ವಿಸ್ತಾರ ಯುಗಾದಿ ಕಥಾಸ್ಪರ್ಧೆ: ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ: ನಾಗತಿಹಳ್ಳಿ‌ ಚಂದ್ರಶೇಖರ್ Vistara News
Connect with us

ಕರ್ನಾಟಕ

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ: ನಾಗತಿಹಳ್ಳಿ‌ ಚಂದ್ರಶೇಖರ್

ಮುದ್ರಣ ಹಾಗೂ ಡಿಜಿಟಲ್‌- ಟಿವಿ ಇವೆರಡರ ಹಿತವಾದ ಸಮ್ಮಿಶ್ರಣ ಮಾಡಿ ಓದುಗ- ನೋಡುಗರಿಗೆ ನೀಡಬೇಕು ಎಂಬ ಆಶಯದಿಂದ ನಾವು ಕಥಾಸ್ಪರ್ಧೆಯನ್ನು ನಡೆಸಿದ್ದೇವೆ ಎಂದು ಹರಿಪ್ರಕಾಶ್‌ ಕೋಣೆಮನೆ ಹೇಳಿದ್ದಾರೆ.

VISTARANEWS.COM


on

vistara kathaspardhe prize distribution1
Koo

ಬೆಂಗಳೂರು: ಕನ್ನಡ ಸಾರಸ್ವತ ಲೋಕವನ್ನು ಒಳಗೊಳ್ಳುವ ಯತ್ನ, ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ ವಿಸ್ತಾರ ನ್ಯೂಸ್ ಟಿವಿ ಮಾಧ್ಯಮದಿಂದ ಆಗುತ್ತಿರುವುದು ಸ್ತುತ್ಯರ್ಹ ಎಂದು ಖ್ಯಾತ ಕತೆಗಾರ, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಹೇಳಿದರು.

ದಾಖಲೆ ಮೊತ್ತದ ʼವಿಸ್ತಾರ ನ್ಯೂಸ್‌ ಯುಗಾದಿ ಕಥಾಸ್ಪರ್ಧೆ-2023’ರ ಬಹುಮಾನ ವಿಜೇತರನ್ನು ಘೋಷಿಸಿದ ಬಳಿಕ ಅವರು ಮಾತನಾಡಿದರು. ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಹೋಟೆಲ್‌ ಮ್ಯಾಸ್ಟಿಫ್‌ನಲ್ಲಿ ಸಮಾರಂಭ ನೆರವೇರಿತು. ಮೊದಲ ಬಹುಮಾನವನ್ನು ಚಂದ್ರಶೇಖರ ಡಿ.ಆರ್.‌, ಎರಡನೇ ಬಹುಮಾನವನ್ನು ದಾದಾಪೀರ್‌ ಜೈಮನ್‌, ಮೂರನೇ ಬಹುಮಾನವನ್ನು ಪೂರ್ಣಿಮಾ ಮಾಳಗಿಮನಿ ತಮ್ಮದಾಗಿಸಿಕೊಂಡರು.

ಕಥೆಗಳಿಗೆ ದೃಶ್ಯ ಮಾಧ್ಯಮ ಸದಾ ಉಪಕೃತವಾಗಿರುತ್ತದೆ. ಕಥೆಗಳೇ ಮನರಂಜನೆಯ ಜೀವಾಳ. ಕಥೆ ಹಾಗೂ ಟಿವಿ ಮಾಧ್ಯಮ ಎರಡರ ವ್ಯಾಕರಣವೂ ಭಿನ್ನ. ದೃಶ್ಯ ಮಾಧ್ಯಮ ಅಬ್ಬರದಿಂದ ಹೇಳುವುದನ್ನು ಕಥೆ ಸೌಮ್ಯವಾಗಿ, ಪಿಸುಮಾತಿನಲ್ಲಿ, ದೃಶ್ಯ ಮಾಧ್ಯಮದ ತೋರಿಕೆಯ ನಡುವೆ ಕಥೆ ಸಂಕೋಚ ಹಾಗೂ ಧ್ಯಾನದಲ್ಲಿ ಹೇಳುತ್ತದೆ. ದೃಶ್ಯ ಮಾಧ್ಯಮ ಪ್ರಕಟಿಸಿದರೆ ಸಾಹಿತ್ಯ ಏಕಾಂತದಲ್ಲಿ ಅರಳುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿ ಪ್ರೇಕ್ಷಕನನ್ನು ಓದುಗನನ್ನಾಗಿಸಿ, ಓದುಗನನ್ನು ಪ್ರೇಕ್ಷಕನನ್ನಾಗಿಸುವ ಕಠಿಣ ಕಾಯಕದ ಸುವರ್ಣ ಸೇತುವೆಯಾಗಿ ವಿಸ್ತಾರ ನ್ಯೂಸ್‌ ಕೆಲಸ ಮಾಡುತ್ತಿದೆ. ಸಾರಸ್ವತ ಲೋಕವನ್ನು ಟಿವಿ ಮಾಧ್ಯಮದಲ್ಲಿ ಒಳಗೊಳ್ಳುವ ಈ ಯತ್ನ ಸಫಲವಾಗಲಿ ಎಂದು ನಾಗತಿಹಳ್ಳಿ ಹಾರೈಸಿದರು.

vistara kathaspardhe prize distribution
ವಿಸ್ತಾರ ಕಥಾಸ್ಪರ್ಧೆಯ ಟಾಪ್‌ 25 ಕಥೆಗಾರರು ಮತ್ತು ಅತಿಥಿಗಳು

ವಿಸ್ತಾರ ನ್ಯೂಸ್‌ ಟಿವಿ ವಾಹಿನಿಯ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಕಥಾಸ್ಪರ್ಧೆಯ ಆಶಯವನ್ನು ವಿವರಿಸಿದರು. ಸಾಹಿತ್ಯ, ಸಂಸ್ಕೃತಿ ಇವುಗಳಿಗೆ ಆಧುನಿಕ ಮಾಧ್ಯಮದಲ್ಲಿ ಮನ್ನಣೆ ದೊರೆಯುತ್ತಿಲ್ಲ ಎಂದು ಕೂಗು ಕೇಳಿಬರುತ್ತಿರುವುದರ ನಡುವೆಯೇ ನಾವು ಅವುಗಳಿಗೆ ಪ್ರಾಧಾನ್ಯ ನೀಡುವ, ಹಲವು ಅಭಿಪ್ರಾಯಗಳಿಗೆ ಧ್ವನಿಯಾಗುವ ಕಾಯಕವನ್ನು ಮಾಡುತ್ತಿದ್ದೇವೆ. ಮುದ್ರಣ ಹಾಗೂ ಡಿಜಿಟಲ್‌- ಟಿವಿ ಇವೆರಡರ ಹಿತವಾದ ಸಮ್ಮಿಶ್ರಣ ಮಾಡಿ ಓದುಗ- ನೋಡುಗರಿಗೆ ನೀಡಬೇಕು ಎಂಬ ಆಶಯದಿಂದ ನಾವು ಕಥಾಸ್ಪರ್ಧೆಯನ್ನು ನಡೆಸಿದ್ದೇವೆ. ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾದ ಕಥಾಸ್ಪರ್ಧೆಯ ಫಲಿತಾಂಶವು ಹಲವು ತಿಂಗಳ ಪರಿಶ್ರಮದ ಫಲವಾಗಿದೆ ಎಂದು ಅವರು ವಿವರಿಸಿದರು.

ಕಥೆ ಬರೆಯುವುದಕ್ಕಿಂತಲೂ ದೊಡ್ಡ ಸಮುದಾಯಕ್ಕೆ ಕತೆ ಹೇಳುವುದನ್ನು ಹೆಚ್ಚು ಇಷ್ಟಪಡುತ್ತೇನೆ. ಕಥೆಗಾರನಾಗುವುದರ ಜತೆಗೆ ಉತ್ತಮ ಮನುಷ್ಯನಾಗಿರಲೂ ಪ್ರಯತ್ನಿಸುತ್ತಿದ್ದೇನೆ ಎಂದು ಪ್ರಥಮ ಬಹುಮಾನಿತ ಕಥೆಗಾರ ಚಂದ್ರಶೇಖರ ಡಿ.ಆರ್‌ ನುಡಿದರು. ಕಥೆಗಳನ್ನು ಹಂಚಿಕೊಳ್ಳುವ ಮೂಲಕ ನಾವು ಇನ್ನಷ್ಟು ಕ್ರಿಯಾಶೀಲವಾಗುತ್ತೇವೆ. ಈ ಕ್ರಿಯಾಶೀಲತೆಗೆ ವಿಸ್ತಾರ ಸ್ಪರ್ಧೆ ಮತ್ತಷ್ಟು ಹುರುಪು ತುಂಬಿದೆ ಎಂದು ದ್ವಿತೀಯ ಬಹುಮಾನಿತ ದಾದಾಪೀರ್‌ ಜೈಮನ್‌ ನುಡಿದರು. ವಿಸ್ತಾರ ಸ್ಪರ್ಧೆಗೆ ಬಂದ ಸಾವಿರ ಕಥೆಗಳು ಸಾವಿರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ. ಅಷ್ಟು ವೈವಿಧ್ಯಮಯವಾದ ಕಥಾಲೋಕ ಕನ್ನಡದಲ್ಲಿದೆ ಎಂದು ತೃತೀಯ ಬಹುಮಾನಿತ ಕಥೆಗಾರ್ತಿ ಪೂರ್ಣಿಮಾ ಮಾಳಗಿಮನಿ ನುಡಿದರು.

ಹೊಸ ಕತೆಗಾರರನ್ನು ಗುರುತಿಸುವಲ್ಲಿ ಕನ್ನಡ ಸಾಹಿತ್ಯಲೋಕ ಹಿಂದೆ ಬಿದ್ದಿಲ್ಲ. ಉತ್ತಮ ಸಾಹಿತ್ಯ ಪ್ರಕಟಿಸುವಾಗ ನಾವು ಹಣ ಖರ್ಚಾಗುತ್ತದೆಂದು ಹಿಂದುಳಿದಿಲ್ಲ. ಯುವ ಸಾಹಿತಿಗಳು ಬೆಳೆಯಬೇಕು ಎಂಬುದು ನಮ್ಮ ಆಶಯ ಎಂದು ಬಹುಮಾನ ಆಯೋಜಕರಲ್ಲಿ ಒಬ್ಬರಾದ ಶ್ರೀ ಸಿದ್ದಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕಾಶನದ ಮಾಲಿಕ ಬಸವರಾಜ ಕೊನೇಕ ಹೇಳಿದರು. ಬಹುಮಾನ ಪ್ರಾಯೋಜಕರುಗಳಾದ ತ್ಯಾಗರಾಜ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಡಾ. ಎಂ. ಆರ್‌ ವೆಂಕಟೇಶ್‌, ವಿ2 ಹೋಲ್ಡಿಂಗ್ಸ್‌ ಹೌಸಿಂಗ್‌ ಡೆವಲಪ್‌ಮೆಂಟ್‌ ಪ್ರೈ. ಲಿ. ಎಂ.ಡಿ ಡಾ.ಪಿ.ಎಲ್‌ ವೆಂಕಟರಾಮ ರೆಡ್ಡಿ ಸ್ಪರ್ಧೆಯ ಯಶಸ್ಸಿಗೆ ಶುಭ ಹಾರೈಸಿದರು.

vistara kathaspardhe prize distribution
ದಾದಾಪೀರ್‌ ಜೈಮನ್‌ ಚಂದ್ರಶೇಖರ ಡಿಆರ್‌ ಪೂರ್ಣಿಮಾ ಮಾಳಗಿಮನಿ

ಮೊದಲ ಬಹುಮಾನದ ಮೊತ್ತ ರೂ. 55,000, ಎರಡನೇ ಬಹುಮಾನ ರೂ. 25,000 ರೂ., ಮೂರನೇ ಬಹುಮಾನ 10,000 ರೂ. ಹಾಗೂ ತಲಾ 2,000 ರೂ. ಮೊತ್ತದ ಮೆಚ್ಚುಗೆ ಬಹುಮಾನಗಳನ್ನು 5 ಮಂದಿಗೆ ವಿತರಿಸಲಾಯಿತು. ಕವಿ, ವಿಮರ್ಶಕಿ ಲಲಿತಾ ಸಿದ್ದಬಸವಯ್ಯ, ಕಾದಂಬರಿಕಾರ ಹಾಗೂ ವಿಮರ್ಶಕ ಬಿ. ಜನಾರ್ದನ ಭಟ್‌ ಅವರು ಈ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ್ದರು. ಟಾಪ್‌ 25 ಪಟ್ಟಿಗೆ ಆಯ್ಕೆಯಾದ ಕತೆಗಾರರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಸಂಸ್ಥೆಯ ಆಡಳಿತ ನಿರ್ದೇಶಕ ಹಾಗೂ ಚೇರ್‌ಮನ್‌ ಎಚ್‌.ವಿ. ಧರ್ಮೇಶ್‌, ವಿಸ್ತಾರ ಟಿವಿಯ ಎಕ್ಸಿಕ್ಯೂಟಿವ್‌ ಎಡಿಟರ್‌ ಶರತ್‌ ಎಂ.ಎಸ್‌, ವಿಸ್ತಾರ ನ್ಯೂಸ್‌ನ ನಿರ್ದೇಶಕ (ಬ್ಯುಸಿನೆಸ್‌) ವಿನಯ್‌ ಶೇಷಗಿರಿ, ಸಿಒಒ ಪರಶುರಾಮ್‌, ವಿಸ್ತಾರ ನ್ಯೂಸ್‌ ಡಿಜಿಟಲ್‌ ವಿಭಾಗದ ಸಂಪಾದಕ ರಮೇಶ್‌ ಕುಮಾರ್‌ ನಾಯಕ್‌, ಸ್ಪೆಷಲ್‌ ಆಪರೇಷನ್ ಎಡಿಟರ್‌ ಕಿರಣ್‌ ಕುಮಾರ್‌ ಡಿ.ಕೆ, ವಿಸ್ತಾರ ಮನರಂಜನಾ ವಾಹಿನಿ ಕಂಟೆಂಟ್‌ ಹೆಡ್‌ ಕುಸುಮಾ ಆಯರಹಳ್ಳಿ ಉಪಸ್ಥಿತರಿದ್ದರು.‌ ಎ.ಕೃಷ್ಣ ಭಟ್‌ ಕಾರ್ಯಕ್ರಮ ನಿರ್ವಹಿಸಿದರು.

ಕಥಾಸ್ಪರ್ಧೆ ಬಹುಮಾನಿತರು:

ಪ್ರಥಮ: ಸೋಮನ ಕುಣಿತ- ಚಂದ್ರಶೇಖರ ಡಿ.ಆರ್
ದ್ವಿತೀಯ: ಅಂತಃಕಾರಣದ ಟಿಪ್ಪಣಿಗಳು- ದಾದಾಪೀರ್‌ ಜೈಮನ್‌
ತೃತೀಯ: ಅದು ಅವರ ಪ್ರಾಬ್ಲಮ್- ಪೂರ್ಣಿಮಾ ಮಾಳಗಿಮನಿ

ಮೆಚ್ಚುಗೆ: ಹುಣಿಸೆ ಹೂವು- ದೀಪದ ಮಲ್ಲಿ
ಮೆಚ್ಚುಗೆ: ಪಿಂಕ್‌ ಟ್ರಂಪೆಟ್- ಚೈತ್ರಿಕಾ ಹೆಗಡೆ
ಮೆಚ್ಚುಗೆ: ಪರವೇಶ್ಮಸ್ಥನ ಫಿಕ್ಹ್‌ ಪ್ರಸಂಗ- ಬಿ.ಎಂ ಹನೀಫ್‌
ಮೆಚ್ಚುಗೆ: ಕಿತ್ತಳೆ ಚಿಟ್ಟೆ- ಮಂಜುನಾಯಕ್‌ ಚೆಳ್ಳೂರು
ಮೆಚ್ಚುಗೆ: ನೆಲೆ- ದೀಪಾ ಹಿರೇಗುತ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

School Timings: ಶಾಲೆಗಳ ಸಮಯ ಬದಲಾವಣೆ; ಅ.5ಕ್ಕೆ ಸಭೆ ಕರೆದ ಶಿಕ್ಷಣ ಇಲಾಖೆ

School Timings: ಬೆಂಗಳೂರಿನಲ್ಲಿ ಸದ್ಯ ಇರುವ ಸಮಯದಲ್ಲಿ ಅರ್ಧ ಗಂಟೆ ಅಥವಾ ಒಂದು ಗಂಟೆ ಮುಂಚೆ ಶಾಲೆಗಳನ್ನು ಪ್ರಾರಂಭ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ.

VISTARANEWS.COM


on

Edited by

Students on the road
Koo

ಬೆಂಗಳೂರು: ನಗರದ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಶಾಲೆಗಳ ಸಮಯ ಪರಿಷ್ಕರಣೆ ಮಾಡಲು ಹೈಕೋರ್ಟ್‌ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಶಾಲಾ ಸಮಯ ಬದಲಾವಣೆ (School Timings) ಬಗ್ಗೆ ಚರ್ಚಿಸಲು ಅ.5ರಂದು ಬೆಳಗ್ಗೆ 11 ಗಂಟೆಗೆ ಶಿಕ್ಷಣ ಇಲಾಖೆ ಮಹತ್ವದ ಸಭೆ ಕರೆದಿದೆ.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಹಾಗೂ ಪೋಷಕರ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಟ್ರಾಫಿಕ್ ಪೊಲೀಸ್ ಹಾಗೂ ಶಾಲಾ ವಾಹನ ಚಾಲಕರ ಸಂಘಟನೆಗಳ ಪ್ರತಿನಿಧಿಗಳು ಭಾಗಿಯಾಗಲು ಸೂಚಿಸಲಾಗಿದೆ.

ಶಾಲಾ ವಾಹನಗಳು, ವಿದ್ಯಾರ್ಥಿಗಳ ಸಂಚಾರದಿಂದ ಬೆಳಗಿನ ವೇಳೆ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಇದರಿಂದ ಸಮಯಕ್ಕೆ ಸರಿಯಾಗಿ ಶಾಲೆಗಳಿಗೆ ಹೋಗಲು ಮಕ್ಕಳಿಗೂ ತೊಂದರೆಯಾಗುತ್ತದೆ. ಹೀಗಾಗಿ ಶಾಲಾ ಅವಧಿ ಪರಿಷ್ಕರಣೆ ಮಾಡಲು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿತ್ತು. ಶಾಲೆಯ ಆಡಳಿತ ಮಂಡಳಿ, ಪೋಷಕರು ಸೇರಿ ಸಂಬಂಧ ಪಟ್ಟವರ ಜತೆ ಚರ್ಚೆ ಮಾಡಿ ಸಯ ಬದಲಾವಣೆ ಬಗ್ಗೆ ನಿರ್ಧರಿಸಲು ಕೋರ್ಟ್‌ ಸೂಚಿಸಿತ್ತು. ಹೀಗಾಗಿ ಶಿಕ್ಷಣ ಇಲಾಖೆ ಸಭೆ ಏರ್ಪಡಿಸಿದೆ.

ಇದನ್ನೂ ಓದಿ | Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?

ಯಾವ ಸಮಯ ನಿಗದಿಯಾಗಲಿದೆ?

ಸದ್ಯ ನಗರದ ಬಹುತೇಕ ಶಾಲೆಗಳ ಸಮಯ ಬೆಳಗ್ಗೆ 9.30 ರಿಂದ ಸಂಜೆ 4.30ಕ್ಕೆ ಇದೆ. ಇದನ್ನು ಅರ್ಧ ಗಂಟೆ ಅಥವಾ ಒಂದು ಗಂಟೆ ಮುಂಚೆ ಪ್ರಾರಂಭ ಮಾಡುವ ಪ್ರಸ್ತಾವನೆ ಶಿಕ್ಷಣ ಇಲಾಖೆ ಮುಂದೆ ಇದೆ. ಬೆಳಗ್ಗೆ 8.30 ರಿಂದ 3.30 ಅಥವಾ ಬೆಳಗ್ಗೆ 9 ರಿಂದ ಸಂಜೆ 3.30ವರೆಗೆ ಶಾಲೆ ತೆರೆಯೋ ಪ್ರಸ್ತಾಪ ಇದ್ದು, ಯಾವ ಸಮಯ ನಿಗದಿ ಮಾಡಬೇಕು ಎಂಬುವುದರ ಬಗ್ಗೆ ಸಭೆಯಲ್ಲಿ ತೀರ್ಮಾನವಾಗಲಿದೆ.

Continue Reading

ಕರ್ನಾಟಕ

Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?

Caste Census Report : ಬಿಹಾರದಲ್ಲಿ ಜಾತಿಗಣತಿ ವರದಿ ಮಂಡನೆಯಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಕಳೆದ ಬಾರಿ ಸಿಎಂ ಆದಾಗಲೇ ವರದಿ ಸಿದ್ಧವಾಗಿತ್ತು. ಆದರೆ, ಕಾರಣಾಂತರಗಳಿಂದ ಅದು ಮಂಡನೆಯಾಗಿರಲಿಲ್ಲ. ಈಗಲಾದರೂ ಮಂಡನೆಯಾಗಲಿದೆಯಾ? ಎಂಬ ಪ್ರಶ್ನೆ ಈಗ ಮೂಡಿದೆ.

VISTARANEWS.COM


on

Edited by

caste census repot image
Koo

ಬೆಂಗಳೂರು: ಕಾಂತರಾಜು ನೇತೃತ್ವದ ಸಮಿತಿಯಿಂದ (Committee headed by Kantharaju) 2018ರಲ್ಲಿ ಸಿದ್ಧವಾಗಿರುವ ಜಾತಿಗಣತಿ ವರದಿಯು (Caste Census Report) ರಾಜ್ಯದಲ್ಲಿ ಜಾರಿಯಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಬಿಹಾರದಲ್ಲಿ ಈಗಾಗಲೇ ಜಾತಿಗಣತಿ ವರದಿಯನ್ನು ಅಂಗೀಕಾರ ಮಾಡಲಾಗಿದೆ. ಇದಕ್ಕೆ ವ್ಯಾಪಕ ಪರ-ವಿರೋಧ ಚರ್ಚೆಗಳು ಪ್ರಾರಂಭವಾಗಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಹ ವರದಿ ಬಗ್ಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ (Backward Classes Commission Chairman Jayaprakash Hegde) ಅವರು, ನವೆಂಬರ್‌ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ನಡುವೆ ಕಾಂಗ್ರೆಸ್‌ ಹಿರಿಯ ಮುಖಂಡರಿಂದಲೇ ವರದಿ ಅಂಗೀಕಾರಕ್ಕೆ ಒತ್ತಡಗಳು ಕೇಳಿಬಂದಿವೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಇದರ ಬಗ್ಗೆ ಜಾಣ್ಮೆಯ ಉತ್ತರವನ್ನು ನೀಡಿದ್ದು, ಮೊದಲು ತಮ್ಮ ಬಳಿ ವರದಿ ಬರಲಿ ಎಂದು ಹೇಳಿದ್ದಾರೆ. ಹಾಗಾದರೆ, ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಮಂಡನೆಯಾಗಲಿದೆಯೇ? ಅಥವಾ ರಾಜ್ಯ ಸರ್ಕಾರ ಸಬೂಬು ಹೇಳುತ್ತಾ ಮುಂದೂಡಲಿದೆಯೇ ಎಂಬ ಕುತೂಹಲ ಮೂಡಿದೆ.

2018ರಲ್ಲಿ ಕಾಂತರಾಜು ನೇತೃತ್ವದ ಸಮಿತಿಯು ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಿತ್ತು. 2019ರಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ (Congress JDS alliance) ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಈ ವರದಿಯನ್ನು ಅಂಗೀಕರಿಸಲು ಒಪ್ಪಿರಲಿಲ್ಲ. ಅಂದು ಹಿಂದುಳಿದ ವರ್ಗಗಳ ಸಚಿವರಾಗಿದ್ದ ಪುಟ್ಟರಂಗಶೆಟ್ಟಿ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ, ಆ ವಿಷಯವನ್ನು ಕ್ಯಾಬಿನೆಟ್‌ಗೆ ಚರ್ಚೆಗೆ ತರದಂತೆ ಸೂಚಿಸಿದ್ದರು. ಹಾಗಾಗಿ ಆ ವರದಿ ಹಾಗೆಯೇ ಉಳಿಯಿತು. ನಂತರ ಬಂದ ಮುಖ್ಯಮಂತ್ರಿಗಳ್ಯಾರೂ ಸಹ ಈ ಜಾತಿಗಣತಿ ವರದಿಯನ್ನು ಪಡೆಯಲು ಮುಂದೆ ಬರಲಿಲ್ಲ. ಆದರೆ, ಈಗ ಬಿಹಾರದಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕಾರ ಮಾಡಿದ್ದರಿಂದ ರಾಜ್ಯದಲ್ಲಿ ಈ ಬಗ್ಗೆ ಕೂಗು ಹೆಚ್ಚಾಗಿದೆ. ಅದಕ್ಕಿಂತ ಮೊದಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಅವಧಿ ಮುಗಿಯುವುದರೊಳಗೆ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಿಯೇ ಹೋಗುವುದಾಗಿ ಹೇಳಿದ್ದರು. ಈ ಮಧ್ಯೆ ವರದಿ ಮಂಡನೆಗೆ ಮೊದಲೇ ಸೋರಿಕೆ ಆಗಿದ್ದರಿಂದ ಮೇಲ್ವರ್ಗದ ಪ್ರಬಲ ಸಮುದಾಯವರು ಸೇರಿದಂತೆ ಹಲವರಿಂದ ಜಾತಿ ಮಂಡನೆಗೆ ವಿರೋಧ ವ್ಯಕ್ತವಾಗಿದೆ. ಅಲ್ಲದೆ, ಈ ವರದಿ ಈಗ ಮಂಡನೆಯಾದರೆ ಲೋಕಸಭಾ ಚುನಾವಣೆ ಮೇಲೆ ಸಾಕಷ್ಟು ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದ್ದು, ಅದಕ್ಕಾಗಿಯೇ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಚರ್ಚೆಗಳೂ ಹುಟ್ಟಿಕೊಂಡಿವೆ.

caste census repot image

ಇದನ್ನೂ ಓದಿ: Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

ವರದಿ ಅಂಗೀಕಾರಕ್ಕೆ ಹಿಂದೇಟು ಏಕೆ?

ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಅಂಗೀಕರಿಸಲು ಹಿಂದೇಟು ಏಕೆ? ವಿಪಕ್ಷಗಳ ಅಸಮಾಧಾನ ಯಾಕೆ? ಎಂಬುದನ್ನು ನೋಡುವುದಾದರೆ ವರದಿಯಲ್ಲಿನ ಅಂಕಿ-ಅಂಶಗಳು ಮೂಲ ಕಾರಣವಾಗಿದೆ. ವರದಿ ಸಲ್ಲಿಕೆಗೆ ಮೊದಲೇ ಅಂಕಿ-ಅಂಶಗಳ ಸೋರಿಕೆ ಆಗಿವೆ. ಸಿದ್ದರಾಮಯ್ಯ ಅವರು ಈ ಹಿಂದೆ ಸಿಎಂ ಆಗಿದ್ದಾಗ ಸಮಿತಿ ರಚಿಸಿ ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಲು ಆದೇಶಿಸಲಾಗಿತ್ತು.

2013ರಲ್ಲಿ ಅಹಿಂದ ಸರ್ಕಾರ ಎಂದೇ ಬಿಂಬಿತವಾಗಿತ್ತು. ಅಲ್ಲದೆ, ಕಾಂಗ್ರೆಸ್‌ಗೆ ಅನುಕೂಲ ಆಗುವ ರೀತಿ ರಿಪೋರ್ಟ್ ತಯಾರಾಗಿದೆ ಎನ್ನುವ ಆರೋಪವೂ ಕೇಳಿಬಂದಿತ್ತು. ಪ್ರಬಲ ಸಮುದಾಯದ ನಾಯಕರಿಂದ ಈ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ವರದಿ ಸಿದ್ಧವಾಗುತ್ತಿರುವ ಹೊತ್ತಿನಲ್ಲಿಯೇ ಅಂಕಿ – ಅಂಶಗಳ ಸೋರಿಕೆ ಆಗಿರುವುದೇ ರಾಜಕೀಯ ಪಕ್ಷಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು.

ವರದಿ ಏನು ಹೇಳುತ್ತದೆ?

ಮುಸ್ಲಿಂ ಸಮುದಾಯವೇ ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಇದ್ದಾರೆ. ಎರಡನೇ ಸ್ಥಾನದಲ್ಲಿ ದಲಿತರು, ಮೂರನೇ ಸ್ಥಾನದಲ್ಲಿ ಲಿಂಗಾಯತರು, ನಾಲ್ಕನೇ ಸ್ಥಾನದಲ್ಲಿ ಕುರುಬರು ಹಾಗೂ ಐದನೇ ಸ್ಥಾನದಲ್ಲಿ ಒಕ್ಕಲಿಗರು ಇದ್ದಾರೆಂದು ಮಾಹಿತಿ ಹೇಳುತ್ತದೆ. ಇದರಲ್ಲಿ ಮೀಸಲಾತಿ ಪಡೆಯುತ್ತಿರುವ ಕೆಲ ಸಮುದಾಯಗಳು ಆರ್ಥಿಕವಾಗಿ ಪ್ರಬಲವಾಗಿದ್ದಾರೆಂಬುದನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಒಂದು ವೇಳೆ ಈ ರಿಪೋರ್ಟ್ ಅಂಗೀಕಾರವಾದರೆ ಮುಂದೆ ಸ್ಥಳೀಯ ಸಂಸ್ಥೆಗಳಲ್ಲಿ ಇದೇ ರಿಪೋರ್ಟ್ ಆಧರಿಸಿ ಮೀಸಲಾತಿ ವಿಂಗಡಣೆ ಮಾಡಲಾಗುತ್ತದೆ. ಇದರಿಂದ ಕೆಲ ಸಮುದಾಯಗಳಿಗೆ ಅನ್ಯಾಯವಾಗುತ್ತದೆ ಎಂಬುದು ಕೆಲವರ ವಾದವಾಗಿದೆ. ಹೀಗಾಗಿಯೇ ಇದೊಂದು ಅವೈಜ್ಞಾನಿಕ ವರದಿ ಎಂದು ವಿಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಜತೆಗೆ ಪ್ರಬಲ ಸಮುದಾಯಗಳ ಸ್ವಾಮೀಜಿಗಳಿಂದಲೂ ಈ ರಿಪೋರ್ಟ್‌ಗೆ ವಿರೋಧ ವ್ಯಕ್ತವಾಗಿದೆ.

ಪ್ರಧಾನಿ ಮೋದಿಯಿಂದಲೂ ಅಸಮಾಧಾನ

ಬಿಹಾರ ರಾಜ್ಯದಲ್ಲಿ ಆಗಿರುವ ಜಾತಿ ಗಣತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನವನ್ನು ಹೊರಹಾಕಿದ್ದಾರೆ. ಜಾತಿ ಗಣತಿಯಿಂದ ಅಲ್ಪಸಂಖ್ಯಾತರ ಹಕ್ಕು ಕಡಿಮೆ ಮಾಡಲು ಬಯಸುತ್ತಿದೆಯೇ? ನಿನ್ನೆಯಿಂದ ಕಾಂಗ್ರೆಸ್ ನಾಯಕರು ಜಿತ್ನಿ ಆಬಾದಿ ಉತ್ನಾ ಹಕ್ ಎಂದು ಹೇಳುತ್ತಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏನು ಯೋಚಿಸುತ್ತಿರಬಹುದು? ಅವರು ಅಲ್ಪಸಂಖ್ಯಾತರು ಮೊದಲಿಗರು ಎಂದು ಹೇಳುತ್ತಿದ್ದರು. ದೇಶದ ಸಂಪನ್ಮೂಲಗಳ ಮೇಲೆ ಅವರಿಗೆ ಹಕ್ಕು ಎನ್ನುತ್ತಿದ್ದರು. ಆದರೆ, ಈಗ ಕಾಂಗ್ರೆಸ್ ಬೇರೆಯದ್ದೆ ಹೇಳುತ್ತಿದೆ. ದೇಶದ ಸಂಪನ್ಮೂಲಗಳಲ್ಲಿ ಯಾರಿಗೆ ಮೊದಲ ಹಕ್ಕು ಎಂದು ಸಮುದಾಯದ ಜನಸಂಖ್ಯೆ ನಿರ್ಧರಿಸುತ್ತದೆ ಎನ್ನುತ್ತಿದ್ದಾರೆ. ಹಾಗಾದರೆ ಕಾಂಗ್ರೆಸ್‌ನವರು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಡಿಮೆ ಮಾಡಲು ಬಯಸುತ್ತಾರೆಯೇ? ಅಲ್ಪಸಂಖ್ಯಾತರನ್ನು ತೊಲಗಿಸಲು ಅವರು ಬಯಸುತ್ತಾರಾ? ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಹಿಂದುಗಳು ಮುಂದೆ ಬಂದು ಅವರ ಎಲ್ಲ ಹಕ್ಕುಗಳನ್ನು ತೆಗೆದುಕೊಳ್ಳಬೇಕೇ? ಇದನ್ನೆಲ್ಲ ಕೇಳಿಕೊಂಡು ಹಿರಿಯ ಕಾಂಗ್ರೆಸ್ ನಾಯಕರು ಸುಮ್ಮನೆ ಕುಳಿತಿದ್ದಾರೆ. ಇದನ್ನೆಲ್ಲಾ ನೋಡಿ ಮಾತನಾಡುವ ಧೈರ್ಯವೂ ಅವರಿಗಿಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು.

ಜಾತಿಗಣತಿ ವರದಿ ಬಿಡುಗಡೆ ಆಗಲಿ: ಬಸವರಾಜ ರಾಯರೆಡ್ಡಿ

ಜಾತಿಗಣತಿ ವರದಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸವರಾಜ ರಾಯರೆಡ್ಡಿ ವಿಸ್ತಾರ ನ್ಯೂಸ್ ಜತೆಗೆ ಮಾತನಾಡಿದ್ದು, ಈ ಹಿಂದೆ ಸಿದ್ದರಾಮಯ್ಯ ಅವರು ಇದ್ದ ಕಾಲದಲ್ಲಿ ಜಾತಿಗಣತಿ ಮಾಡಲು ಕಾಂತರಾಜ್ ನೇತೃತ್ವದಲ್ಲಿ ಆಯೋಗವನ್ನು ನೇಮಕ ಮಾಡಲಾಗಿತ್ತು. ಅವರು ಕೂಡ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಆದರೆ, ಸೆಕ್ರೆಟರಿ ಸಹಿ ಮಾಡಿರಲಿಲ್ಲ ಎಂಬ ಕಾರಣಕ್ಕೆ ಅದು ಸ್ವೀಕಾರ ಆಗಿಲ್ಲ. ಅಷ್ಟರಲ್ಲಿ ಆ ಸರ್ಕಾರದ ಅವಧೊ ಕೂಡ ಮುಗಿದು ಹೋಯ್ತು ಮುಂದೆ ಬಂದ ಸರ್ಕಾರ ಕೂಡ ವರದಿ ಬಿಡುಗಡೆ ಮಾಡಲಿಲ್ಲ. ಈಗ ಜಾತಿಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡುತ್ತೇನೆ. ಶೋಷಣೆಗೆ ಒಳಗಾಗಿರುವ ಜನರು ಎಲ್ಲ ವರ್ಗದಲ್ಲೂ ಇದ್ದಾರೆ. ಅಂಥವರಿಗೆ ಸಹಾಯ ಆಗಬೇಕು. ಈ ಹಿನ್ನೆಲೆಯಲ್ಲಿ ವರದಿ ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.

ಜಾಣ್ಮೆಯ ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಮಗೆ ಮೊದಲು ವರದಿಯನ್ನು ಕೊಡಬೇಕಲ್ವಾ? ಶಾಶ್ವತ ಹಿಂದುಳಿದ ಆಯೋಗವು ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಇದ್ದಾಗ ವರದಿಯನ್ನು ತಯಾರು ಮಾಡಿದ್ದರು. ಆದರೆ, ಅವರು ವರದಿಯನ್ನು ಸ್ವೀಕಾರ ಮಾಡಿರಲಿಲ್ಲ. ಈಗ ಅಧ್ಯಕ್ಷರ ಬದಲಾವಣೆ ಆಗಿದೆ. ಈಗ ಅಧ್ಯಕ್ಷರ ಬದಲಾವಣೆ ಆಗಿದೆ. ಇದರಲ್ಲಿ ಒಂದು ಡಿಫೆಕ್ಟ್ ಇದೆ. ಆಗ ಸೆಕ್ರೆಟರಿ ಸಹಿ ಮಾಡಲಿಲ್ಲ. ಈಗಿದ್ದ ಸೆಕ್ರೆಟರಿ ಬಳಿ ಸಹಿ ಮಾಡಿಸಿ ಕೊಡಬೇಕು. ಈಗ ಇರುವ ಅಧ್ಯಕ್ಷರು ಅದನ್ನು ತಂದು ಕೊಡಬೇಕು. ಅವರು ಬಿಜೆಪಿ ನೇಮಕ ಮಾಡಿರುವ ಅಧ್ಯಕ್ಷರು, ಈಸ್ ದಿಸ್ ಪಾಸಿಬಲ್?‌ ಎಂದು ಪ್ರಶ್ನೆ ಮಾಡಿದ್ದಾರೆ.

ನವೆಂಬರ್‌ನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಗಣತಿಯ ವರದಿ ಮಂಡನೆಗೆ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ 2015ರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದಿಂದ ಈ ಸಮೀಕ್ಷೆಯನ್ನು ನಡೆಸಲಾಗಿತ್ತು. ಈಗ ಈ ವರದಿಯನ್ನು ನವೆಂಬರ್‌ನಲ್ಲಿ ಸಲ್ಲಿಸಲು ಅವರು ಮುಂದಾಗಿದ್ದಾರೆ.

ಇದನ್ನೂ ಓದಿ: Kuruba Conference: ಬೆಳಗಾವಿಯಲ್ಲಿ ಬೃಹತ್‌ ಕುರುಬ ಸಮಾವೇಶದ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಶಕ್ತಿ ಪ್ರದರ್ಶನ

ವಿಸ್ತಾರ ನ್ಯೂಸ್‌ಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು, ನವೆಂಬರ್‌ನಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುತ್ತೇವೆ. ಈ ಹಿಂದೆ ಸಲ್ಲಿಕೆ ಮಾಡಿದ್ದಾಗ ಕೆಲವೊಂದಿಷ್ಟು ಬದಲಾವಣೆ ಮಾಡಬೇಕಿತ್ತು. ಹಿಂದಿನ ಸರ್ಕಾರದಲ್ಲಿ ಸಮಸ್ಯೆ ಇತ್ತು. ಈಗ ಅಂತಹ ಸಮಸ್ಯೆ ಕಂಡು ಬರುತ್ತಿಲ್ಲ. ಇದೇ ತಿಂಗಳಲ್ಲಿ ಸಮೀಕ್ಷೆ ವರದಿ ಸಲ್ಲಿಕೆ ಮಾಡುತ್ತೇವೆ. ವರದಿ ಸಲ್ಲಿಕೆಗೆ ಸರ್ಕಾರದಿಂದ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ಇದು ಆಯೋಗದ ಜವಾಬ್ದಾರಿಯಾಗಿದೆ. ಹೀಗಾಗಿ ಸಲ್ಲಿಕೆ ಮಾಡುತ್ತೇವೆ ಎಂದು ಜಯಪ್ರಕಾಶ್‌ ಹೆಗ್ಡೆ ಹೇಳಿದ್ದಾರೆ.

ಟ್ವೀಟ್‌ ಮಾಡಿರುವ ಬಿ.ಕೆ. ಹರಿಪ್ರಸಾದ್

ಕಾಂತರಾಜ್ ವರದಿ ಜಾರಿ ಮಾಡಲು ಸರ್ಕಾರಕ್ಕೆ ‌ಒತ್ತಾಯ ಮಾಡಿರುವ ಬಿ.ಕೆ. ಹರಿಪ್ರಸಾದ್, ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗಪಡಿಸುವ ದಿಟ್ಟತನ ತೋರಬೇಕು ಎಂದು ಟ್ವೀಟ್ ಮಾಡಿ ಒತ್ತಡ ಹೇರಿದ್ದಾರೆ.

ಹರಿಪ್ರಸಾದ್‌ ಟ್ವೀಟ್‌ನಲ್ಲೇನಿದೆ?

“ಜಾತಿ ಗಣತಿ ಬಹಿರಂಗ ಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರು ಧ್ವನಿ ಎತ್ತಿದ್ದಾರೆ.

ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ಧವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗಪಡಿಸುವ ದಿಟ್ಟತನ ತೋರಬೇಕಿದೆ.

“ಇಂಡಿಯಾ” ಮೈತ್ರಿಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಅಲ್ಲಿನ ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿ ಐತಿಹಾಸಿಕ ನಡೆ ತೋರಿದ್ದು, ಅಭಿನಂದನೀಯ.

ಹಿಂದುಳಿದ, ಶೋಷಿತವೂ ಸೇರಿದಂತೆ ಎಲ್ಲ ವರ್ಗಗಳ ಉನ್ನತಿ ಹಾಗೂ ಅಭಿವೃದ್ಧಿಗೆ ಜಾತಿಗಣತಿ ವರದಿ ಸಹಾಯ ಮಾಡುತ್ತದೆ ಎಂಬ ವೈಜ್ಞಾನಿಕ ಧೋರಣೆ ಕಾಂಗ್ರೆಸ್ ಪಕ್ಷದ್ದಾಗಿದೆ” ಎಂದು ಬಿ.ಕೆ. ಹರಿಪ್ರಸಾದ್‌ ಟ್ವೀಟ್‌ ಮೂಲಕ ಹೇಳಿದ್ದಾರೆ.

ಬಿಹಾರ ಸಿಎಂಗೆ ನನ್ನ ಧನ್ಯವಾದ

ಈ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಬಿಹಾರದಲ್ಲಿ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡಲಾಗಿದೆ. ಅದಕ್ಕಾಗಿ ಅಲ್ಲಿನ ಸಿಎಂ ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಯಾದವ್ ಅವರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಜಾತಿಗಣತಿ ಮೂಲಕ ಜನರಿಗೆ ಹಕ್ಕು ಸಿಗಲಿದೆ. ರಾಹುಲ್ ಗಾಂಧಿ ಅವರದ್ದು ಜಾತಿ ಗಣತಿ ಆಗಬೇಕು ಎನ್ನುವ ಆಶಯ ಇತ್ತು. ಕರ್ನಾಟಕದಲ್ಲೂ ಸಮೀಕ್ಷೆ ಮಾಡಿದೆ. ಅದನ್ನು ಬಹಿರಂಗ ಮಾಡಬೇಕು. ತಪ್ಪು – ಒಪ್ಪುಗಳು ಏನೇ ಇರಬಹುದು. ಅನುಷ್ಠಾನಕ್ಕೆ ತರಲು ಸಾಧ್ಯವಾಗುತ್ತದೆಯೋ? ಇಲ್ಲವೋ? ಎಂಬುದು ಗೊತ್ತಿಲ್ಲ. ಸಾರ್ವಜನಿಕರ ಹಣ ಖರ್ಚು ಮಾಡಿದೆ. ಅದನ್ನು ಬಹಿರಂಗ ಮಾಡಬೇಕು. ಚರ್ಚೆಗೆ ಅವಕಾಶ ನೀಡಬೇಕು.

ರಾಜ್ಯದಲ್ಲಿ ಯಾವಾಗ ಬಿಡುಗಡೆ ಮಾಡುತ್ತಾರೆಯೋ ಅದನ್ನು ಸರ್ಕಾರ ಕೇಳಬೇಕು. ಪಕ್ಷದ ಸದಸ್ಯನಾಗಿ ಬಿಡುಗಡೆ ಮಾಡಬೇಕು ಎನ್ನುವುದು ನನ್ನ ಆಶಯ. ಯಾವುದೇ ಜಾತಿ ಒತ್ತಡ ಹೇರಲಿ, ಮೊದಲು ಬಿಡುಗಡೆ ಮಾಡಬೇಕು. ಆಮೇಲೆ ಯಾರಿಗಾದರೂ ಅನ್ಯಾಯವಾದರೆ ಸರಿ ಮಾಡಬಹುದು. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಿಂದ ಸಿಎಂ ಆಗಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರೇ ಜಾತಿಗಣತಿ ಆಗಬೇಕು ಎಂದಿದ್ದಾರೆ. ಹೀಗಾಗಿ ನಾವು ಅವರ ಹೇಳಿಕೆಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Politics : ಬಿಜೆಪಿಗೆ ಚಿಲುಮೆ ತಂದ ಸಂಕಟ! ರಾಜ್ಯ ಸರ್ಕಾರದಿಂದ ಮತ್ತೊಂದು ತನಿಖಾಸ್ತ್ರ

ಜಾತಿ ಗಣತಿಯನ್ನು ಬಿಡುಗಡೆ ಮಾಡಬೇಕು ಎಂಬ ನನ್ನ ಹೇಳಿಕೆಯಲ್ಲಿ ಸಿದ್ದರಾಮಯ್ಯ ಅವರನ್ನು ಪ್ರತ್ಯಕ್ಷ ಹಾಗೂ ಪರೋಕ್ಷ ಟಾರ್ಗೆಟ್ ಮಾಡುವುದು ಏನಿಲ್ಲ ಎಂದು ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.

Continue Reading

ಕರ್ನಾಟಕ

Sagara News: ಸಾಗರದಲ್ಲಿ ತಲ್ವಾರ್‌ ಝಳಪಿಸಿ, ಹಿಂದು ವಿರೋಧಿ ಘೋಷಣೆ; ಮೂವರ ಬಂಧನ

Sagara News: ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಅನ್ಯ ಕೋಮಿನ ಯುವಕರು ತಲ್ವಾರ್‌ ಝಳಪಿಸಿ, ಪ್ರಚೋದನಕಾರಿ ಘೋಷಣೆ ಕೂಗಿದ್ದರು.

VISTARANEWS.COM


on

Edited by

Eid Milad procession
Koo

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಗಲಭೆ, ಕಲ್ಲು ತೂರಾಟ ನಡೆದ ಬೆನ್ನಲ್ಲೇ ಜಿಲ್ಲೆಯ ಸಾಗರದಲ್ಲೂ ಹಿಂದೂ ವಿರೋಧಿ ಘೋಷಣೆ ಕೂಗಿ ಅನ್ಯ ಸಮುದಾಯದ ಕೆಲ ಯುವಕರು ತಲ್ವಾರ್‌ ಝಳಪಿಸಿರುವ ಘಟನೆ ನಡೆದಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದು ಜಾಗರಣಾ ವೇದಿಕೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಪೊಲೀಸರು ಮೂವರನ್ನು ಬಂಧಿಸಿ, ಮೆರವಣಿಗೆಗೆ ಬಳಸಿದ್ದ ವಾಹನ ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಸಾಗರದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಅನ್ಯ ಕೋಮಿನ ಯುವಕರು ತಲ್ವಾರ್‌ ಝಳಪಿಸಿ, ಪ್ರಚೋದನಕಾರಿ ಘೋಷಣೆ ಕೂಗಿದ್ದರು. ಇದಕ್ಕೆ ಹಿಂದುಪರ ಸಂಘಟನೆಗಳು ವ್ಯಾಪಕ ಆಕ್ರೋಶ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದವು. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮಾದರಿಯಲ್ಲಿಯೇ ಸಾಗರದಲ್ಲಿ ಬೃಹತ್‌ ತಲ್ವಾರ್‌ ಮಾದರಿಯ ದ್ವಾರ ಅಳವಡಿಸಿರುವುದು ಕಂಡುಬಂದಿದೆ.

ಸಾಗರದ ಶಿವಪ್ಪ ನಾಯಕ ವೃತ್ತದಲ್ಲಿ ಬೃಹತ್‌ ತಲ್ವಾರ್‌ ಮಾದರಿಯ ದ್ವಾರ

ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಕೆ.ಎಚ್‌.ಸುದೀಂದ್ರ ಮಾತನಾಡಿ, ಈದ್‌ ಮಿಲಾದ್‌ ಪ್ರಯುಕ್ತ ಮುಸ್ಲಿಂ ಸಮುದಾತ ಸಾಗರದಲ್ಲಿ ಸೋಮವಾರ ಮೆರವಣಿಗೆ ಹಮ್ಮಿಕೊಂಡಿತ್ತು. ಆದರೆ, ಈ ವೇಳೆ ಹಿಂದುಗಳ ತೇಜೋವಧೆ ಹಾಗೂ ಬೆದರಿಕೆ ಒಡ್ಡುವ ರೀತಿಯಲ್ಲಿ ಕೆಲವರು ವರ್ತಿಸಿರುವುದನ್ನು ನಾವು ಖಂಡಿಸುತ್ತೇವೆ. ಇಂತಹ ಕುಚೇಷ್ಟೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳಾಗಿ, ದ್ವೇಷ ಮೂಡಲು ಕಾರಣವಾಗುತ್ತಿದೆ. ಹಿಂದು ವಿರೋಧಿ ಘೋಷಣೆ ಕೂಗಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ | CM Siddaramaiah : ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ; ಸಿದ್ದರಾಮಯ್ಯ ಎಚ್ಚರಿಕೆ

ಎನ್‌ಕೌಂಟರ್‌ ಸುದ್ದಿ ಸುಳ್ಳು, ಮುಸ್ಲಿಮರು ಬಳಸಿದ್ದು ಆಟಿಕೆ ತಲವಾರ್‌ ಎಂದ ಎಸ್ಪಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸರು ಎನ್‌ಕೌಂಟರ್‌ (Police Encounter) ಮಾಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು (Fake News) ಹರಡಿಸಲಾಗುತ್ತಿದೆ. ನಮ್ಮಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್‌ ಕುಮಾರ್‌ (Shivamogga SP Mithun Kumar) ಸ್ಪಷ್ಟಪಡಿಸಿದ್ದಾರೆ. ಈ ರೀತಿಯಾದ ಸುಳ್ಳು ಸುದ್ದಿಯನ್ನು ಫಾರ್ವರ್ಡ್‌ ಮಾಡಿ ಸಮಾಜದಲ್ಲಿ ಅಶಾಂತಿ ಹರಡಿಸುವ ಪ್ರಯತ್ನ ನಡೆಸಿದ ಅಜ್ಗರ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ತಿಳಿಸಿದರು. ಇದೇ ವೇಳೆ ಮುಸ್ಲಿಮರ ಮೆರವಣಿಗೆಯಲ್ಲಿ (Muslims Procession) ಬಳಸಿದ್ದು ಆಟಿಕೆಯ ತಲವಾರ್‌ (Toy Talwar) ಎಂದು ಅವರು ಸ್ಪಷ್ಟಪಡಿಸಿದರು.

ಶಿವಮೊಗ್ಗ ಪೊಲಿಸರು ಒಬ್ಬ ಆರೋಪಿಯನ್ನು ಎನ್‌ಕೌಂಟರ್‌ ಮಾಡಿದ್ದಾರೆ ಎಂದು ಹೇಳುವ ಚಿತ್ರ, ವರದಿ, ವಿಡಿಯೊಗಳು ಬೆಳಗ್ಗಿನಿಂದ ಹರಿದಾಡುತ್ತಿದ್ದವು. ಇದು ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ಸದ್ದು ಮಾಡಿತ್ತು. ಕೂಡಲೇ ಎಚ್ಚೆತ್ತುಕೊಂಡ ಶಿವಮೊಗ್ಗ ಪೊಲೀಸರು ಶಿವಮೊಗ್ಗದಲ್ಲಿ ಈ ಫೋಟೊ ಮತ್ತು ಸುದ್ದಿ ಹರಡಲು ಯಾರು ಕಾರಣ ಎಂದು ಹುಡುಕಾಡಿದರು. ಕೊನೆಗೆ ಈ ಚಿತ್ರ ಮತ್ತು ವರದಿಯನ್ನು ಫಾರ್ವರ್ಡ್‌ ಮಾಡಿದ್ದು ಅಜ್ಗರ್‌ ಎಂಬಾತ ಎಂದು ತಿಳಿದುಬಂತು. ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇಷ್ಟು ಮಾತ್ರವಲ್ಲ, ಯಾರೆಲ್ಲ ಈ ಸುಳ್ಳು ಸುದ್ದಿಯನ್ನು ಫಾರ್ವರ್ಡ್‌ ಮಾಡಿದ್ದಾರೋ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಸ್‌ಪಿ ಮಿಥುನ್‌ ಕುಮಾರ್‌ ತಿಳಿಸಿದರು. ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಯಾರೂ ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎಸ್‌ಪಿ

ʻʻಶಿವಮೊಗ್ಗದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದೆ. ಸಹಜ ಸ್ಥಿತಿ ಮರುಕಳಿಸಿದೆ. ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ 24 ಕೇಸು ದಾಖಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಎಲ್ಲೆಡೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಯಾರೂ ಕೂಡ ವದಂತಿಗೆ ಕಿವಿಗೊಡಬೇಡಿ. ಸಾರ್ವಜನಿಕರು ಸುಳ್ಳು ಸುದ್ದಿ ನಂಬಬೇಡಿʼʼ ಎಂದು ವಿನಂತಿಸಿರುವ ಎಸ್‌ಪಿ ಮಿಥುನ್‌ ಕುಮಾರ್‌ ಅವರು, ಇನ್ನೂ ಹಲವರನ್ನು ಬಂಧಿಸಲಿದ್ದೇವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆ ಇಲ್ಲ. ಹೊರಗಿನಿಂದ ಬಂದವರ ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿವೆ. ಯಾರು ಕಾರಣಕರ್ತರಿದ್ದಾರೆ ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆʼʼ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: Shivamogga Violence : ಶಿವಮೊಗ್ಗ ಗಲಭೆ ವೇಳೆ ಕಾಣಿಸಿಕೊಂಡ ಹೊರ ಜಿಲ್ಲೆ ಕಾರುಗಳ ರಹಸ್ಯ ಬಯಲು

ಮೆರವಣಿಗೆಯಲ್ಲಿ ಜಳಪಿಸಿದ ಕತ್ತಿ ಒರಿಜಿನಲ್‌ ಅಲ್ಲ, ಆಟಿಕೆ

ಮಚ್ಚು, ಲಾಂಗ್‌ ತೋರಿಸಿದವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು, ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದು ಬಂದಿದೆ. ಆಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ತಿಳಿಸುತ್ತೇನೆ. ಆದರೆ, ಯಾವುದೇ ಸುಳ್ಳು ಸುದ್ದಿ ವಿಡಿಯೋಗಳನ್ನು ನಂಬಬೇಡಿ ಎಂದು ಅವರು ಹೇಳಿದರು.

ʻʻರಾಗಿಗುಡ್ಡದಲ್ಲಿ ಮೆರವಣಿಗೆ ದಿನ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗುವುದುʼʼ ಎಂದು ಕೂಡಾ ಎಚ್ಚರಿಕೆ ನೀಡಿದರು.

Continue Reading

ಕರ್ನಾಟಕ

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

Old Pension Scheme : ರಾಜ್ಯದಲ್ಲೇ ಸದ್ಯವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

VISTARANEWS.COM


on

Edited by

Old Pension Scheme Madhu Bangarappa
Koo

ಮೈಸೂರು: ರಾಜ್ಯದಲ್ಲಿ ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿಯಾಗಲಿದೆ. ಈ ಮೂಲಕ ಸದ್ಯವೇ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ (Good News for Govt Employees) ಸಿಗಲಿದೆ ಎಂದು ಶಿಕ್ಷಣ ಸಚಿವ (Education Minister) ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ (Congress manifesto) ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡುವುದಾಗಿ ಹೇಳಿತ್ತು. ಅದರಂತೆ ನಡೆದುಕೊಳ್ಳಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯ (New Pension Scheme) ವಿರುದ್ಧ ದೊಡ್ಡ ಮಟ್ಟದ ಆಕ್ರೋಶವಿದೆ. ಹಳೆಯ ಪಿಂಚಣಿ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಆಗಾಗ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಕಳೆದ ಚುನಾವಣೆಯ ಸಂದರ್ಭದಲ್ಲೇ ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ ಮಂಡಿಸಿದ್ದರು. ಬಿಜೆಪಿ ಈ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವನ್ನು ತಳೆದಿರಲಿಲ್ಲ. ಆದರೆ, ಕಾಂಗ್ರೆಸ್‌ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವುದಾಗಿ ಪ್ರಕಟಿಸಿತ್ತು. ಇದೀಗ ಪಕ್ಷ ಗೆಲುವು ಸಾಧಿಸಿದ್ದರಿಂದ ಅದು ಆ ಬೇಡಿಕೆಯನ್ನು ಈಡೇರಿಸಲಿದೆ ಎಂದು ಮಧು ಬಂಗಾರಪ್ಪ ಶಿಕ್ಷಕರಿಗೆ ಭರವಸೆ ನೀಡಿದ್ದಾರೆ.

ಮುಂದಿನ ವರ್ಷದಿಂದ 600 ಕರ್ನಾಟಕ ಪಬ್ಲಿಕ್‌ ಸ್ಕೂಲ್

‌ರಾಜ್ಯದಲ್ಲಿ ಮುಂದಿನ ವರ್ಷದಿಂದ 600 ಹೊಸ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್‌) ತೆರೆಯಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ಸೋಮವಾರ ವಿಶ್ವನಾಥಪುರದಲ್ಲಿ ಹೇಳಿದರು. ಜಿಲ್ಲಾಡಳಿತ ಮತ್ತು ಜಿಪಂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೆಪಿಎಸ್‌ ಶಾಲೆಯ ಆವರಣದಲ್ಲಿ ʻನನ್ನ ಶಾಲೆ ನನ್ನ ಕೊಡುಗೆʼಯಡಿಯಲ್ಲಿ ಸಿಎಸ್‌ಆರ್‌ ಅನುದಾನದಲ್ಲಿ ಮಾದರಿ ಸರಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಎಸ್‌ಆರ್‌ ಅನುದಾನದಡಿಯಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರಕಾರದ ಪ್ರಯತ್ನಗಳು ಕಾರ್ಯರೂಪದಲ್ಲಿದೆ. 1 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಹಾಗೂ ಮೂಲ ಸೌಲಭ್ಯಗಳನ್ನು ಒಳಗೊಂಡ 600 ಕೆ.ಪಿ.ಎಸ್‌ ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುವುದು. ಮುಂದಿನ 5 ವರ್ಷಗಳಲ್ಲಿಎರಡು ಗ್ರಾಮಗಳಿಗೆ ಒಂದರಂತೆ 2000 ಕೆ.ಪಿ.ಎಸ್‌ ಶಾಲೆಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು.

ಇದನ್ನೂ ಓದಿ: Shivamogga Violence : ನಾವು ತ್ರಿಶೂಲ ಹಿಡ್ಕೊಳಲ್ವಾ? ಹಾಗೆ ಅವರು ತಲ್ವಾರ್‌ ಹಿಡಿದಿದ್ದಾರೆ ಅಷ್ಟೆ; ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿಮೂಲಸೌಲಭ್ಯ ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರಕಾರದ ಜವಾಬ್ದಾರಿಯಾಗಿದೆ . ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ ಎಂದು ವಿವರಿಸಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Continue Reading
Advertisement
Students on the road
ಕರ್ನಾಟಕ3 mins ago

School Timings: ಶಾಲೆಗಳ ಸಮಯ ಬದಲಾವಣೆ; ಅ.5ಕ್ಕೆ ಸಭೆ ಕರೆದ ಶಿಕ್ಷಣ ಇಲಾಖೆ

Small Saving
ದೇಶ5 mins ago

Money Guide: ಸಣ್ಣ ಉಳಿತಾಯದಿಂದ ದೊಡ್ಡ ಮೊತ್ತ! ಯಾವ ಸ್ಕೀಮ್‌ನಲ್ಲಿ ಬಡ್ಡಿ ಜಾಸ್ತಿ?

salman
ಬಾಲಿವುಡ್22 mins ago

Salman Khan: ಬರ್ತ್‌ ಡೇ ಪಾರ್ಟಿಯಲ್ಲಿ ಸಲ್ಮಾನ್‌ ಸಖತ್ ಡ್ಯಾನ್ಸ್! ಅಭಿಮಾನಿಗಳಿಗೆ ನಟನ ಆರೋಗ್ಯದ್ದೇ ಚಿಂತೆ

caste census repot image
ಕರ್ನಾಟಕ36 mins ago

Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?

Sachin tendulkar
ಕ್ರಿಕೆಟ್38 mins ago

ICC World Cup 2023 : ಕ್ರಿಕೆಟ್​ ದೇವರು ಸಚಿನ್​ಗೆ ಕ್ರಿಕೆಟ್​​ ವಿಶ್ವಕಪ್​ನ ವಿಶೇಷ ಗೌರವ

Eid Milad procession
ಕರ್ನಾಟಕ1 hour ago

Sagara News: ಸಾಗರದಲ್ಲಿ ತಲ್ವಾರ್‌ ಝಳಪಿಸಿ, ಹಿಂದು ವಿರೋಧಿ ಘೋಷಣೆ; ಮೂವರ ಬಂಧನ

gandhi
ಬಾಲಿವುಡ್1 hour ago

Gandhi Jayanti: ಗಾಂಧಿ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡಿದ್ದೆ; ಬೊಮನ್‌ ಇರಾನಿ

Maharashtra News, another hospital witnessed for 10 patients death
ದೇಶ1 hour ago

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Arshad Nadeem
ಕ್ರೀಡೆ1 hour ago

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

rashmika
South Cinema2 hours ago

Rashmika Mandanna: ಮತ್ತೊಮ್ಮೆ ʼರಂಜಿತಮೆʼ, ʼಸಾಮಿʼ ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ5 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ6 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ16 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ1 day ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌