Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ - Vistara News

ವಿಜಯನಗರ

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Vijayanagara News : ಕೆಲಸಕ್ಕೆ ಚೆಕ್ಕರ್ ಹಾಕಿ ಸಂಬಳಕ್ಕೆ ಮಾತ್ರ ಹಾಜರಾಗುವ ಪಿಡಿಓ ಅಧಿಕಾರಿ (PDO Officer) ವಿರುದ್ಧ ಗ್ರಾಮಸ್ಥರು ವಿನೂತನ ಪ್ರತಿಭಟನೆ ನಡೆಸಿದರು. ನಾಪತ್ತೆಯಾಗುತ್ತಿರುವ ಪಿಡಿಓ ಅಧಿಕಾರಿಯನ್ನು ಹುಡುಕಿಕೊಡಿ ಎಂದು ಬಿತ್ತಿ ಪತ್ರಗಳನ್ನು ಅಂಟಿಸಿದ್ದರು.

VISTARANEWS.COM


on

Vijayanagara News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಕೆಲಸಕ್ಕೆ ಮಾತ್ರ ಕರೀಬೇಡಿ, ಸಂಬಳಕ್ಕೆ ಮಾತ್ರ ಮರಿಲೇಬೇಡಿ. ಇದು ವಿಜಯನಗರದ (Vijayanagara News) ಹರಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾಮ ಪಂಚಾಯತ್‌ನ ಪಿಡಿಓ ಕಥೆ. ಗ್ರಾ.ಪಂ ಪಿಡಿಓ ವೀರೇಶ್ (PDO Officer) ಬೆಳಗ್ಗೆ ಹಾಜರಿ ಬುಕ್‌ನಲ್ಲಿ ಸಹಿ ಹಾಕಿ ಹೋದರೆ ಕಚೇರಿಗೆ ವಾಪಸ್ ಮರುದಿನ ಬೆಳಗ್ಗೆಯೇ ಬರುವುದು.

ಕೆಲಸಕ್ಕೆ ಚೆಕ್ಕರ್ ಹಾಕಿ ಸಂಬಳಕ್ಕೆ ಮಾತ್ರ ಹಾಜರಾಗುವ ಪಿಡಿಓ ಅಧಿಕಾರಿ ವಿರುದ್ಧ ಗ್ರಾಮಸ್ಥರು ವಿನೂತನ ಪ್ರತಿಭಟನೆ ನಡೆಸಿದರು. ಕಳೆದ ಆರು ತಿಂಗಳಿನಿಂದ ಕೆಲಸಕ್ಕೆ ಬಾರದೇ ಶೋಕಿ ಗ್ರಾ.ಪಂ ಪಿಡಿಓ ವೀರೇಶ್ ಶೋಕಿ ಮಾಡುತ್ತಿದ್ದನಂತೆ.

ಹೀಗಾಗಿ ಪಂಚಾಯ್ತಿಯತ್ತ ಸುಳಿಯದ ಪಿಡಿಓಗಾಗಿ ಗ್ರಾಮಸ್ಥರಿಂದಲೇ ಹುಡುಕಾಟ ನಡೆದಿದೆ. ಹರಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾ. ಪಂಚಾಯತ್ ಎದುರು ಬಿತ್ತಿ ಪತ್ರಗಳು, ಬ್ಯಾನರ್ ಪ್ರದರ್ಶನ ಮಾಡಿ ನಾಪತ್ತೆ ಆಗಿದ್ದಾನೆ. ಆದರೆ ಆರು ತಿಂಗಳಿಂದ ಕೆಲಸಕ್ಕೆ ಬಾರದಿದ್ದರೂ ಹಾಜರಾತಿ ಬುಕ್‌ನಲ್ಲಿ ಸಹಿ ಹಾಕಿದ್ದಾರೆ ಎಂದು ಆಕ್ರೋಶಿಸಿ ವಿನೂತನ ಪ್ರತಿಭಟನೆ ನಡೆಸಿದರು.

vijayanagara News

ಆರು ತಿಂಗಳಲ್ಲಿ ಒಂದೂ ಅಭಿವೃದ್ಧಿ ಕೆಲಸವೂ ಆಗಿಲ್ಲ ಯಾವ ಸಭೆಗಳನ್ನು ನಡೆಸಿಲ್ಲ. ಜನಸಾಮಾನ್ಯರ ಕೆಲಸ ಆಗುತ್ತಿಲ್ಲ, ಇಂತಹ ಪಿಡಿಓ ನಮ್ಮ ಪಂಚಾಯತಿಗೆ ಬೇಡ. ಬೆಳಗ್ಗೆ ಜನ ಕಚೇರಿಗೆ ಬರುವ‌ ಮೊದಲೇ ಸಹಿ ಹಾಕಿ ಹರಪನಹಳ್ಳಿಗೆ ಹೋಗುತ್ತಾರೆ. ಜನರು ಪಿಡಿಓ ವೀರೇಶ್‌ಗಾಗಿ ಕಾದು, ಕಾದು ಮನೆಗೆ ಹೋಗುತ್ತಾರೆ. ಕೂಡಲೆ ಬೇರೆ ಪಿಡಿಓ ಬದಲವಾವಣೆಗೆ ಅನುಮತಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ‌ ಮಾಡಿದ ಶೆಡ್ ಮೇಲೆ ಕೂಡ ನೂರೆಂಟು ಅನುಮಾನ ಹುಟ್ಟಿಕೊಂಡಿದ್ದು, ರೇಣುಕಾಸ್ವಾಮಿ ಕೊಲೆ ಮಾಡಿದ ಶೆಡ್ ಇಂದು ಕೂಡಾ ಪೊಲೀಸ್ ವಶಕ್ಕೆ ಇರಲಿದೆ.

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

ಇದನ್ನೂ ಓದಿ: Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident : ಚಲಿಸುತ್ತಿದ್ದಾಗಲೇ ಆಂಬ್ಯುಲೆನ್ಸ್‌ ಟಯರ್‌ ಬ್ಲಾಸ್ಟ್‌; ಬೈಕ್‌ನಿಂದ ಸ್ಕಿಡ್ ಆಗಿ ಬಿದ್ದು ವ್ಯಕ್ತಿ ಸಾವು

Road Accident : ಹಾಸನದಲ್ಲಿ ರೋಗಿಯನ್ನು ಕರೆತರುತ್ತಿದ್ದಾಗ ಆಂಬ್ಯುಲೆನ್ಸ್‌ನ ಟೈಯರ್‌ ಸ್ಫೋಟಗೊಂಡು ಅಪಘಾತ ಸಂಭವಿಸಿದ್ರೆ, ಇತ್ತ ವಿಜಯನಗರದಲ್ಲಿ ಬೈಕ್‌ನಿಂದ ಸ್ಕಿಡ್‌ ಬಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

By

road Accident
Koo

ಹಾಸನ/ವಿಜಯನಗರ : ರೋಗಿಯನ್ನು ಕರೆ ತರುತ್ತಿದ್ದಾಗ 108 ಆಂಬ್ಯುಲೆನ್ಸ್‌ ಟಯರ್ ಬ್ಲಾಸ್ಟ್ ಆಗಿದೆ. ಟಯರ್‌ ಸ್ಫೋಟಗೊಳ್ಳುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಆಂಬ್ಯುಲೆನ್ಸ್‌ ರಸ್ತೆಯ ಬದಿಯ ಹಳ್ಳಕ್ಕೆ ಇಳಿದಿದೆ. ಅರಕಲಗೂಡಿನಿಂದ ಹಾಸನಕ್ಕೆ ಕರೆ ತರುವಾಗ ಈ ಅವಘಡ (Road Accident) ನಡೆದಿದೆ.

ಅದೃಷ್ಟವಶಾತ್‌ ಆಂಬ್ಯುಲೆನ್ಸ್‌ನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿ ಸೇರಿ ಮೂರು ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಹಾಸನದ ಹೊರವಲಯದ ಶ್ರೀರಾಮನಗರ ಬಳಿ ಘಟನೆ ನಡೆದಿದೆ. ಘಟನೆ ಬಳಿಕ ಬೇರೊಂದು ಆಂಬ್ಯುಲೆನ್ಸ್‌ನಲ್ಲಿ ರೋಗಿ‌ಯನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಬದಿಗೆ ಬಿದ್ದಿದ್ದ ಆಂಬ್ಯುಲೆನ್ಸ್‌ ತೆರವು ಮಾಡಲಾಗಿದೆ.

ಇದನ್ನೂ ಓದಿ: 1993 Mumbai Serial Blast: ಜೈಲಿನಲ್ಲೇ ಹತ್ಯೆಯಾದ ಸರಣಿ ಬಾಂಬ್‌ ಬ್ಲಾಸ್ಟ್‌ ಅಪರಾಧಿ

ತಿರುವಿನಲ್ಲಿ ಸ್ಕಿಡ್‌ ಆಗಿ ಬಿದ್ದ ಸವಾರ ಸಾವು

ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟಿರುವ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ನಡೆದಿದೆ. ರಾಮ್ ಪುರ ಗ್ರಾಮದ ನಿಜಗುಣ (50) ಮೃತರು.

ಖಾಸಗಿ ಶಾಲೆಯ ಶಿಕ್ಷಕರಾಗಿದ್ದ ನಿಜಗುಣ ಕೊಟ್ಟೂರಿನಿಂದ ಹಗರಿಬೊಮ್ಮನಹಳ್ಳಿ ಪಟ್ಟಣ ಹೋಗುವಾಗ ರಸ್ತೆ ತಿರುವಿನಲ್ಲಿ ಬೈಕ್ ಸ್ಕಿಡ್‌ ಆಗಿದೆ. ಅತಿ ವೇಗವಾಗಿ ಬರುತ್ತಿದ್ದ ಕಾರಣಕ್ಕೆ ನಿಯಂತ್ರಣ ಸಿಗದೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹರಿಬೊಮ್ಮನಹಳ್ಳಿ ತಾಲೂಕಿನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ಕರಾವಳಿಗೆ ವರ್ಷಧಾರೆಯ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Rain News : ಕರಾವಳಿ ಹಾಗೂ ಒಳನಾಡಿನ ಭಾಗದಲ್ಲಿ ಮಳೆಯು ಅಬ್ಬರಿಸಲಿದ್ದು, ಹವಾಮಾನ ಇಲಾಖೆ (karnataka Weather Forecast) ಮುನ್ನೆಚ್ಚರಿಕೆಯನ್ನು ನೀಡಿದೆ. ವಿವಿಧೆಡೆ ಮಳೆಯೊಂದಿಗೆ ಬಿರುಗಾಳಿ ಬೀಸಲಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸುತ್ತಮುತ್ತ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸಾಕಷ್ಟು ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ ಮತ್ತು ಕಲಬುರಗಿಯಲ್ಲಿ ಭಾರಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Theft case : ಕಳ್ಳತನ ಮಾಡುತ್ತಿರುವಾಗಲೇ ಕಳ್ಳ ಲಾಕ್‌; ಸಿಸಿ ಕ್ಯಾಮೆರಾ ಲೈವ್ ಸ್ಟ್ರೀಮ್ ಆಧರಿಸಿ ಅರೆಸ್ಟ್‌

ಇಲ್ಲೆಲ್ಲ ಸಿಕ್ಕಾಪಟ್ಟೆ ಮಳೆ

ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸದಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ನಾಳೆಗೆ ಹೈವೇವ್‌ ಅಲರ್ಟ್‌- ಬಿರುಗಾಳಿ ಸಹಿತ ಮಳೆಯೊಂದಿಗೆ ಅಪ್ಪಳಿಸಲಿದೆ ರಕ್ಕಸ ಅಲೆ

karnataka Weather Forecast : ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಕಡಲತೀರದಲ್ಲಿ ಅಲೆಗಳು ಅಪ್ಪಳಿಸಲಿದೆ. ಹಲವಡೆ ಹೈವೇವ್‌ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಬಿರುಗಾಳಿಯೊಂದಿಗೆ (Rain News) ಮಳೆಯಾಗಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Heavy rain) ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಸುತ್ತಮುತ್ತ ವ್ಯಾಪಕ (Rain News) ಮಳೆಯಾಗಲಿದ್ದು, ಬಲವಾದ ಗಾಳಿಯು ಬೀಸಲಿದೆ. ಕೆಲವೆಡೆ ಭೂ ಕುಸಿತವಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಬಿರುಗಾಳಿ ಸಹಿತ (40-50 ಕಿ.ಮೀ) ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ವೇಗವು 40-50 ಕಿ,ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ವಿಪರೀತ ಮಳೆಯಾಗಲಿದೆ.

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ

ಕರಾವಳಿಯಲ್ಲಿ ಮಳೆಯಾಟ

ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡದ ಪಣಂಬೂರು, ಬೀದರ್‌ನ ಭಾಲ್ಕಿಯಲ್ಲಿ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ.

ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆಯಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ , ಉಪ್ಪಿನಂಗಡಿ , ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಹೈ ಅಲರ್ಟ್‌ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಶುರುವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

9 ಜಿಲ್ಲೆಗಳಿಗೆ ಹೈ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Health Tips: ನಮ್ಮ ದೇಹಕ್ಕೆ ಪ್ರೊಟೀನ್‌ ಪುಷ್ಟಿ ನೀಡಲು ಯಾವ ಮೊಳಕೆ ಕಾಳುಗಳು ಸೂಕ್ತ?

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌!

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌! (Dogs Monsoon Fashion) ಅರರೆ., ಇದೇನಿದು ಶ್ವಾನಗಳಿಗೂ ಮಳೆಗಾಲದ ಫ್ಯಾಷನ್‌ ಎಂದು ಹುಬ್ಬೇರಿಸಬಹುದು. ಹೌದು, ಇದೀಗ ಶ್ವಾನಗಳ ಮಾನ್ಸೂನ್‌ ಡ್ರೆಸ್‌ ಹಾಗೂ ರೈನ್‌ಕೋಟ್‌, ಮತ್ತಿತರೇ ಆಕ್ಸೆಸರೀಸ್‌ ಪೆಟ್‌ ಲೋಕದಲ್ಲಿ ಕಾಲಿಟ್ಟಿವೆ. ಆಯಾ ಜಾತಿಯ ಮುದ್ದು ಶ್ವಾನಗಳಿಗೆ ಹೊಂದುವಂತಹ, ನಾನಾ ವೆರೈಟಿ ಮಾನ್ಸೂನ್‌ ಡ್ರೆಸ್‌ಗಳು ಹಾಗೂ ವಾಟರ್‌ಪ್ರೂಫ್‌ ರೈನ್‌ಕೋಟ್‌ಗಳು ನಾಯಿಮರಿಗಳನ್ನು ಅಲಂಕರಿಸುತ್ತಿವೆ.

Dogs Monsoon Fashion

ಮುದ್ದು ಶ್ವಾನಗಳಿಗೂ ಮಾನ್ಸೂನ್‌ ಫ್ಯಾಷನ್‌

“ಇಂದು ಕಾಲ ಬದಲಾಗಿದೆ. ಮನೆಯಲ್ಲಿ ಮುದ್ದು ಶ್ವಾನಗಳಿಗೂ ಮಕ್ಕಳ ಸ್ಥಾನ ಮಾನ ದೊರಕಿದೆ. ಪ್ರತಿಯೊಬ್ಬರು ಅವರು ಸಾಕಿದ ನಾಯಿಮರಿಗಳನ್ನು ಯಾವ ಮಟ್ಟಿಗೆ ಇಷ್ಟ ಪಡುತ್ತಾರೆಂದರೇ, ಅವಕ್ಕೆ ಇತ್ತೀಚೆಗೆ ನಾನಾ ಬಗೆಯಲ್ಲಿ ಸ್ಟೈಲಿಂಗ್‌ ಕೂಡ ಮಾಡುತ್ತಾರೆ. ಇನ್ನು, ಹಿರಿಯರು ಕಿರಿಯರೆನ್ನದೇ ಎಲ್ಲರೂ ವಾಕಿಂಗ್‌ ಹಾಗೂ ಜಾಕಿಂಗ್‌ ಸಮಯದಲ್ಲೂ ಶ್ವಾನಗಳನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಾರೆ. ಇದಕ್ಕೆ ಪೂರಕ ಎಂಬಂತೆ, ಪೆಟ್‌ ಲೋಕದಲ್ಲೂ ನಾನಾ ಬಗೆಯ ಆಕ್ಸೆಸರೀಸ್‌ಗಳು ಹಾಗೂ ಉಡುಗೆಗಳು ಬಂದಿವೆ. ಆಯಾ ಸೀಸನ್‌ಗೆ ಮ್ಯಾಚ್‌ ಆಗುವಂತೆ ದೊರಕುತ್ತಿವೆ. ಅವುಗಳಲ್ಲಿ ಇದೀಗ ಮಾನ್ಸೂನ್‌ ಸೀಸನ್‌ಗೆ ಹೊಂದುವಂತಹ ಫ್ಯಾಷನ್‌ ಉಡುಗೆ ಹಾಗೂ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ” ಎನ್ನುತ್ತಾರೆ ಪೆಟ್‌ ಸ್ಪಾನ ಸ್ಟೈಲಿಂಗ್‌ ಎಕ್ಸ್‌ಫರ್ಟ್ ಜಾಕಿ. ಅವರ ಪ್ರಕಾರ, ಶ್ವಾನಗಳು ಇದೀಗ ಸ್ಟೈಲಿಶ್‌ ಆಗಿ ಕಾಣಿಸಲು ಈ ಆಕ್ಸೆಸರೀಸ್‌ಗಳು ಸಹಕರಿಸುತ್ತಿವೆಯಂತೆ.

Dogs Monsoon Fashion

ಮಾನ್ಸೂನ್‌ಗೆ ಮ್ಯಾಚಿಂಗ್‌

ಶ್ವಾನಗಳಿಗೆ ಬಂದಿರುವ ಕಲರ್‌ಫುಲ್‌ ಉಡುಗೆ ಹಾಗೂ ರೈನ್‌ಕೋಟ್‌ ಮತ್ತು ಅವುಗಳ ಕಾಲಿನ ಪಾದಗಳಿಗೆ ಹಾಕಬಹುದಾದ ಪೆಟ್‌ ವೆಲ್ಲೈಸ್‌, ರೈನ್‌ ಬೂಟ್ಸ್ ಹಾಗೂ ಟವೆಲ್‌ ಮತ್ತು ವೈಪ್ಸ್ ಈ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

Dogs Monsoon Fashion

ಕಲರ್‌ಫುಲ್‌ ಡಾಗ್ಗಿ ರೈನ್‌ ಕೋಟ್ಸ್

ಪಿರಿ ಪಿರಿ ಸಣ್ಣ ಮಳೆಯಲ್ಲೂ ಡಾಗ್ಗಿಯಿಲ್ಲದೇ ವಾಕ್‌ ಮಾಡಲಾಗುವುದಿಲ್ಲ ಎನ್ನುವ ಶ್ವಾನಗಳ ಪೋಷಕರು, ಈ ಮಾನ್ಸೂನ್‌ ಡಾಗ್‌ ರೈನ್‌ಕೋಟ್ಸ್‌ಗಳ ಖರೀದಿ ಮಾಡತೊಡಗಿದ್ದಾರೆ. ಬೇಡಿಕೆ ಹೆಚ್ಚಾದಂತೆ, ಸಿಂಥಟಿಕ್‌, ಪಾಲಿಸ್ಟರ್‌ ಸೇರಿದಂತೆ ವಾಟರ್‌ ಪ್ರೂಫ್‌ ಫ್ಯಾಬ್ರಿಕ್‌ನಲ್ಲಿ ಇವು ನಾನಾ ಡಿಸೈನ್‌ನಲ್ಲಿ ಆಗಮಿಸಿವೆ.

Dogs Monsoon Fashion

ಪೆಟ್ಸ್ ರೈನ್‌ ಬೂಟ್ಸ್

ನಾಯಿ ಮರಿಗಳಿಗೆ ರಸ್ತೆಯ ಹಾಗೂ ನೆಲದ ಕೊಚ್ಚೆ, ಕೆಸರು ಹತ್ತದಂತೆ ಕಾಪಾಡಬಹುದಾದ ಪುಟ್ಟ ಪುಟ್ಟ ರೈನ್‌ ಬೂಟ್ಸ್‌ಗಳು ಕೂಡ ನಾನಾ ವಿನ್ಯಾಸದಲ್ಲಿ ಪೆಟ್‌ ಶಾಪ್‌ಗಳಿಗೆ ಬಂದಿವೆ. ಇನ್ನು, ಡಾಗ್‌ ಟವೆಲ್ಸ್ ಹಾಗೂ ವೈಪ್ಸ್ ಸೇರಿದಂತೆ, ಬೋ ಹಾಗೂ ಬೆಲ್ಟ್‌ಗಳು ಕೂಡ ಪೆಟ್‌ ಶಾಪ್‌ಗಳಿಗೆ ಲಗ್ಗೆ ಇಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
Latest6 seconds ago

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

JP Nadda
ದೇಶ6 mins ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ7 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್17 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್32 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ39 mins ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

LKG UKG In Govt Schools
ಕರ್ನಾಟಕ45 mins ago

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

Sex Doll
ದೇಶ52 mins ago

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

Job Alert
ಉದ್ಯೋಗ53 mins ago

Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

Unusual Story
Latest54 mins ago

Unusual Story: 15 ವರ್ಷದ ವಿದ್ಯಾರ್ಥಿಯಿಂದ ಶಿಕ್ಷಕಿ ಗರ್ಭಿಣಿ! ಜೈಲು ಶಿಕ್ಷೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌