Site icon Vistara News

Vistara News Launch | ಅತಿರಂಜಿತ, ನಿರುಪಯುಕ್ತ ಸುದ್ದಿಗಳಿಂದ ಮಾಧ್ಯಮಗಳ ವಿಶ್ವಾಸಾರ್ಹತೆಗೆ ಕುತ್ತು: ಹರ್ಷವರ್ಧನ್

Vistara News Launch

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕು ಪತ್ರಕರ್ತರ ಸಂಘದ ಸಭಾಂಗಣದಲ್ಲಿ ವಿಸ್ತಾರ ಕನ್ನಡ ಸಂಭ್ರಮ ಮಂಗಳವಾರ ಅದ್ಧೂರಿಯಾಗಿ ನೆರವೇರಿತು. ವಿಸ್ತಾರ ನ್ಯೂಸ್ ಚಾನೆಲ್ (Vistara News Launch) ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಹರ್ಷವರ್ಧನ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ಹರ್ಷವರ್ಧನ್, ಅತಿರಂಜಿತ ಹಾಗೂ ನಿರುಪಯುಕ್ತ ಸುದ್ದಿಗಳ ಪ್ರಚಾರ ಹೆಚ್ಚಾಗಿದೆ. ಇದರಿಂದ ಮಾಧ್ಯಮ ಕ್ಷೇತ್ರ ಇತ್ತೀಚಿನ ವರ್ಷಗಳಲ್ಲಿ ತನ್ನ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ. ಇದರ ನಡುವೆ ವಿಸ್ತಾರ ನ್ಯೂಸ್ ಜನರ ಸಮಸ್ಯೆಗಳನ್ನು ವರದಿ ಮಾಡುವ ಮೂಲಕ ಸಾಮಾಜಿಕ ಬದಲಾವಣೆಗೆ ಕಾರಣವಾಗಬೇಕು. ನಿಖರ ಹಾಗೂ ಜನಪರ ಎಂಬ ಘೋಷವಾಕ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಸದಾನಂದ, ನಗರಸಭೆ ಅಧ್ಯಕ್ಷ ಎಚ್.ಎಸ್. ಮಹದೇವಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಮಹೇಶ್ ಸೇರಿದಂತೆ ಪ್ರಮುಖರು ಹಾಜರಿದ್ದರು.

ಇದನ್ನೂ ಓದಿ | Vistara News Launch | ವಿಸ್ತಾರ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿ: ವಿರೂಪಾಕ್ಷಪ್ಪ ಬಳ್ಳಾರಿ

Exit mobile version