Loksabha 2024 Modi Marks Card Vistara News SurveyLoksabha 2024: Vistara Survey: ಮೋದಿ ಸರ್ಕಾರಕ್ಕೆ ಕನ್ನಡಿಗರು ಎಷ್ಟು ಅಂಕ ಕೊಟ್ಟರು?: ಇಲ್ಲಿದೆ ಮೋದಿ ಮಾರ್ಕ್ಸ್‌ ಕಾರ್ಡ್‌ - Vistara News

ಕರ್ನಾಟಕ

Loksabha 2024: Vistara Survey: ಮೋದಿ ಸರ್ಕಾರಕ್ಕೆ ಕನ್ನಡಿಗರು ಎಷ್ಟು ಅಂಕ ಕೊಟ್ಟರು?: ಇಲ್ಲಿದೆ ಮೋದಿ ಮಾರ್ಕ್ಸ್‌ ಕಾರ್ಡ್‌

‘ನಮೋ’ ಸರ್ಕಾರದ ಸಾಧನೆಗಳು, ಕಾರ್ಯವೈಖರಿ ಬಗ್ಗೆ ಸಮೀಕ್ಷೆ ಇದಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಸ್ತಾರ ನ್ಯೂಸ್‌ ಸಮೀಕ್ಷೆ ನಡೆಸಿದೆ.

VISTARANEWS.COM


on

Modi Marks Card Vistara News Survey
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 9 ವರ್ಷ ಪೂರೈಸಿದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ. ಮೋದಿ ಸರ್ಕಾರದ 9 ವರ್ಷಗಳ ಆಡಳಿತ ಜನರಿಗೆ ತೃಪ್ತಿ ತಂದಿದ್ಯಾ..? ಕರುನಾಡ ಮಂದಿ BJP ಕಾರ್ಯವೈಖರಿಗೆ ಕೊಡುವ ಮಾರ್ಕ್ಸ್‌ ಎಷ್ಟು..? ಕೇಂದ್ರದ ಪ್ಲಸ್‌ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು..? ಈ ಬಗ್ಗೆ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಿಂದ ವಿಸ್ತಾರ ವರದಿಗಾರರು ನಡೆಸಿರುವ ಮೆಗಾ ಸಮೀಕ್ಷೆ ಇಲ್ಲಿದೆ.

ರಾಜ್ಯದೆಲ್ಲೆಡೆ ಅತಿ ವರದಿಗಾರರ ಬೃಹತ್‌ ಜಾಲ ಹೊಂದಿರುವ ವಿಸ್ತಾರ ನ್ಯೂಸ್‌, ಸಾಮಾನ್ಯ ಜನರ ಮುಂದೆ ಒಟ್ಟು 10 ಪ್ರಶ್ನೆಗಳನ್ನಿಟ್ಟು ಆ ಮೂಲಕ ಅವರ ಮನದಾಳವನ್ನು ಅರಿಯುವ ಪ್ರಯತ್ನ ಮಾಡಿದೆ. ಈಗತಾನೆ ವಿಧಾನಸಭೆ ಚುನಾವಣೆಗಳು ನಡೆದು ಕಾಂಗ್ರೆಸ್‌ ಸರ್ಕಾರ ರಚನೆಯಾಗಿರುವ ಬೆನ್ನಿಗೇ ಈ ಸಮೀಕ್ಷೆ ನಡೆದಿರುವುದು ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಜತೆಗೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳಿಗೂ ಮಾರ್ಗಸೂಚಿಯಾಗಲಿದೆ. ಸಮೀಕ್ಷೆಗೆ ಸಜನರ ಸ್ಪಂದನೆ ಹಾಗೂ ಅದರ ಕಾರಣಗಳು ಈ ಕೆಳಕಂಡಂತಿವೆ.

ಪ್ರಶ್ನೆ 01: ನರೇಂದ್ರ ಮೋದಿಯವರ 9 ವರ್ಷಗಳ ಆಡಳಿತ ಹೇಗಿದೆ..?

Vistara news survey about mood of the karnataka people about Narendra Modi Govt before Loksabha 2024

2014 ರ ಮೇ 26 ರಂದು ನರೇಂದ್ರ ಮೋದಿ ಪ್ರಥಮ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. 2019 ರ ಮೇ 30 ರಂದು ಎರಡನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಮೇಲಿನ ಪ್ರಶ್ನೆಗೆ ಶೇ.36.7 ರಷ್ಟು ಜನ ಮೋದಿ ಆಡಳಿತ ಅತ್ಯುತ್ತಮವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಶೇ.30.1 ರಷ್ಟು ಜನ ಮೋದಿಯವರದ್ದು ಉತ್ತಮ ಆಡಳಿತ ಎಂದಿದ್ದಾರೆ. ಸಾಧಾರಣವಾಗಿದೆ ಮೋದಿ ಆಡಳಿತ ಎಂದವರ ಸಂಖ್ಯೆ ಶೇ.21.4ರಷ್ಟಿದೆ.

ಮೋದಿ ಆಡಳಿತ ಸರಿಯಿಲ್ಲ… ಕಳಪೆಯಾಗಿದೆ ಎನ್ನುವರರ ಸಂಖ್ಯೆ ಶೇ.11.8ರಷ್ಟಿದೆ. ಈ ಅಂಕಿ-ಅಂಶವನ್ನ ಗಮನಿಸಿದ್ರೆ ಮೋದಿ ಆಡಳಿತದ ಬಗ್ಗೆ ಬಹುತೇಕರಿಗೆ ಅಂದ್ರೆ ಶೇ.88.2ರಷ್ಟು ಜನರಿಗೆ ಸಮಾಧಾನ ಇದ್ದಂತೆ ಕಾಣುತ್ತಿದೆ.

ಪ್ರಶ್ನೆ 02: ಮೋದಿ ಸರ್ಕಾರದ ಯೋಜನೆಗಳ ಲಾಭ ನಿಮಗೆ ಸಿಕ್ಕಿದೆಯಾ..?

Vistara news survey about mood of the karnataka people about Narendra Modi Govt before Loksabha 2024

ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಅದರಲ್ಲಿ ಮುಖ್ಯವಾಗಿ ಸ್ವಚ್ಛ ಭಾರತ್​ ಅಭಿಯಾನ, ಡಿಜಿಟಲ್​ ಇಂಡಿಯಾ, ಮೇಕ್​ ಇನ್​ ಇಂಡಿಯಾ, ಸ್ಕಿಲ್​ ಇಂಡಿಯಾ, ಮುದ್ರಾ ಯೋಜನೆ, ಜನ್​ಧನ್​ ಅಕೌಂಟ್​, ಸ್ಟಾರ್ಟ್​ ಅಪ್​ ಇಂಡಿಯಾ, ರೈತ ಸಮ್ಮಾನ್​, ಪ್ರಧಾನ್​ ಮಂತ್ರಿ ಆವಾಸ್​ ಯೋಜನೆ, ಉಜ್ವಲ ಯೋಜನೆ, ಪ್ರಧಾನಮಂತ್ರಿ ಫಸಲ್​ ಬಿಮಾ ಯೋಜನೆ, ಆಯುಷ್ಮಾನ್​ ಭಾರತ್​, ಜನೌಷಧಿ ಕೇಂದ್ರ, ಅಟಲ್​ ಪಿಂಚಣಿ, ವಯೋವಂದನ ಯೋಜನೆ, ಮನೆ ಮನೆಗೂ ನೀರು ಪ್ರಮುಖವಾದವು.

ಪ್ರಶ್ನೆ 03: ಮೋದಿ ಸರ್ಕಾರದ ಸಚಿವರ ಕಾರ್ಯವೈಖರಿ ಹೇಗಿದೆ..?

Vistara news survey about mood of the karnataka people about Narendra Modi Govt before Loksabha 2024

ಮೋದಿ ಸರ್ಕಾರದ ಸಚಿವರು ಹೇಗೆ ಕೆಲಸ ಮಾಡ್ತಿದ್ದಾರೆ ಅಂತ ಕೇಳಿದ್ರೆ ಅತ್ಯುತ್ತಮ ಮತ್ತು ಉತ್ತಮ ಅಂತ ಶೇ.56.6 ರಷ್ಟು ಜನ ಹೇಳಿದ್ದಾರೆ. ಶೇ.20.9 ರಷ್ಟು ಜನ ಮಾತ್ರ ಉತ್ತಮವೂ ಅಲ್ಲ, ಕಳಪೆಯೂ ಅಲ್ಲ ಸಾಧಾರಣವಾಗಿ ಅವರ ಕೆಲಸ ಎಂದಿದ್ದಾರೆ. ಇನ್ನು ಶೇ.22.5ರಷ್ಟು ಜನ ಮಾತ್ರ ಮೋದಿ ಕ್ಯಾಬಿನೆಟ್​ ಕಾರ್ಯವೈಖರಿ ಕಳಪೆಯಾಗಿದೆ ಅಂತ ಹೇಳಿದ್ದಾರೆ.

ಮೋದಿ ಕೆಲಸದ ಬಗ್ಗೆ ಯಾರಿಗೂ ಚಕಾರವೆತ್ತದಿದ್ರೂ, ಅವರ ಕ್ಯಾಬಿನೆಟ್​ನ ಸಚಿವರ ಕಾರ್ಯದ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಸಚಿವರು ತಮ್ಮ ಖಾತೆಗಳನ್ನ ಉತ್ತಮವಾಗಿ ನಿಭಾಯಿಸುತ್ತಿದ್ರೂ, ಇನ್ನು ಇಲಾಖೆಗಳಲ್ಲಿ ಹೇಳಿಕೊಳ್ಳುವಂತಹ ಕೆಲಸ ಆಗ್ತಿಲ್ಲ ಎಂಬ ಹೇಳಿಕೆ ನೀಡಿದ್ದಾರೆ.

ಪ್ರಶ್ನೆ 04: ಮೋದಿ ಸರ್ಕಾರ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿದ್ಯಾ..?

Vistara news survey about mood of the karnataka people about Narendra Modi Govt before Loksabha 2024

ಕಳೆದ 9 ವರ್ಷಗಳಲ್ಲಿ ಕೇಂದ್ರ ಸರ್ಕಾರ ಬೆಲೆ ಏರಿಕೆಯನ್ನು ತಡೆಯುವಲ್ಲಿ ವಿಫಲವಾಗಿದೆ ಅಂತ ಶೇ.56.1 ರಷ್ಟು ಹೇಳಿದ್ದಾರೆ. ಇಲ್ಲ, ಸರ್ಕಾರ ಸಮರ್ಥವಾಗಿ ಬೆಲೆ ಏರಿಕೆ ತಡೆದಿದೆ ಅನ್ನೋವ್ರ ಸಂಖ್ಯೆ ಶೇ.43.9 ರಷ್ಟಿದೆ. ಗ್ಯಾಸ್​ ಸಿಲಿಂಡರ್​ ಬೆಲೆ ಏರಿಕೆ, ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ, ಬೇಳೆ, ಕಾಳುಗಳ ಬೆಲೆ ಏರಿಕೆ, ದಿನಸಿ ಪದಾರ್ಥಗಳ ಬೆಲೆ ಏರಿಕೆ, ಜನರ ದಿನನಿತ್ಯದ ವೆಚ್ಚ ಹೆಚ್ಚಳ ಆಗಿರುವುದರ ಬಗ್ಗೆ ಸಾಮಾನ್ಯ ಜನರಲ್ಲಿ ಅಸಮಧಾನ ಕಂಡುಬಂದಿದೆ.

ಪ್ರಶ್ನೆ 05: ಯೋಜನೆ ಜನರಿಗೆ ತಲುಪಿಸುವಲ್ಲಿ ಭ್ರಷ್ಟಾಚಾರ ಕಡಿಮೆ ಆಗಿದೆಯಾ..?

Vistara news survey about mood of the karnataka people about Narendra Modi Govt before Loksabha 2024

ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರುತ್ತಿದೆ. ಯಾವುದೇ ಯೋಜನೆ ಜನಸಾಮಾನ್ಯರಿಗೆ ತಲುಪಬೇಕಾದ್ರೆ ಭ್ರಷ್ಟಚಾರಕ್ಕೆ ಕಡಿವಾಣ ಬೀಳಬೇಕು. ಈ ಹಿನ್ನೆಲೆಯಲ್ಲಿ ಈ ಪ್ರಶ್ನೆಯನ್ನ ಜನರನ್ನ ಕೇಳಿದಾಗ, ಬಹುತೇಕರು ಅಂದ್ರೆ ಶೇ.79 ರಷ್ಟು ಜನ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಕಡಿಮೆ ಆಗಿದೆ ಎಂದಿದ್ದಾರೆ.

ನಾ ಖಾವೂಂಗ, ನಾ ಖಾನೇ ದೂಂಗಾ ಎಂದು ಹೇಳಿದ್ದ ಮೋದಿ ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾದಂತೆ ಕಾಣುತ್ತಿದೆ. ಇದಕ್ಕೆ ಮತ್ತೊಂದು ಪ್ರಮುಖ ಕಾರಣ ಎಂದರೆ ಡಿಜಿಟಲ್​ ಪೇಮೆಂಟ್​ ಸಿಸ್ಟಂ, ಜನ್​ಧನ್​ ಮೂಲಕ ಪ್ರತಿಯೊಬ್ಬರಿಗೂ ಬ್ಯಾಂಕ್​ ಅಕೌಂಟ್​ ಮಾಡಿಸಲಾಯಿತು. ಜನರ ಬ್ಯಾಂಕ್​ ಅಕೌಂಟ್​ಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಮೂಲಕ ಮಧ್ಯವರ್ತಿಗಳ ಹಾವಳಿಯನ್ನ ತಪ್ಪಿಸುವಲ್ಲಿ ಕೇಂದ್ರ ಯಶಸ್ವಿಯಾಯ್ತು.

ಪ್ರಶ್ನೆ 06: ಭಯೋತ್ಪಾದನೆ ತಡೆಯುವ ವಿಚಾರದಲ್ಲಿ ಸರ್ಕಾರದ ಕ್ರಮ ಹೇಗಿದೆ..?

Vistara news survey about mood of the karnataka people about Narendra Modi Govt before Loksabha 2024

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭಯೋತ್ಪಾದನೆ ತಡೆಯಲು ಮಹತ್ವದ ಕ್ರಮಗಳನ್ನ ತೆಗೆದುಕೊಂಡಿದೆ. ಕಳೆದ 9 ವರ್ಷಗಳಲ್ಲಿ ಮೋದಿ ಸರ್ಕಾರ ಭಯೋತ್ಪಾದಕರ ವಿರುದ್ದ ತೆಗೆದುಕೊಂಡ ಕ್ರಮಗಳು ಅನೇಕ ಇವೆ.

  • ಮ್ಯಾನ್ಮಾರ್​​ ಸರ್ಜಿಕಲ್​ ದಾಳಿ – 2015ರಲ್ಲಿ ಆಪರೇಶನ್​ ಹಾಟ್​ ಪರ್ಸ್ಯೂಟ್​ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮ್ಯಾನ್ಮಾರ್​ ಗಡಿಯೊಳಕ್ಕೆ ನುಗ್ಗಿ ಎನ್​ಎಸ್​ಸಿಎನ್​-ಕೆ ಸಂಘಟನೆಯ 38 ಉಗ್ರರನ್ನ ಸದೆಬಡಿದಿತ್ತು.
  • ಪಾಕ್​ ಸರ್ಜಿಕಲ್​ ಸ್ಟ್ರೈಕ್​ – 2016 ರ ಸೆ.18ರಂದು ಉರಿಯಲ್ಲಿ ಉಗ್ರರು ದಾಳಿ ನಡೆಸಿ 16 ಯೋಧರ ಸಾವಿಗೆ ಕಾರಣರಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಸೆ.29ರಂದು ಪಾಕಿಸ್ತಾನದಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಸುಮಾರು 70 ಉಗ್ರರನ್ನ ಕೊಂದುಹಾಕಿತು.
  • ಪಾಕ್​ ಏರ್​ಸ್ಟ್ರೈಕ್​ – 2019 ರ ಫೆ.14ರಂದು ಪುಲ್ವಾಮಾ ದಲ್ಲಿ ಪಾಕ್​ ಉಗ್ರರು ದಾಳಿ ಮಾಡಿ 40 ಯೋಧರನ್ನ ಬಲಿ ತೆಗೆದುಕೊಂಡಿದ್ದರು. ಇದರ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನದಲ್ಲಿದ್ದ ಉಗ್ರರ ಅಡಗುತಾಣ ಬಾಲಾಕೋಟ್​ ಮೇಲೆ ಭಾರತೀಯ ವಾಯುಸೇನೆ ಫೆ.26 ರಂದು ದಾಳಿ ನಡೆಸಿ ಉಗ್ರರು ತಾಣಗಳನ್ನ ಧ್ವಂಸಗೊಳಿಸಿತ್ತು.
  • ಡೋಕ್ಲಾಂ ಸಂಘರ್ಷ – 2017 ರಲ್ಲಿ ಚೀನಾದ ಯೋಧರು ಭಾರತದ ಗಡಿಯೊಳಗೆ ಬಂದು ಭಾರತ-ಭೂತಾನ್​-ಚೀನಾ ಗಡಿ ಡೋಕ್ಲಾಂನಲ್ಲಿ ರಸ್ತೆ ನಿರ್ಮಾಣಕ್ಕೆ ಯತ್ನಿಸಿದ್ದರು. ಆಗ ಸ್ಥಳಕ್ಕೆ ಧಾವಿಸಿದ ಭಾರತೀಯ ಸೇನೆ ಚೀನಾ ಸೈನಿಕರನ್ನು ಕಾಲ್ಕೀಳುವಂತೆ ಮಾಡಿದರು.
  • ಗಲ್ವಾನ್​ ಸಂಘರ್ಷ- 2020 ರ ಜೂನ್​ನಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಗಲ್ವಾನ್​ ನಲ್ಲಿ ಸಂಘರ್ಷ ಏರ್ಪಟ್ಟಿತ್ತು. ಲಾಠಿ ಮತ್ತು ಮುಷ್ಠಿಯುದ್ಧದಲ್ಲಿ 38 ಚೀನಿ ಯೋಧರು ಹತರಾದರು.
  • 2019 ರಲ್ಲಿ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಉಗ್ರರ ಉಪಟಳ ನಿಗ್ರಹಿಸಲು ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 2022 ರ ದಾಖಲೆಗಳ ಪ್ರಕಾರ 172 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇದರಲ್ಲಿ 42 ಪಾಕಿಸ್ತಾನದ ಉಗ್ರರೂ ಇದ್ದಾರೆ.

ಪ್ರಶ್ನೆ 07: ಕೊರೊನಾ ಸಂದರ್ಭದಲ್ಲಿ ಕೇಂದ್ರ ಹೇಗೆ ಕಾರ್ಯನಿರ್ವಹಿಸಿದೆ..?

Vistara news survey about mood of the karnataka people about Narendra Modi Govt before Loksabha 2024

ವಿಶ್ವವೇ ಕಂಡು ಕೇಳರಿಯದ ಆತಂಕಕ್ಕೆ ಈಡಾಗಿದ್ದು ಕೊವಿಡ್​ ಸಮಯದಲ್ಲಿ. ಕರೋನಾ ಹೆಮ್ಮಾರಿ ಜನರ ಜೀವ ತೆಗೆಯಲು ಶುರುಮಾಡಿದಾಗ ಅದರ ವಿರುದ್ಧ ಹೋರಾಡಲು ಲಸಿಕೆ ತಯಾರಿಸಲು ಮತ್ತು ಆದಷ್ಟು ಶೀಘ್ರ ಅದು ಜನರಿಗೆ ಸಿಗುವಂತೆ ಮಾಡಿದ ಹೆಗ್ಗಳಿಕೆ ಮೋದಿ ಸರ್ಕಾರದ್ದು. ಲಾಕ್​​ಡೌನ್​ ಹೇರಿದರೆ ದೇಶದ ಆರ್ಥಿಕತೆ ಹೇಗೆ ಎಂದು ಬಲಾಢ್ಯ ರಾಷ್ಟ್ರಗಳು ಯೋಚನೆ ಮಾಡುತ್ತಿದ್ದಾಗ ಭಾರತದಲ್ಲಿ ಲಾಕ್​ಡೌನ್​ ಘೋಷಣೆ ಮಾಡಿದರು. ಸಾಮಾನ್ಯ ಜನಜೀವನಕ್ಕೆ ಬಹಳ ತೊಂದರೆ ಆದರೂ, ದೇಶದ ಒಳಿತಿಗಾಗಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಜನರು ನಿಯಮ ಪಾಲನೆ ಮಾಡಿದರು.

ಈ ಸಮಯದಲ್ಲಿ ದೇಶದಲ್ಲಿ ಒಂದೂ ಪಿಪಿಇ ಕಿಟ್​ ತಯಾರಾಗುತ್ತಿರಲಿಲ್ಲ. ಎಲ್ಲವನ್ನೂ ಆಮದು ಮಾಡಲಾಗುತ್ತಿತ್ತು. ಆದರೆ ಮೋದಿ ಕರೆಗೆ ಹಾಗೂ ಸರ್ಕಾರದ ಬೆಂಬಲಕ್ಕೆ ಸ್ಪಂದಿಸಿದ ಭಾರತದ ಉದ್ಯಮ, ಗಾರ್ಮೆಂಟ್​ಗಳು ಪ್ರತಿನಿತ್ಯ 2ಲಕ್ಷ ಪಿಪಿಇ ಕಿಟ್​ ಉತ್ಪಾದಿಸುವ ಹಂತಕ್ಕೆ ತಲುಪಿತು. ಕೋವಿಡ್​ ಕಿಟ್​​ ಉತ್ಪಾದನೆಯಲ್ಲಿ ವಿಶ್ವದಲ್ಲೇ ಪ್ರಮುಖ ದೇಶವಾಯಿತು.

2020ರ ಮಾರ್ಚ್​​ನಲ್ಲಿ ಪಿಎಂ ಕೇರ್ಸ್​ ನಿಧಿ ಸ್ಥಾಪಿಸಿದರು. ಇದಕ್ಕೆ ದೇಶದ ಸಾಮಾನ್ಯ ಜನರು, ಉದ್ಯಮಿಗಳು, ಸರ್ಕಾರಿ ಉದ್ಯಮಿಗಳು ಸೇರಿ ಅನೇಕರು ದೇಣಿಗೆ ನೀಡಿದರು. ಪಿಎಂ ಕೇರ್ಸ್​ ನಿಧಿಯ ಮೂಲಕ ರಾಜ್ಯಗಳಲ್ಲಿ ಆಕ್ಸಿಜನ್​ ಉತ್ಪಾದನೆ ಘಟಕ ಸ್ಥಾಪನೆ ಮಾಡಲಾಯಿತು, ಲಕ್ಷಾಂತರ ಆಕ್ಸಿಜನ್​ ಕಾನ್ಸಂಟ್ರೇಟರ್​​ಗಳನ್ನು ಭಾರತದಲ್ಲೇ ಉತ್ಪಾದಿಸಿ ಹಂಚಲಾಯಿತು. ಪ್ರತಿ ಜಿಲ್ಲೆಯಲ್ಲೂ ಕೋವಿಡ್ ಕೇಂದ್ರ ತೆರೆಯಲಾಯಿತು. ವಿವಿಧ ವಿದೇಶಿ ಲಸಿಕಾ ಕಾಂಪನಿಗಳು ಹೆಚ್ಚಿನ ಹಣಕ್ಕೆ ತಮ್ಮ ಲಸಿಕೆ ಮಾರಲು ಹೊರಟಿದ್ದಾರೆ, ಸ್ವದೇಶಿ ಲಸಿಕೆಗೆ ಮೋದಿ ಒತ್ತು ನೀಡಿದರು.

ಒಂದಲ್ಲ ಎಂದು ಎರಡು ಲಸಿಕೆಗಳನ್ನು ದೇಶದಲ್ಲೇ ಉತ್ಪಾದನೆ ಮಡಲಾಯಿತು. ಕೋವಿನ್​ ಮೊಬೈಲ್​ ಆಪ್​ ಮೂಲಕ, ಸಂಪೂರ್ಣ ಪಾರದರ್ಶಕವಾಗಿ ಲಸಿಕೆ ನೀಡಲಾಯಿತು. ಮೊದಲಿಗೆ ಶ್ರೀಮಂತರಿಗೆ, ರಾಜಕಾರಣಿಗಳಿಗೆ ನೀಡುವುದಾಗಲಿ, ಕಾಳಸಂತೆಯಲ್ಲಿ ಮಾರಾಟಕ್ಕೆ ಅವಕಾಶವಿಲ್ಲದಂತೆ ವಿತರಿಸಲಾಯಿತು. ಅಮೆರಿಕದಲ್ಲಿಯೂ ಕೈಬರೆಹದ ಲಸಿಕಾ ಪ್ರಮಾಣಪತ್ರ ನೀಡಿದರೆ ಭಾರತದಲ್ಲಿ ಡಿಜಿಟಲ್​​ ಪ್ರಮಾಣಪತ್ರ ನೀಡಲಾಯಿತು. ಇದು ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾಯಿತು. ತಮಗೆ ಅನನುಕೂಲವಾದರೂ, ತಮ್ಮ ಪ್ರೀತಿಪಾತ್ರರೇ ಅನೇಕರು ಮೃತಪಟ್ಟರೂ ಸರ್ಕಾರದ ಮೇಳೆ ಜನರ ವಿಶ್ವಾಸ ಉಳಿದಿದೆ. ಮೋದಿ ಸರ್ಕಾರ ತನ್ನ ಕೈಲಾದಷ್ಟು ಕೆಲಸ ಮಾಡಿದೆ ಎಂಬ ಭಾವನೆ ಇಲ್ಲಿ ಕಾಣುತ್ತಿದೆ.

ಪ್ರಶ್ನೆ 08: ನೋಟ್ ಬ್ಯಾನ್ ದೇಶದ ಆರ್ಥಿಕತೆಗೆ ಅನುಕೂಲವಾಗಿದೆಯೇ..?

Vistara news survey about mood of the karnataka people about Narendra Modi Govt before Loksabha 2024

2016ರ ನವೆಂಬರ್​​ 8 ರಂದು ರಾತ್ರಿ 8.15 ಗಂಟೆಗೆ ಟಿವಿ ಮುಂದೆ ಕಾಣಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಇಂದು ರಾತ್ರಿಯಿಂದಲೇ 500 ರೂ. ಹಾಗೂ 1000 ರೂ. ನೋಟುಗಳು ಮಾನ್ಯತೆಯನ್ನು ಕಳೆದುಕೊಳ್ಳುತ್ತವೆ ಎಂದು ಘೋಷಿಸಿದರು. ದೇಶದಲ್ಲಿ ಕಪ್ಪು ಹಣವನ್ನು ಮಟ್ಟ ಹಾಕುವ ಸಲುವಾಗಿ, ಭ್ರಷ್ಟಾಚಾರಕ್ಕೆ ಹಣ ನೀಡಿಕೆಯನ್ನು ತಡೆಯಲು ಈ ನೋಟು ಅಮಾನ್ಯೀಕರಣ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಮೋದಿ ಹೇಳಿದ್ದರು.

1000 ರೂ. ನೋಟು ಅನೇಕರ ಕೈಯಲ್ಲಿ ಇರಲಿಲ್ಲವಾದರೂ, 500 ರೂ. ನೋಟು ಸಾಮಾನ್ಯ ಜನರಲ್ಲೂ ಇತ್ತು, ಇದು ಆಘಾತಕ್ಕೆ ಕಾರಣವಾಯಿತು. ತಮ್ಮ ಬಳಿಯಿರುವ ಹಣವನ್ನು ಬದಲಾಯಿಸಿಕೊಳ್ಳಲು ಜನರು ಬ್ಯಾಂಕುಗಳ ಎದುರು ಸಾಲುಗಟ್ಟಿ ನಿಂತರು. ರೈಲ್ವೆ, ವಿಮಾನ ನಿಲ್ದಾಣ, ಸರ್ಕಾರಿ ಬಸ್​ ಟಿಕೆಟ್​ ಬುಕ್ಕಿಂಗ್​, ಆಸ್ಪತ್ರೆ ಹಾಗೂ ಪೆಟ್ರೋಲ್​ ಬಂಕ್​ಗಳಲ್ಲಿ ನವೆಂಬರ್​ 11ರ ವರೆಗೂ ಈ ನೋಟುಗಳನ್ನು ಬಳಸಲು ಅವಕಾಶವಿತ್ತು.

ಇತರೆ ದೇಶಗಳಲ್ಲೂ ಅಮಾನ್ಯೀಕರಣ ಮಡಲಾಗಿತ್ತು. 1984ರಲ್ಲಿ ಮುಹಮ್ಮದು ಬುಹಾರಿ ನೇತೃತ್ವದ ಸರ್ಕಾರ ಹೊಸ ನೋಟುಗಳನ್ನು ಪರಿಚಯಿಸಿ ಹಳೆ ನೋಟುಗಳನ್ನು ನಿಷೇಧಿಸಿತು. ಆದರೆ ಇದರಿಂದಾಗಿ ಹಣದುಬ್ಬರ ಹಾಗೂ ಸಾಲದ ಹೊರೆ ಹೆಚ್ಚಾಗಿ ಆರ್ಥಿಕತೆ ಕುಸಿಯಿತು. ಅಲ್ಲದೇ ಮುಹಮ್ಮದು ಬುಹಾರಿ ಸರ್ಕಾರ ಇದನ್ನು ನಿಭಾಯಿಸುವಲ್ಲಿ ವಿಫಲವಾಯಿತು.

1982ರಲ್ಲಿ ತೆರಿಗೆ ವಂಚಕರನ್ನು ತಡೆಯಲು ಘಾನಾ ದೇಶದಲ್ಲಿ 50 ಸಿಡಿ ನೋಟುಗಳನ್ನು ನಿಷೇಧ ಮಾಡಲಾಯಿತು. ಅಧಿಕ ದ್ರವ್ಯತೆ ಮತ್ತು ಭ್ರಷ್ಟಾಚಾರ ತಡೆಗಟ್ಟುವ ಗುರಿಯನ್ನು ಹೋದಲಾಗಿತ್ತು. ಇದು ದೇಶದ ಜನರು ಕಪ್ಪು ಮಾರುಕಟ್ಟೆ, ವಿದೇಶಿ ಕರೆನ್ಸಿ ಬೆಂಬಲಿಸಲು ಕಾರಣವಾಯಿತು. ಕರೆನ್ಸಿಗಾಗಿ ಕಪ್ಪುಹಣದ ಮಾರುಕಟ್ಟೆ ವ್ಯಾಪಕವಾಗಿ ಬೆಳೆಯಿತು. ಈ ಎಲ್ಲ ಅಂಶಗಳು ಅರ್ಥವ್ಯವಸ್ಥೆಯನ್ನು ದುರ್ಬಲನನ್ನಾಗಿಸಿತ್ತು. ಈ ರೀತಿ ಅನೇಕ ದೇಶಗಳಲ್ಲಿ ನೋಟು ಅಮಾನ್ಯೀಕರಣ ವಿಫಲವಾಗಿತ್ತು. ಭಾರತದಲ್ಲೂ ಅನೇಕ ಮಧ್ಯಮ ಕೈಗಾರಿಕೆಗಳು ಮುಚ್ಚಿದವು.

ಇಷ್ಟೆಲ್ಲ ಸಂಕಷ್ಟದ ನಂತರವೂ ಜನರು ಪ್ರಧಾನಿ ಮೋದಿಯವರ ಕುರಿತು ವಿಶ್ವಾಸ ವ್ಯಕ್ತಪಡಿಸಿದರು. ಮೋದಿ ದೇಶಕ್ಕಾಗಿ ಒಳ್ಳೆಯದನ್ನು ಮಾಡಿದ್ದಾರೆ, ಅವರಿಗೆ ನಾವು ಬೆಂಬಲಿಸುತ್ತೇವೆ ಎಂದರು. ಕೆಲವೆಡೆ ಕ್ಯೂನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿ ಮೃತಪಟ್ಟ ಘಟನೆಗಳೂ ನಡೆದವು. ಆಟೊಮೊಬೈಲ್​​, ಕೃಷಿ, ಕೈಗಾರಿಕೆ ಕ್ಷೇತ್ರಗಳಿಗೆ ಹಿನ್ನಡೆ ಆಯಿತು. ಆದರೆ ನೋಟು ಅಮಾನ್ಯೀಕರಣದ ಪರಿಣಾಮ ಡಿಜಿಟಲ್​ ವಹಿವಾಟು ಗಗನಕ್ಕೇರಿತು. ಡಿಜಿಟಲ್​ ವಹಿವಾಟು ಹೆಚ್ಚಾಗಿ, ಯುಪಿಐ ಬಳಕೆ ಸಾಮಾನ್ಯ ಜನರಿಗೆ, ತಳ್ಳುಗಾಡಿ ವ್ಯಾಪಾರಿಗಳಿಗೂ ಅಭ್ಯಾಸ ಆಯಿತು ಈ ಡಿಜಿಟಲ್​​​​ ವಾತಾವರಣವು ಕೋವಿಡ್​​- 19 ರ ಸಮಯದಲ್ಲಿ ಜನರನ್ನು ಕಾಪಾಡಿತು. ಹಣಕ್ಕಾಗಿ ಪರದಾಡುವುದನ್ನು ತಪ್ಪಿಸಿತು. ಹಾಗಾಗಿ ಜನರಿಗೆ ಕಷ್ಟವಾಗಿದ್ದರೂ, ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದೆ ಎಂಬ ಅಭಿಪ್ರಾಯ ಜನರಲ್ಲಿದೆ.

ಪ್ರಶ್ನೆ 09: ನರೇಂದ್ರ ಮೋದಿ ಅವಧಿಯಲ್ಲಿ ವಿದೇಶಾಂಗ ನೀತಿ ಹೇಗಿದೆ..?

Vistara news survey about mood of the karnataka people about Narendra Modi Govt before Loksabha 2024

ಭಾರತವನ್ನು ಇಂದು ವಿಶ್ವಗುರು ಎಂದು ಕರೆಯಲಾಗುತ್ತಿದೆ. ಇದಕ್ಕೆ ಕಾರಣ ಕಳೆದ 9 ವರ್ಷಗಳಲ್ಲಿ ಭಾರತ ವಿಶ್ವದರ್ಜೆಯಲ್ಲಿ ಕೈಗೊಂಡು ಕೆಲವು ಪ್ರಮುಖ ನಿರ್ಣಯಗಳು. ಅಮೆರಿಕ, ಇಂಗ್ಲೆಂಡ್​, ರಷ್ಯಾ, ಫ್ರಾನ್ಸ್, ಜರ್ಮನಿಯಂತಹ ಅಗ್ರಗಣ್ಯರಾಜ್ಯಗಳ ಜೊತೆಗೆ ಪಫುವಾ ನ್ಯೂಗಿನಿಯಾದಂತಹ ಸಣ್ಣಪುಟ್ಟ ರಾಷ್ಟ್ರಗಳ ಜೊತೆಯೂ ಉತ್ತರ ಬಾಂಧವ್ಯವನ್ನು ಭಾರತ ಹೊಂದಿದೆ.

ವ್ಯಾಕ್ಸಿನ್​ ಮೈತ್ರಿ – ಕೊವಿಡ್​ ವೇಳೆ ಸಣ್ಣಪುಟ್ಟ ರಾಷ್ಟ್ರಗಳು ಲಸಿಕೆ ಸಿಗದೆ ಪರದಾಡುತ್ತಿದ್ದಾಗ 100ಕ್ಕೂ ಹೆಚ್ಚು ದೇಶಗಳಿಗೆ 30 ಕೋಟಿ ವ್ಯಾಕ್ಸಿನ್​ನ್ನ ಭಾರತ ಉಚಿತವಾಗಿ ನೀಡಿತು. ಭಾರತ ತನ್ನ ಬದ್ಧವೈರಿ ಪಾಕಿಸ್ತಾನವನ್ನು ವಿಶ್ವಮಟ್ಟದಲ್ಲಿ ಮೂಲೆಗುಂಪು ಮಾಡಿತು. ಭಯೋತ್ಪಾದನೆಗೆ ಬೆಂಬಲ, ಹಣಕಾಸಿನ ನೆರವು ನೀಡುತ್ತಿರುವ ಕಾರಣಕ್ಕೆ ವಿಶ್ವದ ಪ್ರಮುಖ ವೇದಿಕೆಗಳಲ್ಲಿ ಪದೇಪದೆ ಪಾಕಿಸ್ತಾನದ ಮಾನ ಹರಾಜು ಹಾಕುವ ಮೂಲಕ ಮೂಲೆಗುಂಪು ಮಾಡಲಾಗಿದೆ. ಅಂತಾರಾಷ್ಟ್ರೀಯ ಬಿಕ್ಕಟ್ಟು, ಸಂಘರ್ಷಗಳ ವಿಚಾರ ಬಂದಾಗ ಮೋದಿ ಸರ್ಕಾರ ಭಾರತದ ಹಿತಾಸಕ್ತಿಗೆ ಮೊದಲ ಪ್ರಾಶಸ್ತ್ರ್ಯ ಕೊಡುತ್ತಿದೆ. ಉಕ್ರೇನ್​- ರಷ್ಯಾ ಯುದ್ಧದ ಸಂದರ್ಭದಲ್ಲಿ ಪಾಶ್ಚಾತ್ಯ ರಾಷ್ಟ್ರಗಳ ವಿರೋಧದ ನಡುವೆಯೂ ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳೋ ಮೂಲಕ ದಿಟ್ಟತನವನ್ನು ತೋರಿತು.

ಚೀನಾ ಭಾರತದ ಮೇಲೆ ದಾಳಿ ಮಾಡಲು ಮುಂದಾದಾಗ ಆ ದೇಶವನ್ನು ಸಮರ್ಥವಾಗಿ ಎದುರಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಶಕ್ತಿಯನ್ನ ಪ್ರದರ್ಶಿಸಿತು. ವಿದೇಶಾಂಗ ನೀತಿಯಲ್ಲಿ ಅನುಸರಿಸುತ್ತಿದ್ದ ಅಡ್ಡಗೋಡೆ ಮೇಲೆ ದೀಪವಿಡುವ ಸಂಪ್ರದಾಯಕ್ಕೆ ಬಹುತೇಕ ತಿಲಾಂಜಲಿ ಇಡಲಾಗಿದೆ. ಚೀನಾ ಇರಬಹುದು, ಪಾಕಿಸ್ತಾನ ಇರಬಹುದು ಅದರ ಕುರಿತು ಸ್ಪಷ್ಟ ಶಬ್ದಗಳಲ್ಲಿ ಖಂಡನೆ ಮಾಡಲಾಗುತ್ತಿದೆ.

ಪ್ರಶ್ನೆ 10: ಈಗ ಚುನಾವಣೆ ನಡೆದರೆ ಮೋದಿ ನೋಡಿ ಬಿಜೆಪಿಗೆ ಮತ ಹಾಕ್ತೀರಾ..?

Vistara news survey about mood of the karnataka people about Narendra Modi Govt before Loksabha 2024

ಕೇವಲ 3 ವಾರಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರ ಕಳೆದುಕೊಂಡು ಕೇವಲ 66 ಸ್ಥಾನಗಳಿಗಷ್ಟೇ ಸೀಮಿತವಾಗಿತ್ತು. ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್​ 135 ಸೀಟುಗಳನ್ನ ಗೆಲ್ಲೋ ಮೂಲಕ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಈ ಸರ್ವೇಯಲ್ಲಿ ಜನ ಹೇಳಿರೋದನ್ನ ಗಮನಿಸಿದ್ರೆ, ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತದ ಬಗ್ಗೆ ವಿರೋಧ ಎದ್ದು ಕಾಣುತ್ತಿದೆ.

ಆದ್ರೆ ಇದೇ ವೇಳೆ ನರೇಂದ್ರ ಮೋದಿ ಬಗ್ಗೆ ತದ್ವಿರುದ್ದವಾದ ನಿಲುವನ್ನು ಹೊಂದಿರುವುದು ಕಾಣುತ್ತಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಉತ್ತಮ ಅಭಿಪ್ರಾಯ ಕಂಡುಬಂದಿದೆ. ಕರ್ನಾಟಕದ ಜನರು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ವಿಭಿನ್ನವಾಗಿ ಮತ ನೀಡುತ್ತಾರೆ. ಎರಡೂ ಚುನಾವಣೆಯಲ್ಲಿ ವಿಭಿನ್ನ ವಿಚಾರಗಳನ್ನು ಪರಿಗಣಿಸುತ್ತಾರೆ ಎನ್ನುವುದು 2013 ಹಾಗೂ 2014ರಲ್ಲೂ ಸಾಬೀತಾಗಿದೆ. 2013ರಲ್ಲಿ ಕಾಂಗ್ರೆಸ್​​​​​ ಭರ್ಜರಿ ಜನಾದೇಶದೊಂದಿಗೆ ಸರ್ಕಾರ ರಚನೆ ಮಾಡಿತ್ತು, ಆಗ ಬಿಜೆಪಿಯೇ ಅತಿ ಹೆಚ್ಚು ಸಂಸತ್​ ಸದಸ್ಯರನ್ನು ಹೊಂದಿತು.

ರಾಜ್ಯ ಬಿಜೆಪಿಯಲ್ಲಿ ಪ್ರಮುಖವಾಗಿ ಸ್ಥಳೀಯ ನಾಯಕರ ಕೊರತೆ ಕಾರಣಕ್ಕೆ ಕಾಂಗ್ರೆಸ್​​ನತ್ತ ಜನರು ನೋಡಿದರು. ಆದರೆ ಕೇಂದ್ರದಲ್ಲಿ ಗಟ್ಟಿ ನಿರ್ಧಾರ ಕೈಗೊಳ್ಳುವ ನಾಯಕ ಎಂದು ಮೋದಿ ಪ್ರಸಿದ್ಧರಾಗಿದ್ದಾರೆ, ಅದರಲ್ಲೂ ಪಾಕಿಸ್ತಾನ-ಚೀನಾ-ಅಮೆರಿಕದಂತಹ ರಾಷ್ಟ್ರಗಳೊಂದಿಗೆ ಸರಿಯಾದ ವ್ಯವಹಾರ ಮಾಡಲು ಮೋದಿಯೇ ಸರಿ ಎನ್ನಿಸುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಲೋಕಸಭೆಯಲ್ಲಿ ನರೇಂದ್ರ ಮೋದಿಗೇ ಬೆಂಬಲ ನೀಡಲು ಹೆಚ್ಚಿನ ಜನರು ಒಲವು ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

HD Revanna: ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ. ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಆಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ (Bowring Hospital) ವೈದ್ಯಕೀಯ ಪರೀಕ್ಷೆ (Medical Test) ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆಯಲಿದ್ದಾರೆ. ಇನ್ನು, ಎಸ್‌ಐಟಿ ಸೆಲ್‌ನಲ್ಲಿ ಎಚ್‌.ಡಿ.ರೇವಣ್ಣ ಅವರು ಗಳಗಳನೆ ಅತ್ತಿದ್ದಾರೆ ಎಂದು ತಿಳಿದುಬಂದಿದೆ.

ಎಚ್‌.ಡಿ.ದೇವೇಗೌಡರ ಮನೆಯಲ್ಲಿ ಎಚ್‌.ಡಿ. ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋದರು. ಇದಾದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಮತ್ತೆ ಸಿಐಡಿ ಕಚೇರಿಗೆ ಕರೆತಂದು, ಎಸ್‌ಐಟಿ ಸೆಲ್‌ನಲ್ಲಿ ಇರಿಸಿದರು. ಎಚ್‌.ಡಿ.ರೇವಣ್ಣ ಅವರು ಮಲಗಲು ಹಾಸಿಗೆ ಹಾಗೂ ಬೆಡ್‌ಶೀಟ್‌ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ.ರೇವಣ್ಣ ಅವರನ್ನು ವಿಚಾರಣೆ ಮಾಡಲಿರುವ ಅಧಿಕಾರಿಗಳು, ಬಳಿಕ ವಿಶ್ರಾಂತಿಗೆ ಅವಕಾಶ ನೀಡಲಿದ್ದಾರೆ. ಸೆಲ್‌ನಲ್ಲಿ ರೇವಣ್ಣ ಅವರಿಗೆ ಒಂದು ಸಾಮಾನ್ಯ ಬೆಡ್‌ ಹಾಗೂ ಕುರ್ಚಿ ನೀಡಲಾಗಿದೆ. ಇದೆಲ್ಲವನ್ನೂ ಕಂಡ ರೇವಣ್ಣ ಅವರು ಕಣ್ಣೀರು ಹಾಕಿದ್ದಾರೆ. ಮಗ ವಿದೇಶಕ್ಕೆ ಪರಾರಿಯಾಗಿದ್ದಾನೆ. ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ. ಈಗ ನಾನು ಸೆಲ್‌ನಲ್ಲಿ ಇರಬೇಕಾಯಿತಲ್ಲ ಎಂಬುದನ್ನು ನೆನೆದು ರೇವಣ್ಣ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ನಮ್ಮನ್ನೆಲ್ಲ ಸಾಯಿಸ್ತಾರೆ ಎಂದ ಮಹಿಳೆ

ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Continue Reading

ಕರ್ನಾಟಕ

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Road Accident: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ಅಪಘಾತ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ರಾಯಚೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ನಡೆದಿದೆ. ಬೈಕ್ ಸವಾರ ಭೀಮಣ್ಣ (55) ಮೃತರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ.

ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲು

ರಾಯಚೂರು: ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ‌ ಕೊಠಾ ಗ್ರಾಮದ ಬಳಿ ನಡೆದಿದೆ. ಅಯ್ಯನ್ ಶಫಿ (17) ನೀರು ಪಾಲಾದ ಬಾಲಕ. ಮೂವರು ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದಾಗ ದುರ್ಘಟನೆ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಲಿಂಗಸುಗೂರು ಅಗ್ನಿ ಶಾಮಕ ದಳದ ಸಿಬ್ಬಂದಿ ತೆರಳಿ, ಶೋಧಕಾರ್ಯ ನಡೆಸಿ ಯುವಕನ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕುರಿಗಾಹಿ ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿ ನಡೆದಿದೆ.

ಕೊಟ್ಟೂರು ತಾಲೂಕು ಹರಾಳು ಗ್ರಾಮದ ಅಂಜಿನಪ್ಪ (26) ಮೃತಪಟ್ಟ ಕುರಿಗಾಹಿ. ತುಂಗಭದ್ರಾ ನದಿ ದಂಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಈಜಲು ನದಿಗೆ ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

HD Revanna: ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ. ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಆಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ (Bowring Hospital) ವೈದ್ಯಕೀಯ ಪರೀಕ್ಷೆ (Medical Test) ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆಯಲಿದ್ದಾರೆ.

ಎಚ್‌.ಡಿ.ದೇವೇಗೌಡರ ಮನೆಯಲ್ಲಿ ಎಚ್‌.ಡಿ. ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋದರು. ಇದಾದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಮತ್ತೆ ಸಿಐಡಿ ಕಚೇರಿಗೆ ಕರೆತಂದು, ಎಸ್‌ಐಟಿ ಸೆಲ್‌ನಲ್ಲಿ ಇರಿಸಿದರು. ಎಚ್‌.ಡಿ.ರೇವಣ್ಣ ಅವರು ಮಲಗಲು ಹಾಸಿಗೆ ಹಾಗೂ ಬೆಡ್‌ಶೀಟ್‌ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿದುಬಂದಿಎ.

ಭಾನುವಾರ ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ನಮ್ಮನ್ನೆಲ್ಲ ಸಾಯಿಸ್ತಾರೆ ಎಂದ ಮಹಿಳೆ

ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Continue Reading

ಕರ್ನಾಟಕ

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Dingaleshwar Swamiji: ನವಲಗುಂದದಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿದ್ದರಿಂದ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Dingaleshwar Swamiji
Koo

ಧಾರವಾಡ: ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ ನೀಡಿದ ಆರೋಪದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನವಲಗುಂದ ಮಾರ್ಕೆಟ್‌ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶ ಚುನಾವಣೆ ಭಾಷಣದ ವೇಳೆ ಸ್ವಾಮೀಜಿ ಎಡವಟ್ಟು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ವಾಮೀಜಿ, ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಭಾಷಣ ಮಾಡಿದ್ದರು. ಹೀಗಾಗಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡಿದ್ದಾರೆ ಎಂಬ ಆರೋಪದಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Jai Shri Ram Slogan

ರಾಯಚೂರು: ಜೈ ಶ್ರೀರಾಮ್ ಘೋಷಣೆ (Jai Shri Ram Slogan) ಕೂಗಿದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡನನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆ ಚುನಾವಣೆ ಹೊತ್ತಿನಲ್ಲಿ ಪಕ್ಷ ಮತ್ತು ನಾಯಕರಿಗೆ ಮುಜುಗಗರವಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದರಿಂದ ನಿಮ್ಮನ್ನು ಕಾಂಗ್ರೆಸ್ ‌ಪಕ್ಷದಿಂದ ಅಮಾನತು ಮಾಡಲಾಗಿದೆ. ತಾವು 7 ದಿನಗಳೊಳಗಾಗಿ ಈ ಹೇಳಿಕೆಗಳ ವಿವರಣೆ ನೀಡಬೇಕು ಎಂದು ಕೈ ಮುಖಂಡ ಬಷೀರುದ್ದೀನ್‌ ಅವರಿಗೆ ಅಮಾನತು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದರು. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದರು. ಹೀಗಾಗಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗಿತ್ತು. ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕಾಂಗ್ರೆಸ್‌ ಮುಖಂಡನನ್ನು ಅಮಾತುಗೊಳಿಸಲಾಗಿದೆ.

Continue Reading
Advertisement
HD Revanna
ಕರ್ನಾಟಕ20 mins ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ24 mins ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ24 mins ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ46 mins ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ1 hour ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ1 hour ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ1 hour ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ2 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ2 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ2 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌