Vijayanagara News: ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಅಭಿಯಾನ - Vistara News

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಅಭಿಯಾನ

Vijayanagara News: ಹೊಸಪೇಟೆ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಅಭಿಯಾನ ನಡೆಯಿತು.

VISTARANEWS.COM


on

Signature collection campaign for voting awareness
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಲೋಕಸಭಾ ಚುನಾವಣೆ-2024ರ (Lok Sabha Election) ಹಿನ್ನಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ವಕೀಲರ ಸಂಘದ ಸಹಯೋಗದಲ್ಲಿ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಅಭಿಯಾನ (Vijayanagara News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Exams Postponed: ಲೋಕಸಭಾ ಚುನಾವಣೆ ಹಿನ್ನೆಲೆ: ಪ್ರಮುಖ ಪರೀಕ್ಷೆಗಳ ದಿನಾಂಕ ಬದಲು; ಹೊಸ ವೇಳಾಪಟ್ಟಿ ಇಲ್ಲಿದೆ

ಅಭಿಯಾನಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಚಾಲನೆ ನೀಡಿದರು. ಬಳಿಕ ಮಾತನಾಡಿ, ಮತದಾನ ಮಾಡುವುದು ನಮಗೆಲ್ಲರಿಗೂ ಸಂವಿಧಾನ ಬದ್ಧವಾಗಿ ಬಂದಿರುವ ಹಕ್ಕಾಗಿದೆ. ಕಡ್ಡಾಯವಾಗಿ ಪ್ರತಿಯೊಬ್ಬರು ಮತದಾನ ಮಾಡಿ, ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Tumkur News: ಹಂಚಿಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

ಈ ಸಂದರ್ಭದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹೇಮಲತಾ ಬಿ. ಹುಲ್ಲೂರ, 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹಿಮಾನ್ ನಂದಗಡಿ, ಅಪರ ಹಿರಿಯ ಸಿವಿಲ್ ನ್ಯಾಯಧೀಶ ರಮೇಶ್‌ಬಾಬು ಬಿ.ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಷನ್ ಬಿ.ಮಾಡಲಗಿ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ತೃಪ್ತಿ ಧರಣಿ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂಜೀವ್‌ ಕುಮಾರ್ ಜಿ., 3ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಚೈತ್ರಾ ಜೆ., ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ಜಿಲ್ಲಾ ಪಂಚಾಯಿತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾ ಅಧಿಕಾರಿ ಪತ್ರಿಬಸಪ್ಪ ಎನ್.ಕೆ ಹಾಗೂ ವಕೀಲರು, ತಾಲೂಕು ಪಂಚಾಯಿತಿ ಸಿಬ್ಬಂದಿ, ನಗರಸಭೆ ಸಿಬ್ಬಂದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಮಳೆ

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Karnataka Weather Forecast : ಮಂಗಳವಾರ ಸಂಜೆ ಚಿಕ್ಕಮಗಳೂರು, ಕಾರವಾರ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಈ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆ‌ಯಾಗುತ್ತಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿತ್ತು. ಇನ್ನೂ ಗಾಳಿ ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ (Karnataka weather Forecast) ಸಾಧ್ಯತೆ ಇದೆ.

ಉತ್ತರಕನ್ನಡದಲ್ಲೂ ವರುಣಾರ್ಭಟ

ಉತ್ತರಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಸಿಯಲ್ಲಿ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆನಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Karnataka Rain: ಸೋಮವಾರ ರಾತ್ರಿ ಸುರಿದ ಮಳೆಗೆ (Heavy Rain) ಜನರು ಕಂಗಲಾಗಿದ್ದಾರೆ. ಹಲವೆಡೆ ಭಾರಿ ಮಳೆಗೆ (Karnataka Weather) ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

VISTARANEWS.COM


on

By

karnataka Rain Effected
Koo

ಬೆಂಗಗಳೂರು/ಬೆಳಗಾವಿ: ತಡರಾತ್ರಿ ಸುರಿದ ಮಳೆಯು (Karnataka Rain) ಅವಾಂತರವನ್ನೇ ಸೃಷ್ಟಿಸಿ ಮಾಡಿದೆ. ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಅಬ್ಬರಿಸಿದ ಮಳೆಗೆ (Rain News) ಮರಗಳು ಧರೆಗುರುಳಿದ್ದವು. ನೃಪತುಂಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎದುರಿಗೆ ಮರದ ಕೊಂಬೆ ನೆಲಕ್ಕೆ ಉರುಳಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಬುಕ್‌ಫೀಲ್ಡ್‌ನಲ್ಲಿ ಮರ ಬಿದ್ದು ಕಾರೊಂದು ಜಖಂಗೊಂಡಿತ್ತು. ಚಾಮರಾಜಪೇಟೆಯ ಗುಡ್ಡದಹಳ್ಳಿಯಲ್ಲಿ ಮನೆಗಳಿಗೆ ಕೆಸರುಮಯ ನೀರು ನುಗ್ಗಿದ್ದರಿಂದ ಹೊರಹಾಕಲು ಜನರು ತೊಂದರೆ ಅನುಭವಿಸಿದರು.

ಮೈಸೂರಿನಲ್ಲಿ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಮನೆ ಕುಸಿದು ಬಿದ್ದಿದ್ದು, ವಾಸ ಮಾಡಲು ಮನೆ ಇಲ್ಲದೆ ಭಾಗ್ಯಮ್ಮ ಕಣ್ಣೀರು ಹಾಕಿದರು. ಮನೆಯಲ್ಲಿ ಸುಮಾರು 6 ತಿಂಗಳು ಸಣ್ಣ ಮಗುವಿದ್ದು ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಬಿದ್ದು ಕುಟುಂಬವು ಕಂಗಲಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನಾಶವಾಗಿವೆ. ನಮಗೆ ಆದಷ್ಟು ಬೇಗ ಸರ್ಕಾರ ಪರಿಹಾರ ಮಾಡಿಕೊಡಬೇಕು ಎಂದು ಭಾಗ್ಯಮ್ಮ ಮನವಿ ಮಾಡಿದರು.

ವಿಜಯನಗರದಲ್ಲಿ ಮಳೆಗೆ ಬೆಳೆ ಹಾನಿ

ಕಳೆದ ರಾತ್ರಿ ಮಳೆ ಜೆತಗೆ ಬಿರುಗಾಳಿ ಬೀಸಿದ ಹಿನ್ನೆಲೆಯಲ್ಲಿ ಬಾಳೆ, ಭತ್ತ, ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ವಿಜಯನಗರದ ಹುರುಳಿಹಾಳ ಗ್ರಾಮದಲ್ಲಿ ಗಾಳಿ ಪ್ರಮಾಣ ಹೆಚ್ಚಿದರಿಂದ ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ಕಾನಾಹೊಸಹಳ್ಳಿ ಹೋಬಳಿಯ ಎಕ್ಕೆಗೊಂದಿ ಗ್ರಾಮದಲ್ಲಿ ರೇಷ್ಮೆ ಸಾಗಾಣೆ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಗುಡುಗು, ಮಿಂಚು ಸಿಡಿಲಿನ ಆರ್ಭಟ ಮಧ್ಯೆ ಸಾಧಾರಣ ಮಳೆ ವರದಿಯಾಗಿದೆ.

ಧರೆಗುರುಳಿದ ಮರಗಳು

ಚಿಕ್ಕೋಡಿ ಗಡಿ ತಾಲೂಕು ನಿಪ್ಪಾಣಿಯಲ್ಲಿ ರಣ ಗಾಳಿ-ಮಳೆಗೆ ಸಿಕ್ಕಿ ನಲುಗಿದೆ. ನಿಪ್ಪಾಣಿ ನಗರದ ವಿವಿಧೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನಿಪ್ಪಾಣಿಯ ಭೀಮನಗರ,ವಿದ್ಯಾನಗರ,ಅಂಬೇಡ್ಕರ್ ನಗರದ ಹತ್ತಿರ ಮರಗಳು ಬಿದ್ದಿವೆ. ಮುನ್ಸಿಪಲ್ ಹೈಸ್ಕೂಲ್,ಅಬಕಾರಿ ಫೀಸ್ ಸೇರಿದಂತೆ ವಿವಿಧೆಡೆ ಹಾನಿಯಾಗಿದೆ. ಭಾರಿ ಗಾಳಿಗೆ ವಿದ್ಯುತ್ ಕಂಬಗಳು ವಾಲಿದರೆ, ಮನೆಯ ಚಾವಣೆ ಹಾರಿ ಹೋಗಿವೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ವಾಹನ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹಾನಿಯಾದ ಪ್ರದೇಶಗಳಿಗೆ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಿಪ್ಪಾಣಿ ನಗರ ತತ್ತರಿಸಿದೆ. ಭಾರಿ ಮಳೆಗೆ 20 ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದೆ. ಪತ್ರಾಸ್ ಶೇಡ್ ಹಾಗೂ ಹಂಚಿನ ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಭಾರಿ ಮಳೆ ಗಾಳಿಗೆ 30 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಮರಗಳ ಜತೆಗೆ ನಗರದಲ್ಲಿ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿವೆ. ಮರಗಳು ಬಿದ್ದು 10 ಕ್ಕೂ ಹೆಚ್ಚು ವಾಹನಗಳು ಸಹ ಜಖಂಗೊಂಡಿವೆ. ಕಳೆದ ರಾತ್ರಿಯಿಂದ ನಿಪ್ಪಾಣಿ ನಗರದಲ್ಲಿ ವಿದ್ಯುತ್ ಕಟ್ ಆಗಿದೆ. ನಿಪ್ಪಾಣಿ ನಗರಸಭೆಯಿಂದ ಮರಗಳ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿಪ್ಪಾಣಿ ನಗರಸಭೆ ಅಧಿಕಾರಿಗಳು ಹಾನಿಯಾದ ಮನೆಗಳ ಸರ್ವೆಗೆ ಮುಂದಾಗಿದ್ದಾರೆ. ನಿಪ್ಪಾಣಿ ಪಟ್ಟಣದ ಅಂಬೇಡ್ಕರ್ ಗಲ್ಲಿಗೆ ಭೀಮ ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಹಾನಿಯಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

ಆನೇಕಲ್‌ನಲ್ಲಿ ಮನೆಗೆ ನುಗ್ಗಿದ ಚರಂಡಿ ನೀರು

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಮನೆಗಳಿಗೆ ಹಾಗೂ ಬಡಾವಣೆಗಳಿಗೆ ಕೊಳಚೆ ನೀರು ನುಗ್ಗಿದೆ. ಚರಂಡಿ-ರಾಜಕಾಲುವೆ ವ್ಯವಸ್ಥೆ ಸರಿ ಇಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಇಡೀ ರಾತ್ರಿ ನೀರಿನಲ್ಲಿ ನಿವಾಸಿಗಳು ಕಾಲ ಕಳೆದಿದ್ದಾರೆ. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಮನೆಯೊಳಗೆ ನುಗ್ಗಿದ ಕೊಳಚೆ ನೀರನ್ನು ಸ್ವಚ್ಛ ಮಾಡುವುದರಲ್ಲಿ ದಿನದೂಡುತ್ತಿದ್ದಾರೆ.

ವಿಜಯನಗರದಲ್ಲಿ ವರುಣನ ಕೃಪೆಗಾಗಿ ಜಪ – ತಪ

ಜಪ – ತಪ ಮಾಡಿದ ಕೇವಲ ಎಂಟು ದಿನದಲ್ಲಿ ವರುಣನ ಆಗಮನವಾಗಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ವಿಜಯನಗರದ ಹೊಸಪೇಟೆ ತಾಲೂಕಿನಲ್ಲಿ ಮಳೆ ಸುರಿದಿದೆ. ಭೀಕರ ಬರಗಾಲ, ಬಿಸಿಲಿನ ಧಗೆಯಿಂದ ಜನರು ಆಂಜನೇಯನ ಮೊರೆ ಹೋಗಿದ್ದರು. ಮಳೆಗಾಗಿ ನೂರಾರು ವರ್ಷ ಹಳೆಯದಾದ ಐತಿಹಾಸಿಕ ಹಿನ್ನೆಲೆವೊಳ್ಳ ಆಂಜನೇಯನಿಗೆ ಮಳೆಗಾಗಿ ನಿತ್ಯ ಪೂಜೆ, ಭಜನೆ ಮಾಡುತ್ತಿದ್ದರು. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿರೋ ಐತಿಹಾಸಿಕ ಆಂಜನೇಯ ದೇಗುಲವನ್ನು ವಿಜಯನಗರ ಅರಸರ ಕಾಲದಿಂದಲೂ ವಿಶೇಷ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತ ನೀರು

ಧಾರಾಕಾರ ಮಳೆಗೆ ಹಳೇ ಮೈ-ಬೆಂ ಹೆದ್ದಾರಿಯಲ್ಲಿ ಜಲಾವೃತಗೊಂಡಿತ್ತು. ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಹೆದ್ದಾರಿಯಲ್ಲಿ ತೆರಳಲಾಗದೆ ಬೈಕ್ ಸವಾರರು ಬದಲಿ ರಸ್ತೆಯಲ್ಲಿ ಸಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Seema Haider
ದೇಶ7 mins ago

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಾಚಾರಿಕೆಯೋ?

ICMR Dietary Guidelines
ಆರೋಗ್ಯ8 mins ago

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

viral video shakti scheme women fight
ವೈರಲ್ ನ್ಯೂಸ್18 mins ago

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Narendra Modi
ದೇಶ21 mins ago

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Rishabh Pant
ಕ್ರೀಡೆ35 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ39 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Mobile Phone Recharges:
ದೇಶ1 hour ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ1 hour ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

blackmail case kgf
ಕೋಲಾರ1 hour ago

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Madhuri Dixit birthday extend wishes
ಬಾಲಿವುಡ್1 hour ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌