Double Murder : ಅಮ್ಮ-ಮಗನನ್ನು ಕ್ರೂರವಾಗಿ ಕೊಂದ ಫೇಸ್‌ಬುಕ್‌ ಗೆಳೆಯ; ವರ್ಷದ ನಂತರ ಸಿಕ್ಕಿಬಿದ್ದ - Vistara News

ವಿಜಯಪುರ

Double Murder : ಅಮ್ಮ-ಮಗನನ್ನು ಕ್ರೂರವಾಗಿ ಕೊಂದ ಫೇಸ್‌ಬುಕ್‌ ಗೆಳೆಯ; ವರ್ಷದ ನಂತರ ಸಿಕ್ಕಿಬಿದ್ದ

Double Murder : ವಿಜಯಪುರದಲ್ಲಿ ಕಳೆದ ವರ್ಷ ಮಾರ್ಚ್‌ನಲ್ಲಿ ನಡೆದಿದ್ದ ತಾಯಿ-ಮಗನ ಕೊಲೆ ಕೇಸ್‌ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Double Murder case sagar, Shruthi and Her son rohith
ಕೊಲೆ ಆರೋಪಿ ಸಾಗರ್‌ ಹಾಗೂ ಹತ್ಯೆಯಾದ ಶೃತಿ ಹಾಗೂ ರೋಹಿತ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಒಂದು ವರ್ಷದ ಹಿಂದೆ ನಡೆದಿದ್ದ ತಾಯಿ-ಮಗನ (Mother son murdered) ಕೊಲೆ ಕೇಸ್‌ ಅನ್ನು ವಿಜಯಪುರ ಪೊಲೀಸರು (vijayapura Double Murder) ಭೇದಿಸಿದ್ದಾರೆ. ಮೈಸೂರು ಮೂಲದ ಶೃತಿ ಹಾಗೂ ಆಕೆಯ 13 ವರ್ಷದ ಮಗ ರೋಹನ್ ಹತ್ಯೆಯಾಗಿದ್ದರು. ವಿಜಯಪುರದ ಸಾಗರ್ ನಾಯಕ್ ಎಂಬಾತ ಅತಿ ಕ್ರೂರವಾಗಿ ಕೊಂದು ಇಬ್ಬರ ಹೆಣಗಳನ್ನು ಬ್ಯಾಗ್‌ವೊಂದರಲ್ಲಿ ತುಂಬಿ ಬಾವಿಗೆ ಬಿಸಾಡಿದ್ದ. ಕಳೆದ 2023ರ ಮಾರ್ಚ್ 13ರಂದು ಡಬಲ್ ಮರ್ಡರ್ (Double Murder) ನಡೆದಿತ್ತು.

ಆರೋಪಿ ಸಾಗರ್ ನಾಯಕ್ ಮೈಸೂರಿನಲ್ಲಿದ್ದಾಗ ಫೇಸ್‌ಬುಕ್ ಮೂಲಕ ಶೃತಿ ಪರಿಚಯವಾಗಿತ್ತು. ವಿವಾಹಿತೆ ಜತೆಗಿನ ಪರಿಚಯವು ಪ್ರೀತಿಗೆ ತಿರುಗಿತ್ತು. ಆದರೆ ಕೆಲ ಸಮಯದ ನಂತರ ಆಕೆಯ ನಡತೆ ಮೇಲೆ ಸಂಶಯಗೊಂಡ ಸಾಗರ್‌, ಆಕೆಯಿಂದ ದೂರಾಗಿ ವಿಜಯಪುರಕ್ಕೆ ಬಂದಿದ್ದ.

ಆದರೆ ಸಾಗರ್‌ನನ್ನು ಅತಿಯಾಗಿ ಪ್ರೀತಿಸುತ್ತಿದ್ದ ಶೃತಿ ಆತನನ್ನು ಬಿಟ್ಟು ಇರಲಾಗದೇ 2023ರ ಮಾರ್ಚ್‌ 13ರಂದು ಮಗ ರೋಹಿತ್‌ ಜತೆಗೆ ಲಗೇಜ್ ಸಮೇತ ವಿಜಯಪುರಕ್ಕೆ ಬಂದಿದ್ದಳು. ಹೀಗೆ ಬಂದ ಅಮ್ಮ-ಮಗನಿಗೆ ಖುದ್ದು ಸಾಗರ್‌ನೇ ಸಿಂದಗಿ ರಸ್ತೆಯ ಪೋರ್ ವೇ ಲಾಡ್ಜ್‌ವೊಂದರಲ್ಲಿ ಉಳಿಸಿದ್ದ.

Double murder case Accused sagar and shruthi her son rohith
ಫೇಸ್‌ಬುಕ್‌ ಗೆಳೆಯನ ಹಿಂದೆ ಬಿದ್ದು ಕೊಲೆಯಾದ ಶೃತಿ ಹಾಗೂ ಆಕೆಯ ಮಗ ರೋಹಿತ್‌

ಆ ದಿನ ಲಾಡ್ಜ್‌ಗೆ ಬಂದಿದ್ದ ಸಾಗರ್‌, ಶೃತಿ ಜತೆಗೆ ಗಲಾಟೆ ಮಾಡಿಕೊಂಡಿದ್ದ. ಸಿಟ್ಟಲ್ಲಿ ಆಕೆಯ ಕುತ್ತಿಗೆ ಹಿಸುಕಿ ಕೊಂದು ಹಾಕಿದ್ದ. ಬಳಿಕ ರೋಹಿತ್‌ ಕೊಲೆಗೆ ಸಾಕ್ಷಿಯಾಗುತ್ತಾನೆ ಎಂದು ಆತಂಕಗೊಂಡ ಸಾಗರ್‌, ಅವನನ್ನು ಕೊಲೆ ಮಾಡಿದ್ದ. ಶೃತಿ ಮೈಸೂರಿನಿಂದ ತಂದಿದ್ದ ಲಗೇಜ್‌ನಲ್ಲಿಯೇ ಅವರ ಹೆಣಗಳನ್ನು ಪ್ಯಾಕ್ ಮಾಡಿ ಮಹಾರಾಷ್ಟ್ರ ಗಡಿಯ ಸಿದ್ದಾಪುರ ಗ್ರಾಮದ ಹೊರವಲಯದಲ್ಲಿದ್ದ ಬಾವಿಯಲ್ಲಿ ಬಿಸಾಡಿ, ಅಲ್ಲಿಂದ್ದ ಕಾಲ್ಕಿತ್ತಿದ್ದ.

ಇದನ್ನೂ ಓದಿ: Dead Body found : ಕ್ಯಾಂಪ್‌ ಪೊಲೀಸ್‌ ಠಾಣೆ ಆವರಣದಲ್ಲೇ ಇತ್ತು ಕೊಳೆತ ಶವ!

ಬಾವಿಯಲ್ಲಿ ತೇಲಿ ಬಂದಿತ್ತು ಬ್ಯಾಗ್‌

ಇತ್ತ ವಾರದ ಬಳಿಕ ಬಾವಿಯಲ್ಲಿ ಬ್ಯಾಗ್‌ಗಳು ತೇಲಿ ಬಂದಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಬಂದಿದ್ದ ತ್ರಿಕೋಟ ಪೊಲೀಸರು ಪರಿಶೀಲನೆ ನಡೆಸಿದಾಗ, ತಾಯಿ- ಮಗನ ಶವ ಪತ್ತೆಯಾಗಿದ್ದವು. ಆದರೆ ಕೊಳೆತ ಸ್ಥಿತಿಯಲ್ಲಿ ಶವಗಳು ಸಿಕ್ಕಿದ್ದರಿಂದ ಗುರುತು ಪತ್ತೆಯಾಗಿರಲಿಲ್ಲ. ಇತ್ತ ಯಾವುದೇ ಕ್ಲೂ ಇಲ್ಲದ ಪ್ರಕರಣವಾಗಿ ಹಾಗೇ ಉಳಿದಿತ್ತು.

Double Murder case at vijayapura
ಬಾವಿಯಲ್ಲಿ ತೇಲಿ ಬಂದಿದ್ದ ಬ್ಯಾಗ್‌ ಅನ್ನು ಹೊರತೆಗೆದಿದ್ದ ಪೊಲೀಸರು

ಈ ನಡುವೆ ಕಳೆದ ಫೆಬ್ರವರಿಯಲ್ಲಿ ಶೃತಿ ಸಂಬಂಧಿಕರು ಮೈಸೂರಿನಲ್ಲಿ ಮಿಸ್ಸಿಂಗ್ ಕೇಸ್ ದಾಖಲು ಮಾಡಿದ್ದರು. ಮೈಸೂರು ಮಿಸ್ಸಿಂಗ್ ಕೇಸ್ ಹಾಗೂ ವಿಜಯಪುರದಲ್ಲಿ ನಡೆದ ಡಬಲ್ ಮರ್ಡರ್ ಕೇಸ್‌ನಲ್ಲಿ ಸಿಕ್ಕ ವಸ್ತುಗಳಿಗೆ ಸಾಮ್ಯತೆ ಇತ್ತು. ಶೃತಿ ಸಂಬಂಧಿಕರು ಮೃತದೇಹಗಳನ್ನು ಗುರುತಿಸಿದ್ದರು. ಇದರ ಜಾಡು ಹಿಡಿದು ಶೃತಿಯ ಕಾಲ್‌ ಲಿಸ್ಟ್‌ ತೆರೆದಾಗ ಸಾಗರ್‌ ಸಿಕ್ಕಿಬಿದಿದ್ದ.

ಬಳಿಕ ಪ್ರಕರಣ ಸಂಬಂಧ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಎಲ್ಲವನ್ನೂ ಬಾಯ್ಬಿಟ್ಟಿದ್ದ. ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಆರಾಮಾಗಿದ್ದ ಸಾಗರ್‌ ವರ್ಷದ ಬಳಿಕ ಸಿಕ್ಕಿಬಿದ್ದಿದ್ದಾನೆ. ಗ್ರಾಮೀಣ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆಯಾಗುವ (Heavy Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜೋರಾಗಿ ಗಾಳಿ ಬೀಸುವುದರಿಂದ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿಐಲ್ಲಿ ಮಧ್ಯಮ ಮಳೆಯಾಗುವ (Rain News) ನಿರೀಕ್ಷೆ ಇದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ರಾಯಚೂರು ಹಾಗೂ ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯನಗರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿರಲಿದೆ.

ಇದನ್ನೂ ಓದಿ: Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Karnataka Weather Forecast : ವಿವಿಧೆಡೆ ಭಾರಿ ಗಾಳಿ-ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಮಡಿಕೇರಿಯಲ್ಲಿ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದೆ. ಶುಕ್ರವಾರವು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಪ್ರಸಂಗವು ನಡೆದಿದೆ.

VISTARANEWS.COM


on

By

karnataka weather Forecast
Koo

ಕೊಡಗು/ಕೊಪ್ಪಳ/ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಗುರುವಾರದಂದು ಕೊಡಗು‌ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ (Karnataka Weather Forecast) ಮಳೆಯಾಗಿದೆ. ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗುತ್ತಿದೆ. ಮುಂಜಾನೆ ಮೋಡ‌ ಕವಿದ ವಾತಾವರಣವಿದ್ದು, ಸಂಜೆ‌ ಅಬ್ಬರದೊಂದಿಗೆ ಮಳೆ ಸುರಿಯುತ್ತಿದೆ. ಮಳೆಯಿಂದ ಕೊಡಗಿನ‌ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಮಡಿಕೇರಿ ಸಮೀಪ ನಿಲ್ಲಿಸಿದ್ದ ಕಾರಿನ ಮೇಲೆ ಭಾರಿ ಗಾಳಿ‌ಗೆ ಮರವು ಧರೆಗುರುಳಿದೆ. ಮಡಿಕೇರಿಯ ಸುದರ್ಶನ ಅಥಿತಿಗೃಹದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇರಲಿಲ್ಲ.

ಇತ್ತ ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಬಿಸಿಲನಿಂದ ಕಂಗೆಟ್ಟ ಜನರಿಗೆ ಗಾಳಿ ಸಹಿತ ಮಳೆಯು ಅಬ್ಬರಿಸಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್‌ನಲ್ಲೂ ಉತ್ತಮ ಮಳೆಯಾಗಿದೆ. ಬೆಳಗ್ಗೆನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್‌ಪೋರ್ಟ್‌ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷಿಯಾದರು. ಮಳೆಗೆ ವಾತಾವರಣವು ಕೂಲ್‌ ಆಗಿತ್ತು.

ವಿಜಯನಗರದಲ್ಲಿ ಮಳೆಗೆ ಉರುಳಿದ ಬಾಳೆ ಬೆಳೆ

ಹಂಪಿ ಪರಿಸರದಲ್ಲಿ ಸುರಿದ ಮಳೆಗೆ ಬಾಳೆ ಬೆಳೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ. ರೈತಾಪಿ ವರ್ಗ ವರ್ಷದ ಮೊದಲ ದೊಡ್ಡ ಮಳೆ ಎಂದೇ ಕೊಂಡಾಡಿದ್ದಾರೆ. ವೆಂಕಟಾಪುರ ಮಾಗಣೆ, ನಿಂಬಾಪುರ, ಬುಕ್ಕಸಾಗರ ಮಾಗಣೆ ಗ್ರಾಮಗಳಲ್ಲಿ ಬಾಳೆ ಬೆಳೆ ನೆಲಕ್ಕೆ ಬಿದ್ದಿದೆ.

ರೈತರು ಹೆಚ್ಚಾಗಿ ಸುಗಂದಿ, ಏಲಕ್ಕಿ, ಸಕ್ಕರೆ ಬಾಳೆಯನ್ನು ಬೆಳೆದಿದ್ದರು. ವೆಂಕಟಾಪುರ ಮಾಗಣೆಯಲ್ಲಿ ಗ್ರಾಮದಲ್ಲಿ ಬಾಳೆಗಿಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಎಕರೆಗೆ 900 ಗಿಡಗಳು ನೆಟ್ಟಿದರೆ ಕೆಲವೆಡೆ 300 ರಿಂದ 400 ಬಾಳೆ ಗಿಡ ನೆಲಸಮವಾಗಿವೆ. ಕೆಲವೆಡೆ ಎಕೆರೆಗಟ್ಟಲೇ ಗಿಡಗಳು ನೆಲಕ್ಕುರುಳಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಳೆ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಇನ್ನೂ ಹಲವು ತಿಂಗಳಿಂದ ತುರ್ತಾ, ಬಸವಣ್ಣ, ರಾಯ ಕಾಲುವೆಗಳಲ್ಲಿ ನೀರಿಲ್ಲದೇ ಬರಿದಾಗಿತ್ತು. ಇದೀಗ ಮಳೆಗೆ ಕಾಲುವೆಗಳಲ್ಲೂ ನೀರು ಹರಿದಿದ್ದು, ರೈತರಲ್ಲೂ ಕೊಂಚ ಸಂತಸಗೊಂಡಿದ್ದಾರೆ.

ತುಮಕೂರಲ್ಲಿ ಮಳೆಗಾಗಿ ಮಕ್ಕಳಿಗೆ ಮದುವೆ

ಕೆಲವೆಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಮಳೆಗಾಗಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಳೆಗಾಗಿ ತುಮಕೂರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ತೀವ್ರ ಬರ ಹಿನ್ನೆಲೆಯಲ್ಲಿ ಬೆಳದಿಂಗಳು ಹಬ್ಬ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಚಿಕ್ಕ ಮಕ್ಕಳಿಗೆ ವಧು-ವರರಂತೆ ಸಿಂಗಾರಿಸಿ, ಅಲಂಕಾರಿಸಿ ಮದುವೆ ಮಾಡಿ ವಿಶೇಷ ಆಚರಣೆ ಮಾಡಿದ್ದಾರೆ. ತುಮಕೂರಿನ ಜಯಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆಗಾಗಿ ಜನರು ಹಲವು ಆಚರಣೆಗಳ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಭಾರಿ ಮಳೆಯೊಂದಿಗೆ ರಭಸವಾಗಿ ಬೀಸಲಿದೆ ಗಾಳಿ

ಮೇ 10ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನಲ್ಲಿ ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಸಿನ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗರಿಷ್ಠ ತಾಪಮಾನವು 2-4 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 34-22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLC Result 2024: ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

VISTARANEWS.COM


on

SSLC Result 2024 SSLC 2nd and 3rd exam aspirants to have special classes
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading

ಕರ್ನಾಟಕ

SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

SSLC Result 2024: ಮಂಡಳಿಯು ಈಗಾಗಲೇ ಪರೀಕ್ಷೆ-1, 2, 3 ರ ಹೊಸ ಮಾದರಿಯನ್ನು ಪರಿಚಯಿಸಿದೆ. ಇದರಿಂದಾಗಿ ಮೊದಲನೆಯ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಉತ್ತೀರ್ಣರಾಗದಿದ್ದರೆ, ಫಲಿತಾಂಶವನ್ನು ಫೇಲ್‌ ಎಂದು ನಮೂದು ಮಾಡಲಾಗುತ್ತಿಲ್ಲ. ಈ ವಿದ್ಯಾರ್ಥಿಗಳಿಗೆ ಬಾಕಿ 2 ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ಆ ಪರೀಕ್ಷೆಗಳಲ್ಲಿ ಬರುವ ಗರಿಷ್ಠ ಅಂಕಗಳ ಆಧಾರದ ಮೇಲೆ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು. ಹೀಗಾಗಿ ಸದ್ಯಕ್ಕೆ ಯಾರನ್ನೂ ಫೇಲ್‌ ಎಂದು ಪ್ರಕಟಿಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.

VISTARANEWS.COM


on

No one has failed in SSLC says Education Department
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಇಷ್ಟಾದರೂ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ. ಅಂದರೆ, ಫಲಿತಾಂಶವನ್ನು ನೋಡಿದ ವಿದ್ಯಾರ್ಥಿಗಳಿಗೆ ಆಘಾತವಾಗದಿರಲು ಕ್ರಮ ಕೈಗೊಳಳಲಾಗಿದೆ. ವಿದ್ಯಾರ್ಥಿಯು ಉತ್ತೀರ್ಣರಾಗದಿದ್ದರೆ, ವಿದ್ಯಾರ್ಥಿಯ ಫಲಿತಾಂಶವನ್ನು NC (Not Completed -ಪೂರ್ಣಗೊಳಿಸಲಾಗಿಲ್ಲ) ಎಂದು ತೋರಿಸಲಾಗುತ್ತದೆ.

ಮಂಡಳಿಯು ಈಗಾಗಲೇ ಪರೀಕ್ಷೆ-1, 2, 3 ರ ಹೊಸ ಮಾದರಿಯನ್ನು ಪರಿಚಯಿಸಿದೆ. ಇದರಿಂದಾಗಿ ಮೊದಲನೆಯ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು ಉತ್ತೀರ್ಣರಾಗದಿದ್ದರೆ, ವಿದ್ಯಾರ್ಥಿಯ ಫಲಿತಾಂಶವನ್ನು NC-Not Completed (ಪೂರ್ಣಗೊಳಿಸಲಾಗಿಲ್ಲ) ಎಂದು ತೋರಿಸಲಾಗುತ್ತದೆ.

ಇದನ್ನೂ ಓದಿ: SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಈ ವೇಳೆ ಈ ವಿದ್ಯಾರ್ಥಿಗಳಿಗೆ ಬಾಕಿ 2 ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ಆ ಪರೀಕ್ಷೆಗಳಲ್ಲಿ ಬರುವ ಗರಿಷ್ಠ ಅಂಕಗಳ ಆಧಾರದ ಮೇಲೆ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು. ಹೀಗಾಗಿ ಸದ್ಯಕ್ಕೆ ಯಾರನ್ನೂ ಫೇಲ್‌ ಎಂದು ಪ್ರಕಟಿಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.

ಫಲಿತಾಂಶ ಕುಸಿತಕ್ಕೆ ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಇದಕ್ಕೆ ನೂತನವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ವೆಬ್‌ಕಾಸ್ಟಿಂಗ್‌ ಮೂಲಕ ಪರೀಕ್ಷೆ ನಡೆಸಿದ್ದೇ ಕಾರಣ ಎಂದು ಶಿಕ್ಷಣ ಇಲಾಖೆ ಒಪ್ಪಿಕೊಂಡಿದೆ. ಈ ಕಾರಣದಿಂದಾಗಿಯೇ ಗ್ರೇಸ್‌ ಮಾರ್ಕ್ಸ್‌ ಕೊಡುವ ಪ್ರಮೇಯ ಬಂದಿದೆ ಎಂಬುದನ್ನು ಸೂಚ್ಯವಾಗಿ ಹೇಳಿದೆ.

2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ. ಹಾಗಾದರೆ, ಈ ಫಲಿತಾಂಶವು ಏಕಾಏಕಿ ಕುಸಿತ ಕಾಣಲು ಏನು ಎಂಬುದನ್ನು ನೋಡಲು ಹೊರಟರೆ ಶಿಕ್ಷಣ ಇಲಾಖೆಯ ಕಠಿಣ ಕ್ರಮ ಎಂಬುದು ತಿಳಿಯುತ್ತದೆ. ಪ್ರತಿ ವರ್ಷ ಕೆಲವು ಕಡೆ ನಕಲು ಮಾಡಿದ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ತೆಗೆದುಕೊಂಡ ಕ್ರಮವೇ ಇದಕ್ಕೆ ಕಾರಣ ಎಂಬ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ಬಂದಿದೆ.

ಹೀಗಾಗಿ ಈ ಬಾರಿ ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದರಿಂದಾಗಿ ಪರೀಕ್ಷಾ ಮೇಲ್ವಿಚಾರಕರು ಸಹ ಕಟ್ಟುನಿಟ್ಟಾಗಿ ಪರೀಕ್ಷೆಗಳನ್ನು ನಡೆಸಿದ್ದರು. ಇದರ ಪರಿಣಾಮವಾಗಿ ಒಟ್ಟಾರೆ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ.

ಒಪ್ಪಿಕೊಂಡಿರುವ ಶಿಕ್ಷಣ ಇಲಾಖೆ

ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಗ್ರೇಸ್‌ ಮಾರ್ಕ್ಸ್‌ ನಿರ್ಧಾರವನ್ನು ಕೈಗೊಂಡಿದ್ದಾಗಿ ಶಿಕ್ಷಣ ಇಲಾಖೆ ಹೇಳಿದೆ. ಅಂದರೆ, ನಕಲು ಮಾಡಲು ಸಾಧ್ಯವಾಗದ ಕಾರಣ ಹೆಚ್ಚಿನ ಕಡೆ ಫಲಿತಾಂಶ ಕುಸಿದಿದೆ ಎಂಬುದನ್ನು ಶಿಕ್ಷಣ ಇಲಾಖೆ ಪರೋಕ್ಷವಾಗಿ ಒಪ್ಪಿಕೊಂಡಂತೆ ಆಗಿದೆ. ಇನ್ನು ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

Continue Reading
Advertisement
Char Dham Yatra
ದೇಶ6 mins ago

Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

hd revanna jailed 2
ಕ್ರೈಂ18 mins ago

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

Aravind Kejriwal
ದೇಶ50 mins ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ60 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 20241 hour ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 20241 hour ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ1 hour ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ2 hours ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ2 hours ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ2 hours ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ12 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ13 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ14 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ20 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ21 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು23 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌