ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ Vistara News
Connect with us

ಕ್ರೈಂ

ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Accident In Muddebihal
ಟಿಪ್ಪರ್‌ ಟಿಕ್ಕಿಯಾಗಿ ನಜ್ಜುಗುಜ್ಜಾದ ಬೈಕ್‌.
Koo

ಮುದ್ದೇಬಿಹಾಳ (ವಿಜಯಪುರ): ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಬಾಲಕರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ವೇಗವಾಗಿ ಬಂದ ಟಿಪ್ಪರ್‌ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು, ದೇಹದ ತುಂಡುಗಳನ್ನು ಆರಿಸಿ ಸ್ಥಳೀಯರು ಆಂಬ್ಯುಲೆನ್ಸ್‌ಗೆ ಹಾಕಿದ್ದಾರೆ. ಮೃತರನ್ನು ಶರಣಮ್ಮ ಕಂಬಳಿ, ನಾಗೇಶ ಶಿವಪೂರೆ ಎಂದು ಗುರುತಿಸಲಾಗಿದೆ. ಇವರು ಮುದ್ನಾಳ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು; ಭಾವಿ ಪತಿ ಜತೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಆರು ಹಾಗೂ ಎಂಟು ವರ್ಷದ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಬಿಎಂಟಿಸಿ ಬಸ್‌ ಮೇಲೆ ಬಿದ್ದ ಮರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಅವಾಂತರಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜೋರು ಮಳೆಗೆ ಬಿಎಂಟಿಸಿ ಬಸ್‌ ಮೇಲೆ ಮರ ಬಿದ್ದಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಬಳಿ ಚಲಿಸುತ್ತಿದ್ದ ಬಸ್‌ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್‌ ಯಾರಿಗೂ ತೊಂದರೆಯಾಗಿಲ್ಲ. ಮರ ಬೀಳುತ್ತಲೇ ಜನ ಬಸ್‌ನಿಂದ ಇಳಿದರು. ಇನ್ನು ನಡು ರಸ್ತೆಯಲ್ಲೇ ಮರ ಬಿದ್ದ ಕಾರಣ ಸಂಚಾರ ದಟ್ಟಣೆ ಉಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ಆಗಮಿಸಿ ಮರ ತೆರವು ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು

High temperature: ಬಿಸಿಲಿನ ಝಳ ಸಹಿಸಲಾಗದೆ ಕೆರೆಗೆ ಸ್ನಾನಕ್ಕೆ ಹೋಗಿದ್ದವರಲ್ಲಿ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.

VISTARANEWS.COM


on

Edited by

Pond near kolar
ಯುವಕ ಸಾವನ್ನಪ್ಪಿದ ಕೋಲಾರ ಬಳಿಯ ಕೆರೆ
Koo

ಕೋಲಾರ : ರಾಜ್ಯಾದ್ಯಂತ ಸೆಕೆ ವಿಪರೀತವಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ, ಇಲ್ಲೊಬ್ಬರು ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು (Drowned in Pond) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ಕೋಲಾರದ (Kolar news) ಗಾಂಧಿ ನಗರದ ಮೂವರು ಯುವಕರು ಮಂಗಸಂದ್ರ-ಮಾಲೂರು ಮಾರ್ಗದ ರಸ್ತೆ ಬದಿಯ ಕೆರೆಯಲ್ಲಿ ಸ್ನಾನಕ್ಕೆಂದು ಹೋಗಿದ್ದವರು. ಮೂವರಲ್ಲಿ ಇಬ್ಬರಿಗೆ ಈಜು ಬರುತ್ತಿದ್ದರೆ ಒಬ್ಬನಿಗೆ ಬರುತ್ತಿರಲಿಲ್ಲ.

ಕೆರೆಯ ನೀರಿನಲ್ಲಿ ಸ್ನಾನ ಮಾಡುತ್ತಾ ಖುಷಿಪಡುತ್ತಿದ್ದಾಗ ಪ್ರಭಾಸ್‌ ಎಂಬ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಆತನಿಗೆ ಈಜು ಬಾರದೆ ಮುಳುಗಿದ್ದಾನೆ. ಉಳಿದ ಇಬ್ಬರು ಆತನ ರಕ್ಷಣೆಗೆ ಪ್ರಯತ್ನ ಮಾಡಿದರೂ ಫಲ ನೀಡಲಿಲ್ಲ.

ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಎಸ್ ಎನ್ ಆರ್ ಆಸ್ಪತ್ರಗೆ ರವಾನಿಸಲಾಗಿದೆ.

ಸಿಗಂದೂರಿಗೆ ಲಾಂಚ್‌ ಸಂಚಾರ ಸ್ಥಗಿತ

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಲ್ಕೆ-ಮುಪ್ಪಾನೆ ಲಾಂಚ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕಾರ್ಗಲ್, ಜೋಗದಿಂದ ಶ್ರೀ ಕ್ಷೇತ್ರ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಇದಾಗಿದೆ.

ಹಿನ್ನೀರಿನಲ್ಲಿ ವಾಡಿಕೆಗಿಂತಲೂ ನೀರು ಕಡಿಮೆಯಾಗಿದೆ. ಹೀಗಾಗಿ, ಲಾಂಚ್​ ಸಂಚಾರಕ್ಕೆ ಕಲ್ಲು, ಮರದ ದಿಮ್ಮಿ, ಮರಳಿನ ದಿಬ್ಬ ಅಡ್ಡಿಯಾಗಿದೆ. ಒಂದೊಮ್ಮೆ ಕಡಿಮೆ ನೀರಿನಲ್ಲಿ ಲಾಂಚ್​ ಓಡಾಡಿದರೆ ಅಪಘಾತಕ್ಕೀಡಾಗುವ ಆತಂಕ ಎದುರಾಗಿದೆ.  ಸುರಕ್ಷತೆಯ ದೃಷ್ಟಿಯಿಂದ ಲಾಂಚ್ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಿಗರು ವಾಹನಿಗರಿಗೆ 60 ಕಿ.ಮೀ. ದೂರ ಸುತ್ತು ಬಳಸಿ ದೇವಸ್ಥಾನಕ್ಕೆ ಹೋಗಬೇಕಾಗಿದೆ.

ಇದನ್ನೂ ಓದಿ: Students Drowned : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

Continue Reading

ಕ್ರೈಂ

ಬೇಸಿಗೆ ರಜಾ ಇದ್ದರೂ ಶಾಲೆಗೆ ಹೋಗಿ ನಿಗೂಢವಾಗಿ ಮೃತಪಟ್ಟ 10ನೇ ತರಗತಿ ವಿದ್ಯಾರ್ಥಿನಿ

ಬಾಲಕಿಯ ತಲೆ ಮತ್ತು ಪಾದಗಳ ಮೇಲೆ ಗಾಯಗಳು ಗುರುತು ಇದೆ. ಮುಖ ಊದಿಕೊಂಡಿತ್ತು. ಕಣ್ಣ ಬಳಿಯೂ ಗಾಯವಾಗಿತ್ತು. ಹುಡುಗಿ ಮೇಲೆ ಹಲ್ಲೆಯಾಗಿದ್ದು ಸ್ಪಷ್ಟವಾಗಿ ಗೋಚರಿಸುತ್ತಿತ್ತು ಎಂದು ಮೃತ ಬಾಲಕಿಯ ಪಾಲಕರು, ಸಂಬಂಧಿಕರು ಪ್ರತಿಪಾದಿಸಿದ್ದಾರೆ.

VISTARANEWS.COM


on

Edited by

Class 10 student Girl Died After Falling From school terrace In Uttar Pradesh
Koo

ಬೇಸಿಗೆ ರಜಾ ಇದ್ದರೂ ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ, ಟೆರೇಸ್​ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ. ಆಕೆ ಶಾಲೆಯ ಟೆರೇಸ್​ ಮೇಲಿಂದ ಕೆಳಗೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಈಕೆಯ ಸಾವು ನಿಗೂಢವೆನ್ನಿಸಿದೆ. ಘಟನೆ ನಡೆದಿದ್ದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಸನ್​ಬೀಮ್​ ಎಂಬ ಶಾಲೆಯಲ್ಲಿ. ಮೇ 26ರ ಮುಂಜಾನೆ 8.45ರ ಹೊತ್ತಿಗೆ.

ಬಾಲಕಿಯ ಸಾವು ಈಗ ವಿವಾದಕ್ಕೂ ಕಾರಣವಾಗಿದೆ. ಶಾಲೆಗೆ ಬೇಸಿಗೆ ರಜಾ ಇದ್ದರೂ ನನ್ನ ಮಗಳನ್ನು ಶಾಲೆಗೆ ಕರೆಸಲಾಗಿತ್ತು ಎಂದು ಪಾಲಕರು ಆರೋಪಿಸಿದ್ದಾರೆ. ಶುಕ್ರವಾರ ಮುಂಜಾನೆಯೇ ಮಗಳು ಶಾಲೆಗೆ ಹೋಗಿದ್ದಳು. ಆದರೆ ಬೆಳಗ್ಗೆ 10 ಗಂಟೆ ಹೊತ್ತಿಗೆ ನಮಗೆ ಶಾಲೆಯಿಂದ ಕರೆಬಂತು. ನಿಮ್ಮ ಮಗಳು ಉಯ್ಯಾಲೆಯಿಂದ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಅವರು ನಮಗೆ ಹೇಳಿದರು. ಹಾಗೇ, ಆಸ್ಪತ್ರೆಗೆ ದಾಖಲಿಸಿದ್ದಾಗಿಯೂ ತಿಳಿಸಿದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾಳೆ. ಇಷ್ಟೆಲ್ಲ ಆದ ಮೇಲೆ ಶಾಲೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಬಾಲಕಿಯ ಪಾಲಕರು ತಿಳಿಸಿದ್ದಾರೆ.

ಇದನ್ನೂ ಓದಿ: Cooker Blast:‌ ರಾಮನಗರದಲ್ಲಿ ಎಲೆಕ್ಷನ್‌ ಪ್ರಚಾರದ ವೇಳೆ ಕೊಟ್ಟಿದ್ದ ಕುಕ್ಕರ್‌ ಸ್ಫೋಟ; ಬಾಲಕಿಗೆ ಗಂಭೀರ ಗಾಯ

ಬಾಲಕಿ ಟೆರೇಸ್​​ನಿಂದ ಬಿದ್ದಿದ್ದು ಸಿಸಿಟಿವಿಯಲ್ಲಿ ಕಾಣಿಸುತ್ತದೆ. ಇದರಲ್ಲೇನೋ ಸಂಚು ಇದೆ. ಈ ಸಾವು ನಿಗೂಢವಾಗಿದೆ. ಬಾಲಕಿಯ ತಲೆ ಮತ್ತು ಪಾದಗಳ ಮೇಲೆ ಗಾಯಗಳು ಗುರುತು ಇದೆ. ಮುಖ ಊದಿಕೊಂಡಿತ್ತು. ಕಣ್ಣ ಬಳಿಯೂ ಗಾಯವಾಗಿತ್ತು. ಹುಡುಗಿ ಮೇಲೆ ಹಲ್ಲೆಯಾಗಿದ್ದು ಸ್ಪಷ್ಟವಾಗಿ ಗೋಚರಿಸುತ್ತಿತ್ತು ಎಂದು ಮೃತ ಬಾಲಕಿಯ ಪಾಲಕರು, ಸಂಬಂಧಿಕರು ಪ್ರತಿಪಾದಿಸಿದ್ದಾರೆ. ಹುಡುಗಿಯ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಶಾಲೆಯಲ್ಲಿ ಉಯ್ಯಾಲೆ ಇರುವುದು ನೆಲದಿಂದ ಒಂದು-ಒಂದೂವರೆ ಅಡಿ ಎತ್ತರದಲ್ಲಿ. ಆಕೆ ಅಲ್ಲಿಂದ ಬಿದ್ದರೆ ಸಾಯಲು ಸಾಧ್ಯವಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ನನ್ನ ಮಗಳ ಸಾವಿನಲ್ಲಿ ಶಾಲೆಯ ಶಿಕ್ಷಕ ಅಭಿಷೇಕ್​ ಕನೋಜಿಯಾ ಮತ್ತು ಆಡಳಿತ ವಿಭಾಗದ ಅಧಿಕಾರಿ ಬ್ರಿಜೇಶ್ ಯಾದವ್​ ಕೈವಾಡವಿದೆ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಶಾಲೆಯ ಪ್ರಾಂಶುಪಾಲರು ಈ ಬಗ್ಗೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ಕ್ರೈಂ

Cyber Fraud: ಒಂದು ಪ್ಲೇಟ್‌ ಉಚಿತ ಥಾಲಿ; ಆಫರ್‌ ನಂಬಿದ ಮಹಿಳೆ ಬ್ಯಾಂಕ್‌ ಖಾತೆಯಿಂದ 90 ಸಾವಿರ ರೂ. ಖಾಲಿ

Cyber Fraud: ದೆಹಲಿಯಲ್ಲಿ ಮಹಿಳೆಯೊಬ್ಬರು ಆನ್‌ಲೈನ್‌ ವಂಚನೆ ಜಾಲಕ್ಕೆ ಸಿಲುಕಿದ್ದು, ಒಂದು ಉಚಿತ ಥಾಲಿಗಾಗಿ 90 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ. ಆನ್‌ಲೈನ್‌ ವಂಚಕರು ಇವರ ದುಡ್ಡಿಗೆ ಕನ್ನ ಹಾಕಿದ್ದಾರೆ.

VISTARANEWS.COM


on

Edited by

Delhi Woman Falls Prey To Free Thali Bait On Facebook
Koo

ನವದೆಹಲಿ: ಸಾಮಾಜಿಕ ಜಾಲತಾಣಗಳು ಮಾಹಿತಿ ರವಾನಿಸುವ ಮಾಧ್ಯಮಗಳ ಜತೆಗೆ ವಂಚನೆಗೂ ದಾರಿ ಮಾಡಿಕೊಟ್ಟಿವೆ. ಜನರಿಗೆ ಜಾಹೀರಾತು ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ (Cyber Fraud) ಮಾಡಲಾಗುತ್ತಿದೆ. ಇದಕ್ಕೆ, ನಿದರ್ಶನ ಎಂಬಂತೆ, ಒಂದು ಪ್ಲೇಟ್‌ ಫ್ರೀ ಥಾಲಿ ಆಸೆಗೆ ಬಿದ್ದ ದೆಹಲಿ ಮಹಿಳೆಯೊಬ್ಬರು 90 ಸಾವಿರ ರೂ. ಕಳೆದುಕೊಂಡಿದ್ದಾರೆ. ಒಂದು ಪ್ಲೇಟ್‌ ಥಾಲಿ ಖರೀದಿಸಿದರೆ, ಇನ್ನೊಂದು ಪ್ಲೇಟ್‌ ಉಚಿತ ಎಂದು ಫೇಸ್‌ಬುಕ್‌ನಲ್ಲಿ ಜಾಹೀರಾತು ನೋಡಿದ ಸವಿತಾ ಶರ್ಮಾ ಎಂಬ ಬ್ಯಾಂಕ್‌ ಉದ್ಯೋಗಿಯು App ಒಂದನ್ನು ಡೌನ್‌ಲೋಡ್‌ ಮಾಡಿಕೊಂಡು 90 ಸಾವಿರ ರೂ. ಕಳೆದುಕೊಂಡಿದ್ದಾರೆ.

ಒಂದು ಪ್ಲೇಟ್‌ ಉಚಿತ ಥಾಲಿಗಾಗಿ ಮಹಿಳೆಯು App ಡೌನ್‌ಲೋಡ್‌ ಮಾಡಿಕೊಂಡ ಬಳಿಕ ಅನಾಮಧೇಯ ಕರೆ ಬಂದಿದೆ. ನಿಮಗೆ ಉಚಿತ ಥಾಲಿ ಸಿಗಬೇಕು ಎಂದರೆ ಮೊದಲು ರಿಜಿಸ್ಟರ್‌ ಆಗಬೇಕು ಎಂದು ಕರೆ ಮಾಡಿದ ವ್ಯಕ್ತಿ ಹೇಳಿದ್ದಾನೆ. ಆಗ ಮಹಿಳೆಯ ಮೊಬೈಲ್‌ಗೆ ವಂಚಕನು ಲಿಂಕ್‌ ಕಳುಹಿಸಿದ್ದಾನೆ. ಲಿಂಕ್‌ ಮೇಲೆ ಮಹಿಳೆಯು ಕ್ಲಿಕ್‌ ಮಾಡಿದ್ದಾರೆ. ಇದಾದ ಬಳಿಕ ಮಹಿಳೆಯ ಅಕೌಂಟ್‌ನಿಂದ 40 ಸಾವಿರ ರೂ. ಹಾಗೂ 50 ಸಾವಿರ ರೂ. ಕಡಿತವಾಗಿದೆ. ಬಳಿಕ ಮಹಿಳೆಯು ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ.

ನ್ಯಾಯಾಧೀಶರಿಗೇ ವಂಚಿಸಿದ್ದ ದುರುಳರು

ಕೆಲ ತಿಂಗಳ ಹಿಂದಷ್ಟೇ ಮಹಾರಾಷ್ಟ್ರದ ಪುಣೆಯಲ್ಲಿ ಆನ್‌ಲೈನ್‌ ವಂಚಕರು ನಿವೃತ್ತ ನ್ಯಾಯಾಧೀಶರೊಬ್ಬರಿಗೇ 1.67 ಲಕ್ಷ ರೂ. ವಂಚಿಸಿದ್ದರು. ಮಹಾರಾಷ್ಟ್ರದ ಪುಣೆ ನಗರದ ಬಾವ್‌ಧನ್‌ ಖುರ್ದ್‌ನಲ್ಲಿ ವಾಸಿಸುತ್ತಿರುವ 70 ವರ್ಷದ ನಿವೃತ್ತ ನ್ಯಾಯಾಧೀಶರಿಗೆ ಕೊರಿಯರ್‌ ಸೇವಾ ಸಿಬ್ಬಂದಿಯ ಸೋಗಿನಲ್ಲಿ ದುರುಳರು ವಂಚನೆ ಮಾಡಿದ್ದರು.

ಅಮೆರಿಕದಲ್ಲಿರುವ ತಮ್ಮ ಮೊಮ್ಮಗಳಿಗೆ ನಿವೃತ್ತ ನ್ಯಾಯಾಧೀಶರು ಕೆಲ ದಿನಗಳ ಹಿಂದೆ ಸ್ವೀಟ್‌ ಹಾಗೂ ಬಟ್ಟೆಗಳನ್ನು ಖಾಸಗಿ ಸಂಸ್ಥೆಯ ಮೂಲಕ ಕೊರಿಯರ್‌ ಮಾಡಿದ್ದರು. ಆದರೆ, ನಿವೃತ್ತ ನ್ಯಾಯಾಧೀಶರಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದ್ದು, ಆತ ಕೊರಿಯರ್‌ ಸರ್ವಿಸ್‌ ಸಿಬ್ಬಂದಿ ಎಂಬುದಾಗಿ ಹೇಳಿಕೊಂಡಿದ್ದ. “ನೀವು ಕೊಟ್ಟಿರುವ ವಿಳಾಸ ತಪ್ಪಾಗಿದೆ, ಒಂದಷ್ಟು ಮಾಹಿತಿ ಕೊಡಿ” ಎಂಬುದಾಗಿ ಕೇಳಿದ್ದರು. ಇದನ್ನು ಅವರು ನಂಬಿದ್ದರು.

“ನೀವು ಕೊಟ್ಟಿರುವ ವಿಳಾಸ ತಪ್ಪಾಗಿರುವ ಕಾರಣ ಅದನ್ನು ಸರಿಪಡಿಸಬೇಕು ಎಂದರೆ ನೀವು 5 ರೂಪಾಯಿ ಪಾವತಿಸಬೇಕು. ನಿಮಗೆ ನಾವೊಂದು ಲಿಂಕ್‌ ಕಳುಹಿಸಿದ್ದೇವೆ. ಅದರ ಮೇಲೆ ಕ್ಲಿಕ್‌ ಮಾಡಿ, ಹಣ ಪಾವತಿಸಿ” ಎಂದಿದ್ದಾರೆ. ಅದರಂತೆ, ನಿವೃತ್ತ ನ್ಯಾಯಾಧೀಶರು ಲಿಂಕ್‌ ಮೇಲೆ ಕ್ಲಿಕ್‌ ಮಾಡಿ, ಹಣ ಪಾವತಿಸಿದ್ದಾರೆ. ಆದರೆ, ಇದಾದ ಬಳಿಕ ರಿಟೈರ್ಡ್‌ ಜಡ್ಜ್‌ ಬ್ಯಾಂಕ್‌ ಖಾತೆಯಿಂದ 1,67,997 ಲಕ್ಷ ರೂ. ಕಡಿತವಾಗಿತ್ತು.

ಇದನ್ನೂ ಓದಿ: Cyber Crime : ಯುಪಿಐ ಮೂಲಕ ಹಣ ಕಳಿಸಿ, ಬ್ಯಾಂಕ್‌ ಖಾತೆಗೇ ಕನ್ನ! ಹೊಸ ಮಾದರಿ ವಂಚನೆ ಬಗ್ಗೆ ಇರಲಿ ಎಚ್ಚರ

Continue Reading

ಕರ್ನಾಟಕ

Birthday Party: ಶಾಸಕರ ತಮ್ಮನ ಮಗನ ಬರ್ತ್‌ಡೇ ಆಚರಿಸಿದ ಪೊಲೀಸರು!

Birthday party: ಪೊಲೀಸ್‌ ಅಧಿಕಾರಿಗಳು ಶಾಸಕರ ತಮ್ಮನ ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Edited by

Birthday party
ಶಾಸಕರ ತಮ್ಮನ ಮಗನ ಹುಟ್ಟುಹಬ್ಬದಲ್ಲಿ ಪೊಲೀಸರು
Koo

ಚಿತ್ರದುರ್ಗ: ಮೊಳಕಾಲ್ಮುರು ಶಾಸಕ ಎನ್‌.ವೈ ಗೋಪಾಲಕೃಷ್ಣ (MLA NY Gopalakrishna) ಅವರ ತಮ್ಮನ ಮಗ ಚೇತನ್‌ ಹುಟ್ಟುಹಬ್ಬವನ್ನು (Birthday Party) ಪೊಲೀಸರು (Police staff) ಆಚರಿಸಿದ ವಿದ್ಯಮಾನ ನಡೆದು ಚರ್ಚೆಗೆ ಕಾರಣವಾಗಿದೆ.

ಎನ್‌.ವೈ ಗೋಪಾಲಕೃಷ್ಣ ಅವರ ತಮ್ಮ ಎನ್‌.ವೈ ಪೆನ್ನೋಬಳ ಸ್ವಾಮಿ ಅವರ ಮಗ ಎನ್‌.ವೈ ಚೇತನ್‌ ಹುಟ್ಟುಹಬ್ಬ ಕೆಲವು ದಿನಗಳ ಹಿಂದೆ ನಡೆದಿತ್ತು. ಗೋಪಾಲಕೃಷ್ಣ ಅವರ ತೋಟದ ಮನೆಯಲ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಶ್ರೀರಾಂಪುರ ಹಾಗೂ ಮೊಳಕಾಲ್ಮೂರು ಪೊಲೀಸರು ಹುಟ್ಟು ಹಬ್ಬದಲ್ಲಿ ಭಾಗಿಯಾಗಿದ್ದರು.

ಮೊಳಕಾಲ್ಮೂರು ಕ್ಷೇತ್ರದ ಯುವ ನಾಯಕ ಎಂದೇ ಬಿಂಬಿತ ಆಗಿರುವ ಎನ್.ವೈ.ಚೇತನ್ ಅವರ ಹೆಸರಿನಲ್ಲಿ ಕೇಕ್‌ ಕೂಡಾ ಮಾಡಿಸಿ ತಂದಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

ಹುಟ್ಟುಹಬ್ಬದಲ್ಲಿ ಒಟ್ಟು 7 ಮಂದಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದು ಒಂದು ಕಡೆಯಾದರೆ ಅವರು ಸಮವಸ್ತ್ರ ಧರಿಸಿಯೇ ಅದ್ಧೂರಿಯಾಗಿ ಹುಟ್ಟುಹಬ್ಬ ಮಾಡಿದ್ದು ಚರ್ಚೆ ಹುಟ್ಟು ಹಾಕಿದೆ.

ಚೇತನ್ ಬರ್ತ್‌ ಡೇಯಲ್ಲಿ ಇಷ್ಟೊಂದು ಅಧಿಕಾರಿಗಳು ಭಾಗಿಯಾಗಿದ್ದು ಯಾಕೆ..? ಕರ್ತವ್ಯದಲ್ಲಿ ಇರಬೇಕಾದ ಪೊಲೀಸರು ಬರ್ತಡೇಯಲ್ಲಿ ಭಾಗಿಯಾಗಿದ್ದು ಸರಿಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿವೆ. ಖಾಸಗಿಯಾಗಿ ಹೋಗುವುದು ಬೇರೆ, ಸಮವಸ್ತ್ರದಲ್ಲಿ ಹೋಗುವುದು ಬೇರೆ, ತಾವೇ ಕೇಕ್‌ ಹಿಡಿದುಕೊಂಡು ಹೋಗುವುದು ಇಲಾಖೆಯ ಗೌರವಕ್ಕೆ ಮಾಡಿದ ಅಪಮಾನವಾಗುತ್ತದೆ ಎನ್ನುವುದು ಸಾರ್ವಜನಿಕ ವಲಯದ ಚರ್ಚೆ.

ಕೊಣನೂರು ಪಿಎಸ್‌ಐ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಹಾಸನ : ಹಾಸನದ ಅರಕಲಗೂಡು ತಾಲೂಕಿನ ಕೊಣನೂರು ಪಿಎಸ್‌ಐ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ. ಕೊಣನೂರು ಪೊಲೀಸ್ ಠಾಣೆಯ (Konanur Police Station) ಪಿಎಸ್ಐ (PSI) ಶೋಭಾ ಬರಮಕ್ಕನವರ್ ಅವರು ಇದ್ದ ಬಾಡಿಗೆ ಮನೆಗೆ ಬೆಂಕಿ ಹಾಕಲಾಗಿದೆ.

ರಜೆ‌ ಮೇಲೆ ಊರಿಗೆ ತೆರೆಳಿದ್ದಾಗ ದುಷ್ಕರ್ಮಿಗಳು ಮನೆಯ ಕಿಟಿಕಿ ಒಡೆದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ ಸೇರಿ ಪೀಠೋಪಕರಣಗಳು ಬೆಂಕಿಗಾಹುತಿ ಆಗಿವೆ. ಬುಧವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಹೋಗಿರುವ ಸಾಧ್ಯತೆ ಇದೆ.

PSI Home
ಪಿಎಸ್‌ಐ ಶೋಭಾ ಅವರ ಬಾಡಿಗೆ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Election: ಬಿಜೆಪಿ ಶಾಸಕ ಹರೀಶ್‌ ಪೂಂಜಾ ಪರ ಪ್ರಚಾರ ಮಾಡಿದ ಗ್ರಾಪಂ ಸಿಬ್ಬಂದಿ ಅಮಾನತು

Continue Reading
Advertisement
Foundation laying programme of new parliament building
ಕರ್ನಾಟಕ3 mins ago

New Parliament Building : ನೂತನ ಸಂಸತ್‌ ಭವನ ಉದ್ಘಾಟನೆಗೆ ಶೃಂಗೇರಿ ಪುರೋಹಿತರು

Laxmi Hebbalkar Shashikala jolle and leelavati r prasad
ಕರ್ನಾಟಕ11 mins ago

Karnataka Cabinet expansion: ಮೊದಲ, 2ನೇ ಬಾರಿಗೇ ಸಚಿವಗಿರಿ ಪಡೆದ ಬೆಳಗಾವಿ ಶಾಸಕಿಯರಿವರು!

New Parliament Building
ದೇಶ12 mins ago

ಹಳೇ ಬೇರು, ಹೊಸ ಚಿಗುರು: ಮೊದಲಿನ ಸಂಸತ್‌, ನೂತನ ಸಂಸತ್‌ ಭವನದ ನಡುವಿನ ವ್ಯತ್ಯಾಸ ಹೀಗಿದೆ ನೋಡಿ

Darbar Film
South Cinema17 mins ago

V Manohar: 23 ವರ್ಷಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟ ವಿ.ಮನೋಹರ್

TB Jayachandra granddaughter with letter to rahul gandhi
ಕರ್ನಾಟಕ22 mins ago

Karnataka Cabinet: ತಾತನನ್ನು ಮಿನಿಸ್ಟರ್‌ ಮಾಡಿ ಪ್ಲೀಸ್‌: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

new Simple One Scooter
ಆಟೋಮೊಬೈಲ್31 mins ago

Simple One: ಒಂದು ಚಾರ್ಜ್​​ಗೆ 212 ಕಿ.ಮೀ ಓಡುವ ಸ್ಕೂಟರ್​ ಬಿಡುಗಡೆ; ಇದರ ಬೆಲೆ ಎಷ್ಟು ಗೊತ್ತೇ?

upsc prelims 2023 IAS prelims 2023
ಉದ್ಯೋಗ33 mins ago

UPSC Prelims 2023: ನಾಳೆ ಯುಪಿಎಸ್‌ಸಿ ಪ್ರಿಲಿಮ್ಸ್‌; ಈ ಬಾರಿಯೂ ಕನ್ನಡದಲ್ಲಿ ನಡೆಯೋಲ್ಲ ಪರೀಕ್ಷೆ

soudi
ವೈರಲ್ ನ್ಯೂಸ್37 mins ago

Viral News : ನಿತ್ಯ ಶಾಪಿಂಗ್‌ಗೆಂದೇ 70 ಲಕ್ಷ ರೂ. ಖರ್ಚು ಮಾಡುತ್ತಾಳಂತೆ ಈ ಮಹಿಳೆ!

TB Jayachandra speaking with media
ಕರ್ನಾಟಕ39 mins ago

Karnataka Cabinet: ರಾಜ್ಯ ಕಾಂಗ್ರೆಸ್‌ ನಾಯಕರ ಜತೆಗೆ ಮಾತುಕತೆ ಕಟ್‌: ಸದನದಲ್ಲಿ ನೋಡ್ಕೊತೀನಿ ಎಂದ ಜಯಚಂದ್ರ

Pond near kolar
ಕರ್ನಾಟಕ45 mins ago

Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Laxmi Hebbalkar oath taking as a minister
ಕರ್ನಾಟಕ2 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ24 hours ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ1 day ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ1 day ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ2 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ2 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ3 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ3 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

horoscope today
ಪ್ರಮುಖ ಸುದ್ದಿ4 days ago

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಟ್ರೆಂಡಿಂಗ್‌

error: Content is protected !!