Vistara Kannada Sambhrama : ನ. 4ರಂದು ವಿಸ್ತಾರ ಕನ್ನಡ ಸಂಭ್ರಮ; ಇದು ವಿಸ್ತಾರ ನ್ಯೂಸ್‌ ವರ್ಷ ವೈಭವ - Vistara News

ಕರ್ನಾಟಕ

Vistara Kannada Sambhrama : ನ. 4ರಂದು ವಿಸ್ತಾರ ಕನ್ನಡ ಸಂಭ್ರಮ; ಇದು ವಿಸ್ತಾರ ನ್ಯೂಸ್‌ ವರ್ಷ ವೈಭವ

Vistara Kannada Sambhrama : ವಿಸ್ತಾರ ನ್ಯೂಸ್‌ ವತಿಯಿಂದ ವಿಸ್ತಾರ ಕನ್ನಡ ಸಂಭ್ರಮ- ವಿಸ್ತಾರ ವರ್ಷ ವೈಭವ ಕಾರ್ಯಕ್ರಮ ನವೆಂಬರ್‌ 4ರಂದು ನಡೆಯಲಿದೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ದಿನವಿಡೀ ಕಾರ್ಯಕ್ರಮಗಳ ವೈಭವ ಮೇಳೈಸಲಿದೆ.

VISTARANEWS.COM


on

Vistara Kannada Sambhrama invite Article
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅತ್ಯಲ್ಪ ಅವಧಿಯಲ್ಲೇ ನಾಡಿನ ಜನಮಾನಸದಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದ ರಾಜ್ಯದ ಜನಪ್ರಿಯ ಮಾಧ್ಯಮ ಸಂಸ್ಥೆ ವಿಸ್ತಾರ ನ್ಯೂಸ್‌ (Vistara News) ನವೆಂಬರ್‌ 4ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ (Ravindra Kalakshetra) ʻವಿಸ್ತಾರ ಕನ್ನಡ ಸಂಭ್ರಮʼ (Vistara Kannada Sambhrama) ಎಂಬ ಅಪೂರ್ವ ಕಾರ್ಯಕ್ರಮವನ್ನು ಆಯೋಜಿಸಿದೆ. ಕನ್ನಡ ಟಿವಿ ವಾಹಿನಿಗಳ ಇತಿಹಾಸದಲ್ಲೇ ಅತ್ಯಪೂರ್ವ ಪ್ರಯೋಗವಾಗಿರುವ ʻವಿಸ್ತಾರ ಕನ್ನಡ ಸಂಭ್ರಮʼ ಹತ್ತಾರು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ರಂಜಿಸಲಿದೆ. ಕನ್ನಡ ನಾಡು ನುಡಿ, ಸಾಹಿತ್ಯ, ಜನಜೀವನವನ್ನು ಹಿತವಾಗಿ ಬೆಸೆಯುವ ಈ ಸುಂದರ ಕಾರ್ಯಕ್ರಮ ವಿಸ್ತಾರ ನ್ಯೂಸ್‌ಗೆ ಒಂದು ವರ್ಷದ ತುಂಬುತ್ತಿರುವ ಹೊತ್ತಿನಲ್ಲಿ ಕರುನಾಡ ಜನತೆಗೆ ʻವರ್ಷ ವೈಭವʼದ (Vistara Varsha Vaibhava) ಪ್ರೀತಿಯ ಅರ್ಪಣೆಯಾಗಿದೆ.

ಬೆಳಗ್ಗೆ 9 ಗಂಟೆಗೆ ಆರಂಭವಾಗಲಿರುವ ವಿಸ್ತಾರ ಕನ್ನಡ ಸಂಭ್ರಮದಲ್ಲಿ ರಾತ್ರಿ 12 ಗಂಟೆಯವರೆಗೂ ನಾನ್‌ಸ್ಟಾಪ್‌ ಮನರಂಜನೆಯ ಮಹಾಪೂರವಿದೆ. ಹಾಡು, ಸಂಗೀತ, ಕನ್ನಡ ಸಾಹಿತ್ಯದ ಗೋಷ್ಠಿಗಳು, ನಟ-ನಟಿಯರು, ಕಿರುತೆರೆ ಕಲಾವಿದರ ಜತೆ ನೇರ ಮುಕ್ತ ಮಾತುಕತೆ, ಯಕ್ಷಗಾನ ವೈಭವಗಳೊಂದಿಗೆ ಮೇಳೈಸಲಿದೆ.

ರವೀಂದ್ರ ಕಲಾಕ್ಷೇತ್ರದ ಪ್ರಧಾನ ವೇದಿಕೆ, ಕಲಾಕ್ಷೇತ್ರದ ಆವರಣ, ನಯನಾ ಸಭಾಂಗಣ, ಸಂಸ ಬಯಲು ರಂಗ ಮಂದಿರ ಹೀಗೆ ಎಲ್ಲ ಕಡೆಯೂ ವೈವಿಧ್ಯಮಯ ಕಾರ್ಯಕ್ರಮ, ಸಾಂಸ್ಕೃತಿಕ ಲೋಕದ ಅನಾವರಣ ನಡೆಯಲಿದೆ.

ಏನುಂಟು ಏನಿಲ್ಲ? ಈ ಸಂಭ್ರಮದ ಲೋಕದಲ್ಲಿ?

ವಿಸ್ತಾರ ಕನ್ನಡ ಸಂಭ್ರಮದಲ್ಲಿ ಸಂಗೀತೋತ್ಸವವಿದೆ, ನಾಟಕೋತ್ಸವವಿದೆ. ಆಹಾರೋತ್ಸವದ ಸವಿಯಿದೆ, ಪುಸ್ತಕೋತ್ಸವದ ಸೊಬಗಿದೆ. ಯಕ್ಷ ಗಾನ ಗಂಧರ್ವರೆಲ್ಲ ಧರೆಗಿಳಿವ ಸಡಗರವಿದೆ.

ನಾಡಿನ ಯೋಗಕ್ಷೇಮದ ರೂವಾರಿಗಳಾದ ಜನಪ್ರತಿನಿಧಿಗಳು, ನಿಮ್ಮ ನೆಚ್ಚಿನ ಚಂದನವನದ ಚಂದದ ತಾರೆಯರು, ಕಿರುತೆರೆಯ ನಿಮ್ಮ ಇಷ್ಟದ ನಟ-ನಟಿಯರು ಇಲ್ಲಿ ಸೇರಲಿದ್ದಾರೆ. ಕನ್ನಡಕ್ಕೆ ದನಿಯಾದ ಗಾಯಕರು, ಸಂಗೀತಗಾರರು, ಸ್ಟಾಂಡಪ್‌ ಕಾಮಿಡಿಯನ್‌ಗಳು, ಯಕ್ಷಿಣಿ ಜಾದೂಗಾರರು, ಎಲ್ಲರೂ ನಿಮ್ಮನ್ನು ಒಂದೇ ಕಡೆ ಎದುರ್ಗೊಳ್ಳಲಿದ್ದಾರೆ. ಇದು ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಖುಷಿಪಡಬಹುದಾದ ಒಂದು ಪರಿಶುದ್ಧ ಫ್ಯಾಮಿಲಿ ಪ್ಯಾಕೇಜ್‌ ಕಾರ್ಯಕ್ರಮವಾಗಿ ಕಳೆಗಟ್ಟಲಿದೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿದೆ.

ಮುಖ್ಯಮಂತ್ರಿಗಳಿಂದ ವಿಸ್ತಾರ ಕನ್ನಡ ಸಂಭ್ರಮಕ್ಕೆ ಚಾಲನೆ

ನವೆಂಬರ್‌ 4ರಂದು ಬೆಳಗ್ಗೆ 10 ಗಂಟೆಗೆ ವಿಸ್ತಾರ ಕನ್ನಡ ಸಂಭ್ರಮ- ವಿಸ್ತಾರ ನ್ಯೂಸ್‌ ವರ್ಷ ವೈಭವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಡಾ. ಸುಬುಧೇಂದ್ರ ತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ, ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳು, ಸಚಿವ ಶಿವರಾಜ್‌ ತಂಗಡಗಿ

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ತೇಜಸ್ವಿ ಸೂರ್ಯ, ಶಾಸಕರಾದ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ. ಶರವಣ, ಹಿರಿಯ ಸಾಹಿತಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ, ಜನಪ್ರಿಯ ನಟ ರಮೇಶ್‌ ಅರವಿಂದ್‌, ಜನಪ್ರಿಯ ನಟಿ ಬೃಂದಾ ಆಚಾರ್ಯ ಅವರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಮತ್ತು ಇತರ ಗಣ್ಯರು ಭಾಗಿ

ಸಂಜೆ 6 ಗಂಟೆಯಿಂದ 7.30ರವರೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ್‌ ಗುಂಡೂರಾವ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ್‌ ಖರ್ಗೆ, ಶಾಸಕರಾದ ಜಿ.ಟಿ. ದೇವೇಗೌಡ, ಹಿರಿಯ ಸಾಹಿತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌, ಅದಮ್ಯ ಚೇತನ ಸಂಸ್ಥಾಪಕರಾದ ತೇಜಸ್ವಿನಿ ಅನಂತ್‌ಕುಮಾರ್‌, ಖ್ಯಾತ ಸಿನಿಮಾ ನಿರ್ದೇಶಕರಾದ ಯೋಗರಾಜ್‌ ಭಟ್‌, ಜನಪ್ರಿಯ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಮಾನ್ವಿತಾ ಕಾಮತ್‌ ಭಾಗವಹಿಸುತ್ತಿದ್ದಾರೆ.

Vistara Kannada Sambhrama validictory

ಸರ್ವರನ್ನೂ ಪ್ರೀತಿಯಿಂದ ಸ್ವಾಗತಿಸುತ್ತಿದೆ ವಿಸ್ತಾರ ತಂಡ

ವಿಸ್ತಾರ ನ್ಯೂಸ್‌ ಪ್ರೈವೆಟ್‌ ಲಿಮಿಟೆಡ್‌ನ ಎಕ್ಸಿಕ್ಯೂಟಿವ್‌ ಚೇರ್ಮನ್ ಆಗಿರುವ ಡಾ. ಎಚ್‌.ಎಸ್‌. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾಗಿರುವ ಎಚ್.‌ ವಿ. ಧರ್ಮೇಶ್‌, ನಿರ್ದೇಶಕರಾಗಿರುವ ಶ್ರೀನಿವಾಸ ಹೆಬ್ಬಾರ್‌, ವಿಸ್ತಾರ ನ್ಯೂಸ್‌ನ ಸಿಇಒ ಹಾಗೂ ಪ್ರಧಾನ ಸಂಪಾದಕರಾಗಿರುವ ಹರಿಪ್ರಕಾಶ್‌ ಕೋಣೆಮನೆ, ಕಾರ್ಯನಿರ್ವಾಹಕ ನಿರ್ದೇಶಕ ಮತ್ತು – ಸ್ಪೆಷಲ್‌ ಆಪರೇಷನ್ಸ್‌ ಸಂಪಾದಕರಾಗಿರುವ ಕಿರಣ್‌ ಕುಮಾರ್‌ ಡಿ.ಕೆ. ಅವರು ಈ ಕಾರ್ಯಕ್ರಮಕ್ಕೆ ಎಲ್ಲರನ್ನೂ ಆಹ್ವಾನಿಸುತ್ತಿದ್ದಾರೆ.

15 ಗಂಟೆಗಳ ಕಾಲ ಬ್ಯಾಕ್‌ ಟು ಬ್ಯಾಕ್‌ ಕಾರ್ಯಕ್ರಮ

ಬೆಳಗ್ಗೆ 9.00 – 10.00: ಗೀತ ಬೆಳಗು
ಭಕ್ತಿ ಗೀತೆ, ಭಾವ ಗೀತೆ, ಜನಪದ, ಸೂಫಿ ಹಾಡುಗಳ ಮಾಧುರ್ಯ
ರಾಮಚಂದ್ರ ಹಡಪದ, ಆರ್‌. ಕೆ. ಸ್ಪರ್ಶ ಅವರಿಂದ ಗಾನಸುಧೆ

ಬೆಳಗ್ಗೆ 10.00ರಿಂದ 11.30: ವಿಸ್ತಾರ ಕನ್ನಡ ಸಂಭ್ರಮ ಉದ್ಘಾಟನೆ ಹಾಗೂ
ವಿಸ್ತಾರ ಪ್ರಕಾಶನದ ಪುಸ್ತಕಗಳ ಬಿಡುಗಡೆ

ಮಧ್ಯಾಹ್ನ 12.00 – 1.00: ಬಾರಿಸು ಕನ್ನಡ ಡಿಂಡಿಮವ

ಕನ್ನಡ ವಿಸ್ತರಿಸುತ್ತಿರುವ ಹೊಸ ದಿಕ್ಕುಗಳು: ವಿಚಾರಗೋಷ್ಠಿ

Vistara Kannada Sambhrama kannada Goshti

ವಿಷಯ ಮತ್ತು ಭಾಗವಹಿಸುವ ವಿಷಯ ತಜ್ಞರು

  1. ಕನ್ನಡ ಓದಿನ ಹೊಸ ಮೀಡಿಯಂ: ವಸಂತ್ ಶೆಟ್ಟಿ ಮೈಲಾಂಗ್ ಸಂಸ್ಥಾಪಕರು
  2. ಮುಕ್ತ ಡಬ್ಬಿಂಗ್‌: ಕನ್ನಡಕ್ಕೆ ಲಾಭ ಆಯ್ತಾ? ನಷ್ಟ ಆಯ್ತಾ?: ಹೃದಯಶಿವ ಚಿತ್ರ ಸಾಹಿತಿ
  3. ಮಾತೃ ಭಾಷೆಯಲ್ಲೇ ಏಕೆ ಕಲಿಯಬೇಕು?: ವೀಣಾ ರಾವ್​
    ಸಂಸ್ಥಾಪಕರು, ಭಾಷಾ ವಿದ್ಯಾ ಕನ್ನಡ ಕಲಿಕಾ ಕೇಂದ್ರ
  4. ನಿತ್ಯದ ಬರವಣಿಗೆಯಾಗಿ ಕನ್ನಡ: ಶ್ರೀಧರ್‌​ ನಾಗರಾಜ್​ ‘ಜಸ್ಟ್​ ಕನ್ನಡ’ ರೂವಾರಿ
  5. ಅಪಾರ್ಟ್‌ಮೆಂಟ್ ಗಳಲ್ಲಿ ಕನ್ನಡಾಭಿಮಾನ: ವಿಕ್ರಂ ರೈ ಕಾರ್ಯದರ್ಶಿ,
    ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಷನ್
  6. ನಿರ್ವಹಣೆ: ಶ್ರೀ ಎನ್‌. ರವಿಶಂಕರ್‌ ಸಿಇಒ, ಏಮ್ಸ್​ ಹೈ ಕನ್ಸಲ್ಟಿಂಗ್

ಮಧ್ಯಾಹ್ನ 1.30 – 2.30: ವಾಯ್ಸ್‌ ಆಫ್‌ ಯಂಗ್‌ ಕನ್ನಡಿಗ

ದನಿ ಬೇರೆ, ಭಾಷೆ ಒಂದೇ!: ವಿಶಿಷ್ಟ ಸಂವಾದ

Vistara Kannada Sambhrama kannada Goshti2

ಸಂವಾದದಲ್ಲಿ ಪಾಲ್ಗೊಳ್ಳುವವರು
ಚಂದನ್​ ಶೆಟ್ಟಿ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಕನ್ನಡ ರ‍್ಯಾಪರ್​
ನಿರಂಜನ್​ ದೇಶಪಾಂಡೆ ಹೆಸರಾಂತ ನಿರೂಪಕರು
ನೇತ್ರಾ ಖ್ಯಾತ ಆರ್​ ಜೆ
ಸಿರಿ ಜನಪ್ರಿಯ ನಟಿ-ನಿರೂಪಕಿ

ಮಧ್ಯಾಹ್ನ 3.00 – 4.00: ಭಾಗ್ಯಲಕ್ಷ್ಮೀ & ಟೀಮ್‌ ಬರ್ತಾರಮ್ಮ!

Bhagya lakshmi team

ಕಲರ್ಸ್​ ಕನ್ನಡದ ಜನಪ್ರಿಯ ಧಾರಾವಾಹಿಗಳಾದ ಭಾಗ್ಯಲಕ್ಷ್ಮೀ ಹಾಗೂ ಲಕ್ಷ್ಮೀ ಬಾರಮ್ಮ ಟೀಮ್ ಜತೆ ಆತ್ಮೀಯ ಸಂವಾದ

ಸಂಜೆ 4.30 – 5.30: ಮಕ್ಕಳ ನಾಟಕ

ಮೈಸೂರಿನ ಖ್ಯಾತ ‘ಅರಿವು’ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ನಾಟಕ: ವಿಗಡ ವಿಕ್ರಮರಾಯ
ರಚನೆ: ಸಂಸ, ನಿರ್ದೇಶನ: ಯತೀಶ್ ಎನ್. ಕೊಳ್ಳೇಗಾಲ

Vistara Kannada Sambhrama Drama

ಸಂಜೆ 6.00- 7.30: ಸಮಾರೋಪ ಸಮಾರಂಭ

ರಾತ್ರಿ 8.00- 9.30: ಲೈವ್‌ ಮ್ಯೂಸಿಕ್‌ ಧಮಾಕಾ

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಶ್ರೀ ಗುರುಕಿರಣ್‌ ಮತ್ತು ತಂಡದಿಂದ ಸೂಪರ್‌ ಹಿಟ್‌ ಹಾಡುಗಳು (GURUKIRAN Live in Concert)

Gurukiran Vistara Kannada sambhrama

ರಾತ್ರಿ 10ರಿಂದ 12: ಯಕ್ಷಗಾನ ಪ್ರದರ್ಶನ

ಪ್ರಸಂಗ: ಕವಿರತ್ನ ಕಾಳಿದಾಸ
ಹೇರಂಜಾಲು ಯಕ್ಷಬಳಗ ಹಾಗೂ ಟೀಮ್ ಉತ್ಸಾಹಿ, ಬೆಂಗಳೂರು ತಂಡದಿಂದ
ಭಾಗವತರು: ಹೇರಂಜಾಲು ಗೋಪಾಲ ಗಾಣಿಗ, ಪಲ್ಲವ ಗಾಣಿಗ, ಜತೆಗೆ, ಕರಾವಳಿಯ ಪ್ರಖ್ಯಾತ ಯಕ್ಷಗಾನ ಕಲಾವಿದರು.

Yakshagana Vistara Kannada Sambhrama

ಸಂಸ ಬಯಲು ರಂಗಮಂದಿರದಲ್ಲಿ ಹಲವು ಕಾರ್ಯಕ್ರಮ

ಪ್ರಧಾನ ವೇದಿಕೆಯ ಜತೆ ಜತೆಯಲ್ಲೇ ಸಂಸ ಬಯಲು ರಂಗ ಮಂದಿರದಲ್ಲೂ ಕಾರ್ಯಕ್ರಮಗಳು ನಡೆಯಲಿವೆ.

1. ಸಂಜೆ 4.00ರಿಂದ ಚಿಣ್ಣರಿಗಾಗಿ ಜಾದೂ: ಆಕಾಶ್‌ ಗುಪ್ತಾ ಅವರಿಂದ

2. ಸಂಜೆ 5ರಿಂದ 6: ಸ್ಟ್ಯಾಂಡಪ್ ಕಾಮಿಡಿ: ಖ್ಯಾತ ಹಾಸ್ಯ ಕಲಾವಿದ ಕಾರ್ತಿಕ್‌ ಪತ್ತಾರ್ ಹಾಸ್ಯ ಕಾರಂಜಿ

3. ಸಂಜೆ 6ರಿಂದ 6.30: ಸೀರೆ ಸೊಬಗು: ಸೀರೆಯಲ್ಲಿ ನೋಡಿ, ಲಲನೆಯರ ಮೋಡಿ!
ಮಿಸೆಸ್ ಇಂಡಿಯಾ ಕರ್ನಾಟಕ ಡೈರೆಕ್ಟರ್‌ ಪ್ರತಿಭಾ ಸಂಶಿಮಠ ತಂಡದಿಂದ ನಾಡಿನ ಪಾರಂಪರಿಕ ಉಡುಗೆ ಬಿಂಬಿಸುವ ರಾಂಪ್ ವಾಕ್

ಹೊರಾಂಗಣದಲ್ಲಿ ಪುಸ್ತಕ ಮೇಳ: 20%ವರೆಗೆ ರಿಯಾಯಿತಿ

ರವೀಂದ್ರ ಕಲಾಕ್ಷೇತ್ರದ ಹೊರಾವರಣದಲ್ಲಿ ಅಪೂರ್ವ ಪುಸ್ತಕ ಮೇಳ ನಡೆಯಲಿದ್ದು, 20ಕ್ಕೂ ಹೆಚ್ಚು ಜನಪ್ರಿಯ ಬುಕ್‌ ಸ್ಟಾಲ್‌ಗಳು ಭಾಗಿಯಾಗಲಿವೆ. ಸಾವಿರಾರು ಪುಸ್ತಕಗಳು ಒಂದೇ ಕಡೆ ಲಭ್ಯವಾಗಲಿದೆ. ಪುಸ್ತಕಗಳಿಗೆ ಶೇ.20ರವರೆಗೆ ವಿಶೇಷ ರಿಯಾಯಿತಿ ಇರಲಿದೆ.

ಭಾಗವಹಿಸಲಿರುವ ಪ್ರಕಾಶನ ಸಂಸ್ಥೆಗಳು

ಸಪ್ನ ಬುಕ್‌ ಹೌಸ್‌, ನವ ಕರ್ನಾಟಕ, ಅಂಕಿತ, ವಿಸ್ತಾರ ಪ್ರಕಾಶನ, ಸ್ನೇಹ ಬುಕ್‌ ಹೌಸ್‌, ಛಂದ ಪುಸ್ತಕ, ಸಾವಣ್ಣ ಪ್ರಕಾಶನ, ವೀರಲೋಕ, ಸಮನ್ವಿತ, ಸಾಹಿತ್ಯ ಪ್ರಕಾಶನ, ಸಾಹಿತ್ಯ ಲೋಕ, ವಿಕ್ರಂ ಪ್ರಕಾಶನ, ಹರಿವು ಬುಕ್ಸ್‌, ಅಯೋಧ್ಯ ಪ್ರಕಾಶನ, ಅಭಿನವ, ಅಮೂಲ್ಯ ಪುಸ್ತಕ, ಮೈತ್ರಿ ಸಂಸ್ಕೃತ- ಸಂಸ್ಕೃತಿ ಪ್ರತಿಷ್ಠಾನ, ಕದಂಬ ಪ್ರಕಾಶನ

ಬಿಡುಗಡೆಯಾಗಲಿರುವ ವಿಸ್ತಾರ ಪ್ರಕಾಶನದ ನೂತನ ಪುಸ್ತಕಗಳು

ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಸ್ತಾರ ಪ್ರಕಾಶನದ ನಾಲ್ಕು ಪುಸ್ತಕಗಳು ಬಿಡುಗಡೆಯಾಗಲಿವೆ.
1. ಕುಣಿಯೇ ಜೀವ : ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನದ ಸಹಯೋಗದಲ್ಲಿ ನಡೆಸಿದ್ದ ವಿಸ್ತಾರ ನ್ಯೂಸ್
ಯುಗಾದಿ ಕಥಾಸ್ಪರ್ಧೆ 2023ರ ಬಹುಮಾನಿತ ಕಥೆಗಳ ಸಂಕಲನ
2. ನಮ್ಮದೇ ಕಥೆಗಳು: ಲೇಖಕರು: ಕೃಷ್ಣ ಭಟ್ ಅಳದಂಗಡಿ
3.ರಾಜಮಾರ್ಗ: ಪ್ರೇರಣಾದಾಯಕ ಕಥೆಗಳು ಲೇಖಕರು: ರಾಜೇಂದ್ರ ಭಟ್ ಕೆ
4. ಅಮ್ಮ ಹೇಳುವ ಚಂದದ ಕಥೆಗಳು: ಲೇಖಕರು: ಅಲಕಾ ಕಟ್ಟೆಮನೆ

ಮಕ್ಕಳಿಗೆ ನಾನಾ ಮನರಂಜನೆಗಳ ಮಹಾಲೋಕ

ಯುವಕ ಸಂಘ, ಸಾಂಸ್ಕೃತಿಕ ಸಂಘಟನೆಗಳಿಂದ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳು ನಡೆಯಲಿವೆ. ವಿಶೇಷ ಸ್ಪರ್ಧೆ ಮತ್ತು ಬಹುಮಾನಗಳಿವೆ. ಪುಟ್ಟ ಮಕ್ಕಳಿಗೆ ಆಟವಾಡಲು ಆಕರ್ಷಕ ಸಾಧನಗಳು ಇರಲಿವೆ.

ಹೊಟ್ಟೆ ತಣ್ಣಗಾಗಿಸುವ ಸವಿ ಸಂಭ್ರಮ

ವಿಸ್ತಾರ ಸಂಭ್ರಮದಲ್ಲಿ ಮೆದುಳಿಗೆ ಮಾತ್ರವಲ್ಲ, ಹೊಟ್ಟೆಯನ್ನೂ ತಣ್ಣಗೆ ಮಾಡುವ ವಿಶೇಷ ಆಹಾರ ಖಾದ್ಯಗಳ ಲೋಕವಿದೆ.
 ಬಾಯಿಯಲ್ಲಿ ನೀರೂರಿಸುವ ರಾಜ್ಯದ ನಾನಾ ಭಾಗಗಳ ಆಹಾರ ಮಳಿಗೆಗಳು
 ಮೈಸೂರು, ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಪ್ರದೇಶದ ವಿಶೇಷ ತಿಂಡಿಗಳು
 ಸಾವಯವ ಆಹಾರ ಪದಾರ್ಥಗಳು, ದೇಸಿ ಉತ್ಪನ್ನಗಳ ವಿಶೇಷ ಮಳಿಗೆಗಳು ಇರಲಿವೆ.

ಜಾನಪದ ಕಲಾ ತಂಡದ ಪ್ರದರ್ಶನ: ಡಿಜಿಟಲ್ 3ಡಿ ಶೋ ಇರಲಿದೆ

ಸ್ಥಳದಲ್ಲೇ ನಿಮ್ಮ ಚಿತ್ರ ಬಿಡಿಸುತ್ತಾರೆ ಐವರು ಕಲಾವಿದರು

ಖ್ಯಾತ ಕಲಾವಿದರಾದ ಬಿ.ಜಿ. ಗುಜ್ಜಾರಪ್ಪ, ಜಿ.ಎಸ್‌. ರಂಗನಾಥ್‌, ರಘುಪತಿ ಶೃಂಗೇರಿ, ವಿ.ಆರ್‌.ಸಿ. ಶೇಖರ್‌, ರವಿ ಪೂಜಾರಿ ಅವರು ಕೆಲವೇ ನಿಮಿಷದಲ್ಲಿ ನಿಮ್ಮ ಪೆನ್ಸಿಲ್‌ ಸ್ಕೆಚ್‌ ರೆಡಿ ಮಾಡಲಿದ್ದಾರೆ.

ಇವರು ನಮ್ಮ ಪಾರ್ಟ್ನರ್‌ಗಳು

91.1 ಎಫ್‌ಎಂ ರೇಡಿಯೊ ಸಿಟಿ ನಮಗೆ ರೇಡಿಯೊ ಪಾರ್ಟ್ನರ್‌ ಆಗಿದ್ದರೆ, ಡೈಲಿಹಂಟ್‌ ಡಿಟಿಟಲ್‌ ಪಾರ್ಟ್ನರ್‌ ಆಗಿರಲಿದೆ.

ಈ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಸಹಕರಿಸುವ ಸಂಘ ಸಂಸ್ಥೆಗಳು ಇವು

■ ಬೆಂಗಳೂರು ಅಪಾರ್ಟ್​ಮೆಂಟ್‌ ಒಕ್ಕೂಟ
■ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ)
■ ರೋಟರಿ ಸಂಸ್ಥೆ, ಬೆಂಗಳೂರು
■ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ
■ ಮಾನ್ಯತೆ ಪಡೆದ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ
■ ಶಿ ಫಾರ್‌ ಸೊಸೈಟಿ
■ ರಾಜ್ಯ ಆಗಮಿಕರ ಹಾಗೂ ಅರ್ಚಕರ ಸಂಘ
■ ರಾಜ್ಯ ಕಬ್ಬು ಬೆಳೆಗಾರರ ಸಂಘ
■ ಕೆಎಸ್‌ಆರ್‌ಟಿಸಿ ಕನ್ನಡ ಕ್ರಿಯಾ ಸಮಿತಿ
■ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ
■ ಕರ್ನಾಟಕ ಹೋಟೆಲ್ ಮಾಲೀಕರ ಸಂಘ
■ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ
■ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ನಗರ ಜಿಲ್ಲಾ ಘಟಕ
■ ಕರ್ನಾಟಕ ಕಾರ್ಮಿಕ ಲೋಕ
■ ಕನ್ನಡ ಗೆಳೆಯರ ಬಳಗ
■ ಕೇಂದ್ರೀಯ ಸದನ ಕನ್ನಡ ಸಂಘ
■ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)
■ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ)
■ ಕರ್ನಾಟಕ ಓಲಾ ಉಬರ್ ಚಾಲಕರ ಸಂಘ
■ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ
■ ಕೇಬಲ್ ಆಪರೇಟರ್ ಸಂಘ
■ ಬಿಬಿಎಂಪಿ ನೌಕರರ ಸಂಘ
■ ವಿಷ್ಣು ಸೇನಾ ಸಮಿತಿ
■ ವೀರಲೋಕ ಸಂಸ್ಥೆ
■ ಆಸರೆ ಫೌಂಡೇಷನ್
ಇದನ್ನೂ ಓದಿ: Krishna Janmashtami : ವಿಸ್ತಾರ ನ್ಯೂಸ್‌ನಲ್ಲಿ ನಿಮ್ಮ ಮನೆಯ ಶ್ರೀಕೃಷ್ಣನ ದರ್ಶನ; ಇಲ್ಲಿದೆ Photo Gallery!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Jatra Rathotsava: ಭಾನುವಾರ ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರಿಬ್ಬರು ಲಚ್ಯಾಣ ಗ್ರಾಮದವರು ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಮಹಾರಾಷ್ಟ್ರದ ತಡವಾಳ ಗ್ರಾಮದ ನಿವಾಸಿಯಾಗಿದ್ದಾನೆ.

VISTARANEWS.COM


on

Jatra Rathotsava Two killed and one serious after being hit by wheel of a chariot at Indi Kamarimath
Koo

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ (Kamarimatha Fair) ನಡೆದ ರಥೋತ್ಸವ (Jatra Rathotsava) ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಭಾನುವಾರ ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತರಿಬ್ಬರು ಲಚ್ಯಾಣ ಗ್ರಾಮದವರು ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಮಹಾರಾಷ್ಟ್ರದ ತಡವಾಳ ಗ್ರಾಮದ ನಿವಾಸಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ, ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ, ಸಾಹಿಲ್ ಆ್ಯಪ್‌ನ ಸಹ ಮಾಲೀಕ ಎಂಬುದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಸಾಹಿಲ್‌ ಈ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು.

ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

ಇದನ್ನೂ ಓದಿ: The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

2023ರಲ್ಲಿ, ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗವು ಡಿಸೆಂಬರ್ 15ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೆ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏನಿದು ಮಹದೇವ್​ ಬೆಟ್ಟಿಂಗ್​ ಪ್ರಕರಣ?

ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್‌ ಬಘೇಲ್‌ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವು ಚರ್ಚೆಗೆ ಗ್ರಾಸವಾಗಿತ್ತು.

ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು.

Continue Reading

ಕರ್ನಾಟಕ

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆ ದಾಖಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Continue Reading

ಕರ್ನಾಟಕ

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

PM Narendra Modi: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ಕೆಫೆ ಬಾಂಬ್‌ ಸ್ಫೋಟದ ಬಳಿಕ ಕಾಂಗ್ರೆಸ್‌ ನಾಯಕರು ಮೃದುವಾಗಿ ಮಾತನಾಡಲು ಶುರು ಮಾಡಿದರು. ಇದು ಸಿಲಿಂಡರ್‌ ಸ್ಫೋಟ ಎಂದರು, ಔದ್ಯಮಿಕ ವೈಷಮ್ಯದಿಂದ ಹೀಗೆ ಮಾಡಿದರು ಎಂದರು. ಆದರೆ, ದೋಷಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಯಿತು. ಆಗ ಕಾಂಗ್ರೆಸ್‌ ನಾಯಕರು ಓಲೈಸುವುದನ್ನು ನಿಲ್ಲಿಸಿದರು” ಎಂದು ಗುಡುಗಿದರು.

VISTARANEWS.COM


on

PM Narendra Modi
Koo

ಹೊಸಪೇಟೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಭಾನುವಾರ ಕರ್ನಾಟಕದಲ್ಲಿ (Karnataka) ಸಾಲು ಸಾಲು ರ‍್ಯಾಲಿಗಳನ್ನು ಕೈಗೊಳ್ಳುತ್ತಿರುವ ನರೇಂದ್ರ ಮೋದಿ, ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಸಮಾವೇಶದಲ್ಲೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಅದರಲ್ಲೂ, “ಒಬ್ಬ ಪುಕ್ಕಲ ನಾಯಕ ದೇಶವನ್ನು ಆಳಬಲ್ಲನೆ” ಎಂದು ಪ್ರಶ್ನಿಸುವ ಮೂಲಕ ರಾಹುಲ್‌ ಗಾಂಧಿ (Rahul Gandhi) ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟರು.

“ದೇಶದಲ್ಲಿ ರಾಮಮಂದಿರ ನಿರ್ಮಾಣವಾದರೆ ದಂಗೆ ಸೃಷ್ಟಿಯಾಗುತ್ತದೆ. ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಕಾಂಗ್ರೆಸ್‌ ನಾಯಕರು ಭಯ ಹುಟ್ಟಿಸುತ್ತಿದ್ದರು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಳಿಸಿದರೂ ಇದೇ ರೀತಿ ಆಗುತ್ತದೆ ಎಂದು ಸುಳ್ಳು ಹಬ್ಬಿಸಿದರು. ಆದರೆ, ಈಗ ರಾಮಮಂದಿರ ನಿರ್ಮಿಸಲಾಗಿದೆ. 370ನೇ ವಿಧಿಯನ್ನೂ ರದ್ದುಗೊಳಿಸಲಾಗಿದೆ. ಎಲ್ಲಾದರೂ ಗಲಾಟೆ ನಡೆಯಿತೇ? ಬೆಂಕಿ ಹೊತ್ತಿಕೊಂಡಿತೇ? ಅಷ್ಟಕ್ಕೂ, ಪುಕ್ಕಲ ನಾಯಕನೊಬ್ಬ ದೇಶದ ಪ್ರಧಾನಿಯಾಗಿ ಆಡಳಿತ ನಡೆಸಬಲ್ಲನೇ? ದೇಶ ಮುನ್ನಡೆಸಲು ಛಾತಿ ಇರುವ ನಾಯಕ ಬೇಕೇ ಹೊರತು, ಪುಕ್ಕಲ ನಾಯಕ” ಎಂದು ರಾಹುಲ್‌ ಗಾಂಧಿ ಪ್ರಸ್ತಾಪಿಸದೆ ಕುಟುಕಿದರು.

“ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿ ಗೆಲುವು ಸಾಧಿಸಿದರೆ ರೈತರು, ಬಡವರ ಪರವಾಗಿ ಕೆಲಸ ಮಾಡಲಾಗುತ್ತದೆ. ಹಾಗಾಗಿ, ಬಳ್ಳಾರಿಯಲ್ಲಿ ಬಿ.ಶ್ರೀರಾಮುಲು, ಕೊಪ್ಪಳದಲ್ಲಿ ಬಸವರಾಜ್‌ ಅವರನ್ನು ಗೆಲ್ಲಿಸಿ. ನೀವು ನೀಡುವ ಪ್ರತಿಯೊಂದು ಮತವೂ ಮೋದಿಯ ಕೈ ಬಲಪಡಿಸುತ್ತದೆ. ಇದು ದೇಶದಲ್ಲಿ ಉತ್ತಮ ಆಡಳಿತ ನೀಡಲು ಸಹಕಾರಿಯಾಗುತ್ತದೆ. ನೀವು ನೀಡುವ ಮತವು ವಿಕಸಿತ ಭಾರತ, ವಿಕಸಿತ ಕರ್ನಾಟಕದ ಗ್ಯಾರಂಟಿಯಾಗಿದೆ” ಎಂದು ತಿಳಿಸಿದರು.

ಕೆಫೆ ಬಾಂಬ್‌ ಸ್ಫೋಟದ ಕುರಿತೂ ಉಲ್ಲೇಖ

ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ಕೆಫೆ ಬಾಂಬ್‌ ಸ್ಫೋಟದ ಬಳಿಕ ಕಾಂಗ್ರೆಸ್‌ ನಾಯಕರು ಮೃದುವಾಗಿ ಮಾತನಾಡಲು ಶುರು ಮಾಡಿದರು. ಇದು ಸಿಲಿಂಡರ್‌ ಸ್ಫೋಟ ಎಂದರು, ಔದ್ಯಮಿಕ ವೈಷಮ್ಯದಿಂದ ಹೀಗೆ ಮಾಡಿದರು ಎಂದರು. ಆದರೆ, ದೋಷಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಯಿತು. ಆಗ ಕಾಂಗ್ರೆಸ್‌ ನಾಯಕರು ಓಲೈಸುವುದನ್ನು ನಿಲ್ಲಿಸಿದರು” ಎಂದು ಗುಡುಗಿದರು.

“ಬಿಜೆಪಿ ನೇತೃತ್ವದ ಸರ್ಕಾರವು ದೇಶದಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಮಂಗಳೂರು, ಅಯೋಧ್ಯೆ, ಮುಂಬೈ ಸೇರಿ ಯಾವುದೇ ನಗರಗಳಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಬಾಂಬ್‌ ದಾಳಿಕೋರರನ್ನು ನಾವು ಮಟ್ಟಹಾಕಿದ್ದೇವೆ. ಒಂದು ಕಾಲದಲ್ಲಿ ಯೋಧರನ್ನು ಅಪಹರಿಸಿ, ಅವರ ರುಂಡ ಕತ್ತರಿಸಿ ಕಳುಹಿಸಲಾಗುತ್ತಿತ್ತು. ಆದರೆ, ಈಗ ಕೇಂದ್ರದಲ್ಲಿ ಮೋದಿ ಸರ್ಕಾರವಿದೆ. ಮನೆಯೊಳಗೆ ನುಗ್ಗಿ ಹೊಡೆಯುವ ಸಾಮರ್ಥ್ಯ ನಮ್ಮದಾಗಿದೆ” ಎಂದರು.

ಇದನ್ನೂ ಓದಿ: PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

Continue Reading

Lok Sabha Election 2024

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕದಲ್ಲಿ ಭರ್ಜರಿಯಾಗಿ ಪ್ರಚಾರ ನಡೆಸಿದ್ದಾರೆ. ನನ್ನ ಜೀವ ಈ ದೇಶದ ಜನರಿಗಾಗಿ ಮುಡಿಪು ಎಂದು ನರೇಂದ್ರ ಮೋದಿ ಹೇಳಿದ್ದಾರೆ. ನಿಮ್ಮ ಕನಸೇ ಮೋದಿ ಸಂಕಲ್ಪ ಎಂದು ಇಲ್ಲಿಯ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ಬೆಳಗಾವಿ, ಶಿರಸಿ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಭಾನುವಾರ ಚುನಾವಣಾ ಪ್ರಚಾರ ನಡೆಸಿದ ನರೇಂದ್ರ ಮೋದಿ (Narendra Modi) ಅವರು ಹಿಂದೆಂದಿಗಿಂತ ಹೆಚ್ಚು ಭಾವುಕರಾಗಿ, ಆಕ್ರಮಣಕಾರಿಯಾಗಿ ಮಾತನಾಡಿದರು. ನಿಮ್ಮ ಸೇವೆಗಾಗಿಯೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ. ಈ ನನ್ನ ಜೀವ ದೇಶಕ್ಕೆ ಮೀಸಲು ಎಂದರು.
ನನ್ನ ಜೀವನದ ಕ್ಷಣಕ್ಷಣವೂ ಈ ದೇಶದ ಒಳಿತಿಗಾಗಿ, ಈ ದೇಶದ ಜನರ ಒಳಿತಿಗಾಗಿ ಮೀಸಲು. 24×7 ನಾನು ಈ ದೇಶಕ್ಕಾಗಿ ದುಡಿಯುತ್ತಿದ್ದೇನೆ. ಇದು ನನ್ನ ಸೌಭಾಗ್ಯ ಎಂದು ಭಾವಿಸಿದ್ದೇನೆ ಎಂದು ಮೋದಿ ಹೇಳಿದಾಗ ವೇದಿಕೆ ಮುಂಭಾಗದ ಸಾವಿರಾರು ಮಂದಿ ಮೋದಿ ಮೋದಿ ಎಂಬ ಜಯಘೋಷ ಮೊಳಗಿಸಿದರು.

ನಿಮ್ಮ ಕನಸೇ ಮೋದಿ ಸಂಕಲ್ಪ ಎಂದು ಇಲ್ಲಿಯ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಕೆಲಸ ಮಾಡುತ್ತಾ 2047ರ ವಿಕಸಿತ ಭಾರತಕ್ಕಾಗಿ ನನ್ನ ಸೇವೆ ಮುಡಿಪಾಗಿಡುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಭಯೋತ್ಪಾದಕರಿಗೆ ಕಾಂಗ್ರೆಸ್‌ ಕುಮ್ಮಕ್ಕು

ಕಾಂಗ್ರೆಸ್‌ ಬಾಂಬರ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟವನ್ನು (Rameswaram cafe blast) ಮೊದಲು ಸಿಲಿಂಡರ್ ಸ್ಫೋಟವೆಂದು ಕಾಂಗ್ರೆಸ್ ಸರ್ಕಾರದವರು ಹೇಳಿದ್ದರು. ಆದರೆ, ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಕೇವಲ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ. ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಈ ಹಿಂದೆ ಮಂಗಳೂರಲ್ಲಿ ಸ್ಫೋಟ, ಬೆಂಗಳೂರಲ್ಲಿ ಸ್ಫೋಟ, ದೆಹಲಿಯಲ್ಲಿ ಸ್ಫೋಟ, ಸೂರತ್‌ನಲ್ಲಿ ಸ್ಫೋಟ ಹೀಗೆ ದೇಶದ ಎಲ್ಲ ಕಡೆ ಸ್ಫೋಟ.. ಸ್ಫೋಟವೆಂದು ನ್ಯೂಸ್ ಬರುತ್ತಿತ್ತು. ಆದರೆ, ಈಗ ಅಂದ್ರೆ 2014ರ ನಂತರ ಬಾಂಬ್‌ ಸ್ಫೋಟದ ಪ್ರಕರಣಗಳು ಆಗುತ್ತಾ ಇದೆಯಾ? ಕಾಂಗ್ರೆಸ್‌ ಪಕ್ಷದಿಂದ ಆ್ಯಂಟಿ ಸೋಷಿಯಲ್ ಹಾಗೂ ಆ್ಯಂಟಿ ನ್ಯಾಷನಲ್ ಕಾರ್ಯ ನಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಜನರ ಆಸ್ತಿ ಮೇಲೆ ಕಾಂಗ್ರೆಸ್‌ಗೆ ಕಣ್ಣು

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದ ಜನರ ಆಸ್ತಿಪಾಸ್ತಿಯ ಪರಿಶೀಲನೆ ನಡೆಸುತ್ತಾರಂತೆ. ನಿಮ್ಮ ಆಸ್ತಿ, ನಿಮ್ಮ ಜಮೀನು, ನಿಮ್ಮ ಚಿನ್ನವನ್ನು ಸರ್ವೆ ಮಾಡ್ತಾರಂತೆ. ಮಹಿಳೆಯರ ಮಂಗಳ ಸೂತ್ರವನ್ನು ಸರ್ವೆ ಮಾಡುತ್ತಾರಂತೆ. ಕಾಂಗ್ರೆಸ್ ಪಕ್ಷದವರು ಹಾಗೆ ಸರ್ವೆ ಮಾಡ್ತೀನಿ ಅಂತಾ ಹೋದರೆ ಸುಮ್ಮನೆ ಬಿಡುತ್ತೇನಾ? ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ವೆ, ಎಕ್ಸ್‌ರೇ ಕಾರ್ಯವನ್ನು ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ ಶ್ರೀರಾಮನ ವಿರೋಧಿ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

Continue Reading
Advertisement
Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ11 mins ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Karnataka Weather
ಕರ್ನಾಟಕ16 mins ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ26 mins ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ30 mins ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 202450 mins ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ1 hour ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ1 hour ago

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್2 hours ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ2 hours ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20243 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20248 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20248 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ11 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌