Vijayanagara News: ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಸಚಿವ ಜಮೀರ್ ಅಹ್ಮದ್ - Vistara News

ವಿಜಯನಗರ

Vijayanagara News: ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಸಚಿವ ಜಮೀರ್ ಅಹ್ಮದ್

Vijayanagara News: ವಿಜಯನಗರ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಬರಗಾಲ ನಿರ್ವಹಣೆ ಕುರಿತು ಶುಕ್ರವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

VISTARANEWS.COM


on

Minister Zameer Ahmed Khan spoke in the meeting about the progress review and drought management of Vijayanagar district
ವಿಜಯನಗರ ಜಿಲ್ಲೆಯ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ (Drinking Water) ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದರು.

ವಿಜಯನಗರ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಬರಗಾಲ ನಿರ್ವಹಣೆ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ, ನಗರ ಪ್ರದೇಶಗಳ ವಾರ್ಡ್‌ಗಳಲ್ಲಿ ಕನಿಷ್ಠ 2 ಬೋರ್‌ವೆಲ್‌ಗಳು ಇರಬೇಕು. ಗ್ರಾಮೀಣ ಪ್ರದೇಶಗಳಲ್ಲಿಯೂ ಜನರ ಸಂಖ್ಯೆಗನುಗುಣವಾಗಿ ಬೋರ್‌ವೆಲ್‌ ಕೊರೆಯಿಸಿ. ಒಟ್ಟಾರೆ ಕುಡಿಯುವ ನೀರಿಗಾಗಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ತೀವ್ರ ಬರ ಆವರಿಸಿದ್ದು, ಜಾನುವಾರುಗಳಿಗೆ ಮೇವು ಕೊರತೆಯಾಗದಿರಲಿ. ಈ ಹಿನ್ನಲೆಯಲ್ಲಿ ತಾತ್ಕಾಲಿಕ ಗೋಶಾಲೆಗಳು, ಸಮರ್ಪಕವಾಗಿ ಮೇವು ಪೂರೈಕೆಗೆ ಪಶು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: Rishabh Pant : ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಿಷಭ್ ಪಂತ್, ಅಕ್ಷರ್ ಪಟೇಲ್

ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ ಮಾತನಾಡಿ, ಹೊಸಪೇಟೆ ತಾಲೂಕಿನ ಹಂಪಿ ಸೇರಿದಂತೆ ವಿವಿಧ ಗ್ರಾಮಗಳು ಕೆನಲ್ ಮೂಲಕವೇ ನೀರನ್ನು ಅವಲಂಬಿಸಿವೆ. ಪ್ರಸ್ತುತ ತೀವ್ರ ಬರ ಆವರಿಸಿದ್ದರಿಂದ ನೀರಿಗಾಗಿ ಸಮಸ್ಯೆಯಾಗಲಿದ್ದು, ಅಂತಹ ಗ್ರಾಮಗಳಲ್ಲಿ ಬೋರ್‌ವೆಲ್ ಕೊರೆಯಿಸಿ, ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ, ಕೂಡ್ಲಿಗಿ ತಾಲೂಕಿನ ಕೆಲವೆಡೆ ಅಕ್ರಮ ಮದ್ಯ ಮಾರಾಟದಿಂದಾಗಿ ಅಪ್ರಾಪ್ತರು ಸಹ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದೆ. ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಹರಪನಹಳ್ಳಿ ತಾಲೂಕಿನಲ್ಲಿ ಶಾಲೆಯ ಮತ್ತು ದೇವಸ್ಥಾನದ ಹತ್ತಿರ ಎಂ.ಎಸ್.ಎಲ್ ಮದ್ಯದ ಅಂಗಡಿ ಇದ್ದು, ಇದರಿಂದ ಶಾಲಾ ಮಕ್ಕಳು ಹಾಗೂ ದೇವಸ್ಥಾನಕ್ಕೆ ಹೋಗಿಬರುವ ಮಹಿಳೆಯರು, ಹೆಣ್ಣು ಮಕ್ಕಳಿಗೆ ಸಮಸ್ಯೆಯಾಗುತ್ತಿದ್ದು, ಕೂಡಲೇ ಈ ಮದ್ಯದ ಅಂಗಡಿ ಸ್ಥಳಾಂತರವಾಗಬೇಕು ಎಂದು ತಿಳಿಸಿದರು.‌

ಇದನ್ನೂ ಓದಿ: AUS vs ENG: ಬಲಿಷ್ಠ ಆಸೀಸ್​ ಮಣಿಸಿ ಸೆಮಿ ರೇಸ್​ನಲ್ಲಿ ಉಳಿಯುವುದೇ ಇಂಗ್ಲೆಂಡ್​?

ಈ ವೇಳೆ ಮಾತನಾಡಿದ ಸಚಿವರು, ಅಕ್ರಮ ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಶಾಲೆ ಹಾಗೂ ದೇವಸ್ಥಾನಗಳ ಹತ್ತಿರವಿರುವ ಮದ್ಯದ ಅಂಗಡಿಗಳ ಸ್ಥಳಾಂತರಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ಜಿಲ್ಲೆಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಯೋಜನೆಯನ್ನು ರೂಪಿಸಲಾಗಿದೆ. ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಲಾಗಿದೆ. ಹೊಸದಾಗಿ ಬೋರ್‌ವೆಲ್ ಕೊರೆಯಿಸಲು ಅಥವಾ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಪೂರೈಕೆಗೆ ಗ್ರಾ.ಪಂ.ಗಳಲ್ಲಿ 15ನೇ ಹಣಕಾಸು ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ಬರ ನಿರ್ವಹಣೆಗಾಗಿ ತಾಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ. ಜಾನುವಾರುಗಳಿಗೆ ಯಾವುದೇ ರೀತಿಯ ಮೇವಿನ ಕೊರತೆಯಾಗದಂತೆ ಪಶು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Kangana Ranaut: ಲೋಕಸಭೆ ಚುನಾವಣೆಯಲ್ಲಿ ಕಂಗನಾ ರಣಾವತ್‌ ಸ್ಪರ್ಧೆ; ಯಾವ ಪಕ್ಷ?

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Vijayanagara News: ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಮದಲ್ಲಿರುವ ಗೋಶಾಲೆಗೆ ವಿಜಯನಗರ ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಅವರು ಸೂಚಿಸಿದರು.

VISTARANEWS.COM


on

AC visited Gandabommanahalli Goshala and inspected
Koo

ಕೂಡ್ಲಿಗಿ: ತಾಲೂಕಿನ ಗುಡೆಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಮದಲ್ಲಿರುವ ಗೋಶಾಲೆಗೆ ವಿಜಯನಗರ ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ಭೇಟಿ ನೀಡಿ, ಪರಿಶೀಲನೆ (Vijayanagara News) ನಡೆಸಿದರು.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

ಗಂಡಬೊಮ್ಮನಹಳ್ಳಿಯಲ್ಲಿ ಈಗಾಗಲೆ ಮೇವು ಬ್ಯಾಂಕ್‌ ಸ್ಥಾಪಿಸಲಾಗಿದ್ದು, ಜಾನುವಾರುಗಳಿಗೆ ಅಗತ್ಯವಿರುವ ಮೇವು ದಾಸ್ತಾನು ಮಾಡಲಾಗಿದೆ. ಗೋಶಾಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು, ನೀರು, ನೆರಳಿನ ವ್ಯವಸ್ಥೆಯನ್ನು ಕೈಗೊಂಡಿರುವ ಕುರಿತು ಅವರು ಪರಿಶೀಲನೆ ನಡೆಸಿದರು.

ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದ ಅವರು, ಗೋಶಾಲೆಗೆ ಅವಶ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

ಈ ಸಂದರ್ಭದಲ್ಲಿ ತಹಸೀಲ್ದಾರ್ ರಾಜು ಪಿರಂಗಿ, ತಾಪಂ ಇಒ ವೈ. ರವಿಕುಮಾರ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಲೋಹಿತ್ ಕುಮಾರ್‌, ಉಪ ತಹಸೀಲ್ದಾರ್ ಕೊಟ್ರಮ್ಮ, ಕಂದಾಯ ನಿರೀಕ್ಷಕ ಚೌಡಪ್ಪ, ಸಿಬ್ಬಂದಿಗಳಾದ ಯಶ್ವಂತ್, ವೀರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕ್ರೈಂ

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

theft Case : ಪ್ರತ್ಯೇಕ ಕಡೆಗಳಲ್ಲಿ ಕಳ್ಳರು ಕೈಚಳಕ ತೋರಿಸಿ ಪರಾರಿ ಆಗಿದ್ದಾರೆ. ಬೆಂಗಳೂರಲ್ಲಿ ಕಳ್ಳನೊಬ್ಬ ತುಪ್ಪ ಕದ್ದರೆ, ಕಲಬುರಗಿಯಲ್ಲಿ ಪೊಲೀಸರ ಬಸ್‌ನ್ನೇ ಎಗರಿಸಲು ಹೋಗಿ ಲಾಕ್‌ ಆಗಿದ್ದಾನೆ. ಹಾವೇರಿಯಲ್ಲಿ ಮನೆಗಳ್ಳತನ, ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನವಾಗಿದೆ. ವಿಜಯನಗರದಲ್ಲಿ ಮನೆ ಮಾಲೀಕರು ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳತನವಾಗಿದೆ.

VISTARANEWS.COM


on

By

theft Case
Koo

ಬೆಂಗಳೂರು/ಕಲಬುರಗಿ: ಚಾಲಾಕಿ ಕಳ್ಳರು (Theft Case) ಹೇಗೆಲ್ಲ ಯಮಾರಿಸುತ್ತಾರೆ ಎಂಬುದಕ್ಕೆ ಈ ಪ್ರಕರಣಗಳೇ ಸಾಕ್ಷಿ.. ಬೆಂಗಳೂರಿನ ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಚಾಲಾಕಿ ಕಳ್ಳನೊಬ್ಬ ಕೈಚಳಕ ತೋರಿದ್ದಾನೆ. ಪೇಡ ಖರೀದಿ ನೆಪದಲ್ಲಿ ಬಂದು 15 ಕೆ.ಜಿ ತುಪ್ಪವನ್ನು ಕದ್ದೊಯ್ದಿದ್ದಾನೆ.

ನಂದಿನಿ ಪಾರ್ಲರ್‌ಗೆ ಬಂದ ಕಳ್ಳನೊಬ್ಬ ಮನೆಯಲ್ಲಿ ಫಂಕ್ಷನ್ ಇದೆ. ಹದಿನೈದು ಕೆ.ಜಿ ತುಪ್ಪ ಕೊಡಿ ಎಂದಿದ್ದ. ಖರೀದಿಸಿದ 15 ಕೆಜಿ ತುಪ್ಪವನ್ನು ಬ್ಯಾಗ್‌ಗೆ ಹಾಕಿಕೊಂಡು. ನಂತರ ಅಂಗಡಿ ಮಾಲೀಕನಿಗೆ ಪೇಡ ಕೊಡಿ ಎಂದಿದ್ದ. ಅಷ್ಟೇ ಅಂಗಡಿ ಮಾಲೀಕ ಪೇಡ ಕೊಡಲು ತಿರುಗಿದಾಗ 15 ಕೆಜಿ ತುಪ್ಪದ ಬ್ಯಾಗ್‌ ಜತೆ ಎಸ್ಕೇಪ್ ಆಗಿದ್ದಾನೆ. ಪೇಡದೊಂದಿಗೆ ಬಂದ ಮಾಲೀಕ ಗ್ರಾಹಕ ಇಲ್ಲದೆ ಇರುವುದನ್ನು ಗಮನಿಸಿ ಓಡಿದ್ದಾನೆ. ಆದರೆ ಕಳ್ಳನ ಪತ್ತೆಯಾಗಿಲ್ಲ. ಚಾಲಾಕಿ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಅಂಗಡಿ ಮಾಲೀಕ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಲಬುರಗಿಯಲ್ಲಿ ಸಿಎಆರ್ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನ

ಪೊಲೀಸ್ ಕಮಿಷನರ್ ಕಛೇರಿಯಲ್ಲಿ ನಿಲ್ಲಿಸಿದ್ದ ಸಿಎಆರ್‌ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಛತ್ತಿಸ್‌ಘಡ ಮೂಲದ ಸೋನು ಭಗಿರಥ ಎಂಬಾತ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ. ಸೋಮವಾರ ಮಧ್ಯರಾತ್ರಿ ಕುಡಿದ ನಶೆಯಲ್ಲಿ ಕಮಿಷನರ್ ಕಚೇರಿಗೆ ಬಂದಿದ್ದಾನೆ. ಬಸ್‌ನ ಕಿಟಕಿಯಲ್ಲಿ ನೇತು ಹಾಕಿದ್ದ ಪೊಲೀಸ್ ಕಾನ್ಸಟೇಬಲ್ ಜೇಬಿಗೆ ಕೈ ಹಾಕಿ ಬಸ್‌ ಕೀ ತೆಗೆದುಕೊಂಡಿದ್ದ.

ಬಳಿಕ ಡ್ರೈವರ್‌ ಸೀಟ್‌ ಏರಿದ ಕುಡುಕ ಸೋನು ಬಸ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಮಧ್ಯರಾತ್ರಿ ಬಸ್‌ ಸೌಂಡ್‌ ಕೇಳಿ ಎಚ್ಚೆತ್ತುಕೊಂಡ ಪೊಲೀಸ್ ಕಾನ್ಸಟೇಬಲ್ ತಕ್ಷಣ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಹಾವೇರಿಯಲ್ಲಿ ಕಳ್ಳರ ಕೈಚಳಕ

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಹಾನಗಲ್ ಪಟ್ಟಣದ ಕೆಎಚ್‌ಬಿ ಕಾಲೋನಿಯ ವಿರೇಶ ಬಾಳಗೊಂಡರ ಹಾಗೂ ಕುಮಾರೇಶ್ವರ ನಗರದ ರವೀಂದ್ರ ಶಿರಗೋಡ ಎನ್ನುವರ ಮನೆಯಲ್ಲಿ ಕಳ್ಳತನವಾಗಿದೆ. ಸ್ಥಳಕ್ಕೆ ಹಾನಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರವೀಂದ್ರ ಮನೆಯಲ್ಲಿ 8 ತೊಲೆ ಬಂಗಾರ, ನಗದು ಹಾಗೂ ವಿರೇಶ ಮನೆಯಲ್ಲಿ 12 ತೊಲೆ ಬಂಗಾರ 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ.

ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನ

ಬೆಂಗಳೂರಿನ ವಿವಿಧೆಡೆ ಸರಣಿ ಮೊಬೈಲ್‌ ಕಳ್ಳತನ‌ ನಡೆಸುತ್ತಿದ್ದ ಕಳ್ಳನ‌ ಬಂಧನವಾಗಿದೆ. ಸೈಯದ್ ಪರ್ವೀಜ್@ಪರ್ವೀಜ್(25) ಬಂಧಿತ ಆರೋಪಿಯಾಗಿದ್ದಾನ. ರಸ್ತೆ ಬದಿಯಲ್ಲಿ ಮೊಬೈಲ್‌ನಲ್ಲಿ ಮಾತಾನಾಡಿಕೊಂಡು ಹೋಗುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಸೈಯದ್‌ ಬೈಕ್‌ನಲ್ಲಿ ಬಂದು ಮೊಬೈಲ್ ಎಗರಿಸುತ್ತಿದ್ದ.

theft Case

ಆರೋಪಿಯಿಂದ ಒಟ್ಟು 5ಲಕ್ಷ ರೂ. ಬೆಲೆಬಾಳುವ 9 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸುತ್ತಿದ್ದ ಸುಜುಕಿ ಆಕ್ಸೆಸ್ ಮತ್ತು ಟಿವಿಎಸ್ ಎನ್ಟಾರ್ಕ್ ವಾಹನವನ್ನು ವಶಕ್ಕೆ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ, ಜೆಪಿ ನಗರ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಕಳ್ಳತನ ನಡೆಸುತ್ತಿದ್ದ. ಈ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯನಗರದಲ್ಲಿ ಮನೆ ಮೇಲೆ ಮಲಗಿದ್ದಾಗ ಕಳ್ಳತನ

ವಿಪರೀತ ಸೆಕೆ ಎಂದು ಮನೆ ಮಾಲೀಕರು ರಾತ್ರಿ ಮನೆಯ ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳನೊಬ್ಬ ಮನೆಗೆ ಕಳ್ಳತನ ಮಾಡಿದ್ದಾನೆ. ವಿಜಯನಗರದ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರದೀಪ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಒಂದೂವರೇ ತೊಲೆ ಬಂಗಾರ, 1 ಲಕ್ಷ ರೂ. ಹಣ, 750 ಗ್ರಾಂ ಬೆಳ್ಳಿ ಕಳ್ಳತನವಾಗಿದೆ. ಹೊಸಪೇಟೆಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳದಿಂದಲೂ ಪರಿಶೀಲನೆ ನಡೆಸಿ ಪೊಲೀಸರು ಸಿಸಿಟಿವಿ ಫುಟೇಜ್ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
ಕ್ರೀಡೆ8 seconds ago

IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

hd deve gowda birthday
ಪ್ರಮುಖ ಸುದ್ದಿ50 seconds ago

HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

Gurucharan Singh returns home after almost a month
ಕಿರುತೆರೆ22 mins ago

Gurucharan Singh: ಕಾಣೆಯಾಗಿದ್ದ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ ಮತ್ತೆ ಮನೆಗೆ ವಾಪಸ್‌!

Pavithra Jayaram Last Instagram post to chandrakanth
South Cinema43 mins ago

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Aiden Markram
ಪ್ರಮುಖ ಸುದ್ದಿ44 mins ago

Aiden Markarm : ವಿಂಡೀಸ್ ವಿರುದ್ಧದ ಸರಣಿಗೆ ದ. ಆಫ್ರಿಕಾ ತಂಡದಲ್ಲಿ ಮಾರ್ಕ್ರಮ್​​ಗೆ ಇಲ್ಲ ಚಾನ್ಸ್​

Fire Accident
ದೇಶ56 mins ago

Fire Accident: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಕೊಂಡ ಬೆಂಕಿ; 10 ಮಂದಿ ಭಕ್ತರ ಸಜೀವ ದಹನ

SSLC exam
ಪ್ರಮುಖ ಸುದ್ದಿ58 mins ago

SSLC Exam- 2: ಜೂ.14ರಿಂದ 2ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

t20 world cup
ಕ್ರಿಕೆಟ್1 hour ago

T20 World Cup : ಭಾರತ- ಪಾಕಿಸ್ತಾನ ಟಿ20 ವಿಶ್ವ ಕಪ್​ ಪಂದ್ಯದ ಟಿಕೆಟ್ ಬೆಲೆ 1.8 ಕೋಟಿ ರೂಪಾಯಿ!

drowned 4 death in kolhapur
ಕ್ರೈಂ1 hour ago

Drowned: ಬಟ್ಟೆ ತೊಳೆಯಲು ಹೋಗಿ ನಾಲ್ವರು ಜಲ ಸಮಾಧಿ

Virat kohli
ಪ್ರಮುಖ ಸುದ್ದಿ2 hours ago

Virat kohli : ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ13 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌