ವಿಸ್ತಾರ TOP 10 NEWS: ʼಕಾಮನ್‌ ಮ್ಯಾನ್‌ʼ ಬಜೆಟ್‌ ನಿರೀಕ್ಷೆಯಿಂದ, ʼಹೊಡೆದು ಹಾಕಿʼ ಹೇಳಿಕೆಗೆ ಅಶ್ವತ್ಥನಾರಾಯಣ ವಿಷಾದದವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS: ʼಕಾಮನ್‌ ಮ್ಯಾನ್‌ʼ ಬಜೆಟ್‌ ನಿರೀಕ್ಷೆಯಿಂದ, ʼಹೊಡೆದು ಹಾಕಿʼ ಹೇಳಿಕೆಗೆ ಅಶ್ವತ್ಥನಾರಾಯಣ ವಿಷಾದದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news-basavaraja bommai to present budget to ashwathnarayana issue and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Karnataka Budget 2023 : ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಸಿಎಂ ಬೊಮ್ಮಾಯಿ ನೀಡುತ್ತಾರಾ ಜನಪ್ರಿಯ ಬಜೆಟ್‌?
ಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬೆಳಗ್ಗೆ ೧೦.೧೫ಕ್ಕೆ ೨೦೨೩-೨೪ನೇ ಸಾಲಿನ ರಾಜ್ಯ ಬಜೆಟ್‌ನ್ನು ಮಂಡಿಸಲಿದ್ದಾರೆ. ೨೦೨೩ರ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗಲಿರುವ ಈ ಲೇಖಾನುದಾನದ ಬಗ್ಗೆ ಭಾರಿ ಕುತೂಹಲವಿದೆ. ಸಿಎಂ ಬೊಮ್ಮಾಯಿ ಅವರು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಬಜೆಟ್‌ ಮಂಡನೆ ಮಾಡುವ ನಿರೀಕ್ಷೆ ಇದೆ. ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್‌ ಈಗಾಗಲೇ ಘೋಷಿಸಿರುವ ಕೆಲವು ಯೋಜನೆಗಳಿವೆ ಸಂವಾದಿಯಾಗಿ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Karnataka Election: ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ
ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ಟಿಪ್ಪು ಸುಲ್ತಾನ್‌ ಮಾದರಿಯಲ್ಲಿ ಹೊಡೆದು ಹಾಕಬೇಕು ಎಂದು ನೀಡಿರುವ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ (Ashwathnarayan) ಅವರು ಸ್ಪಷ್ಟೀಕರಣ ನೀಡಿದ್ದು, ನಾನು ಹೇಳಿರುವುದು ರಾಜಕೀಯ ಅರ್ಥದಲ್ಲಿಯೇ ವಿನಃ ಬೇರೇನೂ ಅಲ್ಲ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Election : ಭ್ರಷ್ಟ, ಬಚ್ಚಲು ಬಾಯಿ ಮಾತಿಗೆ ನಾನು ಉತ್ತರ ಕೊಡೊಲ್ಲ: ಅಶ್ವತ್ಥನಾರಾಯಣ್‌ ಹೇಳಿಕೆಗೆ ಡಿಕೆಶಿ ಗರಂ
ಹೆಚ್ಚಿನ ಓದಿಗಾಗಿ: Karnataka Election: ನನ್ನನ್ನು ಹೊಡೆದು ಹಾಕಿ ಎಂದು ಹೇಳಿಸಿದ್ದು ಬಿಜೆಪಿ-ಆರೆಸ್ಸೆಸ್‌; ಅಶ್ವತ್ಥನಾರಾಯಣ ಹೇಳಿಕೆಗೆ ಸಿದ್ದರಾಮಯ್ಯ ಆಕ್ರೋಶ

3. Assembly Session : ಆವತ್ತು ಹಣ ಪಡೆದಾಗ ನನ್ನ ಕೈ ಗೋಲ್ಡನ್‌ ಹ್ಯಾಂಡ್‌ ಆಗಿತ್ತು, ಈಗ ನಾನು ವಿಕಲಚೇತನನಾ?: ಸಿ.ಟಿ. ರವಿ ವಿರುದ್ಧ ಸಿಡಿದ ಕುಮಾರಸ್ವಾಮಿ
ʻಆವತ್ತು ಸಾಲ ತೀರಿಸಲು ಆಗಲ್ಲ ಅಂತ ನನ್ನ ಬಳಿ ಬಂದಿದ್ರಲ್ಲ.. ಸಹಾಯ ಮಾಡಿದ ನಂತರ ನೀವು ಬಂದು ಅಣ್ಣ ನಿನ್ನದು ಕೈಯಲ್ಲಾ.. ಗೋಲ್ಡನ್‌ ಹ್ಯಾಂಡ್‌ ಅಂತ ಹೇಳಿದ್ಯಲ್ಲಾ.. ಆಗ ನನ್ನ ಕೈ ಗೋಲ್ಡನ್‌ ಹ್ಯಾಂಡ್‌ ಆಗಿತ್ತು. ಈಗ ವಿಕಲಚೇತನ ಅಂತೀರಲ್ಲಾ..ʼʼ- ಹೀಗೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ. ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Contaminated Water: ಕಲುಷಿತ ನೀರು ಸೇವನೆ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದ ವೃದ್ಧೆ ನರಸಮ್ಮ (70) ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ತಡರಾತ್ರಿ ಸಾವಿಗೀಡಾಗಿದ್ದಾರೆ. ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Ration shops : ರೇಷನ್‌ ಅಂಗಡಿಗಳ ಆಧುನೀಕರಣಕ್ಕೆ ಕೇಂದ್ರ ಸರ್ಕಾರ ಪರಿಶೀಲನೆ, ಪ್ರಸ್ತಾಪದಲ್ಲಿ ಏನೇನಿದೆ?

ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Aero India 2023: ಶುಕ್ರವಾರ ಏರೋ ಇಂಡಿಯಾ ಕೊನೆಯ ಶೋ, ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ
ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಪ್ರದರ್ಶನವನ್ನು ವೀಕ್ಷಿಸುವ ಅವಕಾಶವನ್ನು ಸಾರ್ವಜನಿಕರಿಗೆ ಫೆ. 16 ಹಾಗೂ 17ರಂದು ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ವೀಕ್ಷಣೆಗೆ ಅವಕಾಶವಿದ್ದು, ಇಂದು‌ ಮತ್ತು ನಾಳೆ ವೈಮಾನಿಕ‌ ಪ್ರದರ್ಶನದ ಕೊನೆಯ ದಿನಗಳಾಗಿವೆ. ಬೆಳಗ್ಗೆ 9‌.30ರಿಂದ‌ 11 ಗಂಟೆವರೆಗೂ‌ ಮೊದಲ‌ ಪ್ರದರ್ಶನ, ಮಧ್ಯಾಹ್ನ 2 ರಿಂದ 3.30ರವರೆಗೂ ಎರಡನೇ ಪ್ರದರ್ಶನ ನಡೆಯಲಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. WhatsApp New Feature: ನೀವು ಈಗ ವಾಟ್ಸಾಪ್‌ ಚಾಟ್‌ನಲ್ಲಿ100 ಮೀಡಿಯಾ ಫೈಲ್ ಕಳುಹಿಸಬಹುದು!
ಬಳಕೆದಾರರ ಅನುಕೂಲಕ್ಕಾಗಿ ವಾಟ್ಸಾಪ್‌ ಮತ್ತೆ ಹೊಸ ಫೀಚರ್‌ಗಳನ್ನು (WhatsApp New Feature) ಪರಿಚಯಿಸಿದೆ. ಈಗ ಬಳಕೆದಾರರು, ಡಾಕ್ಯುಮೆಂಟ್ ಕ್ಯಾಪ್ಷನ್ಸ್, ದೀರ್ಘ ಗ್ರೂಪ್ ವಿಷಯ ಮತ್ತು ವಿವರಣೆಗಳು ಹಾಗೂ ಸುಮಾರು 100 ಮೀಡಿಯಾ ಫೈಲ್‌ಗಳನ್ನು ಷೇರ್ ಮಾಡಬಹುದು. ಈ ಮೂರೂ ಫೀಚರ್‌ಗಳು ಎಲ್ಲ ಬಳಕೆದಾರರಿಗೆ ಲಭ್ಯ ಇದ್ದು, ಬಳಸಿಕೊಳ್ಳಬಹುದು. ಈ ಹೊಸ ಫೀಚರ್ಸ್‌ಗಾಗಿ ಬಳಕೆದಾರರು ತಮ್ಮ ವಾಟ್ಸಾಪ್ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಬೇಕಾಗುತ್ತದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Vegetarian politics : ಸಿದ್ದರಾಮಯ್ಯ ಬಳಿಕ ಡಿ.ಕೆ. ಶಿವಕುಮಾರ್‌ ಕೂಡಾ ಸಂಪೂರ್ಣ ಸಸ್ಯಾಹಾರಿ; ನಾನ್‌ವೆಜ್‌ ಬಿಟ್ಟಿದ್ದೇಕೆ?
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಮಾಂಸಾಹಾರ ಬಿಟ್ಟು ಪೂರ್ಣ ಸಸ್ಯಾಹಾರಿಯಾದ ಬೆನ್ನಿಗೇ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್‌ ಅವರು ತಾನೂ ಈಗ ಸಸ್ಯಾಹಾರಿ (Vegetarian politics) ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವಿಧಾನಸಭೆಯಲ್ಲಿ ಇತ್ತೀಚೆಗೆ ಕಂದಾಯ ಸಚಿವ ಅಶೋಕ್‌ ಅವರ ಗ್ರಾಮ ವಾಸ್ತವ್ಯದ ಕುರಿತ ಚರ್ಚೆಯ ವೇಳೆ ಸಿದ್ದರಾಮಯ್ಯ ತಾನು ಮಾಂಸಾಹಾರ ಬಿಟ್ಟು ಸಸ್ಯಾಹಾರಿಯಾದ ಕಥೆ ಹೇಳಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Tripura Election 2023: ತ್ರಿಪುರಾದಲ್ಲಿ ಶೇ.81 ಮತದಾನ, ಒಟ್ಟಾರೆ ಶಾಂತಿಯುತ ಚುನಾವಣೆ, ಮಾರ್ಚ್ 2ಕ್ಕೆ ರಿಸಲ್ಟ್ ಪ್ರಕಟ
ಈಶಾನ್ಯ ಭಾರತದ ತ್ರಿಪುರಾ ರಾಜ್ಯ ವಿಧಾನಸಭೆಗೆ ಗುರುವಾರ ಚುನಾವಣೆ ನಡೆದಿದ್ದು(Tripura Election 2023), ಒಟ್ಟು ಶೇ.81ರಷ್ಟು ಮತದಾನವಾಗಿದೆ. ಅಂತಿಮ ಲೆಕ್ಕದಲ್ಲಿ ಈ ಮತದಾನ ಪ್ರಮಾಣ ಇನ್ನೂ ಹೆಚ್ಚಾಗಬಹುದು. ಒಟ್ಟು 60 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಮಾರ್ಚ್ 2ರಂದು ಫಲಿತಾಂಶ ಪ್ರಕಟವಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Imran Khan: ಪಾಕ್‌ನಲ್ಲಿ ಕೆ.ಜಿ ತುಪ್ಪದ ಬೆಲೆ 600 ಶತಕೋಟಿ ರೂ., ಇಮ್ರಾನ್‌ ಖಾನ್‌ ಹೇಳಿಕೆಯ ವಿಡಿಯೊ ವೈರಲ್‌
ಜಗತ್ತಿನ ಯಾವುದೇ ನಾಯಕನು ಬಾಯ್ತಪ್ಪಿನಿಂದ ನೀಡುವ ಹೇಳಿಕೆಗಳು ಟೀಕೆಗೆ ಗುರಿಯಾಗುತ್ತವೆ. ಇನ್ನೂ ಕೆಲವೊಮ್ಮೆ ನಗೆಪಾಟಲಿಗೀಡಾಗುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತವೆ. ಬೇಜವಾಬ್ದಾರಿ ನಾಯಕ ಎಂಬ ಹಣೆಪಟ್ಟಿ ಅಂಟುವಂತೆ ಮಾಡುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನದಲ್ಲಿ ತುಪ್ಪದ ಬೆಲೆಯೇರಿಕೆ ಕುರಿತು ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ (Imran Khan) ನೀಡಿದ ಹೇಳಿಕೆಯು ನಗೆಪಾಟಲೀಗೀಡಾಗಿದೆ. ಅವರು ಮಾತನಾಡಿದ ವಿಡಿಯೊ ವೈರಲ್‌ ಆಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳು

  1. Aadi Mahotsav: ನವ ಭಾರತವು ‘ಆದಿ’, ‘ಆಧುನಿಕತೆಯ’ ಸಂಗಮ, ಆದಿ ಮಹೋತ್ಸವ ಉದ್ಘಾಟನೆ ಬಳಿಕ ಮೋದಿ ಹೇಳಿಕೆ
  2. Lexi Chatbot: ಭಾರತದ ಮೊದಲ ಚಾಟ್‌ಜಿಪಿಟಿ ಬೆಂಬಲಿತ ಚಾಟ್‌ಬಾಟ್ ಲೆಕ್ಸಿ! ಇದು ಹೇಗೆ ಕೆಲಸ ಮಾಡುತ್ತದೆ?
  3. Union Cabinet: ದೇಶಾದ್ಯಂತ 2 ಲಕ್ಷ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕೇಂದ್ರ ಅಸ್ತು, ಗ್ರಾಮೀಣ ರೈತರಿಗೆ ಬಲ
  4. DMK Councillor Arrested: ತಮಿಳುನಾಡಿನಲ್ಲಿ ಯೋಧನ ಹತ್ಯೆ, ಡಿಎಂಕೆ ಕೌನ್ಸಿಲರ್‌ ಬಂಧನ
  5. Sapthami Gowda Interview: ಮೂಗುತಿಯನ್ನು ಟ್ರೆಂಡ್‌ ಸೆಟ್‌ ಮಾಡಿದ ಕಾಂತಾರ ನಟಿ ಸಪ್ತಮಿ ಗೌಡ; ಈ ಬಗ್ಗೆ ಇವರು ಹೇಳೋದೇನು?
  6. Swara Bhaskar: ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹ್ಮದ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಸ್ವರಾ ಭಾಸ್ಕರ್
  7. Viral News : 161 ಕಿ.ಮೀ ಟ್ಯಾಕ್ಸಿಯಲ್ಲಿ ಸುತ್ತಾಡಿ ಮತ್ತೆ ವಾಪಸ್ ಮಾಲೀಕರ ಬಳಿಗೇ ಬಂದ ಜಾಣ ನಾಯಿ!
  8. Bhagavad Gita On Cloth: ಗಂಗಾ ಜಲ, ಮಣ್ಣು ಬಳಸಿ ಬಟ್ಟೆ ಮೇಲೆ ಭಗವದ್ಗೀತೆ ಸಾಲು ಬರೆದ ಮುಸ್ಲಿಂ ವ್ಯಾಪಾರಿ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಮಿಂಚು ಸಾಥ್‌

Karnataka Weather Forecast : ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Heavy Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕ ಕಡೆ ಭಾರೀ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿ.ಸೆ ಇರಲಿದೆ.

ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ 14 ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ ಸೇರಿದಂತೆ ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಯಚೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಗುಡುಗು ಸಹಿತ ಮಳೆ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ಮಲ್ಲಪ್ಪ ಬಡಿಗೇರ್ (50) ಮೃತ ದುರ್ದೈವಿ. ರಾಯಚೂರಿನ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಶುಕ್ರವಾರ ಸಂಜೆ 4.30 ಗಂಟೆಗೆ ಬಳಗಾನೂರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಳಗಾನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವರುಣನ ಅರ್ಭಟ ಜೋರಾಗಿತ್ತು. ಭಾರಿ ಮಳೆಗೆ ರಸ್ತೆ ಜಲಾವೃತಗೊಂಡು ವಡಗೇರಾ ಪಟ್ಟಣದ ನಿವಾಸಿಗಳ ಸಂಕಷ್ಟ ಅನುಭವಿಸಿದರು. ಕಲಬುರಗಿಯಲ್ಲೂ ಬಿಸಿಲ‌ ಬೇಗೆಗೆ ತತ್ತರಿಸಿದ ಜನತೆಗೆ ವರುಣ ತಂಪೆರಿದ್ದ. ನಗರದ ಹಲವೆಡೆ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇತ್ತ ಶುಕ್ರವಾರ ಬೆಂಗಳೂರು ಗ್ರಾಮಾಂತರದ ಆನೇಕಲ್, ಅತ್ತಿಬೆಲೆ, ಜಿಗಣಿ, ಚಂದಾಪುರ ಸೇರಿದಂತೆ ಹಲವೆಡೆ ಮಳೆಯಾಗಿತ್ತು. ರಸ್ತೆಯಲ್ಲಿಯೇ ಮಳೆ ನೀರು ನಿಂತು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರ ಪರದಾಡಿದರು.

Continue Reading

ಬೆಂಗಳೂರು

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Navaratri: ನವರಾತ್ರಿಯಂದು ಬಣ್ಣಕ್ಕೂ ಎಲ್ಲಿಲ್ಲದ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಒಂದೇ ತರಹ ಬಟ್ಟೆ ಧರಿಸಿ ಮಿಂಚಿದ್ದಾರೆ.

VISTARANEWS.COM


on

By

navaratri
Koo

ಬೆಂಗಳೂರು: ನವರಾತ್ರಿಯ(Navaratri) ಸಂಭ್ರಮ ಎಲ್ಲೆಡೆ ಕಳೆಕಟ್ಟಿದೆ. ದೇವಿಯನ್ನು ವಿವಿಧ ರೂಪದಲ್ಲಿ ಆರಾಧಿಸಲಾಗುತ್ತದೆ. ನವರಾತ್ರಿಯ ಇನ್ನೊಂದು ವಿಶೇಷ ಎಂದರೆ 9 ದಿನಗಳಿಗೆ 9 ಬಣ್ಣದ ಬಟ್ಟೆ. ಒಂದೊಂದು ದಿನ ಒಂದೊಂದು ಬಣ್ಣದ ಬಟ್ಟೆ ಧರಿಸುವುದು ವಾಡಿಕೆ. ಹೀಗೆ ನವರಾತ್ರಿಯ ವೈಭವ ಜೋರಾಗಿದ್ದು, ಹೆಂಗಳೆಯರು ಒಂದೇ ತರಹದ ಸೀರೆಯನ್ನುಟ್ಟು ಮಿಂಚಿದ್ದಾರೆ.

ಜೆ.ಎಸ್.ಎಸ್ ಪದವಿ ಮಹಾವಿದ್ಯಾಲಯದ ಬೋಧಕ – ಬೋಧಕೇತರ ಮಹಿಳಾ ಸಿಬ್ಬಂದಿ ಶರನ್ನವರಾತ್ರಿ ಸಂಭ್ರಮದ ಮೊದಲ ದಿನ .

ಶರನ್ನವರಾತ್ರಿ ಸಂಭ್ರಮದ ಎರಡನೇ ದಿನ ಹಸಿರು ಸೀರೆಯಲ್ಲಿ ಮಿಂಚಿ ಸಂಭ್ರಮಿಸಿ ಮಹಿಳಾಮಣಿಯರು

ತರ್ಮಾಕೋಲ್‌ನಲ್ಲಿ ಮೂಡಿ ಬಂತು ಅಂಬಾರಿ

ನಾಡ ಹಬ್ಬ ದಸರಾ ಹಾಗೂ ನವರಾತ್ರಿ ಸಂಭ್ರಮ ಶುರುವಾಗಿದೆ. ವಿಜಯ ದಶಮಿಯಂದು ಗರ್ಜಿಸಲು ತರ್ಮಾಕೋಲ್ ಆನೆಗಳು, ಅಂಬಾರಿ ಸಹ ರಗಡ್ಡಗಿದ್ದು, ಗತಿಸಿ ಹೋದ ಇತಿಹಾಸ ಇಲ್ಲಿ ಕಾಣಸಿಗುತ್ತಿವೆ. ಒಂಬತ್ತು ದಿನಗಳ ನವರಾತ್ರಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಹೆಂಗಳೆಯರು ಕಲರ್ ಕಲರ್ ಸೀರೆಯುಟ್ಟು ಮಸ್ತಿ ಮಾಡುತ್ತಿದ್ದರೆ, ಇತ್ತ ವಿಜಯದಶಮಿ ದಿನಕ್ಕೆ ತರ್ಮಾಕೋಲ್‌ನಲ್ಲಿ ಅಂಬಾರಿ ಮೂಡಿ ಬಂದಿದೆ. ಇದನ್ನು ನೋಡಿದರೆ ಸೇಮ್‌ ಮೈಸೂರು ಅಂಬಾರಿಯಂತೆ ಭಾಸವಾಗುತ್ತದೆ.

ಅಂದಹಾಗೆ ವುಡ್‌ನಲ್ಲಿ ಬೇಕಾದಂತಹ ಐಟಮ್ಸ್ ತಯಾರಿಸೋದು ಕಷ್ಟವಲ್ಲ ಆದರೆ ಅದನ್ನು ಮೆಂಟೇನ್ ಮಾಡೋದು ಕಷ್ಟಕರವೆಂದು ಜನರು ತರ್ಮಾಕೋಲ್ ಗೊಂಬೆಗಳಿಗೆ ಮೊರೆ ಹೋಗಿದ್ದಾರೆ. ತರ್ಮಾಕೋಲ್‌ನಲ್ಲಿ ಅಂಬಾರಿ, ಜೋಡಿ ಗೊಂಬೆಗಳು, ಹಂಪಿಯ ದೇವಸ್ಥಾನ, ಯಕ್ಷಗಾನದ ಮಂಟಪ, ಆನೆ, ಕಮಲದ ಹೂಗಳು ಮಾತ್ರವಲ್ಲ ಮೈಸೂರು ಅರಮನೆ ಸೇರಿದಂತೆ ಹಲವಾರು ವಿಭಿನ್ನವಾದ ಕಲೆಗಳು ಮೂಡಿ ಬಂದೀವೆ. ಸಿಲಿಕಾನ್ ಸಿಟಿ ಜನರಿಗೆ ಹಬ್ಬದ ಸಂಭ್ರಮಕ್ಕೆ ತರ್ಮಾಕೋಲ್‌ನಿಂದ ಮಾಡಿರುವ ವಸ್ತುಗಳು ಗಮನ ಸೆಳೆಯುತ್ತಿವೆ.

Continue Reading

ಮೈಸೂರು

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Mysuru News : ದೇಶದಲ್ಲಿ ಪ್ರತಿ ವರ್ಷ ಸರಿ ಸುಮಾರು 1,60000 ಟನ್ ಎಲೆಕ್ಟ್ರಾನಿಕ್ ತ್ಯಾಜ್ಯ ಉತ್ಪಾದನೆ ಆಗುತ್ತಿದ್ದು, ಇದರಲ್ಲಿ ಕೇವಲ 15 ಪ್ರತಿಶತ ಮಾತ್ರ ವೈಜ್ಞಾನಿಕವಾಗಿ ವಿಲೇವಾರಿ ಆಗುತ್ತಿದೆ. ಎಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆ ಇಂದು ಬಹುದೊಡ್ಡ ಸಮಸ್ಯೆ ಆಗಿದ್ದು, ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನ ಆರಂಭವಾಗಿದೆ.

VISTARANEWS.COM


on

By

Mysuru News
Koo

ಮೈಸೂರು: ಪರ್ಯಾವರಣ ಸಂರಕ್ಷಣಾ ಗತಿ ವಿಧಿ ಮೈಸೂರು ಜೆಎಸ್ಎಸ್ ಮಹಾವಿದ್ಯಾಲಯದಲ್ಲಿ (JSS College) ಆಯೋಜಿಸಿದ್ದ “ಇಯಂತ್ರಣ ನಿಯಂತ್ರಣ” ಎಲೆಕ್ಟ್ರಾನಿಕ್ ವೇಸ್ಟ್ ಮ್ಯಾನೇಜ್ಮೆಂಟ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಮೈಸೂರಿನ (Mysuru News) ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ಉಪ ಕುಲಪತಿ ಡಾ. ಎನ್ ಸಂತೋಷ್, ಹೊಸ ಹೊಸ ತಂತ್ರಜ್ಞಾನ ಬಂದಂತತೆಲ್ಲ ಅದನ್ನು ಅಳವಡಿಸಿಕೊಳ್ಳಲು ಅತ್ಯಂತ ಉತ್ಸುಕರಾಗುತ್ತೇವೆ. ಹೊಸ ಎಲೆಕ್ಟ್ರಾನಿಕ್ ಯಂತ್ರೋಪಕರಣ ಲಭ್ಯವಾಗುತ್ತಿದ್ದಂತೆ ಖರೀದಿಗೆ ಮುಂದಾಗುತ್ತೇವೆ.

ಆದರೆ ಹಳೆಯ ಉಪಕರಣಗಳ ವಿಲೇವಾರಿ ಬಗ್ಗೆ ಯೋಚನೆ ಮಾಡುವುದೇ ಇಲ್ಲ. ಹಾಗಾಗಿ ಎಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆ ಇಂದು ಬಹುದೊಡ್ಡ ಸಮಸ್ಯೆ ಆಗಿ ಮುಂದೆ ನಿಂತಿದೆ. ಇಂತಹ ಸಮಸ್ಯೆಗಳ ಬಗ್ಗೆ ಪರಿಸರ ವಿಜ್ಞಾನಿಗಳು, ಪರಿಸರ ಕಾರ್ಯಕರ್ತರು ಯೋಚಿಸಬೇಕು ಎಂದು ಸರ್ವೇ ಸಾಮಾನ್ಯವಾಗಿ ಎಲ್ಲರೂ ಯೋಚನೆ ಮಾಡುತ್ತಾರೆ. ಆದರೆ ಈ ತ್ಯಾಜ್ಯ ಉತ್ಪನ್ನಕ್ಕೆ ಕಾರಣವಾಗುವ ಎಲ್ಲರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಅವಶ್ಯಕತೆ ಇದೆ. ಈ ಬಗ್ಗೆ ಪ್ರತಿಯೊಬ್ಬರು ಸ್ವಯಂ ಜಾಗೃತಿಗೊಂಡು ಸಮಾಜವನ್ನು ಜಾಗೃತಗೊಳಿಸಬೇಕಾಗಿದೆ ಎಂದು ಮೈಸೂರಿನ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ಉಪ ಕುಲಪತಿ ಡಾ. ಎನ್ ಸಂತೋಷ್ ಅವರು ಹೇಳಿದರು. ಪ್ರಸ್ತುತ ನಾವು ಬದುಕುವ ಜೊತೆಗೆ ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ಉಳಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಪರಿಸರ ಸಂರಕ್ಷಣೆ ಬಗ್ಗೆ ಜವಾಬ್ದಾರಿಯುತವಾಗಿ ವರ್ತಿಸೋಣ ಎಂದು ಕರೆ ನೀಡಿದರು.

ಪರ್ಯಾವರಣ ಸಂರಕ್ಷಣ ಗತಿವಿಧಿ ಕಾರ್ಯಕರ್ತರಾದ ಡಾ.ಶ್ರೀಹರ್ಷ ಪ್ರಾಸ್ತಾವಿಕ ಮಾತನಾಡಿ ನಮ್ಮ ದೇಶದಲ್ಲಿ ಪ್ರತಿ ವರ್ಷ ಸರಿ ಸುಮಾರು 1,60000 ಟನ್ ಎಲೆಕ್ಟ್ರಾನಿಕ್ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಕೇವಲ 15 ಪ್ರತಿಶತ ಮಾತ್ರ ವೈಜ್ಞಾನಿಕವಾಗಿ ವಿಲೇವಾರಿ ಆಗುತ್ತಿದೆ. ಈ ನಾಲ್ಕು ತಿಂಗಳ ಅಭಿಯಾನದಲ್ಲಿ ನಾವು ವಸತಿ ಸಮುಚ್ಚಯ, ಕಾಲೇಜು ವಿಶ್ವವಿದ್ಯಾನಿಲಯದ ಕಾರ್ಪೋರೇಟ್ ಆಫೀಸ್ ಹೀಗೆ ಹಲವಾರು ಕಡೆ ಅಭಿಯಾನದ ಮೂಲಕ ಈ ತ್ಯಾಜ್ಯ ಸಂಗ್ರಹಿಸುವ ವೈಜ್ಞಾನಿಕ ವಿಲೇವಾರಿ ಗುರಿ ಹೊಂದಿದ್ದೇವೆ ಎಂದು ಹೇಳಿದರು.

Mysuru News
Mysuru News

ಕೇಶವ ಮತ್ತು ಅಭಿಲಾಷ ಪಿಪಿಟಿ ಮತ್ತು ವಿಡಿಯೋ ತುಣುಕುಗಳ ಪ್ರದರ್ಶನದ ಮೂಲಕ ಈ ತ್ಯಾಜ್ಯ ನಿರ್ವಹಣೆ ಏಕೆ ಹೇಗೆ ಎನ್ನುವ ಸಂಪೂರ್ಣ ಮಾಹಿತಿ ನೀಡಿದರು. ಪರ್ಯಾವರಣ ಸಂರಕ್ಷಣ ಗತಿವಿಧಿ ಸಂಯೋಜಕ ವೆಂಕಟೇಶ್ ಸಂಗನಾಳ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಹಿರಿಯ ಪರಿಸರ ಅಧಿಕಾರಿ ರಾಜಶೇಖರ ಡಿನ್ ಅಕಾಡಮಿಕ್ಸ್ ನ ಡಾ.ಮನೋಜ್ ಕುಮಾರ ಪರಿಸರ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾಕ್ಟರ್ ಸದಾಶಿವ ಮೂರ್ತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿಗಳು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಈ ವೇಸ್ಟ್ ಸಂಗ್ರಹ ಬಿನ್‌ಗೆ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಹಾಕುವುದರ ಮೂಲಕ ಆರಂಭಗೊಂಡ ತ್ಯಾಜ್ಯ ಸಂಗ್ರಹಣ ಅಭಿಯಾನ ನಿರಂತರ ನಾಲ್ಕು ತಿಂಗಳ ಕಾಲ ನಡೆಯಲಿದೆ. ಪರ್ಯಾವರಣ ಸಂರಕ್ಷಣ ಗತಿವಿಧಿ ಈ ಅಭಿಯಾನಕ್ಕೆ ಅನೇಕ ಸ್ವಯಂ ಸೇವಾ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು ಕೈ ಜೋಡಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

By

Kodagu News
ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್
Koo

ಮಡಿಕೇರಿ: ನಮ್ಮ ಸಂವಿಧಾನ ಎಲ್ಲರಿಗೂ ಸ್ವಾತಂತ್ರ್ಯವಾಗಿ ಬದುಕುವ ಹಕ್ಕನ್ನು ನೀಡಿದೆ. ನಮ್ಮ ಇಂದಿನ ಆಚರಣೆಗಳಿಂದ ನಾಳಿನ ಬದುಕಿಗೆ ತೊಂದರೆಯಾಗಬಾರದು. ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ ಹೇರಿರುವುದು ಕೂಡ ಇದೇ ಉದ್ದೇಶದಿಂದಲೇ ಹೊರತು, ನಮ್ಮ ಸಂಸ್ಕೃತಿ , ಸಂಪ್ರದಾಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟ ಪಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡಗು (Kodagu News) ಪ್ರೆಸ್ ಕ್ಲಬ್ ವತಿಯಿಂದ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದಸರಾದಲ್ಲಿ ನಿಗಧಿಗಿಂತ ಹೆಚ್ಚಿನ ಡೆಸಿಬಲ್ ಡಿಜೆ ಬಳಸದಂತೆ ನಿಯಮವೇ ಇದೆ. ಈ ಕಾನೂನನ್ನು ನಾವೂ ಗೌರವಿಸಬೇಕು. ಡಿಜೆಯಿಂದ ಯುವಕರಿಗೆ ಹೆಚ್ಚಿನ ತೊಂದರೆ ಇಲ್ಲ. ಆದರೆ ವಯೋವೃದ್ಧರು, ಮಂಟಪದ ರಕ್ಷಣೆಗೆ ಇರುವ ಪೊಲೀಸರು, ಸಣ್ಣ ಮಕ್ಕಳು, ಪ್ರಾಣಿ ಪಕ್ಷಿಗಳಿಗೆ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹೆಚ್ಚಿನ ತೊಂದರೆಯಾಗುತ್ತದೆ. ದೇಶದ ಕಾನೂನಿನಂತೆ ಇಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆ ಸ್ವಾತಂತ್ರ್ಯಕ್ಕೆ ಯಾರೂ ತೊಂದರೆ ಮಾಡಬಾರದು ಎಂಬ ಉದ್ದೇಶಕ್ಕೆ ಕಾನೂನು ಜಾರಿ ಮಾಡಲಾಗಿದೆ.

ನಮ್ಮ ಹಿರಿಯ ತಲೆಮಾರಿನವರು ಹಿಂದೆ ಹದಿನಾಲ್ಕು, ಹದಿನಾರು ವಯಸ್ಸಿಗೆ ಮದುವೆಯಾಗುತ್ತಿದ್ದರು. ನಾವೂ ಸಂಪ್ರದಾಯದ ಹೆಸರಿನಲ್ಲಿ ಅದನ್ನು ಮುಂದುವರೆಸಿದ್ದೇವು. ಕ್ರಮೇಣ ಕಾನೂನು ಬದಲಾವಣೆಯಿಂದ ಈ ಪದ್ಧತಿಗೆ ಕಡಿವಾಣ ಹಾಕಲಾಗಿದ್ದು, ಇಂದು ಈ ಪದ್ಧತಿಯನ್ನು ಕೈ ಬಿಡಲಾಗಿದೆ. ಡಿಜೆ ನಿರ್ಬಂಧ ಹಿಂದಿನ ಉದ್ದೇಶವೂ ಇದೆ. ನಾವು ನಮ್ಮ ಹಿಂದಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳಬೇಕು. ಹಿರಿಯರು ಸಂಪ್ರದಾಯವನ್ನು ಬಿಡದೇ ಆಚರಿಸಿದ್ದಾರೆ. ಅವರು ಉಳಿಸಿ ಬೆಳೆಸಿರುವ ಸಂಪ್ರದಾಯವನ್ನು ಅದೇ ರೀತಿಯನ್ನೇ ಮುನ್ನಡೆಸಿಕೊಂಡು ಮುನ್ನಡೆಯಬೇಕಾದ ಜವಾಬ್ದಾರಿ ನಮ್ಮ ಮುಂದಿದೆ. ದಸರಾದಲ್ಲೂ ನಮ್ಮ ಸಂಪ್ರದಾಯಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಕಳೆದ ಬಾರಿ ಡೆಸಿಬಲ್‌ ಡಿಜೆ ಬಳಕೆ

ಇಂದು ಎಲ್ಲ ಕಡೆ ಪಬ್‌ಗಳಲ್ಲಿ ಡಿಜೆ, ಲೇಸರ್ ಲೈಟ್ ಕಾಣಸಿಗುತ್ತದೆ. ಆದರೆ ಕೊಡಗಿನ ಒಲಗ ಮೈಸೂರು ದಾಟಿದರೆ ಎಲ್ಲಿ ಇದೆ. ಇಂತಹ ವೈವಿಧ್ಯಮಯ ಸಂಸ್ಕೃತಿ ನಮ್ಮದಾಗಿರುವಾಗ ಬೇರೆ ಅನುಕರಣೆ ಯಾಕೆ ಬೇಕೆಂದು ಪ್ರಶ್ನಿಸಿದರು.
ಡಿಜೆ ಬಳಸುವಾಗ 55 – 75 ಡೆಸಿಬಲ್ ಒಳಗೆ ಮಾತ್ರ ಇರಬೇಕು. ಇದಕ್ಕಿಂತ ಜಾಸ್ತಿ ಮಾಡಬಾರದು. ಇದಕ್ಕಿಂತ ಹೆಚ್ಚಿನ ಡೆಸಿಬಲ್‌ ಬಳಸಿದ್ದಲ್ಲಿ ಶಬ್ದ ಮಾಲಿನ್ಯ ಎಂದು ವ್ಯಾಖ್ಯಾನಿಸಲಾಗುತ್ತದೆ. ಹೀಗಾಗಿ ಅದು ಹಾನಿಕಾರಕವಾಗಲಿದೆ. ಕಳೆದ ಬಾರಿ ದಸರಾದಲ್ಲಿ ನಿಗಧಿತ ಡೆಸಿಬಲ್‌ಗಿಂತ ಹೆಚ್ಚಿನ ಡೆಸಿಬಲ್‌ನಲ್ಲಿ ಡಿಜೆ ಬಳಸಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಶಬ್ದಮಾಲಿನ್ಯದ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಹೊಂದಿದ್ದು, ಅವರು ಈ ಬಗ್ಗೆ ಕ್ರಮ ವಹಿಸುತ್ತಾರೆಂದು ಹೇಳಿದರು.

ದಸರಾ ಭದ್ರತೆಗೆ ಹೆಚ್ಚಿನ ಕ್ರಮ

ಈ ಬಾರಿ ದಶಮಂಟಪ ಸಮಿತಿಗಳು ಡಿಜೆ ಸಂಬಂಧದ ನಿಯಮ ಪಾಲಿಸುವ ಭರವಸೆ ಇದೆ. ಲೇಸರ್ ಬಳಕೆಯಿಂದ ತೊಂದರೆ ಆಗುತ್ತದೆ ಎಂಬ ಬಗ್ಗೆಯೂ ಸಮಿತಿಯವರೇ ಗಮನ ಹರಿಸಬೇಕು ಎಂದರು. ದಸರಾ ಭದ್ರತೆಗೆ ಈ ಬಾರಿ ಹೆಚ್ಚಿನ ಕ್ರಮ ವಹಿಸಲಾಗಿದೆ. ಸಾವಿರಕ್ಕೂ ಅಧಿಕ ಪೊಲೀಸರು, ಜಂಬೋ ಟೀಮ್ ದಸರಾ ಸಂದರ್ಭ ಹೆಚ್ಚಿನ ನಿಗಾ ವಹಿಸಲಿದೆ. ವಿಶೇಷವಾಗಿ ಹದಿನೈದು ಮಂದಿಯ, ಆರೇಳು ಜಂಬೋ ತಂಡವನ್ನು ತಯಾರಿ ಮಾಡಲಾಗಿದೆ.

ಗುಂಪಿನಲ್ಲಿ ಗಲಾಟೆ, ಮಹಿಳೆಯರಿಗೆ ಕಿರಿಕಿರಿ ಮಾಡುವುದನ್ನು ತಪ್ಪಿಸುವ ಕಾರ್ಯವನ್ನು ಈ ತಂಡ ಮಾಡಲಿದೆ. ಹಲವು ಪೊಲೀಸರು ದ್ವಿಚಕ್ರ ವಾಹನದಲ್ಲಿಯೂ ನಗರದಲ್ಲಿ ವೀಕ್ಷಣೆಯಲ್ಲಿರುತ್ತಾರೆ. ಟ್ರಾಫಿಕ್ ನಿಯಂತ್ರಣ, ಹೆಲ್ಪ್‌ಲೈನ್‌ ಬಗ್ಗೆಯೂ ಗಮನ ಹರಿಸಲಾಗಿದೆ. ಕಳೆದ ಬಾರಿಯ ಅನುಭವದೊಂದಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ದಸರಾಗೆ ಬಂದೋಬಸ್ತ್‌ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಕಳ್ಳರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಇದಕ್ಕಾಗಿಯೇ ಹೆಚ್ಚು ಲೈಟ್ ಅಳವಡಿಕೆ, ಸಿಸಿ ಕ್ಯಾಮೆರಾ ಅಳವಡಿಕೆ ಮೇಲೂ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಪ್ರತಿಯೊಂದು ಮಂಟಪಕ್ಕೂ 1 ಪೊಲೀಸ್‌ ಆಫೀಸರ್‌ ಸೇರಿದಂತೆ 8 ಮಂದಿ ಸಿಬ್ಬಂದಿ ಕಾವಲಿರುತ್ತಾರೆ ಎಂದು ಕೆ.ರಾಮರಾಜನ್ ಹೇಳಿದರು. ದಸರಾ ಸಂದರ್ಭ ಯಾವುದೇ ಅಂಗಡಿಯಲ್ಲಿಯೂ ಮುಖವಾಡ ಮಾರಾಟಕ್ಕೆ ಅವಕಾಶ ಇಲ್ಲ. ಮುಖವಾಡ ಮಾರಾಟ ಕಂಡು ಬಂದಲ್ಲಿ ನಗರಸಭೆ ವಶಕ್ಕೆ ಪಡೆಯುತ್ತದೆ ಹಾಗೂ ದಸರಾ ನಂತರ ಹಿಂತಿರುಗಿಸುವ ಕೆಲಸವಾಗುತ್ತದೆ ಎಂದು ಹೇಳಿದರು.

ಬಾಂಗ್ಲಾ ದೇಶಿಯರು ಇದ್ದ ಬಗ್ಗೆ ಸಂಶಯವಿದ್ದಲ್ಲಿ ಮಾಹಿತಿ ಕೊಡಿ

ಕೊಡಗಿನಲ್ಲಿ ಹೊರ ರಾಜ್ಯದ ಕಾರ್ಮಿಕರಿಗೆ ಹೆಚ್ಚಿನ ಬೇಡಿಕೆ ಇದೆ. ತೋಟಗಳ ನಿರ್ವಹಣೆಗೆ ಹೊರ ರಾಜ್ಯದ ಕಾರ್ಮಿಕರ ಅಗತ್ಯವೂ ಇದೆ. ದೇಶದಲ್ಲಿ ಯಾರೂ ಎಲ್ಲಿಗೆ‌ಬೇಕಾದರೂ ತೆರಳಿ ಉದ್ಯೋಗ ಮಾಡುವ ಅವಕಾಶವಿದೆ. ಆದರಿಂದ ಅವರನ್ನು ಬರಬಾರದು ಎನ್ನಲು ಸಾಧ್ಯವಿಲ್ಲ ಅಥವಾ ಅವರ ಮೇಲೆ ಹೆಚ್ಚಿನ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಇದರಿಂದ ನೈಜ ಕಾರ್ಮಿಕರಿಗೆ ಇರುಸು ಮುರುಸು ಉಂಟಾಗುತ್ತದೆ. ಹಾಗಾಗೀ ಕಾರ್ಮಿಕರನ್ನು ನೇಮಿಸುವ ಮುನ್ನ ತೋಟದ ಮಾಲೀಕರೇ ಎಚ್ಚರ ವಹಿಸಬೇಕು. ಅವರಿಂದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಹಾಗೇಂದು ಬಂಗ್ಲಾದೇಶದಿಂದ ಬಂದರೆ ಅವರಿಗೆ ಇಲ್ಲಿರಲು ಅವಕಾಶ ಇಲ್ಲ. ಬಾಂಗ್ಲಾ ದೇಶಿಯರು ಇದ್ದ ಬಗ್ಗೆ ಸಂಶಯವಿದ್ದಲ್ಲಿ ನಮಗೆ ಮಾಹಿತಿ ಕೊಡಿ. ನಾವೂ ಪರಿಶೀಲನೆ ನಡೆಸುತ್ತೇವೆ ಎಂದು ಕೆ.ರಾಮರಾಜನ್ ಹೇಳಿದರು.

Continue Reading
Advertisement
karnataka Weather Forecast
ಮಳೆ1 ಗಂಟೆ ago

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಮಿಂಚು ಸಾಥ್‌

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

navaratri
ಬೆಂಗಳೂರು13 ಗಂಟೆಗಳು ago

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Mysuru News
ಮೈಸೂರು13 ಗಂಟೆಗಳು ago

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Kodagu News
ಕೊಡಗು13 ಗಂಟೆಗಳು ago

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Actor Darshan Renukaswamy murder case
ಬೆಂಗಳೂರು14 ಗಂಟೆಗಳು ago

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು14 ಗಂಟೆಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Medical Seat
ಬೆಂಗಳೂರು15 ಗಂಟೆಗಳು ago

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Murder case
ಚಿತ್ರದುರ್ಗ16 ಗಂಟೆಗಳು ago

Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

Namma metro ticket prices will be hiked soon
ಬೆಂಗಳೂರು17 ಗಂಟೆಗಳು ago

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ದಿನ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌