Vistara News Launch | ಮಾಧ್ಯಮಗಳಿಗೆ ವಿಸ್ತಾರ ನ್ಯೂಸ್‌ ಮೇಲ್ಪಂಕ್ತಿ ಆಗಲಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ ವಿಶ್ವಾಸ - Vistara News

ಕರ್ನಾಟಕ

Vistara News Launch | ಮಾಧ್ಯಮಗಳಿಗೆ ವಿಸ್ತಾರ ನ್ಯೂಸ್‌ ಮೇಲ್ಪಂಕ್ತಿ ಆಗಲಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ ವಿಶ್ವಾಸ

ವಿಸ್ತಾರ ನ್ಯೂಸ್‌ ಚಾನೆಲ್‌ (Vistara News Launch) ನಾಡಿನ ಮನೆಮಾತಾಗಲಿ ಎಂದು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶುಭ ಹಾರೈಸಿದರು.

VISTARANEWS.COM


on

Vistara Kageri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿರುವ ಎಲ್ಲ ಚಾನೆಲ್‌ಗಳನ್ನು ಜನ ವೀಕ್ಷಿಸುತ್ತಿದ್ದಾರೆ. ಹತ್ತಾರು ಚಾನೆಲ್‌ಗಳ ಸ್ಪರ್ಧೆಯ ಮಧ್ಯೆಯೂ ವಿಸ್ತಾರ ನ್ಯೂಸ್‌ (Vistara News Launch) ವಿಭಿನ್ನವಾಗಿ ನಿಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಸ್ತಾರ ನ್ಯೂಸ್‌ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿಸ್ತಾರ ನ್ಯೂಸ್‌ ಏಳಿಗೆ ಹೊಂದುವುದರಲ್ಲಿ ಯಾವುದೇ ಅನುಮಾನವಿಲ್ಲ. ಏಕೆಂದರೆ, ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ, ಚೇರ್ಮನ್‌ ಹಾಗೂ ಎಂಡಿ ಎಚ್‌.ವಿ.ಧರ್ಮೇಶ್‌ ಸೇರಿ ಹಲವು ಅನುಭವಿಗಳ ದಂಡೇ ಇದೆ. ಸಕಾರಾತ್ಮಕ ಧೋರಣೆಯಿಂದ ಮುನ್ನುಗ್ಗುತ್ತಿರುವ ತಂಡವು ಯಶಸ್ವಿಯಾಗಲಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯು ಎಲೆಮರೆಯ ಕಾಯಿಗಳನ್ನೂ ಮುನ್ನೆಲೆಗೆ ತರುವ ಕೆಲಸ ಮಾಡಲಿ” ಎಂದು ತಿಳಿಸಿದರು.

“ಎಲ್ಲ ಸಂಸ್ಥೆಗಳಲ್ಲೂ ಮೌಲ್ಯಗಳ ಕುಸಿತವಾಗುತ್ತಿದೆ. ಆದರೆ, ಪ್ರತಿಯೊಂದು ಸಂಸ್ಥೆಗೂ ಮೇಲ್ಪಂಕ್ತಿಯ ಅಗತ್ಯವಿದೆ. ಇದರ ದಿಸೆಯಲ್ಲಿ ವಿಸ್ತಾರ ನ್ಯೂಸ್‌ ಮೇಲ್ಪಂಕ್ತಿ ಹಾಕಿಕೊಡಲಿ. ಯಲ್ಲಾಪುರದ ಕೋಣೆಮನೆ ಎಂಬ ಹಳ್ಳಿಯಲ್ಲಿ ಹುಟ್ಟಿ, ಶ್ರಮ ವಹಿಸಿ ಹರಿಪ್ರಕಾಶ್‌ ಕೋಣೆಮನೆ ಅವರು ಉನ್ನತ ಹುದ್ದೆ ಗಳಿಸಿದ್ದಾರೆ. ಅವರಿಂದ ನಾಡಿಗೆ ಒಳ್ಳೆಯದಾಗುತ್ತದೆ ಎಂಬ ಅಚಲ ವಿಶ್ವಾಸವಿದೆ” ಎಂದರು.

ಪತ್ರಿಕೋದ್ಯಮಕ್ಕೆ ಉತ್ತರ ಕನ್ನಡದ ಕೊಡುಗೆ ಅಪಾರ

“ನಾಡಿನ ಪತ್ರಿಕೋದ್ಯಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಕೊಡುಗೆ ಅಪಾರವಾಗಿದೆ” ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. “ಉತ್ತರ ಕನ್ನಡದ ಪತ್ರಕರ್ತರು ಬಹಳ ವರ್ಷಗಳ ಹಿಂದಿನಿಂದಲೂ ಅಮೂಲ್ಯ ಕೊಡುಗೆ ನೀಡಿದ್ದಾರೆ. ಜಿಲ್ಲೆಯ ಹಲವಾರು ಹಿರಿಯ ಪತ್ರಕರ್ತರು ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಉತ್ತರ ಕನ್ನಡದವರೇ ಆದ ಹರಿಪ್ರಕಾಶ್‌ ಕೋಣೆಮನೆ ಅವರು ಜಿಲ್ಲೆಗಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ಹೆಮ್ಮೆ ತರಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ | Vistara news launch | ಮಾಧ್ಯಮಗಳು ಜನಪರವಾಗಿರುವುದು ನಿರ್ಣಾಯಕ : ಕೇಂದ್ರ ಸಚಿವ ಎಲ್.‌ ಮುರುಗನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Weather Forecast : ರಾಜ್ಯದ ಹಲವೆಡೆ ಮಳೆಗೆ (Rain News) ಅವಾಂತರಗಳೇ ಸೃಷ್ಟಿಯಾಗಿವೆ. ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತಗೊಂಡರೆ, ಯಾದಗಿರಿಯಲ್ಲಿ ಮನೆ ಚಾವಣಿ ಕುಸಿದಿದೆ. ವಿಜಯನಗರದ ರೈಲ್ವೆ ನಿಲ್ದಾಣದಲ್ಲಿ ಚಾವಣಿಯಿಂದ ನೀರು ಸೋರಿಕೆ ಆಗುತ್ತಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯೊಂದಿಗೆ ಗುಡುಗು ಇರಲಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಸೇರಿದಂತೆ ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ: Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಕಡಲತೀರಕ್ಕೆ ಇಳಿಯದಂತೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಅಲೆಗಳ ಅಬ್ಬರ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕಡಲತೀರದಲ್ಲಿ ಲೈಫ್‌ಗಾರ್ಡ್‌ಗಳು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಘಟ್ಟದ ಮೇಲಿನ ಕೆಲ ತಾಲೂಕುಗಳಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಕರಾವಳಿ ತಾಲೂಕುಗಳಲ್ಲಿ ಬಿಸಿಲಿನ ವಾತಾವರಣ ಇತ್ತು.

ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆ

ಮಳೆಯಿಂದಾಗಿ ರೈಲ್ವೆ ನಿಲ್ದಾಣದ ಚಾವಣಿಯು ಸೋರಿಕೆ ಆಗುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿಜಯನಗರದ ಹೊಸಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಭಾರಿ ಮಳೆಯಿಂದ ಅವಾಂತರವೇ ಸೃಷ್ಟಿಸಿಯಾಗಿದೆ. ರೈಲು ನಿಲ್ದಾಣದ ಒಳಗೆ ಮಳೆ ನೀರು ನುಗ್ಗಿದ್ದು, ಹೊಸಪೇಟೆ ರೈಲ್ವೆ ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿ ಮಳೆ ನೀರು ಸೋರುತ್ತಿದೆ. ಒಂದು ವರ್ಷದ ಹಿಂದೆ ಕೇಂದ್ರ ಸರ್ಕಾರವು ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿತ್ತು.

ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತ

ರಾಯಚೂರಲ್ಲಿ ಅಬ್ಬರದ ಮಳೆ ಮುಂದುವರಿದಿದ್ದು, ಹಲವು ಗ್ರಾಮಗಳ ಸೇತುವೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಫತ್ತೇಪೂರ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಅಪಾಯದಲ್ಲೇ ಸೇತುವೆ ದಾಟಲು ಜನರು ಮುಂದಾಗುತ್ತಿದ್ದಾರೆ. ಸ್ವಲ್ಪ ಯಾಮಾರಿದರೂ ನೀರಲ್ಲಿ‌ ಕೊಚ್ಚಿ ಹೋಗುವ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಮಳೆಗೆ ಚಾವಣಿ ಕುಸಿತ

ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಇಡೀ ಮನೆಯ ಚಾವಣಿ ಕುಸಿದಿದ್ದು, ಪವಾಡ ಸದೃಶ್ಯ ಎಂಬಂತೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ತೆಗ್ಗೆಳ್ಳಿ ಗ್ರಾಮದ ಭೀರಪ್ಪ ಪೂಜಾರಿ ಹಾಗೂ ಸುರೇಶ್ ಕಲ್ಮನಿ ಎಂಬುವರಿಗೆ ಸೇರಿದ ಮನೆಯು ವಿಪರೀತ ಗಾಳಿ ಮಳೆಯಿಂದ ಚಾವಣಿ ಕುಸಿದಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ಸಂಪೂರ್ಣ ಹಾಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Lok Sabha Election 2024: ಲೋಕಸಭಾ ಚುನಾವಣೆ ಫಲಿತಾಂಶ ಬಿಡುಗಡೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ (Lok Sabha Election 2024) ಹಿನ್ನೆಲೆಯಲ್ಲಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory order) ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಹೀಗಾಗಿ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ; ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

Lockup Death

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್‌ ಡೆತ್‌ ಪ್ರಕರಣ (Lockup Death) ಸಂಬಂಧ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅಮಾನತುಗೊಂಡಿದ್ದಾರೆ. ಮೂವರು ಅಧಿಕಾರಿಗಳನ್ನ ಸೇವೆಯಿಂದ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ.

ಮೇ 24 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿದ್ದ ಆದಿಲ್ ಎಂಬ ಯುವಕ ಮೃತಪಟ್ಟಿದ್ದರಿಂದ ಕುಟುಂಬಸ್ಥರು ಲಾಕಪ್ ಡೆತ್ ಆರೋಪ ಮಾಡಿ, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಹೇಳಿದ್ದರು. ನಂತರ ಸಂಬಂಧಿಕರು, ಸ್ಥಳೀಯರು ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ | Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. ಹೀಗಾಗಿ ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Prajwal Revanna Video: ಪ್ರಜ್ವಲ್‌ ಪ್ರತ್ಯಕ್ಷನಾಗಿದ್ದಕ್ಕೆ ಸಮಾಧಾನ ಆಯ್ತು ಎಂದ ಎಚ್‌ಡಿಕೆ; ಫಸ್ಟ್‌ ರಿಯಾಕ್ಷನ್‌ ಹೀಗಿದೆ

Prajwal Revanna Video: ವಿದೇಶದಲ್ಲಿದ್ದುಕೊಂಡೇ ಪ್ರಜ್ವಲ್‌ ರೇವಣ್ಣ ವಿಡಿಯೊ ಬಿಡುಗಡೆ ಮಾಡಿದ್ದಾರೆ. “ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ” ಎಂದಿದ್ದಾರೆ. ಇದಕ್ಕೆ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Prajwal Revanna Video
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಲೇ ವಿದೇಶಕ್ಕೆ ತೆರಳಿ, ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ (Prajwal Revanna Video) ಮೂಲಕ ಪ್ರತ್ಯಕ್ಷರಾಗಿದ್ದಾರೆ. ವಿದೇಶದಿಂದಲೇ ವಿಡಿಯೊ ಬಿಡುಗಡೆ ಮಾಡಿರುವ ಪ್ರಜ್ವಲ್‌ ರೇವಣ್ಣ, “ನಾನು ಎಲ್ಲೂ ತಲೆಮರೆಸಿಕೊಂಡಿಲ್ಲ. ಮೇ 31ರಂದು ಬೆಳಗ್ಗೆ ಬಂದು ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತೇನೆ. ನೆಲದ ಕಾನೂನು ಗೌರವಿಸಿ, ದೋಷಮುಕ್ತನಾಗಿ ಹೊರಬರುವ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ. ಇದರ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಪ್ರತಿಕ್ರಿಯಿಸಿದ್ದು, “ಪ್ರಜ್ವಲ್‌ ರೇವಣ್ಣನನ್ನು ನೋಡಿ ಸಮಾಧಾನ ಅಗಿದೆ” ಎಂದು ತಿಳಿಸಿದ್ದಾರೆ.

“ಪ್ರಕರಣದ ಕುರಿತು ಎಸ್‌ಟಿ ತನಿಖೆ ನಡೆಸುತ್ತಿದೆ, ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡೋಣ. ಪ್ರಜ್ವಲ್‌ ರೇವಣ್ಣನನ್ನು ನೋಡಿ ನನಗೆ ಈಗ ಸಮಾಧಾನ ಆಗಿದೆ. ಪ್ರಕರಣದ ಬಗ್ಗೆ ಎಚ್.ಡಿ.ದೇವೇಗೌಡರು ಮಾತನಾಡಿದ್ದಾರೆ. ದೇವೇಗೌಡರು ಪ್ರಜ್ವಲ್ ರೇವಣ್ಣಗೆ ಮನವಿ ಹಾಗೂ ಎಚ್ಚರಿಕೆ ಕೊಟ್ಟಿದ್ದರು. ಅದರಂತೆ ಈಗ ಭಾರತಕ್ಕೆ ವಾಪಸ್‌ ಆಗುವುದಾಗಿ ಪ್ರಜ್ವಲ್‌ ರೇವಣ್ಣ ಹೇಳಿದ್ದಾನೆ. ಎಸ್‌ಐಟಿ ವಿಚಾರಣೆ ಬಳಿಕ ಏನಾಗುತ್ತದೆ ಎಂಬುದನ್ನು ನೋಡೋಣ” ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

Continue Reading

ಕರ್ನಾಟಕ

Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

Prajwal Revanna Video: ನನಗೆ ಪ್ರಕರಣದ ಬಗ್ಗೆ ಗೊತ್ತೇ ಇರಲಿಲ್ಲ, ನಾನು ತಪ್ಪೇ ಮಾಡಿಲ್ಲ, ಕಾನೂನಿನ ಬಗ್ಗೆ ಗೌರವ ಇದೆ ಎನ್ನುವ ಪ್ರಜ್ವಲ್‌ ರೇವಣ್ಣ ಅವರು ಕಳೆದ 1 ತಿಂಗಳಿಂದ ಏಕೆ ವಿಚಾರಣೆಗೆ ಹಾಜರಾಗಲಿಲ್ಲ? ಸಾರ್ವಜನಿಕರಿಗೆ ಮುಖ ತೋರಿಸಲಿಲ್ಲ? ಇಂತಹ ಹತ್ತಾರು ಪ್ರಶ್ನೆಗಳು ನಿಮ್ಮ ಮನಸ್ಸಿನಲ್ಲೂ ಇರಬಹುದು. ಅವುಗಳನ್ನು ವಿಸ್ತಾರ ನ್ಯೂಸ್‌ ಕೇಳಿದೆ.

VISTARANEWS.COM


on

Prajwal Revanna Video
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರೀಗ ವಿಡಿಯೊದಲ್ಲಿ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದಾರೆ ಎನ್ನಲಾಗುವ ಪ್ರಜ್ವಲ್‌ ರೇವಣ್ಣ, ವಿಡಿಯೊ (Prajwal Revanna Video) ಬಿಡುಗಡೆ ಮಾಡಿದ್ದು, “ನಾನು ಮೇ 31ರಂದು ವಿಚಾರಣೆಗೆ ಹಾಜರಾಗುತ್ತೇನೆ. ನಾನು ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತಿದ್ದು, ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂದಿದ್ದಾರೆ. ಆದರೆ, ನನಗೆ ಪ್ರಕರಣದ ಬಗ್ಗೆ ಗೊತ್ತೇ ಇರಲಿಲ್ಲ, ನಾನು ತಪ್ಪೇ ಮಾಡಿಲ್ಲ, ಕಾನೂನಿನ ಬಗ್ಗೆ ಗೌರವ ಇದೆ ಎನ್ನುವ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಕಳೆದ 1 ತಿಂಗಳಿಂದ ಏಕೆ ವಿಚಾರಣೆಗೆ ಹಾಜರಾಗಲಿಲ್ಲ? ಸಾರ್ವಜನಿಕರಿಗೆ ಮುಖ ತೋರಿಸಲಿಲ್ಲ? ಜನರ ಮನಸಲ್ಲಿರುವ ಇಂತಹ 10 ಪ್ರಶ್ನೆಗಳನ್ನು ‘ವಿಸ್ತಾರ ನ್ಯೂಸ್’‌ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿದೆ. ಅವು ಇಂತಿವೆ.

ವಿಸ್ತಾರ ನ್ಯೂಸ್‌ 10 ಪ್ರಶ್ನೆಗಳು

  1. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಾಗಿದೆ ಎಂದು ಹೇಳುತ್ತಿರುವ ನೀವು ಒಂದು ತಿಂಗಳಿಂದ ತಲೆಮರೆಸಿಕೊಂಡಿರುವುದು ಏಕೆ?
  2. ಯುಟ್ಯೂಬ್‌ ಮೂಲಕ ಪ್ರಕರಣ ಗೊತ್ತಾಗಿದೆ ಅಂತಿದ್ದೀರಿ, ಗೊತ್ತಾದ ಮೇಲೂ ವಿದೇಶದಲ್ಲೇ ಇರುವುದೇಕೆ? ಆಗಲೇ ಸ್ಪಷ್ಟನೆ ನೀಡಲಿಲ್ಲ ಏಕೆ?
  3. ಅಮಾಯಕರಾದ ನೀವು ಕಾಂಗ್ರೆಸ್‌ನ ನವೀನ್‌ ಗೌಡ ಸೇರಿ ಹಲವರ ವಿರುದ್ಧ ಕೇಸ್‌ ದಾಖಲಿಸಿದ್ದೇಕೆ?
  4. ನ್ಯಾಯಾಂಗದ ಮೇಲೆ ವಿಶ್ವಾಸ ಇದೆ ಎಂದು ಹೇಳುವ ನೀವು, ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗಲಿಲ್ಲ ಏಕೆ?
  5. ತಪ್ಪೇ ಮಾಡದ, ಸತ್ಯಸಂಧರಾದ ನೀವು ಒಂದು ತಿಂಗಳು ಮೊದಲೇ ಸ್ಟೇ ತಂದಿದ್ದು ಏಕೆ?
  6. ತಾತ, ತಂದೆ-ತಾಯಿ, ಚಿಕ್ಕಪ್ಪನ ಮೇಲೆ ಗೌರವ ಇರುವ ನೀವು, ಅವರು ವಾಪಸ್‌ ಬಾ ಎಂದರೂ ಏಕೆ ಬರಲಿಲ್ಲ?
  7. ವಿಚಾರಣೆ ಎದುರಿಸಿ, ದೋಷಮುಕ್ತರಾಗುವ ವಿಶ್ವಾಸ ಇರುವ ನೀವು ಎಸ್‌ಐಟಿಗೆ ಒಂದು ವಾರ ಕಾಲಾವಕಾಶ ಏಕೆ ಕೇಳಿದಿರಿ?
  8. ಒಂದು ವಾರ ಕಾಲಾವಕಾಶ ಕೇಳಿದ ಬಳಿಕವೂ ನಿಗದಿತ ದಿನಾಂಕದಂದು ಭಾರತಕ್ಕೆ ಏಕೆ ಬರಲಿಲ್ಲ? ಏಕೆ ವಿಚಾರಣೆ ಎದುರಿಸಲಿಲ್ಲ?
  9. ತಾತ, ತಂದೆ-ತಾಯಿ, ಕುಮಾರಣ್ಣನ ಮೇಲೆ ಗೌರವ ಹೊಂದಿರುವ ನೀವು, ಅವರ ಮಾತನ್ನು ಏಕೆ ಕೇಳಲಿಲ್ಲ?
  10. ವಿದೇಶದಲ್ಲಿದ್ದೇನೆ ಎಂದು ಹೇಳುವ ನೀವು ಏಕೆ ಯಾವ ದೇಶದಲ್ಲಿದ್ದೇನೆ ಎಂದು ಹೇಳುತ್ತಿಲ್ಲ?

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Continue Reading
Advertisement
Karnataka Weather Forecast
ಮಳೆ7 mins ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

HairStyle Craze
ಫ್ಯಾಷನ್15 mins ago

Hairstyle Craze: ಸೋಷಿಯಲ್‌ ಮೀಡಿಯಾದಲ್ಲಿ ರಂಗೇರಿದ ಹೇರ್‌ ಸ್ಟೈಲ್ಸ್

Lok Sabha Election 2024
ಕರ್ನಾಟಕ30 mins ago

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Prajwal Revanna Video
ಕರ್ನಾಟಕ40 mins ago

Prajwal Revanna Video: ಪ್ರಜ್ವಲ್‌ ಪ್ರತ್ಯಕ್ಷನಾಗಿದ್ದಕ್ಕೆ ಸಮಾಧಾನ ಆಯ್ತು ಎಂದ ಎಚ್‌ಡಿಕೆ; ಫಸ್ಟ್‌ ರಿಯಾಕ್ಷನ್‌ ಹೀಗಿದೆ

Mouthwashes
ಆರೋಗ್ಯ45 mins ago

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

Surya Prakash Maayi director dies
ಕಾಲಿವುಡ್1 hour ago

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Prajwal Revanna Video
ಕರ್ನಾಟಕ1 hour ago

Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

physical abuse
ಕ್ರೈಂ1 hour ago

Physical Abuse: ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಅಸ್ತ್ರ; ವಿದ್ಯಾರ್ಥಿನಿ ಅತ್ಯಾಚಾರ ಆರೋಪಿಯ ಮನೆ ನೆಲಸಮ

Constable Death commits suicide by hanging himself from train
ಹುಬ್ಬಳ್ಳಿ1 hour ago

Constable Death : ಹುಬ್ಬಳ್ಳಿಯಲ್ಲಿ ರೈಲಿಗೆ ತಲೆ ಕೊಟ್ಟ ಕಾನ್ಸ್‌ಟೇಬಲ್‌; ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢ

DCM DK Shivakumar latest statement in Bengaluru
ಕರ್ನಾಟಕ1 hour ago

DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 mins ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌