Vistara Kannada Sambhrama : ನ. 4ರಂದು ವಿಸ್ತಾರ ಕನ್ನಡ ಸಂಭ್ರಮ; ಇದು ವಿಸ್ತಾರ ನ್ಯೂಸ್‌ ವರ್ಷ ವೈಭವ Vistara News

ಕರ್ನಾಟಕ

Vistara Kannada Sambhrama : ನ. 4ರಂದು ವಿಸ್ತಾರ ಕನ್ನಡ ಸಂಭ್ರಮ; ಇದು ವಿಸ್ತಾರ ನ್ಯೂಸ್‌ ವರ್ಷ ವೈಭವ

Vistara Kannada Sambhrama : ವಿಸ್ತಾರ ನ್ಯೂಸ್‌ ವತಿಯಿಂದ ವಿಸ್ತಾರ ಕನ್ನಡ ಸಂಭ್ರಮ- ವಿಸ್ತಾರ ವರ್ಷ ವೈಭವ ಕಾರ್ಯಕ್ರಮ ನವೆಂಬರ್‌ 4ರಂದು ನಡೆಯಲಿದೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ದಿನವಿಡೀ ಕಾರ್ಯಕ್ರಮಗಳ ವೈಭವ ಮೇಳೈಸಲಿದೆ.

VISTARANEWS.COM


on

Vistara Kannada Sambhrama invite Article
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅತ್ಯಲ್ಪ ಅವಧಿಯಲ್ಲೇ ನಾಡಿನ ಜನಮಾನಸದಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದ ರಾಜ್ಯದ ಜನಪ್ರಿಯ ಮಾಧ್ಯಮ ಸಂಸ್ಥೆ ವಿಸ್ತಾರ ನ್ಯೂಸ್‌ (Vistara News) ನವೆಂಬರ್‌ 4ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ (Ravindra Kalakshetra) ʻವಿಸ್ತಾರ ಕನ್ನಡ ಸಂಭ್ರಮʼ (Vistara Kannada Sambhrama) ಎಂಬ ಅಪೂರ್ವ ಕಾರ್ಯಕ್ರಮವನ್ನು ಆಯೋಜಿಸಿದೆ. ಕನ್ನಡ ಟಿವಿ ವಾಹಿನಿಗಳ ಇತಿಹಾಸದಲ್ಲೇ ಅತ್ಯಪೂರ್ವ ಪ್ರಯೋಗವಾಗಿರುವ ʻವಿಸ್ತಾರ ಕನ್ನಡ ಸಂಭ್ರಮʼ ಹತ್ತಾರು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ರಂಜಿಸಲಿದೆ. ಕನ್ನಡ ನಾಡು ನುಡಿ, ಸಾಹಿತ್ಯ, ಜನಜೀವನವನ್ನು ಹಿತವಾಗಿ ಬೆಸೆಯುವ ಈ ಸುಂದರ ಕಾರ್ಯಕ್ರಮ ವಿಸ್ತಾರ ನ್ಯೂಸ್‌ಗೆ ಒಂದು ವರ್ಷದ ತುಂಬುತ್ತಿರುವ ಹೊತ್ತಿನಲ್ಲಿ ಕರುನಾಡ ಜನತೆಗೆ ʻವರ್ಷ ವೈಭವʼದ (Vistara Varsha Vaibhava) ಪ್ರೀತಿಯ ಅರ್ಪಣೆಯಾಗಿದೆ.

ಬೆಳಗ್ಗೆ 9 ಗಂಟೆಗೆ ಆರಂಭವಾಗಲಿರುವ ವಿಸ್ತಾರ ಕನ್ನಡ ಸಂಭ್ರಮದಲ್ಲಿ ರಾತ್ರಿ 12 ಗಂಟೆಯವರೆಗೂ ನಾನ್‌ಸ್ಟಾಪ್‌ ಮನರಂಜನೆಯ ಮಹಾಪೂರವಿದೆ. ಹಾಡು, ಸಂಗೀತ, ಕನ್ನಡ ಸಾಹಿತ್ಯದ ಗೋಷ್ಠಿಗಳು, ನಟ-ನಟಿಯರು, ಕಿರುತೆರೆ ಕಲಾವಿದರ ಜತೆ ನೇರ ಮುಕ್ತ ಮಾತುಕತೆ, ಯಕ್ಷಗಾನ ವೈಭವಗಳೊಂದಿಗೆ ಮೇಳೈಸಲಿದೆ.

ರವೀಂದ್ರ ಕಲಾಕ್ಷೇತ್ರದ ಪ್ರಧಾನ ವೇದಿಕೆ, ಕಲಾಕ್ಷೇತ್ರದ ಆವರಣ, ನಯನಾ ಸಭಾಂಗಣ, ಸಂಸ ಬಯಲು ರಂಗ ಮಂದಿರ ಹೀಗೆ ಎಲ್ಲ ಕಡೆಯೂ ವೈವಿಧ್ಯಮಯ ಕಾರ್ಯಕ್ರಮ, ಸಾಂಸ್ಕೃತಿಕ ಲೋಕದ ಅನಾವರಣ ನಡೆಯಲಿದೆ.

ಏನುಂಟು ಏನಿಲ್ಲ? ಈ ಸಂಭ್ರಮದ ಲೋಕದಲ್ಲಿ?

ವಿಸ್ತಾರ ಕನ್ನಡ ಸಂಭ್ರಮದಲ್ಲಿ ಸಂಗೀತೋತ್ಸವವಿದೆ, ನಾಟಕೋತ್ಸವವಿದೆ. ಆಹಾರೋತ್ಸವದ ಸವಿಯಿದೆ, ಪುಸ್ತಕೋತ್ಸವದ ಸೊಬಗಿದೆ. ಯಕ್ಷ ಗಾನ ಗಂಧರ್ವರೆಲ್ಲ ಧರೆಗಿಳಿವ ಸಡಗರವಿದೆ.

ನಾಡಿನ ಯೋಗಕ್ಷೇಮದ ರೂವಾರಿಗಳಾದ ಜನಪ್ರತಿನಿಧಿಗಳು, ನಿಮ್ಮ ನೆಚ್ಚಿನ ಚಂದನವನದ ಚಂದದ ತಾರೆಯರು, ಕಿರುತೆರೆಯ ನಿಮ್ಮ ಇಷ್ಟದ ನಟ-ನಟಿಯರು ಇಲ್ಲಿ ಸೇರಲಿದ್ದಾರೆ. ಕನ್ನಡಕ್ಕೆ ದನಿಯಾದ ಗಾಯಕರು, ಸಂಗೀತಗಾರರು, ಸ್ಟಾಂಡಪ್‌ ಕಾಮಿಡಿಯನ್‌ಗಳು, ಯಕ್ಷಿಣಿ ಜಾದೂಗಾರರು, ಎಲ್ಲರೂ ನಿಮ್ಮನ್ನು ಒಂದೇ ಕಡೆ ಎದುರ್ಗೊಳ್ಳಲಿದ್ದಾರೆ. ಇದು ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಖುಷಿಪಡಬಹುದಾದ ಒಂದು ಪರಿಶುದ್ಧ ಫ್ಯಾಮಿಲಿ ಪ್ಯಾಕೇಜ್‌ ಕಾರ್ಯಕ್ರಮವಾಗಿ ಕಳೆಗಟ್ಟಲಿದೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿದೆ.

ಮುಖ್ಯಮಂತ್ರಿಗಳಿಂದ ವಿಸ್ತಾರ ಕನ್ನಡ ಸಂಭ್ರಮಕ್ಕೆ ಚಾಲನೆ

ನವೆಂಬರ್‌ 4ರಂದು ಬೆಳಗ್ಗೆ 10 ಗಂಟೆಗೆ ವಿಸ್ತಾರ ಕನ್ನಡ ಸಂಭ್ರಮ- ವಿಸ್ತಾರ ನ್ಯೂಸ್‌ ವರ್ಷ ವೈಭವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಡಾ. ಸುಬುಧೇಂದ್ರ ತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳು ಸಚಿವ ಶಿವರಾಜ್‌ ತಂಗಡಗಿ

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ತೇಜಸ್ವಿ ಸೂರ್ಯ, ಶಾಸಕರಾದ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ. ಶರವಣ, ಹಿರಿಯ ಸಾಹಿತಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ, ಜನಪ್ರಿಯ ನಟ ರಮೇಶ್‌ ಅರವಿಂದ್‌, ಜನಪ್ರಿಯ ನಟಿ ಬೃಂದಾ ಆಚಾರ್ಯ ಅವರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಮತ್ತು ಇತರ ಗಣ್ಯರು ಭಾಗಿ

ಸಂಜೆ 6 ಗಂಟೆಯಿಂದ 7.30ರವರೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ್‌ ಗುಂಡೂರಾವ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ್‌ ಖರ್ಗೆ, ಶಾಸಕರಾದ ಜಿ.ಟಿ. ದೇವೇಗೌಡ, ಹಿರಿಯ ಸಾಹಿತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌, ಅದಮ್ಯ ಚೇತನ ಸಂಸ್ಥಾಪಕರಾದ ತೇಜಸ್ವಿನಿ ಅನಂತ್‌ಕುಮಾರ್‌, ಖ್ಯಾತ ಸಿನಿಮಾ ನಿರ್ದೇಶಕರಾದ ಯೋಗರಾಜ್‌ ಭಟ್‌, ಜನಪ್ರಿಯ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಮಾನ್ವಿತಾ ಕಾಮತ್‌ ಭಾಗವಹಿಸುತ್ತಿದ್ದಾರೆ.

Vistara Kannada Sambhrama validictory

ಸರ್ವರನ್ನೂ ಪ್ರೀತಿಯಿಂದ ಸ್ವಾಗತಿಸುತ್ತಿದೆ ವಿಸ್ತಾರ ತಂಡ

ವಿಸ್ತಾರ ನ್ಯೂಸ್‌ ಪ್ರೈವೆಟ್‌ ಲಿಮಿಟೆಡ್‌ನ ಎಕ್ಸಿಕ್ಯೂಟಿವ್‌ ಚೇರ್ಮನ್ ಆಗಿರುವ ಡಾ. ಎಚ್‌.ಎಸ್‌. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾಗಿರುವ ಎಚ್.‌ ವಿ. ಧರ್ಮೇಶ್‌, ನಿರ್ದೇಶಕರಾಗಿರುವ ಶ್ರೀನಿವಾಸ ಹೆಬ್ಬಾರ್‌, ವಿಸ್ತಾರ ನ್ಯೂಸ್‌ನ ಸಿಇಒ ಹಾಗೂ ಪ್ರಧಾನ ಸಂಪಾದಕರಾಗಿರುವ ಹರಿಪ್ರಕಾಶ್‌ ಕೋಣೆಮನೆ, ಕಾರ್ಯನಿರ್ವಾಹಕ ನಿರ್ದೇಶಕ ಮತ್ತು – ಸ್ಪೆಷಲ್‌ ಆಪರೇಷನ್ಸ್‌ ಸಂಪಾದಕರಾಗಿರುವ ಕಿರಣ್‌ ಕುಮಾರ್‌ ಡಿ.ಕೆ. ಅವರು ಈ ಕಾರ್ಯಕ್ರಮಕ್ಕೆ ಎಲ್ಲರನ್ನೂ ಆಹ್ವಾನಿಸುತ್ತಿದ್ದಾರೆ.

15 ಗಂಟೆಗಳ ಕಾಲ ಬ್ಯಾಕ್‌ ಟು ಬ್ಯಾಕ್‌ ಕಾರ್ಯಕ್ರಮ

ಬೆಳಗ್ಗೆ 9.00 – 10.00: ಗೀತ ಬೆಳಗು
ಭಕ್ತಿ ಗೀತೆ, ಭಾವ ಗೀತೆ, ಜನಪದ, ಸೂಫಿ ಹಾಡುಗಳ ಮಾಧುರ್ಯ
ರಾಮಚಂದ್ರ ಹಡಪದ, ಆರ್‌. ಕೆ. ಸ್ಪರ್ಶ ಅವರಿಂದ ಗಾನಸುಧೆ

ಬೆಳಗ್ಗೆ 10.00ರಿಂದ 11.30: ವಿಸ್ತಾರ ಕನ್ನಡ ಸಂಭ್ರಮ ಉದ್ಘಾಟನೆ ಹಾಗೂ
ವಿಸ್ತಾರ ಪ್ರಕಾಶನದ ಪುಸ್ತಕಗಳ ಬಿಡುಗಡೆ

ಮಧ್ಯಾಹ್ನ 12.00 – 1.00: ಬಾರಿಸು ಕನ್ನಡ ಡಿಂಡಿಮವ

ಕನ್ನಡ ವಿಸ್ತರಿಸುತ್ತಿರುವ ಹೊಸ ದಿಕ್ಕುಗಳು: ವಿಚಾರಗೋಷ್ಠಿ

Vistara Kannada Sambhrama kannada Goshti

ವಿಷಯ ಮತ್ತು ಭಾಗವಹಿಸುವ ವಿಷಯ ತಜ್ಞರು

  1. ಕನ್ನಡ ಓದಿನ ಹೊಸ ಮೀಡಿಯಂ: ವಸಂತ್ ಶೆಟ್ಟಿ ಮೈಲಾಂಗ್ ಸಂಸ್ಥಾಪಕರು
  2. ಮುಕ್ತ ಡಬ್ಬಿಂಗ್‌: ಕನ್ನಡಕ್ಕೆ ಲಾಭ ಆಯ್ತಾ? ನಷ್ಟ ಆಯ್ತಾ?: ಹೃದಯಶಿವ ಚಿತ್ರ ಸಾಹಿತಿ
  3. ಮಾತೃ ಭಾಷೆಯಲ್ಲೇ ಏಕೆ ಕಲಿಯಬೇಕು?: ವೀಣಾ ರಾವ್​
    ಸಂಸ್ಥಾಪಕರು, ಭಾಷಾ ವಿದ್ಯಾ ಕನ್ನಡ ಕಲಿಕಾ ಕೇಂದ್ರ
  4. ನಿತ್ಯದ ಬರವಣಿಗೆಯಾಗಿ ಕನ್ನಡ: ಶ್ರೀಧರ್‌​ ನಾಗರಾಜ್​ ‘ಜಸ್ಟ್​ ಕನ್ನಡ’ ರೂವಾರಿ
  5. ಅಪಾರ್ಟ್‌ಮೆಂಟ್ ಗಳಲ್ಲಿ ಕನ್ನಡಾಭಿಮಾನ: ವಿಕ್ರಂ ರೈ ಕಾರ್ಯದರ್ಶಿ,
    ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಷನ್
  6. ನಿರ್ವಹಣೆ: ಶ್ರೀ ಎನ್‌. ರವಿಶಂಕರ್‌ ಸಿಇಒ, ಏಮ್ಸ್​ ಹೈ ಕನ್ಸಲ್ಟಿಂಗ್

ಮಧ್ಯಾಹ್ನ 1.30 – 2.30: ವಾಯ್ಸ್‌ ಆಫ್‌ ಯಂಗ್‌ ಕನ್ನಡಿಗ

ದನಿ ಬೇರೆ, ಭಾಷೆ ಒಂದೇ!: ವಿಶಿಷ್ಟ ಸಂವಾದ

Vistara Kannada Sambhrama kannada Goshti2

ಸಂವಾದದಲ್ಲಿ ಪಾಲ್ಗೊಳ್ಳುವವರು
ಚಂದನ್​ ಶೆಟ್ಟಿ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಕನ್ನಡ ರ‍್ಯಾಪರ್​
ನಿರಂಜನ್​ ದೇಶಪಾಂಡೆ ಹೆಸರಾಂತ ನಿರೂಪಕರು
ನೇತ್ರಾ ಖ್ಯಾತ ಆರ್​ ಜೆ
ಸಿರಿ ಜನಪ್ರಿಯ ನಟಿ-ನಿರೂಪಕಿ

ಮಧ್ಯಾಹ್ನ 3.00 – 4.00: ಭಾಗ್ಯಲಕ್ಷ್ಮೀ & ಟೀಮ್‌ ಬರ್ತಾರಮ್ಮ!

Bhagya lakshmi team

ಕಲರ್ಸ್​ ಕನ್ನಡದ ಜನಪ್ರಿಯ ಧಾರಾವಾಹಿಗಳಾದ ಭಾಗ್ಯಲಕ್ಷ್ಮೀ ಹಾಗೂ ಲಕ್ಷ್ಮೀ ಬಾರಮ್ಮ ಟೀಮ್ ಜತೆ ಆತ್ಮೀಯ ಸಂವಾದ

ಸಂಜೆ 4.30 – 5.30: ಮಕ್ಕಳ ನಾಟಕ

ಮೈಸೂರಿನ ಖ್ಯಾತ ‘ಅರಿವು’ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ನಾಟಕ: ವಿಗಡ ವಿಕ್ರಮರಾಯ
ರಚನೆ: ಸಂಸ, ನಿರ್ದೇಶನ: ಯತೀಶ್ ಎನ್. ಕೊಳ್ಳೇಗಾಲ

Vistara Kannada Sambhrama Drama

ಸಂಜೆ 6.00- 7.30: ಸಮಾರೋಪ ಸಮಾರಂಭ

ರಾತ್ರಿ 8.00- 9.30: ಲೈವ್‌ ಮ್ಯೂಸಿಕ್‌ ಧಮಾಕಾ

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಶ್ರೀ ಗುರುಕಿರಣ್‌ ಮತ್ತು ತಂಡದಿಂದ ಸೂಪರ್‌ ಹಿಟ್‌ ಹಾಡುಗಳು (GURUKIRAN Live in Concert)

Gurukiran Vistara Kannada sambhrama

ರಾತ್ರಿ 10ರಿಂದ 12: ಯಕ್ಷಗಾನ ಪ್ರದರ್ಶನ

ಪ್ರಸಂಗ: ಕವಿರತ್ನ ಕಾಳಿದಾಸ
ಹೇರಂಜಾಲು ಯಕ್ಷಬಳಗ ಹಾಗೂ ಟೀಮ್ ಉತ್ಸಾಹಿ, ಬೆಂಗಳೂರು ತಂಡದಿಂದ
ಭಾಗವತರು: ಹೇರಂಜಾಲು ಗೋಪಾಲ ಗಾಣಿಗ, ಪಲ್ಲವ ಗಾಣಿಗ, ಜತೆಗೆ, ಕರಾವಳಿಯ ಪ್ರಖ್ಯಾತ ಯಕ್ಷಗಾನ ಕಲಾವಿದರು.

Yakshagana Vistara Kannada Sambhrama

ಸಂಸ ಬಯಲು ರಂಗಮಂದಿರದಲ್ಲಿ ಹಲವು ಕಾರ್ಯಕ್ರಮ

ಪ್ರಧಾನ ವೇದಿಕೆಯ ಜತೆ ಜತೆಯಲ್ಲೇ ಸಂಸ ಬಯಲು ರಂಗ ಮಂದಿರದಲ್ಲೂ ಕಾರ್ಯಕ್ರಮಗಳು ನಡೆಯಲಿವೆ.

1. ಸಂಜೆ 4.00ರಿಂದ ಚಿಣ್ಣರಿಗಾಗಿ ಜಾದೂ: ಆಕಾಶ್‌ ಗುಪ್ತಾ ಅವರಿಂದ

2. ಸಂಜೆ 5ರಿಂದ 6: ಸ್ಟ್ಯಾಂಡಪ್ ಕಾಮಿಡಿ: ಖ್ಯಾತ ಹಾಸ್ಯ ಕಲಾವಿದ ಕಾರ್ತಿಕ್‌ ಪತ್ತಾರ್ ಹಾಸ್ಯ ಕಾರಂಜಿ

3. ಸಂಜೆ 6ರಿಂದ 6.30: ಸೀರೆ ಸೊಬಗು: ಸೀರೆಯಲ್ಲಿ ನೋಡಿ, ಲಲನೆಯರ ಮೋಡಿ!
ಮಿಸೆಸ್ ಇಂಡಿಯಾ ಕರ್ನಾಟಕ ಡೈರೆಕ್ಟರ್‌ ಪ್ರತಿಭಾ ಸಂಶಿಮಠ ತಂಡದಿಂದ ನಾಡಿನ ಪಾರಂಪರಿಕ ಉಡುಗೆ ಬಿಂಬಿಸುವ ರಾಂಪ್ ವಾಕ್

ಹೊರಾಂಗಣದಲ್ಲಿ ಪುಸ್ತಕ ಮೇಳ: 20%ವರೆಗೆ ರಿಯಾಯಿತಿ

ರವೀಂದ್ರ ಕಲಾಕ್ಷೇತ್ರದ ಹೊರಾವರಣದಲ್ಲಿ ಅಪೂರ್ವ ಪುಸ್ತಕ ಮೇಳ ನಡೆಯಲಿದ್ದು, 20ಕ್ಕೂ ಹೆಚ್ಚು ಜನಪ್ರಿಯ ಬುಕ್‌ ಸ್ಟಾಲ್‌ಗಳು ಭಾಗಿಯಾಗಲಿವೆ. ಸಾವಿರಾರು ಪುಸ್ತಕಗಳು ಒಂದೇ ಕಡೆ ಲಭ್ಯವಾಗಲಿದೆ. ಪುಸ್ತಕಗಳಿಗೆ ಶೇ.20ರವರೆಗೆ ವಿಶೇಷ ರಿಯಾಯಿತಿ ಇರಲಿದೆ.

ಭಾಗವಹಿಸಲಿರುವ ಪ್ರಕಾಶನ ಸಂಸ್ಥೆಗಳು

ಸಪ್ನ ಬುಕ್‌ ಹೌಸ್‌, ನವ ಕರ್ನಾಟಕ, ಅಂಕಿತ, ವಿಸ್ತಾರ ಪ್ರಕಾಶನ, ಸ್ನೇಹ ಬುಕ್‌ ಹೌಸ್‌, ಛಂದ ಪುಸ್ತಕ, ಸಾವಣ್ಣ ಪ್ರಕಾಶನ, ವೀರಲೋಕ, ಸಮನ್ವಿತ, ಸಾಹಿತ್ಯ ಪ್ರಕಾಶನ, ಸಾಹಿತ್ಯ ಲೋಕ, ವಿಕ್ರಂ ಪ್ರಕಾಶನ, ಹರಿವು ಬುಕ್ಸ್‌, ಅಯೋಧ್ಯ ಪ್ರಕಾಶನ, ಅಭಿನವ, ಅಮೂಲ್ಯ ಪುಸ್ತಕ, ಮೈತ್ರಿ ಸಂಸ್ಕೃತ- ಸಂಸ್ಕೃತಿ ಪ್ರತಿಷ್ಠಾನ, ಕದಂಬ ಪ್ರಕಾಶನ

ಬಿಡುಗಡೆಯಾಗಲಿರುವ ವಿಸ್ತಾರ ಪ್ರಕಾಶನದ ನೂತನ ಪುಸ್ತಕಗಳು

ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಸ್ತಾರ ಪ್ರಕಾಶನದ ನಾಲ್ಕು ಪುಸ್ತಕಗಳು ಬಿಡುಗಡೆಯಾಗಲಿವೆ.
1. ಕುಣಿಯೇ ಜೀವ : ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನದ ಸಹಯೋಗದಲ್ಲಿ ನಡೆಸಿದ್ದ ವಿಸ್ತಾರ ನ್ಯೂಸ್
ಯುಗಾದಿ ಕಥಾಸ್ಪರ್ಧೆ 2023ರ ಬಹುಮಾನಿತ ಕಥೆಗಳ ಸಂಕಲನ
2. ನಮ್ಮದೇ ಕಥೆಗಳು: ಲೇಖಕರು: ಕೃಷ್ಣ ಭಟ್ ಅಳದಂಗಡಿ
3.ರಾಜಮಾರ್ಗ: ಪ್ರೇರಣಾದಾಯಕ ಕಥೆಗಳು ಲೇಖಕರು: ರಾಜೇಂದ್ರ ಭಟ್ ಕೆ
4. ಅಮ್ಮ ಹೇಳುವ ಚಂದದ ಕಥೆಗಳು: ಲೇಖಕರು: ಅಲಕಾ ಕಟ್ಟೆಮನೆ

ಮಕ್ಕಳಿಗೆ ನಾನಾ ಮನರಂಜನೆಗಳ ಮಹಾಲೋಕ

ಯುವಕ ಸಂಘ, ಸಾಂಸ್ಕೃತಿಕ ಸಂಘಟನೆಗಳಿಂದ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳು ನಡೆಯಲಿವೆ. ವಿಶೇಷ ಸ್ಪರ್ಧೆ ಮತ್ತು ಬಹುಮಾನಗಳಿವೆ. ಪುಟ್ಟ ಮಕ್ಕಳಿಗೆ ಆಟವಾಡಲು ಆಕರ್ಷಕ ಸಾಧನಗಳು ಇರಲಿವೆ.

ಹೊಟ್ಟೆ ತಣ್ಣಗಾಗಿಸುವ ಸವಿ ಸಂಭ್ರಮ

ವಿಸ್ತಾರ ಸಂಭ್ರಮದಲ್ಲಿ ಮೆದುಳಿಗೆ ಮಾತ್ರವಲ್ಲ, ಹೊಟ್ಟೆಯನ್ನೂ ತಣ್ಣಗೆ ಮಾಡುವ ವಿಶೇಷ ಆಹಾರ ಖಾದ್ಯಗಳ ಲೋಕವಿದೆ.
 ಬಾಯಿಯಲ್ಲಿ ನೀರೂರಿಸುವ ರಾಜ್ಯದ ನಾನಾ ಭಾಗಗಳ ಆಹಾರ ಮಳಿಗೆಗಳು
 ಮೈಸೂರು, ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಪ್ರದೇಶದ ವಿಶೇಷ ತಿಂಡಿಗಳು
 ಸಾವಯವ ಆಹಾರ ಪದಾರ್ಥಗಳು, ದೇಸಿ ಉತ್ಪನ್ನಗಳ ವಿಶೇಷ ಮಳಿಗೆಗಳು ಇರಲಿವೆ.

ಜಾನಪದ ಕಲಾ ತಂಡದ ಪ್ರದರ್ಶನ: ಡಿಜಿಟಲ್ 3ಡಿ ಶೋ ಇರಲಿದೆ

ಸ್ಥಳದಲ್ಲೇ ನಿಮ್ಮ ಚಿತ್ರ ಬಿಡಿಸುತ್ತಾರೆ ಐವರು ಕಲಾವಿದರು

ಖ್ಯಾತ ಕಲಾವಿದರಾದ ಬಿ.ಜಿ. ಗುಜ್ಜಾರಪ್ಪ, ಜಿ.ಎಸ್‌. ರಂಗನಾಥ್‌, ರಘುಪತಿ ಶೃಂಗೇರಿ, ವಿ.ಆರ್‌.ಸಿ. ಶೇಖರ್‌, ರವಿ ಪೂಜಾರಿ ಅವರು ಕೆಲವೇ ನಿಮಿಷದಲ್ಲಿ ನಿಮ್ಮ ಪೆನ್ಸಿಲ್‌ ಸ್ಕೆಚ್‌ ರೆಡಿ ಮಾಡಲಿದ್ದಾರೆ.

ಇವರು ನಮ್ಮ ಪಾರ್ಟ್ನರ್‌ಗಳು

91.1 ಎಫ್‌ಎಂ ರೇಡಿಯೊ ಸಿಟಿ ನಮಗೆ ರೇಡಿಯೊ ಪಾರ್ಟ್ನರ್‌ ಆಗಿದ್ದರೆ, ಡೈಲಿಹಂಟ್‌ ಡಿಟಿಟಲ್‌ ಪಾರ್ಟ್ನರ್‌ ಆಗಿರಲಿದೆ.

ಈ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಸಹಕರಿಸುವ ಸಂಘ ಸಂಸ್ಥೆಗಳು ಇವು

■ ಬೆಂಗಳೂರು ಅಪಾರ್ಟ್​ಮೆಂಟ್‌ ಒಕ್ಕೂಟ
■ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ)
■ ರೋಟರಿ ಸಂಸ್ಥೆ, ಬೆಂಗಳೂರು
■ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ
■ ಮಾನ್ಯತೆ ಪಡೆದ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ
■ ಶಿ ಫಾರ್‌ ಸೊಸೈಟಿ
■ ರಾಜ್ಯ ಆಗಮಿಕರ ಹಾಗೂ ಅರ್ಚಕರ ಸಂಘ
■ ರಾಜ್ಯ ಕಬ್ಬು ಬೆಳೆಗಾರರ ಸಂಘ
■ ಕೆಎಸ್‌ಆರ್‌ಟಿಸಿ ಕನ್ನಡ ಕ್ರಿಯಾ ಸಮಿತಿ
■ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ
■ ಕರ್ನಾಟಕ ಹೋಟೆಲ್ ಮಾಲೀಕರ ಸಂಘ
■ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ
■ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ನಗರ ಜಿಲ್ಲಾ ಘಟಕ
■ ಕರ್ನಾಟಕ ಕಾರ್ಮಿಕ ಲೋಕ
■ ಕನ್ನಡ ಗೆಳೆಯರ ಬಳಗ
■ ಕೇಂದ್ರೀಯ ಸದನ ಕನ್ನಡ ಸಂಘ
■ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)
■ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ)
■ ಕರ್ನಾಟಕ ಓಲಾ ಉಬರ್ ಚಾಲಕರ ಸಂಘ
■ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ
■ ಕೇಬಲ್ ಆಪರೇಟರ್ ಸಂಘ
■ ಬಿಬಿಎಂಪಿ ನೌಕರರ ಸಂಘ
■ ವಿಷ್ಣು ಸೇನಾ ಸಮಿತಿ
■ ವೀರಲೋಕ ಸಂಸ್ಥೆ
■ ಆಸರೆ ಫೌಂಡೇಷನ್
ಇದನ್ನೂ ಓದಿ: Krishna Janmashtami : ವಿಸ್ತಾರ ನ್ಯೂಸ್‌ನಲ್ಲಿ ನಿಮ್ಮ ಮನೆಯ ಶ್ರೀಕೃಷ್ಣನ ದರ್ಶನ; ಇಲ್ಲಿದೆ Photo Gallery!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Belagavi Winter Session : ಮುಂದಿನ ಬಜೆಟ್‌ನಲ್ಲಿ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆ ಜತೆ ಚರ್ಚಿಸಿ ಕ್ರಮ ವಹಿಸುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Madhu Bangarappa in Belagavi Winter Session
Koo

ಬೆಳಗಾವಿ: ಪ್ರೌಢಶಾಲೆಗೆ ಹೋಗುವ ಹೆಣ್ಣು ಮಕ್ಕಳಿಗೆ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರು ಸಿಎಂ ಆಗಿದ್ದಾಗ ನೀಡಿದ್ದ ಉಚಿತ ಸೈಕಲ್‌ ಯೋಜನೆಗೆ ಮರು ಚಾಲನೆ ಸಿಗಲಿದೆ. ಇಂಥದ್ದೊಂದು ಭರವಸೆಯನ್ನು ಬೆಳಗಾವಿ ಅಧಿವೇಶನದಲ್ಲಿ (Belagavi Winter Session) ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ನೀಡಿದ್ದಾರೆ.

ಸರ್ಕಾರಿ ಶಾಲೆಗಳ ಎಂಟನೇ ತರಗತಿ ಮಕ್ಕಳಿಗೆ ಮತ್ತೆ ಸೈಕಲ್ ವಿತರಣೆ ಮಾಡಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ (MLA Pradeep Easwar) ಅವರು ಪ್ರಶ್ನೋತ್ತರ ವೇಳೆ ಒತ್ತಾಯ ಮಾಡಿದಾಗ, ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ಬಜೆಟ್‌ನಲ್ಲಿ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಆರ್ಥಿಕ ಇಲಾಖೆ (Finance Department) ಜತೆ ಚರ್ಚಿಸಿ ಕ್ರಮ ವಹಿಸುವುದಾಗಿ ಹೇಳಿದ್ದಾರೆ.

ಈ ವೇಳೆ ಪ್ರದೀಪ್ ಈಶ್ವರ್ ಮಾತನಾಡಿ, ಇದರೊಟ್ಟಿಗೆ ಎರಡು ಜತೆ ಶೂ, ಸಾಕ್ಸ್ ಬದಲು ನಾಲ್ಕು ಜತೆ ವಿತರಣೆ ಮಾಡಿದೆ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದು ಒತ್ತಾಯಿಸಿದರು. ಇದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಉತ್ತರ ನೀಡಿದ್ದಾರೆ.

ಧ್ವನಿಗೂಡಿಸಿದ‌ ಆರ್. ಅಶೋಕ್

ಈ ವೇಳೆ ಪತಿ ಪಕ್ಷ ನಾಯಕ ಆರ್.‌ ಅಶೋಕ್ ಮಧ್ಯಪ್ರವೇಶಿಸಿ, ಇಡೀ ರಾಜ್ಯದಲ್ಲಿ ಸೈಕಲ್ ವಿತರಣೆಯನ್ನು ಪುನಾರಂಭಿಸಿ. ಬಿ.ಎಸ್.‌ ಯಡಿಯೂರಪ್ಪ ತಂದಿರುವ ಯೋಜನೆ ಅದಾಗಿದೆ. ದೂರದಿಂದ ಬರುವ ಮಕ್ಕಳಿಗೆ ಸಹಾಯ ಆಗುತ್ತದೆ ಎಂದು ಒತ್ತಾಯ ಮಾಡಿದರು.

ಇದನ್ನೂ ಓದಿ: Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

ಬಿಜೆಪಿ ಅವಧಿಯಲ್ಲೇ ಸ್ಥಗಿತವಾಗಿತ್ತು

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಸೈಕಲ್ ವಿತರಣೆ ಬಿಜೆಪಿ ಕಾಲದಲ್ಲೇ ಸ್ಥಗಿತ ಆಗಿದೆ. ನಿಮ್ಮವರೇ ಆರಂಭಿಸಿ ನಿಮ್ಮ ಕಾಲದಲ್ಲೇ ಸ್ಥಗಿತ ಆಯಿತು, ಹೀಗಾಗಬಾರದಿತ್ತು. ಈಗ ನಮ್ಮ ಸರ್ಕಾರ ಸೈಕಲ್ ವಿತರಣೆಗೆ ಪರಿಶೀಲಿಸಿ ಕ್ರಮ ವಹಿಸಲಿದೆ ಎಂದು ಟಾಂಗ್‌ ಕೊಟ್ಟರು.

ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಹಳೇ ಪಿಂಚಣಿ ಪದ್ಧತಿಯನ್ನೇ (Old Pension Scheme) ಮರು ಜಾರಿ ಮಾಡಬೇಕು. ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದು ಮಾಡಬೇಕು (NPS Cancellation) ಎಂದು ಆಗ್ರಹಿಸುತ್ತಿರುವ ಸರ್ಕಾರಿ ನೌಕರರಿಗೆ (Government employees) ಈ ಬಾರಿ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಸಿಗಲಿದೆಯೇ? ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಸಂಬಂಧ ಇರುವ ಸಮಿತಿಯನ್ನು 10 ದಿನದೊಳಗೆ ಪುನಾರಚನೆ ಮಾಡುತ್ತೇವೆ. ಆದಷ್ಟು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಬೆಳಗಾವಿ ಅಧಿವೇಶನದಲ್ಲಿ (Belagavi Winter Session) ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ಹೇಳಿದ್ದಾರೆ.

ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಸರ್ಕಾರ ತೆಗೆದುಕೊಂಡ ಕ್ರಮ ಏನು? ಎಂಬ ಜೆಡಿಎಸ್‌ನ ಮರಿತಿಬ್ಬೇಗೌಡ, ಬಿಜೆಪಿಯ ಎಸ್.ವಿ. ಸಂಕನೂರ್ ಅವರು ವಿಧಾನ ಪರಿಷತ್‌ನಲ್ಲಿ ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಹಿಂದೆ ಏಕ ವ್ಯಕ್ತಿಯ ಸಮಿತಿಯನ್ನು ಮಾಡಿದ್ದರು. ಈಗ ಆ ಸಮಿತಿಯನ್ನು ಪರಿಷ್ಕರಣೆ ಮಾಡಿ ನಾಲ್ಕೈದು ಸದಸ್ಯರ ನೇಮಕ ಮಾಡಲಾಗುವುದು. ಬಳಿಕ ಆ ಸಮಿತಿ ಕಾರ್ಯವ್ಯಾಪ್ತಿ ಅಳವಡಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ವಾಜಪೇಯಿ ಬಗ್ಗೆ ನಮಗೆ ನಂಬಿಕೆ ಇದೆ

ಕಾಲಮಿತಿಯ ಬಗ್ಗೆಯೂ ಪರಿಶೀಲನೆ ಮಾಡುತ್ತೇವೆ. ರಾಜಸ್ಥಾನ್, ಛತ್ತೀಸಗಢ, ಪಂಜಾಬ್‌ನಿಂದ ಇದರ ಬಗೆಗ ಆದೇಶ ಆಗಿದೆ. ಆದರೆ, ಅಲ್ಲಿ ಇನ್ನು ಜಾರಿಗೊಳಿಸಿಲ್ಲ. ಯಾರನ್ನು ಪಿಂಚಣಿಯಿಂದ ಹೊರಗಿಡುವ ಪ್ರಶ್ನೆ ಇಲ್ಲ. ನಾನು ಅಟಲ್‌ ಬಿಹಾರಿ ವಾಜಪೇಯಿಯವರ ಮೇಲೆ ನಂಬಿಕೆ ಇಟ್ಟಿದ್ದೇನೆ. ಅವರ ಆಡಳಿತದ ಬಗ್ಗೆಯೂ ನಂಬಿಕೆ ಇಟ್ಟಿದ್ದೇನೆ. ವಾಜಪೇಯಿ ಅವರು ಎನ್‌ಪಿಎಸ್ ತರುವಾಗ ಎಲ್ಲ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತಂದಿರುತ್ತಾರೆ. ಆದರೆ, ನಿಮಗೆ ಅವರ ನಿರ್ಧಾರದ ಬಗ್ಗೆ ಗೌರವ ಇಲ್ಲದಿರಬಹುದು, ನಮಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

10 ದಿನದೊಳಗೆ ಸಮಿತಿ ಪುನರ್ ರಚನೆ

ಅನುದಾನಿತ ಸಂಸ್ಥೆಯಲ್ಲಿ ಸಿಬ್ಬಂದಿಗೆ ತೊಂದರೆ ಆಗಿದೆ ಎಂಬುದನ್ನು ನಾವು ಒಪ್ಪುತ್ತೇವೆ. ಶಿಕ್ಷಣ ಸಂಸ್ಥೆಯವರು ಕೊಡುಗೆ ನೀಡಬೇಕು. ನಮಗೆ ಅದನ್ನು ಪರಿಹರಿಸುವ ಮನಸ್ಸಿದೆ. ಅದನ್ನ ಮಾಡೇ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸೂಚನೆ ಕೊಟ್ಟಿದ್ದಾರೆ. 10 ದಿನದೊಳಗೆ ಸಮಿತಿ ಪುನರ್ ರಚನೆ ಮಾಡುತ್ತೇವೆ ಎಂದು ಇದೇ ವೇಳೆ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ಶೀಘ್ರದಲ್ಲೇ ಆರ್ಥಿಕ ಇಲಾಖೆ ಜತೆ ಸಿಎಂ ಸಭೆ

ಎನ್‌ಪಿಎಸ್‌ ತೆಗೆದು ಒಪಿಎಸ್‌ ಅನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದರೆ ಮುಂದಾಗುವ ಸಾಧಕ – ಬಾಧಕಗಳು ಏನು? ರಾಜ್ಯದ ಮೇಲೆ ಆಗುವ ಆರ್ಥಿಕ ಹೊರೆ ಏನು? ಈಗಿರುವ ಎಲ್ಲ ಲೆಕ್ಕಾಚಾರಗಳ ನಡುವೆ ಅದನ್ನು ಹೊಂದಾಣಿಕೆ ಮಾಡಿಕೊಂಡು ಹೋಗಬಹುದಾ ಎಂದು ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಜತೆ ಶೀಘ್ರದಲ್ಲಿಯೇ ಸಭೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Nandini Milk: ಮತ್ತೆ ನಂದಿನಿ ಹಾಲಿನ ದರ ಏರಿಕೆ? ಯಾವಾಗ? ಎಷ್ಟು ಹೆಚ್ಚಳ ಮಾಡಬಹುದು?

ಡಿಸೆಂಬರ್‌ನಲ್ಲಿ ಎನ್‌ಪಿಎಸ್‌ ನೌಕರರ ಸಮಾವೇಶ

ಡಿಸೆಂಬರ್‌ನಲ್ಲಿ ಎನ್‌ಪಿಎಸ್‌ ನೌಕರರ ಸಮಾವೇಶ ನಡೆಯುತ್ತಲಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನ ಮಾಡಲು ತಯಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿ ಎನ್‌ಪಿಎಸ್‌ ನೌಕರರು ಈ ಸಮಾವೇಶದಲ್ಲಿ ಒಪಿಎಸ್‌ ಜಾರಿಗಾಗಿ ಸಿಎಂ ಎದುರು ಹಕ್ಕೊತ್ತಾಯವನ್ನು ಮಂಡನೆ ಮಾಡುತ್ತಾರೆ. ಹಾಗಾಗಿ ಈ ಬಗ್ಗೆ ಮೊದಲೇ ಸಾಧಕ – ಬಾಧಕಗಳ ಬಗ್ಗೆ ಆರ್ಥಿಕ ಇಲಾಖೆ ಜತೆ ಸಭೆ ನಡೆಸಿ ಒಂದು ತೀರ್ಮಾನಕ್ಕೆ ಬಂದರೆ ಸಮಾವೇಶದಲ್ಲಿ ಘೋಷಣೆ ಮಾಡಲು ಅನುಕೂಲ ಆಗುತ್ತದೆ ಎಂಬುದು ಸಿಎಂ ಸಿದ್ದರಾಮಯ್ಯ ಅವರ ಲೆಕ್ಕಾಚಾರ ಆಗಿದೆ ಎಂದು ಹೇಳಲಾಗಿದೆ. ಆದರೆ, ಇನ್ನು 10 ದಿನದಲ್ಲಿ ಸಮಿತಿಯನ್ನು ಪುನಾರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಹೀಗಾಗಿ ಸದ್ಯಕ್ಕೆ ಹಳೇ ಪಿಂಚಣಿ ಬಗ್ಗೆ ಸರ್ಕಾರ ಘೋಷಣೆ ಮಾಡುವ ಸಾಧ್ಯತೆ ಕಡಿಮೆಯೇ ಎಂದು ಹೇಳಲಾಗಿದೆ.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಿಸುವ ಕುರಿತು ಒತ್ತಾಯಿಸಿ, ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಛೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದ್ದಾರೆ.

VISTARANEWS.COM


on

Pressmeet for Demand for construction of bypass road in Yallapur
ಯಲ್ಲಾಪುರ ಪಟ್ಟಣದಲ್ಲಿ ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Koo

ಯಲ್ಲಾಪುರ: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ (Bypass Road) ನಿರ್ಮಿಸುವ ಕುರಿತು ಒತ್ತಾಯಿಸಿ, ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದರು.

ಪಟ್ಟಣದ ಫಾರೆಸ್ಟ್‌ ಐ.ಬಿ.ಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯು ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿದ್ದು, ಪ್ರತಿನಿತ್ಯ ಸಂಚರಿಸುವ ಸಾವಿರಾರು ವಾಹನಗಳಿಂದಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಹಾಗೂ ಸ್ಥಳೀಯ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಪಟ್ಟಣದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಈಗಾಗಲೇ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ ಚತುಷ್ಪಥ ರಸ್ತೆ ಆಗಿದ್ದು, ಮುಂದುವರೆದು ಯಲ್ಲಾಪುರದ ಮೂಲಕ ಈ ರಸ್ತೆ ಹಾದು ಹೋದಲ್ಲಿ, ಯಲ್ಲಾಪುರ ನಗರದಲ್ಲಿ ನಡೆದಾಡುವುದು ಸಹ ಕಷ್ಟ ಸಾಧ್ಯವಾಗಲಿದೆ.

ಇದನ್ನೂ ಓದಿ: T20 World Cup 2024:​ ನೂತನ ಲೋಗೋ ವಿನ್ಯಾಸಕ್ಕೆ ಫಿದಾ ಆದ ಕ್ರಿಕೆಟ್​ ಅಭಿಮಾನಿಗಳು

ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂಚಿತವಾಗಿಯೇ ಬೈಪಾಸ್ ನಿರ್ಮಾಣಕ್ಕೆ ಸರ್ಕಾರ ಆದೇಶಿಸಬೇಕು. ಈ ಪ್ರಯುಕ್ತ ಡಿ. 11 ರಂದು ಬೆಳಗ್ಗೆ 10 ಗಂಟೆಗೆ ವೈಟಿಎಸ್‌ಎಸ್‌ ಮೈದಾನದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪಾಲಕರು, ಅಂಗಡಿಕಾರರೆಲ್ಲ ಸೇರಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ತಹಶೀಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಸಹ ತಮ್ಮ ಮಕ್ಕಳ ಸುರಕ್ಷತೆಗಾಗಿ, ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಅಗತ್ಯತೆಯ ಕುರಿತು ಮನದಟ್ಟು ಮಾಡಲು ಪಾಲ್ಗೊಳ್ಳುವಂತೆ ಕೋರಿದರು.

ಸಮಿತಿಯ ಪ್ರಮುಖರಾದ ರವಿ ಶ್ಯಾನಭಾಗ್ ಮಾತನಾಡಿ, ಹೆದ್ದಾರಿಯ ಅಕ್ಕ ಪಕ್ಕದ ಅಂಗಡಿಕಾರರು ಹೆಚ್ಚಿನದಾಗಿ ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅವಶ್ಯಕತೆ ಇದೆ. ಬೈಪಾಸ್ ನಿರ್ಮಾಣವಾಗದೆ ಹೆದ್ದಾರಿ ಅಗಲೀಕರಣವಾದಲ್ಲಿ, ಯಲ್ಲಾಪುರದ ಬಹುತೇಕ ಅಂಗಡಿಗಳು ನೆಲೆ ಕಳೆದುಕೊಳ್ಳಲಿದೆ. ಹೀಗಾಗಿ ಮುಂದಿನ ಭವಿಷ್ಯಕ್ಕಾಗಿ ಪಾಲ್ಗೊಳ್ಳಬೇಕು. ಬೈಪಾಸ್ ನಿರ್ಮಾಣಕ್ಕೆ ಸಮಯ ಆಗಲಿದ್ದು, ಅಲ್ಲಿಯವರೆಗೆ ಟ್ರಾಫಿಕ್ ಪೊಲೀಸರ ತಂಡ ಪ್ರಾರಂಭಿಸಿ, ಟ್ರಾಫಿಕ್ ನಿರ್ವಹಣೆಯ ಕಾರ್ಯ ಮಾಡಬೇಕಿದೆ ಎಂದರು.

ಇದನ್ನೂ ಓದಿ: The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ,‌ ಎ.ಎ. ಶೇಖ್‌, ಮಹ್ಮದ್‌ ಗೌಸ್‌, ವಕೀಲೆ ಬೇಬಿ ಅಮಿನಾ, ಸುರೇಶ್ ಬೊರಕರ, ಪ್ರಭಾಕರ ನಾಯ್ಕ, ಮಾಧವ ನಾಯಕ, ದಾಸಿಂತ್ ಫರ್ನಾಂಡಿಸ್, ಉಲ್ಲಾಸ್ ಮಹಾಲೆ, ವೇಣುಗೋಪಾಲ ಮದ್ಗುಣಿ, ಜಗನ್ನಾಥ ರೇವಣಕರ ಇದ್ದರು.

Continue Reading

ಕರ್ನಾಟಕ

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

Self Harming : ಮಾನಸಿಕ ಖಿನ್ನತೆಯಿಂದಾಗಿ ನೊಂದ ವಿದ್ಯಾರ್ಥಿಯೊಬ್ಬ ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಂದು ಕಡೆ ಎಸಿಸಿ ಸಿಮೆಂಟ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್‌ ನೇಣು ಬಿಗಿದುಕೊಂಡಿದ್ದಾಳೆ.

VISTARANEWS.COM


on

By

self harming by wadi Acc cement Depute Director
Koo

ಕಲಬುರಗಿ/ಮೈಸೂರು: ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಗ್ರೂಪ್ ಮಾಲೀಕತ್ವದ ಎಸಿಸಿ ಕಾರ್ಖಾನೆಯ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ರಮೇಶ ಪವಾರ (47) ಆತ್ಮಹತ್ಯೆ ಮಾಡಿಕೊಂಡ ಎಸಿಸಿ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ಆಗಿದ್ದಾರೆ. ಎಸಿಸಿ ಕಾಲೋನಿಯ ಮನೆಯ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾರ್ಖಾನೆ ಹಿರಿಯ ಅಧಿಕಾರಿಗಳ ಮೇಲೆ ಆರೋಪ ಮಾಡಿರುವ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ. ಈ ರಮೇಶ ಪವಾರ್ ಚಿತ್ತಾಪೂರದ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅವರ ಅಳಿಯರಾಗಿದ್ದಾರೆ.

ವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ಮೈಸೂರಿನ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮುಖಕ್ಕೆ ಪ್ಲಾಸ್ಟಿಕ್ ಕವರ್ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಷಜ್ (18) ಮೃತ ದುರ್ದೈವಿ.

ಹೈದರಾಬಾದ್ ಮೂಲದ ಅಕ್ಷಜ್‌ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ ಯಾರು ಇಲ್ಲದ ವೇಳೆ ಪ್ಲಾಸ್ಟಿಕ್‌ ಕವರ್‌ನಿಂದ ಮುಖವನ್ನು ಪೂರ್ತಿ ಮುಚ್ಚಿಕೊಂಡು ಉಸಿರುಗಟ್ಟಿಸಿಕೊಂಡು ಮೃತಪಟ್ಟಿದ್ದಾನೆ.

ಸಹಪಾಠಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: lawyer Murder: ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!

ಪ್ರೀತಿಸಿ ಕೈಬಿಟ್ಟಳು; ನೊಂದು ಬೆಂಕಿ ಹಚ್ಚಿಕೊಂಡ ಪ್ರೇಮಿ!

ಬೆಂಗಳೂರು: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ (Love failure) ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್‌ ಐದಾರು ವರ್ಷದಿಂದ‌ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್‌, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್‌ನನ್ನು ಯುವತಿ ಅವಾಯ್ಡ್‌ ಮಾಡಲು ಶುರು ಮಾಡಿದ್ದಳು.

ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್‌, ಫೋನ್‌ ಕಾಲ್‌ಗೂ ರೆಸ್ಪಾನ್ಸ್‌ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.

ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್‌, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

Veer Savarkar : ಸಾವರ್ಕರ್ ಫೋಟೊ ತೆಗೆದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನಗೆ ಬಿಟ್ಟರೆ ಇಂದೇ ಅವರ ಫೋಟೊವನ್ನು ತೆಗೆದು ಹಾಕುತ್ತೇನೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕೆಂಡವಾಗಿದ್ದು, ಪ್ರಿಯಾಂಕ್‌ ಖರ್ಗೆ ಅವರು ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶವನ್ನು ಹೊರಹಾಕಿದೆ.

VISTARANEWS.COM


on

Veer Savarkar and Priyank Kharge
Koo

ಬೆಳಗಾವಿ: ಬೆಳಗಾವಿ ವಿಧಾನಸೌಧದಲ್ಲಿ ಕಳೆದ ಬಿಜೆಪಿ ಸರ್ಕಾರ ಇದ್ದಾಗ ಹಾಕಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್‌ (Veer Savarkar) ಅವರ ಫೋಟೊ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ (Minister Priyank Kharge) ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಫೋಟೊ ತೆಗೆದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನಗೆ ಬಿಟ್ಟರೆ ಇಂದೇ ಅವರ ಫೋಟೊವನ್ನು ತೆಗೆದು ಹಾಕುತ್ತೇನೆ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕೆಂಡವಾಗಿದ್ದು, ಪ್ರಿಯಾಂಕ್‌ ಖರ್ಗೆ ಅವರು ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶವನ್ನು ಹೊರಹಾಕಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, ವೀರ ಸಾವರ್ಕರ್‌ ಅವರ ಯಾವ ತತ್ವ ಸಿದ್ಧಾಂತದಲ್ಲಿಯೂ ಸಮಾನತೆ ಕಾಣಲ್ಲ. ಅದನ್ನು ನಾನು ಒಪ್ಪಲ್ಲ. ಯಾವ ತತ್ವ ಸಿದ್ಧಾಂತದ ಪ್ರೇರಿತವಾಗಿ ಗಾಂಧೀಜಿ ಹತ್ಯೆಯಾಗಿದೆ? ನನ್ನನ್ನು ಬಿಟ್ಟರೆ ಬೆಳಗಾವಿ ವಿಧಾನಸೌಧದೊಳಗೆ ಇರುವ ವೀರ ಸಾವರ್ಕರ್‌ ಅವರ ಫೋಟೊವನ್ನು ಇವತ್ತೇ ತೆಗೆದುಹಾಕುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ

ಹೀಗೆ ವಿಧಾನಸೌಧದೊಳಗೆ ಇರುವ ಫೊಟೊವನ್ನು ತೆಗೆಯುವ ಕೆಲಸ ನಿಯಮಾನುಸಾರವಾಗಿ ಆಗಬೇಕು. ಈ ವಿಷಯದಲ್ಲಿ ಸ್ಪೀಕರ್ ಯು.ಟಿ. ಖಾದರ್‌ ಅವರ ನಿರ್ಧಾರವನ್ನು ನೋಡೋಣ. ನಾನು ಸಂವಿಧಾನವನ್ನು ನಂಬಿರುವ ವ್ಯಕ್ತಿ. ಕಳೆದ ಬಾರಿ ಸಾವರ್ಕರ್ ಫೋಟೊ ಹಾಕಿದಾಗ ಬಿಜೆಪಿಯವರಿಗೆ ಪ್ರಶ್ನೆ ಕೇಳಿದ್ದೆ. ಅವರು ಇದುವರೆಗೂ ಉತ್ತರ ಕೊಟ್ಟಿಲ್ಲ. ಸಾವರ್ಕರ್ ಹೆಸರಿಗೆ ವೀರ್ ಹೇಗೆ ಬಂತು? ಬ್ರಿಟಿಷರ ಬಳಿ ಸಾವರ್ಕರ್ ಪಿಂಚಣಿ ಪಡೆಯುತ್ತಿರಲಿಲ್ಲವೇ? ಅವರ ಮನೆಯವರು ಕ್ಷಮಾಪಣೆ ಅರ್ಜಿ ಹಾಕಿದ್ದರಾ, ಇಲ್ಲವಾ? ಸುಭಾಷ್ ಚಂದ್ರ ಬೋಸ್ ಇಂಡಿಯನ್ ನ್ಯಾಷನಲ್ ಆರ್ಮಿ ಮಾಡಿದ್ದರು. ಅದಕ್ಕೆ ನೋಂದಣಿ ಮಾಡಿಕೊಳ್ಳಲು ಸೇರಿದ್ದರಾ ಇಲ್ಲವಾ? ಸಾವರ್ಕರ್ ಅವರಿಗೆ ಗೋ ಮಾತೆ ಬಗ್ಗೆ ಅಭಿಪ್ರಾಯ ಏನಿತ್ತು? ನಾನು ಅವರ ಐಡಿಯಾಲಜಿ ವಿರುದ್ಧ ಇದ್ದೇನೆ‌. ಅವರ ತತ್ವದ ಮೇಲೆ ನನಗೆ ನಂಬಿಕೆ ಇಲ್ಲ. ವೀರ ಸಾವರ್ಕರ್‌ ಫೋಟೊ ತೆಗೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿದ್ದೇನೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಸಾವರ್ಕರ್ ಫೋಟೊ ತೆಗೆದು, ಜವಾಹರ್‌ಲಾಲ್‌ ನೆಹರು ಫೋಟೊ ಹಾಕುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್‌ ಖರ್ಗೆ, ನೆಹರೂ ಅವರ ಫೋಟೊವನ್ನು ಹಾಕಲೇಬೇಕು‌. ಅವರು 3259 ದಿನ ಜೈಲಲ್ಲಿ ಇದ್ದವರು. ದೇಶದ ಮೊದಲ ಪ್ರಧಾನಿ. 16 ವರ್ಷ ದೇಶವನ್ನು ಆಳಿದ್ದಾರೆ. ಆರ್ಥಿಕವಾಗಿ ಸದೃಢವಾಗಿದ್ದೇವೆ ಅಂತ ಹೇಳುತ್ತಿದ್ದಾರಲ್ಲ? ಪ್ರಧಾನಿ ನರೇಂದ್ರ ಮೋದಿ ವಿಶ್ವಗುರು ಅಂತ ಹೇಳ್ತಿದ್ದಾರಲ್ಲವೇ? ಅದಕ್ಕೆ ಅಡಿಪಾಯ ಹಾಕಿದ್ದೇ ನೆಹರು. ಐಐಟಿ, ಐಐಎಂ, ಇಸ್ರೋ ಎಲ್ಲವನ್ನೂ ಸ್ಥಾಪಿಸಿದ್ದೇ ನೆಹರು. ಚಂದ್ರಯಾನ, ಸೂರ್ಯಯಾನ ಅಂತ ಬೆನ್ನು ತಟ್ಟಿಕೊಂಡು ಓಡಾಡುತ್ತಿದ್ದಾರಲ್ಲವೇ? ಇಸ್ರೋ ಸ್ಥಾಪಿಸಿದ್ದು ಯಾರು? ನೆಹರು ಅವರ ಫೋಟೊ ಹಾಕಲೇಬೇಕು ಎಂದು ಪ್ರತಿಪಾದಿಸಿದರು.

ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಮಾಡಿದ ಅಪಮಾನ: ಅಶ್ವತ್ಥನಾರಾಯಣ್

ಪ್ರಿಯಾಂಕ್ ಖರ್ಗೆ ಅವರು ವೀರ ಸಾವರ್ಕರ್‌ ಅವರ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ. ಅವರಿಗೆ ಅಪಮಾನವಾಗಿ ಮಾತನಾಡಿದ್ದಾರೆ. ನಾನು ಫೋಟೊ ತೆಗೆದು ಹಾಕುತ್ತೇನೆ ಎಂದು ಹೇಳಿದ್ದಾರೆ. ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಮಾಡಿದ ಅಪಮಾನ ಇದಾಗಿದೆ. ವೀರ ಸಾವರ್ಕರ್ ಅವರಿಗೆ ಅಗೌರವ ತೋರಿಸಿದ್ದನ್ನು ನಾವು ಖಂಡಿಸುತ್ತೇವೆ ಎಂದು ಶಾಸಕ ಅಶ್ವತ್ಥನಾರಾಯಣ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ್, ಈ ರೀತಿ ಹೇಳಿಕೆಯನ್ನು ಕೊಡುವುದು ಬಿಟ್ಟು, ಕಲಬುರಗಿಗೆ ಹೋಗಿ ಅಭಿವೃದ್ಧಿ ಮಾಡಿ. ಭಾವನೆಗೆ ಧಕ್ಕೆ ತರುವ ಹೇಳಿಕೆಗಳನ್ನು ನಿಲ್ಲಿಸಿ. ಕೀಳು ಮಟ್ಟದ ಯೋಚನೆಯನ್ನು ನಿಲ್ಲಿಸಿ. ನೀವು ಈಗ ವ್ಯಕ್ತಿ ಮಾತ್ರ ಅಲ್ಲ, ಒಂದು ಘನತೆವೆತ್ತ ಸ್ಥಾನದಲ್ಲಿದ್ದೀರಿ. ಮಂತ್ರಿಯಾಗಿ ಅವಮಾನ ಆಗುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ರೈತರ ಸಾಲ ಮನ್ನಾಕ್ಕೆ ಬಿಜೆಪಿ ಆಗ್ರಹ; ಇದು ದಿವಾಳಿ ಸರ್ಕಾರ ಎಂದ ಅಶೋಕ್‌

ಪ್ರಸ್ತಾವನೆ ಬಂದಿಲ್ಲ; ಬಂದ ಮೇಲೆ ನೋಡೋಣ

ಈ ಬಗ್ಗೆ ಸ್ಪೀಕರ್‌ ಯು.ಟಿ. ಖಾದರ್‌ ಅವರಿಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನಬದ್ಧವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ. ಸಾವರ್ಕರ್‌ ಫೋಟೊ ಬದಲಾವಣೆ ಮಾಡುವ ಬಗ್ಗೆ ಈವರೆಗೆ ನನಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಬಂದ ಮೇಲೆ ಈ ಬಗ್ಗೆ ನೋಡೋಣ. ಈಗಲೇ ಅದರ ಬಗ್ಗೆ ಬ್ಯಾಟ್‌ ಬೀಸಿದರೆ ಆಗುತ್ತದೆಯೇ? ಪ್ರಜಾಪ್ರಭುತ್ವದಲ್ಲಿ ಅವರವರ ಹೇಳಿಕೆ ನೀಡಲು ಅವಕಾಶವಿದೆ. ನನಗೆ ಮಂತ್ರಿಗಳೂ ಒಂದೇ, ಪ್ರತಿಪಕ್ಷದವರೂ ಒಂದೇ ಎಂದು ಹೇಳಿದರು.

Continue Reading
Advertisement
Madhu Bangarappa in Belagavi Winter Session
ಕರ್ನಾಟಕ14 mins ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Pressmeet for Demand for construction of bypass road in Yallapur
ಉತ್ತರ ಕನ್ನಡ19 mins ago

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Israel
ಪ್ರಮುಖ ಸುದ್ದಿ20 mins ago

Israel Palestine War: ಅರ್ಧದಷ್ಟು ಹಮಾಸ್ ಕಮಾಂಡರ್‌ಗಳು ಫಿನಿಷ್! ಇಸ್ರೇಲ್ ಹೇಳಿಕೆ

bengaluru bulls kiccha sudeep
ಕ್ರೀಡೆ21 mins ago

ಬೆಂಗಳೂರು ಬುಲ್ಸ್​ಗೆ ಫುಲ್ ಚಾರ್ಜ್​ ಮಾಡಲು ಬರಲಿದ್ದಾರೆ ಕಿಚ್ಚ ಸುದೀಪ್

self harming by wadi Acc cement Depute Director
ಕರ್ನಾಟಕ38 mins ago

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

A girl shoots her classmate and herself with shotgun
ವಿದೇಶ38 mins ago

viral video: ಸಹಪಾಠಿಗೆ ಗುಂಡು ಹೊಡೆದು ತಾನೂ ಸತ್ತ 14 ವರ್ಷದ ವಿದ್ಯಾರ್ಥಿನಿ!

Flax Seeds Benefits For Hair
ಆರೋಗ್ಯ48 mins ago

Flax Seeds Benefits For Hair: ಚಳಿಗಾಲದಲ್ಲಿ ಕೂದಲ ಆರೋಗ್ಯಕ್ಕೆ ಅಗಸೆಬೀಜ ಸೂಪರ್‌!

Wedding Fashion
ಫ್ಯಾಷನ್53 mins ago

Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

U-19 Asia Cup IND vs PAK
ಕ್ರಿಕೆಟ್1 hour ago

ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

Veer Savarkar and Priyank Kharge
ಕರ್ನಾಟಕ1 hour ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ14 mins ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ1 hour ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ6 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ14 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ22 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌