ವಿಸ್ತಾರ TOP 10 NEWS | ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರಿನಿಂದ ಹಿಮಾಚಲ ಚುನಾವಣೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರಿನಿಂದ ಹಿಮಾಚಲ ಚುನಾವಣೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

TOP 10 NEWS 14102022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೆ ವಿಚಾರಣೆ ಎದುರಿಸುತ್ತಿರುವ ಮುರುಘಾ ಶರಣರ ವಿರುದ್ಧ ಮತ್ತಿಬ್ಬರು ಬಾಲಕಿಯರು ದೂರು ನೀಡಿದ್ದಾರೆ. ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ಗೆ ನ್ಯಾಯಾಲಯ ನಿರಾಕರಿಸಿದೆ, ಓಲಾ-ಉಬರ್‌ಗೆ ತಾತ್ಕಾಲಿಕ ಜಯ ಸಿಕ್ಕಿದೆ, ಭೂತಾನ್‌ ಅಡಕೆ ಆಮದು ಕುರಿತು ಕಾರ್ಯಪಡೆ ಸಭೆ ನಡೆದಿದೆ, ಕರ್ನಾಟಕಕ್ಕೆ ಮೊದಲ ವಂದೇ ಭಾರತ್‌ ರೈಲು ಆಗಮಿಸಲಿದೆ, ಹಿಮಾಚಲ ಪ್ರದೇಶ ಚುನಾವಣೆ ಘೋಷಣೆ ಆಗಿದೆ, ಭಾರತ್‌ ಜೋಡೋ ಯಾತ್ರೆ ಶನಿವಾರ 1,000 ಕಿ.ಮೀ. ಪೂರೈಸಲಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ top 10 NEWS.

ಮುರುಘಾಶ್ರೀ

1. ಮುರುಘಾ ಶರಣರ ಮೇಲೆ ಮತ್ತಿಬ್ಬರು ಬಾಲಕಿಯರಿಂದ ಲೈಂಗಿಕ ಕಿರುಕುಳ ದೂರು

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಮತ್ತಿಬ್ಬರು ಅಪ್ರಾಪ್ತ ವಯಸ್ಕರಿಂದ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ. ಈ ಮೊದಲು ಇಬ್ಬರು ಬಾಲಕಿಯರು ದೂರು ದಾಖಲಿಸಿದ್ದು, ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ.
12 ಹಾಗೂ 14 ವರ್ಷದ ಇಬ್ಬರು ಬಾಲಕಿಯರು ಚಿತ್ರದುರ್ಗದ ಮುರುಘ ರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಪೋಷಕರ ಜತೆ ಮೈಸೂರಿನ ಒಡನಾಡಿ ಸಂಸ್ಥೆಗೆ ಆಗಮಿಸಿರುವ ವಿದ್ಯಾರ್ಥಿಗಳು, ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯನ್ನು ಸಂಪರ್ಕಿಸಿದ್ದಾರೆ. ಮಕ್ಕಳು ಸದ್ಯ ಒಡನಾಡಿ ಆಶ್ರಯದಲ್ಲಿದ್ದಾರೆ.
ಮುರುಘಾ ಶ್ರೀ ಪ್ರಕರಣದ ಮತ್ತಷ್ಟು ಸುದ್ದಿಗಳು:
🔴 ಮುರುಘಾ ಶರಣರ ಮೇಲೆ ಮತ್ತಿಬ್ಬರು ಬಾಲಕಿಯರಿಂದ ಲೈಂಗಿಕ ಕಿರುಕುಳ ದೂರು
🟠ಇನ್ನೂ 30-35 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸ್ಟ್ಯಾನ್ಲಿ ಗಂಭೀರ ಆರೋಪ
🟡ಎರಡೂವರೆ ವರ್ಷದಿಂದ ಲೈಂಗಿಕ ಕಿರುಕುಳ; ಬಡವರಾಗಿದ್ದರಿಂದ ಹೆದರಿದರು: ಸ್ಟ್ಯಾನ್ಲಿ
🟢ಇತ್ತ ಮೂರನೇ ಆರೋಪಿಗೆ ಜಾಮೀನು; ಅತ್ತ ಹೈಕೋರ್ಟ್‌ ಮೆಟ್ಟಿಲೇರಿದ ಮುರುಘಾಶ್ರೀ

Gyanvapi case

2. Gyanvapi Case | ಶಿವಲಿಂಗ ಕಾರ್ಬನ್ ಡೇಟಿಂಗ್‌ ಪರೀಕ್ಷೆಗೆ ಅನುಮತಿ ನಿರಾಕರಿಸಿದ ಕೋರ್ಟ್


ಜ್ಞಾನವಾಪಿ ಮಸೀದಿಯಲ್ಲಿರುವ (Gyanvapi Mosque Case) ಶಿವಲಿಂಗದ ಕಾರ್ಬನ್ ಪರೀಕ್ಷೆಗೆ ಒಪ್ಪಿಗೆ ನೀಡಲು ವಾರಾಣಸಿ ಜಿಲ್ಲಾ ನ್ಯಾಯಾಲಯವು ನಿರಾಕರಿಸಿದೆ. ಈ ಮೂಲಕ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಮತ್ತೊಂದು ಆಯಾಮ ದೊರೆತಿದೆ. ಒಂದೊಮ್ಮೆ ಕಾರ್ಬನ್ ಡೇಟಿಂಗ್‌ಗೆ ಅನುಮತಿ ನೀಡಿದ್ದರೆ, ಶಿವಲಿಂಗ ಎಷ್ಟು ಹಳೆಯದ್ದು ಎಂಬ ಮಾಹಿತಿ ಗೊತ್ತಾಗುತ್ತಿತ್ತು. ವಾರಾಣಸಿ ಜಿಲ್ಲಾ ಕೋರ್ಟ್ ನ್ಯಾಯಾಧೀಶ ಎ ಕೆ ವಿಶ್ವೇಶ ಅವರು ಈ ಆದೇಶವನ್ನು ನೀಡಿದ್ದಾರೆ. ಕೋರ್ಟ್‌ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಕೋರ್ಟ್‌ರೂಮ್‌ನಲ್ಲಿ ಕೇವಲ 58 ಜನರಿಗಷ್ಟೇ ಅವಕಾಶ ಕಲ್ಪಿಸಲಾಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ola

3. ಓಲಾ, ಉಬರ್‌, ರ‍್ಯಾಪಿಡೋಗೆ ತಾತ್ಕಾಲಿಕ ಜಯ; ಶೇ.10 ಮೀರದಂತೆ ದರ ವಿಧಿಸಿ ಎಂದ ಕೋರ್ಟ್‌


ಅಗ್ರಿಗೇಟರ್‌ ಆ್ಯಪ್‌ಗಳಾದ ಓಲಾ, ಉಬರ್‌, ರ‍್ಯಾಪಿಡೋಗಳ ಆಟೋ ಸೇವೆ ಸದ್ಯಕ್ಕೆ ನಿರಾತಂಕವಾಗಿದ್ದು, ತಾತ್ಕಾಲಿಕ ವ್ಯವಸ್ಥೆ ಮಾಡಿ ಹೈಕೋರ್ಟ್‌ ಸೂಚನೆ ಹೊರಡಿಸಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯ ಮೇಲೆ ಶೇಕಡಾ ೧೦ ಮೀರದಂತೆ ದರ ವಿಧಿಸಬಹದು. ಜತೆಗೆ ಜಿಎಸ್‌ಟಿಯನ್ನೂ ಪಡೆದುಕೊಳ್ಳಬಹುದು ಎಂದು ಸೂಚನೆ ನೀಡಿದೆ.
ಅಗ್ರಿಗೇಟರ್‌ ಆ್ಯಪ್‌ಗಳು ತಮ್ಮ ಆಟೋ ಸೇವೆಯಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದೆ. ಮೂಲ ದರಕ್ಕಿಂತ ಹೆಚ್ಚಿನ ಹಣ ವಿಧಿಸುತ್ತಿದೆ ಎಂಬ ಆರೋಪ, ಅಭಿಯಾನ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವುಗಳಿಗೆ ಕಡಿವಾಣ ಹಾಕಿ ಆದೇಶ ಹೊರಡಿಸಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅಡಕೆ

4. ಭೂತಾನ್‌ ಅಡಕೆ; ಕೇಂದ್ರಕ್ಕೆ ಪರಿಸ್ಥಿತಿ ಮನವರಿಕೆ ಮಾಡಿಕೊಡಲು ನಿರ್ಧರಿಸಿದ ಅಡಕೆ ಕಾರ್ಯಪಡೆ


ಭೂತಾನ್‌ನಿಂದ ಹಸಿ ಅಡಕೆ ಆಮದು ಮಾಡಿಕೊಳ್ಳುವುದರಿಂದ ಆಗುವ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಭೂತಾನ್‌ ಮಾತ್ರವಲ್ಲದೆ, ಬೇರೆ ದೇಶಗಳಿಂದಲೂ ಒಪ್ಪಂದದ ಮೇರೆಗೆ ಅಡಕೆ ಆಮದು ಮಾಡಿಕೊಳ್ಳದಂತೆ ಕೋರಲು ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಅಡಕೆ ಕಾರ್ಯಪಡೆಯ ಸಭೆಯು (Arecanut Task Force) ನಿರ್ಧರಿಸಿದೆ.
ತೆರಿಗೆ ವಂಚಿಸಿ ಬರುವ ಉತ್ಪನ್ನಕ್ಕೆ ಕಡಿವಾಣ ಹಾಕಬೇಕು. ಸ್ಮಗ್ಲಿಂಗ್ ಸಂಪೂರ್ಣವಾಗಿ ನಿಲ್ಲಿಸಲು ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿರ್ಣಯ ಪತ್ರ ಕಳಿಸಬೇಕು ಎಂದು ಇಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಅಡಕೆ ಆಮದು ಹೇಗೆ ಕಡಿಮೆ ಮಾಡಬೇಕು ಎಂದು ಸೂಚಿಸುವ ತಜ್ಞರ ಸಲಹೆಗಳನ್ನು ಒಳಗೊಂಡ ಈ ಪತ್ರವನ್ನು ಎರಡು ದಿನಗಳಲ್ಲಿ ಕಳಿಸಲು ಅಡಕೆ ಕಾರ್ಯಪಡೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದೆ ಎಂದು ಸಭೆಯ ನಂತರ ಅಡಕೆ ಕಾರ್ಯಪಡೆಯ ಅಧ್ಯಕ್ಷ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Vande Bharat

5. Vande Bharat Express | ಕರ್ನಾಟಕಕ್ಕೆ ಬರಲಿದೆ 130 ಕಿ.ಮೀ ವೇಗದಲ್ಲಿ ಚಲಿಸುವ ರೈಲು


ರೈಲು ಸಂಚಾರವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಕರ್ನಾಟಕದಲ್ಲಿ ಸಂಚರಿಸುವ ದಿನ ಸಮೀಪಿಸುತ್ತಿದೆ. ನವೆಂಬರ್‌ 10ರಂದು ಕರ್ನಾಟಕದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರ ಮಾಡಲಿದೆ. ಚೆನ್ನೈಯಿಂದ ಹೊರಡುವ ರೈಲು ಬೆಂಗಳೂರು ಮಾರ್ಗವಾಗಿ ಮೈಸೂರು ತಲುಪಲಿದೆ.
ಈ ಮೂಲಕ, ಅತ್ಯಂತ ವೇಗದ ರೈಲು ಸೇವೆ ಕರ್ನಾಟಕಕ್ಕೆ ಪದಾರ್ಪಣೆ ಮಾಡಲಿದೆ. ಗರಿಷ್ಠ 160 ಕಿ.ಮೀ. ವೇಗದಲ್ಲಿ ಸಂಚರಿಸಬಹುದಾದ ವಂದೇ ಭಾರತ್‌, ರೈಲು ಹಳಿಯ ಸಾಮರ್ಥ್ಯಕ್ಕೆ ತಕ್ಕಂತೆ 130 ಕಿ.ಮೀ. ವೇಗದಲ್ಲಿ ಸಾಗುತ್ತದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

rahul gandhi bharat jodo 1

6. Bharat Jodo | ಶನಿವಾರ 1,000 ಕಿ.ಮೀ ಗುರಿ ಮುಟ್ಟಲಿದೆ ಯಾತ್ರೆ: ಇಲ್ಲಿವರೆಗಿನ ವಿವರ ಇಲ್ಲಿದೆ


ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್‌ ಜೋಡೊ ಯಾತ್ರೆ ಇದೀಗ ಕರ್ನಾಟಕದಲ್ಲಿ, ಮೂರನೇ ರಾಜ್ಯದ ಮೂಲಕ ಹಾದುಹೋಗುತ್ತಿದೆ. ಇದೇ ಸಂದರ್ಭದಲ್ಲಿ ಶನಿವಾರ ಬಳ್ಳಾರಿಯನ್ನು ತಲುಪಲಿದ್ದು, ಕನ್ಯಾಕುಮಾರಿಯಿಂದ ಆರಂಭಿಸಿದ ನಂತರ 1,000 ಕಿ.ಮೀ. ಸಾಗಿದಂತಾಗುತ್ತದೆ.
ಭಾರತ್ ಜೋಡೋ ಯಾತ್ರೆಯು ಸೆಪ್ಟೆಂಬರ್ 7ರಂದು ದಕ್ಷಿಣದ ತುದಿಯಾದ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಒಟ್ಟು 3,500 ಕಿಲೋಮೀಟರ್ ಗುರಿ ಸಾಧಿಸಬೇಕಾದ ಯಾತ್ರೆಯಿದು. ಶನಿವಾರ ಬಳ್ಳಾರಿಯಲ್ಲಿ ಬೃಹತ್‌ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. ಮಳವಳ್ಳಿ ಬಾಲಕಿ ಕೊಲೆ | ಅತ್ಯಾಚಾರ ಎಸಗಿದವನಿಗೆ ಗಲ್ಲು ಶಿಕ್ಷೆಯಾಗಲಿ ಎಂದ ಪೋಷಕರು

“ನಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿದವನಿಗೆ ಗಲ್ಲು ಶಿಕ್ಷೆಯಾಗಬೇಕು. ಸರ್ಕಾರ ಅವನಿಗೆ ಊಟ, ತಿಂಡಿ ಕೊಟ್ಟು ಪೋಷಣೆ ಮಾಡುವುದು ಬೇಡ, ಅವನನ್ನು ನೇಣಿಗೆ ಹಾಕಬೇಕು. ಇದೊಂದು ಮಾಡಿಕೊಡಿ ಸಾಕು” ಎಂದು ಮಳವಳ್ಳಿ ಪಟ್ಟಣದಲ್ಲಿ ಟ್ಯೂಶನ್‌ ಹೇಳಿಕೊಡುತ್ತಿದ್ದ ಶಿಕ್ಷಕನಿಂದಲೇ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಕೊಲೆಯಾದ ಬಾಲಕಿಯ ಪೋಷಕರು ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಬಳಿ ತೋಡಿಕೊಂಡ ಅಳಲು.
ಟ್ಯೂಶನ್‌ ಶಿಕ್ಷಕನೇ ಅತ್ಯಾಚಾರ ಎಸಗಿ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿರುವ ಪ್ರಕರಣಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ. ಅಲ್ಲದೆ, ಕೆಲವು ಕಡೆ ಪ್ರತಿಭಟನೆಗಳೂ ನಡೆದಿದ್ದು, ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಗಲ್ಲು ಶಿಕ್ಷೆ ವಿಧಿಸಬೇಕೆಂಬ ಆಗ್ರಹಗಳು ವ್ಯಕ್ತವಾಗಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

mandya triveni sangama ೬

8. Kumbhamela | ಜಲಕ್ಕೆ ಕೃತಜ್ಞತೆ ಸಲ್ಲಿಸೋಣ; ನೀರಿನ ಮಹತ್ವ ತಿಳಿಸಿಕೊಟ್ಟ ಡಾ. ವೀರೇಂದ್ರ ಹೆಗ್ಗಡೆ

ಜಲ ಮಾತೆಗೆ ಕೃತಜ್ಞತೆಯನ್ನು ಸಲ್ಲಿಸುವುದೇ ಈ ಕುಂಭಮೇಳದ (Kumbhamela) ಉದ್ದೇಶವಾಗಿದೆ. ತ್ರಿವೇಣಿ ಸಂಗಮದಲ್ಲಿ ಮೂರು ನದಿಗಳಾದ ಕಾವೇರಿ, ಹೇಮಾವತಿ ಮತ್ತು ಲಕ್ಷ್ಮಣತೀರ್ಥಗಳಿಗೆ ನಮಸ್ಕರಿಸಿ, ಗೌರವಿಸಿ ಕೃತಜ್ಞತೆ ಸಲ್ಲಿಸುವ ಕೆಲಸವನ್ನು ನಾವೀಗ ಮಾಡುತ್ತಿದ್ದೇವೆ. ಈ ಮೂಲಕ ನಮ್ಮನ್ನು ಇದೇ ರೀತಿಯಲ್ಲಿ ರಕ್ಷಿಸು ಎಂದು ಕೇಳಿಕೊಳ್ಳುತ್ತಿದ್ದೇವೆ. ಇದರ ಜತೆಗೆ ನೀರಿನ ಮಿತವ್ಯಯವೂ ನಮ್ಮಿಂದ ಆಗಬೇಕಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು. ಕಾವೇರಿ, ಹೇಮಾವತಿ ಮತ್ತು ಲಕ್ಷ್ಮಣತೀರ್ಥ ನದಿಗಳು ಸೇರುವ ಕೆ.ಆರ್‌. ಪೇಟೆ ತಾಲೂಕಿನ ಅಂಬಿಗರ ಹಳ್ಳಿಯಲ್ಲಿ ದಕ್ಷಿಣ ಭಾರತದ ಅತಿದೊಡ್ಡ ಕುಂಭ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Election

9. Election Commission | ಹಿಮಾಚಲ ಪ್ರದೇಶದಲ್ಲಿ ನ.12ರಂದು ವಿಧಾನಸಭೆ ಚುನಾವಣೆ

ಚುನಾವಣೆ ಆಯೋಗವು (Election Commission) ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದೆ. ನವೆಂಬರ್‌ ೧೨ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ ೧೦ರಂದು ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್‌ ೧೭ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.
ಅ.೨೫ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ, ಅ.೨೭ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.೨೯ರಂದು ಉಮೇದುವಾರಿಕೆ ವಾಪಸ್‌ ಪಡೆಯಲು ಅವಕಾಶ ಇರುತ್ತದೆ. ರಾಜ್ಯದ ೬೮ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ. ಅ.೧೪ರಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಆಯೋಗ ಮಾಹಿತಿ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Election Commission | ಗುಜರಾತ್‌ ಚುನಾವಣೆ ದಿನಾಂಕ ಘೋಷಣೆ ಏಕಿಲ್ಲ? ನಿಯಮ ಉಲ್ಲಂಘಿಸಿತೇ ಆಯೋಗ?

puneet

10. Gandhada Gudi | ‘ಪುನೀತ್ ಪರ್ವ’ಕ್ಕೆ ಬಾಲಯ್ಯ, ಸೂರ್ಯ, ಕಮಲ್ ಹಾಸನ್ ಆಗಮನ!

ಎಲ್ಲೆಲ್ಲೂ ‘ಗಂಧದ ಗುಡಿ’ (Gandhada Gudi) ಘಮಲು ಹರಡಿದ್ದು, ಸಿನಿಮಾ ರಿಲೀಸ್​ಗೂ ಮೊದಲೇ ಅಬ್ಬರಿಸುತ್ತಿದೆ. ಈಗಾಗಲೇ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಇವೆಂಟ್​ನ ಭರ್ಜರಿಯಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ‘ಪುನೀತ್ ಪರ್ವ’ ಹೆಸರಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಅತಿಥಿಯಾಗಿ ಟಾಲಿವುಡ್ ಸ್ಟಾರ್ ನಂದಮೂರಿ ಬಾಲಕೃಷ್ಣ, ತಮಿಳು ನಟರಾದ ಸೂಪರ್ ಸ್ಟಾರ್ ಸೂರ್ಯ ಹಾಗೂ ಕಮಲ್ ಹಾಸನ್ ಆಗಮಿಸಲಿದ್ದಾರೆ. ಈ ಮೂಲಕ ಅಕ್ಟೋಬರ್ 21ರಂದು ದೇಶವೇ ಬೆಂಗಳೂರಿನತ್ತ ತಿರುಗಿ ನೋಡಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

ಪುಣ್ಯಕೋಟಿ ದತ್ತು ಯೋಜನೆಗೆ ಸರ್ಕಾರಿ ನೌಕರರ ಒಂದು ದಿನದ ವೇತನ ದೇಣಿಗೆ
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾಗೆ ಕೊಲೆ ಬೆದರಿಕೆ: ದೂರು ದಾಖಲು
Inflation | ಸೆಪ್ಟೆಂಬರ್‌ನಲ್ಲಿ ಸಗಟು ಹಣದುಬ್ಬರ 10.7%ಕ್ಕೆ ಇಳಿಕೆ
GST | ಪರೋಟಾ ಅಂದ್ರೆ ರೋಟಿ, ಚಪಾತಿ ಅಲ್ಲ, 18% ಜಿಎಸ್‌ಟಿ ಪಕ್ಕಾ: ಗುಜರಾತ್‌ ಎಎಎಆರ್
ಉಕ್ರೇನ್​​ನಿಂದ ಮರಳಿದ್ದ ಭಾರತದ 2000 ವೈದ್ಯಕೀಯ ವಿದ್ಯಾರ್ಥಿಗಳಿಗೆ ಓದು ಮುಂದುವರಿಸಲು ಅವಕಾಶ ಕೊಟ್ಟ ಉಜ್ಬೇಕಿಸ್ತಾನ
Congress President | ಖರ್ಗೆಗೆ ಜಿ-23ಯ ಮನೀಶ್‌ ತಿವಾರಿ ಬೆಂಬಲ, ಶಶಿ ತರೂರ್‌ಗೆ ಭಾರಿ ಹಿನ್ನಡೆ?

ದಿನದ ಲೇಖನಗಳು

ಮೊಗಸಾಲೆ ಅಂಕಣ | ಸೋನಿಯಾರನ್ನು ತತ್ತರಗೊಳಿಸಿದ ಅನಿರೀಕ್ಷಿತ ಬಂಡಾಯ
ರಾಮಾಯಣ ಸರ್ಕ್ಯೂಟ್ ನಂತೆ ಪಂಚ ಆತ್ಮಲಿಂಗಗಳ ದರ್ಶನಕ್ಕೂ ಬೇಕಿದೆ ಸರ್ಕ್ಯೂಟ್ ಯೋಜನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Bahaddur Movie: ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್” ಚಿತ್ರ, ಈಗ 10 ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.

VISTARANEWS.COM


on

Bahaddur movie is re released on June 21
Koo

ಬೆಂಗಳೂರು: ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ. ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್” ಚಿತ್ರ 2014 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ (Bahaddur Movie) ಮರು ಬಿಡುಗಡೆಯಾಗುತ್ತಿದ್ದು, ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ.

“ಬಹದ್ದೂರ್” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಧ್ವನಿ ನೀಡಿದ್ದರು.‌ ಪುನೀತ್ ಅವರು ತಮ್ಮ ಅಭಿನಯದ ಚಿತ್ರವನ್ನು ಹೊರತುಪಡಿಸಿ ಧ್ವನಿ ನೀಡಿದ ಮೊದಲ ಚಿತ್ರ “ಬಹದ್ದೂರ್”. ಚಿತ್ರದ ಮೊದಲ ಸನ್ನಿವೇಶಕ್ಕೆ ರವಿಚಂದ್ರನ್ ಅವರು ಕ್ಲ್ಯಾಪ್ ಮಾಡಿ ಹಾರೈಸಿದ್ದರು.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಪುನೀತ್ ರಾಜಕುಮಾರ್ ಅವರೇ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದ್ದರು. ವಿ.ಹರಿಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಇಂದಿಗೂ‌ ಜನಪ್ರಿಯ. “ಬಹದ್ದೂರ್ ” ಬಿಡುಗಡೆಯಾದ ಹತ್ತು ವರ್ಷಗಳಲ್ಲಿ ನೂರಾರೂ ಸಲ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದೆ.

ಇದನ್ನೂ ಓದಿ: T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಈ ಚಿತ್ರ ಪ್ರಸಾರವಾದಗಲೆಲ್ಲ ಉತ್ತಮ ಟಿ.ಆರ್.ಪಿ ಬರುತ್ತಿರುವುದು ವಿಶೇಷ. ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೆಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.

Continue Reading

ಕರ್ನಾಟಕ

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

Foeticide: ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ.

VISTARANEWS.COM


on

Foeticide
Koo

ಬೆಳಗಾವಿ: ಬೆಂಗಳೂರು ಹಾಗೂ ಮಂಡ್ಯದಲ್ಲಿ ಕೆಲ ತಿಂಗಳ ಹಿಂದೆ ಹೆಣ್ಣು ಭ್ರೂಣಹತ್ಯೆಯ ಬೃಹತ್‌ ಜಾಲವೊಂದು ಪತ್ತೆಯಾದ ಬೆನ್ನಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲೂ ನಕಲಿ ವೈದ್ಯನು ಭ್ರೂಣ ಹತ್ಯೆ (Foeticide) ಮಾಡಿರುವ ಪ್ರಕರಣವು ಬಯಲಾಗಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿದೆ. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಸಹಾಯಕನಾಗಿರುವ ರೋಹಿತ್ ಕುಪ್ಪಸಗೌಡರ್ ಎಂಬಾತನನ್ನು ಕರೆದುಕೊಂಡು ಹೋಗಿರುವ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಕಲಿ ವೈದ್ಯನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿದೆ. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಭ್ರೂಣಗಳನ್ನು ಹೂಳುತ್ತಿದ್ದ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆತ ತೋರಿಸಿದ ಜಾಗದಲ್ಲಿ ಶೋಧ ನಡೆಸಲಾಗುತ್ತಿದೆ.

ಫಾರ್ಮ್‌ಹೌಸ್‌ನಲ್ಲಿ ಭ್ರೂಣ ಹೂತಿದ್ದ ಜಾಗ.

ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ. ಈತನನ್ನು ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿರುವ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ. ರೋಹಿತ್‌ ತೋರಿಸಿದ ಜಾಗದಲ್ಲಿಯೇ ಒಂದು ಭ್ರೂಣ ಪತ್ತೆಯಾಗಿರುವ ಕಾರಣ ಇನ್ನಷ್ಟು ಭ್ರೂಣಗಳು ಇರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್‌ ಗಫಾರ್‌ ಲಾಡಖಾನ್‌ ಹಿಂದೆ ಯಾರಿದ್ದಾರೆ? ಜಾಲದಲ್ಲಿ ಯಾರೆಲ್ಲ ತೊಡಗಿಸಿಕೊಂಡಿದ್ದಾರೆ? ಫಾರ್ಮ್‌ಹೌಸ್‌ ಸೇರಿ ಇನ್ನೂ ಹಲವು ಪ್ರದೇಶಗಳಲ್ಲಿ ಭ್ರೂಣಗಳನ್ನು ಹೂಳಲಾಗಿದೆಯೇ ಎಂಬುದು ಸೇರಿ ಹತ್ತಾರು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲೂ ಭ್ರೂಣ ಹತ್ಯೆ ಪ್ರಕರಣಗಳು ಬಯಲಾಗಿದ್ದವು.

ಇದನ್ನೂ ಓದಿ: Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Continue Reading

ಕರ್ನಾಟಕ

Darshan Arrested: ಕೊಲೆ ಬಳಿಕ ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ; ಇಂದು ಸ್ಥಳ ಮಹಜರು!

Darshan Arrested: ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾಗಿ, ಪೊಲೀಸರು ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Darshan Arrested
Koo

ಮೈಸೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಬಳಿಕ ಮೈಸೂರಿಗೆ ತೆರಳಿದ ನಟ ದರ್ಶನ್‌ (Actor Darshan) ಅಲ್ಲಿಂದಲೇ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಕುರಿತು ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

Actor Darshan ACP Chandan Kumar work salute by people

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

Continue Reading

ಕರ್ನಾಟಕ

Kalaburagi News: ಕಲಬುರಗಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು; ಮತ್ತೊಬ್ಬನ ಸ್ಥಿತಿ ಗಂಭೀರ

Kalaburagi News: ನೆಲಗೋಗಿ ಕ್ರಾಸ್‌ ಬಳಿ ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದವು. ಇದೇ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಲಾರಿಗೆ ಕಾರು ಹಿಂಬದಿಯಿಂದ ಜೋರಾಗಿ ಡಿಕ್ಕಿಯೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲೋಗಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Kalaburagi News
Koo

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್‌ ಬಳಿ ಭೀಕರ ಅಪಘಾತ (Kalaburagi News) ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಯ್ಯ ಸ್ವಾಮಿ (35) ಹಾಗೂ ಲೋಕೇಶ್‌ (36) ಮೃತರು. ವೇಗವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಗುದ್ದಿದ ಕಾರಣ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನೆಲಗೋಗಿ ಕ್ರಾಸ್‌ ಬಳಿ ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದವು. ಇದೇ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಲಾರಿಗೆ ಕಾರು ಹಿಂಬದಿಯಿಂದ ಜೋರಾಗಿ ಡಿಕ್ಕಿಯೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲೋಗಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Road Accident

ಶನಿವಾರ (ಜೂನ್‌ 15) ಬೆಳಗ್ಗೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ ನಡೆದಿತ್ತು. ನ್ಯಾಷನಲ್​ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿದ್ದವು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ನಿಗದಿತ ಕಾರ್ಯಕ್ರಮವನ್ನು ಉದ್ದೇಶವಾಗಿಟ್ಟುಕೊಂಟು ಅವರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅದರೆ ಯಮಧರ್ಮರಾಯನಂತೆ ನುಗ್ಗಿದ ಲಾರಿಯು ಹಿಂಬದಿಂದ ಜೋರಾಗಿ ಗುದ್ದಿದೆ. ದೊಡ್ಡ ಲಾರಿಯು ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಈ ವೇಳೆ ಹಿಂಬದಿ ಸೀಟಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರಿಬ್ಬರು ಅಲ್ಲೇ ಮೃತಪಟ್ಟಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲ ಕುಳಿತಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: Road Accident: ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಅಪಘಾತ; ಐದು ಕಾರುಗಳು ಜಖಂ

Continue Reading
Advertisement
Bahaddur movie is re released on June 21
ಕರ್ನಾಟಕ47 seconds ago

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Darshan Arrested renuka shed like hell more murders here
ಸ್ಯಾಂಡಲ್ ವುಡ್4 mins ago

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Foeticide
ಕರ್ನಾಟಕ11 mins ago

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

SCO vs AUS
ಕ್ರೀಡೆ38 mins ago

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

Darshan Arrested vinish write special message for darshan fathers day
ಸ್ಯಾಂಡಲ್ ವುಡ್53 mins ago

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

INDW vs SAW
ಕ್ರೀಡೆ1 hour ago

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

Kannada New Movie Maryade Prashne out now
ಸ್ಯಾಂಡಲ್ ವುಡ್1 hour ago

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Darshan Arrested
ಕರ್ನಾಟಕ1 hour ago

Darshan Arrested: ಕೊಲೆ ಬಳಿಕ ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ; ಇಂದು ಸ್ಥಳ ಮಹಜರು!

Kotee Movie Review dolly dhanjay News In Kannada
ಸ್ಯಾಂಡಲ್ ವುಡ್1 hour ago

Kotee Movie Review: ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾದಾಗ?!

Illegal beef trade
ದೇಶ1 hour ago

ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ20 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌