Site icon Vistara News

Vistara News Launch | ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ವಿಸ್ತಾರ ಕನ್ನಡ ಸಂಭ್ರಮಾಚರಣೆ

Vistara News Launch

ಬೀದರ್: ಜಿಲ್ಲೆಯ ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ವಿಸ್ತಾರ ಮಿಡಿಯಾ ಪ್ರೈವೇಟ್ ಲಿಮಿಟೆಡ್‌ ಹಾಗೂ ಹಿರೇಮಠ ಸಂಸ್ಥಾನ ಸಹಯೋಗದಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮವು (Vistara News Launch) ಅದ್ಧೂರಿಯಾಗಿ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿ, ವಿಸ್ತಾರ ನ್ಯೂಸ್‌ಗೆ ಶುಭವಾಗಲಿ, ಮುಂದಿನ ದಿನಗಳಲ್ಲಿ ಸಾಕಷ್ಟು ಯಶಸ್ಸು ಗಳಿಸಲಿ ಎಂದು ಹಾರೈಸಿದರು.

ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ನಿರ್ದೇಶಕ ಶಶಿಧರ ಕೋಸಂಬೆ, ರವಿ ಬೋರ್‌ವೆಲ್ಸ್ ಮಾಲೀಕ ರವೀಂದ್ರ ಚಿಡಗುಪ್ಪೆ, ಕೋನಮೇಳಕುಂದಾ ಪಿಕೆಪಿಎಸ್ ಅಧ್ಯಕ್ಷ ರಾಜಕುಮಾರ ಬಿರಾದಾರ್, ಸತೀಶ ಧರ್ಮಣ್ಣ, ಸುರೇಶ್ ವಾಡೆ, ಬಾಬು ಬೆಲ್ದಾಳ ಇದ್ದರು. ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆ ಹಾಡಿದರು. ಸವಿತಾ ಭೂರೆ ಕಾರ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ | Vistara News Launch | ಮಾಧ್ಯಮಗಳು ಪ್ರಜೆಗಳ ಮುಖವಾಣಿಯಾಗಲಿ, ವಿಸ್ತಾರ ನ್ಯೂಸ್‌ ವಿಸ್ತಾರವಾಗಲಿ: ಜಿ.ಎಂ. ಸಿದ್ದೇಶ್ವರ್

Exit mobile version