ವಿಸ್ತಾರ ಸಂಪಾದಕೀಯ: ಜನತಾ ದರ್ಶನದ ಗೋಳು, ಅಧಿಕಾರಿಗಳ ಹೊಣೆಗೇಡಿತನದ ಫಲ - Vistara News

ಕರ್ನಾಟಕ

ವಿಸ್ತಾರ ಸಂಪಾದಕೀಯ: ಜನತಾ ದರ್ಶನದ ಗೋಳು, ಅಧಿಕಾರಿಗಳ ಹೊಣೆಗೇಡಿತನದ ಫಲ

Vistara Editorial: ಸಿಎಂ ಸಿದ್ದರಾಮಯ್ಯ ಅವರು ನಡೆಸಿದ ಜನತಾದರ್ಶನದ ಆಶಯ ದೊಡ್ಡದೇ. ಆದರೆ ಜನ ಪಹಣಿ, ಪೋಡಿ, ಖಾತೆ ಮಾಡಿಸುವುದು ಮೊದಲಾದ ಚಿಲ್ಲರೆ ಕೆಲಸಗಳನ್ನು ಮಾಡಿಸಿಕೊಳ್ಳುವುದು ಕೂಡ ಸಾಧ್ಯವಾಗದೆ ನೊಂದು ನೇರ ಸಿಎಂ ಬಳಿಗೇ ಬರುತ್ತಾರೆ ಎಂದರೆ ಅಂಥ ಬ್ಯೂರಾಕ್ರಸಿಗೆ ಏನನ್ನಬೇಕು?

VISTARANEWS.COM


on

Vistara editorial, CM janata darshan is a result inefficiency of government officers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ (Janatha Darshan) ಜನರಿಂದ ಭಾರೀ ಸ್ಪಂದನ ದೊರೆತಿದೆ. 3500ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿಗಳು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಆರಂಭಗೊಂಡ ಜನತಾ ದರ್ಶನ ಕಾರ್ಯಕ್ರಮದಲ್ಲಿ ನಾಗರಿಕರು ತಮ್ಮ ಸಮಸ್ಯೆಗಳ ಸರಮಾಲೆಯನ್ನೇ ಹೊತ್ತು ತಂದಿದ್ದರು. ಅಹವಾಲು ತಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂಬ ಕಾರಣದಿಂದ ಮಧ್ಯಾಹ್ನದ ಊಟವನ್ನೂ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಊಟ ಸೇವಿಸಿ, ಜನತಾ ದರ್ಶನ ಮುಂದುವರಿಸಿ, ಸರ್ಕಾರಿ ಅಧಿಕಾರಿಗಳಿಗೂ ಮಾದರಿಯಾದರು. ಪ್ರತಿ ಸಮಸ್ಯೆಯನ್ನೂ ಖುದ್ದಾಗಿ ಪರಿಶೀಲಿಸಿ, ಆಯಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ಪರಿಹಾರಕ್ಕೆ ಸೂಚಿಸಿದ್ದು ಸಿಎಂ ಕಾಳಜಿಯನ್ನು ಪ್ರದರ್ಶಿಸಿತು. ಇದು ಮಾದರಿ ನಡೆ, ಶ್ಲಾಘನೀಯ ಕಾರ್ಯಕ್ರಮ(Vistara Editorial).

ಈ ವೇಳೆ ಸಿಎಂ ಸಿದ್ದರಾಮಯ್ಯ‌ ಅವರು ಅಧಿಕಾರಿಗಳಿಗೆ ಕೆಲವೊಂದು ಕಿವಿಮಾತು ಸಹಿತ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ. ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೇ ಬಗೆಹರಿಯಬೇಕಾದ ಸಮಸ್ಯೆಗಳು ಬೆಂಗಳೂರಿನವರೆಗೂ ಬರಕೂಡದು. ಬಂದರೆ ಸಹಿಸುವುದಿಲ್ಲ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಎಚ್ಚರಿಕೆಯನ್ನೂ ನೀಡಿದರು. ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಿ ಎಂದು ತಾಕೀತು ಮಾಡಿದ್ದಾರೆ. ಜನಸ್ಪಂದನ ಕಾರ್ಯಕ್ರಮದಲ್ಲಿ ವೈದ್ಯಕೀಯ ವೆಚ್ಚ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ಪತ್ರ ನೀಡಬೇಕು ಎಂದಿದ್ದಾರೆ ಸಿಎಂ. ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸುವ, ತಾವೂ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮದ ಕುರಿತು ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ.

ಜನತಾದರ್ಶನ ಕಾರ್ಯಕ್ರಮದ ಆಶಯ ದೊಡ್ಡದೇ. ಆದರೆ ಜನ ಪಹಣಿ, ಪೋಡಿ, ಖಾತೆ ಮಾಡಿಸುವುದು ಮೊದಲಾದ ಚಿಲ್ಲರೆ ಕೆಲಸಗಳನ್ನು ಮಾಡಿಸಿಕೊಳ್ಳುವುದು ಕೂಡ ಸಾಧ್ಯವಾಗದೆ ನೊಂದು ನೇರ ಸಿಎಂ ಬಳಿಗೇ ಬರುತ್ತಾರೆ ಎಂದರೆ ಅಂಥ ಬ್ಯೂರಾಕ್ರಸಿಗೆ ಏನನ್ನಬೇಕು? ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತು, ಜಿಲ್ಲಾ ಪಂಚಾಯತು, ನೋಂದಣಿ, ಕಂದಾಯ, ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್‌ವರ್ಕರ್‌ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.

ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ಸಿಎಂಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುತ್ತಾರೆ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥ ಪ್ರಯತ್ನ ಮಾಡಿದ್ದುಂಟು. ಆದರೆ ಚಿಲ್ಲರೆ ಕೆಲಸಗಳಿಗೂ ಜನ ಸಿಎಂ ಬಳಿಗೇ ಬರಬೇಕಾಗುತ್ತದೆ ಎಂದರೆ ಅದನ್ನು ಉತ್ತಮ ಆಡಳಿತವೆನ್ನಬೇಕೋ ಇಲ್ಲವೋ ಎಂಬುದನ್ನು ಮತ್ತಷ್ಟು ವಿವೇಚಿಸಿ ನೋಡಿದರೆ ಗೊತ್ತಾಗುತ್ತದೆ. ರಾಜ್ಯದ ಮೂಲೆಮೂಲೆಗಳಿಂದ ಇಷ್ಟೊಂದು ಜನ ಬೆಂಗಳೂರಿಗೆ ಓಡಿ ಬರುತ್ತಾರೆ ಅಂದರೆ ಜಿಲ್ಲಾಡಳಿತಗಳು ಏನು ಮಾಡುತ್ತಿವೆ? ಪ್ರತಿ ಸಮಸ್ಯೆ ಪರಿಹಾರಕ್ಕೂ ಮುಖ್ಯಮಂತ್ರಿಯ ಮೊರೆ ಹೋಗಬೇಕು ಅಂದರೆ ಅಧಿಕಾರಿಗಳಿಗೆ ಏನು ಕೆಲಸ?

ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಹೆಣ್ಣು ಭ್ರೂಣ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ; ಸಮಾಜದಲ್ಲಿ ಜಾಗೃತಿ ಮೂಡಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Honnavar News: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶ್ರೀ ಸ್ವರ್ಣವಲ್ಲಿ ರಾಮ ಕ್ಷತ್ರಿಯ ಪರಿಷದ್ ಹಾಗೂ ರಾಮಕ್ಷತ್ರಿಯ ಸಂಘದಿಂದ ಆಯೋಜಿಸಿದ್ದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಸ್ವರ್ಣವಲ್ಲೀ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

VISTARANEWS.COM


on

Honnavar News
Koo

ಹೊನ್ನಾವರ: ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ದೊರೆತಾಗ, ಆ ಮಗು ಸಮಾಜದಲ್ಲಿ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ. ಹಾಗೆಯೇ ಉಪನಯನವನ್ನು ಕೂಡ ಚಿಕ್ಕ ವಯಸ್ಸಿನಲ್ಲಿ ಮಾಡುವುದರಿಂದ ಹೆಚ್ಚಿನ ಫಲ ಪ್ರಾಪ್ತಿಯಾಗುತ್ತದೆ. ಅದೇ ರೀತಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ, ಸಂಸ್ಕಾರಯುತ ಸಮಾಜ ನಿರ್ಮಾಣದ ಜವಾಬ್ದಾರಿ ಕೂಡ ಪಾಲಕರ ಮೇಲಿದೆ ಎನ್ನುವುದನ್ನು ಅರಿಯಬೇಕಾಗಿದೆ ಎಂದು ಸ್ವರ್ಣವಲ್ಲೀ ಮಠದ ಮಠಾಧೀಶರಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ತಿಳಿಸಿದರು.

ಪಟ್ಟಣದಲ್ಲಿ ಹೊನ್ನಾವರದ ಶ್ರೀ ಸ್ವರ್ಣವಲ್ಲಿ ರಾಮ ಕ್ಷತ್ರಿಯ ಪರಿಷದ್ ಹಾಗೂ ಅಡಕಾರದ ರಾಮಕ್ಷತ್ರಿಯ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಗವದ್ಗೀತೆ, ರಾಮರಕ್ಷಾ ಸ್ತೋತ್ರ ಮತ್ತು ರಾಮ ತಾರಕ ಮಂತ್ರಗಳ ಪಠಣ ಮಾಡುವುದನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ರೂಢಿಸಿದಾಗ ಮಕ್ಕಳಲ್ಲಿ ಆಧ್ಯಾತ್ಮಿಕ ಒಲವು ಮೂಡಲು ಸಾಧ್ಯ. ಈ ಆಧ್ಯಾತ್ಮಿಕ ಒಲವು ಸಂಸ್ಕಾರಯುತ ಮನುಷ್ಯನನ್ನು ನಿರ್ಮಾಣ ಮಾಡುತ್ತದೆ ಎಂದರು. ಇದೇ ವೇಳೆ ಪ್ರತಿವರ್ಷ ದಂಪತಿಗಳ ಶಿಬಿರ, ಯೋಗ ಶಿಬಿರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ರಾಮಕ್ಷತ್ರಿಯ ಪರಿಷದ್‌ನ ಅಧ್ಯಕ್ಷರಾದ ಎಸ್.ಕೆ.ನಾಯ್ಕ ಮಾತನಾಡಿ, ಸ್ವರ್ಣವಲ್ಲೀ ಮಠಾಧೀಶರ ಮಾರ್ಗದರ್ಶನದಲ್ಲಿ ರಾಮಕ್ಷತ್ರಿಯ ಪರಿಷದ್ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕೆಲಸಗಳ ಮೂಲಕ ಸಂಘಟಿತರಾಗೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಮಕ್ಷತ್ರಿಯ ಸಮಾಜದ 33 ವಟುಗಳಿಗೆ ಸಾಮೂಹಿಕ ಉಪನಯನ ನಡೆಯಿತು. ಪ್ರಾರಂಭದಲ್ಲಿ ಸೀತಾರಾಮ ನಾಯ್ಕ ಹಳದಿಪೂರ ಪ್ರಾರ್ಥಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ ನಾಯ್ಕ ಸ್ವಾಗತಿಸಿದರು. ಅಡಕಾರ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ರಾಮದಾಸ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಷದ್‌ನ ಪ್ರಧಾನ ಕಾರ್ಯದರ್ಶಿ ರಾಜೇಶ ಸಾಳೇಹಿತ್ತಲ್ ಐದು ವರ್ಷಗಳ ವರದಿ ವಾಚಿಸಿದರು. ರವಿ ನಾಯ್ಕ ನಿರೂಪಿಸಿದರು. ಮಹೇಶ ನಾಯ್ಕ ವಂದಿಸಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ವೇದಿಕೆಯಲ್ಲಿ ಪರಿಷದ್‌ ಅಧ್ಯಕ್ಷರಾದ ಎಸ್.ಕೆ.ನಾಯ್ಕ ಮತ್ತು ಶ್ರೀನಿವಾಸ ನಾಯ್ಕ ಮುಂಬಯಿ ಇವರಿಗೆ ಅಡಕಾರ ಸಂಘದಿಂದ ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ ಸಿಲ್ಕ್ಸ್ ಇದರ ಮಾಲಿಕರಾದ ರತ್ನಾಕರ ನಾಯ್ಕರವರು 33 ವಟುಗಳಿಗೆ ವಿಶೇಷ ಉಡುಗೊರೆಯೊಂದಿಗೆ ಗೌರವಿಸಿದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಕರ್ನಾಟಕ

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರು
ವಯೋಸಹಜ ಕಾಯಿಲೆಯಿಂದ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ನಿಧನರಾಗಿದ್ದಾರೆ.

VISTARANEWS.COM


on

M P Rudramba
Koo

ವಿಜಯನಗರ: ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಧರ್ಮ ಪತ್ನಿ ಎಂ.ಪಿ.ರುದ್ರಾಂಬಾ (M P Rudramba) (83) ಅವರು ವಯೋಸಹಜ ಕಾಯಿಲೆಯಿಂದ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾದರು. ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಪುತ್ರಿಯರಲ್ಲಿ ಲತಾ ಮಲ್ಲಿಕಾರ್ಜುನ ಅವರು ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿಯಾಗಿದ್ದಾರೆ. ಸುಮಾ ಹಾಗೂ ವೀಣಾ ಇನ್ನಿಬ್ಬರು ಪುತ್ರಿಯರು. ಅವರ ಪುತ್ರ, ಹರಪನಹಳ್ಳ ಕ್ಷೇತ್ರದ ಶಾಸಕರಾಗಿದ್ದ ಎಂ.ಪಿ.ರವೀಂದ್ರ ಕೆಲ ವರ್ಷದ ಹಿಂದೆಯೇ ತೀರಿಕೊಂಡಿದ್ದರು. ಎಂ.ಪಿ. ಪ್ರಕಾಶ್‌ ಅವರೂ ದಶಕಗಳ ಹಿಂದೆಯೇ ವಿಧಿವಶರಾಗಿದ್ದರು.

ಸಾಂಸ್ಕೃತಿಕ ಹಾಗೂ ಚಿಂತನ ಶೀಲ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಂ.ಪಿ. ಪ್ರಕಾಶ್‌ ಅವರನ್ನು ಮದುವೆಯಾಗಿದ್ದ ರುದ್ರಾಂಬಾ ಅವರು ಕೂಡ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇತ್ತೀಚಿಗೆ ಆರೋಗ್ಯದ ಕಾರಣದಿಂದ ಸಾರ್ವಜನಿಕ ಜೀವನದ ಒಡನಾಟ ಕಡಿಮೆಯಾಗಿತ್ತು.

ಇದನ್ನೂ ಓದಿ | Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

ಹೂವಿನ ಹಡಗಲಿಯಲ್ಲಿ ಮಂಗಳವಾರ ಸಂಜೆ 4.30 ಕ್ಕೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ. ದಿ.‌ ಎಂ.ಪಿ. ಪ್ರಕಾಶ್‌ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ರುದ್ರಾಂಬಾ ಅವರು ತಮ್ಮ ಪತಿಯ ಆದರ್ಶಗಳನ್ನು ಪಾಲಿಸುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ನೊಂದ ಜನರ ಬದುಕಿಗೆ ಬೆಳಕಾಗಿದ್ದವರು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

Murder Case: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಕೊಲೆ ನಡೆದಿದೆ. ವಿಚ್ಛೇದನ ಪಡೆದು ದೂರವಾಗುತ್ತಾಳೆ ಎಂದು ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿರುವ ಘಟನೆ (Murder Case) ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ನಡೆದಿದೆ. ಹೆಂಡ್ತಿ ತನ್ನನ್ನು ಬಿಟ್ಟು ಬೇರೆಯಾಗುತ್ತಾಳೆ ಎಂದು ಬೇಸರದಿಂದ ಪತಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಶಿಯಾಪತ್ ಉನ್ನಿಸ ಕೊಲೆಯಾದ ಮಹಿಳೆ. ನೂರುಲ್ಲಾ ಪತ್ನಿಯ ಕೊಲೆ ಮಾಡಿದ ಗಂಡ. ಆರೋಪಿ ನೂರುಲ್ಲಾನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗಂಡ-ಹೆಂಡತಿ ವಿಚ್ಛೇದನ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಕಳೆದ ಐದು ದಿನಗಳಿಂದ ಹೆಂಡತಿಯಿಂದ ಗಂಡ ದೂರವಿದ್ದ. ಸೋಮವಾರ ಹೆಂಡತಿ ಉನ್ನೀಸಾ ಮನೆ ಖಾಲಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಗಂಡ ಬಂದು ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆ

ರಾಯಚೂರು: ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸುನೀತಾ (26) ಎಂಬ ಯುವತಿಯ ಶವ ಬೆಡ್ ರೂಮ್‌ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದೆ.

ಮೃತ ಯುವತಿ ದೇಹದ‌ ಮೇಲೆ ಚಾಕುವಿನಿಂದ ಹಲ್ಲೆ ಗುರುತು ಪತ್ತೆಯಾಗಿದ್ದು, ಒಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಕೊಂಡಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಮನೆಯವರ ಮದುವೆ‌ ಪ್ರಸ್ತಾಪಕ್ಕೆ‌ ಯುವತಿ ಮನನೊಂದಿದ್ದಳು. ಜತೆಗೆ ತಾಯಿ‌, ಅಣ್ಣನ ಜತೆ ಮನಸ್ತಾಪ ಇತ್ತು. ಇದೇ ಕಾರಣಕ್ಕೆ ಎಷ್ಟೋ ಬಾರಿ ಯುವತಿ ಮನೆ ಬಿಟ್ಟು ಹೋಗಿದ್ದಳಂತೆ. ಮದುವೆ ಪ್ರಸ್ತಾಪದಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ ಸುನೀತಾ, ಏ.26ರಂದು ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಮತ್ತು ಅಣ್ಣ ಹೇಳಿದ್ದಾರೆ.

ಆದರೆ, ತಂಗಿಯ ಮರಣದ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಅಕ್ಕ ದೂರು ದಾಖಲು ಮಾಡಿದ್ದಾಳೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Continue Reading
Advertisement
Pakistan Inflation
ವಿದೇಶ5 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ5 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು5 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ5 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ6 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ6 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ6 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ6 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ6 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ6 hours ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202416 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202417 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ24 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20243 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌