Vijayanagara News: ಸರ್ವ ಶ್ರೇಷ್ಠ ಭಾರತಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು: ಚಕ್ರವರ್ತಿ ಸೂಲಿಬೆಲೆ - Vistara News

ವಿಜಯನಗರ

Vijayanagara News: ಸರ್ವ ಶ್ರೇಷ್ಠ ಭಾರತಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು: ಚಕ್ರವರ್ತಿ ಸೂಲಿಬೆಲೆ

Vijayanagara News: ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಗದ್ದುಗೆಗೆ ಏರಿಸಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಮನವಿ ಮಾಡಿದ್ದಾರೆ.

VISTARANEWS.COM


on

Chakravarthi sulibele spoke in Namo Bharat programme at Kudligi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೂಡ್ಲಿಗಿ: ಸರ್ವ ಶ್ರೇಷ್ಠ ಭಾರತಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Vijayanagara News) ಹೇಳಿದರು.

ಪಟ್ಟಣದ ತರುಳಬಾಳು ಶಾಲೆಯ ಆವರಣದಲ್ಲಿ ನಮೋ ಬ್ರಿಗೇಡ್ ವತಿಯಿಂದ ಬುಧವಾರ ಏರ್ಪಡಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Water supply : ಮುಕ್ಕಾಲು ಬೆಂಗಳೂರಲ್ಲಿ ಕುಡಿಯುವ ನೀರು ಸ್ಥಗಿತ; ಯಾವಾಗ? ಎಲ್ಲೆಲ್ಲಿ ವ್ಯತ್ಯಯ

ಕಳೆದ 60 ವರ್ಷಗಳಿಂದ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಅನ್ಯಧರ್ಮೀಯರಿಂದ ಅಕ್ರಮಣಗಳು ನಡೆಯುತ್ತಲೇ ಇದೆ. ಸಹಿಷ್ಣು ಹಿಂದೂಗಳು ಈ ದಬ್ಬಾಳಿಕೆಯನ್ನು ಸಹಿಸಿಕೊಳ್ಳುತ್ತಲೇ ಬಂದಿದ್ದಾರೆ. ನಮ್ಮ ತಾಳ್ಮೆಯನ್ನು ಯಾರು ಕೂಡ ದೌರ್ಬಲ್ಯ ಎಂದು ಭಾವಿಸಿಕೊಳ್ಳಬಾರದು. ನಮ್ಮ ದೇಶದ ರಾಷ್ಟ್ರೀಯತೆಗಾಗಿ ಹಿಂದೂಗಳು ಒಂದಾಗುವ ಅನಿವಾರ್ಯತೆ ಬಂದಾಗಿದೆ ಎಂದ ಅವರು, ಭರತ ಭೂಮಿಯಲ್ಲಿ ರಾಮನ ಮಂದಿರ ನಿರ್ಮಾಣ ಮಾಡಲಿಕ್ಕೆ ಪ್ರಧಾನಿ ಮೋದಿಯೇ ಬರಬೇಕಾಯಿತು ಎಂದರು.

ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಗದ್ದುಗೆಗೆ ಏರಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Byju Raveendran: ಬೈಜು ರವೀಂದ್ರನ್‌ಗೆ ಲುಕ್‌ಔಟ್‌ ನೋಟೀಸ್;‌ ಬೈಜು ಕಚೇರಿಯ ಟಿವಿ ಕಿತ್ತೊಯ್ದ ಪೋಷಕರು!

ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಮಾಜಿ ಜಿಪಂ ಅಧ್ಯಕ್ಷೆ ಪಿ.ದೀನಾ ಮಂಜುನಾಥ, ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗರಾಜ, ಕಾರ್ಯದರ್ಶಿ ಮಂಜುನಾಥ ನಾಯಕ, ಸೂರ್ಯಪಾಪಣ್ಣ, ಬಿ.ಎಸ್.ಆನಂದ ಬಾಬು, ಅಜೇಯ್ ನಿರ್ಕಲ್, ಭರತ್ ಜೂಗಲ್, ಗುಳಿಗೆ ವೀರೇಂದ್ರ, ನಮೋ ಬ್ರಿಗೇಡ್‌ನ ಕೆ.ಎಚ್.ಎಂ.ಸಚಿನ್ ಕುಮಾರ್, ಮಣಿಕಂಠ, ವಿನಯ್, ದಯಾನಂದ ಸಜ್ಜನ್, ಶ್ಯಾವಿ ಕಿಶೋರ, ಕೃಷ್ಣ, ವಿವೇಕ, ಗಂಗಾಧರ, ಸಪ್ತಗಿರಿ ಸೇರಿದಂತೆ ನೂರಾರು ಕಾರ್ಯರ್ತರು, ಇತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಳ್ಳಾರಿ

Lok Sabha Election 2024: ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮತದಾನ

Lok Sabha Election 2024: ಸಂಡೂರಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮಂಗಳವಾರ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಕುಟುಂಬ ಸದಸ್ಯರ ಜತೆ ಆಗಮಿಸಿ, ಮತದಾನ ಮಾಡಿದರು.

VISTARANEWS.COM


on

Ballari Lok Sabha constituency Congress candidate e Tukaram voting in Sandur
Koo

ಸಂಡೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಅವರು ಮಂಗಳವಾರ ಸಂಡೂರಿನಲ್ಲಿ ಮತದಾನ (Lok Sabha Election 2024) ಮಾಡಿದರು.

ಸಂಡೂರಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಕುಟುಂಬ ಸದಸ್ಯರ ಜತೆ ಆಗಮಿಸಿ, ತಮ್ಮ ಹಕ್ಕು ಚಲಾಯಿಸಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮಾತನಾಡಿ, ಮತ ಚಲಾಯಿಸಿದ್ದು ಖುಷಿ ನೀಡಿದೆ. ಭವ್ಯ ಭಾರತದ ಭವಿಷ್ಯ ನಿರ್ಧಾರ ಮಾಡುವ ಈ ಚುನಾವಣೆ ಮಹತ್ವದಾಗಿದೆ. ಜನರು ಈ ಬಾರಿ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಮತ್ತೊಂದು ಹೊಸ ಇತಿಹಾಸ ಬರೆಯಲಿದೆ ಎಂದು ಅವರು ತಿಳಿಸಿದರು.

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dogs Attack
ದೇಶ4 mins ago

Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

Covishield
ದೇಶ14 mins ago

Covishield: ಭಾರತದಲ್ಲಿ ಕೋವಿಶೀಲ್ಡ್‌ ಸೈಡ್‌ ಎಫೆಕ್ಟ್‌ನ ಎಲ್ಲ ಮಾಹಿತಿ ಬಹಿರಂಗ ಎಂದ ಕಂಪನಿ, ಉತ್ಪಾದನೆಯೂ ಸ್ಥಗಿತ!

RCB vs PBKS
ಕ್ರೀಡೆ35 mins ago

RCB vs PBKS: ಪಂಜಾಬ್​-ಆರ್​ಸಿಬಿ ಸೆಣಸಾಟ; ಸೋತವರು ಟೂರ್ನಿಯಿಂದ ಔಟ್​

Prajwal Revanna Case JDS delegation moves Womens Commission to arrest pen drive allottees
ಕ್ರೈಂ50 mins ago

Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

Zomato
ದೇಶ51 mins ago

Zomato: ಜೊಮ್ಯಾಟೊ ಹೊಸ ತಂತ್ರಜ್ಞಾನ; ಮನೆ ಹೊರಗೆ ಕಾಲಿಡುವ ಮುನ್ನ ಇದನ್ನು ನೋಡಲೇಬೇಕು!

Hindu population
ದೇಶ53 mins ago

Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

Rain News
ಪ್ರಮುಖ ಸುದ್ದಿ55 mins ago

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

BJP Karnataka State police issues notices to JP Nadda and Amit Malviya and BY Vijayendra
ಕ್ರೈಂ1 hour ago

BJP Karnataka: ಜೆ.ಪಿ. ನಡ್ಡಾ, ಅಮಿತ್‌ ಮಾಳವೀಯಾಗೆ ರಾಜ್ಯ ಪೊಲೀಸರ ನೋಟಿಸ್‌; 7 ದಿನದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

Sam Pitroda
ಪ್ರಮುಖ ಸುದ್ದಿ1 hour ago

Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Neeraj Chopra
ಕ್ರೀಡೆ2 hours ago

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ24 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌