Site icon Vistara News

Murder | ಜಾಗದ ವಿವಾದ: ಬಬಲೇಶ್ವರ ಬಳಿ ಮೂವರು ಸೇರಿ ವ್ಯಕ್ತಿಯ ಬರ್ಬರ ಹತ್ಯೆ

vijayapura murder

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಿಲಾರಹಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 55 ವರ್ಷದ ಮರಗು ಪಾಂಡ್ರೆ ಹತ್ಯೆಯಾಗಿರುವ ದುರ್ದೈವಿ.

ಕೊಲೆಯಾದ ಮರಗು ಪಾಂಡ್ರೆ

ಬೀರು, ಮಾಳಪ್ಪ ಮತ್ತು ಇನ್ನೊಬ್ಬ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜಾಗದ ವಿಷಯಕ್ಕೆ ಹಲವು ದಿನಗಳಿಂದ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Murder Mystery | ಗಂಡನಿಗೆ ಲೈಂಗಿಕ ಆಸಕ್ತಿ ಇಲ್ಲ ಎಂದು ಪ್ರಿಯಕರನ ಜತೆ ಸೇರಿ ಕೊಂದಳು! ವಯಸ್ಸು ಆಕೆಗೆ 42, ಗಂಡನಿಗೆ 60, ಪ್ರಿಯಕರನಿಗೆ 28!

Exit mobile version