ಕರ್ನಾಟಕ
ವಿಸ್ತಾರ ಸಾಹಿತ್ಯ ಸಂಭ್ರಮ: ಮೇ 27, 28ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನೀವು ಬರಲೇಬೇಕಾದ ಕಾರ್ಯಕ್ರಮ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಸ್ತಾರ ನ್ಯೂಸ್ ಎರಡು ದಿನಗಳ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದೆ. ಅಲ್ಲಿ ಏನೇನಿರುತ್ತವೆ? ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು: ಕಳೆದ ವರ್ಷದ ನವೆಂಬರ್ನಲ್ಲಿ ʼವಿಸ್ತಾರ ಕನ್ನಡ ಸಂಭ್ರಮʼ ಕಾರ್ಯಕ್ರಮದ ಮೂಲಕ ಜನಮನ ಗೆದ್ದಿದ್ದ ವಿಸ್ತಾರ ನ್ಯೂಸ್ ಈಗ ಎರಡು ದಿನಗಳ ವಿಸ್ತಾರ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾಹಿತ್ಯ, ಹಾಡು, ಸಂಗೀತ, ನಾಟಕ, ಯಕ್ಷಗಾನ, ಉಪಯುಕ್ತ ಗೋಷ್ಠಿ, ಹಾಸ್ಯ, ಪುಸ್ತಕ ಮೇಳ, ಆಹಾರ ಮೇಳ, ಫ್ಯಾಷನ್ ಶೋ, ಮಕ್ಕಳಿಗೆ ಸ್ಪರ್ಧೆ ಇತ್ಯಾದಿ ಮನೋಲ್ಲಾಸದ ಅಪರೂಪದ ಕಾರ್ಯಕ್ರಮ ಇದಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 27 ಮತ್ತು 28ರಂದು ಬೆಳಗ್ಗೆ 9ರಿಂದ ರಾತ್ರಿ 12ರವರೆಗೆ ಈ ಕಾರ್ಯಕ್ರಮ ನಡೆಯಲಿದೆ.
ಪ್ರವೇಶ ಉಚಿತವಾಗಿದ್ದು, ಮೊದಲೇ ಹೆಸರು ನೋಂದಾಯಿಸಿಕೊಂಡವರಿಗೆ
ಪುಸ್ತಕ ಖರೀದಿ ವೇಳೆ ಶೇ.15 ರಿಯಾಯಿತಿ ಮತ್ತು ವಿಶೇಷ ನೆನಪಿನ ಕಾಣಿಕೆ ಸಿಗಲಿದೆ.
ಏನೇನು ಕಾರ್ಯಕ್ರಮ?
ಮೇ 27ರ ಶನಿವಾರ ಬೆಳಗ್ಗೆ 9ರಿಂದ 10ರವರೆಗೆ “ಗೀತ ಬೆಳಗುʼ ಕಾರ್ಯಕ್ರಮದಲ್ಲಿ ಸರಿಗಮಪ ಸೀಸನ್ 19ರ ವಿಜೇತೆ ಕುಮಾರಿ ಪ್ರಗತಿ ಬಡಿಗೇರ್, ಬಸವರಾಜ್ ಬಡಿಗೇರ್ ಮತ್ತು ಪ್ರತೀಕ್ಷಾ ಬಡಿಗೇರ್ ಗಾಯನವಿದೆ.
ವಿಸ್ತಾರ ಸಾಹಿತ್ಯ ಸಂಭ್ರಮವನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಖ್ಯಾತ ಕವಿ ಡಾ. ಎಚ್. ಎಸ್ ವೆಂಕಟೇಶಮೂರ್ತಿ, ಅದಮ್ಯ ಚೇತನ ಟ್ರಸ್ಟ್ ಅಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್, ಖ್ಯಾತ ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್, ಖ್ಯಾತ ಚಲನಚಿತ್ರ ನಟಿ ಆಶಾ ಭಟ್ ಅವರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12ರಿಂದ 1ರವರೆಗೆ “ಇಂಗ್ಲಿಷ್ ಅಲೆ – ಕನ್ನಡ ಬೆಳೆ” – ಮಕ್ಕಳಲ್ಲಿ ಕನ್ನಡ ಓದಿನ ಆಸಕ್ತಿ ಮೂಡಿಸುವುದು ಹೇಗೆ? ವಿಷಯದ ಕುರಿತು ಮೊದಲ ಗೋಷ್ಠಿ ನಡೆಯಲಿದೆ.
“ಕನ್ನಡ ಓದಿನ ಹೊಸ ಮಾಧ್ಯಮಗಳು” ಕುರಿತು ವಸಂತ್ ಶೆಟ್ಟಿ, ಮೈಲಾಂಗ್ ಸಂಸ್ಥೆಯ ಸಹ ಸಂಸ್ಥಾಪಕರು; “ಮಕ್ಕಳಲ್ಲಿ ಕನ್ನಡದ ಆಕರ್ಷಣೆ” ಕುರಿತು ವಂದನಾ ರೈ, ಸೃಜನಶೀಲ ಶಿಕ್ಷಕಿ; “ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ” ಕುರಿತು ಉನ್ನತ ಶಿಕ್ಷಣ ಪರಿಷತ್ ಮಾಜಿ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ ಮಾತನಾಡಲಿದ್ದಾರೆ. ಭಾಷಾ ತಜ್ಞರಾದ ಮೇಟಿ ಮಲ್ಲಿಕಾರ್ಜುನ ಅವರು ಗೋಷ್ಠಿ ನಿರ್ವಹಿಸಲಿದ್ದಾರೆ.
ಮಧ್ಯಾಹ್ನ 1.30ರಿಂದ 2.30ರವರೆಗೆ “ಸಾಹಿತಿಗಳ ಬದುಕಿನ ರಸಪ್ರಸಂಗಗಳು” ಎಂಬ ಕುತೂಹಕರ ಗೋಷ್ಠಿ ನಡೆಯಲಿದೆ. ಖಾತ್ಯ ಕತೆಗಾರ ಅಬ್ದುಲ್ ರಶೀದ್, ಜನಪ್ರಿಯ ಹಾಸ್ಯ ಲೇಖಕರಾದ ಭುವನೇಶ್ವರಿ ಹೆಗಡೆ ಮತ್ತು ದುಂಡಿರಾಜ್ ಅವರು ರಸ ಪ್ರಸಂಗಗಳನ್ನು ಪ್ರಸ್ತಾಪ ಮಾಡಲಿದ್ದಾರೆ. ಜನಪ್ರಿಯ ಲೇಖಕ ಜೋಗಿ ಅವರು ಪ್ರಸಂಗ ನಿರ್ವಹಣೆ ಮಾಡಲಿದ್ದಾರೆ.
ಮಧ್ಯಾಹ್ನ 3ರಿಂದ 4ರವರೆಗೆ “ಗತ ಕತೆಯ ಹೊಸ ವೈಭವ” – ಮರುಕಳಿಸುತ್ತಿರುವ ಪುರಾಣ, ಚರಿತ್ರೆ, ಜನಪದ ಕತೆಗಳು ಕುರಿತ ವಿಶೇಷ ಗೋಷ್ಠಿ ನಡೆಯಲಿದೆ.
ಚರಿತ್ರೆಯಲ್ಲಿ ಅಡಗಿದ ರೋಚಕ ಸಂಗತಿಗಳು: ಕೆ.ಎನ್ ಗಣೇಶಯ್ಯ, ಖ್ಯಾತ ಕಾದಂಬರಿಕಾರ, ಐತಿಹಾಸಿಕ ಕತೆ ಬರೆಯುವ ಮೊದಲಿನ ಸಂಶೋಧನೆ: ಗಜಾನನ ಶರ್ಮ, ಖ್ಯಾತ ಕಾದಂಬರಿಕಾರ, ಚರಿತ್ರೆಯ ಮರು ನಿರೂಪಣೆಯ ಸಮಸ್ಯೆ, ಸವಾಲು: ಆಶಾದೇವಿ, ಖ್ಯಾತ ವಿಮರ್ಶಕಿ ಈ ಮೂವರು ಮಾತನಾಡಲಿದ್ದಾರೆ. ಖ್ಯಾತ ವಿಮರ್ಶಕ ಎಚ್ ದಂಡಪ್ಪ ಅವರು ಗೋಷ್ಠಿ ನಿರ್ವಹಣೆ ಮಾಡಲಿದ್ದಾರೆ.
ಚಾಟ್ ಜಿಪಿಟಿ ಮುಂದಿನ ಕತೆಗಾರ!
ಸಂಜೆ 4.30ರಿಂದ 5.30ರವರೆಗೆ ಚಾಟ್ ಜಿಪಿಟಿ ಮುಂದಿನ ಕತೆಗಾರ! – ಕನ್ನಡ ಸಾಹಿತ್ಯ ಮತ್ತು ತಂತ್ರಜ್ಞಾನ ಕುರಿತ ಮಹತ್ವದ ಚರ್ಚೆ ನಡೆಯಲಿದೆ. ಐಟಿ ಪರಿಣತ ರತೀಶ್ ರತ್ನಕರ, ಕನ್ನಡ ಸಾಹಿತ್ಯ ಡಿಜಿಟಲೀಕರಣ ಪರಿಣತ ಓಂಶಿವಪ್ರಕಾಶ್ ಎಚ್ ಎಲ್ ಮತ್ತು ಸಾಫ್ಟ್ವೇರ್ ಉದ್ಯೋಗಿ, ಕತೆಗಾರ ಮಧು ವೈ ಎನ್ ಅವರು ಈ ವಿಷಯದ ಕುರಿತು ಬೆಳಕು ಚೆಲ್ಲಲಿದ್ದಾರೆ. ಏಮ್ ಹೈ ಕನ್ಸಲ್ಟಿಂಗ್ ಸಿಇಒ ಎನ್ ರವಿಶಂಕರ್ ಅವರು ಗೋಷ್ಠಿ ನಿರ್ವಹಣೆ ಮಾಡಲಿದ್ದಾರೆ.
ಸಂಜೆ 6ರಿಂದ 7.30ರವರೆಗೆ ಚಿತ್ರ ಗೀತೆ ಹಿಂದಿನ ವಿಚಿತ್ರ ಕತೆ ಎಂಬ ಆಸಕ್ತಿಕರ ಗೋಷ್ಠಿ ಇದೆ. ಖ್ಯಾತ ಗೀತ ರಚನೆಕಾರರಾದ ಡಾ. ನಾಗೇಂದ್ರ ಪ್ರಸಾದ್ ಮತ್ತು ಕವಿರಾಜ್ ಭಾಗವಹಿಸುತ್ತಾರೆ. ಶಮಿತಾ ಮಲ್ನಾಡ್ ಮತ್ತು ಕಂಬದ ರಂಗಯ್ಯ ಅವರು ಜನಪ್ರಿಯ ಗೀತೆಗಳನ್ನು ಹಾಡಲಿದ್ದಾರೆ.
ಸೋಜಿಗದ ಹಾಡುಗಳು
ರಾತ್ರಿ 8.00ರಿಂದ 9.30ರವರೆಗೆ ಅನನ್ಯಾ ಭಟ್ ಮತ್ತು ತಂಡದವರಿಂದ ಅಮೋಘ ಸಂಗೀತ ರಾತ್ರಿ ನಡೆಯಲಿದೆ. ರಾತ್ರಿ 10ರಿಂದ 12 ಗಂಟೆಯವರೆಗೆ ಹೇರಂಜಾಲು ಯಕ್ಷ ಬಳಗ ಹಾಗೂ ಟೀಮ್ ಉತ್ಸಾಹಿ, ಬೆಂಗಳೂರು ತಂಡದ ಆಶ್ರಯದಲ್ಲಿ ಹೆಸರಾಂತ ಕಲಾವಿದರ ʼಮಹಾಮಂತ್ರಿ ದುಷ್ಟಬುದ್ಧಿʼ ಎಂಬ ಯಕ್ಷಗಾನ ಪ್ರಸಂಗ ನಡೆಯಲಿದೆ.
ಮೇ 28ರ ಭಾನುವಾರ ಬೆಳಗ್ಗೆ 9ರಿಂದ 10ರವರೆಗೆ ಭಾವ ಸಂಪದ – ಸಿ. ಅಶ್ವತ್ಥ್ ಸಂಯೋಜನೆಯ ಪ್ರಸಿದ್ಧ ಕವಿಗಳ ಭಾವಗೀತೆಗಳ ಗಾಯನ. ಹಾಡುವವರು: ರಾಮಚಂದ್ರ ಹಡಪದ್, ಸಂಗೀತ ನಿರ್ದೇಶಕ, ಗಾಯಕ. ಶರಧಿ ಪಾಟೀಲ್, ಸರಿಗಮಪ ಖ್ಯಾತಿಯ ಗಾಯಕಿ.
ಬೆಳಗ್ಗೆ 10.00ರಿಂದ 11.00ರವರೆಗೆ ಕನ್ನಡ ಸಾಹಿತ್ಯಕ್ಕೆ ಭಕ್ತಿಯ ಹೊಳಪು ಕುರಿತು ಸಂವಾದ. ಮಾತನಾಡುವವರು: ಲಕ್ಷ್ಮೀಶ ತೋಳ್ಪಾಡಿ, ಚಿಂತಕರು, ಖ್ಯಾತ ವಾಗ್ಮಿ. ಗಿರಿಜಾ ರೈಕ್ವ, ಲೇಖಕಿ, ಸಂಶೋಧಕಿ.
ಮಧ್ಯಾಹ್ನ 12.00ರಿಂದ 1.00ರವರೆಗೆ “ಅಲ್ಲಿಂದಿಲ್ಲಿಗೆ ಇಲ್ಲಿಂದಲ್ಲಿಗೆʼ (ಕನ್ನಡ ಮತ್ತು ಇತರ ಭಾಷೆಗಳ ನಡುವೆ ಸಾಹಿತ್ಯ ವಿನಿಮಯ) ಗೋಷ್ಠಿ. ಮಾತನಾಡುವವರು: ಇಂಗ್ಲಿಷ್ – ಕನ್ನಡ: ಸಂಯುಕ್ತಾ ಪುಲಿಗಲ್ (ಇಂಗ್ಷಿಷ್). ತಮಿಳು – ಕನ್ನಡ: ನಲ್ಲತಂಬಿ (ತಮಿಳು). ತೆಲುಗು- ಕನ್ನಡ: ಅಜಯ್ ವರ್ಮಾ ಅಲ್ಲೂರಿ (ತೆಲುಗು). ಮಲಯಾಳಂ – ಕನ್ನಡ: ಪಾರ್ವತಿ ಐತಾಳ್ (ಮಲಯಾಳಂ). ಖ್ಯಾತ ಸಾಹಿತಿ ವಸುಧೇಂದ್ರ ಅವರು ಗೋಷ್ಠಿ ನಿರ್ವಹಿಸಲಿದ್ದಾರೆ.
ಮಧ್ಯಾಹ್ನ 1.30ರಿಂದ 2.30ರವರೆಗೆ ಕಿರುತೆರೆ ಬರಹ, ನಾನಾ ತರಹ! – ಅವಕಾಶ ಮತ್ತು ಸವಾಲು ಕುರಿತ ಉಪಯುಕ್ತ ಮಾತುಕತೆ. ಕಿರುತೆರೆ ಕತೆಗಳು, ಆಗ-ಈಗ ಕುರಿತು ನಟಿ, ನಿರ್ದೇಶಕಿ, ನಿರ್ಮಾಪಕಿ ಸಪ್ನ ಕೃಷ್ಣ; ನಟ, ಬರಹಗಾರ, ನಿರ್ದೇಶಕ ಒಬ್ಬರೇ ಆಗುವುದರ ಲಾಭ ನಷ್ಟದ ಕುರಿತು ನಟ, ಲೇಖಕ, ನಿರ್ದೇಶಕ ಅನಿರುದ್ಧ್, ಕಿರುತೆರೆ ಬರಹದ ಗಳಿಕೆ ಕುರಿತು ಕಿರುತೆರೆ ಬರಹಗಾರ ಸತ್ಯಕಿ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಕಿರುತೆರೆ ಬರಹಗಾರ್ತಿ ಸುಷ್ಮ ಮೂಡಬಿದ್ರಿ ಈ ಗೋಷ್ಠಿಯನ್ನು ನಿರ್ವಹಿಸಲಿದ್ದಾರೆ.
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ
ಮಧ್ಯಾಹ್ನ 3.00ರಿಂದ 4.00ರವರೆಗೆ ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ ವಿತರಣೆ ನಡೆಯಲಿದೆ. 1180 ಕತೆಗಳಲ್ಲಿ ಆಯ್ಕೆಯಾದ ಟಾಪ್ 25 ಕತೆಗಾರರು ಭಾಗವಹಿಸಲಿದ್ದಾರೆ. ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬಹುಮಾನ ವಿತರಣೆ ಮಾಡಲಿದ್ದಾರೆ.
ಕಲಬುರಗಿಯ ಶ್ರೀ ಸಿದ್ದಲಿಂಗೇಶ್ವರ ಬುಕ್ ಡಿಪೊ ಮತ್ತು ಪ್ರಕಾಶನದ ಮಾಲೀಕರಾದ ಬಸವರಾಜ ಕೊನೇಕ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರಾದ ಎಂ ಆರ್ ವೆಂಕಟೇಶ್ ಮತ್ತು ವಿ 2 ಹೋಲ್ಡಿಂಗ್ಸ್ ಹೌಸಿಂಗ್ ಡೆವಲಪ್ಮೆಂಟ್ ಪ್ರೈ. ಲಿ ಮುಖ್ಯಸ್ಥರಾದ ಡಾ. ವೆಂಕಟರಮಣ ರೆಡ್ಡಿ ಪಿ ಎಲ್ ಅವರು ಭಾಗಿಯಾಗಲಿದ್ದಾರೆ.
ಹೊಸತಲೆಮಾರಿನ ಕನ್ನಡ ಧ್ವನಿಗಳು
ಸಂಜೆ 4.30ರಿಂದ 5.30ರವರೆಗೆ ನಡೆಯಲಿರುವ “ಹೊಸತಲೆಮಾರಿನ ಕನ್ನಡ ಧ್ವನಿಗಳುʼʼ ಕುರಿತ ವಿಶಿಷ್ಟ ಗೋಷ್ಠಿಯಲ್ಲಿ ರ್ಯಾಪರ್ ಆಲ್ ಓಕೆ ಅಲೋಕ್, ವಿಡಿಯೋ ಜಾಕಿ ನಿರಂಜನ್ ದೇಶಪಾಂಡೆ, ಯೂಟ್ಯೂಬರ್ ರಘು Vine Store ಮತ್ತು ಹೆಸರಾಂತ ಆರ್ ಜೆ ದಿವ್ಯಾ ಅವರು ಭಾಗಿಯಾಗಲಿದ್ದಾರೆ.
ಸಮಾರೋಪ ಸಮಾರಂಭ
ಸಂಜೆ 6.00ರಿಂದ 7.30ರವರೆಗೆ ಸಮಾರೋಪ ಸಮಾರಂಭ ನಡೆಯಲಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಖ್ಯಾತ ಚಲನಚಿತ್ರ ನಟ ಗಣೇಶ್ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್ ಆಳ್ವ ಭಾಗವಹಿಸುತ್ತಾರೆ.
ರಘು ದೀಕ್ಷಿತ್ ಸಂಗೀತ ಉತ್ಸವ
ರಾತ್ರಿ 8.00ರಿಂದ 9.30ರವರೆಗೆ ರಘು ದೀಕ್ಷಿತ್ ಸಂಗೀತ ಉತ್ಸವ ನಡೆಯಲಿದೆ. ತತ್ವಪದ, ಜನಪದ, ಸಿನಿ ಗೀತೆಗಳ ವಿಶಿಷ್ಟ ಕಾರ್ಯಕ್ರಮ ಇದಾಗಲಿದೆ.
ಸಂಸ ಬಯಲು ರಂಗಮಂದಿರದಲ್ಲೂ ಕಾರ್ಯಕ್ರಮ
ಮೇ 27, ಶನಿವಾರ ಸಂಜೆ 5ರಿಂದ 6.30ರವರೆಗೆ ಮೈಸೂರಿನ ಅರಿವು ಶಾಲೆಯ ಮಕ್ಕಳಿಂದ ʼಸ್ಮಶಾನ ಕುರುಕ್ಷೇತ್ರಂʼ ನಾಟಕ ನಡೆಯಲಿದೆ.
ಸಂಜೆ 7.00ರಿಂದ 8.00ರವರೆಗೆ ನಾಡಿನ ವಸ್ತ್ರ ವೈವಿಧ್ಯ ಪ್ರದರ್ಶನ ಇರಲಿದ್ದು, ಖ್ಯಾತ ಮಾಡೆಲ್ಗಳಿಂದ ವಿಭಿನ್ನ ಫ್ಯಾಷನ್ ಶೋ ನಡೆಯಲಿದೆ.
ಮೇ 28ರ ಭಾನುವಾರ ಸಂಜೆ 5ರಿಂದ 6ರವರೆಗೆ ಖ್ಯಾತ ಸ್ಟ್ಯಾಂಡಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ ನಗೆಯ ಚಟಾಕಿ ಹಾರಿಸಲಿದ್ದಾರೆ.
ನಯನ ಸಭಾಂಗಣದಲ್ಲಿ ಏನೇನು?
ಮೇ 27ರ ಶನಿವಾರ ಮಧ್ಯಾಹ್ನ 12ರಿಂದ 1ರವರೆಗೆ “ಆಡಳಿತದಲ್ಲಿ ಕನ್ನಡʼ ಕುರಿತು ಸಂವಾದ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಡಾ. ಮನು ಬಳಿಗಾರ್, ಅರಣ್ಯಾಧಿಕಾರಿ ಹಿಮಾ ಗೌತಮ್, ಆದಾಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ದರ್ಶನ್ ಕುಮಾರ್ ಎಚ್ ಜಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಭಾಗಿಯಾಗಲಿದ್ದಾರೆ. ಹಿರಿಯ ಪತ್ರಕರ್ತ ಭಾಸ್ಕರ ರಾವ್ ಕಾರ್ಯಕ್ರಮ ನಿರ್ವಹಿಸಲಿದ್ದಾರೆ.
ಸಂಜೆ 4ರಿಂದ 5ರವರೆಗೆ “ಜಗದ ಎಲ್ಲಿದ್ದರೂ ನಾವು ಕನ್ನಡಿಗರು” ಕುರಿತ ಸಂವಾದದಲ್ಲಿ ಅಮೆರಿಕದ ಶ್ರೀವತ್ಸ ಜೋಶಿ, ಗುರುಪ್ರಸಾದ್ ಕಾಗಿನೆಲೆ, ಬ್ರಿಟನ್ನ ಡಾ. ಶಿವಪ್ರಸಾದ್ ಮತ್ತು ದುಬೈಯ ಆರತಿ ಘಟಿಕಾರ್ ಮತ್ತು ಕತಾರ್ನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಮತ್ತು ಅಮೆರಿಕದ ಎಂ ಆರ್ ದತ್ತಾತ್ರಿ ಭಾಗವಹಿಸುತ್ತಾರೆ.
ಮೇ 28ರ ಭಾನುವಾರ ಬೆಳಗ್ಗೆ 10.00ರಿಂದ 11.00ರವರೆಗೆ ನಡೆಯುವ ಕನ್ನಡ ಉದ್ಯಮಿಗಳ ಸಕ್ಸೆಸ್ ಸ್ಟೋರಿ ಗೋಷ್ಠಿಯಲ್ಲಿ ಜೆ. ಕ್ರಾಸ್ಟಾ, ಚೇರ್ಮನ್, ಎಲ್ ಸ್ಕ್ವೇರ್ ಇಕೋ ಪ್ರಾಡಕ್ಟ್; ದಿವ್ಯಾ ಎಸ್, ಮ್ಯಾನೇಜಿಂಗ್ ಡೈರೆಕ್ಟರ್, ರಾಮೆಶ್ವರಂ ಕೆಫೆ; ರಾಮನಾಥ್ ಭಟ್, ವ್ಯವಸ್ಥಾಪಕ ನಿರ್ದೇಶಕರು. ರಿಪೋಸ್ ಮತ್ತು ಎಚ್, ಆರ್, ಪ್ರಭಾಕರ್, ಟ್ಯಾಕ್ಸ್ ಅಂಡ್ ಅಕೌಂಟಿಂಗ್ ಸರ್ವೀಸ್ ಕಂ. ಇವರು ಭಾಗಿಯಾಗಿ ಮಾತನಾಡುತ್ತಾರೆ.
ಮೇ 28ರ ಭಾನುವಾರ ಬೆಳಗ್ಗೆ 11.30ರಿಂದ 12.30ರವರೆಗೆ ನಡೆಯುವ “ಕನ್ನಡದಲ್ಲಿ ಸಾಹಿತ್ಯೇತರ ಕೃತಿಗಳ ಸುಗ್ಗಿʼ ಸಂವಾದದಲ್ಲಿ ಆರ್ಥಿಕ ತಜ್ಞರಾದ ರಂಗಸ್ವಾಮಿ ಮೂಕನಹಳ್ಳಿ, ಅಮ್ಮ ಹೇಳಿದ ಎಂಟು ಸುಳ್ಳುಗಳು ಖ್ಯಾತಿಯ ಜನಪ್ರಿಯ ಲೇಖಕ ಎ ಆರ್ ಮಣಿಕಾಂತ್, ಖ್ಯಾತ ಕಾದಂಬರಿಗಾರ್ತಿ ಡಾ. ಶಾಂತಲಾ, ವಿಸ್ತಾರ ನ್ಯೂಸ್ ಕಾರ್ಯ ನಿರ್ವಾಹಕ ಸಂಪಾದಕ ಶರತ್ ಎಂ. ಎಸ್ ಭಾಗವಹಿಸುತ್ತಾರೆ. ವಿಸ್ತಾರ ನ್ಯೂಸ್ ಆಂಕರ್ ಅಭಿಷೇಕ್ ರಾಮಪ್ಪ ಅವರು ಈ ಗೋಷ್ಠಿ ನಿರ್ವಹಿಸಲಿದ್ದಾರೆ.
ಇನ್ನಿತರ ವಿಶೇಷ ಆಕರ್ಷಣೆಗಳೇನು?
ಪುಸ್ತಕ ಮೇಳ: ನಾಡಿನ ಪ್ರತಿಷ್ಠಿತ ಪುಸ್ತಕ ಮಳಿಗೆಗಳಲ್ಲಿ ಸಾವಿರಾರು ಪುಸ್ತಕಗಳ ಆಯ್ಕೆ. ವಿಶೇಷ ರಿಯಾಯಿತಿ.
ಕಾರ್ಟೂನ್ ಫೆಸ್ಟಿವಲ್: ಆಹ್ವಾನಿತ ಕಲಾವಿದರಿಂದ ಸ್ಥಳದಲ್ಲೇ ಕಾರ್ಟೂನ್, ಪೆನ್ಸಿಲ್ ಸ್ಕೆಚ್, ವ್ಯಕ್ತಿಚಿತ್ರಗಳ ರಚನೆ ಇತ್ಯಾದಿ.
ಜತೆಗೆ, ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳಿರುತ್ತವೆ.
ಸವಿ ರುಚಿ: ರಾಜ್ಯದ ವಿವಿಧೆಡೆಯ ಖಾದ್ಯ ತಿನಿಸುಗಳ ಸಂಗಮ.
ಹೆಸರು ನೋಂದಾಯಿಸಿ ರಿಯಾಯಿತಿ ಪಡೆಯಿರಿ
ಎರಡು ದಿನಗಳ ಈ ಸಾಹಿತ್ಯ ಸಂಭ್ರಮ ವಿಭಿನ್ನವಾಗಿ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು, ಮೊದಲೇ ಹೆಸರು ನೋಂದಾಯಿಸಿಕೊಂಡವರಿಗೆ ಪುಸ್ತಕ ಖರೀದಿಯಲ್ಲಿ ಶೇ.15ರಷ್ಟು ರಿಯಾಯಿತಿ ಮತ್ತು ನೆನಪಿನ ಕಾಣಿಕೆ ಸಿಗಲಿದೆ. ಈಗಾಗಲೇ ರಾಜ್ಯದ ನಾನಾ ಕಡೆಗಳಿಂದ ನೂರಾರು ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ.
ಎರಡು ದಿನಗಳ ಈ ವಿಶಿಷ್ಟ ಮತ್ತು ಉಪಯುಕ್ತ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತ ಆಗಮಿಸಿ ಎಂದು ವಿಸ್ತಾರ ನ್ಯೂಸ್ ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮತ್ತು ವಿಸ್ತಾರ ಮೀಡಿಯಾ ಸಂಸ್ಥೆಯ ಚೇರ್ಮನ್, ಎಂಡಿ ಎಚ್ ವಿ ಧರ್ಮೇಶ್ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ವಿಸ್ತಾರ ನ್ಯೂಸ್ ಯುಗಾದಿ ಕಥಾಸ್ಪರ್ಧೆ: ಇತಿಹಾಸ ಬರೆದ ಕಥಾಪ್ರವಾಹ; ಟಾಪ್ 25 ಕಥೆಗಾರರ ಪಟ್ಟಿ ಇಲ್ಲಿದೆ!
ಕರ್ನಾಟಕ
Abhishek Ambareesh Reception: ಅಭಿ- ಅವಿವಾ ಅದ್ಧೂರಿ ಆರತಕ್ಷತೆ; ಲೈವ್ ವಿಡಿಯೊ ಇಲ್ಲಿದೆ
Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಟ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿಡಪ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದ ಗಣ್ಯರು, ಪ್ರಮುಖ ರಾಜಕೀಯ ನಾಯಕರು ಆಗಮಿಸಿ ದಂಪತಿಗೆ ಶುಭ ಕೋರಿದ್ದಾರೆ.
ಕರ್ನಾಟಕ
ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Congress Guarantee: ಬಾಡಿಗೆಯವರಿಗೂ ಸಿಗುತ್ತೆ ಫ್ರೀ ಕರೆಂಟ್ ಎಂದ ಸರ್ಕಾರ: ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ಮಾಸಿಕ 200 ಯುನಿಟ್ ಉಚಿತ ವಿದ್ಯುತ್ ಯೋಜನೆಯು ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಡಿಗೆ ಮನೆಯವರು ತಮ್ಮ ಆಧಾರ್ ಸಂಖ್ಯೆ, ಬಾಡಿಗೆ ಕರಾರು ಪತ್ರ, ವೋಟರ್ ಐಡಿಯನ್ನು ಆರ್ಆರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕು. ಆಗ ಅವರಿಗೂ ಯೋಜನೆ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!
5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್ ಗಿಮಿಕ್ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್ ಗಿಮಿಕ್ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Caste Census: ಮತ್ತೆ ಜಾತಿ ಹುತ್ತಕ್ಕೆ ಕೈಹಾಕಿದ ಸಿದ್ದರಾಮಯ್ಯ?: ಒಕ್ಕಲಿಗ- ವೀರಶೈವ ಲಿಂಗಾಯತರು ವಿರೋಧಿಸಿದ್ದ ವರದಿ ಸ್ವೀಕಾರ?
ಈ ಹಿಂದೆ ಒಮ್ಮೆ ರಾಜ್ಯದಲ್ಲಿ ವಿವಾದಕ್ಕೀಡಾಗಿ ತಣ್ಣಗಾಗಿದ್ದ ವಿಚಾರವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ನಡೆಸಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿ ಗಣತಿ) ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿಗೆ ರಾಜ್ಯದ ಎರಡು ಪ್ರಬಲ ಜಾತಿಗಳಾದ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್ಜಾಯ್ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Weather Report: ಬಿಪರ್ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
ಬಿಪರ್ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Wrestlers Protest: ಅನುರಾಗ್ ಠಾಕೂರ್ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷನ್ ಸಿಂಗ್ ಶರಣ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದೆ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಸಚಿವ ಅನುರಾಗ್ ಠಾಕೂರ್ ಅವರ ನಿವಾಸಕ್ಕೆ ತೆರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ; ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. WTC Final 2023: ಆಡುವ ಬಳಗದಿಂದ ಅಶ್ವಿನ್ ಕೈ ಬಿಡಲು ಕಾರಣ ಇದಂತೆ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆರ್. ಅಶ್ವಿನ್ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್ ಶರ್ಮ ಅವರು ಅಶ್ವಿನ್ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. The Kerala Story: ʼದಿ ಕೇರಳ ಸ್ಟೋರಿʼ ನೋಡಲು ಸಾಧ್ವಿ ಪ್ರಜ್ಞಾ ಕರೆದೊಯ್ದು ಯುವತಿ ಮುಸ್ಲಿಂ ಲವರ್ ಜತೆ ಪರಾರಿ!
ಭೋಪಾಲ್ನ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಮುಸ್ಲಿಂ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ. ಆದರೆ ಸ್ವಾರಸ್ಯಕರ ಸಂಗತಿ ಬೇರೊಂದಿದೆ. ಈಕೆಯನ್ನು ಬಿಜೆಪಿಯ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ʼದಿ ಕೇರಳ ಸ್ಟೋರಿʼ (The Kerala Story) ಫಿಲಂ ನೋಡಲು ಕರೆದೊಯ್ದಿದ್ದಳು ಹಾಗೂ ಮುಸ್ಲಿಂ ಬಾಯ್ಫ್ರೆಂಡ್ನಿಂದ ದೂರವಿರುವಂತೆ ತಾಕೀತು ಮಾಡಿದ್ದಳು ಎಂಬುದೇ ಅದು! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ
Shivamogga News: ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಪಕ್ಷವು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ಜವಾಬ್ದಾರಿಯನ್ನು ನೀಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಮತ್ತು ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಮಕ್ಕಳಿಗೆ ದೊರೆಯಬೇಕು ಎಂಬ ಅಭಿಲಾಷೆಯನ್ನು ಅವರು ಹೊಂದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೊರಬ: ಕ್ಷೇತ್ರದಲ್ಲಿ ಮಹಿಳಾ (women) ಮತ್ತು ಯುವ ಮತದಾರರು (youth voters) ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರಿದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ (Votes) ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಮಧು ಬಂಗಾರಪ್ಪ ತಿಳಿಸಿದರು.
ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ಕಲ್ಯಾಣ ಮಂಟಪದಲ್ಲಿ ಬುಧವಾರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Season Fashion: ಸೆಲೆಬ್ರೆಟಿ ಲುಕ್ಗಾಗಿ ಹೈ ಫ್ಯಾಷನ್ ಲೋಕಕ್ಕೆ ಬಂತು ಒನ್ ಶೋಲ್ಡರ್ ಡ್ರೆಸ್!
ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದ ಜನತೆ ಕೊಟ್ಟ ಮಾತಿನಂತೆ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿದ್ದಾರೆ, ಕ್ಷೇತ್ರದ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಪ್ರಚಾರದ ವೇಳೆ ಜನತೆ ಅನೇಕ ಸಮಸ್ಯೆಗಳನ್ನು ಸಹ ತಮ್ಮ ಗಮನಕ್ಕೆ ತಂದಿದ್ದರು. ಅವುಗಳನ್ನು ಪತಿ ಮಧು ಬಂಗಾರಪ್ಪ ಅವರಿಗೆ ತಿಳಿಸಿ, ಹಂತ-ಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲು ಕೇಳಿಕೊಳ್ಳುತ್ತೇನೆ ಎಂದರು.
ಪಕ್ಷವು ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ಜವಾಬ್ದಾರಿಯನ್ನು ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಮತ್ತು ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಮಕ್ಕಳಿಗೆ ದೊರೆಯಬೇಕು ಎಂಬ ಅಭಿಲಾಷೆಯನ್ನು ಅವರು ಹೊಂದಿದ್ದಾರೆ. ಕ್ಷೇತ್ರದ ಅಭಿವೃದ್ಧಿಯು ಸೇರಿದಂತೆ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವರು ಎಂದು ತಿಳಿಸಿದರು.
ಸರ್ಕಾರವು ಸಹ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಕಾರ್ಡ್ನಲ್ಲಿನ ಅಂಶಗಳನ್ನು ಜಾರಿಗೆ ತರುತ್ತಿದೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದು ಮತ್ತು ಆನವಟ್ಟಿ-ಸೊರಬ ಭಾಗದ ಯುವಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉತ್ಸಾಹ ಹೊಂದಿದ್ದಾರೆ. ತಾವು ಸಹ ಮಧು ಬಂಗಾರಪ್ಪ ಅವರ ಜತೆಗಿದ್ದು, ಕ್ಷೇತ್ರದ ಜನತೆಯೊಂದಿಗೆ ಸದಾ ಇರುತ್ತೇನೆ ಮತ್ತು ಜನತೆಯ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ ಮಾತನಾಡಿ, ಕ್ಷೇತ್ರದ ಮಹಿಳಾ ಮತದಾರರು ಒಗ್ಗಟ್ಟಿನಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಪ್ರಚಾರಕ್ಕೆ ಪಕ್ಷದ ಮುಖಂಡರು ಸಹಕಾರ ನೀಡಿದರು. ಮುಖ್ಯವಾಗಿ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರಿಯರಾದ ಸುಜಾತಾ ತಿಲಕ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಮತ್ತು ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಅವರು ಕೈ ಜೋಡಿಸಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಯಿತು.
ಮಹಿಳಾ ಮತದಾರರನ್ನು ನಮ್ಮತ್ತ ಸೆಳೆಯಲು ಸಹಕಾರಿಯಾಗಿದ್ದು, ಇದರ ಪರಿಣಾಮ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಜನತೆ ಸಾಕಷ್ಟು ನಿರೀಕ್ಷೆಯೊಂದಿಗೆ ಮತ ಚಲಾಯಿಸಿದ್ದಾರೆ. ಜನತೆಯ ನಿರೀಕ್ಷೆಗಳನ್ನು ಕ್ರಮೇಣವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿತಾ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಲಾಯಿತು.
ಇದನ್ನೂ ಓದಿ: Sugar Vs Salt: ಸಕ್ಕರೆ ಮತ್ತು ಉಪ್ಪು: ಕಿಡ್ನಿಗೆ ಯಾವುದು ಹಿತಕರ?
ಈ ವೇಳೆ ಜಿಪಂ ಮಾಜಿ ಸದಸ್ಯೆ ರಾಜೇಶ್ವರಿ ಗಣಪತಿ, ತಾಪಂ ಮಾಜಿ ಸದಸ್ಯೆ ಜ್ಯೋತಿ ನಾರಾಯಣಪ್ಪ, ಪುರಸಭೆ ಸದಸ್ಯೆ ಪ್ರೇಮಾ, ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷೆ ಶಿಲ್ಪಾ ಗಿರೀಶ್ ಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಸದಸ್ಯರಾದ ಸರಿತಾ, ಲಕ್ಷ್ಮೀ ರವಿ, ಶ್ರೀಮತಿ ಚಂದ್ರಕಾಂತ್, ಮಹಿಳಾ ಪ್ರಮುಖರಾದ ಮಂಜುಳಾ ಕೆರಿಯಪ್ಪ, ಲಕ್ಷ್ಮಮ್ಮ, ಶಕುಂತಲಾ ಪಿ. ಶೇಟ್, ಎಂ. ಲಲಿತಾ, ಮುಖಂಡರಾದ ಜಯಶೀಲಗೌಡ, ಸುನೀಲ್ಗೌಡ, ಎನ್.ಜಿ. ನಾಗರಾಜ್, ಪ್ರದೀಪ್ ಬಾಡದಬೈಲು, ಎಂ.ಪಿ. ರತ್ನಾಕರ, ರೇಣುಕಾಪ್ರಸಾದ್, ಮಾರ್ಯಪ್ಪ ಬೆನ್ನೂರು, ಗಣೇಶ್ ಮರಡಿ, ಧರ್ಮಪ್ಪ ದ್ಯಾವಾಸ, ಸುಧಾಕರ ನಾಯ್ಕ್, ಪ್ರಶಾಂತ್ ನಾಯ್ಕ್ ಸೇರಿದಂತೆ ಇತರರಿದ್ದರು.
ಕರ್ನಾಟಕ
Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ
Tumkur News: ಶಿರಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಶೀಘ್ರವಾಗಿ ವೈದ್ಯರ ಕೊರತೆಯನ್ನು ನೀಗಿಸಲು ಕ್ರಮವಹಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಶಿರಾ: ನಗರದ ಸಾರ್ವಜನಿಕ ಆಸ್ಪತ್ರೆಗೆ (Public Hospital) ಶಾಸಕ ಟಿ.ಬಿ.ಜಯಚಂದ್ರ ಭೇಟಿ (visit) ನೀಡಿ, ಪರಿಶೀಲಿಸಿ ರೋಗಿಗಳ ಸಮಸ್ಯೆಗಳನ್ನು (Patient problem) ಆಲಿಸಿದರು.
ಆಸ್ಪತ್ರೆಯಲ್ಲಿ ಅಗತ್ಯವಿರುವ ಔಷಧಗಳನ್ನು ತರಿಸಿಕೊಂಡು ರೋಗಿಗಳಿಗೆ ನೀಡಬೇಕು. ಹೊರಗೆ ತರುವಂತೆ ಚೀಟಿ ಬರೆಯುವುದನ್ನು ನಿಲ್ಲಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: Season Fashion: ಸೆಲೆಬ್ರೆಟಿ ಲುಕ್ಗಾಗಿ ಹೈ ಫ್ಯಾಷನ್ ಲೋಕಕ್ಕೆ ಬಂತು ಒನ್ ಶೋಲ್ಡರ್ ಡ್ರೆಸ್!
ಆಸ್ಪತ್ರೆಯಲ್ಲಿ ಸ್ಚಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ ಅವರು, ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಶೀಘ್ರವಾಗಿ ವೈದ್ಯರ ಕೊರತೆಯನ್ನು ನೀಗಿಸಲು ಕ್ರಮವಹಿಸುವುದಾಗಿ ಇದೇ ವೇಳೆ ತಿಳಿಸಿದರು.
ಶಿರಾ ಆಸ್ಪತ್ರೆಯಲ್ಲಿ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕದ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿದ್ದು ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಇತ್ತೀಚೆಗೆ ಯುವ ಜನತೆ ಹೃದಯದ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ಆತಂಕವನ್ನು ಉಂಟು ಮಾಡುವ ವಿಷಯವಾಗಿದೆ ಎಂದ ಅವರು, ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಚಿಕಿತ್ಸಾ ಕೇಂದ್ರ ಮತ್ತು 30 ಹಾಸಿಗೆಯ ಆಸ್ಪತ್ರೆಯನ್ನು ನಗರದಲ್ಲಿ ತೆರೆಯಲು ಚಿಂತನೆ ನಡೆಸಿದ್ದು, ಶೀಘ್ರವಾಗಿ ಅನುಷ್ಠಾನಕ್ಕೆ ತರುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: Sugar Vs Salt: ಸಕ್ಕರೆ ಮತ್ತು ಉಪ್ಪು: ಕಿಡ್ನಿಗೆ ಯಾವುದು ಹಿತಕರ?
ಬಳಿಕ ನಗರದ ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕ್ಷೇತ್ರದ ವ್ಯಾಪ್ತಿಯ ಹಲವಾರು ಮಾಹಿತಿ ವಿನಿಮಯ ಮಾಡಿಕೊಂಡರು.
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ10 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ12 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಕರ್ನಾಟಕ24 hours ago
Fraud Case: ಬೆಳದಿಂಗಳ ಬಾಲೆಯ ಮೋಹಕ್ಕೆ ಬಿದ್ದರೇ ಸ್ವಾಮೀಜಿ? 35 ಲಕ್ಷ ರೂಪಾಯಿ ದೋಖಾ!
-
ಅಂಕಣ23 hours ago
ವಿಧಾನಸೌಧ ರೌಂಡ್ಸ್: ರೌಂಡ್ ಟೇಬಲ್ ಸ್ನೇಹಿತರು ಮತ್ತು ವಿಧಾನಸೌಧದಲ್ಲಿ ಬದಲಾಗದ 40 % ಬ್ರಾಂಡ್!
-
ಉತ್ತರ ಕನ್ನಡ20 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ15 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ22 hours ago
Karwar Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು