Vijayanagara News: ಸ್ವದೇಶ ದರ್ಶನ-2.0; ಹಂಪಿ ಪ್ರವಾಸೋದ್ಯಮ ಉತ್ತೇಜಿಸಲು ಬ್ರ್ಯಾಂಡಿಂಗ್‌ ಹಂಪಿ ಸ್ಪರ್ಧೆ - Vistara News

ವಿಜಯನಗರ

Vijayanagara News: ಸ್ವದೇಶ ದರ್ಶನ-2.0; ಹಂಪಿ ಪ್ರವಾಸೋದ್ಯಮ ಉತ್ತೇಜಿಸಲು ಬ್ರ್ಯಾಂಡಿಂಗ್‌ ಹಂಪಿ ಸ್ಪರ್ಧೆ

Vijayanagara News: ಸ್ವದೇಶ ದರ್ಶನ-2.0 ಅಡಿ ಹಂಪಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬ್ರಾಂಡಿಂಗ್‌ ಹಂಪಿ ಅಡಿಯಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಎಲ್ಲರಿಗೂ ಭಾಗವಹಿಸಲು ಭಾರತದಾದ್ಯಂತ ಅವಕಾಶ ಕಲ್ಪಿಸಲಾಗಿದೆ ಎಂದು ವಿಜಯನಗರ ಡಿಸಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

VISTARANEWS.COM


on

Branding Hampi Competition to Promote Hampi Tourism says DC Diwakar
ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಡಿಸಿ ಎಂ.ಎಸ್.ದಿವಾಕರ್ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಸ್ವದೇಶ ದರ್ಶನ-2.0 (Swadesh Darshan-2.0) ಅಡಿ ಹಂಪಿಯಲ್ಲಿ ಪ್ರವಾಸೋದ್ಯಮವನ್ನು (Hampi Tourism) ಉತ್ತೇಜಿಸಲು ಬ್ರಾಂಡಿಂಗ್‌ ಹಂಪಿ ಅಡಿಯಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಎಲ್ಲರಿಗೂ ಭಾಗವಹಿಸಲು ಭಾರತದಾದ್ಯಂತ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಸಚಿವಾಲಯವು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಸಮಗ್ರ ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಲು ಕರ್ನಾಟಕದ ಹಂಪಿಯನ್ನು ಆಯ್ಕೆ ಮಾಡಿದ್ದು, ಇದು ಜನವರಿ 2023 ರಲ್ಲಿ ಪ್ರಾರಂಭಿಸಿ ಹಂಪಿ ಪ್ರವಾಸೋದ್ಯಮ ಅಭಿವೃದ್ಧಿಗೆ ರೂ. 70 ಕೋಟಿ ನಿಧಿಯನ್ನು ಕಾಯ್ದಿರಿಸಿದೆ. ಸ್ವದೇಶ್ ದರ್ಶನ 2.0 ಭಾಗವಾಗಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ ಸ್ಥಳ ಅಭಿವೃದ್ಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಇದನ್ನೂ ಓದಿ: Viral Video: ಎಕ್ಸ್​ಪ್ರೆಸ್​ ರೈಲಿಗಿಂತಲೂ ವೇಗವಾಗಿ ಸಾಗಿದ ಆಟೋ! ವಿಡಿಯೊ ವೈರಲ್​

‘ಹಂಪಿಯಲ್ಲಿ ಸಮಯ ಪ್ರಯಾಣ’ ಎಂಬ ಥೀಮ್‌ನೊಂದಿಗೆ ‘ಹಂಪಿಯಲ್ಲಿ ಪ್ರವಾಸೋದ್ಯಮದ ಭವಿಷ್ಯವನ್ನು ರೂಪಿಸಲು ನಿಮ್ಮ ಅವಕಾಶ!’ ಎಂಬ ಉದ್ದೇಶದಿಂದ ಲೋಗೋ ವಿನ್ಯಾಸ + ಆಕರ್ಷಕ ಟ್ಯಾಗ್‌ಲೈನ್, ಆಕರ್ಷಕ ಮ್ಯಾಸ್ಕಾಟ್ ವಿನ್ಯಾಸ, ವಿಶಿಷ್ಟ ಸ್ಮರಣೆ (ಗಳು), ಹಂಪಿಯಲ್ಲಿ ನಿಮ್ಮ ನೆಚ್ಚಿನ ಸ್ಥಳ ಅಥವಾ ಚಟುವಟಿಕೆಯನ್ನು ವಿವರಿಸುವ ಒಂದು ಬ್ಲಾಗ್, ಹಂಪಿಯನ್ನು ಹೆಚ್ಚು ಪ್ರತಿನಿಧಿಸುವ ಒಂದು ಫೋಟೋ ಸಲ್ಲಿಸುವ ಈ ಸ್ಪರ್ಧೆಗಳಲ್ಲಿ ಭಾರತದಾದ್ಯಂತ ವಿದ್ಯಾರ್ಥಿಗಳು, ಆಸಕ್ತ ಸಾರ್ವಜನಿಕರು ಭಾಗವಹಿಸಿ, ಬಹುಮಾನಗಳನ್ನು ಗೆಲ್ಲಲು ಮತ್ತು ನಿಮ್ಮ ಆಲೋಚನೆಗಳನ್ನು ಹಂಪಿಗೆ ತರಲು ಇದೊಂದು ಸುವರ್ಣಾವಕಾಶ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಉಪವಿಭಾಗಾಧಿಕಾರಿ ಮಹದ್‌ಅಲಿ ಅಕ್ರಮ ಷಾಹ, ಕಮಲಾಪುರ ಹೊಸಪೇಟೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಿಕೇರಿ ಸೇರಿದಂತೆ ಮತ್ತಿತರರಿದ್ದರು.

ಇದನ್ನೂ ಓದಿ: Rafael Nadal: ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ರಫೆಲ್‌ ನಡಾಲ್‌

ಆಕರ್ಷಕ ಬಹುಮಾನ, ನೋಂದಣಿ

ಪ್ರತಿ ಪ್ಯಾಕೇಜ್‌ಗೆ ಪ್ರಥಮ 20,000 ರೂ., ದ್ವಿತೀಯ 10,000 ರೂ., ತೃತೀಯ 5,000 ರೂ. ನಗದು ಬಹುಮಾನ ನೀಡಲಾಗುವುದು. ಶಾರ್ಟ್‌ಲಿಸ್ಟ್ ಮಾಡಲಾದ ನಮೂದುಗಳು ತಮ್ಮ ಆಲೋಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ಪ್ರಸ್ತುತಪಡಿಸಲು ಅವಕಾಶವನ್ನು ನೀಡುತ್ತವೆ. ವಿಜೇತ ನಮೂದುಗಳನ್ನು ಮತ್ತು ವಿಜಯನಗರ ಜಿಲ್ಲೆ ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗುತ್ತದೆ. ನೋಂದಾಯಿಸಲು ಡಿ.21 ಮತ್ತು ಥೀಮ್ ಸಲ್ಲಿಸಲು ಡಿ.25 ಕೊನೆಯ ದಿನವಾಗಿದ್ದು, ನೋಂದಣಿ ಮತ್ತು ಪ್ರಶ್ನೆಗಳಿಗಾಗಿ competitions@karnatakatourism.org ಗೆ ಇಮೇಲ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ https://vijayanagara.nic.in/ ಗೆ ಭೇಟಿ ನೀಡಬಹುದು ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Rain News : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು (Karnataka Weather Forecast), ಕಾರವಾರದ ಟನಲ್‌ ಎದುರು ಗುಡ್ಡ ಕುಸಿತ ಭೀತಿ ಹೆಚ್ಚಾಗುತ್ತಿದೆ. ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿದ್ದು, ಸವಾರರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

VISTARANEWS.COM


on

By

karnataka weather Forecast
Koo

ಕಾರವಾರ/ ಕಲಬುರಗಿ: ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು, ಕಲಬುರಗಿಯಲ್ಲಿ ಭಾರಿ ಮಳೆ

ರಾಜಧಾನಿ ಬೆಂಗಳೂರಲ್ಲಿ ಮಂಗಳವಾರ ಸಂಜೆ ವೇಳೆಗೆ ಮಳೆಯಾಗಿದೆ. ಅನ್ನಪೂರ್ಣೇಶ್ವರಿ ನಗರ, ಲಗ್ಗೆರೆ, ಸುಂಕದಕಟ್ಟೆ, ವಿಧಾನಸೌಧ, ಮೆಜೆಸ್ಟಿಕ್‌, ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇತ್ತ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಯಡ್ರಾಮಿ ತಾಲೂಕಿನ ವರವಿ-ಕುಕನೂರು ಮಾರ್ಗದಲ್ಲಿ ಹಳ್ಳ ದಾಟಲು ಗ್ರಾಮಸ್ಥರು ಹರಸಾಹಸ ಪಡುವಂತಾಗಿದೆ.

ಜಮೀನಿನಲ್ಲಿ ಬಿತ್ತನೆ ‌ಕಾರ್ಯ ಮುಗಿಸಿ ‌ಮನೆಗೆ ತೆರಳುವಾಗ ರೈತರು ಹಗ್ಗ ಹಿಡಿದು ಹಳ್ಳದಾಟುತ್ತಿದ್ದಾರೆ. ಪ್ರತಿಬಾರಿ ಮಳೆಗಾಲದಲ್ಲೂ ಇದೇ ರೀತಿ ಸಮಸ್ಯೆ ಎದುರಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕೊಪ್ಪಳದಲ್ಲೂ ಮಳೆ ಸುರಿದಿದೆ. ಕೊಪ್ಪಳ ನಗರ ಸೇರಿದಂತೆ ಸುತ್ತಮುತ್ತ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಆಗುತ್ತಿದ್ದಂತೆ ಮಳೆಯ ಸಿಂಚನವಾಗಿದೆ. ನಿತ್ಯವೂ ಆಗಾಗ ಮಳೆ ಬೀಳುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಕೊಂಚ ಹಿನ್ನಡೆಯಾಗಿದೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ನಾಳೆ, ನಾಡಿದ್ದು ಅಲ್ಪ ಮಳೆ

ರಾಜ್ಯದ ಹಲವೆಡೆ ಮಳೆ ಅಬ್ಬರ ತಗ್ಗಿದೆ. ಇನ್ನೊಂದು ವಾರ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೂ.12ರಂದು‌ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಯಾದಗಿರಿ, ಕಲಬುರಗಿ ಹಾಗೂ ಮಲೆನಾಡಿನ ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆ ಜತೆಗೆ ಗಾಳಿಯು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಜೂನ್‌ 13ರಂದು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ಸುತ್ತಮುತ್ತ ಆಗಾಗ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಬಹುದು ಅಂದಾಜಿಸಲಾಗಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 29, 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಅಲರ್ಟ್‌ಗಳನ್ನು ನೀಡಲಾಗಿದೆ. ಜೂನ್‌ 13ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 55-65 ಕಿ.ಮೀ ಇರಲಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್‌ 13ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka Weather Forecast : ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Rain News) ಮರಗಳು ಧರೆಗುರುಳಿದ್ದು, ನಾನಾ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಗೋಡೆ ಕುಸಿದು ಎರಡು ಎಮ್ಮೆಗಳು ಮೃತಪಟ್ಟರೆ ಮತ್ತೊಂದು ಕಡೆ ನೆಲಕ್ಕೆ ಅಪ್ಪಳಿಸಿದ್ದ ವಿದ್ಯುತ್‌ ತಂತಿ ತಗುಲಿ ಆಕಳೊಂದು ಮೃತಪಟ್ಟಿದೆ.

VISTARANEWS.COM


on

By

Karnataka weather Forecast
Koo

ವಿಜಯಪುರ: ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, (Karnataka Weather Forecast) ಅವಾಂತರವನ್ನೇ ಸೃಷ್ಟಿಸಿದೆ. ವಿಜಯಪುರದಲ್ಲಿ ಸುರಿದ ಧಾರಾಕಾರ ಮಳೆಗೆ (Rain News) ಮನೆಯ ಗೋಡೆ ಕುಸಿದು, ಎರಡು ಎಮ್ಮೆಗಳು ಮೃತಪಟ್ಟಿವೆ. ಗೋಡೆ ಕುಸಿಯುವಾಗ ಮನೆಯಲ್ಲಿ ಯಾರು ಇಲ್ಲದ ಕಾರಣಕ್ಕೆ ಭಾರಿ ಅನಾಹುತವೊಂದು ತಪ್ಪಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಬಸಪ್ಪ ಕೋಟಿನ್ ಎಂಬುವರಿಗೆ ಸೇರಿದ ಎರಡು ಎಮ್ಮೆಗಳನ್ನು ಮನೆ ಸಮೀಪವೇ ಕಟ್ಟಲಾಗಿತ್ತು. ಈ ವೇಳೆ ಗೋಡೆ ಕುಸಿದು ಬಿದ್ದ ರಭಸಕ್ಕೆ ಎಮ್ಮೆಗಳು ಮೃತಪಟ್ಟಿವೆ. ಲಕ್ಷ ರೂಪಾಯಿಗೆ ಬೆಲೆ ಬಾಳುತ್ತಿದ್ದ ಎರಡು ಎಮ್ಮೆಗಳನ್ನು ಕಳೆದುಕೊಂಡು ಬಸಪ್ಪ ಕಂಗಲಾಗಿದ್ದಾರೆ. ನೈಸರ್ಗಿಕ ವಿಕೋಪದಿಂದ ಆದ ಅನಾಹುತಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ‌ ಸುರಿದ ಧಾರಾಕಾರ ಮಳೆಗೆ ದೇವರ ಹಿಪ್ಪರಗಿಯ ಕೆಲ ಮನೆಗಳಲ್ಲಿ ನೀರು ನುಗ್ಗಿತ್ತು. ಇದರಿಂದಾಗಿ ಜನರು ಜಾಗರಣೆ ಮಾಡುವಂತಾಯಿತು.

ಯಾದಗಿರಿಯಲ್ಲಿ ವಿದ್ಯುತ್ ತಗುಲಿ ಜಾನುವಾರು ಸಾವು

ಇತ್ತ ಯಾದಗಿರಿಯ ಯಡ್ಡಹಳ್ಳಿ ಗ್ರಾಮದಲ್ಲಿ ವಿದ್ಯುತ್‌ ತಗುಲಿ ಜಾನುವಾರು ಮೃತಪಟ್ಟಿದೆ. ಜೆಸ್ಕಾಂ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ವಿದ್ಯುತ್‌ ಕಂಬಗಳು ಧರೆಗುರುಳಿದ್ದವು. ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿ ತೆರವು ಮಾಡದೆ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಪೂರೈಕೆ ಮಾಡಿದ್ದಾರೆ. ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ವಿದ್ಯುತ್ ತಂತಿ ತುಳಿದು ಆಕಳು ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಆಕಳು ಕಳೆದುಕೊಂಡ ಲಿಂಗಾರೆಡ್ಡಿ ಕಂಗಲಾಗಿದ್ದು, ಜೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಧಾರಕಾರ ಮಳೆಯಿಂದ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬರದೇವನಾಳ ಸಮೀಪದ ಡೋಣಿ ನದಿಯ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಕಿರಿದಾದ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ತರಕಿಹಾಳ, ಕರೇಕನಾಳ, ಮದಲಿಂಗನಾಳ ಹಾಗೂ ಗೆದ್ದಲಮರಿ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ಇದನ್ನೂ ಓದಿ: Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

ಕಲಬುರಗಿಯಲ್ಲಿ ಕೆರೆಯಂತಾದ ರಸ್ತೆಗಳು

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೋಟ್ನಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತವರು ಕ್ಷೇತ್ರದಲ್ಲಿ ಮಳೆಯು ಅವಾಂತರವನ್ನು ಸೃಷ್ಟಿಸಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಗ್ರಾಮಸ್ಥರು ಪರದಾಡುವಂತಾಗಿದೆ. ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಕೊಡಗಿನಲ್ಲಿ ಮಳೆಗೆ ಧರೆಗುರುಳಿದ ಮರಗಳು

ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗುರುಳಿವೆ. ಮಡಿಕೇರಿ ತಾಲೂಕಿನ ಭಾಗಮಂಡಲದ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಮತ್ತೊಂದೆಡೆ ಪಾಂಡಿ ಹಾಗೂ ಸೂರ್ತಲೆ ರಸ್ತೆಯಲ್ಲೂ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ಭಾಗಮಂಡಲ ರಸ್ತೆಯಲ್ಲಿ ಬಿದ್ದಿರುವ ಮರಗಳನ್ನು ಸ್ಥಳೀಯರೇ ತೆರವುಗೊಳಿಸಿದ್ದಾರೆ.

ವಿಜಯನಗರದಲ್ಲಿ ನೆಲಕ್ಕೆ ಅಪ್ಪಳಿಸಿದ ಆಲದ ಮರ

ವಿಜಯನಗರದ ಕೂಡ್ಲಿಗಿ ಪಟ್ಟಣದ ರಾಜೀವ್ ಗಾಂಧೀ ನಗರದಲ್ಲಿ ನಿರಂತರ ಮಳೆಯಿಂದಾಗಿ ಬೃಹತ್ ಆಲದ ಮರವೊಂದು ನೆಲಕ್ಕೆ ಅಪ್ಪಳಿಸಿದೆ. ಕೂಡ್ಲಿಗಿ – ಹೊಸಪೇಟೆ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಆಗಿತು. ಮರ ತೆರವು ಗೊಳಿಸುವಂತೆ ರಾಜೀವ್ ಗಾಂಧೀ ನಗರದ ನಿವಾಸಿಗಳು ಹಾಗೂ ರೈತರು ಆಗ್ರಹಿಸಿದರು. ಆಲದ ಮರವು ವಿದ್ಯುತ್ ತಂತಿ ಮೇಲೆಯೂ ಬಿದ್ದಿದ್ದು, ರಾಜೀವ್ ಗಾಂಧೀ ನಗರಕ್ಕೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಮುಂಗಾರು ಆರ್ಭಟ ಜೋರಾಗಿದೆ. ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ನಿರೀಕ್ಷೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 10ರಂದು ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ (Rain News) ಮಳೆಯಾಗಲಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಇರಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Fraud Case
ಕ್ರೈಂ53 seconds ago

Fraud Case: 300 ರೂ. ಬೆಲೆಯ ನಕಲಿ ಆಭರಣವನ್ನು ವಿದೇಶಿ ಮಹಿಳೆಗೆ 6 ಕೋಟಿ ರೂ.ಗೆ ಮಾರಿದರು!

Vastu Tips
ಧಾರ್ಮಿಕ20 mins ago

Vastu Tips: ಈ ನಕಾರಾತ್ಮಕ ವಸ್ತುಗಳನ್ನು ಮನೆಯಲ್ಲಿ ಇಡಲೇಬೇಡಿ!

Altroz Racer launched by Tata Motors
ಕರ್ನಾಟಕ24 mins ago

Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Pawan Kalyan
ದೇಶ25 mins ago

Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

Minister Dinesh Gundurao drives 10 days Yogotsava programme in Bengaluru
ಕರ್ನಾಟಕ26 mins ago

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Rajiv Taranath
ಪ್ರಮುಖ ಸುದ್ದಿ30 mins ago

Rajeev Taranath : ಮಹೋನ್ನತ ಪ್ರತಿಭೆಯ ರಾಜೀವ್ ತಾರಾನಾಥ್ ಸರೋದ್ ಲೋಕದ ಅದ್ಭುತ!

Actor Darshan Arrested Vijayalakshmi Darshan Unfollow Darshan On Instagram
ಸ್ಯಾಂಡಲ್ ವುಡ್37 mins ago

Actor Darshan Arrested : ದರ್ಶನ್​ನ ಅನ್​ಫಾಲೋ ಮಾಡಿ ಡಿಪಿ ಡಿಲೀಟ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

Murder News
ಪ್ರಮುಖ ಸುದ್ದಿ53 mins ago

Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

Reasi Terror Attack
ದೇಶ2 hours ago

Reasi Terror Attack: ರಿಯಾಸಿ ಭಯೋತ್ಪಾದಕ ದಾಳಿಯ ಶಂಕಿತನ ರೇಖಾಚಿತ್ರ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಘೋಷಣೆ

Actor Darshan Arrested
ಸ್ಯಾಂಡಲ್ ವುಡ್2 hours ago

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ17 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ18 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ20 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ22 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌