Vijayanagara News: ಉಜ್ಜಯಿನಿ ಸದ್ಧರ್ಮ ಪೀಠವನ್ನು ಪ್ರವಾಸಿ ತಾಣವಾಗಿಸಲು ಯೋಜನೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್‌ - Vistara News

ವಿಜಯನಗರ

Vijayanagara News: ಉಜ್ಜಯಿನಿ ಸದ್ಧರ್ಮ ಪೀಠವನ್ನು ಪ್ರವಾಸಿ ತಾಣವಾಗಿಸಲು ಯೋಜನೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್‌

Vijayanagara News: ಉಜ್ಜಯಿನಿ ಸದ್ಧರ್ಮ ಪೀಠವನ್ನು ಪ್ರವಾಸಿ ತಾಣವಾಗಿಸುವ ಯೋಜನೆಯೊಂದಿಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಎಂದು ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್‌ ತಿಳಿಸಿದ್ದಾರೆ.

VISTARANEWS.COM


on

Jagadguru Shri Marulasidda Shivacharyara punyasmaranotsava and deepotsava inauguration at ujjaini
ಕೂಡ್ಲಿಗಿ ತಾಲೂಕಿನ ಉಜ್ಜಯಿನಿಯಲ್ಲಿ ಲಿಂ.ಜಗದ್ಗುರು ಶ್ರೀ ಮರುಳಸಿದ್ದ ಶಿವಾಚಾರ್ಯರ ಪುಣ್ಯ ಸಂಸ್ಮರಣೋತ್ಸವ, ಲಕ್ಷ ದೀಪೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೂಡ್ಲಿಗಿ: ಉಜ್ಜಯಿನಿ ಸದ್ಧರ್ಮ ಪೀಠವನ್ನು (Ujjain Saddharma Peetha) ಪ್ರವಾಸಿ ತಾಣವಾಗಿಸುವ ಯೋಜನೆಯೊಂದಿಗೆ ಸರ್ಕಾರದ (Government) ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಎಂದು ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್‌ ಹೇಳಿದರು.

ತಾಲೂಕಿನ ಉಜ್ಜಯಿನಿಯಲ್ಲಿ ನಡೆದ ಲಿಂ.ಜಗದ್ಗುರು ಶ್ರೀ ಮರುಳಸಿದ್ದ ಶಿವಾಚಾರ್ಯರ ಪುಣ್ಯ ಸಂಸ್ಮರಣೋತ್ಸವ, ಲಕ್ಷ ದೀಪೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಾತಿ ಧರ್ಮವನ್ನು ಮೀರಿ ಸಮಾಜದಲ್ಲಿನ ಎಲ್ಲರನ್ನೂ ಒಂದೇ ಭಾವದಿಂದ ಕಂಡಿರುವುದು ಸದ್ಧರ್ಮ ಪೀಠ. ಶ್ರೀ ಪೀಠಕ್ಕೆ ಜರಿಮಲಿ ಪಾಳೆಗಾರರಾದಿಯಾಗಿ ಅನೇಕರು ವಿವಿಧ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: Upcoming Movies 2024: 2024ರ ಬಹು ನಿರೀಕ್ಷಿತ ಬಾಲಿವುಡ್ ಚಲನಚಿತ್ರಗಳಿವು!

ಉಜ್ಜಯಿನಿಯನ್ನು ಪ್ರವಾಸಿ ತಾಣವಾಗಿಸುವ ಕುರಿತು ವಿಶೇಷ ಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಸಾನಿಧ್ಯ ವಹಿಸಿದ್ದ ಜಗದ್ಗುರು ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಉಜ್ಜಯಿನಿ ಸದ್ಧರ್ಮ ಪೀಠದಿಂದ ಅಕ್ಷರ ಹಾಗೂ ಅನ್ನ ದಾಸೋಹ ಎಂದಿಗೂ ನಡೆಯುತ್ತಿದೆ. ಪೀಠದಲ್ಲಿ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗುವುದು. ಇದಕ್ಕೆ ಸರ್ಕಾರದಿಂದ ಅನುದಾನವೂ ಅಗತ್ಯವಾಗಿದ್ದು, ಶಾಸಕ ಶ್ರೀನಿವಾಸ ಅವರು ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಅನುದಾನವನ್ನು ಶೀಘ್ರ ತರುವಂತಾಗಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಕೆ.ನೇಮರಾಜನಾಯ್ಕ, ಬಿ.ಪಿ.ಹರೀಶ್, ಬಿ.ದೇವೇಂದ್ರಪ್ಪ, ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕರಾದ ಪಿ.ಟಿ. ಪರಮೇಶ್ವರನಾಯ್ಕ, ಎಸ್.ವಿ.ರಾಮಚಂದ್ರಪ್ಪ, ಜ್ಞಾನಗುರು ವಿದ್ಯಾಪೀಠ ಕಾರ್ಯದರ್ಶಿ ಎಂಎಂಜೆ ಹರ್ಷವರ್ಧನ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: Snake in bed : ಬೆಡ್‌ ಶೀಟ್‌ ಒಳಗೆ ನಾಗಪ್ಪ ಬುಸ್‌; ಮನೆಯವರು ಜಸ್ಟ್‌ ಮಿಸ್‌! video ಇದೆ!

ಕಾರ್ಯಕ್ರಮದಲ್ಲಿ ಪ್ರತಿಭಾವಂತ ಯೋಗಪಟುಗಳು ಯೋಗ ಪ್ರದರ್ಶಿಸಿದರು. ಲಿಂ.ಜಗದ್ಗುರು ಶ್ರೀ ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿಗಳ ಭಾವಚಿತ್ರಕ್ಕೆ ಎಲ್ಲರೂ ಪುಷ್ಪನಮನ ಅರ್ಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Karnataka Rain: ಸೋಮವಾರ ರಾತ್ರಿ ಸುರಿದ ಮಳೆಗೆ (Heavy Rain) ಜನರು ಕಂಗಲಾಗಿದ್ದಾರೆ. ಹಲವೆಡೆ ಭಾರಿ ಮಳೆಗೆ (Karnataka Weather) ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

VISTARANEWS.COM


on

By

karnataka Rain Effected
Koo

ಬೆಂಗಗಳೂರು/ಬೆಳಗಾವಿ: ತಡರಾತ್ರಿ ಸುರಿದ ಮಳೆಯು (Karnataka Rain) ಅವಾಂತರವನ್ನೇ ಸೃಷ್ಟಿಸಿ ಮಾಡಿದೆ. ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಅಬ್ಬರಿಸಿದ ಮಳೆಗೆ (Rain News) ಮರಗಳು ಧರೆಗುರುಳಿದ್ದವು. ನೃಪತುಂಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎದುರಿಗೆ ಮರದ ಕೊಂಬೆ ನೆಲಕ್ಕೆ ಉರುಳಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಬುಕ್‌ಫೀಲ್ಡ್‌ನಲ್ಲಿ ಮರ ಬಿದ್ದು ಕಾರೊಂದು ಜಖಂಗೊಂಡಿತ್ತು. ಚಾಮರಾಜಪೇಟೆಯ ಗುಡ್ಡದಹಳ್ಳಿಯಲ್ಲಿ ಮನೆಗಳಿಗೆ ಕೆಸರುಮಯ ನೀರು ನುಗ್ಗಿದ್ದರಿಂದ ಹೊರಹಾಕಲು ಜನರು ತೊಂದರೆ ಅನುಭವಿಸಿದರು.

ಮೈಸೂರಿನಲ್ಲಿ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಮನೆ ಕುಸಿದು ಬಿದ್ದಿದ್ದು, ವಾಸ ಮಾಡಲು ಮನೆ ಇಲ್ಲದೆ ಭಾಗ್ಯಮ್ಮ ಕಣ್ಣೀರು ಹಾಕಿದರು. ಮನೆಯಲ್ಲಿ ಸುಮಾರು 6 ತಿಂಗಳು ಸಣ್ಣ ಮಗುವಿದ್ದು ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಬಿದ್ದು ಕುಟುಂಬವು ಕಂಗಲಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನಾಶವಾಗಿವೆ. ನಮಗೆ ಆದಷ್ಟು ಬೇಗ ಸರ್ಕಾರ ಪರಿಹಾರ ಮಾಡಿಕೊಡಬೇಕು ಎಂದು ಭಾಗ್ಯಮ್ಮ ಮನವಿ ಮಾಡಿದರು.

ವಿಜಯನಗರದಲ್ಲಿ ಮಳೆಗೆ ಬೆಳೆ ಹಾನಿ

ಕಳೆದ ರಾತ್ರಿ ಮಳೆ ಜೆತಗೆ ಬಿರುಗಾಳಿ ಬೀಸಿದ ಹಿನ್ನೆಲೆಯಲ್ಲಿ ಬಾಳೆ, ಭತ್ತ, ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ವಿಜಯನಗರದ ಹುರುಳಿಹಾಳ ಗ್ರಾಮದಲ್ಲಿ ಗಾಳಿ ಪ್ರಮಾಣ ಹೆಚ್ಚಿದರಿಂದ ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ಕಾನಾಹೊಸಹಳ್ಳಿ ಹೋಬಳಿಯ ಎಕ್ಕೆಗೊಂದಿ ಗ್ರಾಮದಲ್ಲಿ ರೇಷ್ಮೆ ಸಾಗಾಣೆ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಗುಡುಗು, ಮಿಂಚು ಸಿಡಿಲಿನ ಆರ್ಭಟ ಮಧ್ಯೆ ಸಾಧಾರಣ ಮಳೆ ವರದಿಯಾಗಿದೆ.

ಧರೆಗುರುಳಿದ ಮರಗಳು

ಚಿಕ್ಕೋಡಿ ಗಡಿ ತಾಲೂಕು ನಿಪ್ಪಾಣಿಯಲ್ಲಿ ರಣ ಗಾಳಿ-ಮಳೆಗೆ ಸಿಕ್ಕಿ ನಲುಗಿದೆ. ನಿಪ್ಪಾಣಿ ನಗರದ ವಿವಿಧೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನಿಪ್ಪಾಣಿಯ ಭೀಮನಗರ,ವಿದ್ಯಾನಗರ,ಅಂಬೇಡ್ಕರ್ ನಗರದ ಹತ್ತಿರ ಮರಗಳು ಬಿದ್ದಿವೆ. ಮುನ್ಸಿಪಲ್ ಹೈಸ್ಕೂಲ್,ಅಬಕಾರಿ ಫೀಸ್ ಸೇರಿದಂತೆ ವಿವಿಧೆಡೆ ಹಾನಿಯಾಗಿದೆ. ಭಾರಿ ಗಾಳಿಗೆ ವಿದ್ಯುತ್ ಕಂಬಗಳು ವಾಲಿದರೆ, ಮನೆಯ ಚಾವಣೆ ಹಾರಿ ಹೋಗಿವೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ವಾಹನ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹಾನಿಯಾದ ಪ್ರದೇಶಗಳಿಗೆ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಿಪ್ಪಾಣಿ ನಗರ ತತ್ತರಿಸಿದೆ. ಭಾರಿ ಮಳೆಗೆ 20 ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದೆ. ಪತ್ರಾಸ್ ಶೇಡ್ ಹಾಗೂ ಹಂಚಿನ ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಭಾರಿ ಮಳೆ ಗಾಳಿಗೆ 30 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಮರಗಳ ಜತೆಗೆ ನಗರದಲ್ಲಿ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿವೆ. ಮರಗಳು ಬಿದ್ದು 10 ಕ್ಕೂ ಹೆಚ್ಚು ವಾಹನಗಳು ಸಹ ಜಖಂಗೊಂಡಿವೆ. ಕಳೆದ ರಾತ್ರಿಯಿಂದ ನಿಪ್ಪಾಣಿ ನಗರದಲ್ಲಿ ವಿದ್ಯುತ್ ಕಟ್ ಆಗಿದೆ. ನಿಪ್ಪಾಣಿ ನಗರಸಭೆಯಿಂದ ಮರಗಳ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿಪ್ಪಾಣಿ ನಗರಸಭೆ ಅಧಿಕಾರಿಗಳು ಹಾನಿಯಾದ ಮನೆಗಳ ಸರ್ವೆಗೆ ಮುಂದಾಗಿದ್ದಾರೆ. ನಿಪ್ಪಾಣಿ ಪಟ್ಟಣದ ಅಂಬೇಡ್ಕರ್ ಗಲ್ಲಿಗೆ ಭೀಮ ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಹಾನಿಯಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

ಆನೇಕಲ್‌ನಲ್ಲಿ ಮನೆಗೆ ನುಗ್ಗಿದ ಚರಂಡಿ ನೀರು

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಮನೆಗಳಿಗೆ ಹಾಗೂ ಬಡಾವಣೆಗಳಿಗೆ ಕೊಳಚೆ ನೀರು ನುಗ್ಗಿದೆ. ಚರಂಡಿ-ರಾಜಕಾಲುವೆ ವ್ಯವಸ್ಥೆ ಸರಿ ಇಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಇಡೀ ರಾತ್ರಿ ನೀರಿನಲ್ಲಿ ನಿವಾಸಿಗಳು ಕಾಲ ಕಳೆದಿದ್ದಾರೆ. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಮನೆಯೊಳಗೆ ನುಗ್ಗಿದ ಕೊಳಚೆ ನೀರನ್ನು ಸ್ವಚ್ಛ ಮಾಡುವುದರಲ್ಲಿ ದಿನದೂಡುತ್ತಿದ್ದಾರೆ.

ವಿಜಯನಗರದಲ್ಲಿ ವರುಣನ ಕೃಪೆಗಾಗಿ ಜಪ – ತಪ

ಜಪ – ತಪ ಮಾಡಿದ ಕೇವಲ ಎಂಟು ದಿನದಲ್ಲಿ ವರುಣನ ಆಗಮನವಾಗಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ವಿಜಯನಗರದ ಹೊಸಪೇಟೆ ತಾಲೂಕಿನಲ್ಲಿ ಮಳೆ ಸುರಿದಿದೆ. ಭೀಕರ ಬರಗಾಲ, ಬಿಸಿಲಿನ ಧಗೆಯಿಂದ ಜನರು ಆಂಜನೇಯನ ಮೊರೆ ಹೋಗಿದ್ದರು. ಮಳೆಗಾಗಿ ನೂರಾರು ವರ್ಷ ಹಳೆಯದಾದ ಐತಿಹಾಸಿಕ ಹಿನ್ನೆಲೆವೊಳ್ಳ ಆಂಜನೇಯನಿಗೆ ಮಳೆಗಾಗಿ ನಿತ್ಯ ಪೂಜೆ, ಭಜನೆ ಮಾಡುತ್ತಿದ್ದರು. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿರೋ ಐತಿಹಾಸಿಕ ಆಂಜನೇಯ ದೇಗುಲವನ್ನು ವಿಜಯನಗರ ಅರಸರ ಕಾಲದಿಂದಲೂ ವಿಶೇಷ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತ ನೀರು

ಧಾರಾಕಾರ ಮಳೆಗೆ ಹಳೇ ಮೈ-ಬೆಂ ಹೆದ್ದಾರಿಯಲ್ಲಿ ಜಲಾವೃತಗೊಂಡಿತ್ತು. ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಹೆದ್ದಾರಿಯಲ್ಲಿ ತೆರಳಲಾಗದೆ ಬೈಕ್ ಸವಾರರು ಬದಲಿ ರಸ್ತೆಯಲ್ಲಿ ಸಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Ujjaini Marulasiddeshwara Jatre: ಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ

Ujjaini Marulasiddeshwara Temple: ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ ಆಯೋಜಿಸಲಾಗಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಮರುಳಸಿದ್ಧೇಶ್ವರ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಭಾನುವಾರ ನೆರವೇರಿತು.

VISTARANEWS.COM


on

Ujjaini Marulasiddeshwara Temple
Koo

| ನಿರಂಜನ ದೇವರಮನೆ, ಚಿತ್ರದುರ್ಗ
ಭಾರತೀಯರ ಬದುಕಿನಲ್ಲಿ ಹಬ್ಬಗಳು ಮತ್ತು ಜಾತ್ರೆಗಳಿಗೆ ಒಂದು ವಿಶೇಷವಾದ ಅರ್ಥ ಹಾಗೂ ಅತಿಶಯವಾದ ಸ್ಥಾನಮಾನವಿದೆ. ಅವುಗಳು ಧಾರ್ಮಿಕ ಹಿನ್ನೆಲೆ ಹೊಂದಿ ಮಹತ್ತರವಾದ ಸಂದೇಶಗಳನ್ನು ಸಾರುತ್ತವೆ. ಸಾಮಾಜಿಕ ಜೀವನದಲ್ಲಿ ಧರ್ಮದ ಬಗ್ಗೆ ಸದಾ ಜಾಗೃಕನಾಗಿರುವಂತೆ ಮಾಡುವುದೇ ಈ ಆಚರಣೆಗಳ ಮಹೋದ್ದೇಶವಾಗಿರುತ್ತದೆ. ಎಲ್ಲ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದ ಸಂದರ್ಭದಲ್ಲಿ ಎಲ್ಲರೂ ಯಾವುದೇ ಭೇದ-ಭಾವವಿಲ್ಲದೇ ಒಗ್ಗಟ್ಟಿನಿಂದ ಜಾತ್ರೆ (Ujjaini Marulasiddeshwara Jatre) ಆಚರಿಸುವುದರೊಂದಿಗೆ ರಥ ಎಳೆಯುವ ಮುಖೇನ ಸಾಮಾಜಿಕ ಸೌಹಾರ್ದತೆ ಪ್ರದರ್ಶಿಸುತ್ತಾರೆ. ಪರಸ್ಪರ ದ್ವೇಷಾಸೂಯೆಗಳನ್ನು ಮರೆತು ಸಹಬಾಳ್ವೆಯಿಂದ ವರ್ತಿಸುತ್ತಾರೆ. ಜೊತೆಗೆ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವಲ್ಲಿ ಸಹಕಾರಿಯಾಗುತ್ತಾರೆ.

ಇಂಥ ವೈಶಿಷ್ಯವಾದ ಆಲೋಚನೆ, ಆಚರಣೆಗಳನ್ನಿಟ್ಟುಕೊಂಡು ನಿರಂತರ ಸಮಾಜೋ-ಧಾರ್ಮಿಕ ಕಾರ್ಯಗಳನ್ನು ನಿರ್ವಹಿಸುತ್ತಿರುವ ಈ ನಾಡಿನ ಅನೇಕ ಧರ್ಮಪೀಠಗಳು ಹಾಗೂ ದೇವಮಂದಿರಗಳು ಜನತೆ ಪಾಲಿಗೆ ಸದಾ ಜೀವನ್ಮುಕ್ತಿಯ ಪುಣ್ಯತಾಣಗಳಾಗಿ ಕಂಗೊಳಿಸುತ್ತಿವೆ.

ಪರಶಿವನ ಪಂಚಮುಖಗಳಿಂದ ಪ್ರಾದುರ್ಭವಿಸಿ ವೀರಶೈವ ಮತವನ್ನು ಸ್ಥಾಪಿಸಿ, ಶಿವಸರ್ವೋತ್ತಮತೆ ಪ್ರಶಂಸಿಸಿ, ಶಿವಭಕ್ತಿ ಪ್ರಸಾರವನ್ನು ಕೈಗೊಂಡು ತಮ್ಮ ತಪಃಪ್ರಭಾವ ಹಾಗೂ ಕ್ರಿಯಾತ್ಮಕ ಶಕ್ತಿಯಿಂದ ಜಗತ್ತಿನ ಪವಿತ್ರ ಸ್ಥಳಗಳಲ್ಲಿ ಶಿವಲಿಂಗಗಳನ್ನು ಸ್ಥಾಪಿಸಿ, ಶಿವಪೂಜಾ ವೈಭವವನ್ನು ಪ್ರದರ್ಶಿಸಿ ಶೈವ-ವೀರಶೈವ-ಲಿಂಗಾಯತ ಕ್ಷೇತ್ರಗಳನ್ನು ಉದ್ಧರಿಸಿದ ಶ್ರೀ ಜಗದ್ಗುರು ಪಂಚಾಚಾರ್ಯರು ಇಡೀ ವಿಶ್ವಕ್ಕೆ ಲೋಕಪೂಜ್ಯರೆನ್ನಿಸಿದ್ದಾರೆ.

ಇದನ್ನೂ ಓದಿ | Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

ಇಂಥ ವೀರಶೈವ ಧರ್ಮಸ್ಥಾಪಿತ ಪಂಚಪೀಠಗಳಲ್ಲಿ ಒಂದಾದ ಪೀಠವೇ ಶ್ರೀಮದುಜ್ಜಯಿನಿ ಸದ್ಧರ್ಮ ಪೀಠ. ಶಿವನ ವಾಮದೇವ ಮುಖಸಂಜಾತಾರಾದ ಶ್ರೀ ಜಗದ್ಗುರು ಮರುಳಾರಾಧ್ಯರು ಮಾಳವ ದೇಶದ ಕ್ಷಿಪ್ರ ನದಿ ತಟದಲ್ಲಿರುವ ಶ್ರೀ ಸಿದ್ಧೇಶ್ವರ ಜ್ಯೋತಿರ್ಲಿಂಗ ಮುಖದಿಂದ ದಿವ್ಯ ದೇಹಿಯಾಗಿ ಅವತರಿಸಿ ಅಲ್ಲಿಯೇ ಶ್ರೀ ಪೀಠವನ್ನು ಸ್ಥಾಪಿಸಿ ವೇದಾಂತ ಸಮ್ಮತವಾದ ಶಿವಾದ್ವೈತ ಸಿದ್ಧಾಂತವನ್ನು ಮಾನವ ಕುಲದ ಉದ್ಧಾರಕ್ಕಾಗಿ ಸಂಸ್ಥಾಪಿಸಿ ಅದನ್ನು ಬೋಧಿಸಿ ಆ ಪರಂಪರೆ ಮುಂದುವರೆಸಿದ ಮಹಾಮಹಿಮರಾಗಿದ್ದಾರೆ.

ಈ ಪರಂಪರೆಯ ಶ್ರೀ ದಾರುಕಾಚಾರ್ಯರು ಹಿಂದುಳಿದ ಜಾತಿಯ ಕೀಲಿಗನಾದ ದಧೀಚಿಗೆ ಶಿವಾದ್ವೈತವನ್ನು ಬೋಧಿಸಿ ಕುಲ-ಹದಿನೆಂಟು ಜಾತಿಯನ್ನು ಉದ್ಧರಿಸಿದ ಸಮಾಜ ಪರಿವರ್ತನ ಮಹಾ ಪ್ರವರ್ತಕರಾಗಿದ್ದಾರೆ.

ಕಾಲಾಂತರದಲ್ಲಿ ಕರ್ನಾಟಕದ ಉಜ್ಜಯಿನಿ ಪರಿಸರಕ್ಕೆ ಸ್ಥಳಾಂತರವಾದ ಈ ಪೀಠ ಅಂದಿನ ತನ್ನ ಧರ್ಮ-ಸಂಸ್ಕೃತಿ-ಪರಂಪರೆಯನ್ನು ಇಂದಿಗೂ ಮುಂದುವರೆಸಿಕೊಂಡು ಬರುತ್ತಿದೆ. ಈ ಪೀಠದ ಆಚರಣೆಗಳಲ್ಲಿ ಬಹುಮುಖ್ಯವಾದ ಶ್ರೀ ಮರುಳಸಿದ್ಧೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ತೈಲಾಭಿಷೇಕ ಬಹುವಿಶಿಷ್ಟವಾಗಿದ್ದು, ಅವುಗಳು ವೈಭವಪೂರ್ಣವಾಗಿ ಜರುಗುವುದರೊಂದಿಗೆ ರಾಷ್ಟ್ರದ ಭಾವೈಕ್ಯತೆಯ ಬೆಸುಗೆಯಾಗಿ, ಸರ್ವಧರ್ಮ ಸಹಿಷ್ಣುತೆಯ ಸಂಬಂಧಿಯಾಗಿ, ಸಾಮಾಜಿಕ ಸಂವೇದನೆಯ ಸೇತುಬಂಧವಾಗಿ ತನ್ನ ಆಚರಣೆಗಳನ್ನು ಅನಾವರಣಗೊಳಿಸಿಕೊಂಡಿದೆ.

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ತಮ್ಮ ಪೀಠ ಪರಂಪರೆಯೊಂದಿಗೆ ಜನಪರ ಕಲ್ಯಾಣವನ್ನು ತಮ್ಮದಾಗಿಸಿಕೊಂಡು ಮಾನವ ಧರ್ಮ ಎತ್ತಿ ಹಿಡಿಯುವ ಕೈಂಕರ್ಯವನ್ನು ಸದಾ ನಿರ್ವಹಿಸುತ್ತಿದ್ದಾರೆ. ಈ ನಾಡು ವಿಶ್ವಕಲ್ಯಾಣ ರಾಷ್ಟ್ರವಾಗಲಿ, ಸರ್ವರೂ ಸುಖ-ಸಂತೋಷದಿಂದ ಬಾಳಲಿ, ನಾಡಿನ ಕ್ಷಾಮ-ಡಾಮರಗಳು ದೂರವಾಗಿ ಕ್ಷೇಮ-ಸಂಪತ್ತುಗಳು ಸದಾ ನೆಲೆಸುವಂತಾಗಲಿ, ಭಕ್ತರು ವಾಸಿಸುವ ಊರು-ಕೇರಿಗಳು ಒಂದಾಗಿ ಧರ್ಮ-ಸಂಸ್ಕೃತಿಯ ನೆಲೆಗಳಾಗಲಿ ಎಂಬ ಪ್ರೇರಕ ಧರ್ಮಶಕ್ತಿಯನ್ನು ಈ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಅನುಷ್ಠಾನಗೊಳಿಸುತ್ತಾರೆ.

ಅಕ್ಷಯ ತದಿಗೆ ಅಮವಾಸ್ಯೆಯೆಂದು ಕ್ಷೇತ್ರನಾಥ ಶ್ರೀ ಮರುಳಸಿದ್ಧೇಶ್ವರಸ್ವಾಮಿಗೆ ಕಂಕಣಧಾರಣೆ ಮಾಡುವುದರೊಂದಿಗೆ ಪ್ರತಿ ದಿವಸ ವಿವಿಧ ವಾಹನೋತ್ಸವಗಳನ್ನು ನಡೆಸಲಾಗುತ್ತದೆ. ಇವುಗಳು ಧರ್ಮ-ಸಂಸ್ಕೃತಿಯನ್ನು ರಕ್ಷಿಸಿ, ಪೋಷಿಸುವಂತಹ ಕಾರ್ಯಕ್ರಮಗಳ ಧ್ಯೋತಕವಾಗಿರುತ್ತವೆ.

ಈ ನಾಡಿನ ರೈತರಿಗೆ ಶ್ರೀ ಮರುಳಸಿದ್ಧೇಶ್ವರನ ಕೃಪೆ ಇದ್ದರೇ ಮಳೆ, ಬೆಳೆ ಸಮೃದ್ಧವಾಗಿ ಬರುತ್ತದೆಂಬ ಗಾಢ ನಂಬಿಕೆ ಭಕ್ತರಲ್ಲಿರುವುದರಿಂದ ಈ ಜಾತ್ರಾ ಮಹೋತ್ಸವಕ್ಕೆ ಬರುವ ರೈತರು, ಭಕ್ತಾದಿಗಳು ತಮ್ಮ ದಾಸೋಹ ಸೇವೆಯನ್ನು ಅರ್ಪಿಸಿ ಕೃತಾರ್ಥರಾಗುತ್ತಾರೆ. ಹತ್ತಾರು ದಿನಗಳವರೆಗೆ ಜರುಗುವ ಈ ಜಾತ್ರಾ ಮಹೋತ್ಸವ ನೂರಾರು ಚಿಂತನೆಗಳನ್ನು ಇಟ್ಟುಕೊಂಡು ಸಮಾಜೋ-ಧಾರ್ಮಿಕ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮುಖೇನ ಸಾಮಾಜಿಕ ಸೌಹಾದರ್ತೆಯ ತತ್ವ-ಸಿದ್ಧಾಂತಗಳನ್ನು ಸಾರಿ ಸತ್ವಪೂರ್ಣ ಸಾತ್ವಿಕ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗುತ್ತದೆ.

ಪ್ರಸ್ತುತ ಶ್ರೀ ಜಗದ್ಗುರುಗಳು ಶ್ರೀ ಪೀಠದ ಧರ್ಮ-ಸಂಸ್ಕೃತಿ-ಪರಂಪರೆಯನ್ನು ಆಧುನಿಕತೆಯೊಂದಿಗೆ ಮುಖಾ-ಮುಖಿಯಾಗಿಸಿ ಶ್ರೀ ಪೀಠದ ಅಸ್ಮಿತೆಯನ್ನು ಇಡೀ ನಾಡಿಗೆ ಅನಾವರಣಗೊಳಿಸುತ್ತಿರುವುದು ಬಹುವಿಶೇಷವಾಗಿದೆ. ಹಾಗೆಯೇ ಇಂದಿನ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಿ, ಪ್ರಜಾಪ್ರಭುತ್ವದ ಭವ್ಯತೆಯನ್ನು ಬೆಳಗಿಸಿ ಎಂಬ ಘೋಷವಾಕ್ಯವನ್ನು ಶ್ರೀಪೀಠದ ವತಿಯಿಂದ ಪ್ರಕಟಿಸಿ ಮತದಾರರಲ್ಲಿ ಜಾಗೃತಿ ಮೂಡಿಸಿದ ಪರಿ ತುಂಬಾ ಶ್ಲಾಘನೀಯವಾಗಿದೆ.

ಕಾರ್ಯಕ್ರಮಗಳ ವಿವರ

ಮೇ.12ರ ಭಾನುವಾರ ಸಂಜೆ ಶ್ರೀ ಮರುಳಸಿದ್ಧೇಶ್ವರಸ್ವಾಮಿಯ ಮಹಾರಥೋತ್ಸವ ಶ್ರೀ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಸಾವಿರಾರು ಶಿವಾಚಾರ್ಯರ ನೇತೃತ್ವದಲ್ಲಿ, ನೂರಾರು ವಿರಕ್ತ ಚರಮೂರ್ತಿಗಳ ಸಮ್ಮುಖದಲ್ಲಿ ನಾಡಿನ ಲಕ್ಷಾಂತರ ಜನತೆಯ ಉಪಸ್ಥಿತಿಯಲ್ಲಿ ವಿವಿಧ ಜಾನಪದ ಕಲಾಮೇಳಗಳೊಂದಿಗೆ ಸಾಲಂಕೃತ ವರ್ಣರಂಜಿತ ಭವ್ಯವಾದ ಮಹಾರಥ ಉಜ್ಜಯಿನಿ ಪೀಠ ಪರಿಸರದಲ್ಲಿ ಅತ್ಯಂತ ಶ್ರದ್ಧಾ-ಭಾವ-ಭಕ್ತಿಯೊಂದಿಗೆ ಎಳೆಯಲ್ಪಟ್ಟಿತು. ಸಂಜೆ 7ಕ್ಕೆ ಶ್ರೀ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ದಾರುಕಾಚಾರ್ಯರ ಜಯಂತಿ ಯುಗಮಾನೋತ್ಸವ ಹಾಗೂ ಸದ್ಧರ್ಮ ಜನಜಾಗೃತಿ ಧರ್ಮ ಸಮಾರಂಭ ಅತ್ಯಂತ ಸಡಗರ-ಸಂಭ್ರಮಗಳಿಂದ ಜರುಗಿತು. ಶ್ರೀ ದಾರುಕರ ಜನಹಿತ ಕಾರ್ಯಗಳು ಹಾಗೂ ಅವರು ಕೈಗೊಂಡ ಅಪ್ರತಿಮ ಪವಾಡ ಸದೃಶ ಕಾರ್ಯಗಳನ್ನು ಈ ಸಂದರ್ಭದಲ್ಲಿ ವಿಧ್ವತ್‌ಪೂರ್ಣ ಉಪನ್ಯಾಸದ ಮುಖೇನ ಅನಾವರಣಗೊಳಿಸಲಾಯಿತು.

ಮೇ 13ರ ಸೋಮವಾರ ಸಂಜೆ 5 ಗಂಟೆಗೆ ಶ್ರೀ ಮರುಳಸಿದ್ಧೇಶ್ವರಸ್ವಾಮಿ ದೇವಾಲಯದ ಗೋಪುರದ ಶಿಖರಕ್ಕೆ ತೈಲಾಭಿಷೇಕ ನೆರವೇರಿಸಲಾಯಿತು. ಶ್ರೀಮದ್ ಉಜ್ಜಯಿನಿ ಜಗದ್ಗುರುಗಳು ಮತ್ತು ಶ್ರೀಮದ್ ಕಾಶಿ ಜಗದ್ಗುರುಗಳವರ ದಿವ್ಯ ಸಾನ್ನಿಧ್ಯದಲ್ಲಿ ಅಂದು ನಾಡಿನ ಮೂಲೆ-ಮೂಲೆಗಳಿಂದ ಆಗಮಿಸುವ ಅಸಂಖ್ಯಾತ ಭಕ್ತಾದಿಗಳು ಹಾಗೂ ಜರೀಮಲೆ ರಾಜವಂಶಸ್ಥರಿಂದ ಅತ್ಯಂತ ಭಕ್ತಿಪೂರ್ವಕವಾಗಿ ಶಿಖರಕ್ಕೆ ತೈಲವನ್ನು ಎರೆಯಲಾಯಿತು. ಈ ಕಾರ್ಯದಿಂದ ನಾಡಿನ ಜನತೆಗೆ ಬಂದೊಂದಗಿದ ಕಷ್ಟಕಾರ್ಪಣ್ಯಗಳು ನಿವಾರಣೆಯಾಗಿ ಸುಖ-ಶಾಂತಿ ನೆಲೆಸಲಿ ಎಂಬ ಆಶಯದೊಂದಿಗೆ ಹಾಗೂ ಶನಿದೋಷನಿವಾರಣೆಗೆ ಈ ಕಾರ್ಯವನ್ನು ನಡೆಸಲಾಗುತ್ತದೆ.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ಮೇ 14ರ ಮಂಗಳವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ವೀರಮಾಹೇಶ್ವರ ಜಂಗಮ ವಟುಗಳಿಗೆ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಹಾಗೂ ಧರ್ಮೋದೇಶ. ಮೇ 17ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ ನಡೆಯುತ್ತದೆ. ಕೊನೆ ದಿವಸ ಶ್ರೀ ಮರುಳಸಿದ್ಧೇಶ್ವರ ಸ್ವಾಮಿಗೆ ಆಘ್ರವಣೆ ನೀಡುವ ಮುಖೇನ ಕಂಕಣ ವಿಸರ್ಜನೆ ಹಾಗೂ ದೇವಾಲಯ ಶುದ್ಧೀಕರಣ ಮಾಡಲಾಗುತ್ತದೆ.

Continue Reading

ಮಳೆ

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Rain News : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರದಂದು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ (Rain News) ವರದಿ ಆಗಿದೆ. ಅತಿ ಹೆಚ್ಚು ಮಳೆಯು ಪುತ್ತೂರು ಹಾಗೂ ರಾಯಚೂರಿನಲ್ಲಿ ತಲಾ 10 ಸೆಂ.ಮೀ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉಪ್ಪಿನಂಗಡಿ 9, ಸಿರಾ ಮತ್ತು ಕೊಟ್ಟಿಗೆಹಾರದಲ್ಲಿ ತಲಾ 8 ಸೆಂ.ಮೀ, ಗಬ್ಬೂರು, ಬೆಳಗಾವಿಯಲ್ಲಿ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಗರಿಷ್ಠ ಉಷ್ಣಾಂಶ ರಾಯಚೂರಿನಲ್ಲಿ 39.4 ಡಿ. ಸೆ ದಾಖಲಾಗಿದೆ.

ಕಾಸರಗೋಡಿನಲ್ಲಿ ಗಾಳಿ ಮಳೆಗೆ ನೆಲಕ್ಕುರುಳಿದ ಬೃಹತ್ ಹೋರ್ಡಿಂಗ್‌

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೇರಳದ ಕಾಸರಗೋಡಿನ ಬಸ್ ನಿಲ್ದಾಣ ಬಳಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್‌ ನೆಲಕ್ಕುರುಳಿದ ಘಟನೆ ನಡೆದಿದೆ. ಹೋರ್ಡಿಂಗ್‌ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಹೋರ್ಡಿಂಗ್‌ ಬಿದ್ದು ಕೆಳಗಡೆ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದೆ. ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಜಾಗದಲ್ಲಿ ಜನರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಹಾಸನದಲ್ಲಿ ಉರುಳಿ ಬಿದ್ದ ಮರ

ಹಾಸನ ಜಿಲ್ಲೆಯ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮರವೊಂದು ಉರುಳಿ ಬಿದ್ದಿತ್ತು. ಪರಿಣಾಮ ಎರಡು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಗೆ ಮರ ಬಿದ್ದಿತ್ತು. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಸ್ಥಳಕ್ಕಾಗಮಿಸಿ ಟ್ರಾಫಿಕ್‌ ಪೊಲೀಸರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿದರು.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮಳೆ ಜತೆಗೆ 60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಬಿರುಗಾಳಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ,ಗದಗದಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka Rain Effected
ಬೆಂಗಳೂರು3 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Viral Video
ವೈರಲ್ ನ್ಯೂಸ್5 mins ago

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Salman Khan
ಬಾಲಿವುಡ್14 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

RCB Vs CSK
ಕ್ರೀಡೆ16 mins ago

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

bomb hoax bengaluru
ಕ್ರೈಂ46 mins ago

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Team India Coach
ಕ್ರಿಕೆಟ್60 mins ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ1 hour ago

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ1 hour ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

HD Deve gowda prajwal revanna case
ಪ್ರಮುಖ ಸುದ್ದಿ2 hours ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Thailand Open
ಕ್ರೀಡೆ2 hours ago

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effected
ಬೆಂಗಳೂರು3 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ7 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ17 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ17 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ17 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ18 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ18 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

ಟ್ರೆಂಡಿಂಗ್‌