Site icon Vistara News

Vistara News Launch | ಕನ್ನಡ ಮಾಧ್ಯಮ ಲೋಕದಲ್ಲಿ ವಿಸ್ತಾರ ನ್ಯೂಸ್‌ ಎತ್ತರಕ್ಕೆ ಬೆಳೆಯಲಿ: ಶಾಸಕಿ ಪೂರ್ಣಿಮಾ ಶ್ರೀನಿವಾಸ್‌

ಚಿತ್ರದುರ್ಗ: ಕನ್ನಡ ಮಾಧ್ಯಮ ಲೋಕದಲ್ಲಿ ವಿಸ್ತಾರ ಸುದ್ದಿ ವಾಹಿನಿ (Vistara News Launch) ಎತ್ತರಕ್ಕೆ ಬೆಳೆಯಲಿ. ಯಾವುದೇ ಟಿಆರ್‌ಪಿ ಮುಲಾಜಿಗೆ ಒಳಗಾಗದೆ ಉತ್ತಮ, ನೈಜ ಹಾಗೂ ಜನಪರ ಸುದ್ದಿಗಳನ್ನು ಬಿತ್ತರಿಸಲಿ ಎಂದು ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಎ. ಕೃಷ್ಣಪ್ಪ ರೋಟರಿ ಭವನದಲ್ಲಿ ಹಮ್ಮಿಕೊಂಡಿದ್ದ ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ರಾಜ್ಯಾದ್ಯಂತ ಸಾಕಷ್ಟು ಸುದ್ದಿ ಮಾಧ್ಯಮಗಳಿದ್ದು, ಇದರ ಮಧ್ಯೆ ನೂತನವಾಗಿ ರಾಜ್ಯಾದ್ಯಂತ ಆರಂಭಗೊಂಡಿರುವ ವಿಸ್ತಾರ ಸುದ್ದಿ ವಾಹಿನಿ ದೊಡ್ಡ ಮಟ್ಟದಲ್ಲಿ ವಿಸ್ತಾರವಾಗಲಿ. ಈ ವಾಹಿನಿಯನ್ನು ಆರಂಭ ಮಾಡಿರುವ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಹಾಗೂ ಅವರ ತಂಡಕ್ಕೆ ಶುಭವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಎಸ್. ಶಿವರಂಜನಿ ಯಾದವ್, ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ, ನೀರಾವರಿ ಹೋರಾಟಗಾರರ ಆರನಕಟ್ಟೆ ಶಿವಕುಮಾರ್, ಕೃಷಿಕ ಸಮಾಜದ ಅಧ್ಯಕ್ಷ ಹೆ.ಆರ್. ತಿಮ್ಮಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | Vistara News Launch | ಗೌರಿಬಿದನೂರಿನಲ್ಲಿ ವಿಸ್ತಾರ ಕನ್ನಡ ಸಂಭ್ರಮ; ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಶುಭ ಹಾರೈಕೆ

Exit mobile version