರಣಕ್ಕೆ ಕೆಳಗೆ ನಿಧಿ ಇರಲೇಬೇಕೆಂದು ಅಂದುಕೊಂಡಿರುವ ದುಷ್ಕರ್ಮಿಗಳು ಬುಧವಾರ ಮಧ್ಯ ರಾತ್ರಿ ನಂತರ ದೇಗುಲಕ್ಕೆ ನುಗ್ಗಿದ್ದಾರೆ. ದೇವಸ್ಥಾನದ ಮುಂಭಾಗ ಮಣ್ಣು ಅಗೆದು ಕೊನೆಗೆ ನಿಧಿ ಸಿಗದೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

Thieves dig mud in temple for treasure

ಈ ಹಿಂದೆಯೂ ನಿಧಿಗಾಗಿ ಶೋಧ

ಜಮೀನಿನಲ್ಲಿರುವ ಈ ದೇವಸ್ಥಾನದಲ್ಲಿ ಈ ಹಿಂದೆಯೂ ನಿಧಿಗಾಗಿ ಅಗೆಯಲಾಗಿತ್ತು. ಇದೇ ಜಾಗದಲ್ಲಿ ನಿಧಿಗಾಗಿ ದೇವಸ್ಥಾನ ಮುಂಭಾಗದ ಕಲ್ಲು ಕಿತ್ತು ಹಾಕಿದ್ದರು. ಆದರೆ, ಯಾರು ಮಾಡಿದ್ದಾರೆ? ಎಲ್ಲಿಂದ ಬಂದವರು ಮಾಡಿದ್ದಾರೆ? ಸ್ಥಳೀಯರೋ? ಅಥವಾ ಬೇರೆ ಕಡೆಯವರೋ? ಎಂಬಿತ್ಯಾದಿ ಯಾವ ಮಾಹಿತಿಯೂ ಲಭ್ಯವಾಗಿಲ್ಲ.

ಇದನ್ನೂ ಓದಿ: Harassment Case : ನೀರು ಕೇಳಿ ಯುವತಿಯ ಕೈ ಹಿಡಿದು ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಬಾಯ್‌

ವಾಮಾಚಾರ ಮಾಡಿರುವ ಕಿಡಿಗೇಡಿಗಳು

ಈ ಪುರಾತನ ದೇವಸ್ಥಾನದಲ್ಲಿ ನಿಧಿ ಆಸೆಗಾಗಿ ದುಷ್ಕರ್ಮಿಗಳು ಹೊಂಚು ಹಾಕಿ ಗರ್ಭ ಗುಡಿ ಮುಂದೆ ಅಗೆದು ನಿಧಿ ಶೋಧಿಸಲು ಪ್ರಯತ್ನಿಸಿದ್ದಾರೆ. ಮಾತ್ರವಲ್ಲ ನಿಧಿಗಾಗಿ ಅಗೆದ ಸ್ಥಳದಲ್ಲಿ ವಾಮಾಚಾರ ಮಾಡಿರುವುದು ಬೆಳಕಿಗೆ ಬಂದಿದೆ. ಮಣ್ಣು ಅಗೆದ ಸ್ಥಳದಲ್ಲಿ ನಿಂಬೆಹಣ್ಣು, ಕುಂಕುಮ ಇನ್ನಿತರ ಸಾಮಾಗ್ರಿ ಪತ್ತೆಯಾಗಿದೆ.

ದೇವಸ್ಥಾನದ ಅರ್ಚಕರು ಬೆಳಗ್ಗೆ ಪೂಜೆಗೆಂದು ಬಂದಾಗ ಕಳ್ಳರ ಕೃತ್ಯ ಬಯಲಾಗಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಿಧಿಗಾಗಿ ದೇವಸ್ಥಾನ ಅಗೆದ ಸುದ್ದಿ ತಿಳಿದು ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದರು. ಪುರಾತನ ಕಾಲದ ದೇಗುಲವನ್ನು ಅಗೆದು ಧ್ವಂಸ ಮಾಡಿದವರಿಗೆ ಶಿಕ್ಷೆ ಆಗಬೇಕೆಂದು ಪಟ್ಟು ಹಿಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಳ್ಳಾರಿ

Lok Sabha Election 2024: ಪಾರದರ್ಶಕ ಚುನಾವಣೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 07 ರಂದು ಮತದಾನ ಜರುಗಲಿದ್ದು, ಮೇ 05 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

VISTARANEWS.COM


on

Ballari DC Prashanth kumar Mishra pressmeet about lok sabha election
Koo

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ (Lok Sabha Election 2024) ಮೇ 07 ರಂದು ಮತದಾನ ಜರುಗಲಿದ್ದು, ಮೇ 05ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಲೋಕಸಭಾ ಚುನಾವಣೆ ನಿಮಿತ್ತ ಮೇ 07 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಅಂತ್ಯದ 48 ಗಂಟೆಗೂ ಮುನ್ನ ಅಂದರೆ ಮೇ 05 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಸಂದರ್ಭದಲ್ಲಿ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು.

ಮೇ 05ರ ಸಂಜೆ 06 ರಿಂದ ಮೇ 08ರ ಸಂಜೆ 06 ರವರೆಗೆ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಕಲಂ 144 ಅಡಿ ಪ್ರತಿಬಂಧಕಾಜ್ಞೆ ಜಾರಿಯಾಗಲಿದ್ದು, 05ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಓಡಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ಬಿಡಲು ಸೂಚನೆ ನೀಡಲಾಗಿದೆ. ಮತದಾನದ ದಿನ ಸಾರ್ವತ್ರಿಕ ರಜೆ, ಮೇ 08 ರ ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯದ್ಯಂತ ಮದ್ಯ ಮಾರಾಟ ನಿಷೇಧಿಸಿದ್ದು ಡ್ರೈ ಡೇ ಆಚರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ರ‍್ಯಾರ್ಯಾಂಡಮೈಜೇಶನ್ ಮಾಡಿ, ಎಲ್ಲ ಪ್ರಕ್ರಿಯೆಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಡಿಸಿ ಮಿಶ್ರಾ ಸ್ಪಷ್ಟಪಡಿಸಿದರು.

ಇದನ್ನೂ ಓದಿ: Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲ ಮತಗಟ್ಟೆಗಳಿಗೆ ಅವಶ್ಯಕ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ, ಅಂಗವಿಕಲರಿಗೆ ರ‍್ಯಾಂಪ್, ವೀಲ್‍ಚೇರ್ ವ್ಯವಸ್ಥೆ ಹಾಗೂ ನೆರಳಿಗೆ ಶ್ಯಾಮಿಯಾನ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ತೀವ್ರ ಬಿಸಿಲಿನ ಬೇಗೆ ಇರುವುದರಿಂದ ಮತಗಟ್ಟೆಗಳಲ್ಲಿ ಸ್ಟ್ಯಾಂಡಿಂಗ್ ಫ್ಯಾನ್ ಅಥವಾ ಕೂಲರ್ ವ್ಯವಸ್ಥೆಗೊಳಿಸಲು ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಆದಷ್ಟು ಬೇಗನೇ ಬಂದು ಮತ ಚಲಾಯಿಸಿ

ಈ ಬಾರಿ ಬಿಸಿಲಿನ ಪ್ರಖರತೆ ಹೆಚ್ಚಿರುವುದರಿಂದ ಎಲ್ಲಾ ಮತದಾರರು ಬೆಳಗಿನ ಅವಧಿಯಲ್ಲಿಯೇ ಆದಷ್ಟು ಬೇಗನೇ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬೇಕು ಎಂದು ಡಿಸಿ ಕೋರಿದರು.

ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆಯ ಸಿಬ್ಬಂದಿಗಳಿಗೆ ಈಗಾಗಲೆ ತರಬೇತಿ ನೀಡಿದ್ದು, ಮೇ 07 ರಂದು ಎಲ್ಲ ಮತಗಟ್ಟೆಗಳಲ್ಲಿ ಬೆಳಗ್ಗೆ 05.30 ಗಂಟೆಗೆ ಮತಗಟ್ಟೆ ಏಜೆಂಟರುಗಳ ಸಮ್ಮುಖದಲ್ಲಿ ಕನಿಷ್ಟ 50 ಮತಗಳ ಅಣುಕು ಮತದಾನ ನಡೆಯಲಿದ್ದು, ನಂತರ ನಿಯಮಾನುಸಾರ ಪ್ರಕ್ರಿಯೆ ಕೈಗೊಂಡು ಬೆಳಿಗ್ಗೆ 07 ಗಂಟೆಗೆ ಮತದಾನ ಪ್ರಾರಂಭವಾಗಲಿದೆ. ಈ ಎಲ್ಲ ಪ್ರಕ್ರಿಯೆಗಳ ಕುರಿತು ಮತಗಟ್ಟೆ ಸಿಬ್ಬಂದಿಗೆ ಅಗತ್ಯ ಮಾಹಿತಿ ನೀಡಿ, ತರಬೇತಿ ನೀಡಲಾಗಿದೆ ಎಂದರು.

ಮತಗಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್

ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ಒಟ್ಟು 1219 ಮತಗಟ್ಟೆಗಳ ಪೈಕಿ 299 ಸೂಕ್ಷ್ಮ ಹಾಗೂ 69 ವಲ್ನರೆಬಲ್ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ 610 ಮತಗಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಿ, ಸಿಸಿ ಟಿವಿ ಕ್ಯಾಮೆರಾ ಮೂಲಕ ನೇರವಾಗಿ ಮತಗಟ್ಟೆಗಳ ಲೈವ್ ವಿಡಿಯೋ ನೋಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಚುನಾವಣಾ ಕಾರ್ಯದ ಮೇಲುಸ್ತುವಾರಿಗೆ ಒಟ್ಟು 330 ಮೈಕ್ರೋ ಆಬ್ಸರ್ವರ್‌ಗಳನ್ನು ಮತಗಟ್ಟೆಗಳಿಗೆ ನಿಯೋಜಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗುತ್ತದೆ ಎಂದರು.

ಇದನ್ನೂ ಓದಿ: Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಮತಗಟ್ಟೆಗಳಿಗೆ 5,815 ಸಿಬ್ಬಂದಿ ನೇಮಕ

ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ಚುನಾವಣಾ ಆಯೋಗದ ನಿಯಮಾನುಸಾರ ಮತದಾನ ಜರುಗಿಸಲು ಅಗತ್ಯ ಕ್ರಮ ವಹಿಸಲಾಗಿದೆ. ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು 1,395 ಮತಗಟ್ಟೆ ಅಧಿಕಾರಿಗಳು, 1,395 ಸಹಾಯಕ ಅಧಿಕಾರಿಗಳು, 2,790 ಮತದಾನ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 5,952 ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಪ್ರತಿ ಮತಗಟ್ಟೆಗಳಿಗೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಮತಗಟ್ಟೆ ಸಿಬ್ಬಂದಿಗಳಿಗೆ ವಿಶೇಷ ಮೆಡಿಕಲ್ ಕಿಟ್

ಬಿಸಿಲಿನ ತಾಪಮಾನ ಹಾಗೂ ಶಾಖಾಘಾತದ ಹಿನ್ನಲೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್, ಓಆರ್‍ಎಸ್ ಕಿಟ್‍ಗಳನ್ನು ಮಸ್ಟರಿಂಗ್ ಸಂದರ್ಭದಲ್ಲಿಯೇ ವಿತರಿಸಲು ಕ್ರಮ ವಹಿಸಲಾಗಿದೆ. ಅಲ್ಲದೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರು, ನರ್ಸ್‍ಗಳು, ಆಂಬುಲೆನ್ಸ್‌ಗಳನ್ನು ಯಾವುದೇ ಸಂದರ್ಭದಲ್ಲಿ ಅಗತ್ಯ ವೈದ್ಯಕೀಯ ನೆರವಿಗಾಗಿ ಸಜ್ಜಾಗಿರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 85 ವರ್ಷ ದಾಟಿದ 662 ಹಿರಿಯ ನಾಗರಿಕರು ಹಾಗೂ 452 ವಿಕಲಚೇತನ ಮತದಾರರು ಮನೆಯಿಂದ ಮತ ಚಲಾಯಿಸಲು ಆಯ್ಕೆ ಮಾಡಿಕೊಂಡಿದ್ದರು, ಈ ಪೈಕಿ 85 ವರ್ಷ ಮೇಲ್ಪಟ್ಟ 630 ಮತದಾರರು ಹಾಗೂ 444 ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

ಅಗತ್ಯ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆ ಹಾಗೂ ಕ್ಷೇತ್ರಗಳ 863 ಮತದಾರರು ಮತ ಚಲಾಯಿಸಲು ಫಾರಂ 12 ಡಿ ಅಂಚೆ ಮತ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇವರ ಮತದಾನಕ್ಕೆ ಅನುಕೂಲವಾಗುವಂತೆ ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಗಾಂಧಿ ಭವನದಲ್ಲಿ ಅಂಚೆ ಮತದಾನ ಕೇಂದ್ರ ತೆರೆಯಲಾಗಿತ್ತು. ಮೇ 01 ರಿಂದ 03 ರವರೆಗೆ ಮತದಾನ ಜರುಗಿದ್ದು, 460 ಜನರು ಮತ ಚಲಾಯಿಸಿದ್ದಾರೆ. ಉಳಿದಂತೆ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಇದೇ ಗಾಂಧಿ ಭವನದಲ್ಲಿ ಫೆಸಿಲಿಟೇಶನ್ ಸೆಂಟರ್ ತೆರೆಯಲಾಗಿದ್ದು, ಮೇ 06 ರವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚುನಾವಣಾ ಅಕ್ರಮ ಚಟುವಟಿಕೆ ತಡೆಗೆ ಸಹಾಯವಾಣಿ ಬಳಸಿ

ಚುನಾವಣೆ ಹಿನ್ನಲೆಯಲ್ಲಿ ಮತದಾರರಿಗೆ ಯಾವುದೇ ಆಸೆ-ಆಮೀಷ ಒಡ್ಡುವ ಘಟನೆಗಳು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 1950 ಕೆ ಕರೆ ಮಾಡಿ ತಿಳಿಸಬಹುದು ಅಥವಾ ಸಿ-ವಿಜಿಲ್ ಆಪ್ ಮೂಲಕ ದೂರು ದಾಖಲಿಸಬಹುದು ಎಂದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ದಿನದಂದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಗಾ ವಹಿಸಲು ಹಾಗೂ ಭದ್ರತೆಗೆ ಒಟ್ಟು 2,048 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೊರ ಜಿಲ್ಲೆಯಿಂದ ಸುಮಾರು 850 ಪೊಲೀಸ್ ಸಿಬ್ಬಂದಿಗಳು ಭದ್ರತಾ ಕಾರ್ಯಕ್ಕೆ ಜಿಲ್ಲೆಗೆ ಆಗಮಿಸಿದ್ದಾರೆ. ಜಿಲ್ಲೆಗೆ ಸಿಆರ್‌ಪಿಎಫ್ ಪಡೆಯ ಮೂರು ತಂಡಗಳು ಜಿಲ್ಲೆಗೆ ಆಗಮಿಸಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಚುನಾವಣಾ ಅಕ್ರಮ ನಡೆಯದಂತೆ 24 ಚೆಕ್‍ಪೋಸ್ಟ್‌ಗಳಲ್ಲಿ ನಿರಂತರ ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮತದಾನ ಸಮಯದಲ್ಲಿ ಅಹಿತಕರ ಘಟನೆ ಸೃಷ್ಟಿಸುವಂತಹ 11 ರೌಡಿಶೀಟರ್ ಪ್ರಕರಣಗಳಲ್ಲಿ 09 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ಗೂಂಡ ಆಕ್ಟ್ ಅಡಿ 1 ಪ್ರಕರಣ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಘೊಷಣೆಯ ಬಳಿಕ ಈವರೆಗೆ ಜಿಲ್ಲೆಯಲ್ಲಿ ರೂ.8.41 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

ಈ ವೇಳೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Drown In River: ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾನೆ.

VISTARANEWS.COM


on

Drown in River
Koo

ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕುರಿಗಾಹಿ ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿ ನಡೆದಿದೆ.

ಕೊಟ್ಟೂರು ತಾಲೂಕು ಹರಾಳು ಗ್ರಾಮದ ಅಂಜಿನಪ್ಪ (26) ಮೃತಪಟ್ಟ ಕುರಿಗಾಹಿ. ತುಂಗಭದ್ರಾ ನದಿ ದಂಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಈಜಲು ನದಿಗೆ ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಸಿಸಿಬಿ ಅಧಿಕಾರಿಗಳ ಕಂಡು ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ ಒಂಟೆ ರೋಹಿತ್‌ ಎಸ್ಕೇಪ್‌

Rowdy sheeter camel Rohit escapes from DCPs office after ccb officials spotted him

ಬೆಂಗಳೂರು: ಉತ್ತರ ವಿಭಾಗ ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ವೊಬ್ಬ (Rowdy Sheeter) ಪೊಲೀಸ್‌ರಿಂದ ತಪ್ಪಿಸಿಕೊಂಡಿದ್ದಾನೆ. ರೋಹಿತ್‌ ಅಲಿಯಾಸ್‌ ಒಂಟೆ ರೋಹಿತ್‌ ಎಸ್ಕೇಪ್ ಆದವನು. 110 ಸೆಕ್ಷನ್ ಬಾಂಡ್ ಹಾಕಲು ಸುಬ್ರಹ್ಮಣ್ಯ ನಗರ ಠಾಣೆ ರೌಡಿಶೀಟರ್ ಆಗಿರುವ ಒಂಟೆ ರೋಹಿತ್‌ನನ್ನು ಕರೆಸಿಕೊಂಡಿದ್ದರು. ಒಂದು ವಾರದ ಹಿಂದೆ ಠಾಣೆಗೆ ಕರೆಸಿಕೊಂಡಿದ್ದ ಪೊಲೀಸರು ಇಂದು ಠಾಣೆಯಿಂದ ಡಿಸಿಪಿ ಮುಂದೆ ಕರೆದೊಯ್ದಿದ್ದರು.

ಇತ್ತ ಒಂಟೆ ರೋಹಿತ್‌ಗಾಗಿ ಹುಡುಕಾಟ ನಡೆಸುತ್ತಿದ್ದ ಸಿಸಿಬಿ ಪೊಲೀಸರು, ಮುಂಚೆಯೇ ಡಿಸಿಪಿ ಕಚೇರಿ ಬಳಿ ಕಾಯುತ್ತಿದ್ದರು. ಸಿಸಿಬಿ ಪೊಲೀಸರನ್ನು ನೋಡಿದ ಕೂಡಲೇ ಒಂಟೆ ರೋಹಿತ್‌ ಸುಬ್ರಹ್ಮಣ್ಯ ನಗರ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೇಪ್‌ ಆಗಿದ್ದಾನೆ.

ಈ ಒಂಟೆ ರೋಹಿತ್‌, ಸೈಲೆಂಟ್ ಸುನಿಲ್ ಅಸೋಸಿಯೇಟ್ ಆಗಿದ್ದ. ಕೊಲೆ, ಕೊಲೆ ಯತ್ನ ಸೇರಿ ಹಲವು ಕೇಸಿನಲ್ಲಿ ಫಿಟ್ ಆಗಿದ್ದ. ಸದ್ಯ‌ ಪೊಲೀಸರ ಕೈಯಿಂದ ಎಸ್ಕೇಪ್ ಆಗಿರುವ ಒಂಟೆ ರೋಹಿತ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

ಏನಿದು 110 ಸೆಕ್ಷನ್‌

ಬೆಂಗಳೂರಿನಲ್ಲಿ ಕ್ರೈಂ ರೇಟ್‌ ಹೆಚ್ಚಾಗುತ್ತಲೇ ಇದೆ. ಅಪರಾಧ ಕೃತ್ಯಗಳನ್ನು ತಡೆಯಲು ಆಗದಷ್ಟು ಪೊಲೀಸರು ಕೈ ಚೆಲ್ಲಿ ಕುಳಿತಂತೆ ಇದೆ. ಸದ್ಯ ರೌಡಿಗಳ ಪಾಲಿಗೆ ದುಸ್ವಪ್ನವಾಗಿರುವ ಸೆಕ್ಷನ್‌ 110 ಪ್ರಕಾರ ಪೊಲೀಸರು ರೌಡಿಗಳಿಂದ ತಾವು ಯಾವುದೇ ಅಪರಾಧಿ ಚಟುವಟಿಕೆಗಳಲ್ಲಿ ಭಾಗವಹಿಸೋದಿಲ್ಲ ಎಂದು ಬಾಂಡ್ ಬರೆಸಿಕೊಳ್ಳುತ್ತಾರೆ.

ಈ ಮೊದಲು ಕೂಡ ಬಾಂಡ್ ಬರೆಸಿಕೊಂಡು ಸುಮ್ಮನೆ ಇರುತ್ತಿದ್ದರು. ಅದರ ಕಾರ್ಯ ರೂಪ‌ ಮಾತ್ರ ಆಗುತ್ತಿರಲಿಲ್ಲ. ಪೊಲೀಸರು ಕೂಡಾ ಇಷ್ಟು ದಿನ ಸುಮ್ಮನೆ ಇದ್ದರು. ಆದರೆ ನಗರದಲ್ಲಿ ಕ್ರೈಂ ರೇಟ್ ಹೆಚ್ಚಾಗುತ್ತಿರುವುದರಿಂದ ಈ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಬಾಂಡಿನಲ್ಲಿ ರೌಡಿಗಳಿಂದ 3-5ಲಕ್ಷದವರೆಗೆ ಕುಟುಂಬ ಸಮೇತವಾಗಿ ಬಾಂಡ್ ಬರೆಸಿಕೊಳ್ಳಲಾಗುತ್ತದೆ. ರೌಡಿಶೀಟರ್‌ ಬಾಂಡ್​ಗೆ ಸಹಿ ಹಾಕಿದ ಮೇಲೆ ಕೊಲೆ, ಕಳ್ಳತನ, ದರೋಡೆಯಂತಹ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಬಾಂಡ್ ಮೀರಿ ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಅಂಥ ಆರೋಪಿಗಳನ್ನು ನ್ಯಾಯಾಧೀಶರ ‌ಮುಂದೆ ಹಾಜರು ಪಡಿಸುವ ಅಗತ್ಯ ಇಲ್ಲ. ಬದಲಿಗೆ ಯಾವುದೇ ರೀತಿಯ ಕೇಸ್ ದಾಖಲಿಸದಯೇ ಡಿಸಿಪಿ ಅಧಿಕಾರಿ ಉಪಯೋಗಿಸಿ ನೇರವಾಗಿ 3ರಿಂದ 10 ತಿಂಗಳವರೆಗೆ ಜೈಲಿಗೆ ಅಟ್ಟಬಹುದು.

Continue Reading

ಮಳೆ

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Karnataka Weather Forecast : ಬೆಂಗಳೂರಲ್ಲಿ ಎರಡು ದಿನಗಳಿಂದ ಮಳೆಯು ಅಬ್ಬರಿಸಿತ್ತು. ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಮಳೆ (Rain News) ಜತೆಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ನಿನ್ನೆ ಶುಕ್ರವಾರ ಬಂದ ಬಿರುಗಾಳಿ ಮಳೆಗೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

karnataka weather Forecast
ಬಿರುಗಾಳಿಗೆ ಸಿಲುಕಿ ಮೃತಪಟ್ಟ ವೃದ್ಧೆ ಮಾದಮ್ಮ
Koo

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಬಿಸಿಲು ಸಿಕ್ಸರ್‌ ಬಾರಿಸುತ್ತಿದ್ದರೆ, ಅತ್ತ ಮಳೆಯು ಫೋರ್ ಬಾರಿಸುತ್ತಿದೆ. ಗುರುವಾದ ಅಬ್ಬರಿಸಿದ ಬಿರುಗಾಳಿ ಮಳೆಗೆ (Rain News) ವೃದ್ಧೆಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಘಟನೆ (Karnataka Weather Forecast) ನಡೆದಿದೆ.

ಮಾದಮ್ಮ (66) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಮಾದಮ್ಮ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂದಿನಂತೆ ತಮ್ಮ ಜಮೀನಿಗೆ ಮೇವು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿ ಮಳೆಗೆ ಸಿಲುಕಿದ್ದಾರೆ. ಮೇವನ್ನು ತೆಗೆದುಕೊಂಡು ಬರುವಾಗ ರಸ್ತೆ ಮಧ್ಯದಲ್ಲಿ ಬಿರುಗಾಳಿ ಮಳೆಗೆ ಸಿಲುಕಿ ಕುಸಿದು ಬಿದ್ದಿದ್ದಾರೆ. ಕೆಳಗಡೆ ಬಿದ್ದ ಪರಿಣಾಮ ಮಾದಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ನಾಗರಹೊಳೆ ಅಭಯಾರಣ್ಯಕ್ಕೆ ತಂಪೆರೆದ ಮಳೆರಾಯ

ನಾಗರಹೊಳೆ ಅಭಯಾರಣ್ಯದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಇದರಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಕಾಡ್ಗಿಚ್ಚು ಆತಂಕದಲ್ಲಿದ್ದ ಸಿಬ್ಬಂದಿಗೆ ವರಣನ ಸಿಂಚನದಿಂದ ಆತಂಕ ದೂರವಾಗಿದೆ. ಮೈಸೂರು ಜಿಲ್ಲೆ ಎಚ್.ಡಿ ಕೋಟೆ ಮಾರ್ಗ ಮಧ್ಯೆ ಬಿರುಗಾಳಿ ಸಹಿತ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದವು.

ಎಚ್.ಡಿ ಕೋಟೆಯ ದಮ್ಮನಕಟ್ಟೆ ವಲಯದಲ್ಲಿ ಧಾರಾಕಾರ ಮಳೆಯಾಗಿದೆ. ಒಣಗಿ ನಿಂತ ಕಾನನಕ್ಕೆ ಜೀವ ಕಳೆ ಬಂದಿದೆ. ರಸ್ತೆಯ ಹಿಕ್ಕೆಲೆಗಳ ಹಸಿರು ಹುಲ್ಲು ಬರಲು ಮೊದಲ ಮಳೆ ಸಹಕಾರಿಯಾಗಿದೆ. ಸದ್ಯಕ್ಕೆ ಕಾಡಿಗೆ ಬೆಂಕಿ ಬೀಳುವ ಆತಂಕವು ಅರಣ್ಯ ಇಲಾಖೆ‌ ಸಿಬ್ಬಂದಿಗೆ ದೂರಾವಾಗಿದೆ.

ಶನಿವಾರವೂ ಮಳೆ ಅಬ್ಬರ

ಶನಿವಾರ ಮಧ್ಯಾಹ್ನದಂದು ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಐಎಂಡಿ ಮಾಹಿತಿ ನೀಡಿದೆ.

ಮೇ.5ರ ಭಾನುವಾರದಂದು ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಏ. 6ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ಶಾಖದ ಅಲೆಯ ಎಚ್ಚರಿಕೆ

ಮಳೆ ನಡುವೆಯೂ ಕೆಲವೆಡೆ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಮುಂದಿನ 4 ದಿನಗಳವರೆಗೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿ ಸಮಯ ಬೆಚ್ಚಗಿನ ವಾತಾವರಣ ಇರಲಿದೆ. ಕರಾವಳಿಯಲ್ಲಿ ಬಿಸಿ ಗಾಳಿ ಬೀಸಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Nijjar Killing
ದೇಶ7 mins ago

Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

Bhavya Gowda shares her experiences during shooting
ಕಿರುತೆರೆ25 mins ago

Bhavya Gowda: ಡ್ರಿಪ್ಸ್‌ ಹಾಕಿದ್ದರೂ ಶೂಟಿಂಗ್‌ಗೆ ಬರಲೇ ಬೇಕು ಅಂದ್ರು ಎಂದ ʻಗೀತಾ ಧಾರಾವಾಹಿʼ ನಟಿ ಭವ್ಯಾ ಗೌಡ!

IPL 2024
ಕ್ರೀಡೆ37 mins ago

IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

Kangana Ranaut
ರಾಜಕೀಯ1 hour ago

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Virat Kohli
ಕ್ರೀಡೆ1 hour ago

Virat Kohli: ಟಿ20ಯಲ್ಲಿ ದಾಖಲೆ ಬರೆದ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ

HD Revanna
ಕರ್ನಾಟಕ1 hour ago

HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
ಕಾಲಿವುಡ್2 hours ago

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

IPL 2024
ಕ್ರೀಡೆ2 hours ago

IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

HD Revanna
ಕರ್ನಾಟಕ2 hours ago

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

Shreyas Talpade hints his heart attack side effect of Covid vaccine
ಬಾಲಿವುಡ್2 hours ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌