Site icon Vistara News

ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

Accident In Muddebihal

Accident In Muddebihal

ಮುದ್ದೇಬಿಹಾಳ (ವಿಜಯಪುರ): ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಬಾಲಕರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ವೇಗವಾಗಿ ಬಂದ ಟಿಪ್ಪರ್‌ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು, ದೇಹದ ತುಂಡುಗಳನ್ನು ಆರಿಸಿ ಸ್ಥಳೀಯರು ಆಂಬ್ಯುಲೆನ್ಸ್‌ಗೆ ಹಾಕಿದ್ದಾರೆ. ಮೃತರನ್ನು ಶರಣಮ್ಮ ಕಂಬಳಿ, ನಾಗೇಶ ಶಿವಪೂರೆ ಎಂದು ಗುರುತಿಸಲಾಗಿದೆ. ಇವರು ಮುದ್ನಾಳ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು; ಭಾವಿ ಪತಿ ಜತೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಆರು ಹಾಗೂ ಎಂಟು ವರ್ಷದ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಬಿಎಂಟಿಸಿ ಬಸ್‌ ಮೇಲೆ ಬಿದ್ದ ಮರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಅವಾಂತರಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜೋರು ಮಳೆಗೆ ಬಿಎಂಟಿಸಿ ಬಸ್‌ ಮೇಲೆ ಮರ ಬಿದ್ದಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಬಳಿ ಚಲಿಸುತ್ತಿದ್ದ ಬಸ್‌ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್‌ ಯಾರಿಗೂ ತೊಂದರೆಯಾಗಿಲ್ಲ. ಮರ ಬೀಳುತ್ತಲೇ ಜನ ಬಸ್‌ನಿಂದ ಇಳಿದರು. ಇನ್ನು ನಡು ರಸ್ತೆಯಲ್ಲೇ ಮರ ಬಿದ್ದ ಕಾರಣ ಸಂಚಾರ ದಟ್ಟಣೆ ಉಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ಆಗಮಿಸಿ ಮರ ತೆರವು ಮಾಡಿದರು.

Exit mobile version