Vijayanagara News : ವಿಜಯನಗರ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ - Vistara News

ವಿಜಯನಗರ

Vijayanagara News : ವಿಜಯನಗರ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

Vijayanagara News : ವಿಜಯನಗರ ಸಾಮ್ರಾಜ್ಯದಲ್ಲಿ ಹೊಸಪೇಟೆಯ ಸಣ್ಣಕ್ಕಿ ವೀರಭದ್ರೇಶ್ವರ ಏರಿಯಾವನ್ನು ವರದರಾಜಮ್ಮನ ಪಟ್ಟಣ ಎಂದು ಕರೆಯುತ್ತಿದ್ದರು. ಚಿನ್ನಾoಬಿಕೆಯ ನೆನಪಿಗಾಗಿ ಇಂದಿನ ಚಿತ್ತವಾಡಿಗಿಯನ್ನು ಚಿನ್ನಾಪುರ ಎಂತಲೂ, ಕೃಷ್ಣದೇವರಾಯನ ತಾಯಿ ನಾಗಲಾದೇವಿ ನೆನಪಿಗಾಗಿ ಈಗಿನ ನಾಗೇನಹಳ್ಳಿಯನ್ನು ನಾಗಲಾಪುರ ಎಂತಲೂ ಈಗ ದೊರಕಿರುವ ಶಾಸನಗಳಿಂದ ತಿಳಿದುಬರುತ್ತದೆ.

VISTARANEWS.COM


on

Vijayanagara News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ ಜಿಲ್ಲೆಯ (Vijayanagara News) ಹೊಸಪೇಟೆ ತಾಲೂಕಿನ ಮುದ್ದಾಪುರದ ಮುದ್ದಾಪುರ ಆಂಜನೇಯ ದೇಗುಲದ ಸಮೀಪದ ಮಾರ್ಗ ಮಧ್ಯೆದಲ್ಲಿ ಅಪರೂಪದ ಮಾಸ್ತಿಗಲ್ಲು ಮತ್ತು ಅಪೂರ್ಣವಾದ ಶಾಸನ ಕಲ್ಲನ್ನು ವಿಜಯನಗರ ತಿರುಗಾಟ ಸಂಶೋಧನ ತಂಡವು ಪತ್ತೆ ಮಾಡಿದೆ. ಈ ಮಾಸ್ತಿಕಲ್ಲನ್ನು ಚಿದಾನಂದ ಅವರ ಸಹಕಾರದಿಂದ ಕನ್ನಡ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಗೋವಿಂದ, ದೃಶ್ಯಕಲಾ ವಿಭಾಗದ ಡಾ. ಕೃಷ್ಣೆಗೌಡ, ಅಭಿವೃದ್ಧಿ ಅಧ್ಯಯನ ವಿಭಾಗದ ಡಾ. ಗೋವರ್ಧನ, ವಿಜಯಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಪ್ರಾಧ್ಯಾಪಕರಾದ ಡಾ. ಎಚ್. ತಿಪ್ಪೇಸ್ವಾಮಿ,  ಸಂಶೋಧಕಾರದ ಡಾ. ವೀರಾಂಜನೇಯ, ಎಚ್. ರವಿ ಅವರುಗಳು ಶೋಧಿಸಿದ್ದಾರೆ.

ಮಾಸ್ತಿಕಲ್ಲುಗಳು ಬಹುತೇಕವಾಗಿ ಮಹಿಳೆಯೊಬ್ಬರು ಕೈಯಲ್ಲಿ ನಿಂಬೆಹಣ್ಣು ಹಿಡಿದಿರುವ, ಇಲ್ಲವೇ ಕೈಯನ್ನು ಮೇಲೆ ಎತ್ತಿರುವ ಚಿತ್ರಣ ಕಂಡುಬರುವುದು ಸಹಜ. ಆದರೆ ಈ ಮಾಸ್ತಿಕಲ್ಲು ತುಂಬಾ ಅಪರೂಪ ಹಾಗೂ ವಿಶೇಷವಾಗಿದೆ. ಶೈವಧರ್ಮದ ಪ್ರತೀಕವಾದ ಈ ಮಾಸ್ತಿಕಲ್ಲು ಎರಡು ಹಂತದಲ್ಲಿ ಕೆತ್ತಲಾಗಿದೆ. ರಾಜ ಪರಿವಾರ, ರಾಜನ ಇಲ್ಲವೇ ಪಾಳೆಯಗಾರನ ಪತ್ನಿ ಅಥವಾ ಉಪಪತ್ನಿಯು ಸತಿ ಹೋಗಿರಬೇಕೆಂದು ತಿಳಿಬರುತ್ತದೆ. ಏಕೆಂದರೆ ಚಿತ್ರದಲ್ಲಿ ಕೆತ್ತಿರುವ ಮಹಿಳೆಯು ನಿಂತಿರುವ ಭಂಗಿಯಲ್ಲಿರುವುದು ತುಂಬಾ ವಿಶೇಷವಾಗಿದೆ. ತಲೆಗೆ ಕಿರೀಟವನ್ನು ಇರಿಸಿಕೊಂಡಿದ್ದಾಳೆ. ಹಾಗೇನೆ ನಡುವಿಗೆ ನಡುಪಟ್ಟಿ ಧರಿಸಿದ್ದಾಳೆ. ಇಳಿಬಿಟ್ಟ ಕಿವಿಯ ಓಲೆಯೂ ಕಾಣಸಿಗುತ್ತದೆ. ಹಾಗೇನೆ ಪಟ್ಟಿಯಾಕರದ ಸೀರೆಯನ್ನು ಧರಿಸಲಾಗಿದೆ ಮಾಸ್ತಿಕಲ್ಲನ್ನು ಯಾರೋ ನಿಧಿಕಳ್ಳರು ತುಂಡು ಮಾಡಿದ್ದಾರೆ ಎಂದು ತಂಡದ ಸದಸ್ಯರಾದ ಡಾ.ಗೋವಿಂದ ಅವರು ತಿಳಿಸಿದ್ದಾರೆ.

ಪುರಗಳ ನಾಮಕರಣ

ವಿಜಯನಗರ ಸಾಮ್ರಾಜ್ಯದಲ್ಲಿ ಹೊಸಪೇಟೆಯ ಸಣ್ಣಕ್ಕಿ ವೀರಭದ್ರೇಶ್ವರ ಏರಿಯಾವನ್ನು ವರದರಾಜಮ್ಮನ ಪಟ್ಟಣ ಎಂದು ಕರೆಯುತ್ತಿದ್ದರು. ಚಿನ್ನಾoಬಿಕೆಯ ನೆನಪಿಗಾಗಿ ಇಂದಿನ ಚಿತ್ತವಾಡಿಗಿಯನ್ನು ಚಿನ್ನಾಪುರ ಎಂತಲೂ, ಕೃಷ್ಣದೇವರಾಯನ ತಾಯಿ ನಾಗಲಾದೇವಿ ನೆನಪಿಗಾಗಿ ಈಗಿನ ನಾಗೇನಹಳ್ಳಿಯನ್ನು ನಾಗಲಾಪುರ ಎಂತಲೂ ಈಗ ದೊರಕಿರುವ  ಶಾಸನಗಳಿಂದ ತಿಳಿದುಬರುತ್ತದೆ. ಈಗ  ದೊರಕಿರುವ ಅಪ್ರಕಟಿತ ಶಾಸನವು ಸಹ ಮದ್ದಲಾಪುರ ಏರಿಯಾದಲ್ಲಿ ದೊರೆತಿರುವ ಶಾಸನವಾಗಿದೆ. ಮುದ್ದಾಲಾಪುರವು ಸಹ ಪುರಗಳ ಸಾಲಿನಲ್ಲಿ ಸೇರುತ್ತದೆ. ಇಲ್ಲಿ ದೊರಕಿರುವ  ಈ ಮಾಸ್ತಿಕಲ್ಲು 5 ಅಡಿ ಎತ್ತರ, 2 ಅಡಿ ಅಗಲವಾಗಿದೆ.

ಈಗಾಗಲೇ ಅಲ್ಲಲ್ಲಿ ದೊರಕಿರುವ ಶಾಸನಗಳಿಗಿಂತ ತುಂಬಾ ವಿಶೇಷವಾಗಿದೆ. ಅಲ್ಲದೇ ಸತಿಹೋಗಿರುವ ಮಹಿಳೆಯು ಯಾರೆಂಬುದು ತಿಳಿಯುತ್ತಿಲ್ಲವಾದರೂ, ಇದು ವಿಜಯನರ ಸಾಮ್ರಾಜ್ಯದ ಶೈಲಿಯನ್ನು ಹೋಲುತ್ತದೆ. ಸತಿ ಸಹಗಮನವಾದ ಮಹಿಳೆಯು ಸಹಗಮನ ಆಗಿರುವುದನ್ನು ಸೂಚಿಸುತ್ತದೆ. ಸತಿಹೋಗಿರುವ ಮಹಿಳೆಯ ಪಕ್ಕದಲ್ಲಿ ಪದ್ಮಾಸನದ ಭಂಗಿಯಲ್ಲಿ ಕುಳಿತಿರುವ ಮಹಿಳೆಯ ಎಡ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಂಡಿರುವಂತಿದೆ. ಇದರಿಂದ ಈ ಮಹಿಳೆಯು ಸತೀಹೋಗಿರಬೇಕೆಂದು ತಿಳಿದುಬರುತ್ತದೆ. ಬಹುತೇಕ ಶಾಸನಗಳಲ್ಲಿ ಸತಿಹೋದ ಇಲ್ಲವೇ ವೀರಗಲ್ಲುಗಳಲ್ಲಿ ಆಯಾ ಧರ್ಮದ ಮೂರ್ತಿ ಎದುರಿಗೆ ಕೈ ಮುಗಿದು ಕುಳಿತಿರುವ ಚಿತ್ರಣ ಕಂಡುಬರುತ್ತಿತ್ತು. ಆದರೆ ಇಲ್ಲಿ ಮೇಲ್ಭಾಗದಲ್ಲಿ ಶಿವನಲಿಂಗಾಕಾರದ ಚಿತ್ರವಿದೆ. ಇದರಿಂದ ಈ ಮಾಸ್ತಿಕಲ್ಲು ಶೈವ ಧರ್ಮವನ್ನು ಪ್ರತಿನಿಧಿಸುತ್ತದೆ ಎಂದು ತಂಡದ ಮತ್ತೋರ್ವ ಸದಸ್ಯರಾದ ಪ್ರೊ. ಎಚ್. ತಿಪ್ಪೇಸ್ವಾಮಿ ಅವರು ತಿಳಿಸಿದ್ದಾರೆ.

ಅಪೂರ್ಣ ಶಾಸನ ಕಲ್ಲು ಪತ್ತೆ

ಇದೇ ವೇಳೆ ಈ ಮಾಸ್ತಿಕಲ್ಲಿನ ಅನತಿ ದೂರದಲ್ಲಿಯೇ ಬೃಹದಾಕಾರದ ಅಪೂರ್ಣ ಶಿವಲಿಂಗ ಚಿತ್ರವುಳ್ಳ ಶಾಸನ ಕಲ್ಲು ಪತ್ತೆಯಾಯಿತು. 6 ಅಡಿ ಎತ್ತರ ಮತ್ತು 2 ಅಡಿ ಅಗಲವುಳ್ಳ ಶಾಸನಕಲ್ಲಿಗೆ ಯಾವುದೇ ಕೆತ್ತನೆಯು ಕಾಣಸಿಗಲಾರದು. ಆದರೂ ಈ ಕಲ್ಲಿನ ಮೇಲ್ಭಾಗದ ಎಡಕ್ಕೆ ಸೂರ್ಯನ, ಬಲಕ್ಕೆ ಚಂದ್ರನ ಚಿತ್ರವಿದೆ. ಇದರ ಕೆಳಗೆ ಸುಂದರವಾದ ಶಿವಲಿಂಗ ಚಿತ್ರವನ್ನು ಕೆತ್ತಲಾಗಿದೆ. ಇಂತಹ ಅಪರೂಪದ ಕಲ್ಲುಗಳನ್ನು ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಯು ಸಂರಕ್ಷಣೆ ಮಾಡಬೇಕಾಗಿದೆ ಎಂದು ವಿಜಯನಗರ ತಿರುಗಾಟ ಸಂಶೋಧನ ತಂಡವು ಒತ್ತಾಯಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೃಹತ್‌ ಮರ ಧರೆಗುರುಳಿದ್ದು, ಕಾರು ಜಖಂಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ (Karnataka Rain) ಸುರಿಯುತ್ತಿರುವ ಕಾರಣ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ವರುಣ ಅಡ್ಡಿಯಾಗಿದ್ದಾನೆ. ಶೇಷಾದ್ರಿಪುರಂ, ಆರ್ ಆರ್ ನಗರ, ರಾಜಾಜಿನಗರ, ಗಾಂಧಿನಗರ, ಶಾಂತಿ ನಗರ, ಮೆಜೆಸ್ಟಿಕ್‌, ಕೆ.ಆರ್‌ ಮಾರುಕಟ್ಟೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.

Karnataka Rain
karnataka Rain

ಕೆಲಸ- ಕಾಲೇಜುಗಳಿಗೆ ಹೋಗುವವರಿಗೆ ಮಳೆರಾಯ ಶಾಕ್‌ ಕೊಟ್ಟಿದ್ದ. ಆಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನು ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rain
karnataka Rain

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಹಾಗೂ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಸೇರಿದಂತೆ ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮೇಲಿನ ಜಿಲ್ಲೆಗಳಿಗೆ ಮಂಗಳವಾರ ಹಾಗೂ ಬುಧವಾರ ಯೆಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

karnataka Rain
karnataka Rain

ಮಳೆಗೆ ಧರೆಗುರುಳಿದ ಮರ, ಅಂಡರ್‌ಪಾಸ್‌ ಜಲಾವೃತ

ರಾತ್ರಿ ಶುರುವಾದ ಮಳೆಯು ಬೆಳಗಾದರೂ ಬಿಟ್ಟಿಲ್ಲ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೆಜೆಸ್ಟಿಕ್ ರೈಲ್ವೆ ಅಂಡರ್ ಪಾಸ್‌ ಜಲಾವೃತಗೊಂಡಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಿದರು. ಬೆಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಎಚ್‌ಎಂಟಿ (HMT)ಲೇಔಟ್ ನಲ್ಲಿ ಬೃಹದಾಕಾರದ ಮರ ಧರೆಗುರುಳಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಮರ ಬಿದ್ದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. 3 ತಿಂಗಳ ಹಿಂದೆ ಮರ ತೆರವು ಮಾಡುವಂತೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಜಿಟಿ ಜಿಟಿ ಮಳೆಗೆ ಬೆಂಗಳೂರು ಕೂಲ್‌ ಕೂಲ್‌; ಮುಂದಿನ 4 ದಿನಗಳು ವರ್ಷಧಾರೆ

Karnataka Rain : ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯ ಸಿಂಚನವಾಗಲಿದೆ. ಸೋಮವಾರ ಬೆಳಗಿನಂದಲೇ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಾತಾವರಣ ಕೂಲ್‌ ಆಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಾತಾವರಣ ಕೂಲ್‌ ಆಗಿದೆ. ಮಲ್ಲೇಶ್ವರಂ, ಶಾಂತಿನಗರ, ಶಿವಾಜಿನಗರ, ಹೆಬ್ಬಾಳ, ಜಯನಗರ ಸೇರಿದಂತೆ ನಸುಕಿನ ಜಾವದಿಂದ ಮಳೆ ಶುರುವಾಗಿದೆ. ಹಲವೆಡೆ ಮಂಜಿ ಹೊದಿಕೆ ಇದ್ದು, ದಿನವಿಡಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಮುಂದಿನ ನಾಲ್ಕು ದಿನ ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

Road Accident in chikkmagaluru
Road Accident in chikkmagaluru

ಮಳೆಗೆ ರಸ್ತೆ ತಿರುವಿನಲ್ಲಿ ಟಿಟಿ ವಾಹನ ಪಲ್ಟಿ

ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಘಟನೆ ನಡೆದಿದೆ. ಟಿಟಿ ವಾಹನದಲ್ಲಿ ಬೆಂಗಳೂರಿನಿಂದ ಹೊರನಾಡಿಗೆ ಬಂದಿದ್ದರು. ಅನ್ನಪೂರ್ಣೇಶ್ವರಿ ದರ್ಶನ ಮುಗಿಸಿ ಹೊರಟಾಗ ಅವಘಡ ಸಂಭವಿಸಿದೆ. 15 ಜನ ಪ್ರಯಾಣಿಕರಲ್ಲಿ 9 ಜನರಿಗೆ ಗಾಯವಾಗಿದ್ದು ಕಳಸ, ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಳೆ ಹಾಗೂ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರದಲ್ಲೂ ಮಳೆಯಾಟ

ಬಂಗಾಳ ಕೊಲ್ಲಿ ಸೈಕ್ಲೋನ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ. ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ, ಆಂಧ್ರಪ್ರದೇಶದ ಗಡಿಗೆ ಹೊಂದಿರುವ ಕೋಲಾರದಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ಮಳೆ ಹೆಚ್ಚಾದರೆ ತೋಟಗಾರಿಕ ಬೆಳೆಗಳಾದ ಹೂ , ಬಿನ್ಸ್ ,ಟೊಮ್ಯಾಟೊ, ಜೋಳಕ್ಕೆ ಹಾನಿಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ನಿರಂತರ ಮಳೆಗೆ ಮನೆಗಳು ನೆಲಸಮ; ಕಾಲುವೆ ಒಡೆದು ಜಮೀನು ಜಲಾವೃತ

Karnataka Rain : ಭಾರಿ ವರ್ಷಧಾರೆಗೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಮನೆಗಳು ನೆಲಸಮವಾಗಿದ್ದು, ಕಾಲುವೆ ಒಡೆದು ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ವಿಜಯನಗರ : ವಿಜಯನಗರದ ಹರಪನಹಳ್ಳಿ ತಾಲೂಕಿನಲ್ಲಿ ಮಳೆಯ ಅವಾಂತರ (Karnataka Rain ) ಮುಂದುವರಿದಿದೆ. ಮಳೆಯಿಂದಾಗಿ 10ಕ್ಕೂ ಹೆಚ್ಚು ಮನೆಗಳು ಕುಸಿದಿದೆ. ಬಂಡ್ರಿ ತಾಂಡದಲ್ಲಿ ಕೊಟ್ರಿಬಾಯಿ, ಚಿಗಟೇರಿಯಲ್ಲಿ ಉತ್ತಂಗಿ ದೀಪ, ಹಗರಿಗಜಾಪುರದಲ್ಲಿ ಶಂಭುಲಿಂಗಯ್ಯ ಎಂಬುವವರ ಮನೆಗೆ ಹಾನಿಯಾಗಿದೆ, ಕೂಲಹಳ್ಳಿ ಗುರುವಿನ ಬಸವರಾಜ, ಬಸವನಾಳು ಗ್ರಾಮ ಕೊಟ್ರೇಶ್‍, ಶ್ರೀಕಂಠಾಪುರದಲ್ಲಿ ಅಣ್ಣಪ್ಪ, ಕುಣೆಮಾದಿಹಳ್ಳಿ, ದಡಿಗಾರನಹಳ್ಳಿ, ಕೆಸರಹಳ್ಳಿ ಗ್ರಾಮದಲ್ಲಿ ತಲಾ ಒಂದು ಮನೆ, ಚಿಗಟೇರಿ ಹೋಬಳಿ 6 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಲಕ್ಷ್ಮಿಪುರದಲ್ಲಿ ಸಿಡಿಲು ಬಡಿದು ಹಸು ಮೃತಪಟ್ಟಿದೆ. ಮಾದಾಪುರ ಗ್ರಾಮದಲ್ಲಿನ ಕೆರೆ ಕೋಡಿ ಬಿದ್ದಿದೆ. ಕೂಲಹಳ್ಳಿ ಗ್ರಾಮದ ಐತಿಹಾಸಿಕ ಕೆರೆ ಭರ್ತಿಯಾಗುವ ಹಂತದಲ್ಲಿದೆ. ಹರಪನಹಳ್ಳಿ ಅಯ್ಯನಕೆರೆ, ಕಾಯಕದಹಳ್ಳಿ ರಸ್ತೆಯ ನಾಯಕನಕೆರೆಗೆ ಮಳೆ ನೀರಿಂದ ಭರ್ತಿ ಹಂತಕ್ಕೆ ತಲುಪಿದೆ.

ಮಂಡ್ಯದಲ್ಲೂ ಮಳೆ ಅವಾಂತರ

ಸತತವಾಗಿ ಸುರಿದ ಮಳೆಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿ ಉಮರ್ ನಗರದ ರೈಲ್ವೆ ಅಂಡರ್ ಪಾಸ್ ಜಲಾವೃತಗೊಂಡಿದೆ. ಮಳೆ ನೀರಿನಿಂದ ರೈಲ್ವೆ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ.
ಮೈಸೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಲ್ಪಿಸುವ ಅಂಡರ್ ಪಾಸ್ ರಸ್ತೆ ಇದಾಗಿದೆ. ಅಂಡರ್ ಪಾಸ್ ರಸ್ತೆ ಜಲಾವೃತದಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಅಂಡರ್ ಪಾಸ್ ರಸ್ತೆ ದಾಟಲು ಬೈಕ್ ಸವಾರ ಪರದಾಡಿದರು. ಸಮಸ್ಯೆ ಸರಿಪಡಿಸಿದ ರೈಲ್ವೆ ಅಧಿಕಾರಿಗಳು ಹಾಗು ಹೆದ್ದಾರಿ ಪ್ರಾಧಿಕಾರದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೊಟ್ಟೂರು ಕೆರೆಯ ಕೋಡಿಯಲ್ಲಿ ಬಿರುಕು

ವಿಜಯನಗರದ ಕೊಟ್ಟೂರು ಕೆರೆಯ ಕೋಡಿಯಲ್ಲಿ ಬಿರುಕು ಬಿಟ್ಟಿದೆ. ನಿನ್ನೆ ರಾತ್ರಿ ಸಮೃದ್ಧ ಮಳೆಯಾಗಿ ಕೊಟ್ಟೂರು ಕೆರೆಗೆ ನೀರು ಬಂದಿದೆ. ಕೆರೆ ಕೋಡಿ ಬೀಳಲು ಇನ್ನೂ ಅರ್ಧ ಅಡಿ ನೀರು ಬರುವುದು ಬಾಕಿ ಇದೆ. ಇದೇ ರೀತಿ ಇನ್ನೆರಡು ಮಳೆಗಳು ಬಂದರೆ ಕೋಡಿ ಬೀಳಬಹುದು. ಈಗಾಗಲೇ ಕೊಡಿಯ ಗೋಡೆ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಹತ್ತಿದೆ. ಕೋಡಿ ತನ್ನ ಉದ್ದಕ್ಕೂ ಎಂಟು ಹತ್ತಿರ ಬಿರುಕು ಬಿಟ್ಟು ಇದರಿಂದ ನೀರು ಹೊರಗಡೆ ಹರಿಯುತ್ತಿದೆ. ಅದರಲ್ಲೂ ಕೋಡಿಯ ಪ್ರಮುಖ ಭಾಗದಲ್ಲಿ ನೀರು ಹೋಗುತ್ತದೆ. ಇದನ್ನು ಹೀಗೆ ಬಿಟ್ಟರೆ ಕೊಡಿಯೇ ಒಡೆದು ಹೋಗಿ ನೀರೆಲ್ಲಾ ಪೋಲಾಗುವುದು ಗ್ಯಾರಂಟಿ.

ವಿಜಯನಗರ ಜಿಲ್ಲೆಯಾದ್ಯಂತ‌ ರಾತ್ರಿಯಿಡೀ ಧಾರಾಕಾರ ಮಳೆಯಾಗಿದೆ. ಭಾರೀ‌‌ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ನೀರು ನುಗ್ಗಿ ಇಡೀ ಬಡಾವಣೆ ಕೆರೆಯಂತಾಗಿದೆ. 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ಜನರ ಪರದಾಡಿದರು. ದಿನಸಿ, ಕಿರಾಣಿ ವಸ್ತುಗಳು, ಸಂಪೂರ್ಣ ನೀರುಮಯವಾಗಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ವಿದ್ಯಾ ನಗರದಲ್ಲಿ ಘಟನೆ ನಡೆದಿದೆ. ಸಣ್ಣ ಕಾಲುವೆ ಮೂಲಕ ದೊಡ್ಡ ಕಾಲುವೆಗೆ ಸೇರಬೇಕಿದ್ದ ಮಳೆ‌ ನೀರು ಅವೈಜ್ಞಾನಿಕವಾಗಿ ಸಣ್ಣ ಕಾಲುವೆ ನಿರ್ಮಾಣ ಮಾಡಿದ ಹಿನ್ನೆಲೆ ಬಡಾವಣೆಗೆ ರಭಸವಾಗಿ ಹರಿದು ಬಂದು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗಿದೆ.

ಬೆಣ್ಣಿ ಹಳ್ಳದ ತೀರದಲ್ಲಿ ಭಾರಿ ಮಳೆ

ಗದಗ ಜಿಲ್ಲೆಯ ರೋಣ ತಾಲೂಕಿನ ಗ್ರಾಮದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕುರುಗೋವಿನಕೊಪ್ಪ ಗ್ರಾಮದಲ್ಲಿ 10 ಕುಟುಂಬದ 50 ಕ್ಕೂ ಹೆಚ್ಚು ಜನ ಸಿಲುಕಿ ಪರದಾಟ ಅನುಭವಿಸಿದರು. ಕುರುಗೋವಿನಕೊಪ್ಪ ಗ್ರಾಮ ಸುತ್ತುವರಿದ ಮಲಪ್ರಭಾ ನದಿ ನಡುಗಡ್ಡೆಯಾಗಿದೆ. ಬೆಣ್ಣಿಹಳ್ಳ ಉಕ್ಕಿ ಹರಿದು ಮಲಪ್ರಭಾ ನದಿ ಸೇರಿ ಅವಾಂತರವೇ ಸೃಷ್ಟಿಯಾಗಿದೆ. ವೃದ್ಧರು, ಮಹಿಳೆಯರು, ಮಕ್ಕಳು ಸೇರಿ 50ಕ್ಕೂ ಹೆಚ್ಚು ಜನರು ಗ್ರಾಮದಲ್ಲಿ ಸಿಲುಕಿ ಪರದಾಡಿದ್ದರು. ಎಮ್ಮೆ, ಆಕಳು ಸೇರಿದಂತೆ ಮೂಕ ಪ್ರಾಣಿಗಳು ಗ್ರಾಮದಲ್ಲಿ ಸಿಲುಕಿಕೊಂಡಿವೆ. ಕ್ಷಣ ಕ್ಷಣಕ್ಕೂ ಮಲಪ್ರಭಾ ನದಿ ನೀರು ಏರುತ್ತಿದೆ. ಗ್ರಾಮದಲ್ಲಿ ಸಿಲುಕಿದ ಜನರಲ್ಲಿ ಆತಂಕ ಹೆಚ್ಚಿದೆ.

ಹಾವೇರಿಯಲ್ಲಿ ವರುಣ ಆರ್ಭಟ

ಹಾವೇರಿ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಮಳೆಯ ರೌದ್ರನರ್ತನಕ್ಕೆ ತುಂಗಾ ಮೇಲ್ದಂಡೆ ಯೋಜನೆ ಕಾಲುವೆ ಒಡೆದು ಹೋಗಿದೆ. ಕಾಲುವೆ ಒಡೆದು ರೈತರ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಕಾಲುವೆ ಒಡೆದು ಎರಡು ದಿನ ಕಳೆದರು ದುರಸ್ತಿ ಕಾರ್ಯ ಆರಂಭವಾಗಿಲ್ಲ. ಕಾಲುವೆ ಸರಿಪಡಿಸಲು ಮುಂದಾಗದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕೊಚ್ಚಿ ಹೋದ ಸೇತುವೆ

ಕಳೆದ ನಾಲ್ಕು ದಿನಗಳಿಂದ ಸುರಿದ ಭಾರಿ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ಗ್ರಾಮಸ್ಥರು ಹಗ್ಗದ ಸಹಾಯದಿಂದ ಕೊಚ್ಚಿ ಹೋದ ಸೇತುವೆಯನ್ನು ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರವಾಡ ಜಿಲ್ಲೆಯ ಆಳ್ನಾವರ ತಾಲೂಕಿನ ಬೆಣಚಿ ಮತ್ತು ಬಾಲಗೇರಿ ಗ್ರಾಮದ ಮಧ್ಯ ಇರುವ ಸೇತುವೆ ಇದಾಗಿದೆ. ಸದ್ಯ ಸೇತುವೆ ಕೊಚ್ಚಿಹೋಗಿರೋದರಿಂದ ಬೆಣಚಿ ಮತ್ತು ಬಾಲಗೇರಿ ಗ್ರಾಮದ ಸಂಪರ್ಕ ಸ್ಥಗಿತಗೊಂಡಿದೆ. ಕಳೆದ 2019ರ ಪ್ರವಾಹದಲ್ಲಿ‌ ಸೇತುವೆ ಅರ್ಧ ಕೊಚ್ಚಿ ಹೋಗಿತ್ತು. ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಸಚಿವ ಸಂತೋಷ ಲಾಡ್ಗೆ‌ ಮನವಿ ಸಲ್ಲಿಸಿದ್ದರು. ಕಳೆದ 4 ದಿನಗಳಿಂದ ಸುರಿದ ಮಳೆಗೆ ಪೂರ್ತಿಯಾಗಿ ಸೇತುವೆ ಕೊಚ್ಚಿಹೋಗಿದೆ.

Continue Reading

ರಾಯಚೂರು

Road Accident : ರಾಯಚೂರಿನಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಸವಾರರಿಬ್ಬರು ಸಾವು

Road Accident : ರಾಯಚೂರಿನಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರರಿಬ್ಬರು ಮೃತಪಟ್ಟಿದ್ದಾರೆ. ಮೈಸೂರು-ಮಂಡ್ಯದಲ್ಲೂ ಅಪಘಾತ ಸಂಭವಿಸಿದೆ.

VISTARANEWS.COM


on

By

Road Accident
Koo

ರಾಯಚೂರಿನ ಹೊರವಲಯದ ವೈಟಿಪಿಎಸ್ ವಿದ್ಯುತ್ ಕೇಂದ್ರದ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಜನಾರ್ದನ (27) ಮೃತ ಬೈಕ್ ಸವಾರ, ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ರಾಯಚೂರು – ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಖಾಸಗಿ ಕಂಪನಿ ಉದ್ಯೋಗಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಡಿ ಓಡಿಸುವ ಸ್ಪರ್ಧೆಯಲ್ಲಿ ಅವಘಡ

ವಿಜಯನಗರ: ಬಂಡಿ ಓಡಿಸುವ ಸ್ಪರ್ಧೆಯಲ್ಲಿ ಎರಡು ಅವಘಡಗಳು ತಪ್ಪಿದೆ. ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಯುವಕ ಪಾರಾಗಿದ್ದಾನೆ. ರಭಸವಾಗಿ ಓಡೋ ಎತ್ತಿನ ಬಂಡಿಯಿಂದ ಕೆಳಗೆ ಬಿದ್ದ ಯುವಕ ರಸ್ತೆ ಮೇಲೆ ಜಾರಿಕೊಂಡು ಹೋಗಿದ್ದಾನೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತಗಳು ತಪ್ಪಿದೆ. ವಿಜಯದಶಮಿ ಹಬ್ಬದ ನಿಮಿತ್ತ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಬೆಲ್ಲದ ಬಂಡಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಬಂಡಿ ಓಡಿಸುವ ಸ್ಪರ್ಧೆ ವೇಳೆ ಎತ್ತುಗಳು ರಭಸವಾಗಿ ಓಡುತ್ತಿದ್ದಾಗ ರಸ್ತೆಯ ಬಂಡಿ ತಿವುದು ಮಾರುದ್ದ ಹಾರಿ ಯುವಕ ಬಿದ್ದಿದ್ದ. ಕೂದಲೆಳೆ ಅಂತರದಲ್ಲಿ ಎತ್ತಿನ ಬಂಡಿಯ ಚಕ್ರದಡಿಯಿಂದ ಪಾರಾಗಿದ್ದಾನೆ.

ಮೈಸೂರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ

ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆ ಪೂರ್ಣಚಂದ್ರ ತೇಜಸ್ವಿ ವೃತ್ತದಲ್ಲಿ ಅಪಘಾತ ನಡೆದಿದೆ. ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿ ಸವಾರರಿಗೆ ಗಂಭೀರ ಗಾಯವಾಗಿದೆ. ಭಾನುವಾರ ಮುಂಜಾನೆ ಇದೇ ವೃತ್ತದಲ್ಲಿ ಮತ್ತೊಂದು ಅಪಘಾತ ನಡೆದಿತ್ತು. ಇದೀಗ ಮತ್ತೊಂದು ಅಪಘಾತ ಸಂಭವಿಸಿದ್ದು, ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಕುಳಿತ್ತಿದ್ದ ಸವಾರರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದೆ. ಅವೈಜ್ಞಾನಿಕವಾಗಿ ಹಾಕಲಾಗಿರುವ ಡಿವೈಡರ್ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೈಕ್‌-ಕಾರು ಅಪಘಾತದಲ್ಲಿ ಕಾಲು ಮುರಿದುಕೊಂಡ ಸವಾರ

ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದ ಅಂಡರ್ ಪಾಸ್ ಬಳಿ ಅಪಘಾತ ನಡೆದಿದೆ. ಕಾರು-ಬೈಕ್ ನಡುವೆ ಅಪಘಾತದಿಂದ ಬೈಕ್ ಸವಾರನಿಗೆ ಕಾಲು ಮುರಿದಿದ್ದು, ಕಾರು ಚಾಲಕ ಗಾಯಗೊಂಡಿದ್ದಾರೆ. ಹಂಪ್ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Continue Reading
Advertisement
Karnataka Rain
ಮಳೆ16 ನಿಮಿಷಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

darshan fans Writer Nadoja G.R. Channabasappa
ಗದಗ44 ನಿಮಿಷಗಳು ago

Darshan Fans : ದರ್ಶನ ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ

Vijayanagara News
ವಿಜಯನಗರ51 ನಿಮಿಷಗಳು ago

Vijayanagara News : ವಿಜಯನಗರ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

Dina Bhavishya
ಭವಿಷ್ಯ6 ಗಂಟೆಗಳು ago

Dina Bhavishya : ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

This will be my last season as a host for BBK By Kichcha Sudeepa
ಬೆಂಗಳೂರು21 ಗಂಟೆಗಳು ago

Kiccha Sudeep: ಬಿಗ್‌ಬಾಸ್‌ಗೆ ಕಿಚ್ಚ ಸುದೀಪ್ ವಿದಾಯ; ಇದೊಂದೆ ರೀಸನ್‌ಗೆ ಹೊರಬಂದ್ರಾ ಬಾದ್‌ ಶಾ

BBMP
ಬೆಂಗಳೂರು23 ಗಂಟೆಗಳು ago

BBMP : ಬೆಂಗಳೂರು ಕಸ ವಿಲೇವಾರಿ ಮಾಡಲು 30 ವರ್ಷಕ್ಕೆ ಗುತ್ತಿಗೆ ನೀಡಲು ಸರ್ಕಾರದಿಂದ ಗ್ರೀನ್ ಸಿಗ್ನಲ್!

Karnataka Rain
ಮಳೆ1 ದಿನ ago

Karnataka Rain : ಜಿಟಿ ಜಿಟಿ ಮಳೆಗೆ ಬೆಂಗಳೂರು ಕೂಲ್‌ ಕೂಲ್‌; ಮುಂದಿನ 4 ದಿನಗಳು ವರ್ಷಧಾರೆ

murder case
ಬೆಂಗಳೂರು1 ದಿನ ago

Murder Case : ಕುಡಿದ ಅಮಲಿನಲ್ಲಿ ಬಾಟೆಲ್‌ನಿಂದ ಸ್ನೇಹಿತನ ಕುತ್ತಿಗೆ ಚುಚ್ಚಿ‌ ಕೊಲೆ ಮಾಡಿದ ಕುಚಿಕು ಗೆಳೆಯ

Dina Bhavishya
ಭವಿಷ್ಯ1 ದಿನ ago

Dina Bhavishya: ಈ ರಾಶಿಯವರು ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಮನೆಗಳು ನೆಲಸಮ; ಕಾಲುವೆ ಒಡೆದು ಜಮೀನು ಜಲಾವೃತ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌